ಅಥವಾ

ಒಟ್ಟು 13 ಕಡೆಗಳಲ್ಲಿ , 5 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯ, ಪರಮಸಚ್ಚಿದಾನಂದಮಂತ್ರಮೂರ್ತಿ ಜಂಗಮದೇವನು ಪ್ರಮಥಗಣಾರಾಧ್ಯ ಭಕ್ತಮಾಹೇಶ್ವರರೊಪ್ಪಿಗೆಯಿಂದ ನಿರಂಜನಜಂಗಮಕ್ಕೆ ಉಪರಿಸಿಂಹಾಸನ ಮಾಡಿ, ಮುಹೂರ್ತಮಾಡಿದ ಮೇಲೆ ಷಡಕ್ಷರಮಂತ್ರಸ್ವರೂಪವಾದ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಮಧ್ಯದಲ್ಲಿ ಮೂರ್ತಿಗೊಂಡಿರುವ ಈಶಾನ್ಯಕಲಶ ಮೊದಲಾಗಿ ಪಂಚಕಲಶಂಗಳಿಗೆ ಜಂಗಮದೀಕ್ಷಾಪಾದೋದಕವ ತುಂಬಿ, ಮಂಟಪಷಟ್ಸಮ್ಮಾರ್ಜನೆ, ಷಡ್ವಿಧ ವರ್ಣದ ರಂಗಮಾಲೆ, ನವಧಾನ್ಯ, ನವಸೂತ್ರ, ವಿಭೂತಿವಿಳ್ಯೆ, ಸುವರ್ಣಕಾಣಿಕೆ, ಪಂಚಮುದ್ರೆ, ಅಷ್ಟವಿಧ ಷೋಡಶೋಪಚಾರಂಗಳಿಂದೊಪ್ಪುವ ಸದ್ಯೋಜಾತ, ವಾಮದೇವ, ಅಘೋರ, ತತ್ಪುರುಷ, ಈಶಾನ ಕಲಶಮೂರ್ತಿಗಳ ಪಶ್ಚಿಮಭಾಗದಲ್ಲಿ ಜಂಗಮಪಾದ ಸೋಂಕುವಂತೆ ಗುರುವು ಮುಹೂರ್ತಮಾಡಿ, ಆ ಕಲಶಂಗಳ ಸೂತ್ರವ ತನ್ನ ಪಾದಕ್ಕೆ ಹಾಕಿ, ತನ್ನ ಚಿದ್ಬೆಳಗಿನ ಮುಂದೆ ಮೂರ್ತಿಗೊಂಡಿರುವ ಕಲಶಂಗಳ ಪೂರ್ವಭಾಗದಲ್ಲಿ ಕರಿಯಕಂಬಳಿಯ ಗರ್ದುಗೆಯ ಮಾಡಿಸಿ, ಹಸೆಯ ರಚಿಸಿ, ಆ ಗರ್ದುಗೆಯ ಮೇಲೆ ಶಿಷ್ಯೋತ್ತಮನ ಮುಹೂರ್ತವ ಮಾಡಿಸಿ, ಆತನಂಗಕ್ಕೆ ಗುರುಸೂತ್ರವ ಹಾಕಿ, ಶಿಷ್ಯನಂಗದ ಮೇಲೆ ಮೂರ್ತಿಗೊಂಡಿರುವ ಪರಶಿವಲಿಂಗವ ಗಣಸಾಕ್ಷಿಯಾಗಿ ಶ್ರೀ ಗುರುದೇವನು ತನ್ನ ಕರಸ್ಥಲದಲ್ಲಿ ಮುಹೂರ್ತವ ಮಾಡಿಸಿ, ಆ ಲಿಂಗದ ಮಸ್ತಕದ ಮೇಲೆ ನಿರಂಜನಜಂಗಮದ ಪಾದವಿಡಿಸಿ, ಆ ಪಂಚÀಕಲಶಂಗಳಲ್ಲಿ ಶೋಬ್ಥಿಸುವಂಥ ದೇವಗಂಗಾಜಲಸ್ವರೂಪವಾದ ಗುರುಪಾದೋದಕವನ್ನು ಒಂದು ಪಾತ್ರೆಯಲ್ಲಿ ಆ ಕಲಶಂಗಳೈದರಲ್ಲಿ ತೆಗೆದುಕೊಂಡು ಗುರುವಿನ ದಕ್ಷಿಣಭಾಗದಲ್ಲಿ ಮೂರ್ತಿಗೊಂಡಿರುವ ಪಾದೋದಕ ಕುಂಭದಲ್ಲಿ ಒಂದು ಬಿಂದುವ ತಗೆದುಕೊಂಡು ಆ ಪಾತ್ರೆಯಲ್ಲಿ ಹಾಕಿ, ಇವಾರುತೆರದ ಅರ್ಘೋದಕಂಗಳ ಪ್ರಮಥಗಣರಾಧ್ಯ ಭಕ್ತಮಹೇಶ್ವರರೆಲ್ಲ ಆ ಗುರುವಿನ ಹಸ್ತಕಮಲದಲ್ಲಿರುವಂಥ ಉದಕವನ್ನು ತೆಗೆದುಕೊಂಡು, ಶರಣಸತಿ ಲಿಂಗಪತಿಯಾಗಿ ಒಪ್ಪುವ ಶಿಷ್ಯೋತ್ತಮನ ಮಸ್ತಕದಮೇಲೆ ಮಂತ್ರಧ್ಯಾನದಿಂದ ಸಂಪ್ರೋಕ್ಷಣೆಯ ಮಾಡುವಂಥಾದೆ ಕಲಶಾಬ್ಥಿಷೇಕದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ಚನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ನಡೆವ ದಾರಿಯಲ್ಲೆನ್ನ ಒಡೆಯರು ಬರಲು ಬಿಳಿಯಂಬರ ಗರ್ದುಗೆಯ ಮೇಲಿರಿಸಿ, ಪಾದಪ್ರಕ್ಷಾಲನೆಯ ಮಾಡಿ, ಇಚ್ಫಿತ ಪದಾರ್ಥವ ಮುಚ್ಚಿನೀಡಿ, ನಚ್ಚಿ ಮೆಚ್ಚಿ ನಲಿದಾಡುವೆ. ಹೆಚ್ಚಿ ಉಳಿಮೆಯ ಶೇಷವ ಕೊಂಡು ಪಾದೋದಕವ ಧರಿಸಿ ಪಾವನನಾದೆನು ಗುರುನಿರಂಜನ ಚನ್ನಬಸವಲಿಂಗ ಸಾಕ್ಷಿಯಾಗಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಅಯ್ಯ ! ಪೂರ್ವವನಳಿದು ಪುನರ್ಜಾತನಾದ ಸತ್ಯಸದ್ಧರ್ಮಸ್ವರೂಪ ತಚ್ಛಿಷ್ಯನು ಶ್ರೀಗುರುಲಿಂಗಜಂಗಮದ ವೇಧಾ_ಮಂತ್ರ_ಕ್ರಿಯಾದೀಕ್ಷೆಯ ಪಡೆದು, ಅಷ್ಟಾವರಣದ ನೆಲೆಕಲೆಗಳ ತಿಳಿದು, ಪಂಚಾಚಾರ ಮೊದಲಾಗಿ ಸರ್ವಾಚಾರ ಸಂಪತ್ತಿನ ವಿವರ ತಿಳಿದು, ನೂರೊಂದು ಸ್ಥಲದ ಆಚರಣೆ_ಇನ್ನೂರಹದಿನಾರು ಸ್ಥಲದ ಸಂಬಂಧವನರಿದು, ಷಟ್ಸ್ಥಲ ಮಾರ್ಗವಿಡಿದು, ಶ್ರೀಗುರುಲಿಂಗ ಜಂಗಮಕ್ಕೆ ತನು_ಮನ_ಧನವಂಚನೆಯಿಲ್ಲದೆ ನಿರ್ವಂಚಕನಾಗಿ, ಭಕ್ತಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಕಾಯಕ[ವ ಮಾಡಿ] ಮಹೇಶ್ವರಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಭಿಕ್ಷವ ಮಾಡಿ, (ಬೇಡಿ?) ಬಂದ ಪದಾರ್ಥವ ಸಮರ್ಪಿಸಿ, ಪರದ್ರವ್ಯದಲ್ಲಿ ರಿಣಭಾರನಾಗದೆ, ಸತ್ಯಶುದ್ಧ ನಡೆನುಡಿಯಿಂದಾಚರಿಸಿ, ಶ್ರದ್ಧಾದಿ ಸಮರಸಾಂತ್ಯಮಾದ ಸದ್ಭಕ್ತಿಯ ತಿಳಿದು ಅನಾದಿಕುಳ ಸನ್ಮತವಾದ ದಶವಿಧ ಪಾದೋದಕ, ಏಕಾದಶ ಪ್ರಸಾದದ ವಿಚಾರ ಮೊದಲಾದ ಅರ್ಪಿತಾವಧಾನವ, ಪರಿಪೂರ್ಣಮಯ ಶ್ರೀಗುರುಲಿಂಗಜಂಗಮಕರುಣಕಟಾಕ್ಷೆಯಿಂದ, ಅಚ್ಚ ಪ್ರಸಾದಿಸ್ಥಲದ ಶರಣತ್ವವ ಪಡೆದು, ಸತ್ಯಸದಾಚಾರವುಳ್ಳ ಸದ್ಗುರುಲಿಂಗಜಂಗಮದ ನಿಜನಿಷ*ತ್ವಮಂ ತಿಳಿದು, ದಂತಧಾವನಕಡ್ಡಿ ಮೊದಲು Põ್ಞಪ ಕಟಿಸೂತ್ರ ಕಡೆಯಾದ ಸಮಸ್ತ ಪದಾರ್ಥವ ಗುರು_ಲಿಂಗ_ಜಂಗಮಕ್ಕೆ ಸಮರ್ಪಿಸಿ, ಅವರೊಕ್ಕುದ ಹಾರೈಸಿ, ಕೊಂಡು ಇಂತು ಅಂತರಂಗ ಪರಿಪೂರ್ಣವಾಗಿ ನಿಂದ ಸಮಯದಲ್ಲಿ, ಸ್ವಯ_ಚರ_ಪರಲೀಲೆಯ ಧರಿಸಿ ಜಂಗಮಾಕೃತಿಯಿಂದ ಬಂದ ಗುರುಲಿಂಗಜಂಗಮದ ವೃತ್ತಸ್ಥಾನವಾದ ಮೊಳಪಾದ ಪರಿಯಂತರವು ತೊಳದು ಬಹುಗುಣಿಯಲ್ಲಿ ಮಡಗಿಕೊಂಡು, ಹೊಸಮನೆ, ಹೊಸಧನ, ಧಾನ್ಯ ಭಾಂಡಭಾಜನ, ಹೊಸ ಅರುವೆ_ಆಭರಣ, ಜನನಿಜಠರದಿಂದಾದ ಅಂಗಾಂಗ, ಕಾಯಿಪಲ್ಯ, ಉಚಿತಕ್ರಿಯೆ ಮೊದಲಾಗಿ ಅರಿದಾಚರಿಸುವದು ನೋಡ ! ಆ ಮೇಲೆ ಗುರುಲಿಂಗಜಂಗಮದ ಪ್ರಕ್ಷಾಲನೆ ಮಾಡಿದ ಪಾದವನ್ನು ಮೂರು ವೇಳೆ ಅಡಿಪಾದವ ಸ್ಪರ್ಶನವ ಮಾಡಿ, ನಾಲ್ಕನೆಯ ವೇಳ್ಯಕ್ಕೆ ದಶಾಂಗುಲಿಗಳ ಒಂದು ವೇಳೆ ಸ್ಪರ್ಶನವ ಮಾಡಿದ ಉದಕವನ್ನು ಭಾಂಡಭಾಜನದಲ್ಲಿ ತುಂಬಿ ಸ್ವಪಾಕವ ಮಾಡುವುದು. ಆ ಸಮಯದಲ್ಲಿ ಬಿಂದುಮಾತ್ರ [ವಾದರೂ] ಇಷ್ಟಲಿಂಗ ಬಾಹ್ಯವಾದ ಭವಿಜನ್ಮಾತ್ಮರಿಗೆ ಹಾಕಲಾಗದು. ಇನ್ನು ಜಂಗಮದ ಅಂಗುಷ* ಎರಡು_ಅಂಗುಲಿ ಎಂಟರಲ್ಲಿ ತನ್ನ ತರ್ಜನಿ ಬೆರಳಿಂದ ಮೊದಲಂತೆ ಪಾದೋದಕವ ಮಾಡಿ, ಬಟ್ಟಲಲ್ಲಿ ಮಡಗಿ, ಪೂರ್ವದಲ್ಲಿ ಭಾಂಡದೊಳಗೆ ತುಂಬಿದ ಗುರುಪಾದೋದಕದಿಂದ ವಿಭೂತಿ ಘಟ್ಟಿಯ ಅಭಿಷೇಕವ ಮಾಡಿ, ಈ ಬಟ್ಟಲಲ್ಲಿ ಮಡಗಿದ ಲಿಂಗಪಾದೋದಕದಲ್ಲಿ ಮಿಶ್ರವ ಮಾಡಿ, ಇಪ್ಪತ್ತೊಂದು ಪ್ರಣಮವ ಲಿಖಿಸಿ ಶ್ರೀಗುರುಲಿಂಗಜಂಗಮವು ತಾನು ಮಂತ್ರಸ್ಮರಣೆಯಿಂದ ಸ್ನಾನ_ಧೂಳನ_ಧಾರಣವ ಮಾಡಿ, ಲಿಂಗಾರ್ಚನೆ ಕ್ರಿಯೆಗಳ ಮುಗಿಸಿಕೊಂಡು, ಆ ಮೇಲೆ ತೀರ್ಥವ ಪಡಕೊಂಬುವಂಥ ಲಿಂಗಭಕ್ತನು ಆ ಜಂಗಮಲಿಂಗಮೂರ್ತಿಯ ಸಮ್ಮುಖದಲ್ಲಿ ಗರ್ದುಗೆಯ ರಚಿಸಿಕೊಂಡು, ಅಷ್ಟಾಂಗಯುಕ್ತನಾಗಿ ಶರಣಾರ್ಥಿ ಸ್ವಾಮಿ ! ಜಂಗಮಲಿಂಗಾರ್ಚನೆಗೆ ಅಪ್ಪಣೆಯ ಪಾಲಿಸಬೇಕೆಂದು ಬೆಸಗೊಂಡು, ಆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಕ್ರಿಯಾಜಂಗಮಮೂರ್ತಿಯ ಕರಕಮಲದಲ್ಲಿ ನೆಲಸಿರುವ ಪರಾತ್ಪರ ಜ್ಞಾನಜಂಗಮ ಲಿಂಗಮೂರ್ತಿಗೆ ಅಷ್ಟವಿಧಾರ್ಚನೆ_ಷೋಡಶೋಪಚಾರಂಗಳ ಸಮರ್ಪಿಸಿ, ಆ ಮೇಲೆ, ತನ್ನ ವಾಮಕರದಂಗುಲಿ ಮಧ್ಯದಲ್ಲಿ ಷಡಕ್ಷರಂಗಳ ಲಿಖಿಸಿಕೊಂಡು ಅರ್ಚಿಸಿ, ತನ್ನ ಹೃನ್ಮಂದಿರಾಲಯದಲ್ಲಿ ನೆಲಸಿರುವ ಜ್ಯೋತಿರ್ಮಯ ಇಷ್ಟಮಹಾಲಿಂಗವ ನಿರೀಕ್ಷಿಸಿ ಆ ಪರಶಿವಜಂಗಮಲಿಂಗದೇವನ ಚರಣಾಂಗುಷ*ವ, ತನ್ನ ವಾಮಕರಸ್ಥಲದಲ್ಲಿ ಸುತ್ತು ಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿ ಸ್ವರೂಪವಾದ ಪ್ರಾಣಲಿಂಗವೆಂದು ಭಾವಿಸಿ ಅಷ್ಟವಿಧಾರ್ಚನೆ ಷೋಡಶೋಪಚಾರ ಕ್ರಿಯಗಳ ಮಾಡಿ, ಆಮೇಲೆ ಇಷ್ಟಲಿಂಗಜಪಪ್ರಣಮ ಒಂದು ವೇಳೆ ಪ್ರಾಣಲಿಂಗ ಜಪಪ್ರಣಮ ಒಂದು ವೇಳೆ ಭಾವಲಿಂಗ ಜಪಪ್ರಣಮ ಒಂದು ವೇಳೆ ಪ್ರದಕ್ಷಿಣವ ಮಾಡಿ ಜಂಗಮಸ್ತೋತ್ರದಿಂದ ಶರಣು ಮಾಡಿ ಪೂಜೆಯನಿಳುಹಿ, ಪಾತ್ರೆಯಲ್ಲಿರುವ ಗುರುಪಾದೋದಕದಲ್ಲಿ ಬಿಂದುಯುಕ್ತವಾಗಿ ಮೂಲ ಪ್ರಣಮವ ಲಿಖಿಸಿ ಬಲದಂಗುಷ*ದಲ್ಲಿ ನೀಡುವಾಗ ಷಡಕ್ಷರಿಮಂತ್ರವ ಆರು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಗುರುವೆಂದು ಭಾವಿಸುವುದು. ಎಡದಂಗುಷ*ದ ಮೇಲೆ ನೀಡುವಾಗ ಪಂಚಾಕ್ಷರವ ಐದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಲಿಂಗವೆಂದು ಭಾವಿಸುವುದು. ಎರಡಂಗುಷ*ದ ಮಧ್ಯದಲ್ಲಿ ನೀಡುವಾಗ ಒಂಬತ್ತಕ್ಷರವ ಒಂದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ತ್ರಿಕೂಟಸಂಗಮ ಅನಾದಿಜಂಗಮವೆಂದು ಭಾವಿಸುವುದು. ಈ ಪ್ರಕಾರದಲ್ಲಿ ನೀಡಿದ ಮೇಲೆ ದ್ರವವನಾರಿಸಿ, ಭಸ್ಮಧಾರಣವ ಮಾಡಿ, ಒಂದೆ ಪುಷ್ಪವ ಧರಿಸಿ, ನಿರಂಜನ ಪೂಜೆಯಿಂದ ಪ್ರದಕ್ಷಣವ ಮಾಡಿ, ನಮಸ್ಕರಿಸಿ, ಆ ತೀರ್ಥದ ಬಟ್ಟಲೆತ್ತಿ ಆ ಜಂಗಮಲಿಂಗಕ್ಕೆ ಶರಣಾರ್ಥಿಯೆಂದು ಅಭಿವಂದಿಸಿ. ಅವರು ಸಲಿಸಿದ ಮೇಲೆ ತಾನು ಗರ್ದುಗೆಯ ಬಿಟ್ಟೆದ್ದು, ಪರಾತ್ಪರ ಬ್ರಹ್ಮಸ್ವರೂಪ ಜಂಗಮ ತೀರ್ಥದ ಸ್ತೋತ್ರವ ಮಾಡಿ, ಅಷ್ಟಾಂಗ ಹೊಂದಿ ಶರಣುಹೊಕ್ಕು, ನಿಮ್ಮ ಪ್ರಸಾದೋದಕಕ್ಕೆ ನಿರೂಪವ ಪಾಲಿಸಬೇಕು ಸ್ವಾಮಿ ! ಎಂದು ಬೇಡಿಕೊಂಡು ಬಂದು ಮೊದಲ ಹಾಂಗೆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಜಂಗಮ ಮೂರ್ತಿಗಳು ಸಲಿಸಿದೋಪಾದಿಯಲ್ಲಿ ತಾನು ಸಲಿಸುವುದು. ಆಮೇಲೆ ಷಟ್ಸ್ಥಲಭಕ್ತ ಮಹೇಶ್ವರರು ಅದೇ ರೀತಿಯಲ್ಲಿ ಸಲಿಸುವುದು. ಉಳಿದ ಷಟ್ಸ್ಥಲಮಾರ್ಗವರಿಯದ ಲಿಂಗಧಾರಕಶಿಶುವಾಗಿಲಿ, ಶಕ್ತಿಯಾಗಲಿ, ದೊಡ್ಡವರಾಗಲಿ ಆ ಗರ್ದುಗೆಯ ತೆಗೆದು ಲಿಂಗಕ್ಕೆ ಅರ್ಪಿಸಿಕೊಳ್ಳಬೇಕಲ್ಲದೆ ಬಟ್ಟಲೆತ್ತಲಾಗದು. ಅದೇನು ಕಾರಣವೆಂದಡೆ, ಅವರಿಗೆ ಇಪ್ಪತ್ತೊಂದು ದೀಕ್ಷೆ, ಷಟ್ಸ್ಥಲಮಾರ್ಗ, ಸರ್ವಾಚಾರ ಸಂಪತ್ತಿನಾಚರಣೆ ಮುಂದಿದ್ದರಿಂದ ಅವರು ಬಟ್ಟಲೆತ್ತಲಾಗದು. ಹೀಂಗೆ ಸಮಸ್ತರು ಸಲಿಸಿದ ಮೇಲೆ ಕೊಟ್ಟು_ಕೊಂಡ, ಭಕ್ತ_ಜಂಗಮವು ಇರ್ವರು ಕೂಡಿ ಮುಕ್ತಾಯವ ಮಾಡಿದಲ್ಲಿಗೆ ದಶವಿಧ ಪಾದೋದಕವಾಗುವುದು. ಆ ಮೇಲೆ ಗುರುಪಾದೋದಕದಿಂದ ಪಾಕವ ಮಾಡಿದ ಭಾಂಡಭಾಜನಂಗಳು ತಾಂಬೂಲ ಪದಾರ್ಥ ಮುಂತಾಗಿ ಇರ್ವರು ಕೂಡಿ ಮೌನಮಂತ್ರ ಧ್ಯಾನದಿಂದ ಹಸ್ತಸ್ಪರ್ಶನವ ಮಾಡಿ. ಶುದ್ಧ ಪ್ರಸಾದವೆಂದು ಭಾವಿಸಿ, ಬಹುಸುಯಿದಾನದಿಂದ ಸಮಸ್ತ ಜಂಗಮಭಕ್ತ ಮಹೇಶ್ವರ ಶರಣಗಣಾರಾಧ್ಯರಿಗೆ ಎಡೆಮಾಡಿ, ಅಷ್ಟಾಂಗ ಹೊಂದಿ, ಎಡಬಲ ಗಣತಿಂಥಿಣಿಯ ನೋಡಿ, ನಿರೀಕ್ಷಿಸಿ, ಶರಣಾರ್ಥಿ ! ಸ್ವಾಮಿ ! ಮಹಾಲಿಂಗಾರ್ಪಿತವ ಮಾಡಬೇಕೆಂದು ಅಭಿವಂದಿಸಿ, ಪತಿವ್ರತತ್ವದಿಂದ ಜಂಗಮಕ್ಕೆ ನಿರ್ವಂಚಕನಾಗಿ, ಭಕ್ತ_ಜಂಗಮವೆಂಬ ಉಭಯನಾಮವಳಿದು ಕ್ಷೀರ ಕ್ಷೀರ ಬೆರೆತಂತೆ ನಿರಾಕಾರ_ ನಿಶ್ಯಬ್ಧಲೀಲೆ ಪರಿಯಂತರವು ಶ್ರೀಗುರುಲಿಂಗಜಂಗಮಪಾದೋದಕಪ್ರಸಾದವ ಸಪ್ತವಿಧಭಕ್ತಿಯಿಂದ ಸಾವಧಾನಿಯಾಗಿ ಆಚರಿಸುವಾತನೆ ಜಂಗಮಭಕ್ತನಾದ ಅಚ್ಚಪ್ರಸಾದಿಯೆಂಬೆ ಕಾಣಾ ! ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಅಯ್ಯಾ, ನೆಲಜಲಾಗ್ನಿ ಮರುತಾಕಾಶವಿಲ್ಲದ ಪಂಚವಣ್ಣಿಗೆಯ ಗರ್ದುಗೆಯ ಹಾಸಿ, ಪಶ್ಚಿಮದತ್ತ ಸ್ವಾಚ್ಛಾಲಯದ ಸ್ವಯಾನಂದ ಮೂರುತಿಯ ಎನ್ನರುವಿನಮುಖದಿಂದೆ ಕರೆತಂದು ಮೂರ್ತಿಗೊಳಿಸಿ, ಸತ್ಯೋದಕದಿಂದೆ ಪಾದಾಭೀಷೇಕವ ಮಾಡಿ ತ್ರಿಪುಟಿಯ ದಹಿಸಿ ಭಸಿತವ ಧರಿಸಿ, ಹೃದಯಕಮಲವನೆತ್ತಿ ಧರಿಸಿ, ಶ್ರದ್ಧೆಧೂಪವರ್ಪಿಸಿ, ಸೋಹಂ ಎಂಬ ಚಾಮರ ಢಾಳಿಸಿ, ಸುಜ್ಞಾನಜ್ಯೋತಿಯ ಬೆಳಗನೆತ್ತಿ ಜಯ ಜಯ ಮಂಗಳವೆಂದು ಅರ್ಚಿಸುವೆನಯ್ಯಾ ಅನುದಿನ ಗುರುನಿರಂಜನ ಚನ್ನಬಸವಲಿಂಗದಲ್ಲಿ ಎನ್ನ ಪ್ರಾಣಲಿಂಗಕ್ಕೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ಪರಮಪವಿತ್ರಪರಿಣಾಮೋದಕವನ್ನು ಕ್ರಿಯಾಜ್ಞಾನಯುಕ್ತವಾದ ಜಂಗಮಮೂರ್ತಿಯು ಎರಡುಪದರಿನ ಪಾವುಡದಿಂದ ಶೋಧಿಸಿದುದಕವನ್ನು ಆ ಜಂಗಮದ ಅಡಿಪಾದ ಮೂರುಮೂರುವೇಳೆ, ಪಂಚಪಂಚಾಂಗುಲಗಳೊಂದೊಂದುವೇಳೆ, ಮೂಲಪಂಚಾಕ್ಷರಧ್ಯಾನದಲ್ಲಿ ಮನಘನವಾಗಿ ಸ್ಪರಿಶನಂಗೈದು, ದೀಕ್ಷಾಪಾದೋದಕವನ್ನು ಚರಲಿಂಗಕ್ಕೆ ಮುಖಮಜ್ಜನವ ಮಾಡಬೇಕು ಸ್ವಾಮಿಯೆಂದಲ್ಲಿ, ಹರಹರಾಯೆಂದು ಕೈಕೊಂಡು, ಲಿಂಗಾಭಿಷೇಕ ಮುಖಮಜ್ಜನವ ಮಾಡಿದ ಚರಲಿಂಗದ ಪಾದಕ್ಕೆ ಪಾವಗೊರಡ ಮೆಟ್ಟಿಸಿ, ಹಸ್ತವ ಹಿಡಿದು, ಬಹುಪರಾಕು ಎಚ್ಚರವೆಚ್ಚರ ಮಹಾಲಿಂಗದಲ್ಲಿ ಸ್ವಾಮಿಯೆಂದು ಸ್ತುತಿಸುತ್ತ ಗರ್ದುಗೆಯ ಮೇಲೆ ಮೂರ್ತಮಾಡಿದ ಬಳಿಕ ಉಭಯಪಾದಾಭಿಷೇಕಂಗೈದುದಕವ ಲಿಂಗಾಂಗಕ್ಕೆ ಸಂಪ್ರೋಕ್ಷಿಸಿದ ತದನಂತರದಲ್ಲಿ, ಮುಖಮಜ್ಜನಕ್ಕೆ ಮಾಡಿದಂಥ ಗುರುಪಾದೋದಕ ತಂಬಿಗೆಯನ್ನು ಭಾಂಡಕ್ಕೆ ಹಸ್ತಸ್ಪರಿಶನ ಧಾರಣವಿದ್ದರೆ ಆ ಉದಕವ ಶೋಧಿಸಿದ ಭಾಂಡಂಗಳಿಗೆ ಸಮ್ಮಿಶ್ರವ ಮಾಡುವುದು. ಇಲ್ಲವಾದಡೆ ತಮ್ಮ ಅರ್ಚನ ಅರ್ಪಣಗಳಿಗೆ ಮಡುಗಿಕೊಂಡು, ದಿವರಾತ್ರಿಗಳೆನ್ನದೆ ಚರಲಿಂಗಪಾದೋದಕಪ್ರಾಣಿಗಳೆ ನಿರವಯಪ್ರಭು ಮಹಾಂತನ ಪ್ರತಿಬಿಂಬ ಕಾಣಾ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಅನಾದಿ ಶರಣಲಿಂಗ ಗುರುಭಕ್ತ ಜಂಗಮದ ಏಕಸಮರಸೈಕ್ಯ ಅಭಿನ್ನರ್ಚನೆಗಳಲ್ಲಿ ತೀರ್ಥಪ್ರಸಾದ ಪೂಜೆಯ ಸಂಬಂಧವೆನಿಸಿ, ಪೂರ್ವಪುರಾತನೋಕ್ತಿಯಿಂದ ಚಿದ್ಘನಪಾದತೀರ್ಥವ ಪಡಕೊಂಡ ಶಿವಭಕ್ತ ಮಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣನು ಕಾಯ-ಕರಣ-ಭಾವಗಳ ಸಂಚಲಗಳನಳಿದುಳಿದು ನಿಃಸಂಚಲನಾಗಿ, ಕೇವಲ ಕಿಂಕುರ್ವಾಣ ಪರಿಪೂರ್ಣಸಾವಧಾನ ಭಯಭಕ್ತಿಯಿಂದ ಆ ತೀರ್ಥದ ಬಟ್ಟಲೆತ್ತಿ , ಆ ಜಂಗಮಲಿಂಗಮೂರ್ತಿಗೆ ಶರಣಾರ್ಥಿಸ್ವಾಮಿ, ಮಹಾಲಿಂಗಾರ್ಪಣವ ಮಾಡಬೇಕೆಂದು ಅಭಿವಂದಿಸಿದಲ್ಲಿ, ಆ ಜಂಗಮಲಿಂಗಶರಣನು ಘನಮಹಾಮಂತ್ರಸೂತ್ರವಿಡಿದು, ಪರಿಪೂರ್ಣಾನಂದ ಸಾವಧಾನಭಕ್ತಿ ಮುಖದಲ್ಲಿ ಸಲಿಸಿದಮೇಲೆ, ಪೂರ್ವದಂತೆ ಆ ಪ್ರಸನ್ನಪ್ರಸಾದತೀರ್ಥದ ಬಟ್ಟಲ ಗರ್ದುಗೆಯಲ್ಲಿ ಮೂರ್ತಗೊಳಿಸಿ ಆ ಮೇಲೆ ತಾನು ಗರ್ದುಗೆಯ ಬಿಟ್ಟೆದ್ದು, ಪರಾತ್ಪರ ಬ್ರಹ್ಮಜ್ಯೋತಿರ್ಮಯಸ್ವರೂಪ ಜಂಗಮಲಿಂಗ ಲಿಂಗಜಂಗಮದ ಶೇಷೋದಕ ಪರಿಪೂರ್ಣಾನಂದ ತೀರ್ಥ ಸ್ತೋತ್ರವಂ ಮಾಡಿ, ಸರ್ವಾಂಗಪ್ರಣುತನಾಗಿ ಪೊಡಮಟ್ಟು, ಹರಹರಾ ಶಿವಶಿವಾ ಜಯಜಯಾ ಕರುಣಾಕರ ಭಕ್ತವತ್ಸಲ ಭವರೋಗವೈದ್ಯ ಮತ್ಪ್ರಾಣನಾಥ ಮಹಾಲಿಂಗಜಂಗಮವೆಯೆಂದು, ಅಂತರಂಗದ ಪರಿಪೂರ್ಣರೆ ನಿರವಯಪ್ರಭು ಮಹಾಂತರ ಘನಶರಣ ಲಿಂಗ ತಾನೆಯೆಂಬೆ ಕಾಣಾ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಅಯ್ಯಾ, ಗುರುಲಿಂಗಜಂಗಮ ಕರುಣಕಟಾಕ್ಷದಿಂದ ಚಿದ್ವಿಭೂತಿ ರುದ್ರಾಕ್ಷಿ ಚಿನ್ಮಂತ್ರಗಳ ಗುರುವಚನ ಪ್ರಮಾಣದಿಂದ ನಿರಂತರವು ಆಚರಿಸಿ, ಚಿದ್ಘನ ಇಷ್ಟ ಮಹಾಲಿಂಗವ ಉರಸ್ಥಲದಲ್ಲಿ ಧರಿಸಬೇಕಾದಡೆ, ದಾರದಿಂದ ಹುಟ್ಟಿದ ಸಜ್ಜೆಯ ಕರಕಮಲವಟುವ ನೂಲಕಾಯಿ, ಬಿಲ್ವಕಾಯಿ, ಗಂಧದ ಮನೆ, ನಾರಂಗದ ಕಾಯಿ, ರಜತ, ಹೇಮ, ತಾಮ್ರ, ಹಿತ್ತಾಳೆ, ಮೃತ್ತಿಕೆ ಮೊದಲಾದ ಆವುದು ತನಗೆ ಯೋಗ್ಯವಾಗಿ ಬಂದ ಚಿದ್ಘನಲಿಂಗದೇವಂಗೆ ಪರಿಣಾಮ ಕಟ್ಟುವಂತೆ, ಮೂವತ್ತಾರೆಳೆಯ ದಾರವಾದಡೆಯೂ ಸರಿಯೆ, ನಾಲ್ವತ್ತೆರಡೆಳೆಯ ದಾರವಾದಡೆಯೂ ಸರಿಯೆ, ಐವತ್ತಾರೆಳೆಯಾದಡೆಯೂ ಸರಿಯೆ, ಅರುವತ್ತುಮೂರಾದಡೆಯೂ ಸರಿಯೆ, ನೂರೆಂಟು ಇನ್ನೂರ ಹದಿನಾರು, ಮುನ್ನೂರರುವತ್ತು ಎಳೆ ಮೊದಲಾಗಿ ಲಿಂಗಾಣತಿಯಿಂದ ಒದಗಿ ಬಂದಂತೆ ಶಿವಲಾಂಛನಸಂಯುಕ್ತದಿಂದ ದಾರವ ಕೂಡಿ ಜ್ಞಾನಕ್ರಿಯಾಯುಕ್ತವಾದ ಎರಡೆಳೆಯಾದಡೆಯೂ ಸರಿಯೆ, ಪರಿಪೂರ್ಣ ಅವಿರಳ ಪರಂಜ್ಯೋತಿ ಎಂಬ ಮಹಾಜ್ಞಾನಸೂತ್ರಯುಕ್ತವಾದ ಮೂರೆಳೆಯಾದಡೆಯೂ ಸರಿಯೆ. ಸತ್ತು ಚಿತ್ತು ಆನಂದ ನಿತ್ಯವೆಂಬ ಸ್ವಾನುಭಾವ ಸೂತ್ರಯುಕ್ತವಾದ ನಾಲ್ಕೆಳೆಯಾದಡೆಯೂ ಸರಿಯೆ. ಆ ಲಿಂಗಗೃಹಂಗಳಿಗೆ ಮಂತ್ರಧ್ಯಾನದಿಂದ ಸೂತ್ರವ ರಚಿಸಿ ಲಾಂಛನಯುಕ್ತವಾದ ಪಾವಡ ಯಾವುದಾದಡೆಯೂ ಸರಿಯೆ, ಗುರುಪಾದೋದಕದಲ್ಲಿ ತೊಳೆದು ಮಡಿಕೆಯ ಮಾಡಿ, ಬೆಳ್ಳಿ ಬಂಗಾರ ತಾಮ್ರ ಹಿತ್ತಾಳೆ ಕರತಾಳವೋಲೆ ಮೊದಲಾಗಿ ತಗಡ ಮಾಡಿ. ಪ್ರಮಾಣಯುಕ್ತವಾಗಿ ಪಾವಡವ ಮಡಿಚಿ ಹುದುಗಿ, ಪೂರ್ವ ಗಳಿಗೆಯಲ್ಲಿ ತ್ರಿವಿಧಪ್ರಣವ, ಪಶ್ಚಿಮ ಗಳಿಗೆಯಲ್ಲಿ ತ್ರಿವಿಧಪ್ರಣವ ಮಧ್ಯ ಗಳಿಗೆಯಲ್ಲಿ ತ್ರಿವಿಧಪ್ರಣವ, ಎತ್ತುವ ಹುದುಗದಲ್ಲಿ ಪಂಚಪ್ರಣವ, ಉತ್ತರ ಭಾಗದರಗಿನಲ್ಲಿ ಚಿಚ್ಛಕ್ತಿಪ್ರಣವ, ದಕ್ಷಿಣ ಭಾಗದರಗಿನಲ್ಲಿ ಚಿಚ್ಛಿವಪ್ರಣವ, ಇಂತು ಹದಿನಾರು ಪ್ರಣವಂಗಳ ಷೋಡಶವರ್ಣಸ್ವರೂಪವಾದ ಷೋಡಶಕಗಳೆಂದು ಭಾವಿಸಿ, ಕ್ರಿಯಾಭಸಿತದಿಂದ ಆಯಾಯ ನಸ್ಧಲದಲ್ಲಿಫ ಸ್ಥಾಪಿಸಿ, ಆ ಮಂತ್ರಗೃಹದಲ್ಲಿ ಚಿದ್ಘನಮಹಾಪರತತ್ವಮೂರ್ತಿಯ ಮೂರ್ತವ ಮಾಡಿಸುವುದಯ್ಯಾ, ಆಮೇಲೆ ನಿರಂಜನಜಂಗಮದ ಪಾದಪೂಜೆಯ ಮಾಡಬೇಕಾದಡೆ ರೋಮಶಾಟಿಯಾಗಲಿ ಪಾವಡವಾಗಲಿ, ಆಸನವ ರಚಿಸಿ, ಮಂತ್ರಸ್ಮರಣೆಯಿಂದ ಗುರುಪಾದೋದಕದ ವಿಭೂತಿಯಿಂದ ಸಂಪ್ರೋಕ್ಷಣೆಯ ಮಾಡಿ ಪುಷ್ಪಪತ್ರೆಗಳ ರಚಿಸಿ, ಆ ಮಹಾಪ್ರಭುಜಂಗಮಕ್ಕೆ ಅಘ್ರ್ಯಪಾದ್ಯಾಚಮನವ ಮಾಡಿಸಿ, ಪಾವುಗೆಯ ಮೆಟ್ಟಿಸಿ ಮಂತ್ರಸ್ಮರಣೆಯಿಂದ ಪಾಣಿಗಳನೇಕಭಾಜನವ ಮಾಡಿ, ಬಹುಪರಾಕೆಂದು ಆ ಸಿಂಹಾಸನಕ್ಕೈತಂದು ಮೂರ್ತವ ಮಾಡಿದ ಮೇಲೆ ಪಾದಾಭಿಷೇಕಜಲವ ಶಿವಗೃಹಕ್ಕೆ ತಳಿದು, ಪಾದೋದಕ ಪುಷ್ಪೋದಕ ಗಂಧೋದಕ ಭಸ್ಮೋದಕ ಮಂತ್ರೋದಕದಿಂದ ಲಿಂಗಾಭಿಷೇಕವ ಮಾಡಿಸಿ, ಸಾಕಾರ ನಿರಾಕಾರ ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಿ, ಸಮ್ಮುಖದಲ್ಲಿ ಗರ್ದುಗೆಯ ಹಾಕಿ, ಅಷ್ಪಾಂಗಹೊಂದಿ ಶರಣುಹೊಕ್ಕು, ಗರ್ದುಗೆಯ ಮೇಲೆ ಮೂರ್ತವ ಮಾಡಿ, ಆ ಲಿಂಗಜಂಗಮವ ಮೂಲಮಂತ್ರದಿಂದ ಅನಿಮಿಷದೃಷ್ಟಿಯಿಂದ ನಿರೀಕ್ಷಿಸಿ ತನ್ನ ವಾಮಕರದ ಪಂಚಾಂಗುಲಿಗಳಲ್ಲಿ ಪಂಚಪ್ರಣವವ ಲಿಖಿಸಿ ಮಧ್ಯಸಿಂಹಾಸನದಲ್ಲಿ ಮೂಲಪ್ರಣವ ಸ್ಥಾಪಿಸಿ ಅರ್ಚಿಸಿ, ಮಹಾಪ್ರಭುಜಂಗಮದ ಶ್ರೀಪಾದವ ಮೂರ್ತವ ಮಾಡಿ ಬಹಿರಂಗದ ಕ್ರೀ ಅಂತರಂಗದ ಕ್ರೀಯಿಂದರ್ಚಿಸಿ ಪ್ರಥಮ ತಳಿಗೆಯಲ್ಲಿ ಪೂರ್ವ ಪಶ್ಚಿಮ ಉತ್ತರ ದಕ್ಷಿಣ ತ್ರಿಪುಂಡ್ರರೇಖೆಗಳ ರಚಿಸಿ, ಪಂಚದಿಕ್ಕುಗಳಲ್ಲಿ ಪ್ರಣವವ ಲಿಖಿಸಿ, ದ್ವಿತೀಯ ಬಟ್ಟಲೊಳಗೆ ಮೂಲಪ್ರಣವವ ಲಿಖಿಸಿ ಗುರುಪಾದೋದಕದ ಪಾತ್ರೆಯಲ್ಲಿ ಬಿಂದುಯುಕ್ತವಾಗಿ ಮೂಲಪ್ರಣವವ ಲಿಖಿಸಿ ತ್ರಿವಿಧಲಿಂಗಸ್ವರೂಪವಾದ ಸ್ಥಾನವನರಿದು ಪಂಚಾಕ್ಷರ, ಷಡಕ್ಷರ, ನವಾಕ್ಷರ ಸ್ಮರಣೆಯಿಂದ ಪಡಕೊಂಡು ಮಂತ್ರಸ್ಮರಣೆಯಿಂದ ಲಿಂಗ ಜಂಗಮ ಭಕ್ತ ಶರಣಗಣಂಗಳಿಗೆ ಸಲಿಸಿ, ಮುಕ್ತಾಯವ ಮಾಡಿ ಪ್ರಸಾದಭೊಗವ ತಿಳಿದಾಚರಿಸೆಂದಾತ ನಮ್ಮ ಕೂಡಲಚೆನ್ನಸಂಗಮದೇವ.
--------------
ಚನ್ನಬಸವಣ್ಣ
-->