ಒಟ್ಟು 3 ಕಡೆಗಳಲ್ಲಿ , 2 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ನೀರೊಳಗಣ ಜ್ಯೋತಿ ಮೇರುವ ನುಂಗಿತ್ತು.ದೂರ[ದ] ಧಾತು ಸಾರಾಯದೊಳಡಗಿತ್ತು.ಪುರದೊಳಗೈವರ ಶಿರವರಿದು, ಪರಿಮಳದೋಕುಳಿಯನಾಡಿತ್ತ ಕಂಡೆ.ಸಾರಿರ್ದ ಬ್ರಹ್ಮನ ಓಲಗ ಹರೆಯಿತ್ತು,ಘೋರ ರುದ್ರನ ದಳ ಮುರಿಯಿತ್ತು_ಗುಹೇಶ್ವರಾ.
ಇಂದ್ರನಾವಾಸ, ಉಪೇಂದ್ರನ ಓಲಗಚಂದ್ರವರಿõ್ಞಳಿಯನರಿಯದೆ ಹೋಯಿತ್ತು,ಬಂಧಮೋಕ್ಷದ ಭವಬಂಧನ ಬಿಡದನ್ನಕ್ಕರಮತ್ತೊಂದರ ಮುಖ ಜನಿಸಿತಲ್ಲಾ.ಕೂಡಲಸಂಗಮದೇವಾ,ಚೆನ್ನಬಸವಣ್ಣನ ಸನ್ನಿಧಿಯಿಂದಲಾನು ಬದುಕಿದೆನು.
.......................ನುಂಗಿತ್ತು.ದೂರ ಧಾತು ಸಾರಾಯದೊಳಡಗಿತ್ತು.ಪುರದೊಳಗೈವರ ಶಿರ ಹರಿದು............ಮಳದೋಕುಳಿಯಾಗಿತ್ತ ಕಂಡೆ.ಸಾರಿದ್ದ ಬ್ರಹ್ಮನ ಓಲಗ ಸೂರೆಯಾಯಿತ್ತು.ಘೋರ ರುದ್ರನ ದಳ ಮುರಿಯಿತ್ತು ಗುಹೇಶ್ವರಾ