ಅಥವಾ

ಒಟ್ಟು 447 ಕಡೆಗಳಲ್ಲಿ , 1 ವಚನಕಾರರು , 447 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೊಲ್ಲಿಗೆ ಒಂದು ಖಂಡುಗ ನವಣೆ ನುಂಗಿತ್ತಯ್ಯಾ. ಆ ನವಣೆಯ ಹೊಯ್ದಳೆಯಬೇಕೆಂದಡೆ ಸ್ಥಲ ಸಾಲದಯ್ಯಾ- ಹಲಬರು ಛಲವಿಡಿದುವಿಡಿದು ಹೊಲಬುಗೇಡಿಯಾದರು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ವಿಷಮ ವಿಷಯ ಗಾಳಿಯಲ್ಲಿ ದೆಸೆಗೆಟ್ಟೆನಯ್ಯಾ ತಂದೆ. ಆಮಿಷ ರೋಷಂಗಳೆನ್ನುವ ಕಾಡಿಹವು. ಶಾಶ್ವತ ನಿತ್ಯ ನಿತ್ಯ ನೀನೆ ನಿಜಪದವನೀಯಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಮುನ್ನ ಮಾಡಿದ ದೇಹ ನಿರ್ವಯಲಾದಡೆ, ಧರಿಸುವುದೇಕೋ ಕಲ್ಲು ಲಿಂಗವ, ಎಲೆ ಅಯ್ಯಾ? ಅಂಗಗುಣ ಲಿಂಗಕ್ಕಾಯಿತ್ತು ; ಲಿಂಗಗುಣ ಅಂಗಕ್ಕಾಯಿತ್ತು. ಇವೆಲ್ಲ ಭಾವಸಂಕಲ್ಪವಿಕಲ್ಪವು. ಅಂಗ ಲಿಂಗವೆಂಬುದು ಪಳಮಾತು. `ಲಿಂಗಮಧ್ಯೇ ಜಗತ್ಸರ್ವಂ' ಎಂಬುದು ಅಖಂಡಲಿಂಗ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ವೇದವನೋದಿ ವೇದಾಧ್ಯಯನವ ಮಾಡಿದಡೇನು, ಬ್ರಾಹ್ಮಣನಾಗಬಲ್ಲನೆ? ಬ್ರಹ್ಮವೇತ್ತುಗಳ ಶುಕ್ಲಶೋಣಿತಂದ ಜನಿಸಿದಡೇನು, ಬ್ರಾಹ್ಮಣನಾಗಬಲ್ಲನೆ? ಯಜನಾ[ದಿಇ] ಷ್ಟ ಷಟ್ಕರ್ಮಂಗಳ ಬಿಡದೆ ಮಾಡಿದಡೇನು, ಬ್ರಾಹ್ಮಣನಾಗಬಲ್ಲನೆ? `ಬ್ರಹ್ಮ ಜಾನಾತಿ ಇತಿ ಬ್ರಾಹ್ಮಣಃ' ಎಂಬ ವೇದವಾಕ್ಯವನರಿದು, ಬ್ರಹ್ಮಭೂತನಾದಾತನೆ ಬ್ರಾಹ್ಮಣ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಇಂದ್ರಿಯನಿಗ್ರಹ ಮಾಡಿದಡೇನಯ್ಯಾ, ಚಂದ್ರಧಾರಿಯಾಗಬಲ್ಲನೆ? ಇಂದ್ರಿಯ ಕಟ್ಟಿದ ಕುದುರೆ ಇಂದ್ರನ ಉಚ್ಚೆ ೈಶ್ರವವಹುದೆ ಅಯ್ಯಾ? ಇಂ್ರಯಂಗಳೆಂಬುದು ಮಾಯಾಜಾಲವು ತಾನೆ. `ನ ಸತೀ' ಎಂಬ ಶ್ರುತಿಯದು ಪ್ರಸಿದ್ಧ. ಂಗವೆಂಬುದ ತಿಳಿಯಬಲ್ಲಾತನೆ ಜಗದ್ವಂದ್ಯ ಜಂಗಮವೆಂಬೆ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಅನಿರ್ವಾಚ್ಯವೆ ವಾಚ್ಯವಾದಲ್ಲಿ ಹಕಾರವೆನಿಸಿತ್ತು; ಆ ಹಕಾರವೆ [ನಿರಂಜನ] ಪ್ರಣವವೆನಿಸಿತ್ತು; ಆ ನಿರಂಜನ ಪ್ರಣವವೆ ಜಂಗಮಾಕೃತಿ, ಜಗದಾಧಾರ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ತನುವಿಗೊಳಗಾದಾತ ಗುರುವೆ? ಮನಕ್ಕೊಳಗಾದಾತ ಲಿಂಗವೆ? ಧನಕ್ಕೊಳಗಾದಾತ ಜಂಗಮವೆ? ತನು-ಮನ-ಧನ ತನ್ನ ಮನಕ್ಕಲ್ಲದೆ ಗುರು-ಲಿಂಗ-ಜಂಗಮದಲ್ಲುಂಟೆ? ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಸಾಲೋಕ್ಯ ಪದ ಮೀರಿ ಸಾಮೀಪ್ಯ ಪದ ಮೀರಿ ಸಾಯುಜ್ಯ ಪದವೀವ ಆತನನು ವಶಮಾಡಿ ತಂದೆನ್ನ ಕರದೊಳಿತ್ತಾ ಗುರು ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಹೆಣ್ಣನೊಲ್ಲೆನು ಎಂದಡೆನಗೆ ಹೆಣ್ಣಾಯಿತ್ತು, ಮನ್ನಣೆಯ ದಾನಕ್ಕೆ ಗುರಿಯಾದೆನು. ಎನ್ನನಿತ್ತೆನು ಎನ್ನನೊಲ್ಲೆನು ಎಂದೆಂಬವನ ಇನ್ನು ಭವಕೆ ತಂದೆನೆಂದೆನುತಿದೆ ಮಾಯೆ ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಮಣ್ಣ ಕೊಟ್ಟು ಪುಣ್ಯವ ಪಡೆವೆನೆಂಬವನ ಭಾಷೆ ಹೊಲ್ಲ ಹೊಲ್ಲ. ಮಣ್ಣಿನ ಪುಣ್ಯ ಮುಕ್ಕಣ್ಣನ ಮುಖಕ್ಕೆ ಬಂತ್ತು. ನೀರನೆರೆದು ಪುಣ್ಯವ ಪಡೆವೆನೆಂಬವನ ಭಾಷೆ ಹೊಲ್ಲ ಹೊಲ್ಲ. ನೀರಿನ ಪುಣ್ಯ ನಿರಂಜನನ ಮುಖಕ್ಕೆ ನಿಮಿರಿತ್ತು. ಜ್ಯೋತಿಯ ಬೆಳಗಿ ಪಾಪವ ಕಳೆವೆನೆಂಬವನ ಭಾಷೆ ಹೊಲ್ಲ ಹೊಲ್ಲ. [ಜೋತಿಯ ಪುಣ್ಯ.... ದೀಪದ.... ಮುಖಕ್ಕೆ ಹೊಯಿತ್ತು.] [ಚಾಮರವ ಬೀಸಿ ಪಾಪವ ಕಳೆವೆನೆಂಬವನ ಭಾಷೆ ಹೊಲ್ಲ ಹೊಲ್ಲ.] ಚಾಮರದ ಪುಣ್ಯ ಚಾಮರಾದ್ಥೀಶನ ಮುಖಕ್ಕೆ ಅಮರಗೊಂಡಿತ್ತು. ದೇವಾಲಯವ ಕಟ್ಟಿ ದೇವತ್ವವ ಪಡೆವೆನೆಂಬವನ ಭಾಷೆ ಹೊಲ್ಲ ಹೊಲ್ಲ. ದೇವಾಲಯದ ಪುಣ್ಯ ಅಧೋಮುಖಂಗೆ ಸೇರಿತ್ತು. ಕೊಟ್ಟ ಭಕ್ತನಾರನೂ ಕಾಣೆ, ಕೈಕೊಂಡ ಜಂಗಮನಾದರೂ ಕಾಣೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಕುಲಮದ ಪೊತ್ತಲ್ಲಿ ಚಂಡಾಲಗಿತ್ತಿಯಾಗಿ ಕೆಡಿಸಿತ್ತು ಮಾಯೆ, ಮಯೂರನೃಪಗೆ. ಛಲಮದ ಪೊತ್ತಲ್ಲಿ ಮಾಂಸ ಭೋಗಿಸಿತ್ತು ಮಾಯೆ, ವೀರ ವಿಕ್ರಮಗೆ. ಧನಮದ ಪೊತ್ತಲ್ಲಿ ದರಿದ್ರವಾಗಿ ಕಾಡಿತ್ತು ಮಾಯೆ, ಹರಿಶ್ಚಂದ್ರಂಗೆ, ರೂಪಮದ ಪೊತ್ತಲ್ಲಿ ಕುರೂಪನ ಮಾಡಿತ್ತು ಮಾಯೆ, ನಳಂಗೆ. ಯೌವನಮದ ಪೊತ್ತಲ್ಲಿ ಹಿಡಿಂಬಿಯಾಗಿ ಕಾಡಿತ್ತು ಮಾಯೆ, ಬ್ಥೀಮಂಗೆ. ವಿದ್ಯಾಮದ ಪೊತ್ತಲ್ಲಿ ಅಜ್ಞಾನವಾಗಿ ಕಾಡಿತ್ತು ಮಾಯೆ, ಅಂದು ಪರ್ವತದಲ್ಲಿ ಕವಿ ವಾದಿಶೇಖರಂಗೆ. ರಾಜಮದ ಪೊತ್ತಲ್ಲಿ ರಾಕ್ಷಸನ ಮಾಡಿತ್ತು ಮಾಯೆ, ಮುಮ್ಮಡಿ ಸಿಂಗನೃಪಂಗೆ. ತಪೋಮದ ಪೊತ್ತಲ್ಲಿ ಹಲವು ಆಗಿ ಕಾಡಿತ್ತು ಮಾಯೆ, ವಿಶ್ವಾಮಿತ್ರಂಗೆ. ಇಂತೀ ಅಷ್ಟಮದವಳಿದು ಅಷ್ಟಾವರಣ ಧರಿಸಿಪ್ಪ ಮಹಾಗಣಂಗಳು ಲಯವಿಲ್ಲದ ರಾಜಯೋಗವ ಪಡೆದಿಹರಯ್ಯಾ. ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಕಾಯವಿಡಿಹನ್ನಕ್ಕರ ಕಾಮವೆ ಮೂಲ; ಜೀವವಿಡಿಹನ್ನಕ್ಕರ ಕ್ರೋಧವೆ ಮೂಲ; ವ್ಯಾಪ್ತಿಯುಳ್ಳನ್ನಕ್ಕರ ಸಕಲ ವಿಷಯಕ್ಕೆ ಆಸೆಯೆ ಮೂಲ. ಎನ್ನ ಆಸೆ ಘಾಸಿಮಾಡುತ್ತಿದೆ, ಶಿವಯೋಗದ ಲೇಸಿನ ಠಾವ ತೋರು, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಸಜ್ಜನವಾಳವೆ ತಾನಿನಿತೆಂಬೆ ಆಲಸಿದಡೆ ಹರಿವುದೆ ಅಯ್ಯ ಐಕ್ಯಪದವು? ಐನಾನಾಕ್ಷರದ ಅಂತಪೂರ್ವವನರಿದಡೆ ಐಕ್ಯನಿನಗರಿಲ್ಲ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಮೂರು ಗುಣ ಮುರಿಮುರಿದು ಮೂರಕ್ಕೆ ತಂದು ಮುರಿಟ್ಟಿತ್ತು ನೋಡಾ, ಮಾರಹರ ಪಾದಪದ್ಮಭ್ರಮರ. ಮೂರು ಗುಣದಂತಾಚರಿಸಬಾರದು; ಮೂರು ಗುಣ ಬಿಡಬಾರದು ನೋಡಾ. ಮೂರರಿಂದಾರು ಲಿಂಗವ ದಾಂಟಿ, ಮೂರರಲ್ಲಿ ಐಕ್ಯವ ನೋಡೆ ಪುರಾರಿ ಪರಮಾತ್ಮ ಕಪಿಲಸಿದ್ಧಮಲ್ಲಿಕಾರ್ಜುನಾ ತಾನೆ ನೋಡಾ, ಮಾರಯ್ಯಾ.
--------------
ಸಿದ್ಧರಾಮೇಶ್ವರ
ಬಡವರ ಭೋಜನ ಭೋಗಿಸಿದವ ಭವಾನೀಪುತ್ರ ನೋಡಯ್ಯಾ. ಕಡವರನ ಎಡೆಗೊಂಡವ ವಿಷ್ಣುವಿನ ವಂಶದವ ನೋಡಯ್ಯಾ. ಬಡವರ ಭೋಜನ ಅಮೃತ ಸೇವನೆ; ಕಡವರನಮೃತ ಸುರಾಪಾನ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->