ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓಡ ಕುದುರೆಯ ಮೇಲೆ ಮಸಿಯ ಹಲ್ಲಣವ ಹಾಕಿ, ಬಸಲೆಯ ಹಂಬ ಬಾಯಿಗೆ ಕಟ್ಟಿ, ದೆಸೆವರಿವ ಅಸುರಾವುತ ಚೊಲ್ಲೆಹದ ಬಲ್ಲೆಹವ ಹಿಡಿದು, ಮುಗುಳುನಗೆಯವಳಲ್ಲಿ ಏರಿ ತಿವಿದ. ಚೊಲ್ಲೆಹದ ಬಲ್ಲೆಹ ಮುರಿದು, ಓಡಿನ ಕುದುರೆ ಒಡೆದು, ಮಸಿಯ ಹಲ್ಲಣ ನುಗ್ಗುನುಸಿಯಾಗಿ, ಬಸಲೆಯ ಬಾಯಕಟ್ಟು ಹರಿದು, ಅಸುರಾವುತ ಅವಳ ಕಿಸಲೆಯ ರಸಕ್ಕೊಳಗಾದ. ಅದೇತರಿಂದ ಹಾಗಾದನೆಂಬುದ ನೀನರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಅದಿರಿನ ತಲೆ, ಬಿದಿರಿದ ಬಾಯಿ, ಕಾಡಿನ ಹಕ್ಕೆ, ಓಡಿನ ಊಟಿ ಹತ್ತಿದ ಹೊಟ್ಟೆ, ಬತ್ತಿದ ಗಲ್ಲ, ಊರಿದ ಚರಣ, ಏರಿದ ಭಾಷೆ. ಇದು ಶರಣಂಗಲ್ಲದೆ ನಡುವಣ ಪುಕ್ಕಟವಾದವರಿಗೆಲ್ಲಿಯದೊ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಬೊಬ್ಬೆಯ ಬಾಯಿ, ಬಾಚದ ಮಂಡೆ, ಮೀರಿದ ಶರಣಂಗಲ್ಲದೆ ಇಲ್ಲ. ಓಡಿನ ಊಟ, ಕಾಡಿನಲ್ಲಿ ಇಕ್ಕೆ, ಮೀರಿದ ಶರಣಂಗಲ್ಲದೆ ಇಲ್ಲ. ವಿರಕ್ತೋ ವಾsಥ ಯುಕ್ತೋ ವಾ ಸಸ್ತ್ರ್ಯಾದಿವಿಷಯೇಷ್ವಪಿ ಪಾಪೈರ್ನೈವ ಪ್ರಲಿಪ್ಯೇತ ಪದ್ಮಪತ್ರಮಿವಾಂಭಸಾ ಎಂದುದಾಗಿ, ಕೂಡಲಚೆನ್ನಸಂಗಮದೇವಾ, ನಿಮ್ಮ ಶರಣರು ಮಲೆಯೊಳಗಿರ್ದಡೇನು ? ಮೊಲೆಯೊಳಗಿರ್ದಡೇನು ?
--------------
ಚನ್ನಬಸವಣ್ಣ
-->