ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿ ಬ್ರಹ್ಮ ದೇವರ್ಕಳು ಮುಂತಾಗಿ ಇದ್ದವರೆಲ್ಲರು ತಮ್ಮ ತಮ್ಮ ಮಾರ್ಗದ ಕಲೆಯಲ್ಲಿಯೆ ಎಯ್ದಿ, ಜಪ ತಪ ನೇಮ ನಿತ್ಯಂಗಳು ತಪ್ಪದೆ ಮಹಾದೇವನ ಓಲೈಸಿದರಾಗಿ, ಇದು ಕಾರಣದಲ್ಲಿ ಕೊಂಡ ವ್ರತಕ್ಕೆ ಹಾನಿಯಿಲ್ಲದೆ, ನೇಮಕ್ಕೆ ಅನುಸರಣೆಯಿಲ್ಲದೆ, ತಾ ನಡೆವಲ್ಲಿ, ಇದಿರ ತಾ ಕಾಬಲ್ಲಿ, ಅಣುಮಾತ್ರ ತಪ್ಪದೆ, ಕ್ಷಣಮಾತ್ರ ಸೈರಿಸದೆ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ಹಾದಿಯನರಿಯಬೇಕು.
--------------
ಅಕ್ಕಮ್ಮ
-->