ಅಥವಾ

ಒಟ್ಟು 10 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನು ವಿಭೂತಿ ಭಸಿತ ಭಸ್ಮಕ್ಷಾರ ರಕ್ಷೆ ಎಂಬ ಪಂಚ ವಿಭೂತಿ ಉತ್ಪತ್ಯವೆಂತೆಂದಡೆ : ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನವೆಂಬ ಪಂಚಮುಖದಲ್ಲಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ಉತ್ಪತ್ಯವಾಯಿತ್ತು. ಆ ಪೃಥ್ವಿಯಪ್ಪುತೇಜವಾಯುವಾಕಾಶದಿಂದಲ್ಲಿ ನಿವೃತ್ತಿ ಪ್ರತಿಷ್ಠೆ ವಿದ್ಯಾ ಶಾಂತಿ ಶಾಂತ್ಯಾತೀತಯೆಂಬ ಪಂಚಕಲೆಗಳುತ್ಪತ್ಯವಾಯಿತ್ತು. ಆ ಪಂಚಕಲೆಗಳಿಂದ ನಂದೆ ಭದ್ರೆ ಸುರಬ್ಥಿ ಸುಶೀಲೆ ಸುಮನೆಯೆಂಬ ಪಂಚಗೋವುಗಳುತ್ಪತ್ಯವಾಯಿತ್ತು. ಆ ಪಂಚಗೋವುಗಳ ಗೋಮಯದಲ್ಲಿ ವಿಭೂತಿ ಭಸಿತ ಭಸ್ಮಕ್ಷಾರ ರಕ್ಷೆಯೆಂಬ ಪಂಚವಿಭೂತಿ ಉತ್ಪತ್ಯವಾಯಿತ್ತು. ಇದಕ್ಕೆ ಜಾಬಾಲೋಪನಿಷತ್ : ``ಸದ್ಯೋಜಾತಾತ್ ಪೃಥಿವೀ ತಸ್ಯಾ ನಿವೃತ್ತಿಃ ತಸ್ಯಾಃ ಕಪಿಲವರ್ಣಾ ನಂದಾ ತಸ್ಯಾಃ ಗೋಮಯೇನ ವಿಭೂತಿರ್ಜಾತಾ || ವಾಮದೇವಾದುದಕಂ ತಸ್ಮಾತ್ ಪ್ರತಿಷ್ಠಾ ತಸ್ಯಾಃ ಕೃಷ್ಣವರ್ಣಾ ಭದ್ರಾ ತಸ್ಯಾಃ ಗೋಮಯೇನ ಭಸಿತಂ ಜಾತಂ || ಅಘೋರಾದ್ವಹ್ನಿಃ ತಸ್ಮಾತ್ ವಿದ್ಯಾ ತಸ್ಯಾಃ ರಕ್ತವರ್ಣಾ ಸುರಬ್ಥೀ ತಸ್ಯಾಃ ಗೋಮಯೇನ ಭಸ್ಮ ಜಾತಂ || ತತ್ಪುರುಷಾತ್ ವಾಯುಃ ತಸ್ಮಾತ್ ಶಾಂತಿ ಃ ತಸ್ಯಾಃ ಶ್ವೇತವರ್ಣಾ ಸುಶೀಲಾ ತಸ್ಯಾಃ ಗೋಮಯೇನ ಕ್ಷಾರಂ ಜಾತಂ || ಈಶಾನಾದಾಕಾಶಃ ತಸ್ಮಾತ್ ಶಾಂತ್ಯತೀತಾ ತಸ್ಯಾಃ ಚಿತ್ರವರ್ಣಾ ಸುಮನಾಃ ತಸ್ಯಾಃ ಗೋಮಯೇನ ರಕ್ಷಾ ಜಾತಾ ||'' ``ಐಶ್ವರ್ಯಕಾರಣಾತ್ ಭೂತಿಃ, ಭಾಸನಾತ್ ಭಸಿತಂ, ಸರ್ವಾಘಭಕ್ಷಣಾತ್ ಭಸ್ಮಂ, ಅಪದಾಂ ಕ್ಷರಣಾತ್ ಕ್ಷಾರಂ, ಭೂತಪ್ರೇತಪಿಶಾಚಬ್ರಹ್ಮರಾಕ್ಷಸಾಪಸ್ಮಾರ ಭವಬ್ಥೀತಿಭ್ಯೋsಬ್ಥಿರಕ್ಷಣಾತ್ ರಕ್ಷೇತಿ ||'' ಇಂತೆಂದುದು ಶ್ರುತಿ. ಇದಕ್ಕೆ ಕ್ರಿಯಾಸಾರೇ : ``ವಿಭೂತಿರ್ಭಸಿತಂ ಭಸ್ಮ ಕ್ಷಾರಂ ರಕ್ಷೇತಿ ಭಸ್ಮನಃ | ಭವಂತಿ ಪಂಚ ನಾಮಾನಿ ಹೇತು ರಕ್ಷಣಾದ್ರಕ್ಷೇತಿ ||'' ಇಂತೆಂದುದು ಶ್ರುತಿ. ``ಪಂಚಬ್ಥಿಃಬೃಷಂ ಐಶ್ವರ್ಯಕಾರಣಾದ್ಭೂತಿ, ಭಸ್ಮ ಸರ್ವಾಘಭಕ್ಷಣಾತ್, ಭಾಸನಾತ್ ಭಸಿತಂ, ತತ್ವಾ ಕ್ಷರಣಾತ್‍ಕ್ಷಾರಮಾಪದಂ, ಭೂತಪ್ರೇತಪಿಶಾಚೇಭ್ಯೋ ಸ್ವರ್ಗಹೇತುಭ್ಯೋಬ್ಥಿರಕ್ಷಣಾತ್ ರಕ್ಷಾ ಸ್ಯಾತ್ ಕ್ರೂರಸರ್ಪೇಭ್ಯೋ ವ್ಯಾಘ್ರಾದಿಭ್ಯಶ್ಚ ಸರ್ವದಾ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಸಚ್ಚಿದಾನಂದ ಪರಶಿವನ ಸದ್ಯೋಜಾತಮುಖದಿಂದ ಪೃಥ್ವಿತತ್ತ್ವ ಪುಟ್ಟಿತ್ತು. ಆ ತತ್ವದಿಂದೆ ನಿವೃತ್ತಿ ಎಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ಕಪಿಲವರ್ಣದ ನಂದಿನಿಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ಮಹದೈಶ್ವರ್ಯವನ್ನುಂಟುಮಾಡುವಂಥ ಭೂತಿ ಎಂಬ ವಿಭೂತಿ ಪುಟ್ಟಿತ್ತು. ಮತ್ತಂ, ಸಚ್ಚಿದಾನಂದ ಪರಶಿವನ ವಾಮದೇವಮುಖದಿಂದೆ ಅಪ್ಪುತತ್ವ ಪುಟ್ಟಿತ್ತು. ಆ ತತ್ವದಿಂದೆ ಪ್ರತಿಷೆ*ಯೆಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ಕೃಷ್ಣವರ್ಣದ ಭದ್ರೆಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ದಿವ್ಯಪ್ರಕಾಶದಿಂ ಬೆಳಗುವಂಥ ಭಸಿತವೆಂಬ ವಿಭೂತಿ ಪುಟ್ಟಿತ್ತು. ಮತ್ತಂ, ಸಚ್ಚಿದಾನಂದ ಪರಶಿವನ ಅಘೋರಮುಖದಿಂದೆ ಅಗ್ನಿತತ್ವ ಪುಟ್ಟಿತ್ತು. ಆ ತತ್ವದಿಂದೆ ವಿದ್ಯೆಯೆಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ರಕ್ತವರ್ಣದ ಸುರಭಿಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ಸಮಸ್ತ ಪಾತಕಂಗಳ ಭಕ್ಷಿಸುವಂಥ ಭಸ್ಮವೆಂಬ ವಿಭೂತಿ ಪುಟ್ಟಿತ್ತು. ಮತ್ತಂ, ಸಚ್ಚಿದಾನಂದ ಪರಶಿವನ ತತ್ಪುರುಷಮುಖದಿಂದೆ ವಾಯುತತ್ವ ಪುಟ್ಟಿತ್ತು. ಆ ತತ್ವದಿಂದೆ ಶಾಂತಿಯೆಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ಶ್ವೇತವರ್ಣದ ಸುಶೀಲೆಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ಸಕಲ ವ್ಯಾಧಿಗಳ ಕೆಡಿಸುವಂಥ ಕ್ಷಾರವೆಂಬ ವಿಭೂತಿ ಪುಟ್ಟಿತ್ತು. ಮತ್ತಂ, ಸಚ್ಚಿದಾನಂದ ಪರಶಿವನ ಈಶಾನ್ಯಮುಖದಿಂದೆ ಆಕಾಶತತ್ವ ಪುಟ್ಟಿತ್ತು. ಆ ತತ್ವದಿಂದೆ ಶಾಂತ್ಯತೀತವೆಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ಚಿತ್ರವರ್ಣದ ಸುಮನೆಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ಭೂತ ಪ್ರೇತ ಪಿಶಾಚಿ ಬ್ರಹ್ಮರಾಕ್ಷಸ ಚೋರ ಸರ್ವವ್ಯಾಘ್ರಾದಿಗಳ ಭಯವ ಕೆಡಿಸುವ ರಕ್ಷೆಯೆಂಬ ವಿಭೂತಿ ಪುಟ್ಟಿತ್ತು. ಅದೆಂತೆಂದೊಡೆ :ಜಾಬಾಲೋಪನಿಷದಿ : `` ಸದ್ಯೋಜಾತಾತ್ ಪೃಥಿವೀ ತಸ್ಯಾಃ ನಿವೃತ್ತಿಃ ತಸ್ಯಾಃ ಗೋಮಯೇನ ವಿಭೂತಿರ್ಜಾತಾ || ವಾಮದೇವಾದುದಕಂ ತಸ್ಮಾತ್ ಪ್ರತಿಷಾ* ತಸ್ಯಾಃ ಕೃಷ್ಣವರ್ಣಾ ಭದ್ರಾ ತಸ್ಯಾಃ ಗೋಮಯೇನ ಭಸಿತಂ ಜಾತಂ || ಅಘೋರಾದ್ ವಹ್ನಿಃ ತಸ್ಮಾತ್ ವಿದ್ಯಾ ತಸ್ಯಾಃ ರಕ್ತವರ್ಣಾ ಸುರಭೀ ತಸ್ಯಾಃ ಗೋಮಯೇನ ಭಸ್ಮ ಜಾತಂ|| ತತ್ಪುರುಷಾದ್ ವಾಯುಃ ತಸ್ಮಾತ್ ಶಾಂತಿಃ ತಸ್ಯಾಃ ಶ್ವೇತವರ್ಣಾ ಸುಶೀಲಾ ತಸ್ಯಾಃ ಗೋಮಯೇನ ಕ್ಷಾರಂ ಜಾತಂ|| ಈಶಾನಾದಾಕಾಶಃ ತಸ್ಮಾತ್ ಶಾಂತ್ಯತೀತಾ ತಸ್ಯಾಶ್ಚಿತ್ರವರ್ಣಾ ಸುಮನಾ ತಸ್ಯಾಃ ಗೋಮಯೇನ ರಕ್ಷಾ ಜಾತಾ||'' `` ವಿಭೂತಿರ್ಭಸಿತಂ ಭಸ್ಮ | ಕ್ಷಾರಂ ರಕ್ಷೇತಿ ಭಸ್ಮನಃ| ಭವಂತಿ ಪಂಚನಾಮಾನಿ| ಪಂಚಭಿರ್ನಾಮಭಿರ್ಭೃಶಮ್||'' `` ಐಶ್ವರ್ಯಕಾರಣಾದ್ಭೂತಿರ್ಭಾಸನಾದ್ಭಸಿತಂ ತಥಾ ಸರ್ವಾಘಭಕ್ಷಣಾದ್ಭಸ್ಮ ಆಪದಾಂ ಕ್ಷಾರಣಾತ್ ಕ್ಷಾರಂ ಭೂತ-ಪ್ರೇತ-ಪಿಶಾಚ ಬ್ರಹ್ಮರಾಕ್ಷಸಾಪಸ್ಮಾರ ಭವಭೀತಿಭ್ಯೋýಭಿರಕ್ಷಣಾತ್ ರಕ್ಷೇತಿ'' ಎಂದುದಾಗಿ, ಇಂತಪ್ಪ ಶ್ರೀ ವಿಭೂತಿಯ ನಿರಂತರ ಸಾವಧಾನಭಕ್ತಿಯಿಂದ ನಾನು ಸರ್ವಾಂಗದಲ್ಲಿ ಧರಸಿ ಶುದ್ಧನಿರ್ಮಲ ಪರಮಪವಿತ್ರ ಕಾಯನಾದೆನಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
-->