ಅಥವಾ

ಒಟ್ಟು 15 ಕಡೆಗಳಲ್ಲಿ , 9 ವಚನಕಾರರು , 15 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದಪೂಜೆಯ ಮಾಡಿ ಪಾದತೀರ್ಥವ ಪಡೆದುಕೊಂಬ ಕ್ರಮವು ಎಂತೆಂದಡೆ : 'ದೇಶಿಕಸ್ಯ ಪದಾಂಗುಷ್ಠೇ ಲಿಖಿತಾ ಪ್ರಣವಂ ತತಃ | ಪಾದಪೂಜಾವಿಧಿಂ ಕೃತ್ವಾ ವಿಶೇಷಂ ಶೃಣು ಪಾರ್ವತಿ ||' ಎಂದುದಾಗಿ, ಭಯಭಕ್ತಿ ಕಿಂಕುರ್ವಾಣದಿಂದೆ ಜಂಗಮಕ್ಕೆ ಪಾದಾರ್ಚನೆಯಂ ಮಾಡಿ ಗದ್ದುಗೆಯನಿಕ್ಕಿ ಮೂರ್ತವ ಮಾಡಿಸಿ ತನ್ನ ಕರಕಮಲವಂ ಮುಗಿದು ಅಯ್ಯಾ, ಹಸಾದ ಮಹಾಪ್ರಸಾದ ಪೂರ್ವಜನ್ಮ ನಿವಾರಣಂ ದೀಕ್ಷಾಗುರು ಶಿಕ್ಷಾಗುರು ಮೋಕ್ಷಗುರು ಗುರುವಿನಗುರು ಪರಮಗುರು ಪರಮಾರಾಧ್ಯ ಶ್ರೀಪಾದಗಳಿಗೆ ಶರಣು ಶರಣಾರ್ಥಿಯೆಂದು 'ಪ್ರಣಮ್ಯ ದಂಡವದ್ಭೂಮೌ ಇಷ್ಟಮಂತ್ರಂ [ಸದಾಜಪೇತ್] ಶ್ರೀ ಗುರೋಃ ಪಾದಪದ್ಮಂ ಚ ಗಂಧಪುಷ್ಪಾsಕ್ಷತಾದಿಭಿಃ ||' ಎಂದುದಾಗಿ, ದೀರ್ಘದಂಡ ನಮಸ್ಕಾರವಂ ಮಾಡಿ ಪಾದಪೂಜೆಗೆ ಅಪ್ಪಣೆಯಂ ತಕ್ಕೊಂಡು ಮೂರ್ತವಂ ಮಾಡಿ ಲಿಂಗವ ನಿರೀಕ್ಷಿಸಿ ತನ್ನ ಅಂಗೈಯಲ್ಲಿ ಓಂಕಾರ ಪ್ರಣವಮಂ ವಿಭೂತಿಯಲ್ಲಿ ಬರೆದು ಆ ಜಂಗಮದ ಎರಡು ಪಾದಗಳ ತನ್ನ ಕರಕಮಲದಲ್ಲಿ ಲಿಂಗೋಪಾದಿಯಲ್ಲಿ ಪಿಡಿದುಕೊಂಡು ಎರಡು ಅಂಗುಷ್ಠಗಳಲ್ಲಿ ಪ್ರಣವಮಂ ಬರೆದು, ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಿ ನಮಸ್ಕರಿಸಿ, ಆ ಪೂಜೆಯಂ ಇಳುಹಿ ಬಟ್ಟಲೊಳಗೆ ಪ್ರಣವಮಂ ಬರೆದು ಬ್ರಹ್ಮರಂಧ್ರದಲ್ಲಿರ್ದ ಸತ್ಯೋದಕವೆಂದು ಭಾವಿಸಿ, ಆ ಉದಕದ ಬಲದಂಗುಷ್ಠದ ಮೇಲೆ ನೀಡುವಾಗ ಆಱುವೇಳೆ ಷಡಕ್ಷರವ ನುಡಿದು ಇಷ್ಟಲಿಂಗವೆಂದು ಭಾವಿಸಿ, ಎಡದಂಗುಷ್ಠದ ಮೇಲೆ ನೀಡುವಾಗ ಐದುವೇಳೆ ಪಂಚಾಕ್ಷರವ ನುಡಿದು ಪ್ರಾಣಲಿಂಗವೆಂದು ಭಾವಿಸಿ, ಎರಡಂಗುಷ್ಠದ ಮಧ್ಯದಲ್ಲಿ ಉದಕವ ನೀಡುವಾಗ ಒಂದು ವೇಳೆ 'ಓಂ ಬಸವಲಿಂಗಾಯನಮಃ' ಎಂದು ಸ್ಮರಿಸಿ, ಭಾವಲಿಂಗವೆಂದು ಭಾವಿಸಿ ದ್ರವನೆಲ್ಲವ ತೆಗೆದು ಮತ್ತೆ ಪೂಜೆಯ ಮಾಡಿ ನಮಸ್ಕರಿಸಿ ಶರಣಾರ್ಥಿಯೆಂದು ಆ ಜಂಗಮವು ಸಲ್ಲಿಸಿದ ಮೇಲೆ ತಾನು ಪಾದತೀರ್ಥವ ಸಲ್ಲಿಸುವುದು. ಪಂಚಾಂಗುಲಿ ಪಂಚಾಕ್ಷರಿಯಿಂದಲಿ ಲಿಂಗಕರ್ಪಿಸಿ ಆ ಪಂಚಾಂಗುಲಿಯುತ ಜಿಹ್ವೆಯಿಂದ ಸ್ವೀಕರಿಸುವುದು ಗುರುಪಾದೋದಕ. ಲಿಂಗವನೆತ್ತಿ ಅಂಗೈಯಲ್ಲಿರ್ದ ತೀರ್ಥವ ಸಲ್ಲಿಸಿದುದು ಲಿಂಗಪಾದೋದಕ. ಬಟ್ಟಲೊಳಗಿರ್ದ ತೀರ್ಥವ ಸಲಿಸಿದುದು ಜಂಗಮಪಾದೋದಕ. ಈ ತ್ರಿವಿಧ ಪಾದೋದಕ ಒಂದೇ ಎಂದರಿವುದು. ಹೀಗೆ ಕ್ರಮವರಿದು ಸಲಿಸುವರ್ಗೆ ಮುಕ್ತಿಯಾಗುವುದಕ್ಕೆ ತಡವಿಲ್ಲವೆಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಅಯ್ಯಾ, ಕ್ರಿಯಾವಿಭೂತಿಯ ಧರಿಸಿದ ಭಕ್ತನು ಚಿದ್ರುದ್ರಾಕ್ಷಿಯ ಧರಿಸಿ ಮಂತ್ರಧ್ಯಾನವ ಮಾಡಬೇಕಾದ ನಿಮಿತ್ತ, ಪ್ರಥಮದಲ್ಲಿ ರುದ್ರಾಕ್ಷಿಮಣಿಗಳ ಕ್ರಮವ ಮಾಡದೆ, ಅವರು ಹೇಳಿದಂತೆ ಕ್ರಯವ ಕೊಟ್ಟು ಮುಖಭಿನ್ನವಾದುದನುಳಿದು, ಸ್ವಚ್ಛವಾದ ರುದ್ರಾಕ್ಷಿಗಳ ಶ್ರೀಗುರುಲಿಂಗಜಂಗಮದ ಸನ್ನಿಧಿಗೆ ತಂದು ವೃತ್ತಸ್ಥಾನದ ಪರಿಯಂತರವು ಧೂಳಪಾದೋದಕವ ಮಾಡಿ, ಆ ರುದ್ರಾಕ್ಷಿಯ ಪೂರ್ವಾಶ್ರಯವ ಕಳೆದು, ಲಿಂಗಧಾರಕಭಕ್ತರಿಂದ ಗುರುಪಾದೋದಕ ಮೊದಲಾಗಿ ಶಿವಪಂಚಾಮೃತದಿಂದ ಇಪ್ಪತ್ತೊಂದು ಪೂಜೆಯ ಮಾಡಿಸಿ ಆಮೇಲೆ ಶ್ರೀಗುರುಲಿಂಗಜಂಗಮದ ಪಾದಪೂಜೆಗೆ ಧರಿಸಿ, ಆಮೇಲೆ ಲಿಂಗಜಂಗಮಕ್ಕೆ ಸಮರ್ಪಿಸಿ, ಅವರಿಂದ ದಯಚಿತ್ತವ ಪಡೆದು, ಶರಣುಹೊಕ್ಕು ಮಹಾಪ್ರಸಾದವೆಂದು ಬೆಸಗೊಂಡು, ಆ ಕರುಣಾಕಟಾಕ್ಷ ಮಾಲೆಗಳ ಭಿನ್ನವಿಟ್ಟು ಅರ್ಚಿಸದೆ, ಅಭಿನ್ನಸ್ವರೂಪು ಮುಂದುಗೊಂಡು ಬಹುಸುಯಿಧಾನದಿಂದ ತನ್ನ ತೊಡೆಯ ಮೇಲೆ ಮೂರ್ತವ ಮಾಡಿಕೊಂಡು, ತನ್ನ ಜ್ಞಾನಪ್ರಕಾಶವೆಂದು ಭಾವಿಸಿ ತನ್ನ ತಾನರ್ಚಿಸಿ, ಮಂತ್ರಧ್ಯಾನಾರೂಢನಾಗಿ ತತ್ತತ್ ಸ್ಥಾನದಲ್ಲಿ ಧರಿಸುವುದಯ್ಯಾ. ಇಂತು ವಿಭೂತಿ ರುದ್ರಾಕ್ಷಿಯ ಧರಿಸಿ ಲಿಂಗನಿಷ್ಠಾಪರನಾದ ಭಕ್ತನು ಸ್ಥಲಮೆಟ್ಟಿಗೆಯಿಂದ ಆಯಾಯ ಮಂತ್ರವ ಹೇಳುವುದಯ್ಯಾ. ಅದರ ವಿಚಾರವೆಂತೆಂದಡೆ: ಕ್ರಿಯಾದೀಕ್ಷಾಯುಕ್ತನಾದ ಉಪಾಧಿಭಕ್ತಂಗೆ ಗುರುಮಂತ್ರವ ಹೇಳುವುದಯ್ಯಾ. ಕ್ರಿಯಾದೀಕ್ಷೆಯ ಪಡೆದು ಗುರುಲಿಂಗಜಂಗಮದಲ್ಲಿ ಅರ್ಥಪ್ರಾಣಾಭಿಮಾನಂಗ? ನಿರ್ವಂಚಕತ್ವದಿಂದ ಸಮರ್ಪಿಸಿ ನಡೆನುಡಿ ಸಂಪನ್ನನಾದ ನಿರುಪಾಧಿಭಕ್ತಂಗೆ ಲಿಂಗಮಂತ್ರವ ಹೇ?ುವುದಯ್ಯಾ ಇವರಿಬ್ಬರ ಆಚರಣೆಯ ಪಡೆದು ಸಮಸ್ತ ಭೋಗಾದಿಗಳು ನೀಗಿಸಿ ಸಚ್ಚಿದಾನಂದನಾದ ಸಹಜಭಕ್ತಂಗೆ ಜಂಗಮಮಂತ್ರವ ಹೇ?ುವುದಯ್ಯಾ. ಆ ಮಂತ್ರಂಗಳಾವುವೆಂದಡೆ: ಶಕ್ತಿಪ್ರಣವ ಹನ್ನೆರಡು ಗುರುಮಂತ್ರವೆನಿಸುವುದಯ್ಯಾ, ಶಿವಪ್ರಣವ ಹನ್ನೆರಡು ಲಿಂಗಮಂತ್ರವೆನಿಸುವುದಯ್ಯಾ, ಶಿವಶಕ್ತಿರಹಿತವಾದ ಹನ್ನೆರಡು ಜಂಗಮಮಂತ್ರವೆನಿಸುವುದಯ್ಯಾ. ಇಂತು ವಿಚಾರದಿಂದ ಉಪಾಧಿ ನಿರುಪಾಧಿ ಸಹಜಭಕ್ತ ಮಹೇಶ್ವರರಾಚರಿಸುವುದಯ್ಯಾ. ಇನ್ನು ನಿರಾಭಾರಿ ವೀರಶೈವನಿರ್ವಾಣ ಸದ್ಭಕ್ತಜಂಗಮಗಣಂಗಳು ಶುದ್ಧಪ್ರಸಾದಪ್ರಣವ ಹನ್ನೆರಡು, ಸಿದ್ಧಪ್ರಸಾದಪ್ರಣವ ಹನ್ನೆರಡು, ಪ್ರಸಿದ್ಧಪ್ರಸಾದಪ್ರಣವ ಹನ್ನೆರಡು, ಇಂತು ವಿಚಾರದಿಂದ ಮೂವತ್ತಾರು ಪ್ರಣವವನೊಡಗೂಡಿ, ಶುದ್ಧಪ್ರಸಾದಪ್ರಣವ ಆಚಾರಲಿಂಗ ಗುರುಲಿಂಗ ಇಷ್ಟಲಿಂಗ ಪರಿಯಂತರ ತ್ರಿವಿಧ ಲಿಂಗಕ್ಕೆಂದು ಮಾಡುವುದಯ್ಯಾ. ಸಿದ್ಧಪ್ರಸಾದಪ್ರಣವ ಶಿವಲಿಂಗ ಜಂಗಮಲಿಂಗ ಪ್ರಾಣಲಿಂಗ ಪರಿಯಂತರ ತ್ರಿವಿಧಲಿಂಗಕ್ಕೆಂದು ಮಾಡುವುದಯ್ಯಾ. ಪ್ರಸಿದ್ಧಪ್ರಸಾದಪ್ರಣವ ಪ್ರಸಾದಲಿಂಗ ಮಹಾಲಿಂಗ ಭಾವಲಿಂಗ ಪರಿಯಂತರ ತ್ರಿವಿಧಲಿಂಗಕ್ಕೆಂದು ಮಾಡುವುದಯ್ಯಾ. ಹೀಗೆ ಹರುಕಿಲ್ಲದೆ ಸ್ಥಲಮೆಟ್ಟಿಗೆಯಿಂದ ಕರುಣಿಸಿದ ಗುರುವಿಂಗೆ ಬೆಸಗೊಂಡ ಶಿಷ್ಯೋತ್ತಮಂಗೆ. ಆಯಾಯ ಲಿಂಗಪ್ರಸಾದ ಒದಗುವುದೆಂದಾಂತ ನಮ್ಮ ಕೂಡಲಚೆನ್ನಸಂಗಮದೇವ
--------------
ಚನ್ನಬಸವಣ್ಣ
ಶ್ರೀಗುರುವಿನ ಶ್ರೀಚರಣದಲ್ಲಿ ಅರುವತ್ತೆಂಟು ತೀರ್ಥಗಳು ನೆಲೆಸಿಪ್ಪವಾಗಿ ಎಲ್ಲಾ ತೀರ್ಥಗಳಿಗೆಯೂ ಗುರುಪಾದತೀರ್ಥವೆ ಅಧಿಕ ನೋಡಾ. ಗುರುಕರುಣದಿಂದ ದೀಯತೇ ಎಂಬ ಸುಜ್ಞಾನವ ಹಡದು ಗುರುಪಾದೋದಕದಿಂದ ಕ್ಷೀಯತೇ ಎಂದು ಮಲತ್ರಯವ ಕ್ಷಯವ ಮಾಡುವುದು. ಶೋಷಣಂ ಪಾಪಪಂಕಸ್ಯ ದೀಪನಂ ಜ್ಞಾನ ತೇಜಸಃ ಗುರುಪಾದೋದಕಂ ಪೀತ್ವಾ ಭವೇತ್ ಸಂಸಾರನಾಶನಂ ಇಂತೆಂದುದಾಗಿ, ಗುರುಕರುಣಾಮೃತರಸಪಾದೋದಕದಲ್ಲಿ ಸುಜ್ಞಾನಾನಂದ ರಸಮಯನಾಗಿ ಬೆರಸಿ ಬೇರಿಲ್ಲದಿರ್ದೆನಯ್ಯಾ ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ಉದಕ ಹೋಗಿ ಗುರುಪಾದೋದಕವೆನಿಸಿತ್ತು; ಗುರುಪಾದೋದಕ ಹೋಗಿ ಕ್ರಿಯಾಪಾದೋದಕವೆನಿಸಿತ್ತು; ಕ್ರಿಯಾಪಾದೋದಕ ಹೋಗಿ ಜ್ಞಾನಪಾದೋದಕವೆನಿಸಿತ್ತು; ಜ್ಞಾನಪಾದೋದಕವೆ ಶರಣನ ಮನದ ಮೊನೆಯಲ್ಲಿ ಕಪಿಲಸಿದ್ಧಮಲ್ಲಿಕಾರ್ಜುನನಾಗಿ ನಿಂದಿತ್ತು.
--------------
ಸಿದ್ಧರಾಮೇಶ್ವರ
ಹೊನ್ನು ಬಿಡದನ್ನಕ್ಕ ಗುರುಪಾದೋದಕ ಸಲ್ಲದು. ಮಣ್ಣು ಬಿಡದನ್ನಕ್ಕ ಲಿಂಗಪಾದೋದಕ ಸಲ್ಲದು. ಹೆಣ್ಣು ಬಿಡದನ್ನಕ್ಕ ಜಂಗಮಪಾದೋದಕ ಸಲ್ಲದು. ಈ ಸರ್ವವು ಅಳಿಯದನ್ನಕ್ಕ, ಕಪಿಲಸಿದ್ಧಮಲ್ಲಿಕಾರ್ಜುನನಿಂಬುಗೊಡನು ಮಹಾಬಯಲಲ್ಲಿ, ಕಲ್ಲಯ್ಯಾ.
--------------
ಸಿದ್ಧರಾಮೇಶ್ವರ
ಹಡೆದ ಹೆಣ್ಣಿಗಾಗಲಿ, ಹಡೆದ ಗಂಡಿಗಾಗಲಿ, ಗುರುಪಾದೋದಕಸ್ನಾನವೆ ಶುದ್ಧ ಕಾಣಾ. ವನದ ಭೋಜನವಾಗಲಿ, ಮನೆಯ ಭೋಜನವಾಗಲಿ, ಗುರುಪಾದೋದಕ ಪ್ರೋಕ್ಷಣೆಯೆ ಶುದ್ಧ ಕಾಣಾ. ಮದುವೆಯ ಸಂಭ್ರಮವಾಗಲಿ, ಮರಣದ ದುಃಖವಾಗಲಿ, ಗುರುಪಾದೋಕವೆ ಸಂಜೀವನ ಕಾಣಾ. ಆಗುವ ದೀಕ್ಷೆಯೆ ಆಗಲಿ, ಭೋಗಿಪ ಶಿಕ್ಷೆಯೆ ಆಗ, ಗುರುಪಾದೋದಕವರ್ತನವೆ ಅಮರಗಣ ನಡಾವಳಿ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಗುರುಪಾದೋದಕ ಸಕಲಕ್ರಿಯೆಗಳಿಗೆ ಬರುವುದು. ಕ್ರಿಯಾಪಾದೋದಕ ಭಸ್ಮಶುದ್ಧತೆಗೆ ಬರುವುದು. ಜ್ಞಾನಪಾದೋದಕ ಅರ್ಪಣಂಗೈವುದಕ್ಕೆ ಬರುವುದು ನೋಡಾ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಯ್ಯ ! ದೀಕ್ಷಾಗುರು, ಶಿಕ್ಷಾಗುರು, ಜ್ಞಾನಗುರುಗಳೆಂಬ ತ್ರಿವಿಧ ಗುರುಗಳು: ಕ್ರಿಯಾಲಿಂಗ, ಜ್ಞಾನಲಿಂಗ, ಭಾವಲಿಂಗವೆಂಬ ತ್ರಿವಿಧ ಲಿಂಗಗಳು: ಸ್ವಯ, ಚರ, ಪರವೆಂಬ ತ್ರಿವಿಧ ಜಂಗಮವು_ ಈ ಒಂಬತ್ತು ಆಚಾರಲಿಂಗದಲ್ಲಿ ಸಂಬಂಧವು. ಕ್ರಿಯಾಗಮ, ಭಾವಾಗಮ, ಜ್ಞಾನಾಗಮವೆಂಬ ತ್ರಿವಿಧ ಲಿಂಗಗಳು, ಸಕಾಯ, ಆಕಾಯ, ಪರಕಾಯವೆಂಬ ತ್ರಿವಿಧ ಗುರುಗಳು: ಧರ್ಮಾಚಾರ, ಭಾವಾಚಾರ, ಜ್ಞಾನಾಚಾರವೆಂಬ ತ್ರಿವಿಧ ಜಂಗಮವು_ ಈ ಒಂಬತ್ತು ಗುರುಲಿಂಗದಲ್ಲಿ ಸಂಬಂಧವು. ಕಾಯಾನುಗ್ರಹ, ಇಂದ್ರಿಯಾನುಗ್ರಹ, ಪ್ರಾಣಾನುಗ್ರಹವೆಂಬ ತ್ರಿವಿಧ ಗುರುಗಳು ಕಾಯಾರ್ಪಿತ, ಕರಣಾರ್ಪಿತ, ಭಾವಾರ್ಪಿತವೆಂಬ ತ್ರಿವಿಧ ಲಿಂಗಗಳು: ಶಿಷ್ಯ, ಶುಶ್ರೂಷ, ಸೇವ್ಯವೆಂಬ ತ್ರಿವಿಧ ಜಂಗಮವು_ ಈ ಒಂಬತ್ತು ಶಿವಲಿಂಗದಲ್ಲಿ ಸಂಬಂಧವು. ಈ ಮೂರು ಸ್ಥಲವು ಅನಾದಿಭಕ್ತನ ಮಾರ್ಗಕ್ರಿಯಾ ಸ್ವರೂಪು. ಜೀವಾತ್ಮ, ಅಂತರಾತ್ಮ, ಪರಮಾತ್ಮವೆಂಬ ತ್ರಿವಿಧಲಿಂಗಗಳು: ನಿರ್ದೇಹಾಗಮ, ನಿರ್ಭಾವಾಗಮ, ನಷ್ಟಾಗಮವೆಂಬ ತ್ರಿವಿಧ ಗುರುಗಳು; ಆದಿಪ್ರಸಾದಿ, ಅಂತ್ಯಪ್ರಸಾದಿ, ಸೇವ್ಯ ಪ್ರಸಾದಿಯೆಂಬ ತ್ರಿವಿಧ ಜಂಗಮವು_ ಈ ಒಂಬತ್ತು ಜಂಗಮಲಿಂಗದಲ್ಲಿ ಸಂಬಂಧವು_ ದೀಕ್ಷಾಪಾದೋದಕ, ಶಿಕ್ಷಾಪಾದೋದಕ, ಜ್ಞಾನಪಾದೋದಕವೆಂಬ ತ್ರಿವಿಧ ಲಿಂಗಂಗಳು, ಕ್ರಿಯಾನಿಷ್ಪ, ಭಾವನಿಷ್ಪ, ಜ್ಞಾನನಿಷ್ಪಯೆಂಬ ತ್ರಿವಿಧ ಗುರುಗಳು; ಪಿಂಡಾಕಾಶ, ಬಿಂದ್ವಾಕಾಶ, ಮಹದಾಕಾಶವೆಂಬ ತ್ರಿವಿಧ ಜಂಗಮವು_ ಈ ಒಂಬತ್ತು ಪ್ರಸಾದಲಿಂಗದಲ್ಲಿ ಸಂಬಂಧವು. ಕ್ರಿಯಾಪ್ರಕಾಶ, ಭಾವಪ್ರಕಾಶ, ಜ್ಞಾನಪ್ರಕಾಶವೆಂಬ ತ್ರಿವಿಧ ಲಿಂಗಗಳು ಕೊಂಡದ್ದು ಪ್ರಸಾದ, ನಿಂದದ್ದು ಓಗರ, ಚರಾಚರನಾಸ್ತಿಯೆಂಬ ತ್ರಿವಿಧ ಗುರುಗಳು; ಬಾಂಢಸ್ಥಲ, ಭಾಜನಸ್ಥಲ, ಅಂಗಲೇಪನಸ್ಥಲವೆಂಬ ತ್ರಿವಿಧ ಜಂಗಮವು_ ಈ ಒಂಬತ್ತು ಮಹಾಲಿಂಗದಲ್ಲಿ ಸಂಬಂಧವು. ಈ ಮೂರು ಸ್ಥಲವು ಅನಾದಿ ಜಂಗಮದ ಮೀರಿದ ಕ್ರಿಯಾ ಸ್ವರೂಪವು. ಈ ಉಭಯಂ ಕೂಡಲು ಐವತ್ತುನಾಲ್ಕು ಸ್ಥಲಂಗಳಾದವು. ಮುಂದುಳಿದ ಮೂರು ಸ್ಥಲಂಗಳಲ್ಲಿ ಭಾವಾಭಾವನಷ್ಟಸ್ಥಲವೆ ಮೂಲ ಗುರುಸ್ವರೂಪವಾಗಿ ಹದಿನೆಂಟು ಗುರುಸ್ಥಲಂಗಳನೊಳಕೊಂಡು ಕ್ರಿಯಾಗುರುಲಿಂಗ ಜಂಗಮ ಸ್ವರೂಪವಾದ ಇಷ್ಟಮಹಾಲಿಂಗದ ಅಧೋಪೀಠಿಕೆಯೆಂಬ ಹಲ್ಲೆಯಲ್ಲಿ ಸ್ಪರ್ಶನೋದಕ, ಅವಧಾನೋದಕ, ಗುರುಪಾದೋದಕ, ಅಪ್ಯಾಯನಪ್ರಸಾದ, ಸಮಯಪ್ರಸಾದ, ಗುರುಪ್ರಸಾದ ಆದಿ ಪ್ರಸಾದ, ನಿಚ್ಚಪ್ರಸಾದವಾಗಿ ತೆರಹಿಲ್ಲದೆ ಒಪ್ಪುತ್ತಿರ್ಪುದು ನೋಡ ! ಜ್ಞಾನಶೂನ್ಯಸ್ಥಲವೆ ಮೂಲ ಜಂಗಮಸ್ವರೂಪವಾಗಿ ಹದಿನೆಂಟು ಚರಸ್ಥಲಂಗಳನೊಳಕೊಂಡು ಮಹಾಜ್ಞಾನಗುರುಲಿಂಗಜಂಗಮ ಸ್ವರೂಪವಾದ ಇಷ್ಟಮಹಾಲಿಂಗದ ಜಲರೇಖೆಯನ್ನುಳ್ಳ ಪಾನಿವಟ್ಟಲಲ್ಲಿ ಪರಿಣಾಮೋದಕ, ನಿರ್ನಾಮೋದಕ, ಜಂಗಮಪಾದೋದಕ, ನಿತ್ಯೋದಕ, ಸಮತಾಪ್ರಸಾದ, ಪ್ರಸಾದಿಯ ಪ್ರಸಾದ, ಜಂಗಮ ಪ್ರಸಾದ, ಸದ್ಭಾವ ಪ್ರಸಾದ, ಜ್ಞಾನಪ್ರಸಾದ, ಸೇವ್ಯ ಪ್ರಸಾದ, ಅಚ್ಚ ಪ್ರಸಾದವಾಗಿ ತೆರಹಿಲ್ಲದೆ ಒಪ್ಪುತಿರ್ಪುದು ನೋಡ ! ಸ್ವಯ ಪರವರಿಯದ ಸ್ಥಲವೆ ಮೂಲಲಿಂಗಸ್ವರೂಪವಾಗಿ ಹದಿನೆಂಟು ಲಿಂಗಸ್ಥಲಂಗಳನೊಳಕೊಂಡು ಜ್ಞಾನಗುರುಲಿಂಗ ಜಂಗಮ ಸ್ವರೂಪವಾದ ಇಷ್ಟಮಹಾಲಿಂಗದ ಉನ್ನತವಾದ ಗೋಲಕದಲ್ಲಿ ಅಪ್ಯಾಯನೋದಕ, ಹಸ್ತೋದಕ, ಲಿಂಗಪಾದೋದಕ, ಪಂಚೇಂದ್ರಿ[ಯ] ವಿರಹಿತಪ್ರಸಾದ, ಕರಣಚತುಷ್ಟಯವಿರಹಿತ ಪ್ರಸಾದ, ಲಿಂಗಪ್ರಸಾದ ಅಂತ್ಯಪ್ರಸಾದ ಸಮಯಪ್ರಸಾದವಾಗಿ ತೆರಹಿಲ್ಲದೆ ಒಪ್ಪುತ್ತಿರ್ಪುದು ನೋಡ ! ಇಂತಪ್ಪ ಲಿಂಗಜಂಗಮದ ಪಾದೋದಕ ಪ್ರಸಾದವ ಸ್ವೀಕರಿಸಿದಂಥ ಜಂಗಮಭಕ್ತರಾದ ಸಹಜಭಕ್ತರೆ ಪ್ರಸಾದಪಾದೋದಕ ಸಂಬಂಧಿಗಳು. ಇವರು ಸ್ವೀಕರಿಸಿದಂಥ ಪಾದೋದಕವೆ ನೇತ್ರದಲ್ಲಿ ಕರುಣಜಲ; ವಾಕಿನಲ್ಲಿ ವಿನಯಜಲ; ಅಂತರಂಗದಲ್ಲಿ ಸಮತಾಜಲ_ ಇಂತೀ ತ್ರಿವಿಧೋದಕವೆ ಘಟ್ಟಿಗೊಂಡು ಸಾಕಾರವಾಗಿ, ತಿಳಿದುಪ್ಪ ಹೆರೆದುಪ್ಪವಾದಂತೆ ಇಷ್ಟ ಮಹಾಲಿಂಗಕ್ಕೆ ತ್ಯಾಗಾಂಗವಾದ ಶುದ್ಧ ಪ್ರಸಾದವಾಗಿರ್ಪುದಯ್ಯ; ಪ್ರಾಣಲಿಂಗಕ್ಕೆ ಭೋಗಾಂಗವಾದ ಸಿದ್ಧ ಪ್ರಸಾದವಾಗಿರ್ಪುದಯ್ಯ. ಭಾವಲಿಂಗಕ್ಕೆ ಯೋಗಾಂಗವಾದ ಪ್ರಸಿದ್ಧ ಪ್ರಸಾದವಾಗಿರ್ಪುದಯ್ಯ. ಇಂತೀ ತ್ರಿವಿಧಪ್ರಸಾದಪಾದೋದಕವೆ ಶರಣನ ಶುದ್ಧ ಪ್ರಸಾದವೆ ಜಿಹ್ವೆಯಲ್ಲಿ ಅಚ್ಚಪ್ರಸಾದವಾಗಿರ್ಪುದಯ್ಯ ಸಿದ್ಧಪ್ರಸಾದವೆ ಪಾದದಲ್ಲಿ ಸಮಯ ಪ್ರಸಾದವಾಗಿರ್ಪುದಯ್ಯ ಇಂತಪ್ಪ ಶರಣಸ್ವರೂಪವಾದ ಜ್ಞಾನಲಿಂಗಜಂಗಮದ ತೀರ್ಥಪ್ರಸಾದ ಸ್ವರೂಪವನ್ನು ಅರಿಯದೆ, ಕ್ರಿಯಾ `ಜಂಗಮಲಿಂಗ'ದ ತೀರ್ಥಪ್ರಸಾದವನ್ನು ತೆಗೆದುಕೊಳ್ಳಬಹುದು. ಜ್ಞಾನಲಿಂಗಜಂಗಮ ತೀರ್ಥಪ್ರಸಾದವನ್ನು ತೆಗೆದುಕೊಳ್ಳಲಾಗದು ಎಂಬ ಅಜ್ಞಾನಿಗಳ ಎನಗೆ ತೋರದಿರ ! ಗುಹೇಶ್ವರ !
--------------
ಅಲ್ಲಮಪ್ರಭುದೇವರು
ಗುರುಪಾದೋದಕ ಪರಮಪಾವನವೆಂದರಿದು ಗುರುಪಾದೋದಕವನೆ ಧರಿಸುವುದು. ಧರಿಸಿದಾತಂಗೆ ಅಷ್ಟಾಷಷ್ಟಿತೀಥಿರ್Àಂಗಳು ತನ್ನೊಳಡಗಿಹವಯ್ಯಾ. ಅದೆಂತೆಂದಡೆ : ಅಂಗುಷಾ*ಗ್ರೇ ಅಷ್ಟಾಷಷ್ಟಿತೀರ್ಥಂ ನಿತ್ಯಂ ವಸಂತಿ ವೈ' ಎಂದುದಾಗಿ, ಶ್ರೀಗುರುವಿನ ಅಂಗುಷಾ*ಗ್ರದಲ್ಲಿ ಸಕಲತೀರ್ಥಂಗಳಿರ್ಪವು. ಶ್ರೀಗುರುವಿನ ಪಾದೋದಕ ಪರಮಪಾವನವೆಂದರಿದು ಗುರುಪಾದೋದಕವನೆ ಧರಿಸುವುದು. ಇದು ಕಾರಣ ಗುರುಪಾದೋದಕದಿಂದವೆ ಪರಮಪದವಪ್ಪುದು, ಅಮರಗುಂಡದ ಮಲ್ಲಿಕಾರ್ಜುನಾ.
--------------
ಪುರದ ನಾಗಣ್ಣ
ಅಜ್ಞಾನ ಕುಕರ್ಮದಿಂದ ಮುಸುಕಿದ ಕತ್ತಲೆಗೆ ಸುಜ್ಞಾನಜ್ಯೋತಿ ಎರೆಯಲ್ಪಟ್ಟ ಪರಮಗುರುವೆಂದಿತ್ತು ರಹಸ್ಯ. ಸಾಕ್ಷಿ : ``ಅಜ್ಞಾನತಿಮಿರಾಂಧಸ್ಯ ಜ್ಞಾನಾಂಜನಶಲಾಕಯಾ | ಚಕ್ಷುರುನ್ಮೀಲಿತಂ ಯೇನ ತಸ್ಮೆ ೈ ಶ್ರೀಗುರವೇ ನಮಃ ||'' ಎಂದೆಂಬ ಗುರು. ``ಆಕಾಶೋ ಲಿಂಗಮೂಲಂ ಚ ಪೃಥ್ವೀ ತಸ್ಯಾದಿ ಪೀಠಕಂ | ಆಲಯಂ ಸರ್ವಭೂತಾನಾಂ ಲಯಂ ಚ ಲಿಂಗಮುಚ್ಯತೇ ||'' ಎಂದೆಂಬ ಲಿಂಗವು. ``ಜಕಾರಂ ಹಂಸವಾಹಸ್ಯ ಗಕಾರಂ ಗರುಢಧ್ವಜಂ | ಮಕಾರಂ ರುದ್ರರೂಪಂ ಚ ತ್ರಿಮೂತ್ರ್ಯಾತ್ಮಕಜಂಗಮಃ ||'' ಎಂದೆಂಬ ಜಂಗಮವು. ``ಶ್ರಾದ್ಧಂ ಯಜ್ಞಂ ಜಪಂ ಹೋಮಂ ವೈಶ್ವದೇವಸುರಾರ್ಚನಂ | ಧೃತತ್ರಿಪುಂಡ್ರಪೂತಾತ್ಮಾ ಮೃತ್ಯುಂ ಜಯತಿ ಮಾನವಃ ||'' ಎಂದೆಂಬ ವಿಭೂತಿ. ``ರುದ್ರಾಕ್ಷಿಧಾರಣಂ ಸರ್ವಂ ಜಟಾಮಂಡಲಧಾರಿಣಿ | ಅಕ್ಷಮಾಲಾರ್ಪಿತಕರ ಕಮಂಡಲಕರಾನ್ವಿತಂ || ತ್ರಿಪುಂಡ್ರಾವಲಿಯುಕ್ತಾಂ | ಆಷಾಡೇನ ವಿರಾಜಿತಂ ಋಗ್ಯಜುಃಸಾಮ ರೂಪೇಣ | ಸೇವ ತಸ್ಮೆ ೈ ಸ್ವರಃ ಇತಿ | ತ್ರೈವ ಗಾಯಿತ್ರೇವ ವರಾನನೇ ||'' (?) ಎಂದೆಂಬ ವಿಭೂತಿ ರುದ್ರಾಕ್ಷಿ. ``ಜ್ಞಾನ ಪ್ರಾಣ ಬೀಜಂ ಚ ನಕಾರಂ ಚ ಆಚಾರಕಂ | ಮಕಾರಂ ಚ ಗುರೋರ್ಬೀಜಂ ಶಿಕಾರಂ ಲಿಂಗಮತ್ರ್ಯಕಂ || ವಕಾರಂ ಚ ಬೀಜಂ ಚ ಯಕಾರಂ ಪ್ರಾಸಕಂ | ಏವಂ ಬೀಜಾಕ್ಷರಂ ಜ್ಞಾತುಂ ದುರ್ಲಭಂ ಕಮಲಾನನೆ ||'' ಎಂದೆಂಬ ಷಡಕ್ಷರಿಮಂತ್ರವು. ``ಶೋಷಣಂ ಪಾಪಪಂಕಸ್ಯ ದೀಪನಂ ಜ್ಞಾನತೇಜಸಃ | ಗುರುಪಾದೋದಕಂ ಪೀತ್ವಾ ಸಂಸಾರದ್ರುಮನಾಶನಂ ||'' ಎಂದೆಂಬ ಪಾದೋದಕವು. ``ಪ್ರಸಾದಂ ಗಿರಿಜಾದೇವಿ ಸಿದ್ಧಕಿನ್ನರಗುಹ್ಯಕಃ | ವಿಷ್ಣು ಮುಖ್ಯಾದಿದೇವಾನಾಮಗ್ರಾಹ್ಯೋýಯಮಗೋಚರಃ ||'' ಎಂದೆಂಬ ಪ್ರಸಾದವು. ಇನಿತು ತೆರದ ಅಷ್ಟಾವರಣದ ಶ್ರುತ ದೃಷ್ಟವ ಕಂಡು ಘನವೆಂದು ನಂಬಿದಾತನೆ ಸತ್ಯಸದಾಚಾರಿ ಕಾಣಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಗುರುಪಾದೋದಕವೆಂದು, ಕ್ರಿಯಾಪಾದೋದಕವೆಂದು. ಜ್ಞಾನಪಾದೋದಕವೆಂದು ಮೂರು ತೆರನುಂಟು. ಗುರುಪಾದೋದಕವೆಂದಡೆ, ಅಯ್ಯಗಳ ಪಾದಗಳ ಎರಡಂಗುಲಿಗಳಲ್ಲಿ, ಪಾದಗಳೆರಡರ ಮೂಲಾಂಗುಲಿ ಹಿಮ್ಮಡಗಳ ಅಗ್ರದಲ್ಲಿ ತನ್ನ ಪಂಚಾಂಗುಲಿಯಿಂದ ಉದಕನದ್ದಿ, ಮಂತ್ರವಳಹುವುದೆ ಗುರುಪಾದೋದಕ. ಕ್ರಿಯಾಪಾದೋದಕವೆಂದಡೆ, ಪಾದದ್ವಯದ ಅಂಗುಗಳಲ್ಲಿ ಶಿವನ ಶಕ್ತಿಯ ಪ್ರಣವವ ಬರೆದು, ಭಸ್ಮವ ಧರಿಸಿ, ನೇತ್ರದಳಗಳ ಅರ್ಪಣಂಗೈದು, ತನ್ನ ತರ್ಜನಿಯ, ಮೂರು ವೇಳೆ ಪ್ರಣವಸಹಿತ ಪಂಚಾಕ್ಷರೀಮಂತ್ರಂ ಗುರುಪಾದೋದಕವನದ್ದಿ ಎಳೆಯುವುದೆ ಕ್ರಿಯಾಪಾದೋದಕ. ಜ್ಞಾನಪಾದೋದಕವೆಂದಡೆ, ದಶಾಂಗುಗಳಲ್ಲಿ ದಶಪ್ರಣವ ಮಂತ್ರದಿಂದ ಭಸ್ಮಂ ಲಿಖಿಸಿ, ಷೋಡಶೋಪಚಾರಂ ಪೂಜೆಯ ಮಾಡಿ, ಎರಡಂಗುಲಿ ಮಧ್ಯದಲ್ಲಿ ಮೂರು ಸ್ಥಾನಂಗಳಲ್ಲಿ, ಪಂಚಾಕ್ಷರೀಮಂದಿಂದ ಎರೆಯುವುದೆ ಜ್ಞಾನಪಾದೋದಕ. ಇಂತಪ್ಪ ಪಾದೋದಕತ್ರಯಂಗಳ ಸೇವಿಸಿ ಸುಖಿಸಬಲ್ಲಡೆ ಆತನೆ ಪರಾತ್ಪರವಸ್ತು, ಕಪಿಲಸಿದ್ಧಮಲ್ಲಿಕಾರ್ಜುನದೇವಾ.
--------------
ಸಿದ್ಧರಾಮೇಶ್ವರ
ಅಯ್ಯಾ, ಷೋಡಶದಳ ಕಮಲದ ಮಧ್ಯದಲ್ಲಿ ನೆಲಸಿರ್ಪ ಅನಾದಿ ನಿಷ್ಕಲಂಕ ಜ್ಯೋತಿರ್ಮಯ ಪರಶಿವಲಿಂಗದೇವಂಗೆ ಕ್ರಿಯಾಶಕ್ತಿಸ್ವರೂಪವಾದ ಚಿತ್‍ಪೃಥ್ವಿಹೃದಯಮಧ್ಯದಲ್ಲಿ ನೆಲಸಿರ್ಪ ಪರಿಣಾಮಜಲವ ಚಿದ್ಭಾಂಡದೊಳಗೆ ಪರಿಣಾಮಪಾವಡದಿಂದ ಶೋಧಿಸಿ, ಗುರು ಚರ ಪರ ಸ್ವರೂಪವಾದ ಜಂಗಮಮೂರ್ತಿಗಳ ಮೊಳಕಾಲ ಪರಿಯಂತರ ಪ್ರಕ್ಷಾಲನವ ಮಾಡಿ, ಉಳಿದುದಕದಿಂದ ಉಭಯಪಾದಕಮಲವನು ಅಡಿಪಾದವ ಮೂರು ವೇಳೆ, ಅಂಗುಲಿಗಳ ಒಂದು ವೇಳೆ ಸ್ಪರ್ಶನವ ಮಾಡಿದಂತಹ ಗುರುಪಾದೋದಕವ ಭಾಂಡಭಾಜನದಲ್ಲಿ ತುಂಬಿ, ಕರಕಮಲದಲ್ಲಿ ಅನಾದಿ ನಿಷ್ಕಲಂಕ ಜ್ಯೋತಿರ್ಮಯ ಇಷ್ಟಮಹಾಲಿಂಗದೇವನ ಮೂರ್ತವ ಮಾಡಿಸಿಕೊಂಡು ಪಂಚರಸಯುಕ್ತವಾದ ಆವುದಾದಡೆಯೂ ಒಂದು ಕಾಷ*ದಿಂದ ಹಸ್ತಪಾದಮುಖಂಗಳಲ್ಲಿ ಸ್ಥಾಪಿಸಿರುವ ಐವತ್ತೆರಡು ನಖದಂತ ಪಂಕ್ತಿಗಳ ತೀಡಿ, ನೇತ್ರ ಮೊದಲಾದ ಲಿಂಗದವಯವಂಗ? ಪ್ರಕ್ಷಾಲಿಸಿ, ಕಟಿಸ್ನಾನ ಕಂಸ್ನಾನ ಮಂಡೆಸ್ನಾನ ಮೊದಲಾದ ತ್ರಿವಿಧಲಿಂಗಸ್ನಾನವ ಮಾಡಿ, ಪಾವುಗೊರಡ ಮೆಟ್ಟಿ, ಪಾವಡವಾಗಲಿ, ಪರ್ಣಾಸನವಾಗಲಿ ದರ್ಭೆ ಬೆತ್ತ ಮೊದಲಾದಸನದಲ್ಲಿ ಮೂರ್ತವ ಮಾಡಿ ಗುರುಪಾದೋದಕದೊಳಗೆ ಭಸ್ಮ ಗಂಧ ಪುಷ್ಪ ಮಂತ್ರವ ಸ್ಥಾಪಿಸಿ, ಪಂಚಾಮೃತವೆಂದು ಭಾವಿಸಿ ಅನಾದಿ ನಿಷ್ಕಲಂಕ ಜ್ಯೋತಿರ್ಮಯ ಇಷ್ಟಮಹಾಲಿಂಗದೇವಂಗೆ ಲೀಲಾಮಜ್ಜನವ ಮಾಡಿಸಿ, ಕ್ರಿಯಾಚಾರದಲ್ಲಿ ದಹಿಸಿದ ವಿಭೂತಿಯಲ್ಲಿ ಗುರುಪಾದೋದಕ ಲಿಂಗಪಾದೋದಕ ಮಂತ್ರಸಂಬಂಧವಾದ ಚಿದ್ಭಸಿತವ ಸ್ನಾನ ಧೂಲನ ಧಾರಣಂಗಳ ಮಾಡಿ, ಅಷ್ಟವಿಧಾರ್ಚನೆ ಷೋಡಶೋಪಚಾರಂಗಳೊಳಗೆ ಲಿಂಗಾಣತಿಯಿಂದ ಬಂದುದ ಸಮರ್ಪಿಸಿ, ಕ್ರಿಯಾಗುರುಲಿಂಗಜಂಗಮದ ತೀರ್ಥಪ್ರಸಾದವಾದಡೆಯೂ ಸರಿಯೆ ಜ್ಞಾನಗುರುಲಿಂಗಜಂಗಮದ ತೀರ್ಥಪ್ರಸಾದವಾದಡೆಯೂ ಸರಿಯೆ, ಆ ಕ್ರಿಯಾಜ್ಞಾನಗುರುಲಿಂಗಜಂಗಮದ ಮಹಾತೀರ್ಥವ ಆ ಗುರುಲಿಂಗಜಂಗಮಕ್ಕೆ ಸಮರ್ಪಿಸಿ, ಆಮೇಲೆ ತಳಿಗೆಬಟ್ಟಲಲ್ಲಿ ಕಡುಬು ಕಜ್ಜಾಯ ಹೋಳಿಗೆ ಹುಗ್ಗಿ ಗುಗ್ಗರಿ ಬೆಳಸೆ ಅಂಬಲಿ ತುಂಬೆಸೊಪ್ಪು ಮೊದಲಾದ ಶಾಕಪಾಕಾದಿಗಳ, ಕ್ಷೀರ ದಧಿ ನವನೀತ ತಕ್ರ ಘೃತ ಕಬ್ಬಿನ ಹಾಲು ಎಳೆ ಅಗ್ಗಿಣಿ ಪನ್ನೀರು ಮೊದಲಾದ ಸಮಸ್ತದ್ರವ್ಯಂಗಳ ಭಾಜನದಲ್ಲಿ ಸ್ಥಾಪಿಸಿ ಹಸ್ತಸ್ಪರ್ಶನವ ಮಾಡಿ, ಆ ಕ್ರಿಯಾಜ್ಞಾನ ಗುರುಲಿಂಗಜಂಗಮ ಪ್ರಸಾದವಾದಡೆಯೂ ಸರಿಯೆ, ಮತ್ತಾ ಗುರುಲಿಂಗಜಂಗಮಕ್ಕೆ ಸಮರ್ಪಿಸಿ ತಾನಾ ಪರಿಣಾಮ ಪಾದೋದಕ ಪ್ರಸಾದದಲ್ಲಿ ಸಂತೃಪ್ತನಾದಾತನೆ ನಿಮ್ಮ ಅಚ್ಚಶರಣನಲ್ಲದೆ ಉಳಿದ ನಾಹಂ ಭ್ರಮೆಯಿಂದ ತೊಳಲುವ ಬಡಜೀವಿಗಳೆತ್ತ ಬಲ್ಲರಯ್ಯಾ ನಿಮ್ಮ ನಿಜಾಚರಣೆಯ ವಿಚಾರದ ಪರಿಣಾಮವ, ಕೂಡಲಚೆನ್ನಸಂಗದೇವಾ ?
--------------
ಚನ್ನಬಸವಣ್ಣ
ಪರಮಪವಿತ್ರಪರಿಣಾಮೋದಕವನ್ನು ಕ್ರಿಯಾಜ್ಞಾನಯುಕ್ತವಾದ ಜಂಗಮಮೂರ್ತಿಯು ಎರಡುಪದರಿನ ಪಾವುಡದಿಂದ ಶೋಧಿಸಿದುದಕವನ್ನು ಆ ಜಂಗಮದ ಅಡಿಪಾದ ಮೂರುಮೂರುವೇಳೆ, ಪಂಚಪಂಚಾಂಗುಲಗಳೊಂದೊಂದುವೇಳೆ, ಮೂಲಪಂಚಾಕ್ಷರಧ್ಯಾನದಲ್ಲಿ ಮನಘನವಾಗಿ ಸ್ಪರಿಶನಂಗೈದು, ದೀಕ್ಷಾಪಾದೋದಕವನ್ನು ಚರಲಿಂಗಕ್ಕೆ ಮುಖಮಜ್ಜನವ ಮಾಡಬೇಕು ಸ್ವಾಮಿಯೆಂದಲ್ಲಿ, ಹರಹರಾಯೆಂದು ಕೈಕೊಂಡು, ಲಿಂಗಾಭಿಷೇಕ ಮುಖಮಜ್ಜನವ ಮಾಡಿದ ಚರಲಿಂಗದ ಪಾದಕ್ಕೆ ಪಾವಗೊರಡ ಮೆಟ್ಟಿಸಿ, ಹಸ್ತವ ಹಿಡಿದು, ಬಹುಪರಾಕು ಎಚ್ಚರವೆಚ್ಚರ ಮಹಾಲಿಂಗದಲ್ಲಿ ಸ್ವಾಮಿಯೆಂದು ಸ್ತುತಿಸುತ್ತ ಗರ್ದುಗೆಯ ಮೇಲೆ ಮೂರ್ತಮಾಡಿದ ಬಳಿಕ ಉಭಯಪಾದಾಭಿಷೇಕಂಗೈದುದಕವ ಲಿಂಗಾಂಗಕ್ಕೆ ಸಂಪ್ರೋಕ್ಷಿಸಿದ ತದನಂತರದಲ್ಲಿ, ಮುಖಮಜ್ಜನಕ್ಕೆ ಮಾಡಿದಂಥ ಗುರುಪಾದೋದಕ ತಂಬಿಗೆಯನ್ನು ಭಾಂಡಕ್ಕೆ ಹಸ್ತಸ್ಪರಿಶನ ಧಾರಣವಿದ್ದರೆ ಆ ಉದಕವ ಶೋಧಿಸಿದ ಭಾಂಡಂಗಳಿಗೆ ಸಮ್ಮಿಶ್ರವ ಮಾಡುವುದು. ಇಲ್ಲವಾದಡೆ ತಮ್ಮ ಅರ್ಚನ ಅರ್ಪಣಗಳಿಗೆ ಮಡುಗಿಕೊಂಡು, ದಿವರಾತ್ರಿಗಳೆನ್ನದೆ ಚರಲಿಂಗಪಾದೋದಕಪ್ರಾಣಿಗಳೆ ನಿರವಯಪ್ರಭು ಮಹಾಂತನ ಪ್ರತಿಬಿಂಬ ಕಾಣಾ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಬಟ್ಟಲೊಳಗಣ ಉದಕವ ತೆಗೆದುಕೊಂಡು ಲಿಂಗದ ಮೇಲೆ ನೀಡಿ, ಜಿಹ್ವೆಯಲ್ಲಿ ಸ್ವೀಕರಿಸಿದಲ್ಲಿಗೆ ಗುರು ಪಾದೋದಕವು. ಮೊದಲು ನಿರೂಪಿಸಿದ ಗುರುಪಾದೋದಕದಿಂದ ಆವ ಪದವಿಯೆಂದಡೆ: ಧರೆಯ ಜನನದ ಅಜ್ಞಾನದ ಭವತ್ವವಳಿದು, ಶಿವಜ್ಞಾನವ ಕರುಣಿಸಿ ಕೊಡುವುದು. ಲಿಂಗಪಾದೋದಕದಿಂದ ಆವ ಪದವಿಯೆಂದಡೆ: ಇಹಲೋಕದ ತನುಭೋಗವಪ್ಪ ಪ್ರಾರಬ್ಧಕರ್ಮವಳಿವುದು, ಶಿವಲೋಕದಲ್ಲಿ `ಇತ್ತಬಾ' ಎಂದೆನಿಸಿಕೊಂಬ ಮನ್ನಣೆಯ ಪದವಿಯಪ್ಪುದು, ಆ ಬಟ್ಟಲಲೆತ್ತಿ ಸಲಿಸಿದ ಜಂಗಮಪಾದೋದಕದಿಂದ ಆವ ಪದವಿ ಎಂದಡೆ: ಇಹಪರಕ್ಕೆ ಎಡೆಯಾಡುವ ಅವಸ್ಥೆಗಳನು, ಪರತತ್ವವಾದ ಜಂಗಮವನು ಐಕ್ಯಮಾಡಿ ಅರಿವಡಿಸಿಕೊಂಡಿಪ್ಪನು. ಇಂತು ಗುರುಪಾದೋದಕ, ಲಿಂಗಪಾದೋದಕ, ಜಂಗಮಪಾದೋದಕ, ತ್ರಿವಿಧ. ಉಳಿದ ಏಳು ಉದಕದೊಳಗೆ ಸ್ಪರ್ಶನೋದಕ ಅವಧಾನೋದಕ ಇವೆರಡು, ಆ ಲಿಂಗದ ಮಸ್ತಕದ ಮೇಲೆ ನೀಡಿ, ಅಂಗುಲಿಗಳ ಜಿಹ್ವೆಯಲ್ಲಿ ಇಟ್ಟುಕೊಂಡಂತಹ ಗುರುಪಾದೋದಕದಲ್ಲಿ ಸಂಬಂಧವು ಅಪ್ಯಾಯನೋದಕ, ಹಸ್ತೋದಕ ಇವೆರಡು, ಲಿಂಗವನೆತ್ತಿ ಸಲಿಸಿದಂತಹ ಲಿಂಗಪಾದೋದಕದಲ್ಲಿ ಸಂಬಂಧವು ಪರಿಣಾಮೋದಕ ನಿರ್ನಾಮೋದಕ ಇವೆರಡು, ಬಟ್ಟಲೆತ್ತಿ ಸಲಿಸಿದಂತಹ ಜಂಗಮ ಪಾದೋದಕದಲ್ಲಿ ಸಂಬಂಧವು. ಸತ್ಯೋದಕ ಬಟ್ಟಲ ಖಂಡಿತ ಮಾಡಿದಲ್ಲಿಗೆ ಸಂಬಂಧವು ಈ ಹತ್ತು ಪಾದೋದಕವು ಮಹತ್ಪಾದದಲ್ಲಿ ಸಂಬಂಧವು ಧೂಳಪಾದೋದಕ, ದಶವಿಧ ಪಾದೋದಕ ಸಂಬಂಧವು ಕ್ರಿಯಾಪಾದೋದಕದಲ್ಲಿ ನೋಡಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಸುಪ್ರಭಾಕಳೆಯಿಂದ ಚಿತ್ಪ್ರಣಮ ಉದಯ. ಆ ಚಿತ್ಪ್ರಣಮದ ಮುಂದಣ ಚಿದ್ವಿವೇಕವೆ ಚಿದಬ್ಧಿ . ಆ ಚಿದಬ್ಧಿಯೆ ಪಾದೋದಕ, ಚಿದಮೃತವೆ ಪಾದೋದಕ. ನಿಧಿ ನಿಧಾನವೆ ಪಾದೋದಕ, ಸುಧೆ ಸುರರ ತೃಪ್ತಿಯೆ ಪಾದೋದಕ. ಅದಕ್ಕೆ ದೃಷ್ಟ : ಶೋಷಣಂ ಪಾಪಪಂಕಸ್ಯ ದೀಪನಂ ಜ್ಞಾನತೇಜಸಃ | ಗುರುಪಾದೋದಕಂ ಪೀತ್ವಾ ಸಂಸಾರದ್ರುಮನಾಶನಂ || ಇಂತಪ್ಪ ಪಾದೋದಕವ ಕೊಂಡರೆ, ಪಾಶಮುಕ್ತನಾಗಿ, ಪಶುಪತಿಯೆಂಬುಭಯವಳಿದು, ನೀರು ಕ್ಷೀರ ಬೆರೆದಂತಿಪ್ಪ ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣಾ . ಮಾಂ ತ್ರಾಹಿ, ತ್ರಾಸಿ ಕರುಣಾಕರನೆ.
--------------
ಹಡಪದ ಅಪ್ಪಣ್ಣ
-->