ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನ್ನ ತಾನರಿಯದೆ ಅನ್ಯರಿಗೆ ಬೋಧೆಯ ಹೇಳುವ ಅಣ್ಣಗಳಿರಾ, ನೀವು ಕೇಳಿರೊ. ಅವರ ಬಾಳುವೆ ರಿಂತೆಂದಡೆ; ಕುರುಡ ಕನ್ನಡಿಯ ಹಿಡಿದಂತೆ. ತನ್ನ ಒಳಗೆ ಮರೆದು ಇದಿರಿಂಗೆ ಬೋಧೆಯ ಹೇಳಿ, ಉದರವ ಹೊರೆವ ಚದುರರೆಲ್ಲರೂ ಹಿರಿಯರೆ ? ಅಲ್ಲಲ್ಲ. ಇದ ಮೆಚ್ಚುವರೆ ನಮ್ಮ ಶರಣರು ? ಅವರ ನಡೆ ಎಂತೆಂದಡೆ: ಒಳಗನರಿದು, ಹೊರಗ ಮರೆದು, ತನುವಿನೊಳಗಣ ಅನುವ ಹಸುಗೆಯ ಮಾಡಿದರು. ಪೃಥ್ವಿಗೆ ಅಪ್ಪುವಿನ ಅಧಿಕವ ಮಾಡಿದರು. ಅಗ್ನಿಯ ಹುದುಗಿದರು, ವಾಯುವ ಬೀರಿದರು, ಆಕಾಶದಲ್ಲಿ ನಿಂದರು, ಓಂಕಾರವನೆತ್ತಿದರು; ಅದರೊಡಗೂಡಿದರು. ಕಾಣದ ನೆಲೆಯನರಿದರು; ಪ್ರಮಾಣವನೊಂದುಗೂಡಿದರು. ಮಹಾಬೆಳಗಿನಲ್ಲಿ ಓಲಾಡುವ ಶರಣರ ವಾಗ್ಜಾಲವಕಲಿತುಕೊಂಡು ನುಡಿವ ಕಾಕುಮನುಜರೆತ್ತ ಬಲ್ಲರು ನಿಮ್ಮ ನೆಲೆಯ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
-->