ಪಶ್ಚಿಮಪದ್ಮಾಸನದಲ್ಲಿ ಕುಳ್ಳಿರ್ದು, ನಿಟ್ಟೆಲುವ ನೆಟ್ಟನೆ ಮಾಡಿ,
ಅಧೋಮುಖ ಕಮಲವ ಬಲಿದು, ಊಧ್ರ್ವಮುಖವ ಮಾಡಿ,
ಇಂದ್ರಿಯಂಗಳನು ಏಕಮುಖವ ಮಾಡಿ,
ಚಂದ್ರ ಸೂರ್ಯರನೊಂದಠಾವಿನಲ್ಲಿರಿಸಿ
ಅತ್ತಿತ್ತ ಮಿಸುಕದೆ ನಡುಗೀರ ಜ್ಯೋತಿಯ ದೃಢವಾಗಿ ಹಿಡಿದು,
ಪರಮಾನಂದದ ವಠದೊಳಗೆ, ಪ್ರಾಣಲಿಂಗಾರ್ಚನೆಯ ಮಾಡುವ
ಮಹಾಮಹಿಮರ ತೋರಿ ಬದುಕಿಸಾ, ಕೂಡಲಚೆನ್ನಸಂಗಯ್ಯಾ.