ಅಥವಾ

ಒಟ್ಟು 4 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೇದವೆಂಬುದು ಓದಿನ ಮಾತು; ಶಾಸ್ತ್ರವೆಂಬುದು ಸಂತೆಯ ಸುದ್ದಿ. ಪುರಾಣವೆಂಬುದು ಪುಂಡರ ಗೋಷಿ*, ತರ್ಕವೆಂಬುದು ತಗರ ಹೋರಟೆ. ಭಕ್ತಿ ಎಂಬುದು ತೋರಿ ಉಂಬ ಲಾಭ. ಗುಹೇಶ್ವರನೆಂಬುದು ಮೀರಿದ ಘನವು
--------------
ಅಲ್ಲಮಪ್ರಭುದೇವರು
ಎಲಾ, ಓದಿದವರಿಗೆ ಮೋಕ್ಷವಿಲ್ಲಾ! ಅದು ಎಂತೆಂದಡೆ, ಒಂದು ಶಾಸ್ತ್ರವನೋದಿ ಮನಸು ನಿಲುಕಡೆಯಿಲ್ಲದೆ ಮತ್ತೊಂದು ನೋಡುವೆ. ಮತ್ತೊಂದು ಮತ್ತೊಂದು [ಎಂದು] ನೋಡುವರೆ ದಿವಸ ಸಮೀಪಿಸಿತ್ತು. ಸಮೀಪಿಸಿದ ಬಳಿಕ ಯಮದೂತರು ಬಂದು ವಿಪ್ಲವ[ವ] ಮಾಡುವರು. ಏನು ಕಾರಣವೆಂದಡೆ, ಓದಿದವರಿಗೆ ಮೋಕ್ಷವಿಲ್ಲಾ ! ಅದು ಎಂತೆಂದಡೆ, ಬಿಳಿಯ ವಸ್ತ್ರವ ಹೊದ್ದುಕೊಂಡ ತಿರುಕಗೆ ಎಲ್ಲರ ಮನ್ನಣೆಯುಂಟು. ಮಾಸಿದರೆ ಅದಕೆ ಶುದ್ಧ ಮಾಡುವನು ರಜಕ. ಇದರಂತೆ, ಓದಿನ 1[ಮರ್ಮವು]1 ತಿಳಿಯಲಿಲ್ಲ. ಇದಂ ಬಿಟ್ಟು, ಬಿಳಿಯ ವಸ್ತ್ರವು ಹೊಡೆಸಿಕೊಂಡು ಹೊಡೆಸಿಕೊಂಡು ಮುಪ್ಪಾದ ಬಳಿಕ ಕೂಸುಗಳ ಗುದಕ್ಕೆ ಒರಸಿ ಬಿಸುಡುವರಲ್ಲದೆ, ಅದಕ್ಕೆ ಅಧಿಕವುಂಟೇ ? ಇದರಂತೆ ಓದಿನ 1[ಮರ್ಮವು]1 ತಿಳಿಯಲಿಲ್ಲ. ಇದಂ ಬಿಟ್ಟು, ಮೂಢಭಾವದಿಂದ ಶಿವಲಿಂಗವ ಪೂಜಿಸಿದವರು ಮೋಕ್ಷಕರಲ್ಲದೆ ಮಿಕ್ಕವರಿಗುಂಟೇನಲ್ಲ. ಅದೇನು ಕಾರಣವೆಂದಡೆ, ಮೂಢ ಭಕ್ತನೇ ಕಂಬಳಿಯೆಂದು ತಿಳಿಯೆಲಾ ! ಕಂಬಳಿಗೆ ಮನ್ನಣೆಯುಂಟೆ ? ಹಾಸಿದರೆ ಮಾಸುವುದೆ ? ಹೊದ್ದರೆ ಚಳಿಯ ತೋರುವುದೆ ? ರಜಕನ ಮನೆಯ ಕಂಡುಬಲ್ಲುದೆ ? ಮುಪ್ಪಾದ ಕಾಲಕ್ಕೆ ಕೃಮಿಶಳೆಗಶ್ವರ (?) ದೇವರಿಗೆ ಜೇಷ್ಮು(?) ಎಲ್ಲಾ ಬರವಾಗಿ ಭಕ್ತ ಪೋಷಿಸುವದಲ್ಲದೆ ಕೊರತೆಯುಂಟೆ ? ಇದರಂತೆ ಮೂಢಭಕ್ತಂಗೆ ಮೋಕ್ಷವೆಂದು ತಿಳಿ. ಇದಂ ಬಿಟ್ಟು, ಮಾತು ಕಲಿತ ಭೂತಗಳಂತೆ, ಬರಿದೆ ಶಾಸ್ತ್ರವನೋದಿ, ಕಂಡಕಂಡವರಲ್ಲಿ ಬಗುಳಿ, ಕಾಲಕ್ಷೇಪವ ಕಳೆವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣಾ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಓದಿನ ಹಿರಿಯರು, ವೇದದ ಹಿರಿಯರು, ಶಾಸ್ತ್ರದ ಹಿರಿಯರು, ಪುರಾಣದ ಹಿರಿಯರು, ವೇಷದ ಹಿರಿಯರು, ಭಾಷೆಯ ಹಿರಿಯರು, ಇವರೆಲ್ಲರು ತಮ್ಮ ತಮ್ಮನೆ ಮೆರೆದರಲ್ಲದೆ ನಿಮ್ಮ ಮೆರೆದುದಿಲ್ಲ. ತಮ್ಮ ಮರೆದು ನಿಮ್ಮ ಮೆರೆದಡೆ ಕೂಡಿಕೊಂಡಿಪ್ಪ ನಮ್ಮ ಕೂಡಲಸಂಗಮದೇವರು.
--------------
ಬಸವಣ್ಣ
-->