ಅಥವಾ

ಒಟ್ಟು 27 ಕಡೆಗಳಲ್ಲಿ , 13 ವಚನಕಾರರು , 25 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಗನದ ಮೇಲೊಂದು ಸರೋವರ; ಆ ಜಲದಲ್ಲಿ ಮುಖವ ತೊಳೆದು ಹೂವ ಕೊಯ್ವವರೆಲ್ಲರೂ; ದೇವರಿಗೆ ಮುಖಮಜ್ಜನವನೆರೆದು, ಪೂಜಿಸಿ ಹೊಡವಂಟಡೆ ಒಮ್ಮೆ ನಾಯಕನರಕ ತಪ್ಪದಲ್ಲಾ! ದೇವಲೋಕದ ಪ್ರಮಥರ ಲಜ್ಜೆಯನೇನ ಹೇಳುವೆ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಮಿಥ್ಯಭಾವವನು ತತ್ತರಿದಂದು, ಕಲ್ಪಕಳೆಯನಳಿದುಳಿದಂದು, ಸತ್ತವರೆದ್ದು ಬಂದಂದು, ಸಂಬಂಧಸುಖಸಮ್ಮುಖದ ಸಂಗದ ಸವಿಯ ನೋಡಾ. ಧರೆ ಗಗನದ ಮಧ್ಯ ಜಗಜಗಿಸುತಿರ್ದ ಷಡುದರ್ಶನ ಮೂಲಮುಖಸುಯಿಧಾನವಿಡಿದು, ಚೆಲುವಾಂಗ ಪ್ರಾಣಾತ್ಮಪ್ರಿಯ ಸಿದ್ಧಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಗಗನದ ಮೇಲೊಂದು ಅಬ್ಥಿನವ ಗಿಳಿ ಹುಟ್ಟಿ ಸಯ ಸಂಭ್ರಮದಲ್ಲಿ ಮನೆಯ ಮಾಡಿತ್ತು ಬ್ರಹ್ಮನಾ ಗಿಳಿಗೆ ಹಂಜರವಾದ, ವಿಷ್ಣು ಆ ಗಿಳಿಗೆ ಕೊರೆವ ಕೂಳಾದ ರುದ್ರನಾ ಗಿಳಿಗೆ ತಾ ಕೋಳಾದ (ಕೋಳುವೋದ ?) ಇಂತೀ ಮೂವರ ಮುಂದಣ ಕಂದನ ನುಂಗಿ ದೃಷ್ಟನಾಮ ನಷ್ಟವಾಯಿತ್ತು_ಇದೆಂತೊ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಆರು ನೆಲೆ ಮಂಟಪದ ಕೋಣೆಯಲ್ಲಿ ಆರು ಜ್ಯೋತಿಯ ಮುಟ್ಟಿಸಿ ಆ ಜ್ಯೋತಿಯ ಬೆಳಗಿನಲ್ಲಿ ಆರು ಲಿಂಗವ ನಿರ್ಮಿಸಿ ಆರು ಲಿಂಗದ ಪ್ರತುಮೆಯಲ್ಲಿ ಆರು ಹಂತದ ಸೋಪಾನದಲ್ಲಿ ಮಹಾ ನಿರ್ಮಳವೆಂಬ ದುರ್ಗಮಂ ನಿರ್ಮಿಸಿ ಆ ದುರ್ಗದಲ್ಲಿ ಅರಸಂಗೆ ಕಾಲಿಲ್ಲದಾಕೆಯ ಮದುವೆಯ ಮಾಡಿ ತೂತಿಲ್ಲದ ಭೋಗಕ್ಕೆ ಕೂಡಿ ಬಿಂದುವಿಲ್ಲದೆ ಮಕ್ಕಳಾದ ಪರಿಯ ನೋಡಾ. ತೊಟ್ಟಿಲಿಲ್ಲದೆ ಹಾಸಿ ಮಲಗಿಸಿ ನಿದ್ರೆಗೆಯ್ಸಿದ ಶರಣನಾಚರಣೆಯನೆಂತೆಂಬೆನು. ಇದ ಕಂಡು ನಡೆಯಲರಿಯದೆ, ತಮ್ಮ ಮನ ಬಂದಂತೆ ನಡೆವರು. ಶಿವಯೋಗಕ್ಕೆ ದೂರವಾದರು ನೋಡಾ. ಹೊನ್ನ ಕಟ್ಟಿ ವಿರಕ್ತನು ಬ್ಥಿಕ್ಷೆಯೆನಲಾಗದು. ಭಕ್ತನ ಗೃಹವೆಂದು ಜಂಗಮವು ಹೋದಲ್ಲಿ ಆ ಭಕ್ತನು ಎದ್ದು ನಮಸ್ಕರಿಸಿ ತನ್ನಲ್ಲಿರ್ದ ಪದಾರ್ಥವಂ ತಾನು ಸಹವಾಗಿ ಶಿವಾರ್ಪಣವ ಮಾಡ[ಬ]ಹುದಲ್ಲದೆ. ಇದಲ್ಲದೆ, ಜಂಗಮವ ಬೇರೆ ಕುಳ್ಳಿರಿಸಿ ಉಂಡನಾದರೆ ಅವನಿಗೆ ದೀಕ್ಷೆಯ ಕೊಟ್ಟ ಗುರುವಿಗೆ ತನ್ನ ಮಾರ್ಗವ ಬಿಟ್ಟು ಶಿವಭಕ್ತನಾದರೆ ಮೋಕ್ಷವಿಲ್ಲವಾಗಿ. ಕೋಳಿ ಒಂದು ಕುಟುಕ ಕಂಡರೆ ತನ್ನ ಮರಿಗೆ ತೋರದುಳಿವುದೆ? ಕಾಗೆ ಒಂದಗುಳ ಕಂಡರೆ ತನ್ನ ಬಳಗವ ಕರೆಯದುಳಿವುದೆ? ಶಿವಭಕ್ತನಾಗಿ ತನ್ನ ಲಿಂಗವ ಪೂಜಿಸಿ ಜಂಗಮವ ಮರೆದವನಾದರೆ ಸತ್ತ ದನವಿಗೆ ನರಿ ಹೋದಂತಾಯಿತ್ತು. ಆ ನರಿ ಹೋದ ನೆನಹಿನಲ್ಲಿ ನಾಯಿ ಹೋದಂತಾಯಿತ್ತು. ಇಷ್ಟಕ್ಕಿಂದ ಕರಕಷ್ಟವೆ ಶಿವಭಕ್ತರು? ಷಟ್ಚಕ್ರದ ಭಾವದಲ್ಲಿವೊಪ್ಪಿರುವ ಶಿವಶರಣರು ತಮ್ಮ ನಡೆ ನುಡಿಗಳ ಬಿಡದೆ ನಡೆವುದು. ಅದ ಕಂಡು ಕಣ್ದೆರೆದು ನೋಡಿದೆನಯ್ಯ. ಆವ ವರ್ತನೆಯಲ್ಲಿ ತಾನಿದ್ದರೇನು? ಆವ ಭಾವ ಹೇಂಗಿದ್ದರೇನು? ನಮ್ಮಾಚರಣೆ ನಮಗೆ ಶುದ್ಧ. ಗುರು ಕಲ್ಪಿತನಾದರು ಅವನು ಹಿಂದೆ ಸಂಬಂಧವಾದ ಕಾರಣ, ಅವನಿಗೆ ಬಂಧ ದೊರಕುವದಲ್ಲದೆ ನನಗೆ ದೊರಕದೆಂದು ತಾನು ನಿಶ್ಚೆಸಿದರೆ ತನಗೆ ದೊರಕಬಲ್ಲದೆ? ತಾನು ಪೂರ್ವದಲ್ಲಿ ತಾ ಪಡದುದು ತನಗೆ ತಪ್ಪುವದೆ? ಪ್ರಾಣಿಹಿಂಸೆಯ ಮಾಡುವಾತನಾದರೆಯು ಅವನಿಗೆ ಕಲ್ಪಿತವೇತಕ್ಕೆ? ಹಿಂದೆ ಅವನು ಶಿವನಪ್ಪಣೆವಿಡಿದು ಬಂದ ಕಾರಣ ಅವನಿಗೆ ಬಂದಿತಲ್ಲದೆ ಗಗನದ ಮಂಟಪದ ಮೇಲೆ ಊಧ್ರ್ವಮುಖದ ಗದ್ದುಗೆಯ ಮಾಡಿ ಮಹಾಪ್ರಕಾಶವೆಂಬ ಬೆಳಗಂ ತೋರಿ ಓಂಕಾರವೆಂಬ ಲಿಂಗವ ಮೂರ್ತಮಾಡಿಸಿ ಅದಕ್ಕೆ ಸದ್ಭಾವವೆಂಬ ಪುಷ್ಪವ ತಂದು ಜ್ಞಾನಪ್ರಕಾಶವೆಂಬ ಜ್ಯೋತಿಯಂ ಪೊತ್ತಿಸಿ ಸದ್ಭಕ್ತಿಯೆಂಬ ನೈವೇದ್ಯಮಂ ಮಾಡಿ ನಿರ್ಮಳವೆಂಬ ಪೂಜಾರಿಯಾಗಿರ್ಪನು. ಇದನರಿಯದೆ ತಮ್ಮ ಮನ ಬಂದಂತೆ ಇಪ್ಪವರ ಲಿಂಗಹೋದವನಾದರು ಅವನ ಕಣ್ಣಲ್ಲಿ ಕಂಡು ಅವನಷ್ಟಕ್ಕಲ್ಲದೆ ಅನ್ಯರ ಗೃಹವ ಬಿಡಲೇತಕ್ಕೇ? ಪಾಪವ ಮಾಡಿದನಾರು ಅವನ ಗೃಹಕ್ಕಲ್ಲದೆ ಅವನೊಂದಿಗೆ ಬೆರಸಿದವನಾದರು ಅವನಿಗೆ ಪಾಪ ಸಂಭವಿಸುವುದುಂಟೇ? ಇದ ಸಂಕಲ್ಪವ ಮಾಡಿ ಬಿಡಲೇತಕ್ಕೆ? ಒರ್ವಾನೊಬ್ಬನು ಭವಿಯ ಒಡನಾಡಲು ಅವನ ಪಾಪವು ಅವನಲ್ಲಿಪ್ಪುದಲ್ಲದೆ ಮಿಕ್ಕಿನ ಗೃಹಕ್ಕೆ ಸಂಬಂಧವೇನು? `ಮಾಡಿದವರನಲ್ಲದೆ ಮಿಕ್ಕಿನವರ ಸಂಕಲ್ಪವ ಮಾಡಲಾಗದು'ಯೆಂಬುದು ಗುರುವಚನ. ಹೆಣ್ಣು ಬಿಂದು ಸಂಬಂಧವಾಗಲು ಆ ಭೋಗಕ್ಕೆ ಶರಣನು ಅದನು ಮನದಲ್ಲಿ ಕಂಡು ಸಂತೋಷವಾಗಿಪ್ಪ. ಇಂತೀ ಭಾವಶುದ್ಧವುಳ್ಳಾತನು ಮತ್ರ್ಯಲೋಕಕ್ಕೆ ಮರಳಿ ಬಾರನೆಂಬುದು. ಶರಣ ಸಕಲವಿದ್ಯವ ಕಲಿತು ಫಲವೇನು? ನಿಂದ್ಯನೆ ದೊರಕೊಂಡಮೇಲೆ? ಹುಣ್ಣು ಹುಗಳು ಕೋಷ್ಠವಾಗಿರಲು, ಅವರ ಕಂಡು ಜರಿಯಲಾರದೆಂಬುದೆನ್ನ ಭಾಷೆ. ಇಂದ್ರಿಯಸುಖಕ್ಕೆ ಹೋಗಿ ಬಿದ್ದು ಶಿವಮಾಡಿದರಾಯಿತ್ತೆಂಬ ಅವಿಚಾರದ ನುಡಿಯ ಕೇಳಲಾಗದು. ತನ್ನ ಮನವು ಶುದ್ಧವಾದ ಮೇಲೆ, ಸಕಲ ಸುಖಂಗಳು ತನಗುಂಟಲ್ಲದೆ, ಜ್ಞಾನಿಗೆ ಕತ್ತಲೆಯಿಲ್ಲ. ಅಜ್ಞಾನಿಗೆ ಪಾಪವಿಲ್ಲ. ಇದನರಿದು, ಮುಂದುಗೊಂಡು ತಿರುಗುವ, ಅಣ್ಣಗಳ ಕಂಡು, ನಗುತಿರ್ಪರು ನಿಮ್ಮ ಶರಣರು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಗಗನದ ತಮವ ಕಳೆವರೆ ರವಿ ಅದ್ಥಿಕ ನೋಡಾ. ವಿಪಿನದ ತರುಗಿರಿಕಾಷ್ಠವೆಲ್ಲಕೆಯು ಸುರತರು ಅದ್ಥಿಕ ನೋಡಾ. ನವರತ್ನ ಮಾಣಿಕ್ಯ ಮೌಕ್ತಿಕ ವಜ್ರ ಪುಷ್ಯರಾಗ ಅರ್ಥಭಾಗ್ಯವೆಲ್ಲಕ್ಕೆಯಾ ಪರುಷವದ್ಥಿಕ ನೋಡಾ. ಧರೆಮೂರುಲೋಕದ ಗೋವುಗಳಿಗೆಲ್ಲ ಸುರಬ್ಥಿಯದ್ಥಿಕ ನೋಡಾ. ಈರೇಳು ಭುವನ ಹದಿನಾಲ್ಕು ಲೋಕವೆಲ್ಲಕ್ಕೆಯಾ ಗುರುವಿಂದದ್ಥಿಕವಿಲ್ಲ ನೋಡಾ. ಸಾಕ್ಷಿ :``ನ ಗುರೋರದ್ಥಿಕಂ ನ ಗುರೋರದ್ಥಿಕಂ ನ ಗುರೋರದ್ಥಿಕಂ | ವಿದಿತಂ ವಿದಿತಂ ವಿದಿತಂ ವಿದಿತಂ ಶಿವಶಾಸನಂ ||'' ಎಂದುದಾಗಿ, ಗುರುವಿಂದದ್ಥಿಕವಿಲ್ಲ, ಗುರುವಿಂದದ್ಥಿಕವಿಲ್ಲ, ಗುರುವೆ ಪರಮಾತ್ಮ. ಎನ್ನ ಮಾನವಜನ್ಮದ ಹೊಲೆಯ ಕಳೆದು ಶಿವದೇಹಿಯ ಮಾಡಿದ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆಂಬ ಗುರುವ ಮರೆದವರಿಗೆ ಇದೇ ನರಕ.
--------------
ಹೇಮಗಲ್ಲ ಹಂಪ
ಒಂದು ಎರಡಹುದೆ ? ಎರಡು ಒಂದಹುದೆ ? ಒಂದು ಒಂದೇ, ಎರಡು ಎರಡೇ. ಅದು ಕಾರಣ, ಶಿವನು ತನ್ನ ಲೀಲಾಕಾರಣವಾಗಿ ಮಾಯಾ ನಿರ್ಮಿತವಂ ಮಾಡಿ, ಆ ಮಾಯಾರಚನೆಯಿಂದಾದ ಬ್ರಹ್ಮಾಂಡ ಸಂದೋಹ, ಹರಿ ವಿರಿಂಚಿ ಸುರಪತಿ ಸುರಾಸುರರು ನರನಿಕರ, ಖಗಮೃಗ ಜೀವರಾಶಿಗಳೆಲ್ಲವೂ ಶಿವನಿಂದಲಾಗಿ, ಶಿವನಿಂದ ಹೊರೆಯಿಸಿಕೊಂಡು, ಶಿವನಿಂದವೆ ಹೋದವೆಂದಡೆ, ಅವರ ಆಗು ಹೋಗು ಇರವು ಹೋಗಿನೊಳಗೆ ಲಯ ಗಮನ ಸ್ಥಿತಿ ಶಿವಂಗುಂಟೆ, ಎಲೆ ಮರುಳಗಳಿರಾ ? ಗಗನದಲ್ಲಿ ತೋರಿದ ಮೇಘವು ಗಗನದಲ್ಲಿ ಅಡಗಿದವೆಂದಡೆ, ಆ ಗಗನ ತಾ ಮೇಘವೆ ? ತನ್ನಾದ್ಥೀನಶಕ್ತಿದಂಡದಿಂ ಕುಂಬಾರ ಚಕ್ರವ ತಿರುಗಿಸಲು, ಆ ಚಕ್ರಭ್ರಮಣ ಚೈತನ್ಯವು ಆ ಕುಂಬಾರನೆ, ಮರುಳುಗಳಿರಾ ? ಆ ಚೈತನ್ಯ ಅಡಗುವುದೆ ? ನಿಲ್ಲು ಮಾಣು. ಬಿಲ್ಲ ನಾರಿಗೆ ಅಂಬಂ ಸಂಧಾನಿಸಿ ಎಸೆಯಲಾ, ಅಂಬು ಹರಿದ ಚೈತನ್ಯ ಬಿಲ್ಲು ಕಾರಣವೆ ? ಅಲ್ಲ , ನಿಲ್ಲು , ಮಾಣು. ಇವೆಲ್ಲವು ಚೈತನ್ಯಂಗಳು. ಅಂತು ಸರ್ವವೆಲ್ಲವು ತೋರಿಯಡಗುವುದು. ಸರ್ವೇಶ್ವರನು, ಸರ್ವಕರ್ತೃ, ಸರ್ವಚೈತನ್ಯ, ಸೂತ್ರಯಂತ್ರವಾಹಕ ಶಿವನು. ಸರ್ವಲಯ ಗಮನ ಸ್ಥಿತಿ ತನಗುಂಟೆ ? ನಿಲ್ಲು , ಮಾಣಿರೆ, ಎಲೆ ಜಡಜೀವಿಗಳಿರಾ. ಗಗನದ ರವಿ ಕಿರಣದಿಂದ ಸಕಲರೂಪಿತ ದ್ರವ್ಯಪದಾರ್ಥಂಗಳಲ್ಲಿ ಪ್ರತಿಪ್ರಭೆ ತೋರಲು, ಆ ಪ್ರತಿಪ್ರಭೆಯ ಆಗುಹೋಗಿನ ಸ್ಥಿತಿಗತಿ ಆ ಗಗನದ ಸೂರ್ಯಂಗುಂಟೆ, ಎಲೆ ಜಡಜೀವಿಗಳಿರಾ ? ಈ ಪರಿಯಲೆ ವಿಶ್ವವೆಲ್ಲವಕ್ಕೂ ತಾನಲ್ಲದ ತಾನಿಲ್ಲದ ಪ್ರೇರಣ ಚೈತನ್ಯವೇ ವಿಶ್ವದ ನಯನ, ವಿಶ್ವದ ಮುಖ, ವಿಶ್ವದ ಬಾಹು, ವಿಶ್ವದ[ಚ]ರಣ, ಸ್ವರ್ಗಮತ್ರ್ಯ ಭುವನಾದ್ಯಂಗಳ ಮೂಲಚೈತನ್ಯಸೂತ್ರ ತಾನಲ್ಲದೆ, ತಾನಿಲ್ಲದೆ ಆಡಿಸುವ ಸೂತ್ರಾತ್ಮಕನಲ್ಲದೆ ಅವರಾಗು ತನಗುಂಟೆ, ಎಲೆ ಭ್ರಮಿತರಿರಾ ? `ವಿಶ್ವತಶ್ಚಕ್ಷುರುತ ವಿಶ್ವತೋಮುಖೋ ವಿಶ್ವತೋ ಬಾಹುರುತ ವಿಶ್ವತಸ್ಪಾ ಪಾತ್ | ಸಂ ಬಾಹುಭ್ಯಾಂಧಮತಿ ಸಂಪತತ್ರೈದ್ರ್ಯಾವಾ ಭೂಮೀ ಜನಯನ್ ದೇವ ಏಕಃ ಎನಲು, `ಈಶಾನಃ ಶಿವ ಏಕೋದೇವಃ ಶಿವಂ ಕರಃ ತತ್ಸರ್ವಮನ್ಯತ್ ಪರಿತ್ಯಜೇತ್' ಎನಲು, `ಏಕ ಏವ ರುದ್ರೋ ನ ದ್ವಿತೀಯಾಯ ತಸ್ಥು' ಎನಲು, ಶಿವನೊಬ್ಬನೇ, ಇಬ್ಬರಿಲ್ಲ . `ನ ಯಥಾಸ್ತಿ ಕೂರ್ಮರೋಮಾಣಿ, ಶೃಂಗಂ ನ ನರಮಸ್ತಕೇ ನ ಯಥಾಸ್ತಿ ವಿಯತ್ಪುಷ್ಪಂ ನ ತಥಾಸ್ತಿ ಪರಾತ್ಪರಃ |' ನಾಲ್ಕು ವೇದಂಗಳು ಬಿನ್ನವಿಸಿದವು ಕೇಳಿರೇ ಎಲೆ ವಿಪ್ರರಿರಾ. ಇದನರಿದು, ಬಸವಪ್ರಿಯ ಕೂಡಲಚೆನ್ನಸಂಗಯ್ಯನನೆ ಧ್ಯಾನಿಸಿ, ನಿರೀಕ್ಷಿಸಿ, ಸ್ತುತಿಸಿ, ಯಜಿಸಿ ಕೃತಾರ್ಥರಾಗಿರೆ ಎಲೆ ಮರುಳು ವಿಪ್ರರಿರಾ.
--------------
ಸಂಗಮೇಶ್ವರದ ಅಪ್ಪಣ್ಣ
ನೆಲದ ಮೇಲಣ ನಿಧಾನವ ಕಂಡವರಲ್ಲದೆ ಆಕಾಶದೊಳಗೆ ಹೂಳಿರ್ದ ನಿಕ್ಷೇಪವ ಕಂಡವರಾರನೂ ಕಾಣೆ. ಖೇಚರಿಯ ಮುದ್ರೆಯಿಂದ ಗಗನದ ನಿಧಿಯನೆ ಕಂಡು ಆ ನಿದ್ಥಿಯೊಳಗೆ ನಿಧಾನವಾಗಿರಬಲ್ಲಡೆ ಸೌರಾಷ್ಟ್ರ ಸೋಮೇಶ್ವರಲಿಂಗ ಬೇರಿಲ್ಲ ಕಾಣಿರೆ,
--------------
ಆದಯ್ಯ
ಮೃಗದ ಸಂಚದ ತಲೆಯಲ್ಲಿ ಜಗದ ಬಯಲ ನಾಲಗೆ! ಅಘಹರನ ದೃಷ್ಟಿಯಲ್ಲಿ ಬೊಬ್ಬೆಯಬ್ಬರವಿದೇನೊ? ಗಗನದ ವಾಯುವ ಬೆಂಬಳಿವಿಡಿದು, ಅಗ್ನಿಯಪ್ಪಿನ ಕಳೆಯಲ್ಲಿ ಮೇದಿನಿ ಅಡಗಿತ್ತು ನೋಡಾ! ಮನದ ಬಗೆಯನವಗ್ರಹಿಸಿ, ಜಗದ ಬಣ್ಣವ ನುಂಗಿ, ಗುಹೇಶ್ವರನೆಂಬ ಲಿಂಗದಲ್ಲಿ ನಿರಾಳವಾಯಿತ್ತು.
--------------
ಅಲ್ಲಮಪ್ರಭುದೇವರು
ಕಡಲ ನುಂಗಿದ ಕಪ್ಪಿನ ಪರಿಭವ ನವಸಾಸಿರ ! ಸಿಡಿಲು ಹೊಯ್ದ ಬಯಲಿಂಗೆ ಬಣ್ಣವುಂಟೆ ? ಕಂಗಳ ಮುಂದಣ ಕನಸು ಹಿಂಗಿದ ತುಂಬಿಯ ಪರಿಮಳ ! ಅಂಗವಿಲ್ಲದ ರೂಹಿಂಗೆ ಸಂಗವುಂಟೆ ?_ಇದೇನೋ ! ಗಗನದ ಹಣ್ಣನೆ ಕೊಯ್ದು, ಮುಗುದೆ ರುಚಿಯನರಿಯಳು ! ಹಗರಣದಮ್ಮಾವಿನ ಹಯನು ಸಯವಪ್ಪುದೆ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಗಗನದ ಪುತ್ಥಳಿ ಬಯಲ ಬಣ್ಣವನುಟ್ಟು. ಅಂಜನದ ತಿಲಕವನ್ನಿಟ್ಟು, ಬ್ರಹ್ಮ ವಿಷ್ಣು ರುದ್ರರನಲಂಕರಿಸಿಕೊಂಡು ತ್ರಿಜಗದೊಳಗೆ ತನ್ಮಯವಾಗಿ ಸುಳಿಯಿತ್ತು ನೋಡಾ. ಇಂತಿದನರಿಯದೆ ಜಗದೊಳಗಣ ಹಿರಿಯರೆಲ್ಲಾ ಬರುಸೂರೆ ಹೋದರು. ಮಾತಿನ ಜಾಣರೆಲ್ಲಾ ನಿಜಗೆಟ್ಟರು. ಇದನರಿತು ಉಟ್ಟುದ ಹರಿದು, ಇಟ್ಟುದ ಸುಟ್ಟು, ತೊಟ್ಟುದ ತೊಡದು, ಉಲುಮೆಯನುಸುರಲೊಲ್ಲದೆ, ಶಬ್ದಮುಗ್ಧವಾದ ಸೌರಾಷ್ಟ್ರ ಸೋಮೇಶ್ವರಾ, ನಿಮ್ಮ ಶರಣ.
--------------
ಆದಯ್ಯ
ಗಗನದ ಗುಂಪ ಚಂದ್ರಮ ಬಲ್ಲುದಲ್ಲದೆ, ಕಡೆಯಲಿದ್ದಾಡುವ ಹದ್ದು ಬಲ್ಲುದೆ ಅಯ್ಯಾ ? ನದಿಯ ಗುಂಪ ತಾವರೆ ಬಲ್ಲುದಲ್ಲದೆ, ಕಡೆಯಲಿದ್ದ ಹೊನ್ನಾವರಿಕೆ ಬಲ್ಲುದೆ ಅಯ್ಯಾ ? ಪುಷ್ಪದ ಪರಿಮಳವ ತುಂಬಿ ಬಲ್ಲುದಲ್ಲದೆ, ಕಡೆಯಲಿದ್ದಾಡುವ ನೊರಜು ಬಲ್ಲುದೆ ಅಯ್ಯಾ ? ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ನಿಲವ ನೀವೆ ಬಲ್ಲಿರಲ್ಲದೆ, ಈ ಕೋಣನ ಮೈಮೇಲಣ ಸೊಳ್ಳೆಗಳೆತ್ತ ಬಲ್ಲವಯ್ಯಾ ?
--------------
ಅಕ್ಕಮಹಾದೇವಿ
ಮೇರುಗಿರಿ ಉದಯಗಿರಿ ನೀಲಗಿರಿ ಹೇಮಗಿರಿ ರಜತಗಿರಿ ಇಂತೀ ಗಿರಿಗಳಿಗೆ ಛಳಿಯಾದರೆ ಹೊದ್ದಿಸುವರುಂಟೇನಯ್ಯಾ? ಆ ಗಿರಿಯ ಕೆಳಗೆ ಗಗನವುಂಟು ; ಆ ಗಗನಕ್ಕೆ ಗಬಸಣಿಗೆಯಿಕ್ಕುವರುಂಟೇನಯ್ಯ? ಆ ಗಗನದ ಕೆಳಗೆ ಸಪ್ತಸಮುದ್ರಗಳುಂಟು. ಅವುಗಳ ನೀರುಡುಗಿದರೆ ಆ ನೀರ ಕೂಡಿಸುವರುಂಟೇನಯ್ಯಾ? ಆ ಸಮುದ್ರಂಗಳ ಕೆಳಗೆ ಒಂದು ಮದಸೊಕ್ಕಿದ ಇಲಿ, ಆ ಇಲಿಯ ತಿಂದೆನೆಂದು ಒಂದು ಮಾರ್ಜಲ ಬರಲು, ಆ ಮಾರ್ಜಾಲನು ಆ ಇಲಿಯ ಕಂಡು ನಿಬ್ಬೆರಗಾಯಿತ್ತು. ಆ ಇಲಿಯು ಬಂದು ಆ ಮಾರ್ಜಾಲನ ಕಿವಿಯ ತಿಂಬೋದು. ಆದ ಕಂಡು ಬೆರಗಾದ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗ.
--------------
ಗುಹೇಶ್ವರಯ್ಯ
ಜ್ಯೋತಿಯಿಲ್ಲದ ಕತ್ತಲೆಮನೆಯಂತೆ, ಸೂರ್ಯನಿಲ್ಲದ ಗಗನದ ಕಾಳದಂತೆ, ಆತ್ಮ ದೇಹ ಮಧ್ಯದ ಗೃಹದೊಳು ಮಾಯಾತಮಂಧವೆಂಬ ಕತ್ತಲೆಯ ಹೆಚ್ಚಿಸಿ, ಶಿವಜ್ಞಾನವನಡಗಿಸಿ, ಅಹಂಕಾರ ಮಮಕಾರವೆಂಬ ಅಜ್ಞಾನಕೆನ್ನ ಗುರಿಮಾಡಿ, ನೀ ತೊಲಗಿ ಹೋದರೆ ನಾ ಬೀದಿಗರುವಾದೆ. ಗ್ರಾಣಕೊಂಡ ಚಂದ್ರನಂತಾದೆ, ಪಿತ-ಮಾತೆಯಿಲ್ಲದ ಶಿಶುವಿನಂತಾದೆ, ಎನ್ನ ಹುಯ್ಯಲಂ ಕೇಳಿ, ರಂಬಿಸಿ ತಲೆದಡಹು ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಉದಕದೊಳಗಣ ವಿಕಾರ ಪವನನಿಂದಲ್ಲದೆ, ಉದಕ ಸಹಜಬೀಜವೆಂದರಿಯಬಹುದೆ ? ದೇಹ ಪ್ರಪಂಚಂಗಳು ವಾಯುವಿಂದಲ್ಲದೆ, ದೇಹದಲ್ಲಿ ಬೇರೊಂದು ಗುಣವನರಸುವರೆ ? ಮಂಜಿನ ಗುರಿಯ ಬಿಸಿಲ ಅಂಬಿನಲ್ಲಿ ಎಚ್ಚಡೆ, ಕರ ಹೊಸತಾಯಿತ್ತಲ್ಲಾ ! ಸಹಜದ ನಿಲವು ಜೀವ ಪರಮಾತ್ಮನೆಂದು ಎರಡನು ನುಡಿಯಲಿಲ್ಲ. ಬೇರೆ ನೆನೆವ ಮನ ತಾನೆಯಾಗಿ ತೆರಹಿಲ್ಲದ ಘನ. ಗಗನದ ಸೂರ್ಯ ಜಲದಲ್ಲಿ ತೋರುವಂತೆ, ಹಲವು ರವಿಯೆಂದು ಮತ್ತೆಣಿಸಲುಂಟೆ ? ಒಳಹೊರಗು ಎಂದೆನ್ನದೆ ಮುಟ್ಟಿಯೂ ಮುಟ್ಟದಿಪ್ಪ, ಬಯಲೊಳಡಗಿದ ನಿರಾಳವನು ಕೇಳುವ ಕೀರುತಿಯಲ್ಲ ನೋಡುವ ಮೂರುತಿಯಲ್ಲ ಪರಿಪೂರ್ಣ ಪರಂಜ್ಯೋತಿ ನಿರ್ಗುಣ ಮಹಿಮ. ಭಾವವಿಲ್ಲದ ಶಬ್ದವನು ಕೇಳಬಲ್ಲವನೊಬ್ಬನೆ, ಕೂಡಲಚೆನ್ನಸಂಗಮದೇವರಲ್ಲಿ ಪ್ರಭುವೆ ನೀನೆ ಬಲ್ಲೆ.
--------------
ಚನ್ನಬಸವಣ್ಣ
ಗಗನದ ಮೇಘಂಗಳು ಸುರಿದಲ್ಲಿ ಒಂದು ಹಿರಿಯ ಕೆರೆ ತುಂಬಿತ್ತು. ಆ ಕೆರೆಗೆ ಏರಿ ಮೂರು; ಅಲ್ಲಿ ಒಳಗೆ ಹತ್ತು ಬಾವಿ ಹೊರಗೆ ಐದು ಬಾವಿ ! ಆ ಏರಿಯೊಳಗೆ ಒಂಬತ್ತು ತೂಬನುಚ್ಚಿದಡೆ ಆಕಾಶವೆಲ್ಲ ಜಲಮಯವಾಗಿತ್ತು ! ತುಂಬಿದ ಜಲವನುಂಡುಂಡು ಬಂದು ಅಂಜದೆ ನುಡಿವ ಭಂಡಯೋಗಿಗಳನೇನೆಂಬೆ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಇನ್ನಷ್ಟು ... -->