ಅಥವಾ

ಒಟ್ಟು 17 ಕಡೆಗಳಲ್ಲಿ , 4 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮನಲ್ಲಿ ಪ್ರಣವಪಂಚಾಕ್ಷರಿಯ ನಿರವಿಸಿ, ಸದ್ಗುರುವೆ ಎನ್ನ ಶಿವಾತ್ಮನ ಮಾಡಿದಿರಾಗಿ, ಆತ್ಮಶುದ್ಧಿಯಾಯಿತ್ತೆನಗೆ. ಪಂಚಭೂತಂಗಳಲಿ ಪಂಚಬ್ರಹ್ಮನನಿರಿಸಿದಿರಾಗಿ, ಭೂತಶುದ್ಧಿಯಾಯಿತ್ತೆನಗೆ. ಅಂಡಜ ಜರಾಯುಜಾದಿ ಎಂಬತ್ತುನಾಲ್ಕುಲಕ್ಷ ಯೋನಿಯಲ್ಲಿ ಬಹ ಜೀವನ ಅಯೋನಿಜನ ಮಾಡಿದಿರಾಗಿ ಜೀವಶುದ್ಧಿಯಾಯಿತ್ತೆನಗೆ. ಅಂಗಾಶ್ರಯವ ಕಳೆದು ಲಿಂಗಾಶ್ರಯವ ಮಾಡಿದಿರಾಗಿ ಮನಶ್ಶುದ್ಧಿಯಾಯಿತ್ತೆನಗೆ. ಪಶುವೆಂಬ ಅಜ್ಞಾನದ್ರವ್ಯವ ಕಳೆದು ಪರಮಸುಜ್ಞಾನದ್ರವ್ಯವ ಮಾಡಿದಿರಾಗಿ ದ್ರವ್ಯಶುದ್ಧಿಯಾಯಿತ್ತೆನಗೆ. ಇಂತು ಸರ್ವಶುದ್ಧನಂ ಮಾಡಿ ಪೂರ್ವಾಶ್ರಯವ ಕಳೆದಿರಾಗಿ ಕೂಡಲಚೆನ್ನಸಂಗಾ, ನಿಮ್ಮುವ `ನ ಗುರೋರಧಿಕಂ ನ ಗುರೋರಧಿಕಂ ನ ಗುರೋರಧಿಕಂ : ಎನುತಿರ್ದೆನು.
--------------
ಚನ್ನಬಸವಣ್ಣ
ಲಿಂಗವನರಿಯರು ಲಿಂಗದ ಮುಖವನರಿಯರು. ಪೂಜಿಸಲರಿಯರು ಅರ್ಚಿಸಲರಿಯರು ಅರ್ಪಿಸಲರಿಯರು. ನಾನೇ ಭಕ್ತನು ನಾನೇ ಮಾಹೇಶ್ವರನು ನಾನೇ ಪ್ರಸಾದಿಯೆಂಬರು. ಶಿವಾಚಾರಪರಾಙ್ಮುಖರು ನೋಡಾ. ಶಿವ ಶಿವಾ, ಪ್ರಾಣಲಿಂಗಿ ಐಕ್ಯನೆಂಬುದು ಮಹಾಕ್ರೀ. ಅದನೆಂತೂ ಅರಿಯರು. ಗುರು ಲಿಂಗ ಜಂಗಮ ಒಂದೆಂಬುದನೂ ವೇದ ಶಾಸ್ತ್ರ ಆಗಮ ಪುರಾಣ ಪುರಾತನರ ನಡೆ ನುಡಿಯಿಂದರಿದು ಕ್ರೀಯನರಿದು ಕಾಲವನರಿದು ಮನ ವಂಚನೆಯಿಲ್ಲದೆ ಶಿವಲಿಂಗವ ಪೂಜಿಸಬೇಕು, ಸದ್ಭಕ್ತಿಯಿಂ ಭಕ್ತನಾಗಿ. `ನ ಗುರೋರಧಿಕಂ ನ ಗುರೋರಧಿಕಂ ಎಂಬುದನರಿದು ಪರಧನ ಪರಸ್ತ್ರೀ ಪರದೈವವ ತ್ಯಜಿಸಿ ತನು ಮನ ಧನದಲ್ಲಿ ವಂಚನೆಯಿಲ್ಲದೆ ಮನೋವಾಕ್ಕಾಯಶುದ್ಧನಾಗಿ ಅಷ್ಟವಿಧಾರ್ಚನೆ ಷೋಡಶೋಪಚಾರದಿಂ ಅರ್ಚಿಸಬೇಕು ಶ್ರೀಗುರುಲಿಂಗಕ್ಕೆ ಮಾಹೇಶ್ವರನಾಗಿ. ಜಂಗಮ ಪರಶಿವನೆಂದರಿದು ಭೋಗಮೂರ್ತಿ ಎಂದರಿದು ಮನೋವಾಕ್ಯಾಯಶುದ್ಧನಾಗಿ ಧನವಂಚನೆಯಿಲ್ಲದೆ ಸರ್ವಪದಾರ್ಥ ಸರ್ವಭೋಗಂಗಳನರ್ಪಿಸಿ ಜಂಗಮಲಿಂಗಾರ್ಚನೆಯಂ ಮಾಡಿ ಜಂಗಮಪ್ರಸಾದವಂ ಪಡೆದು ಪ್ರಸಾದವ ಭೋಗಿಸಿ ಪ್ರಸಾದಿಯಾಗಿ ಜಂಗಮಲಿಂಗಾರ್ಚನೆಯಂ ಮಾಡುವುದಯ್ಯಾ ಪ್ರಸಾದಿಯಾಗಿ. ಇಂತು ಭಕ್ತ ಮಾಹೇಶ್ವರ ಪ್ರಸಾದಿ ತನುವಿಡಿದು `ಏಕ ಮೂರ್ತಿಸ್ತ್ರಧಾ ಭೇದಾಃ ಎಂಬುದನರಿದು ಕ್ರಿಯೆಯಲ್ಲಿ ಕ್ರಿಯೆಯನರಿದು ತನುವಿಡಿದು ಸಕಲನಾಗಿ ನಡೆವ ಸ್ಥಲ ಈ ಮೂರು ಪ್ರಾಣಲಿಂಗಿ ಶರಣನೈಕ್ಯನೆಂಬುದು ಇವು ಮೂರುಸ್ಥಲ. ಮನವಿಡಿದು ನಡೆವುದು ನಿಷ್ಕಲಸ್ಥಲವನೊಂದುಮಾಡಿ ಏಕೀಭವಿಸಿ ನಡೆವುದು. ಇವು ಮೂರುಸ್ಥಲಕ್ಕೆ ನಿಷ್ಕ್ರಿಯಾಸಂಬಂಧ. ಈ ಮಹಾವರ್ಮವನೂ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ ನಿಮ್ಮ ಶರಣರೇ ಬಲ್ಲರು, ವಾಙ್ಮನೋತೀತರು ಉಪಮಾತೀತರು, ಘನ ಮಹಾ[ಕ್ರೀಯ].
--------------
ಉರಿಲಿಂಗಪೆದ್ದಿ
ಏಕತತ್ತ್ವ ತ್ರಿತತ್ತ್ವ ಪಂಚತತ್ತ್ವ ಪಂಚವಿಂಶತಿತತ್ತ್ವ ಷಟ್‍ತ್ರಿಂಶತ್ ತತ್ತ್ವ ಇಂತೀ ತತ್ತ್ವ ಂಗಳೆಲ್ಲವನೂ ಗರ್ಭೀಕರಿಸಿಕೊಂಡಿಪ್ಪ ಈ ತತ್ತ್ವಂಗಳೆಲ್ಲವಕ್ಕೆಯೂ ಅಧಿಕವಾಗಿಪ್ಪ ಮಹಾತತ್ತ್ವವೂ `ನ ಗುರೋರಧಿಕಂ ನ ಗುರೋರಧಿಕಂ' ಎಂದುದಾಗಿ `ನಾಸ್ತಿ ತತ್ತ್ವಂ ಗುರೋಃ ಪರಂ' ಎಂದುದಾಗಿ 'ಅದ್ವೈತಂ ತ್ರಿಷು ಲೋಕೇಷು ನಾದ್ವೈತಂ ಗುರುಣಾ ಸಹ' ಎಂದುದಾಗಿ `ಗುರುದೇವೋ ಮಹಾದೇವೋ' ಎಂದುದಾಗಿ ಶ್ರೀಗುರುತತ್ತ್ವವೇ ಪರತತ್ತ್ವವು. ಶಿವ ಶಿವಾ ಸಕಲವೇದ ಶಾಸ್ತ್ರಪುರಾಣ ಆಗಮ ಅಷ್ಟಾದಶವಿದ್ಯಂಗಳು ಸರ್ವವಿದ್ಯಂಗಳು ಸಪ್ತಕೋಟಿಮಹಾಮಂತ್ರಂಗಳು ಉಪಮಂತ್ರಂಗಳು ಅನಂತಕೋಟಿಗಳನೂ ಗರ್ಭೀಕರಿಸಿಕೊಂಡಿಪ್ಪ ಇವಕೆ ಮಾತೃಸ್ಥಾನವಾಗಿ, ಇವಕೆ ಉತ್ಪತ್ತಿ ಸ್ಥಿತಿ ಲಯ ಕಾರಣಂಗಳಿಗೆ ಕಾರಣವಾಗಿಪ್ಪ ಮಹಾತತ್ತ್ವ ಮಹಾಮಂತ್ರರಾಜನು, ಶ್ರೀಮೂಲಮಂತ್ರವು. ಈ ಮಹಾತತ್ವ್ತವು ಏಕವಾದ ಮಹಾಲಿಂಗವು. ಈ ಮಹಾಲಿಂಗವೆ ಅಂಗವಾಗಿಪ್ಪ ಮಹತ್ತಪ್ಪ ಮಹಾಸದ್ಭಕ್ತನು. ಆತನೇ ತತ್ತ್ವಜ್ಞನು, ಆತನೇ ತತ್ತ್ವಮಯನು, ಆತನೇ ತತ್ತ್ವಮೂರ್ತಿ. ಈ ಮಹಾಮಂತ್ರ ಮುಖೋದ್ಗತವಾದ ಮಹಾಭಕ್ತನು. ಆತನೇ ವೇದವಿತ್ತು, ಆತನೇ ಶಾಸ್ತ್ರಜ್ಞನು, ಆತನೇ ಪುರಾಣಿಕನು, ಆತನೇ ಆಗಮಜ್ಞನು, ಆತನೇ ಸರ್ವಜ್ಞನು. ಈ ಮಹಾಘನ ಮಹತ್ತನೊಳಕೊಂಡ ಸದ್ಭಕ್ತಂಗೆ ಇತರ ತತ್ತ್ವಂಗಳನೂ ಇತರ ದೇವತೆಗಳನೂ ಇತರ ದೇವದಾನವಮಾನವರುಗಳನೂ ಇತರ ಮಂತ್ರಂಗಳನೂ ಇತರ ಪದಂಗಳನೂ ಸರಿ ಎನಬಹುದೆ ? ಶಿವ ಶಿವಾ ಸರಿ ಎಂದಡೆ ಮಹಾದೋಷವು. ಈ ಮಹಾಭಕ್ತನೇ ಉಪಮಾತೀತನು ವಾಙ್ಮನೋತೀತನು. ಈ ಮಹಾದೇವನ ಭಕ್ತನೇ ಮಹಾದೇವನು. ಈ ಮಹಾಭಕ್ತನ ಪೂಜೆಯೇ ಶಿವಲಿಂಗಪೂಜೆ. ಈ ಮಹಾಭಕ್ತನ ಪದವೇ ಪರಮಪದವಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಒಂ ಏಕವ ನ ದ್ವಿತೀಯಾಃ ಸ್ವಯಂಭುವೇ ಚಕಿತಮಭಿದತ್ತೇ ಶ್ರುತಿರಪಿ ಅತ್ಯತಿಷ*ದ ಶಾಂಗುಲವೆಂಬ ಬಿರುದು ನಿಮಗೆ ಸಂದಿತ್ತು ಗುರುವೆ. ನ ಗುರೋರಧಿಕಂ ನ ಗುರೋರಧಿಕಂ ವಿದಿತಂ ವಿದಿತಂ ಎಂಬ ಬ್ರಹ್ಮಬ್ರಹ್ಮ ಶಬ್ದಕ್ಕೆ ಪರಬ್ರಹ್ಮ ಗುರುವೆ ಗುರು. ಬಸವಪ್ರಿಯ ಕೂಡಲಸಂಗಮದೇವಾ ಮಾಂ ತ್ರಾಹಿ ಕರುಣಾಕರನೆ.
--------------
ಹಡಪದ ಅಪ್ಪಣ್ಣ
ಲಿಂಗಿನಾ ಸಹವರ್ತಿತ್ವಂ ಲಿಂಗಿನಾ ಸಹ ವಾದಿತಾ ಲಿಂಗಿನಾ ಸಹಚಿಂತಾ ಚ ಲಿಂಗಯೋಗೋ ನ ಸಂಶಯಃ ಶಿವಲಿಂಗದ ಮಹಾತ್ಮೆಯನು ಶಿವಲಿಂಗದ ಮರ್ಮವನು ಶಿವಲಿಂಗದ ನಿಶ್ಚಯವನು ಇದಾರಯ್ಯ ಬಲ್ಲವರು ? ಆರಯ್ಯ ಅರಿವವರು, ಶ್ರೀಗುರು ಕರುಣಿಸಿ ತೋರಿ ಕೊಡದನ್ನಬರ ? `ಸರ್ವೈಶ್ವರ್ಯಸಂಪನ್ನಃ ಸರ್ವೇಶತ್ವಸಮಾಯುತಃ' ಎಂದುದಾಗಿ, `ಅಣೋರಣೀಯಾನ್ ಮಹತೋ ಮಹಿಮಾನ್' ಎಂದುದಾಗಿ, `ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ' ಎಂದುದಾಗಿ, ವೇದಪುರುಷರಿಗೂ ಅರಿಯಬಾರದು, ಅರಿಯಬಾರದ ವಸ್ತುವ ಕಾಣಿಸಬಾರದು, ಕಾಣಿಸಬಾರದ ವಸ್ತುವ ರೂಪಿಸಲೆಂತೂ ಬಾರದು, ರೂಪಿಸಬಾರದ ವಸ್ತುವ ಪೂಜಿಸಲೆಂತೂ ಬಾರದು. ಪೂಜೆಯಿಲ್ಲಾಗಿ ಭಕ್ತಿ ಇಲ್ಲ, ಭಕ್ತಿ ಇಲ್ಲಾಗಿ ಪ್ರಸಾದವಿಲ್ಲ, ಪ್ರಸಾದವಿಲ್ಲಾಗಿ ಮುಕ್ತಿ ಇಲ್ಲ, ಮುಕ್ತಿ ಇಲ್ಲಾಗಿ ದೇವದಾನವಮಾನವರೆಲ್ಲರೂ ಕೆಡುವರು. ಕೆಡುವವರನು ಕೆಡದಂತೆ ಮಾಡಿ ರಕ್ಷಿಸಿದನು ಸದ್ಗುರು ಮದ್ಗುರು ಶ್ರೀಗುರು. `ನ ಗುರೋರಧಿಕಂ ನ ಗುರೋರಧಿಕಂ ಎಂದುದಾಗಿ, ಮಹಾಗುರು ಶಾಂತಮೂರ್ತಿ ಕೃಪಾಮೂರ್ತಿ ದಯಾಮೂರ್ತಿ ಲಿಂಗಪ್ರತಿಷೆ*ಯ ಮಾಡಿದನು. ಅದೆಂತೆನಲು ಕೇಳಿರೆ : ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಸಹ ನಾದಬಿಂದುಕಳಾತೀತಂ ಗುರುಣಾ ಲಿಂಗಮುದ್ಭವಂ ಎಂದುದಾಗಿ, ಸದ್ಗುರೋರ್ಭಾವಲಿಂಗಂ ತು ಸರ್ವಬ್ರಹ್ಮಾಂಡಗಂ ಶಿವಂ ಸರ್ವಲೋಕಸ್ಯ ತ್ರಾಣತ್ವಾತ್ ಮುಕ್ತಿಕ್ಷೇತ್ರಂ ತದುಚ್ಯತೇ ಎಂದುದಾಗಿ, `ಗುರುಣಾ ದೀಯತೇ ಲಿಂಗಂ' ಸರ್ವಲೋಕಕ್ಕೆಯೂ ಸರ್ವರಿಗೆಯೂ ಲಿಂಗಪ್ರತಿಷೆ*ಯಂ ಮಾಡಿಕೊಟ್ಟನು ಅರೂಪೇ ಭಾವನಂ ನಾಸ್ತಿ ಯದ್ದೃಶ್ಯಂ ತದ್ವನಶ್ಯತಿ ಅದೃಶ್ಯಸ್ಯ ತು ರೂಪತ್ವೇ ಸಾದಾಖ್ಯಮಿತಿ ಕಥ್ಯತೇ ಎಂದುದಾಗಿ, ನಿಷ್ಕಳರೂಪ ನಿರವಯ ಧ್ಯಾನಪೂಜೆಗೆ ಅನುವಲ್ಲ. ಸಕಲತತ್ತ್ವ ಸಾಮಾನ್ಯವೆಂದು `ಸಕಲಂ ನಿಷ್ಕಲಂ ಲಿಂಗಂ ಎಂದುದಾಗಿ, `ಲಿಂಗಂ ತಾಪತ್ರಯಹರಂ ಎಂದುದಾಗಿ, `ಲಿಂಗಂ ದಾರಿದ್ರ್ಯನಾಶನಂ ಎಂದುದಾಗಿ, `ಲಿಂಗಂ ಪ್ರಸಾದರೂಪಂ ಚ ಲಿಂಗಂ ಸರ್ವಾರ್ಥಸಾಧನಂ ಎಂದುದಾಗಿ, `ಲಿಂಗಂ ಪರಂಜ್ಯೋತಿಃ ಲಿಂಗಂ ಪರಬ್ರಹ್ಮಂ ಎಂದುದಾಗಿ, ಲಿಂಗವನು ಪೂಜಿಸಿ ಭಕ್ತಿಪ್ರಸಾದ ಮುಕ್ತಿಯ ಪಡೆಯಲೆಂದು ಮಹಾದಾನಿ ಗುರುಲಿಂಗವು ಲಿಂಗಪ್ರತಿಷೆ*ಯಂ ಮಾಡಿಕೊಟ್ಟನು. ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಈಶ್ವರಶ್ಚ ಸದಾಶಿವಃ ಸರ್ವೇ ಲಿಂಗಾರ್ಚನಂ ಕೃತ್ವಾ ಜಾತಾಸ್ತೇ ಲಿಂಗಪೂಜಕಾಃ ಗೌರೀಪತಿರುಮಾನಾಥೋ ಅಂಬಿಕಾಪಾರ್ವತೀ ಪತಿಃ ಗಂಗಾಪತಿರ್ಮಹಾದೇವೋ ಸತತಂ ಲಿಂಗಪೂಜಕಾಃ ಎಂದುದಾಗಿ, ಈ ಮಹಾಪುರುಷರಪ್ಪ ದೇವಗಣ ರುದ್ರಗಣ ಪ್ರಮಥಗಣಂಗಳು ಬ್ರಹ್ಮವಿಷ್ಣ್ವಾದಿ ದೇವದಾನವಮಾನವರುಗಳು ಮಹಾಲಿಂಗವ ಧ್ಯಾನಿಸಿ ಪೂಜಿಸಿ ಪರಮಸುಖ ಪರಿಣಾಮವ ಪಡೆಯಲೆಂದು ಮಾಡಿದನು ಕೇವಲ ಸದ್ಭಕ್ತಜನಕ್ಕೆ. `ಇಷ್ಟಂ ಪ್ರಾಣಸ್ತಥಾ ಭಾವಸ್ತ್ರಿಧಾ ಏಕಂ' ಎಂದುದಾಗಿ, ಆ ಸದ್ಗುರು, ಆ ಪರಶಿವನನು ಆ ಸತ್ಪ್ರಾಣವನು ಏಕೀಭವಿಸಿ ಸದ್ಭಾವದಿಂ ಲಿಂಗಪ್ರತಿಷೆ*ಯ ಮಾಡಿ ಪ್ರಾಣಲಿಂಗವಾಗಿ ಕರಸ್ಥಲದಲ್ಲಿ ಬಿಜಯಂಗೈದು ಅಂತರಂಗ ಬಹಿರಂಗ ಭರಿತನಾಗಿ ಪೂಜೆಗೊಳಲೆಂದು ಕರುಣಿಸಿದನು. `ಏಕಮೂರ್ತಿಸ್ತ್ರಿಧಾ ಭೇದೋ' ಎಂದುದಾಗಿ, ಶ್ರೀಗುರುಲಿಂಗ ಪರಶಿವಲಿಂಗ ಜಂಗಮಲಿಂಗ ಒಂದೇ; `ದೇಶಿಕಶ್ಯರಲಿಂಗೇ ಚ ತ್ರಿವಿಧಂ ಲಿಂಗಮುಚ್ಯತೇ' ಎಂದುದಾಗಿ, ಲಿಂಗದ ಮರ್ಮವನು, ಲಿಂಗದ ಸಂಜ್ಞೆಯನು, ಲಿಂಗದ ನಿಶ್ಚಯವನು ಆದಿಯಲ್ಲೂ ಧ್ಯಾನ ಪೂಜೆಯ ಮಾಡಿದವರನೂ ಭಕ್ತಿಪ್ರಸಾದ ಮುಕ್ತಿಯ ಪಡೆದವರನೂ ವೇದ ಶಾಸ್ತ್ರ ಪುರಾಣ ಆಗಮಂಗಳು ಹೇಳುತ್ತಿವೆ, ಶಿವನ ವಾಕ್ಯಂಗಳಿವೆ. ಇದು ನಿಶ್ಚಯ, ಮನವೇ ನಂಬು ಕೆಡಬೇಡ. ಮಹಾಸದ್ಭಕ್ತರನೂ ನಂಬುವುದು, ಶಿವಲಿಂಗಾರ್ಚನೆಯ ನಿರಂತರ ಮಾಡುವುದು, ಇದು ನಿಶ್ಚಯ, ಶಿವನು ಬಲ್ಲನಯ್ಯಾ. ಈ ಕ್ರೀಯಲ್ಲಿ ಲಿಂಗವನರಿದು ವಿಶ್ವಾಸಂ ಮಾಡಿ ಕೇವಲ ಸದ್ಭಕ್ತಿಯಿಂದ ಪೂಜಿಸುವುದು ನಿರ್ವಂಚಕತ್ವದಿಂದ ತನು ಮನ ಧನವನರ್ಪಿಸುವುದು, ಕ್ರೀಯರಿದು ಮರ್ಮವರಿದು ಸದ್ಭಾವದಿಂ ಲಿಂಗಾರ್ಚನೆಯಂ ಮಾಡುವುದಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
``ನ ಗುರೋರಧಿಕಂ, ನ ಗುರೋರಧಿಕಂ, ನ ಗುರೋರಧಿಕಂ, ನ ಗುರೋರಧಿಕಂ, ವಿದಿತಂ ವಿದಿತಂ ವಿದಿತಂ ವಿದಿತಂ ಶಿವಶಾಸನತಃ ಎಂದು[ದು] ವಚನ. ಶ್ರೀಗುರು ಮತ್ರ್ಯಕ್ಕೆ ಬಂದು ಅಷ್ಟಾದಶಜಾತಿಗಳೊಳಗಿದ್ದರೇನು ಮತ್ರ್ಯನೆರಿ ಅಲ್ಲ. ಸಾಕ್ಷಿಃ ಗುರುದೇವೋ ಮಹಾದೇವೋ ಗುರುದೇವಸ್ಸದಾಶಿವಃ ಗುರುದೇವಾತ್ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ ಎಂದುದಾಗಿ, ಲಲಾಟಲೋಚನೇ ಚಾಂದ್ರೀ ಕಲಾಮಪಿ ಚ ದೋದ್ರ್ವಯಂ ಅಂತರ್ನಿಧಾಯ ವರ್ತೇ[s]ಹಂ ಗುರುರೂಪೋ ಮಹೇಶ್ವರಃ ಎಂದುದಾಗಿ, ಶಿವನು ಗುರುರೂಪಾಗಿ ವರ್ತಿಸುತ್ತಿರ್ದನು. ಪರಶಿವೋ ಗುರುಮೂರ್ತಿಃ ಶಿಷ್ಯದೀಕ್ಷಾದಿಕಾರಣಾತ್ ಶಿಷ್ಯಾತೀತಂ ಮಹಾಚೋದ್ಯಂ ಚೋದ್ಯರೂಪಾಯ ವೈ ನಮಃ ಎಂದುದಾಗಿ, ಶಿಷ್ಯಂಗೆ ದೀಕ್ಷೆಯ ಮಾಡಿ ಕರುಣಿಸಿ ಬಂದ ಮಹಾಕರುಣಾಮೂರ್ತಿ ಸದಾಶಿವ ತಾನೆ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
'ನ ಗುರೋರಧಿಕಂ ನ ಗುರೋರಧಿಕಂ ನ ಗುರೋರಧಿಕಂ' ಎಂಬ ಶ್ರುತಿಯುಂಟಾಗಿ, ಹರ ಮುನಿದರೆ ಗುರು ಕಾಯ್ವ, ಗುರು ಮುನಿದರೆ ಹರ ಕಾಯನೆಂಬ ವಾಕ್ಯ ದಿಟ. ಅದೆಂತೆಂದೊಡೆ : ಪರಶಿವನಾಣತಿವಿಡಿದೈತಂದು ತನುಸಂಗ ಮರವೆಯಾವರಿಸಿದಂದು, ತನ್ನತ್ತ ತಾನೊಯ್ವ ಸತ್ವ ತನಗಿಲ್ಲ. ಮತ್ತೆ ಸುಜ್ಞಾನಗುರುವಾಗಿ ಬಂದೆನ್ನೆಚ್ಚರಿಸಿ, ಕ್ರಿಯಾಘನಗುರುವಾಗಿ ಬಂದೆನ್ನ ಬೋಧಿಸಿ ಅತ್ತಲಾ ಪರಶಿವನ ತಂದೆನ್ನ ಕರ ಮನ ಭಾವದಲ್ಲಿ ತೋರಿ ಕಾಣಿಸಿದ ನಿರಂಜನ ಚನ್ನಬಸವಲಿಂಗ ತಾನೆಂಬ ಭಾವವನು.
--------------
ದೇಶಿಕೇಂದ್ರ ಸಂಗನಬಸವಯ್ಯ
ಲಿಂಗವಂತನು ಲಿಂಗಾಚಾರ, ಸದಾಚಾರ, ಭೃತ್ಯಚಾರ, ಗಣಾಚಾರ, ಶಿವಾಚಾರ, ಸರ್ವಾಚಾರಸಂಪನ್ನನೆನಿಸಿಕೊಳಬಹುದಲ್ಲದೆ ಭಕ್ತನೆನಿಸಿಕೊಳಬಾರದು. ಅನೇಕ ವ್ರತನಿಯಮಂಗಳ ಹಿಡಿದು ನಡೆದು ವ್ರತಸ್ಥನೆನಿಸಿಕೊಳಬಹುದಲ್ಲದೆ ಭಕ್ತನೆನಿಸಿಕೊಳಬಾರದು. ಕರುಣಿ ಶಾಂತ ನಿಸ್ಪೃಹನೆನಿಸಿಕೊಳಬಹುದಲ್ಲದೆ ಭಕ್ತನೆನಿಸಿಕೊಳಬಾರದು. ತನುವ ಕೊಟ್ಟು, ಮನವ ಕೊಟ್ಟು, ಧನವ ಕೊಟ್ಟು ದಾತೃವೆನಿಸಿಕೊಳಬಹುದಲ್ಲದೆ. ಭಕ್ತನೆನಿಸಿಕೊಳಬಾರದು. `ಏಕ ಮೂರ್ತಿಸ್ತ್ರಿಧಾ ಭೇದಾ' ಎಂಬ ಕ್ರಿಯೆಯಲ್ಲಿ ಶ್ರೀಗುರುಲಿಂಗಜಂಗಮವೊಂದೆಯೆಂದು ಸದ್ಭಾವದಿಂ ತ್ರಿವಿಧದಲ್ಲಿ, ಆ ಮುಖವೊಂದೊಂದರಲ್ಲಿ ತ್ರಿವಿಧವನೂ ಏಕೀಭವಿಸಿ ಕಂಡು ಕಾಲಕರ್ಮಕಲ್ಪಿತ ಉಪಾಧಿರಹಿತನಾಗಿ ಆ ವಸ್ತುಗಳ ಮನೋವಾಕ್ಕಾಯದಲ್ಲಿ ಇಚ್ಚೈಸುತ್ತಂ ತನ್ನ ಮನೋವಾಕ್ಕಾಯದಲ್ಲಿ ತಡವಿಲ್ಲದೆ [ನೆಲೆಗೊಳಿಸಬೇಕು] `ನ ಗುರೋರಧಿಕಂ `ಗುರುಣಾ ದೀಯತೇ ಲಿಂಗಂ `ಗುರುಃ ಪಿತಾ ಗುರುರ್ಮಾತಾ ಎಂದುದಾಗಿ, ದೀಕ್ಷಾಮೂರ್ತಿರ್ಗುರುರ್ಲಿಗಂ ಪೂಜಾಮೂರ್ತಿಸ್ಸದಾಶಿವಃ ಶಿಕ್ಷಾಮೂರ್ತಿಶ್ಚರಸ್ತಸ್ಮಾತ್ ಏವಂ ಭೇದತ್ರಯೋ ಭವೇತ್ ದೀಕ್ಷಾ ಪೂಜಾ ಚ ಶಿಕ್ಷಾ ಚ ಸರ್ವಕರ್ತಾ ಚ ಜಂಗಮಃ ಎಂದುದಾಗಿ, `ಭಕ್ತ್ಯಾಪೂಜಾಂ ಅಹಂ ಕರ್ತಾ' `ನಿಷ್ಪ್ರಪಂಚೋ ನಿರಾಮಯಃ' ಎಂದುದಾಗಿ, ಪ್ರಪಂಚಯುಕ್ತೋ ದಾಸೋಹೀ ನಿಷ್ಪ್ರಪಂಚೋ ಹಿ ಜಂಗಮಃ ಪ್ರಪಂಚಯುಕ್ತೋ ಭಕ್ತಸ್ಸ್ಯಾತ್ ನಿಷ್ಪ್ರಪಂಚೋ ಹಿ ಜಂಗಮಃ ಎಂದುದಾಗಿ, ಸರ್ವಶಕ್ತಿಮಯಃ ಪ್ರೋಕ್ತಃ ಪುರುಷ ಏಕಶ್ಶಿವಸ್ತಧಾ ಭಕ್ತಿಪ್ರಸನ್ನಸ್ಸರ್ವೇಷಾಂ ಯಥಾ ಭಕ್ತಿಸ್ತಥಾ ಶಿವಃ ಸಕಲಶ್ಶಕ್ತಿರೂಪಶ್ಚ ಶಿವ ಏಕೋ ನಿಷ್ಕಲಸ್ತಥಾ ಶಕ್ತ್ಯಧೀನಃ ಪ್ರಪಂಚಸ್ಸ್ಯಾದ್ಯಥಾಭಕ್ತಿಸ್ಸ್ತಥಾ ಶಿವಃ ಗುರುಣಾ ಭಾವಿತಂ ಲಿಂಗಂ ಏಕಮೇವಾದ್ವಿತೀಯಕಂ ತಲ್ಲಿಂಗಸ್ಯ ಪ್ರಭಾ ಲಿಂಗಂ ಸರ್ವಲಿಂಗಂ ನ ಸಂಶಯಃ `ಏಕ ಏವ ರುದ್ರೋ ನ ದ್ವಿತೀಯಾಯ ತಸ್ಥೇ' ಎಂದುದಾಗಿ, `ಏವ ಏಕೋ ಧ್ಯೇಯಃ' ಎಂದುದಾಗಿ `ಅಣೋರಣೀಯಾನ್ಮಹತೋ ಮಹೀಯಾನ್' ಎಂದುದಾಗಿ ಸರ್ವಶಕ್ತಿಮಯಂ ಪ್ರೋಕ್ತಂ ಪುರುಷಮೇಕಂ ಶಿವಸ್ತಥಾ ಯಥಾ ಶಕ್ತಿಶ್ಚ ಸಂಯೋಗಂ ತಥಾ ತತ್ತ್ವಂ ಪರಶ್ಶಿವಃ ಸರ್ವೇಷಾಂ ಶಕ್ತಿರೂಪಂ ಚ ಪುರುಷಾದ್ವೈತಂ ಪರಶಿವಃ ಯಥಾಶಕ್ತಿಸ್ಸ್ತಥಾ ಪುರುಷ ಏಕ ರುದ್ರ ಇತಿ ಸ್ಮೃತಃ ಎಂದುದಾಗಿ, ಯಸ್ಯ ಚಿತ್ತಂ ಶಿವೇ ಲೀನಂ ತಸ್ಯ ಜಾತ್ಯಾದಿ ನ ಸ್ಮರೇತ್ ಶಿವಲಿಂಗೇ ಶಿಲಾಬುದ್ಧಿಂ ಕುರ್ವಾಣ ಇವ ಪಾತಕೀ ಸತ್ಯಭಾವಿ ಮಹತ್ಸತ್ಯಂ ಸತ್ಯಂ ಸ್ಯಾಚ್ಚಿವಲಕ್ಷಣಂ ನಿತ್ಯಭಾವಿ ಮಹನ್ನಿತ್ಯಂ ಸತ್ಯಂ ಸ್ಯಾಚ್ಚಿವಲಕ್ಷಣಂ ನಾನಾರೂಪಧರೋ ದೇವೋ ನಾನಾರೂಪಸಮನ್ವಿತಃ ನಾನಾಚಿಹ್ನಸಮೋಪೇತೋ ನಾನಾಲೀಲಾಧರೋ ಹರಃ ವೇದಾತೀತಂ ಮನೋತೀತಮಾಗಮಾತೀತಮಾರ್ಗಿಕಂ ಶಾಸ್ತ್ರಾತೀತಂ ಮಹಾಶಾಸ್ತ್ರೀ ತತ್ಸ್ಯಾಜ್ಜಂಗಮಲಕ್ಷಣಂ ಲಿಂಗಧಾರೀ ಮಹಾಲಿಂಗೀ ಲಿಂಗಧ್ಯಾನೀ ನಿರಂತರಂ ಲಿಂಗಾಲಿಂಗೀ ಮಹತ್ಸಂಗೀ ತತ್ಸ್ಯಾಜ್ಜಂಗಮಲಕ್ಷಣಂ ಜಂಗಮೋ ಜಂಗಮಂ ದಃಷ್ಟ್ವಾ ನಮಸ್ಕಾರಂ ತು ಸಂಭ್ರಮಾತ್ ಆಲಿಂಗನಂ ಮಹಾಪ್ರೀತ್ಯಾ ಕುರ್ಯಾಜ್ಜಂಗಮಲಕ್ಷಣಂ ಭೃತ್ಯಪೂಜಾರ್ಹಕರ್ತಾ ಚ ದೀಕ್ಷಾಮೂರ್ತಿರ್ಮಹಾಪ್ರಭುಃ ಶಿಕ್ಷಾಮೂರ್ತಿರ್ಮಹಾಕರ್ತಾ ತತ್ಸ್ಯಾಜ್ಜಂಗಮಲಕ್ಷಣಂ ಸರ್ವಸಂಗಪರಿತ್ಯಾಗೀ ಲಿಂಗಸಂಗೀ ನಿರಂತರಂ ದ್ವಂದ್ವೇ ತು ಸಮದೃಷ್ಟಿಸ್ಸ್ಯಾತ್ ತತ್ಸ್ಯಾಜ್ಜಂಗಮಲಕ್ಷಣಂ ಘೃಣಾದೃಷ್ಟಿರ್ಘೃಣಾವಾಕ್ಯಂ ಘೃಣಾಮೂರ್ತಿರ್ನಿರಂತರಂ ಕ್ರಿಯಾಕರ್ಮಸು ವಿಜ್ಞಶ್ಚ ಶಿಕ್ಷಾಚಾರ್ಯ ಇತಿ ಸ್ಮೃತಃ ಮೂರ್ತಿಶ್ಚ ಲಿಂಗಮೂರ್ತಿಶ್ಚ ಸುಶೀಲಂ ಲಿಂಗಶೀಲವತ್ ಗುಣಂ ಸರ್ವಸ್ಯ ಲಿಂಗಸ್ಯ ತತ್ಸ್ಯಾಜ್ಜಂಗಮಲಕ್ಷಣಂ ಎಂದುದಾಗಿ, ಹನ್ಯಾತ್‍ಕ್ರುದ್ಧೋಪಿ ಚಾಕಾಶಂ ಕ್ಷುಧಾರ್ತಾ ಖಾದಯೇತ್ತುಷಂ ತ್ಯಕ್ತ್ವಾ ಲಿಂಗಾರ್ಚನಂ ಮೂಢೋ ಮುಕ್ತ್ಯರ್ಥೀ ತ್ರಿತಯಂ ವೃಥಾ ಶ್ವಪಚೋ[s]ಪಿ ಮುನಿಶ್ರೇಷ*ಃ ಶಿವಭಕ್ತೋ ದ್ವಿಜಾಧಿಕಃ ಶಿವಭಕ್ತಿವಿಹೀನಸ್ತು ದ್ವಿಜೋ[s]ಪಿ ಶ್ವಪಚಾಧಮಃ ಸ ಲಿಂಗೀ ಸರ್ವದೈವಜ್ಞೋ ಯಸ್ಸ ಚಾಂಡಾಲವದ್ಭುವಿ ಲಿಂಗಾರ್ಚಕಸ್ತು ಶ್ವಪಚೋ ದ್ವಿಜಕೋಟ್ಯಾ ವಿಶಿಷ್ಯತೇ ಶಿವಧರ್ಮೇ, ಉಪನೀತಸಹಸ್ರೇಭ್ಯೋ ಬ್ರಹ್ಮಚಾರೀ ವಿಶಿಷ್ಯತೇ ಬ್ರಹ್ಮಚಾರಿಸಹಸ್ರೇಭ್ಯೋ ವೇದಾಧ್ಯಾಯೀ ವಿಶಿಷ್ಯತೇ ವೇದಾಧ್ಯಾಯಿಸಹಸ್ರೇಭ್ಯಸ್ಸಾಗ್ನಿಹೊತ್ರೀ ವಿಶಿಷ್ಯತೇ ಅಗ್ನಿಹೋತ್ರಿಸಹಸ್ರೇಭ್ಯೊ ಯಜ್ಞಯಾಜೀ ವಿಶಿಷ್ಯತೇ ಯಜ್ಞಯಾಜಿಸಹಸ್ರೇಭ್ಯಃ ಸತ್ರಯಾಜೀ ವಿಶಿಷ್ಯತೇ ಸತ್ರಯಾಜಿಸಹಸ್ರೇಭ್ಯಃ ಸರ್ವವಿದ್ಯಾರ್ಥಪಾರಗಃ ಸರ್ವವಿದ್ಯಾರ್ಥವಿತ್ಕೋಟ್ಯಾ ಶಿವಭಕ್ತೋ ವಿಶಿಷ್ಯತೇ ಎಂದುದಾಗಿ, ನಿಕೃಷ್ಟಾಚಾರಜನ್ಮಾನೋ ವಿರುದ್ಧಾಲೋಕವೃತ್ತಿಷು ಕೋಟಿಭ್ಯೋ ವೇದವಿದುಷಾಂ ಶ್ರೇಷಾ* ಮದ್ಭಾವಭಾವಿತಾಃ ಎಂದುದಾಗಿ, ದೇಶಾಂತರ ಸಂಹಿತೆಯಲ್ಲಿ: ಕ್ರಿಮಿಕೀಟಪತಂಗೇಭ್ಯಃ ಪಶವಃ ಪ್ರಜ್ಞಯಾಧಿಕಾಃ ಪಶುಭ್ಯೋ[s]ಪಿ ನರಾಶ್ಯ್ರೇಷಾ*ಸ್ತೇಷು ಶ್ರೇಷಾ* ದ್ವಿಜಾತಯಃ ದ್ವಿಜಾತಿಷ್ವಧಿಕಾ ವಿಪ್ರಾ ವಿಪ್ರೇಷು ಕ್ರತುಬುದ್ಧಯಃ ಕ್ರತುಬುದ್ಧಿಷು ಕರ್ತಾರಸ್ತೇಭ್ಯಃ ಸನ್ಯಾಸಿನೋಡಿಧಿಕಾಃ ತೇಭ್ಯೋ ವಿಜ್ಞಾನಿನಃ ಶ್ರೇಷಾ*ಸ್ತೇಷು ಶಂಕರಪೂಜಕಾಃ ತೇಷು ಶ್ರೇಷಾ* ಮಹಾಭಾಗಾ ಮಮ ಲಿಂಗಾಂಗಸಂಗಿನಃ ಲಿಂಗಾಂಗಸಂಗಿಷ್ವಧಿಕಃ ಷಟ್‍ಸ್ಥಲಜ್ಞಾನವಾನ್ಪುಮಾನ್ ತಸ್ಮಾದಪ್ಯಧಿಕೋ ನಾಸ್ತಿ ತ್ರಿಷು ಲೋಕೇಷು ಸರ್ವದಾ ಎಂದುದಾಗಿ, ಭೋಗಮೂರ್ತಿರ್ಮಹಾಲಿಂಗಂ ಜಂಗಮಶ್ಚ ನ ಸಂಶಯಃ ಜಂಗಮೋ ಲಿಂಗರೂಪಂ ಚ ಸತ್ಯಂ ಸತ್ಯಂ ನ ಸಂಶಯಃ ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಯತೇ ಜಂಗಮಸ್ಯಾವಮಾನೇನ ಸ್ಥಾವರಂ ನಿಷ್ಫಲಂ ಭವೇತ್ ಆಚಾರಶ್ಚ ಗುರುರ್ಲಿಂಗಂ ಜಂಗಮಶ್ಚ ಪ್ರಸಾದಕಃ ಪಂಚವಕ್ತ್ರಸಮಾಯುಕ್ತಂ ಮಹಾಲಿಂಗಸ್ಯ ಲಕ್ಷಣಂ ಜಂಗಮೋ ಲಿಂಗಮಾಚಾರೋ ಮಹಾಲಿಂಗಂ ಗುರುಸ್ತದಾ ಪಂಚವಕ್ತ್ರಸಮಾಯುಕ್ತಃ ಪ್ರಸಾದೋ ಲಿಂಗಲಕ್ಷಣಂ ಆಚಾರೋ ಗುರುಲಿಂಗಂ ಚ ಮಹಾಲಿಂಗಪ್ರಸಾದಕಂ ಪಂಚವಕ್ತ್ರಸಮಾಯುಕ್ತಂ ಸತ್ಯಂ ಜಂಗಮಲಕ್ಷಣಂ ಪ್ರಸಾದೋ ಜಂಗಮಶ್ಚೈವ ಆಚಾರೋ ಗುರುದೇವ ಚ ಮಹಾಲಿಂಗಸಮಾಯುಕ್ತಂ ಶಿವಲಿಂಗಸ್ಯ ಲಕ್ಷಣಂ ಜ್ಞಾನಾಚಾರೋ ಮಹಾಲಿಂಗಂ ಶಿವಲಿಂಗಂ ಚ ಜಂಗಮಃ ಪಂಚವಕ್ತ್ರಸಮಾಯುಕ್ತಂ ಇತ್ಯೇತೇ ಗುರುಲಕ್ಷಣಂ ಮಹಾಲಿಂಗಂ ಪ್ರಸಾದಶ್ಚ ಜಂಗಮೋ ಗುರುಲಿಂಗಕಂ ಪಂಚವಕ್ತ್ರಸಮಾಯುಕ್ತ ಆಚಾರೋ ಲಿಂಗಲಕ್ಷಣಂ ಅಂಗಮಾಚಾರಮಾಶ್ರಿತ್ಯ ಆಚಾರಃ ಪ್ರಾಣಮಾಶ್ರಿತಃ ತತ್ಪ್ರಾಣೋ ಶಿವಲಿಂಗ ಚ ತಲ್ಲಿಂಗಂ ಜಂಗಮಾಶ್ರಿತಂ ಇಂತೆಂದುದಾಗಿ, ಕ್ಷಣದಲ್ಲಿ ಅರಿ ಲಿಂಗವನು, ಕ್ಷಣಾರ್ಧದಲ್ಲಿ ಲಿಂಗವೂ ನಿನ್ನರಿವ. ಕ್ಷಣಾರ್ಧದಲ್ಲಿ ಅರಿ ಭಕ್ತಕಾಯನೆಂದು. ಪ್ರಾಣಲಿಂಗವೆಂದರಿದು ಲಿಂಗವನು ಒಂದು ಕ್ಷಣದಲ್ಲಿ ಮರೆದಡೆ ಕ್ಷಣಾರ್ಧದಲ್ಲಿ ಮರೆದಡೆ, ನಿನ್ನನೂ ಅಜ್ಞಾನಿಯ ಮಾಡಿ ಆಯಸಂ ಬಡಿಸಿ ಆಸೆಗೆ ಒಪ್ಪಿಸಿ ಘಾಸಿಮಾಡದೆ ಬಿಡನು ಲಿಂಗವು. ಕ್ಷಣಾರ್ಧದಲ್ಲಿ ಸರ್ವಪ್ರಪಂಚವೆಲ್ಲವನೂ ಮರೆದು ನಿತ್ಯವಾಗಿ ಲಿಂಗವನರಿ ಮನವೆ. ನಿರಂತರ ಲಿಂಗದಲ್ಲಿದ್ದು ಲಿಂಗವ ಹಾ[ಡೆ] ಸುಖಿಯಪ್ಪೆ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನೆ ಸಾಕ್ಷಿ.
--------------
ಉರಿಲಿಂಗಪೆದ್ದಿ
-->