ಮಾಡಿದ ಭಕ್ತಿಗೆ ಕೈಲಾಸಕ್ಕೆ ಹೋದೆಹೆನೆಂಬುದು ಕೈಕೂಲಿ.
ಭಾಷೆಗೆ ತಪ್ಪಿ ಓಸರಿಸಿದ ಮತ್ತೆ ಅನಿಹಿತವ ಹೇಳಿದಲ್ಲಿ
ಮತ್ತೆ ಘಾತಕತನದಿಂದ ಎಯ್ದಿಹೆನೆಂಬುದು ಭಕ್ತಿಗೆ ವಿಹಿತವಲ್ಲ.
ದೃಷ್ಟದಲ್ಲಿ ಕೊಟ್ಟುದ ಲಕ್ಷಿಸಲರಿಯದೆ,
ಅಲಕ್ಷ್ಯವ ಲಕ್ಷಿಸಿ ಕಾಂಬುದಕ್ಕೆ ಲಕ್ಷ್ಯವೇನು ?
ಅದು ನಿರೀಕ್ಷಣೆಯ ಲಕ್ಷ್ಯದಿಂದಲ್ಲದೆ, ಆತ್ಮಂಗೆ ಲಕ್ಷ್ಯವಿಲ್ಲ.
ಇಂತೀ ಉಭಯದಲ್ಲಿ ಲಕ್ಷಿತವಾದವಂಗೆ ಮರ್ತ್ಯ ಕೈಲಾಸವೆಂಬುದು;
ತನ್ನರಿವು ನಿಶ್ಚಯವಾದಲ್ಲಿ ಅದೆ ಲಕ್ಷ್ಯ.
ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನ
ಅಲ್ಲಿ ಇಲ್ಲಿ ಎಲ್ಲಿಯೂ ತಾನೆ.