ಅರ್ಥ ಪ್ರಾಣ ಅಭಿಮಾನ ಭಕ್ತಂಗೆ ಹೊಲ್ಲದೆಂಬರು,
ತಮ್ಮ ಹೊದ್ದಿದ ಮಲಿನವನರಿಯರು.
ಕರುಳು ಕೊಳ್ಳದ ಉದಾನವ ಮರಳಿ ಅರ್ಪಿತವೆಂದು ಕೊಳಬಹುದೆ ?
ಬೇಡುವಾತ ಜಂಗಮವಲ್ಲ, ಮಾಡುವಾತ ಭಕ್ತನಲ್ಲ.
ಬೇಡದ ಮುನ್ನವೆ ಮಾಡಬಲ್ಲರೆ ಭಕ್ತ.
ಬೇಡಿ ಮಾಡಿಸಿಕೊಂಬನ್ನಬರ ಜಂಗಮವಲ್ಲ.
ಓಡಲಾರದ ಮೃಗವು ಸೊಣಗಂಗೆ ಮಾಂಸವನೀವಂತೆ.
ಇದು ಕಾರಣ, ಕೂಡಲ ಚೆನ್ನಸಂಗಯ್ಯನಲ್ಲಿ
ಮಾಡುವ ಭಕ್ತ, ಬೇಡದ ಜಂಗಮವಪೂರ್ವ.