ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಂದಳೂರಿಗೆ ಬಟ್ಟೆ ಇದೇ ಹೋಗೆಂದಡೆ ಅಂಧಕನೇನು ಬಲ್ಲನು ಹೇಳಾ ? ಸಂಗ್ರಾಮದಲ್ಲಿ ಓಡಿದ ಹೆಂದೆ ಗೆಲಬಲ್ಲನೆ ಹೇಳಾ ? ನಿಂದ ನಿಲವಿನ (ನೀರಿನ ?) ಮಡುವ ಕಂದನೀಸಾಡ ಬಲ್ಲನೆ ಹೇಳಾ ? ಗುಹೇಶ್ವರನೆಂಬ ನಿರಾಳದ ಘನವ ಪಂಚೇಂದ್ರಿ[ಯ]ಕÀನೆತ್ತ ಬಲ್ಲನು ಹೇಳಾ?
--------------
ಅಲ್ಲಮಪ್ರಭುದೇವರು
ವೇದಂಗಳು ದೈವವೆಂಬ ವಿಪ್ರರಂತಹ ಮರುಳರುಂಟೇ ತ್ರಿಜಗದಲ್ಲಿ ? ವೇದವೆಂಬುದೊಂದು ಸಾಧಕ ಸಂಪತ್ತು. ವೇದಂಗಳು ಶ್ವೇತ, ಅಗಸ್ತ್ಯ, ವಿಶ್ವಾಮಿತ್ರಮುನಿಗಳಿಂದಾದವು. ಶಬ್ದಗಾಂಭೀರ್ಯ ಶ್ರುತಿಕೋಟಿ ಚರಣಕಮಲನೆಂಬ ಲಿಂಗದ ಕೈಯಲ್ಲಿ ಕಲಿತ ವೇದಂಗಳು ಅಜ್ಞಾನಸಂಗವಾಗಿ ಅಗೋಚರವಾಗಿ ನುಡಿದವು. ಋಗ್ವೇದ_`ನಾಹಂಕಾರೋ ಬ್ರಹ್ಮತೇಜಃ ಎಂದುದಾಗಿ, ಯಜುರ್ವೇದ_`ನಾಹಂಕಾರೋ ಲಕ್ಷ್ಮೀಪತಿರ್ವಿಷ್ಣುತೇಜಃ ಎಂದುದಾಗಿ, ಸಾಮವೇದ_`ನಾಹಂ ದೇವೋ ರುದ್ರತೇಜಃ ಎಂದುದಾಗಿ, ಅಥರ್ವಣವೇದ_`ನಾಹಂ ಸ್ಥಲಂ ಎಂದುದಾಗಿ, ಕುಲಮದದಿಂದ ಬ್ರಹ್ಮ ಕೆಟ್ಟ, ಬಲಮದದಿಂದ ವಿಷ್ಣು ಕೆಟ್ಟ, ದೈವಮದದಿಂದ ರುದ್ರ ಕೆಟ್ಟ, ಛಲಮದದಿಂದ ಇಂದ್ರ ಕೆಟ್ಟ, ಇಂತೀ ನಾಲ್ಕು ಶ್ರುತಿಗಳು ತಮ್ಮ ಗರ್ವದಿಂದ ನೂಂಕಿಸಿಕೊಂಡವು ಶಿವನ ಅರಮನೆಯ ಬಾಗಿಲಲ್ಲಿ. ಮತ್ತಾ ಚತುರ್ವೇದಂಗಳು ಬಂದು ಲಿಂಗದ ಚತುರ್ದಿಶೆಯಲ್ಲಿ ಓಲೈಸಿ, ಕೈಮುಗಿದುಕೊಂಡು ಹೊಗಳುತ್ತಿದ್ದವು. ಅದೆಂತೆಂದಡೆ ಶ್ರುತಿ, `ಓಂ ಜಯತತ್ವಾನಾಂ ಪುರುಷಮೇರು ಕಾಮ್ಯಾನಾಂ ಪುಣ್ಯಜಪಧ್ಯಾನಾನಾಂ ಸರ್ವಜನ್ಮವಿನಾಶಿನಾಂ ಆದಿ ಅನಾದಿ ಪಿತ್ರೂಣಾಂ ಅಜಕೋಟಿಸಹಸ್ರವಂದ್ಯಾನಾಂ ದೇವಕೋಟಿಚರಣಕಮಲಾನಾಂ ಎಂದು ವೇದಂಗಳು ದೇವರ ಚರಣದ ಕುರುಹ ಕಾಣವು. ಆದಿಯಲ್ಲಿ ನಮ್ಮ ಪುರಾತನರು ವೇದವನೋದಿದರೆ ? ಇಲ್ಲ. ಕಲ್ಲಿಲಿಟ್ಟರು, ಕಾಲಿಲೊದೆದರು, ಬಿಲ್ವಪತ್ರದ ಮರದ ಕೆಳಗೆ ಲಿಂಗವಂ ಪುಟ್ಟಿಸಿ ನಿಷೆ*ಯ ಪಡೆದರು. ಮನೆಯ ಬಾಗಿಲ ಕಾಯಿಸಿಕೊಂಡರು, ಆಡಿಸಿದರು, ಅಡಗಿಸಿದರು, ಓಡಿದ ಲಿಂಗವಂ ತಂದು ಪ್ರತಿಷೆ*ಯಂ ಮಾಡಿದರು. ಇಂತಪ್ಪ ದೃಷ್ಟವ ಸಾಧಿಸಿದರು ನಮ್ಮ ಪುರಾತನರು. ನಿಮ್ಮವರು ವೇದವನೋದಿದರೆಂಬುದನರಿದು. ಅವರನೊಲ್ಲದೆ ಬಿಟ್ಟ ಕಾಣಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
-->