ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಂದು ಊರಿಗೆ ಒಂಬತ್ತು ಬಾಗಿಲು. ಆ ಊರಿಗೆ ಐವರು ಕಾವಲು, ಆರುಮಂದಿ ಪ್ರಧಾನಿಗಳು, ಇಪ್ಪತ್ತೈದು ಮಂದಿ ಪರಿವಾರ. ಅವರೊಳಗೆ ತೊಟ್ಟನೆ ತೊಳಲಿ ಬಳಲಲಾರದೆ ಎಚ್ಚತ್ತು ನಿಶ್ಚಿಂತನಾದ ಅರಸನ ಕಂಡೆ. ಆ ಅರಸಿನ ಗೊತ್ತುವಿಡಿದು, ಒಂಬತ್ತು ಬಾಗಿಲಿಗೆ ಲಿಂಗಸ್ಥಾಪ್ಯವ ಮಾಡಿ, ಒಂದು ಬಾಗಿಲಲ್ಲಿ ನಿಂದು, ಕಾವಲವನೆ ಕಟ್ಟಿಸಿ, ಪ್ರಧಾನಿಗಳನೆ ಮೆಟ್ಟಿಸಿ, ಪರಿವಾರವನೆ ಸುಟ್ಟು, ಅರಸನ ಮುಟ್ಟಿಹಿಡಿದು ಓಲೈಸಲು ಸಪ್ತಧಾತು ಷಡುವರ್ಗವನೆ ಕಂಡು, ಕತ್ತಲೆಯ ಕದಳಿಯ ದಾಂಟಿ, ನಿಶ್ಚಿಂತದಲ್ಲಿ ಬಚ್ಚಬರಿಯ ಬೆಳಗಿನೊಳಗೋಲಾಡಿ ಸುಖಿಯಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
-->