ಅಥವಾ

ಒಟ್ಟು 14 ಕಡೆಗಳಲ್ಲಿ , 13 ವಚನಕಾರರು , 14 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಮದ ಗುರಿಯ ಜ್ಯೋತಿಯ ಕುಡಿವೆಳಗಿನ ಸರದಲ್ಲಿಎಸಲಿಕ್ಕಾಗಿ, ಗುರಿಯಲ್ಲಿಯೆ ಸರ ಪರಿಹರಿಸಿ, ಆ ಸರದಲ್ಲಿಯೇ ತಮ ಪರಿಹರಿಸಿತ್ತು. ಲಕ್ಷ ್ಯದಲ್ಲಿಯೆ ಚಿತ್ತ, ಚಿತ್ತದಲ್ಲಿಯೆ ಲಕ್ಷ ್ಯ ಅಲಕ್ಷ ್ಯವಾಯಿತ್ತು. ಶಂಭುವಿನಿಂದಿತ್ತ ಸ್ವಯಂಭವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ತುರುಗಾಹಿ ರಾಮಣ್ಣ
ನಾರಿಯಲ್ಲಿ ಕೋಲ ಹೂಡಿ, ಆರೈಕೆಯ ಮಾಡಿ ಎಸೆಯಲಿಕ್ಕೆ ತಾಗಿತು ಮನ ಸಂದ ಗುರಿಯ. ಅದೇತರ ಗುಣದಿಂದ? ಮರ ಬಾಗಿ ನಾರಿಯೈದಿ ಬಾಣ ಶರಸಂಧಾನವಾಗಿ ತಾಗಿದಂತೆ ಚಿತ್ತ ಹಸ್ತದ ಲಿಂಗದ ದೃಷ್ಟ. ಮನ ವಚನ ಕಾಯ ತ್ರಿಕರಣದಲ್ಲಿ ಕರಣಂಗಳಿಂದ ಅರಿತು ಕಾಯದ ನೆಮ್ಮುಗೆಯಲ್ಲಿ ಕಾಣಬೇಕು. ಕಾಬ ತೆರದ ಮರೆಯಲ್ಲಿ ಕಳೆ ತೋರುತ್ತದೆ ಕುಡಿವೆಳಗು ಕಳೆಕಳಿಸುತ್ತದೆ ಸದಾಶಿವ[ಮೂರ್ತಿ]ಲಿಂಗದಲ್ಲಿ.
--------------
ಅರಿವಿನ ಮಾರಿತಂದೆ
ತಮದ ಗುರಿಯ ಜ್ಯೋತಿಯ ಕುಡಿವೆಳಗಿನ ಸರದಲ್ಲಿಎಸಲಿಕ್ಕಾಗಿ, ಗುರಿಯಲ್ಲಿಯೆ ಸರ ಪರಿಹರಿಸಿ, ಆ ಸರದಲ್ಲಿಯೇ ತಮ ಪರಿಹರಿಸಿತ್ತು. ಲಕ್ಷ ್ಯದಲ್ಲಿಯೆ ಚಿತ್ತ, ಚಿತ್ತದಲ್ಲಿಯೆ ಲಕ್ಷ ್ಯ ಅಲಕ್ಷ ್ಯವಾಯಿತ್ತು. ಶಂಭುವಿನಿಂದಿತ್ತ ಸ್ವಯಂಭವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ಲಿಂಗಪೂಜೆಯ ಮಾಡುವಲ್ಲಿ ಮನ ಗುರಿಯ ತಾಗಿದ ಕೋಲಿನಂತಿರಬೇಕು. ಶಿವಲಿಂಗಪೂಜೆಯ ಮಾಡುವಲ್ಲಿ ಶ್ರವಕ್ಕೆ ಸಂಜೀವನ ಹುಟ್ಟಿದಂತಿರಬೇಕು. ಹೀಗಲ್ಲದೆ ಪೂಜೆಯಲ್ಲ. ಒಳಗಣ ಹುಳುಕು ಮೇಲಕ್ಕೆ ನಯವುಂಟೆ, ಆ ತರು ಒಣಗುವವಲ್ಲದೆ? ಇಂತೀ ಬರುಬರ ಅರ್ಚನೆ ಹುರಿಯ ಬೊಂಬೆಯಂತೆ. ಇಂತೀ ಅರಿಗುರಿಗಳ ಪೂಜೆ ಬರುಕಟೆಯಂತೆ ನಾರಾಯಣಪ್ರಿಯ ರಾಮನಾಥಾ.
--------------
ಗುಪ್ತ ಮಂಚಣ್ಣ
ಆರು ಬಣ್ಣದ ಹಕ್ಕಿ, ತೋರಿದ ಗುರಿಯ ನುಂಗಿ ಮೀರಿ ನಿಂದುದು ಗಗನ ಮಂಡಲದಲ್ಲಿ. ಸಾರುತೈದೂದೆ ಹೋಗಿ ಮೀರಿ ಬರಬೇಡಾ ಎಂದು ಬೇರೆ ಮತ್ತೊಂದು ದಿಕ್ಕ ತೋರುತ್ತದೆ. ಮೂರುಕೋಣೆಯೊಳಗೆ ಈರೈದು ತಲೆಯುಂಟು. ನೋಡಿ ಬಂದಾ ಶಿಶು ಬೆಸಗೊಂಬುದು. ಪ್ರಾಣವಿಲ್ಲದ ಸೇನೆ ಪದ್ಮಸಂಖ್ಯೆಯು ಕೋಟೆದಾಳಿವರಿದುದು ಎಂಟುಜಾವದೊಳಗೆ. ಜಾಲಗಾರನ ಕೈಯ ಮಾಣಿಕ್ಯ ಸಿಕ್ಕದೆ ಆಳಿಗೊಂಡಿತ್ತು. ಜಗವ ಬೆಳುಮಾಡಿ, ಜಾಣ ಕವಿಗಳಿಗೆ ಎದೆ ದಲ್ಲಣ. ಬಳ್ಳೇಶ್ವರನ ಕನ್ನಡವು ಹೇಳುವಡೆ ಯುಗಸಂಖ್ಯೆ ಶಿವ ಶಿವಾ
--------------
ಬಳ್ಳೇಶ ಮಲ್ಲಯ್ಯ
ಅರಿದಲ್ಲಿ ಶರಣ ಮರೆದಲ್ಲಿ ಮಾನವನೆಂದು ನುಡಿವ ಅಜ್ಞಾನಿಗಳ ಮಾತ ಕೇಳಲಾಗದು. ಅದೇನು ಕಾರಣವೆಂದೊಡೆ : ಜಗದಗಲದ ಗುರಿಯ ಹೂಡಿ ಮುಗಿಲಗಲದ ಬಾಣವನೆಸೆದಡೆ ತಪ್ಪಿ ಕಡೆಗೆ ಬೀಳುವ ಸ್ಥಾನವುಂಟೆ ? ಒಳಹೊರಗೆ ಸರ್ವಾಂಗಲಿಂಗವಾದ ಶರಣನಲ್ಲಿ ಅರುಹುಮರಹುಗಳು ತೋರಲೆಡೆಯುಂಟೆ ? ಇದು ಕಾರಣ, ನಮ್ಮ ಅಖಂಡೇಶ್ವರನ ಶರಣನಲ್ಲಿ ತೋರುವ ತೋರಿಕೆಯೆಲ್ಲ ಲಿಂಗವು ತಾನೆ ಕಾಣಿರೊ.
--------------
ಷಣ್ಮುಖಸ್ವಾಮಿ
ಜಂಬೂದ್ವೀಪ ನವಖಂಡ ಸುಕ್ಷೇತ್ರವೆಂಬ ಕಾಯಪುರದ ಒಂದು ಪಟ್ಟಣವ ಸಾಧಿಸುವನೆಂಬರಿಗೆ ಸಾಧ್ಯವಿಲ್ಲ ಭೇದಿಸುವೆನೆಂಬರಿಗೆ ಭೇದ್ಯವಲ್ಲ ಮರಹು ಮಹಾಕತ್ತಲೆಗಳೆಂಬ (ಕ)ರಿಗಳು ಕುಹಕವೆಂಬ ಕೊತ್ತಳ, ಮಹಾಪಾಶ ಉನ್ಮತ್ತ ಅಹಂಕಾರವೆಂಬುದೊಂದು ಆಳು ಕುದುರೆ ಇದನಾರು ಸಾಧಿಸಬಲ್ಲರಯ್ಯಾ ಪ್ರಾಣಪಂಚಾಕ್ಷರಿಯನೆ ನಿರ್ಮಿಸಿಕೊಂಡು ಹಿಂದಣಬೇರ ಕಟ್ಟೊರಿಸಿ ಕಿತ್ತು, ಮುಂದಣ ಭವಾಂಬುಧಿಯನೆಲ್ಲ ಬಿಟ್ಟು ಮನವೆಂಬ ಬಿಲ್ಲಿಗೆ ತನುವೆಂಬ ಹೆದೆಯ ಮಾಡಿಕೊಂಡು ಗುರುವೆಂಬ ಗುರಿಯ ನೋಡಿಕೊಂಡು, ಏಕಭಾವದಲ್ಲಿ ಎಸೆವುತ್ತಿರಲು ಭವಹರಿದು, ಕಾಲಕರ್ಮದ ಶಿರವರಿದು ಅಂಗವಿಕಾರವೆಂಬ ಅರಸು ಸತ್ತು, ಪಂಚಭೂತಗಳೆಲ್ಲ ಪ್ರಳಯಕ್ಕೊಳಗಾದವು. ಅಷ್ಟಮದಂಗಳ ನಷ್ಟವಾಯಿತ್ತು ಕೋಟೆ ಕೋಳು ಹೋಯಿತ್ತು, ಪಟ್ಟಣ ಸಾಧ್ಯವಾಯಿತ್ತು ಒಳಕೋಟೆಗೆ ಕಿಚ್ಚನ್ನಿಕ್ಕೆ, ಪೃಥ್ವಿ ವಿಶ್ವವೆಲ್ಲ ಬೆಂದು ಬೆಳಕಾಯಿತ್ತು_ ಇಂತಪ್ಪ ಗುರು-ಲಿಂಗ-ಜಂಗಮಕ್ಕೆ ಸಮವಾಗಿ ಸಿಕ್ಕಿತ್ತು ಸಂಸಾರಬಯಲು ಇಂತಪ್ಪ ಆ ಪ್ರಸಾದವನಾರು ಬಲ್ಲರೆಂದರೆ ಪ್ರಭುವಿನ ಬಳಿಯ ಬಸವಣ್ಣಂಗಲ್ಲದೆ ಅಳವಡದು ನಿಮ್ಮಾಣೆ ನಿಮ್ಮ ಪ್ರಮಥರಾಣೆ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಉದಕದೊಳಗಣ ವಿಕಾರ ಪವನನಿಂದಲ್ಲದೆ, ಉದಕ ಸಹಜಬೀಜವೆಂದರಿಯಬಹುದೆ ? ದೇಹ ಪ್ರಪಂಚಂಗಳು ವಾಯುವಿಂದಲ್ಲದೆ, ದೇಹದಲ್ಲಿ ಬೇರೊಂದು ಗುಣವನರಸುವರೆ ? ಮಂಜಿನ ಗುರಿಯ ಬಿಸಿಲ ಅಂಬಿನಲ್ಲಿ ಎಚ್ಚಡೆ, ಕರ ಹೊಸತಾಯಿತ್ತಲ್ಲಾ ! ಸಹಜದ ನಿಲವು ಜೀವ ಪರಮಾತ್ಮನೆಂದು ಎರಡನು ನುಡಿಯಲಿಲ್ಲ. ಬೇರೆ ನೆನೆವ ಮನ ತಾನೆಯಾಗಿ ತೆರಹಿಲ್ಲದ ಘನ. ಗಗನದ ಸೂರ್ಯ ಜಲದಲ್ಲಿ ತೋರುವಂತೆ, ಹಲವು ರವಿಯೆಂದು ಮತ್ತೆಣಿಸಲುಂಟೆ ? ಒಳಹೊರಗು ಎಂದೆನ್ನದೆ ಮುಟ್ಟಿಯೂ ಮುಟ್ಟದಿಪ್ಪ, ಬಯಲೊಳಡಗಿದ ನಿರಾಳವನು ಕೇಳುವ ಕೀರುತಿಯಲ್ಲ ನೋಡುವ ಮೂರುತಿಯಲ್ಲ ಪರಿಪೂರ್ಣ ಪರಂಜ್ಯೋತಿ ನಿರ್ಗುಣ ಮಹಿಮ. ಭಾವವಿಲ್ಲದ ಶಬ್ದವನು ಕೇಳಬಲ್ಲವನೊಬ್ಬನೆ, ಕೂಡಲಚೆನ್ನಸಂಗಮದೇವರಲ್ಲಿ ಪ್ರಭುವೆ ನೀನೆ ಬಲ್ಲೆ.
--------------
ಚನ್ನಬಸವಣ್ಣ
ಎಚ್ಚ ಗುರಿಯ ಮನ ನಿಶ್ಚೈಸಿದಂತೆ, ಇಷ್ಟ ಮಚ್ಚಿದ ಲಲನೆಯ ಬೆಚ್ಚಂತಿಪ್ಪ ಚಿತ್ತದಂತೆ, ಕಡೆಯಾಣೆಯ ಒಡಗೂಡಿ ಲೇಪಿಸಿದಂತೆ, ಇಷ್ಟದ ಮರೆಯಲ್ಲಿ ತೋರುವ ನಿಶ್ಚಿಂತನಂಗದ ಕೂಟ. ಭಕ್ತಿಯ ಮೂಲ, ಸತ್ಯದ ಸುಧೆ, ವಿರಕ್ತಿಯ ಬೆಳೆ. ಇಷ್ಟನರಿತಡೆ ಉಭಯದಿರವು ತನು ಮನ ವಸ್ತು ಲೇಪ. ಇದರ ಅಸುವ ಹೇಳಾ, ಅಲೇಖನಾದ ಶೂನ್ಯ ಕಲ್ಲಿನ ಮರೆಯವನೆ.
--------------
ವಚನಭಂಡಾರಿ ಶಾಂತರಸ
ಕರ್ಮಕಾಂಡಿ[ಗಳಿ]ಗೆ ಕತ್ತಲೆಕರ್ಮಿಗಳೆಂದು ನುಡಿವರು ನೋಡಾ. ಅವರು ಮಾಯಾಮೋಹಕ್ಕೆ ಸಿಲ್ಕಿ ಕೆಟ್ಟರು ಕಾಣಾ ಎಂದು ನುಡಿವರು ಕೇಳಾ. ಸಗುಣಸ್ಥಲದ ಮನೋಜ್ಞಾನಿಗಳವರು ಕೆಟ್ಟಂತೆ ನಾವು ಕೆಡಬಾರದು. ತಮ್ಮ ಮನಕ್ಕೆ ಬುದ್ಧಿಯಂ ಕೊಟ್ಟು ಆಸೆಯಂ ಬಿಟ್ಟು ತನುವೆಂಬ ಬಿಲ್ಲಿಗೆ ಮನವೆಂಬ [ಹೆದೆ]ಯನೇರಿಸಿ, ಉರಿನರಿಯಂಬ ಅಳವಡಿಸಿ ವಾರಿ ಮೋರೆಯನೆ ತಿದ್ದಿಕೊಂಡು ಗುರುಕೊಟ್ಟ ಬಿಲ್ಲ ದೃಢವಾಗಿ ಹಿಡಿದು ಶ್ರೀಗಿರಿಯೆಂಬ ಗುರಿಯ ನೋಡಿ ಎಸೆವಾಗ, ಭವ ಹರಿಯಿತ್ತು, ಕಾಲಕರ್ಮವೆಂಬ ಶಿರ ಹರಿಯಿತ್ತು. ಅರಸು ಪ್ರಧಾನಿ ಪ್ರಜೆ ಪರಿವಾರ ಓಡಿ ಹೋಯಿತ್ತು. ಪೃಥ್ವಿ ಅಪ್ಪು ತೇಜ ವಾಯು ಆಕಾಶ ಅಂದೇ ಬೆಳಗಾಯಿತ್ತು. ಇಂತಪ್ಪ ಪ್ರಸಾದ ಆ ಗುರು ಲಿಂಗ ಜಂಗಮ ತಮ್ಮೊಳಗಾಯಿತ್ತು. ಇಂತಪ್ಪ ಪ್ರಸಾದವು ಯಾರಿಗೂ ಅಳವಡದು. ಪ್ರಭುವಿನೊಳ್ ಐಕ್ಯವಾದ ಬಸವಸಂಪತ್ತಿಗಲ್ಲದೆ ಮಿಕ್ಕ ಪ್ರಪಂಚಿಗಳಿಗೆ ಅಳವಡದೆಂದು ಹೇಳುವ ಸಗುಣದ ಭ್ರಮಿತರು ಅವರು ಕೆಟ್ಟ ಕೇಡಿಂಗೆ ಕಡೆಯಿಲ್ಲ ಮೊದಲಿಲ್ಲ ನೋಡಾ. ಮುಂದೆ ಇಷ್ಟವ ಕಂಡು ಮುಳುಗಿದವರಿಗೆ ಮುಕ್ತಿ ಎಂದೆಂದಿಗೂ ಇಲ್ಲ ಕಾಣಾ. ಇನ್ನು ಕೈವಲ್ಯಾನ್ವಯ ಪ್ರವರ್ತಕ ನಿಸ್ಸೀಮಾಂಬುಧಿ ನಿರ್ಲೇಪ ತಾನಾದಂಥ ದೇವ ವರನಾಗನ ಗುರುವೀರನೆ ಪರಂಜ್ಯೋತಿ ಮಹಾವಿರಕ್ತಿ.
--------------
ಪರಂಜ್ಯೋತಿ
ಪರಲೋಕದಲ್ಲಿ ಲಾಭವನರಸುವರು ಇಹಲೋಕದಲ್ಲಿ ಲೋಭವ ಮಾಡದೆ, ಮಾಡಿರೆ ದಾಸೋಹವ. ಹಲವು ಕಾಲದಿಂದ ನೆಯ್ದ ವಸ್ತ್ರವ ಲೋಭವ ಮಾಡದೆ ಇತ್ತಡೆ ಶಿವ ಮೆಚ್ಚಿ ತವನಿಧಿಯ ಕೊಡನೆ ದಾಸಮಯ್ಯಂಗೆ? ದೇವಾಂಗವಸ್ತ್ರವನು ಶಿವಗಣಂಗಳಿಗೆ ತೃಪ್ತಿಬಡಿಸಿದ ಅಮರನೀತಿ ಶಿವನ ಕೌಪೀನಕ್ಕೆ ತನ್ನ ಗುರಿಯ ಮಾಡಿದಡೆ ಕಾಯವೆರಸಿ ಕೈಲಾಸಕ್ಕೆ ಹೋಗನೆ? ಇದು ಕಾರಣ, ನಮ್ಮ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನ ಶರಣರಿಗೆ ಉಣಲಿಕ್ಕಿ ಉಡಕೊಟ್ಟು ಉಪಚರಿಸಿದಡೆ ಶಿವನೊಲಿದು ಇತ್ತ ಬಾ ಎಂದೆತ್ತಿಕೊಳ್ಳನೆ?
--------------
ಉರಿಲಿಂಗಪೆದ್ದಿ
ಗರಿಯ ಕಟ್ಟಿದ ಕೋಲು ಗುರಿಯ ತಾಗಬಲ್ಲುದೆ ? ಗುರುಲಿಂಗ ಜಂಗಮದ ಪಾದತೀರ್ಥ ಪ್ರಸಾದವನರಿಯದೆ, ಪರಮನ ಕಂಡೆನೆಂಬ ದುರಾಚಾರಿಗಳ ಮುಖವ ನೋಡಲಾಗದೆಂದಾತ, ನಮ್ಮ ಕಲಿದೇವರದೇವಯ್ಯ.
--------------
ಮಡಿವಾಳ ಮಾಚಿದೇವ
ಶ್ರುತ್ಯಾಗಮ ಶಾಸ್ತ್ರಾದಿಗಳು ದೈವವಲ್ಲದಿರಲಾ, ಸ್ವರ್ಗಮೋಕ್ಷಂಗಳಿಗೆ ಶ್ರುತ್ಯಾಗಮ ಶಾಸ್ತ್ರಪ್ರಮಾಣ ಸಾಧನವೆಂಬ ಕರ್ಮವಾದಿಗಳಿಗೆ ನಿರುತ್ತರೋತ್ತರವ ಕೇಳಿರೆ : || ಶ್ರುತಿ || `ಜ್ಯೋತಿಷೊ*ೀಮೇನ ಸ್ವರ್ಗಕಾಮೋ ಯಜಜೇತ' ಎಂಬ ವೇದವಾಕ್ಯದ ಬಲುಮೆವಿಡಿದು ನುಡಿವರೆ, ಯಜ್ಞದಿಂದ ಸ್ವರ್ಗಾಪೇಕ್ಷಿತನು ಅಗ್ನಿಯನೆ ಪೂಜಿಸುವಯೆಂದು, ಕ್ರಿಯಾಕರ್ಮವೆ ದೈವವೆಂದು, ತಾನು ಮಾಡಿದ ಕರ್ಮ ಫಲವು ತನಗೆ ಅನುಭವಿಸಲುಳ್ಳದೆಂದು, ಕರ್ಮಕ್ಕೆ ಕರ್ತೃತ್ವವನ್ನು ಕೆಲಬರು ಕರ್ಮವಾದಿಗಳು ಹೇಳುತ್ತಿಹರು. ಅಹಂಗಲ್ಲ, ಕರ್ಮವೆ ಶರೀರದಿಂದನುಭವಿಸಲುಳ್ಳರಾಗಿ ವರ್ತಿಸುತ್ತಿಹುದೊ, ಅಲ್ಲ, ಮತ್ತಾ ಶರೀರಕ್ಕೆ ಕರ್ಮವೆ ಅನಾದಿಯಹುದೊ, ಈ ಕರ್ಮಕ್ಕೆ ಕಾಯಂಗಳೆರಡು ಜೀವಾತ್ಮನನು ಒಂದೆಬಾರಿಯಯಿದಿದೊ. ಈಹಿಂಗೆಂದು ಕೆಲಬರು ತರ್ಕಿಸುವರು. ಅದು ಹಂಗಾಗದಿಹುದಲ್ಲದೆ, ಆ ಕರ್ಮವು ಕ್ಷಣಿಕವಾಗಿಯೂ ಅಚೇತನವಾಗಿಯೂ ನಿರ್ಗುಣವಾಗಿಯೂ ಕಾಣಲುಳ್ಳದಾಗಿ, ಅದು ಮಾಡುವಾತನನುಯೆ ಹಾಂಗೆಯಿಹುದು. ಆಕರ್ತನು ಆವನೊಬ್ಬನು ಅಪರಾಧವ ಮಾಡಿದವ, ಮಾಡಿದ ಪುರುಷನು ಆ ಅಪರಾಧಕ್ಕೆ ತಕ್ಕುದಾದ ಶಿಕ್ಷೆಯನು ತನಗೆ ತಾನೆ ಮಾಡಿದನೊಯೇನು ಅಲ್ಲ. ಮತ್ತೆ ಆ ಅಪರಾಧವೆ ಸಂಕಲಿಯಾಗಿ, ಆ ಅಪರಾಧಿಯ ಕಾಲ ಬಂದಿಸುಹವನು. ಮಾಡೊದೊಯೇನು ಅಲ್ಲ. ಮತ್ತೆ ಆ ಅಪರಾಧಿಗೆ ಕರ್ಮಿಗೆ ಆ ಕರ್ಮವನು ಸಂಘಟಿಸಲು, ಕರ್ಮಾಧೀನನಲ್ಲದಾತನಾಗಿ, ಸ್ವತಂತ್ರನಾಗಿ, ಸರ್ವೇಶ್ವರ ಎಲ್ಲದಕ್ಕೂ ಒಡೆಯನಾಗಿ, ಸರ್ವಗತನಾಗಿ ಸರ್ವಗತನಾದ ಶಿವನು ಉಂಟಾಗಿ ಕರ್ಮಕ್ಕೆವೂ ಕರ್ಮಿಗೆವೂ ಕರ್ತೃತ್ವವಾಗದು. ಈಹಿಂಗಾಂಗದಿಹುದೆ ಪೂರ್ವಮೀಮಾಂಸವನು ಹೇಳುವ ಒಬ್ಬುಳಿಯ ಕರ್ಮಂಗಳು ಬೇರೆ ಬೇರೆ ಆರು ಕೆರಂಗಳಾಗುತಿಹವು. ಅವಾವೆನಲು, ಅಮಾವಾಸ್ಯೆ ಹುಣ್ಣಿಮೆಗಳಲಿ ಪಿತೃಕಾರ್ಯ ಮೊದಲಾದ ಕರ್ಮಂಗಳ ಮಾಡಬೇಕಾದುದರಿಂದ ಒಂದಾನೊಂದು ಸಂಸ್ಕಾರವನ್ನು ಸಂಘಟಿಸುತ್ತಿಹವು. ಆ ಸಂಸ್ಕಾರರೂಪಂಗಳಾದ ಆರು ಅಪೂರ್ವಂಗಳಾಗುತ್ತಿಹವು. ಅವು ಬೇರೊಂದು ಪ್ರಮಾಣದಿಂದ ಪೂರ್ವಮಾಗಿ ಉತ್ಕøಷ್ಟವಾದ ಅಪೂರ್ವವನ್ನು ಹುಟ್ಟಿಸುತ್ತಿಹವು. ಆ ಉತ್ಕøಷ್ಟವಾದ ಪೂರ್ವದಿಂದ ಮಾತಲುಳ್ಳ ಫಲದ ಕಡೆವು. ಅದೇ ದೈವವೆಂದು ಕಾಣಬಾರದೆಂದು, ಕರ್ಮವೆಂದು ನಾಮ ಮೂರಾರದವರಿಂದ ದೇಹಾಂತರ ಲೋಕಾಂತರ ದೇಶಾಂತರ ಕಾಲಾಂತರಗಳಲ್ಲಿ ಅದು ಆತಂಗೆ ಅನುಭವಿಸಬೇಕಾದ ಫಲಂಗಳನು ಕೊಡುತ್ತಿಹುದೆಂಬ ವಚನ ವ್ಯರ್ಥವು. ಅದು ಹೇಗೆಂದಡೆ, ಜಡಸ್ವರೂಪವಾದ ಕರ್ಮವು ದೇಹಾಂತರ ಮೊದಲಾದವರಲ್ಲಿ ಆ ಫಲವನು ಕೊಡಲು ಸಮರ್ಥವಲ್ಲದಿಹುದೆ. ಈಹಿಂಗಾಗಿ ಒಡೆಯನನು ತೊಲಗಿಸಿ, ಕರ್ಮಫಲವನು ಕೊಡವದಹುದೆ. ಅಹಂಗಾದಡೆ, ಜೈನ ಬೌದ್ಧ ಭಾಷಾದಿ (?) ಕರ್ಮವಾದಿಗಳ ಜಪತಪದಾನಧರ್ಮಫಲಂಗಳು ವ್ಯರ್ಥಂಗಳಾಗುತಿರಲು, ಅವು ಪುಷ್ಟಿವರ್ಧನಭೂತವಾದ ಭೋಜನಕ್ರಿಯೆಗಳಿಂದಯೆಹಾಹಂಗೆ ಮರಣವು ಆಯಿತ್ತು. ಅಹಂಗೆ ಒಂದೆ ಕರ್ಮವು ಫಲವು ಕೊಡಲು ಸಮರ್ಥವಲ್ಲ. ಅಹಂಗಾಗದಿಹುದೆ ಭೋಜನವ ಮಾಡಿದ ಮಾತ್ರವೆ ಪುಷ್ಟಿಯಾಗುತ್ತಿಹುದು ಮರಣವಿಲ್ಲದಿಹುದು. ಹಿಂಗಲ್ಲವೊ ಎಂದಡೆ, ಕೆಟ್ಟ ಕರ್ಮವುಯೆಯ್ದಿತ್ತು. ಉಂಡದರೊಳಗೆ ಸಿಲ್ಕಿದ ಅನ್ನವು ವಿಷವಹುದಲಾ. ಪುಷ್ಟಿಯ ತೊಲಗಿಸಿ ಮರಣವನು ಅಹಂಗೆ ಕೊಡುತ್ತಿರದು. ಇದು ಕಾರಣ, ಸರ್ವಗತನಾದ ಶಿವನು ಅರಿಕರ್ಮಕ್ಕೆ ತಕ್ಕ ಫಲವ ಕೊಡುವಾತನು. ಹಿಂಗಾಗಿರಲಿ, ಕರ್ಮಕ್ಕೆ ತಾನೆ ಕರ್ತೃತ್ವವಾಗುಹವು, ಆಗುತ್ತಿರದು. ಮತ್ತೆಯೂ ದೃಷ್ಟಾಂತರ ಸರಳು ಬಿಲ್ಲಕಾರನಿಲ್ಲದೆ ತಾನು ಗುರಿಯ ತಾಗೂದೆಯೇನು ? ಅಹಂಗೆ, ಕರ್ಮವು ಶಿವಪ್ರೇರಣೆಯಿಲ್ಲದೆ ಅಕರ್ಮಿಗೆ ಮೇಲುಕೀಳಾದ ಕರ್ಮಫಲವನು ತಾನೆ ಕೊಡಲು ಸಾಮಥ್ರ್ಯವಿಲ್ಲ, ತಪ್ಪದು. ವಾಯುವ್ಯದಲ್ಲಿ : ಅಜ್ಞೋ ಜಂತುರನೀಶೋಯಮಾತ್ಮನಃ ಸುಖದುಃಖಯೋಃ | ಈಶ್ವರಃ ಪ್ರೇರಿತೋ ಗಚ್ಛೇತ್ಸ್ವರ್ಗಂ ವಾ ಶ್ವಭ್ರಮೇವ ವಾ || ಅದು ಕಾರಣ, ಅರಿಯದವನಾಗಲಿ ಅಯಂ ಜಂತು-ಈ ಪ್ರಾಣಿ, ಆತ್ಮನಃ-ತನ್ನ, ಸುಖದುಃಖಯೋಃ-ಸುಖದುಃಖಂಗಳಿಗೆ, ಅನಿಶಃ-ಒಡೆಯನಲ್ಲ. ಈಶ್ವರ ಪ್ರೇರಿತ ಶಿವನು ಪ್ರೇರಿಸಲುಳ್ಳವನಾಗಿ, ಸ್ವರ್ಗವನಾದಡೂ ನರಕವನಾದಡೂ ಎಯ್ದುವನು. ನಾಭುಕ್ತ ಕ್ರಿಯತೇ ಕರ್ಮ ಕಲ್ಪಕೋಟಿಶತೈರಪಿ | ಅವಶ್ಯಮನುಭೋಕ್ತವ್ಯಂ ಕೃತಂ ಕರ್ಮ ಶುಭಾಶುಭಂ || ಇವು ಮೊದಲಾದ ವಚನ ಪ್ರಮಾಣದಿಂದ ಕರ್ಮವು ಕಲ್ಪಕೋಟಿ ಶತಂಗಳಿಂದಡಾ ಅನುಭವಿ.....ತಿರದು. ಮಾಡಲುಳ್ಳದಾಗಿ ಮೇಲು ಕೀಳಾದವು. ಏನ ಮಾಡಿಯೂ ಅನುಭವಿಸಬೇಕಾದುದು, ಈಹಿಂಗೆಂಬ ವಚನವು ವ್ಯರ್ಥ ಪೋಗುತ್ತಿಹುದು. ಅದು ಹೇಂಗೆಯಾಯೆಂದಡೆ :ವಾಯವ್ಯದಲ್ಲಿ- ಅಹೋವಿಪರ್ಯಾಸಶ್ಚೇ ಮೇದೋ ಯಾವದ್ವರಂ ಯಜಮಾನ ಸ್ವಯಂ ದಕ್ಷಃ | ಬ್ರಹ್ಮಪುತ್ರ ಪ್ರಜಾಪತಿಃ ಧರ್ಮಾದಯಃ ಸದಸ್ಯಾಶ್ಚ ರಕ್ಷಿತಾ ಗರುಡಧ್ವಜಃ ಭಾನಾಶ್ಯಪ್ರತಿಗ್ರುಣ್ವಂಕ್ತಿ ಸಾಕ್ಷಾದಿಂದ್ರಾದಯಸ್ವರಾಃ ತಥಾಪಿ ಯಜಮಾಸ್ಯದಕ್ಷಸ್ಯಾ ದಾಹಂರ್ತಿಜಃ ಸದ್ಯಯೇವ ಶಿರಶ್ಛೇದ ಸಾದುಸಂಪದ್ಯತೇ ಫಲಂ ಕೃತ್ವಾತು ಸಮಹತ್ಪುರಣ್ಯಾಮಿಷ್ಟ ಯಶಶತೈರಪಿ ನ ತತ್ಫಲಮವಾಪ್ನೋತಿ ಭಕ್ತಿಹೀನೋ ಯದೀಶ್ವರೇ | ಈ ಅರ್ಥದಲ್ಲಿ ಸತ್ಪುರುಷರ ವೇದದಿಂದರಿಯಲು, ತಕ್ಕುದಾದ ಆಚಾರವನು ಬಿಟ್ಟು ಒಡನೆ ಹುಟ್ಟಿದುದಾದ ತನ್ನವರೆಂಬ ಸ್ನೇಹದಲ್ಲಿ ಹುಟ್ಟಿದುದಾ[ದ] ಚರಣವನ್ನು ಬಿಟ್ಟು, ಅಪಾಯರಹಿತವಾಗಿ ಪ್ರಮಥಪದವಿಯನು ಎಯ್ದಿದನು. ಈಹಿಂಗಾಗಿಯೇ, ಬರಿಯ ಕರ್ಮಕ್ಕೆ ಕರ್ತೃತ್ವವುಂಟಾಗುತಿಹುದೆ ? ಚಂಡೇಶ್ವರನಿಂದ ತನ್ನ ತಂದೆಯಾದ ಬ್ರಾಹ್ಮಣನ ಕಾಲುಗಳ ತರಿದಲ್ಲಿ, ಆ ದೋಷಫಲವುಯಹಂಗೆ ಇಲ್ಲವಾಯಿತ್ತು. ಮಾಮನಾದೃತ್ಯ ಪುಣ್ಯಂ ವಸ್ಯಾಂತ್ಪ್ರತಿಪಾದಿನಃ | ಮನ್ನಿ ಮಿತ್ತಕೃತಂ ಪಾಪಂ ಪುಣ್ಯಂ ತದಪಿ ಜಾಯತೇ || ಇದು ಶಿವನ ನುಡಿ, ಮಾರಿಯೆನ್ನನು ಕೈಕೊಳ್ಳದ ಪುಣ್ಯವಾದಡೆಯು, ಮಾಡುವವಂಗೆ ಪಾಪವು ಅಹುದು. ನಾನು ನಿಮಿತ್ತ ಮಾಡಿದ ಪಾಪವಾಯಿತ್ತಾದಡೆಯು ಸುಕೃತವಾಗುತ್ತಿಹುದು. `ಉಪಕ್ರಮ್ಯ ಕರ್ಮಾದಿ ಪತಿತ್ವ ವಿರುಪಾಕ್ರೋಸ್ಥಿತಿ ಸರ್ವಕರ್ಮಾದಿ ಪತಿಃ' ಮತ್ತೆ ಉಪಕ್ರಮಿಸಿ ಕರ್ಮಂಗಳಿಗೊಡೆಯನು ಪರಮೇಶ್ವರನು ಉಂಟೆಂಬ ವೇದವು ಮೊದಲಾದ ವಾಕ್ಯಪ್ರಮಾಣದಿಂದ, ನಾನಾ ಪುರಾಣ ವಚನ ಪ್ರಮಾಣದಿಂದ ಸಮಸ್ತ ಕರ್ಮಂಗಳಿಗೊಡೆಯನು ಶಿವನು. ಆ ಶಿವನ ತೊಲಗಿಸಿ, ಬರಿಯ ಕರ್ಮಕ್ಕೆ ಕರ್ತನಾಗುಹವು ಇಲ್ಲದಿರುತ್ತಿಹುದು. ಇದನರಿದು, ಎಲೆ ಕರ್ಮವಾದಿಗಳಿರಾ, ಸಕಲಕರ್ಮಕ್ಕೆ ಶಿವನೆ ಕರ್ತುವೆಂದರಿದಿರಾದಡೆ, ಬಸವಪ್ರಿಯ ಕೂಡಲಚೆನ್ನಸಂಗ ನಿಮಗೆ ಸುಕರ್ಮ ಫಲವನು ಕೊಡುವ ಕಂಡಿರೆ.
--------------
ಸಂಗಮೇಶ್ವರದ ಅಪ್ಪಣ್ಣ
ತನು ಮನ ಧನವ ಹಿಂದಿಕ್ಕಿಕೊಂಡು ಮಾತಿನ ಬಣಬೆಯ ಮುಂದಿಟ್ಟುಕೊಂಡು ಒಳಲೊಟೆಯ ನುಡಿವವರು ನೀವೆಲ್ಲರೂ ಕೇಳಿರೆ. ತಲಹಿಲ್ಲದ ಕೋಲು ಹೊಳ್ಳು ಹಾರುಹುದಲ್ಲದೆ ಗುರಿಯ ತಾಗಬಲ್ಲುದೆ ಮಾಯಾಪಾಶ ಹಿಂಗಿ, ಮನದ ಗಂಟು ಬಿಡದನ್ನಕ್ಕ ಕೂಡಲಸಂಗಮದೇವನೆಂತೊಲಿವನಯ್ಯಾ 202
--------------
ಬಸವಣ್ಣ
-->