ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭವಕ್ಕೆ ಬಿತ್ತುವಪ್ಪ ಬಯಕೆ ಇಹನ್ನಬರ ಕಾಮನ ಕಾಟವು ಕಡೆಗಾಣದಯ್ಯಾ. ಲಿಂಗದೇವನ ಮರಹಿನಿಂದಪ್ಪ ಮರಣಬಾಧೆ ಇಹನ್ನಬರ ಕಾಲದೂತರ ಭೀತಿಯು ತಪ್ಪದಯ್ಯಾ. ತನುತ್ರಯದ ಅಭಿಮಾನ ಇಹನ್ನಬರ ಸಂಸಾರಸಂತಾಪ ಓರೆಯಾಗದಯ್ಯಾ. ಕೂಡಲಚೆನ್ನಸಂಗಮದೇವಾ,_ ಇದು ಸೃಷ್ಟಿ ಸ್ಥಿತಿ ಸಂಹಾರರೂಪವಪ್ಪ ನಿನ್ನ ಮಾಯದ ಮಾಟವೆಂದರಿದೆನಯ್ಯಾ.
--------------
ಚನ್ನಬಸವಣ್ಣ
-->