ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣ ಲಿಂಗಸಮರಸವಾಗಿ ಆಚರಿಸುವ. ಶರಣನ ಲಿಂಗ ಬ್ಥಿನ್ನವಾಗಿ ಓಸರಿಸಿಹೋದರೆ ನೋಡಿ, ಅರಸಿ ಸಿಕ್ಕಿದ ಸಮಯದಲ್ಲಿ ಆ ಲಿಂಗವ ಪರೀಕ್ಷಿಸಿ ನೋಡುವುದು. ಆರು ಸ್ಥಾನಂಗಳಲ್ಲಿ ಭಿನ್ನವಿಲ್ಲದಿರ್ದಡೆ ಧರಿಸಿಕೊಂಬುದು. ಸರ್ವಮಾಹೇಶ್ವರರು ನೋಡಿ ಶಂಕೆಯುಳ್ಳಡೆ ಬಿಡುವುದು. ಅದೆಂತೆಂದಡೆ : ಶರಣನ ಸಂಕಲ್ಪ ಸನ್ಮತ ತನ್ನದೆಂಬುದೆ ದಿಟವೆಂದು ತಾ ನಿಶ್ಚೈಸಿ ತೆತ್ತಿಗರಾದ ಸರ್ವಮಾಹೇಶ್ವರರು ಮಂತ್ರಬೋಧನೆಯ ಕರ್ಣದಲ್ಲಿ ಬೋದ್ಥಿಸಬೇಕಲ್ಲದೆ ಆ ಲಿಂಗಧ್ಯಾನಾರೂಢನಪ್ಪಾತಂಗೆ ಧೂಪ ದೀಪ ಅಂಬರಗಳೆಂಬ ಬಂಧನವೈಕ್ಯವಂ ಮಾಡಲಾಗದು. ಮಾಡಿದಡೆ ಜ್ಞಾನಿಗಳೊಪ್ಪರು. ಅದು ಕಾರಣವಾಗಿ ಶಿವಧ್ಯಾನ ನಿಶ್ಚಿಂತವ ಮಾಡಿದ ಕಾರಣ ಅವರ ತೆತ್ತಿಗರಲ್ಲವೆಂಬೆ, ದಿಟ ಕಾಣಾ ನೀ ಸಾಕ್ಷಿ ನಿಮ್ಮಾಣೆನಿಮ್ಮಅರ್ಧಾಂಗಿಯಾಣೆ ಅಮರಗುಂಡದ ಮಲ್ಲಿಕಾರ್ಜುನಾ |
--------------
ಪುರದ ನಾಗಣ್ಣ
-->