ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಶಾಸ್ತ್ರವೆ ಅಡ್ಡಣಿಗೆಯಾಗಿ, ಆಗಮವೆ ಹರಿವಾಣವಾಗಿ,ಪುರಾಣವೆ ಓಗರವಾಗಿ, ಉಂಬಾತ ವೇದವಾಗಿ,ಸಕಲ ರುಚಿಯನರಿದು ಭೋಗಿಸುವ ಪ್ರಣವ ತಾನಾಗಿ,ಅದರ ಭೇದ ಏತರಿಂದ ಅಳಿವು ಉಳಿವು? ನಿನ್ನ ನೀನರಿ,ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
ಭಕ್ತಿಯೆ ಓಗರವಾಗಿ, ಸತ್ಯವೆ ಮೇಲೋಗರವಾಗಿನಿಜತತ್ವವೆ ಸವಿಯಾಗಿ_ಗುಹೇಶ್ವರಲಿಂಗಕ್ಕೆ ಇಕ್ಕಬಲ್ಲವಸಂಗನಬಸವಣ್ಣನಲ್ಲದಿಲ್ಲ.
ಸೋಂಕಿನ ಸುಖ ಮೊದಲಾದವನೆಲ್ಲವನು ಚರಂಗಕ್ಕರ್ಪಿಸುವೆ.ಆ ಅರ್ಪಿತಮುಖದಲ್ಲಿ ಇಷ್ಟಲಿಂಗವನರಿಯದೆಚರಲಿಂಗಕ್ಕರ್ಪಿಸುವೆ.ಆ ಚರಂಗಕ್ಕರ್ಪಿಸಿ ಮಿಕ್ಕ ಶೇಷವನು ಇಷ್ಟಲಿಂಗಕ್ಕೆ ಓಗರವಾಗಿ ನೀಡಿ,ಪ್ರಸಾದವಾಗಿ ಕೈಕೊಂಬೆ, ಕಪಿಲಸಿದ್ಧಮಲ್ಲಿಕಾರ್ಜುನಾ.