ತನ್ನ ತಾನರಿಯದೆ ಅನ್ಯರಿಗೆ ಬೋಧೆಯ ಹೇಳುವ
ಅಣ್ಣಗಳಿರಾ, ನೀವು ಕೇಳಿರೊ.
ಅವರ ಬಾಳುವೆ ರಿಂತೆಂದಡೆ;
ಕುರುಡ ಕನ್ನಡಿಯ ಹಿಡಿದಂತೆ.
ತನ್ನ ಒಳಗೆ ಮರೆದು ಇದಿರಿಂಗೆ ಬೋಧೆಯ ಹೇಳಿ,
ಉದರವ ಹೊರೆವ ಚದುರರೆಲ್ಲರೂ ಹಿರಿಯರೆ ? ಅಲ್ಲಲ್ಲ.
ಇದ ಮೆಚ್ಚುವರೆ ನಮ್ಮ ಶರಣರು ?
ಅವರ ನಡೆ ಎಂತೆಂದಡೆ:
ಒಳಗನರಿದು, ಹೊರಗ ಮರೆದು,
ತನುವಿನೊಳಗಣ ಅನುವ ಹಸುಗೆಯ ಮಾಡಿದರು.
ಪೃಥ್ವಿಗೆ ಅಪ್ಪುವಿನ ಅಧಿಕವ ಮಾಡಿದರು.
ಅಗ್ನಿಯ ಹುದುಗಿದರು, ವಾಯುವ ಬೀರಿದರು, ಆಕಾಶದಲ್ಲಿ ನಿಂದರು,
ಓಂಕಾರವನೆತ್ತಿದರು; ಅದರೊಡಗೂಡಿದರು.
ಕಾಣದ ನೆಲೆಯನರಿದರು; ಪ್ರಮಾಣವನೊಂದುಗೂಡಿದರು.
ಮಹಾಬೆಳಗಿನಲ್ಲಿ ಓಲಾಡುವ ಶರಣರ ವಾಗ್ಜಾಲವಕಲಿತುಕೊಂಡು ನುಡಿವ
ಕಾಕುಮನುಜರೆತ್ತ ಬಲ್ಲರು ನಿಮ್ಮ ನೆಲೆಯ
ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?