ಅಥವಾ

ಒಟ್ಟು 21 ಕಡೆಗಳಲ್ಲಿ , 13 ವಚನಕಾರರು , 20 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘಟತತ್ವ ಪೃಥ್ವಿಭೇದವಾಗಿ, ಆತ್ಮತತ್ವ ಅಪ್ಪುಭೇದವಾಗಿ, ತೇಜಸ್ತತ್ವ ಅರಿವುಭೇದವಾಗಿ, ಇಂತೀ ತ್ರಿವಿಧಭೇದ ವರ್ತುಳ ಗೋಮುಖ ಗೋಳಕಾಕಾರ ಕೂಡಿ ಲಿಂಗವಾದಲ್ಲಿ, ಈಶ್ವರತತ್ವ ವಾಯುಭೇದವಾಗಿ, ಸದಾಶಿವತತ್ವ ಆಕಾಶಭೇದವಾಗಿ, ಉಭಯ ಏಕವಾಗಿ, ಅಗ್ನಿತತ್ವ ಕೂಡಲಿಕ್ಕೆ ಆ ತ್ರಿವಿಧ ಏಕವಾಗಿ, ಅಪ್ಪುತತ್ವವ ಕೂಡಲಿಕ್ಕೆ ಆ ಚತುರ್ಭಾವ ಏಕವಾಗಿ, ಪೃಥ್ವಿತತ್ವ ಕೂಡಲಾಗಿ, ಉತ್ಪತ್ಯವೆಲ್ಲಿ ಅಡಗಿತ್ತು ? ಸ್ಥಿತಿಯೆಲ್ಲಿ ನಡೆಯಿತ್ತು ? ಲಯವೆಲ್ಲಿ ಸತ್ತಿತ್ತು ? ಲಿಂಗ ಮಧ್ಯ ಸಚರಾಚರವೆಂದಲ್ಲಿ, ಕಂಡು ಕಾಣೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಲಿಂಗಸ್ವರೂಪಕ್ಕೆ ಪಂಚಸೂತ್ರ ಲಕ್ಷಣವನರಿತು ವರ್ತುಳ ಖಂಡಿಕಾದಂಡ ಗೋಮುಖ ಗೋಳಕಾಕಾರವಪ್ಪ ಲಿಂಗಮೂರ್ತಿಯಿಂದ ಶಶಿ ರವಿ ಪವನ ಪಾವಕ ಆತ್ಮ ಮುಂತಾದ ಭೇದಂಗಳನರಿದು ಪಂಚಸೂತ್ರದಿಂದ ಪ್ರಯೋಗಿಸಿ, ಅಚೇತನವಪ್ಪ ಶಿಲೆಯ ಕುಲವಂ ಹರಿದು, ತಾ ಶುಚಿರ್ಭೂತನಾಗಿ ಆ ಇಷ್ಟಲಿಂಗವ ತನ್ನ ಕರಸ್ಥಲದಲ್ಲಿ ಮೂರ್ತಿಗೊಳಿಸಿ ತನು ಕರಗಿ ಮನ ರೆುsುೂಂಪಿಸಿ ಪುಳಕಿತದಿಂದ ಆನಂದಾಶ್ರು ಉಣ್ಮಿ ನಿಧಾನಿಸಿ ನಿಕ್ಷೇಪವ ಕಾಬವನಂತೆ ಬಯಲ ಬಂದಿವಿಡಿವವನಂತೆ ಶಿಲೆಯಲ್ಲಿ ರಸವ ಹಿಳವವನಂತೆ ರತ್ನದ ಕಳೆಯ ಗಂಟನಿಕ್ಕಿ ಕಟ್ಟಿ ತಾಹವನಂತೆ ಮುತ್ತಿನೊಳಗಡಗಿದ ಅಪ್ಪುವಿನ ವಿರಾಳದಿಂದ ಶೋದ್ಥಿಸಿ ಮುಚ್ಚಿತಾಹವನಂತೆ ಜ್ಯೋತಿಗೆ ಪ್ರತಿಹಣತೆಯಿಂದ ಆ ಬೆಳಗ ಮುಟ್ಟಿಸಿ ಕಾಹವನಂತೆ, ಇಂತೀ ನಿರವಯದ ಸುವಸ್ತುವಿನ ಪ್ರಯೋಗದಿಂದ ದಿವ್ಯಪ್ರಕಾಶನ ತನ್ನ ಕರತಳಾಮಳಕದಂತೆ ಮೂರ್ತಿಗೊಂಡಿದ್ದ ಶಿವಲಿಂಗಮೂರ್ತಿಗೆ ಧ್ಯಾನದ ಕೈಯಿಂದ ಆ ಸ್ವರೂಪಕ್ಕೆ ಮೂರ್ತಿಗೊಳಿಸಿ ಷೋಡಶಕಳೆಯಿಂದ ಉಪಚರಿಸಿ ನವಕಳಶ ಪ್ರಯತ್ನ ಪ್ರಯೋಗವ ಮಾಡಿ ಚತುರ್ವಿಧ ಆಚಾರ್ಯರ ಕೂಡಿ ಅಷ್ಟದೆಸೆಗಳಲ್ಲಿ ಕರ್ತೃಕಳಶ ನಾಲ್ಕು, ಭೃತ್ಯಕಳಶ ನಾಲ್ಕು, ಶ್ರೀಗುರುಕಳಶ ಮಧ್ಯದಲ್ಲಿ ನಾಲ್ಕು ವರ್ಣಕ್ರೀ ಮುಂತಾದ ಪ್ರಾಣಲಿಂಗವೆಂದು ಉಪೇಕ್ಷಿಸಿ ಧಾರಣವ ಮಾಡುವಲ್ಲಿ ಗುರು ನಾನೆಂಬುದ ಮರೆದು ಅಹಂಕಾರವ ತೊರೆದು ಆತ್ಮತೇಜವ ಹರಿದು ಮುಂದಣ ತ್ರಿವಿಧ ಸೇವೆಯ ತೋರಿ ಮಂತ್ರಾಬ್ಥಿಷೇಕ ತೀರ್ಥಮಂ ತಳೆದು ಶ್ರೀವಿಭೂತಿಯಲ್ಲಿ ಸರ್ವಾಂಗ ಧೂಳಿತವಂ ಮಾಡಿ ತ್ರಿಕರಣ ಶುದ್ಧವಂ ಮಾಡಿ ಕಪಾಲಕ್ಕೆ ಕರವನಿಟ್ಟಲ್ಲಿ ಪರುಷರಸ ಪಾಷಾಣ ಲೋಹದ ಮೇಲೆ ಬಿದ್ದಂತೆ ನಂಜೇರಿದಂಗೆ ಸಂಜೀವನ ಸಂದ್ಥಿಸಿದಂತೆ ಇಂತೀ ಕಪಾಲಕ್ಕೆ ಕರವನಿಟ್ಟು ಕರ್ಣಕ್ಕೆ ಮಂತ್ರವ ಹೇಳಿದಲ್ಲಿ ಹುಸಿ ಕೊಲೆ ಕುಹಕ ಪಾರದ್ವಾರ ಚೋರತ್ವ ಪಿಸುಣತನವಂಬಿಟ್ಟು ಅರುವತ್ತುನಾಲ್ಕು ಶೀಲ, ಐವತ್ತೆರಡು ನೇಮ, ಮೂವತ್ತರೊಳಗಾದ ನಿತ್ಯಕೃತ್ಯ, ಆರುಸ್ಥಲದೊಳಗಾದ ಆಚಾರ, ಇಪ್ಪತ್ತೈದರೊಳಗಾದ ತತ್ತ್ವ ಇಂತಿವರೊಳಗಾದವರಲ್ಲಿ ಸತ್ವಕ್ಕೆ ತಕ್ಕ ಸಾಮಥ್ರ್ಯದಲ್ಲಿ ನಿಶ್ಚೆ ೈಸಿ ನಡೆಯೆಂದು ಲಿಂಗಧಾರಣವ ಮಾಡುವದಿದು ಗುರುದೀಕ್ಷಾ ನಿರ್ವಾಹ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 82 ||
--------------
ದಾಸೋಹದ ಸಂಗಣ್ಣ
ತತ್ವಸೂತ್ರ ಶಕ್ತಿಸಂಬಂಧವಾಗಿಹುದು. ಜ್ಞಾನಸೂತ್ರ ಬಿಂದುಸಂಬಂಧವಾಗಿಹುದು. ಕಳಾಸೂತ್ರ ದಿವ್ಯತೇಜಃಪ್ರಕಾಶ ಸಂಬಂಧವಾಗಿಹುದು. ವರ್ತುಳ ಗೋಮುಖ ಗೋಳಕಾಕಾರದಲ್ಲಿ ಲೀಯಲ್ಪಟ್ಟುದು ಲಿಂಗಭೇದ. ಆಹ್ವಾನದಿಂದ ಆರೋಪಿಸಿ ಸ್ವಯವಾದುದು ಆ ಪರಮಾನಂದದಲ್ಲಿ ಪರವಶನಾಗದೆ ನಿಂದ ಅರಿವು ತಾನೆ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವು.
--------------
ಪ್ರಸಾದಿ ಭೋಗಣ್ಣ
ಶಿಲೆ ಸ್ಥಾವರ ಮುಂತಾದುವಕ್ಕೆ ಅಪ್ಪುವೆ ಬೀಜ. ಸಕಲ ಚೇತನಾದಿ ರೂಪುಗೊಂಡುವಕ್ಕೆ ವಸ್ತುವೆ ಬೀಜ. ಆ ವಸ್ತು ಜಗದ ಹಿತಾರ್ಥ ಪೀಠಸಂಬಂಧಿಯಾಗಿ `ಏಕಮೂರ್ತಿಸ್ತ್ರಯೋ ಭಾಗಾಃ' ಆಗಲಾಗಿ ವರ್ತುಳ ಗುರುವಾಗಿ, ಗೋಮುಖ ಜಂಗಮವಾಗಿ ಗೋಳಕಾಕಾರಮೂರ್ತಿ ಲಿಂಗವಾದ ಕಾರಣ, ಲಿಂಗವಾಯಿತ್ತು. ಇಂತೀ ತ್ರಿವಿಧದೊಳಗೆ ಒಂದ ಮೀರಿ ಒಂದ ಕಂಡೆಹೆನೆಂದಡೆ ಬೀಜವಿಲ್ಲದ ಅಂಕುರ, ಅಂಕುರವಿಲ್ಲದ ಬೀಜ. ಅಂಕುರ ಬೀಜವಿರೆ, ಅಪ್ಪು ಪೃಥ್ವಿ ಸಾಕಾರವಿಲ್ಲದಿರೆ ಅಂಕುರಕ್ಕೆ ದೃಷ್ಟವಿಲ್ಲ. ಕೂಡಲಚೆನ್ನಸಂಗಮದೇವರಿರುತಿರಲಿಕ್ಕೆ ಗುರು-ಲಿಂಗ-ಜಂಗಮವೆಂಬ ಭಾವ ಒಡಲಾಯಿತ್ತು.
--------------
ಚನ್ನಬಸವಣ್ಣ
ಲಿಂಗೋದ್ಭವ ಐವತ್ತೆರಡು ಅಕ್ಷರಂಗಳಲ್ಲಿ ವರ್ತುಳ ಗೋಮುಖ ಗೋಳಕಾಕಾರಕ್ಕೆ ಸಂಬಂಧಿಸುವಲ್ಲಿ ಅಕಾರ ವರ್ತುಳಾಕಾರಕ್ಕೆ, ಉಕಾರ ಗೋಮುಖಕ್ಕೆ ಮಕಾರ ಗೋಳಕಾಕಾರಕ್ಕೆ. ಇಂತೀ ಆದಿ ಆಧಾರ ಆತ್ಮಬೀಜ ಓಂಕಾರದಿಂದ ಉದ್ಭವವಾದ ಅಕ್ಷರಾತ್ಮಕ ವಸ್ತುವನರಿತು ಬ್ರಹ್ಮ ವರ್ತುಲದಲ್ಲಿ ಅಡಗಿ, ವಿಷ್ಣು ಗೋಮುಖದಲ್ಲಿ ನಿಂದು ರುದ್ರ ಗೋಳಕಾಕಾರಕ್ಕೆ ಸಂಬಂಧಿತನಾಗಿ ಉತ್ಪತ್ಯ ಸ್ಥಿತಿ ಲಯಂಗಳ ಲಕ್ಷಿಸುತ್ತ ಜಗಹಿತಾರ್ಥವಾಗಿ ಸ್ವಯಂಭು ಉಮಾಪತಿಯಾದೆ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವಾದೆಹೆನೆಂದು.
--------------
ಪ್ರಸಾದಿ ಭೋಗಣ್ಣ
ತ್ರಿವಿಧಲಿಂಗಕ್ಕೆ ಸೂತ್ರಭೇದ. ಸ್ಥಾವರಲಿಂಗ ಬಾಣಲಿಂಗ ಇಷ್ಟಲಿಂಗಕ್ಕೆ, ಪಂಚಸೂತ್ರದ ತ್ರಿವಿಧಲಿಂಗಕ್ಕೆ ಲಕ್ಷಣಭೇದ. ಚಕ್ರದಂಡಕ್ಕೆ ಖಂಡಿಕಾದಂಡಕ್ಕೆ ಶಕ್ತಿಪೀಠ ಗೋಮುಖಕ್ಕೆ ಪಂಚಾಂಗುಲದಲ್ಲಿ ಪ್ರಥಮಾಂಗುಲದ ರೇಖೆ ಮಧ್ಯದಲ್ಲಿ ಹೇಮ ಪ್ರಥಮ ಅಂಗುಲ ಗತಿ ನಾಲ್ಕರಲ್ಲಿ ಏಕಾದಶ ಪ್ರಕಾರ ಪ್ರಯೋಗದಲ್ಲಿ ಗುಣಿತದ ಸೂತ್ರ ಲೆಕ್ಕ ಪ್ರಯೋಗಿಸಿರೆ ಚಕ್ರದಂಡಭೇದ. ಆ ಅರೆಪ್ರಯೋಗ ಸೂತ್ರ ಖಂಡಿಕಾದಂಡ. ಆ ಉಭಯಭೇದ ಸೂತ್ರಸಂಬಂಧ ಗೋಮುಖ ಸೂತ್ರಾವಟ್ಟ ಪರಿವರ್ತನ ಪ್ರಯೋಗಸಂಬಂಧ. ವಿಸ್ತೀರ್ಣಕ್ಕೆ ದಿಗ್ವಳಯಕ್ಕೆ ಸರ[ಳ]ರೇಖೆ ಶುದ್ಧಪೀಠಿಕಾವಳಯಕ್ಕೆ ಮೇಲೆ ಲಿಂಗಪ್ರಯೋಗ ಚಕ್ರ. ಖಂಡಿಕಾಶಕ್ತಿಪೀಠಕ್ಕೆ ಲಿಂಗಪ್ರಮಾಣ ಲಕ್ಷಣಭೇದ. ಕುಬ್ಜ ದೀರ್ಘ ಹರಿವರಿಯಿಲ್ಲದೆ ಪ್ರಮಾಣ ಪಂಚಸೂತ್ರವಾಗಿ ರವಿ ಶಶಿ ಪವನ ಪಾವಕ ಪವಿತ್ರಯೋಗಿ ರೇಖೆ ಮುಂತಾದ ಲಕ್ಷಣಯುಕ್ತಿಯಲ್ಲಿ ಪ್ರತಿಷೆ* ಶೈವಲಿಂಗಭೇದ. ಆ ಪ್ರಮಾಣುವಿನಲ್ಲಿ ಸ್ಥೂಲಕ್ಕೆ ಸ್ಥೂಲ ಸೂಕ್ಷ್ಮಕ್ಕೆ ಸೂಕ್ಷ್ಮ. ಈ ಸೂತ್ರದಲ್ಲಿ ಬಾಣಲಿಂಗ ಇಷ್ಟಲಿಂಗದ ಲಕ್ಷಣಯುಕ್ತಿ. ಇಂತೀ ಭೇದ ಉತ್ತಮ ಕನಿಷ* ಮಧ್ಯಮವೆಂದು ಸಂಕಲ್ಪಕ್ಕೊಳಗಹ ವೇದಾಂತ ಪ್ರಥಮಪ್ರತಿಷೆ* ಆಚಾರ್ಯನ ಕರ್ಮಕ್ರೀ. ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವನರಿವುದಕ್ಕೆ ಆಚಾರ್ಯನಂಗ.
--------------
ಪ್ರಸಾದಿ ಭೋಗಣ್ಣ
ಗುರುಶಿಷ್ಯ ಸಂಬಂಧವೆಂದು ನುಡಿಯುತಿರ್ಪರೆಲ್ಲರು; ಗುರುಶಿಷ್ಯ ಸಂಬಂಧವನಾರೂ ಅರಿಯರಲ್ಲ ! ಗುರುಶಿಷ್ಯ ಸಂಬಂಧವೆಂತೆಂದೊಡೆ ಹೇಳಿಹೆವು ಕೇಳಿರೋ ಸದ್ಭಕ್ತ ಶರಣಜನಂಗಳೆಲ್ಲರು. ಶ್ರೀಗುರು ಶಿಷ್ಯಂಗೆ ಉಪದೇಶವ ಮಾಡುವ ಕಾಲದಲ್ಲಿ ಆ ಶಿಷ್ಯನ ಸ್ಥೂಲತನು ಸೂಕ್ಷ್ಮತನು ಕಾರಣತನುವೆಂಬ ತನುತ್ರಯಂಗಳಲ್ಲಿ ಮುಸುಕಿದ ಆಣವಮಲ ಮಾಯಾಮಲ ಕಾರ್ಮಿಕಮಲವೆಂಬ ಮಲತ್ರಯಂಗಳ ಕಳೆದು, ಮಾಯಾಪ್ರಕೃತಿಕಾಯದ ಪೂರ್ವಾಶ್ರಯವನು ಚಿದಗ್ನಿಯಿಂದೆ ಸುಟ್ಟು ಚಿತ್ಕಾಯವೆಂದೆನಿಸಿ, ಆ ಚಿತ್ಕಾಯಸ್ವರೂಪವಾದ ಶಿಷ್ಯನ ಮಸ್ತಕದ ಮೇಲೆ ಹಸ್ತವನಿರಿಸಿ ಮಥನವ ಮಾಡಿ, ಶಿಷ್ಯನ ಭಾವದ ಘಟ್ಟಿಯನೆ ಕರದಲ್ಲಿ ಕೊಡುವುದು. ಅದೆಂತೆಂದೊಡೆ : ``ಜ್ವಲತ್ಕಾಲಾನಲಾಭಾಸಾ ತಟಿತ್ಕೋಟಿ ಸಮಪ್ರಭಾ | ತಚ್ಚೋಧ್ರ್ವಂತು ಶಿಖಾ ಸೂಕ್ಷ್ಮಾ ಚಿದ್ರೂಪಾ ಪರಮಾ ಕಳಾ || ಯಥಾಕಲಾಸ್ತಥಾಭಾವೋ ಯಥಾಭಾವಸ್ತಥಾ ಮನಃ | ಯಥಾಮನಸ್ತಥಾ ದೃಷ್ಟಿಃ ಯಥಾದೃಷ್ಟಿಸ್ತಥಾ ಸ್ಥಲಂ || ಏವಂ ಭೇದಾಃ ಕಳಾದೇವಿ ಸದ್ಗುರುಶಿಷ್ಯಮಸ್ತಕೇ | ಹಸ್ತಾಬ್ಜಮಥನಗ್ರಾಹ್ಯಂ ತಸ್ಯ ಭಾವಃ ಕರೋದಿತಃ || ಏತೇ ಗುರುಕರಾಜಾಜತಾಃ ಲಿಂಗಭಕ್ತಾ ವಿಭೇದತಃ | ನಾದಬಿಂದುಕಳಾತೀತಂ ಗುರೂಣಾಂ ಲಿಂಗಮುದ್ಭವಂ ||'' -ಪರಮರಹಸ್ಯ ಎಂಬ ಶಿವಾಗಮೋಕ್ತವಾಗಿ, ಆ ಶಿಷ್ಯನ ಪಶ್ಚಿಮದಿಶೆಯಲ್ಲಿ ಬೆಳಗುತಿರ್ಪ ನಿತ್ಯನಿರಂಜನ ಪರಮಕಳೆಯ ಧ್ಯಾನಿಸಿ ಭಾವಸ್ಥಲಕ್ಕೆ ತಂದು, ಆ ಭಾವಸ್ಥಲದಿಂದೆ ಮನಸ್ಥಲಕ್ಕೆ ತಂದು, ಆ ಮನಸ್ಥಲದಿಂದೆ ದೃಷ್ಟಿಸ್ಥಲಕ್ಕೆ ತಂದು, ಆ ದೃಷ್ಟಿಸ್ಥಲದಿಂದೆ ಕರಸ್ಥಲಕ್ಕೆ ತಂದು, ಸಾಕಾರಲಿಂಗಮೂರ್ತಿಯಲ್ಲಿ ತುಂಬಿ ಇಷ್ಟಲಿಂಗವೆನಿಸಿ ಕರಸ್ಥಲದಲ್ಲಿ ಮೂರ್ತಿಗೊಳಿಸಿ ಆ ಲಿಂಗಕ್ಕೆ ಜಂಗಮದ ಪಾದತೀರ್ಥ ಪ್ರಸಾದವನೆ ಪ್ರಾಣಕಳೆಯೆಂದರ್ಪಿಸಿ, ಮತ್ತಂ, ಆ ಇಷ್ಟಲಿಂಗವೆ ಅನಿಷ್ಟಪಂಚಕಂಗಳೆಂಬ ಕತ್ತಲೆಯನೋಡಿಸುವುದಕ್ಕೆ ಚಿತ್ಸೂರ್ಯನೆಂದು ನಂಬುಗೆಯನಿಂಬುಗೊಳಿಸಿ, ಮತ್ತಮಾಲಿಂಗದಲ್ಲಿ ವೃತ್ತ ಕಟಿ ವರ್ತುಳ ಗೋಮುಖ ನಾಳ ಗೋಳಕವೆಂಬ ಆರು ಸ್ಥಾನಂಗಳ ತೋರಿ, ಆ ಆರು ಸ್ಥಾನಂಗಳಲ್ಲಿ ನಕಾರ ಮಕಾರ ಶಿಕಾರ ವಕಾರ ಯಕಾರ ಓಂಕಾರ ಎಂಬ ಆರು ಪ್ರಣವಂಗಳನೆ ಬೋಧಿಸಿ, ಆ ಆರು ಪ್ರಣವಂಗಳನೆ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಎಂಬ ಆರು ಲಿಂಗಗಳೆಂದರುಹಿ, ಆ ಆರು ಲಿಂಗಂಗಳಿಗೆ ಘ್ರಾಣ ಜಿಹ್ವೆ ನೇತ್ರ ತ್ವಕ್ಕು ಶ್ರೋತ್ರ ಹೃದಯ ಎಂಬ ಆರು ಇಂದ್ರಿಯಂಗಳನೆ ಆರು ಮುಖಗಳೆಂದು ತಿಳುಹಿ, ಆ ಆರು ಮುಖಂಗಳಿಗೆ ಗಂಧ ರುಚಿ ರೂಪು ಸ್ಪರ್ಶನ ಶಬ್ದ ತೃಪ್ತಿ ಎಂಬ ಆರು ಪದಾರ್ಥಂಗಳನು ಶ್ರದ್ಧೆ ನಿಷೆ* ಸಾವಧಾನ ಅನುಭಾವ ಆನಂದ ಸಮರಸ ಎಂಬ ಆರು ಭಕ್ತಿಗಳಿಂದರ್ಪಿಸುವ ಸಕೀಲದ ವಿವರವ ತೋರಬಲ್ಲಾತನೇ ಗುರು. ಆ ಗುರುವಿನ ಕರುಣದಿಂದೆ ಪಡೆದ ಇಷ್ಟಲಿಂಗವನು ಕರಸ್ಥಲ ಮನಸ್ಥಲ ಭಾವಸ್ಥಲಮಂಟಪದಲ್ಲಿ ಮೂರ್ತಿಗೊಳಿಸಿ, ಸಗುಣಪೂಜೆ ನಿರ್ಗುಣಪೂಜೆ ಕೇವಲ ನಿರ್ಗುಣಪೂಜೆಯ ಮಾಡಿ, ಆ ಲಿಂಗದ ಮಹಾಬೆಳಗಿನೊಳಗೆ ತನ್ನಂಗದ ಕಳೆಯನಡಗಿಸಿ, ಉರಿ-ಕರ್ಪುರ ಸಂಯೋಗದಂತೆ ಅವಿರಳ ಸಮರಸವಾಗಿರ್ಪಾತನೆ ಶಿಷ್ಯನು. ಇಂತೀ ಅರುಹು ಆಚಾರಸನ್ನಿಹಿತ ಗುರುಶಿಷ್ಯರಿಬ್ಬರು ಬಯಲು ಬಯಲ ಬೆರದಂತೆ ನಿರವಯಲ ಪರಬ್ರಹ್ಮದಲ್ಲಿ ನಿಷ್ಪತ್ತಿಯನೈದಿರ್ಪರು ನೋಡಾ ! ಇಂತೀ ಅರುಹಿನ ವಿಚಾರವನರಿಯದೆ ಮಾಡುವ ಮಾಟವೆಲ್ಲ ಅಜ್ಞಾನಗಡಣದೊಳಗು. ಈ ಅಜ್ಞಾನಗುರುಶಿಷ್ಯರ ವಿಧಿಯೆಂತಾಯಿತ್ತೆಂದಡೆ, ಹುಟ್ಟುಗುರುಡನ ಕೈಯ ಕೆಟ್ಟಗಣ್ಣವ ಹಿಡಿದು ಬಟ್ಟೆಯ ಕಾಣದೆ ಕಮರಿಯ ಬಿದ್ದು ಸತ್ತಂತಾಯಿತ್ತು ಕಾಣಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಅರಿವು ಆಚಾರವುಳ್ಳ ಸಮ್ಯಜ್ಞಾನಿಗೆ ಹೇಳುವೆನಲ್ಲದೆ, ಜಗದಲ್ಲಿ ನಡೆವ ಜಂಗುಳಿಗಳಿಗೆ ನಾ ಹೇಳುವನಲ್ಲ. ಆರುಸ್ಥಲವನರಿದ ಲಿಂಗೈಕ್ಯಂಗೆ ಅಂಗದಮೇಲಣ ಲಿಂಗ ಭಿನ್ನವಾಗಲು ಸಂದೇಹಗೊಳ್ಳಲಿಲ್ಲ, ಲಿಂಗ ಹೋಯಿತ್ತು ಎಂದು ನುಡಿಯಲಿಲ್ಲ. ವೃತ್ತ ಗೋಳಕ ಗೋಮುಖ ಈ ತ್ರಿವಿಧ ಸ್ಥಾನದಲ್ಲಿ ಭಿನ್ನವಾಗಲು ಲಿಂಗದಲ್ಲಿ ಒಡವೆರೆಯಬೇಕು. ಹೀಂಗಲ್ಲದೆ ಸಂದೇಹವೆಂದು ಘಟವ ಹೊರೆವ ಅಜ್ಞಾನಿ ಕೋಟಿಜನ್ಮದಲ್ಲಿ ಶೂರಕನಾಗಿ ಹುಟ್ಟುವ. ಸಪ್ತಜನ್ಮದಲ್ಲಿ ಕುಷ್ಟನಾಗಿ ಹುಟ್ಟುವ. ದಾಸೀ ಗರ್ಭದಲ್ಲಿ ಹುಟ್ಟಿ, ಹೊಲೆಯರ ಎಂಜಲ ತಿಂದು, ಭವಭವದಲ್ಲಿ ಬಪ್ಪುದು ತಪ್ಪದು ಕಾಣಾ, ಚೆನ್ನಬಸವಣ್ಣ ಸಾಕ್ಷಿಯಾಗಿ ಅಮುಗೇಶ್ವರಲಿಂಗವೆ.
--------------
ಅಮುಗೆ ರಾಯಮ್ಮ
ಆಚಾರಭಕ್ತ ಹನ್ನೆರಡು ಪ್ರಕಾರವನೊಳಕೊಂಡು ಆಚಾರಲಿಂಗವಾಗಿ ಲಿಂಗದ ಪೀಠದಲ್ಲಿ ಸಂಯೋಗವಾದನಯ್ಯ ಬಸವಣ್ಣ. ಗೌರವಮಾಹೇಶ್ವರ ಹನ್ನೆರಡು ಪ್ರಕಾರವನೊಳಕೊಂಡು ಗುರುಲಿಂಗವಾಗಿ ಲಿಂಗದ ಮಧ್ಯದಲ್ಲಿ ಸಂಯೋಗವಾದನಯ್ಯ ಬಸವಣ್ಣ. ಲೈಂಗಿಪ್ರಸಾದಿ ಹನ್ನೆರಡು ಪ್ರಕಾರವನೊಳಕೊಂಡು ಶಿವಲಿಂಗವಾಗಿ ಲಿಂಗದ ವರ್ತುಳದಲ್ಲಿ ಸಂಯೋಗವಾದನಯ್ಯ ಬಸವಣ್ಣ. ಚರಪ್ರಾಣಲಿಂಗಿ ಹನ್ನೆರಡು ಪ್ರಕಾರವನೊಳಕೊಂಡು ಜಂಗಮಲಿಂಗವಾಗಿ ಲಿಂಗದ ಗೋಮುಖದಲ್ಲಿ ಸಂಯೋಗವಾದನಯ್ಯ ಬಸವಣ್ಣ. ಪ್ರಸಾದಶರಣ ಹನ್ನೆರಡು ಪ್ರಕಾರವನೊಳಕೊಂಡು ಮಹಾಲಿಂಗವಾಗಿ ಲಿಂಗದ ಗೋಳಕದಲ್ಲಿ ಸಂಯೋಗವಾದನಯ್ಯ ಬಸವಣ್ಣ. ಇಂತಪ್ಪ ಬಸವಣ್ಣನೆ ಸಚ್ಚಿದಾನಂದ ಬ್ರಹ್ಮವು. ಆ ಸಚ್ಚಿದಾನಂದ ಬ್ರಹ್ಮವೆ ತನ್ನ ಲೀಲೆದೋರಿ ಒಂದು ಎರಡು ಮೂರು ಆರು ಒಂಬತ್ತು ಹದಿನೆಂಟು ಮೂವತ್ತಾರು ನೂರೊಂದು ನೂರೆಂಟು ಇನ್ನೂರಹದಿನಾರು ಮಿಗೆ ಮಿಗೆ ತೋರುವ ಬ್ರಹ್ಮವೆ ಬಸವಣ್ಣನು. ಈ ಬಸವಣ್ಣನೆ ಎನಗೆ ಇಷ್ಟಬ್ರಹ್ಮ. ಈ ಇಷ್ಟಬ್ರಹ್ಮದಲ್ಲಿ ಷೋಡಶ ದ್ವಿಶತ ಅಷ್ಟಾಶತ ಏಕಶತ ಛತ್ತೀಸ ಅಷ್ಟಾದಶ ನವ ಇಂತಿವೆಲ್ಲವು ಆರರೊಳಗಡಗಿ ಆರು ಮೂರರೊಳಗಡಗಿ ಆ ಮೂರು ಲಿಂಗದ ಗೋಳಕ ಗೋಮುಖ ವೃತ್ತಾಕಾರದಲ್ಲಿ ಅಡಗಿದ ಭೇದವನು ಸಿದ್ಧೇಶ್ವರನು ಎನಗರುಹಿದ ಕಾರಣ ದ್ವೆ ೈತಾದ್ವೆ ೈತವೆಲ್ಲವು ಸಂಹಾರವಾಗಿ ಹೋದವು. ನಾನು ದ್ವೆ ೈತಾದ್ವೆ ೈತವ ಮೀರಿ ಶುದ್ಧ ಸಿದ್ಧ ಪ್ರಸಿದ್ಧ ಪ್ರಸಾದದೊಳಗೆ ಸತ್ತು ಪರಂಜ್ಯೋತಿ ಮಹಾಲಿಂಗಗುರು ಸಿದ್ಧ[ಲಿಂಗ] ಪ್ರಭುವಿನಲ್ಲಿ ಕೆಟ್ಟು ಬಟ್ಟಬಯಲಾದೆನಯ್ಯಾ, ಬೋಳಬಸವೇಶ್ವರ ನಿಮ್ಮಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
...ತಮಾದ ತ್ರಿವಿಧ ಕುಂಭದೊಳೊಂದೊಂದು ರಾತ್ರೆಯಲ್ಲಿ ಪ್ರತ್ಯೇಕಮಾಗ ಷ್ಟೋತ್ತರಶತ ಪಂಚಾಕ್ಷರ ಮನುವಿಂದಭಿಮಂತ್ರಿಸುತ್ತವಗಾಹಮಿರಿಸಿ, ಬಳಿಕಾ ನಾಲ್ಕನೆಯ ರಾತ್ರೆಯೊಳಾ ಪಂಚಕಳಶ ಸ್ಥಾಪನಕ್ಕೆ ಉತ್ತರದಿಕ್ಕಿನಲ್ಲಿ ಭೂಮಿಯಂ ಪರಿಶುದ್ಧಿಗೆಯಷ್ಟಪದ್ಮಮಂ ತುಂಬಿ, ಬಳಿಕ ಏಳು ಮೊಳದುದ್ದದೊಂದು ನವೀನ ವಸ್ತ್ರಮಂ ತಂದಾ ಪದ್ಮದ ಮೇಲೊಂದು ಮೊಳದುದ್ದಮಂ ಮುಚ್ಚುತ್ತದರ ಮೇಲೊಂದಂಗುಲದ ದಟ್ಟದಲ್ಲಿ ಶ್ಯಾಮಮಂ ಪಸರಿಸುತ್ತಷ್ಟದಳನಳಿನಮಂ ಬರೆದು ವಸ್ತ್ರಮಂ ಭಾಷಣಿಸಿ, ಮತ್ತದರ ಮೇಲೆ ತಿಲಮಂ ಹರಹುತ್ತಷ್ಟದಳ ಕಮಲಮಂ ಲಿಖಿಸುತ್ತಾ ವಸ್ತ್ರಮಂ ಪೊದಿಸಿ, ಮತ್ತದರ ಮೇಲೆ ಗೋದುವೆಯಂ ಹರಹುತ್ತಷ್ಟದಳಕಮಲಮಂ ನಿರ್ಮಿಸುತ್ತಾ ವಸ್ತ್ರಮಂ ಕವಿಚಿ, ಮತ್ತದರ ಮೇಲೆ ವ್ರೀಹಿಯಂ ಪಸರಿಸುತ್ತಷ್ಟದಳಕಂಜಮಂ ರಚಿಸುತ್ತಾ ವಸ್ತ್ರಮಂ ಮುಸುಂಕಿ, ಮತ್ತದರ ಮೇಲೆ ತಂಡುಲಮಂ ಹರಹುತ್ತಷ್ಟದಳಕಂಜಮನಂಕಿಸುತ್ತಾ ವಸ್ತ್ರಮ ನಾವರಿಸಿ, ಮತ್ತದರ ಮೇಲೆ ಚೂತ ಬಿಲ್ವ ಆಮಳಕ ಕುಶ ಅಪಾಮಾರ್ಗವೆಂಬ ಪಂಚಪತ್ರೆಗಳಂ ವಿಸ್ತರಿಸುತ್ತಾ ವಸ್ತ್ರಮನಾಚ್ಛಾದಿಸಿ, ಹಿಂಗೇಳು ನೆಲೆಯಾದಾ ಧಾರಮಂ ಕಲ್ಪಿಸುತ್ತದರ ಮೇಲೆ ಆ ಲಿಂಗಸ್ಥಲಮಂ ಗೋಮುಖ ಉತ್ತರಭಾಗ ಮಪ್ಪಂತಿರಿಸಿ ಮೇಲೆ ಶ್ರೀಕಾರ ಪ್ರಾಣಾಯಾಮದಿಂ ಸಹಸ್ರಮೂಲಮಂತ್ರಮಂ ಜಪಿಸುತ್ತಾ ಲಿಂಗಸ್ಥಲಕ್ಕೆ ಮಾತೃಕಾನ್ಯಾಸ ಕಲಾನ್ಯಾಸ ಮಂತ್ರನ್ಯಾಸಾದಿಗಳಿಂ ಪ್ರಾಣ ಪ್ರತಿಷೆ*ಯಂ ಮಾಡಿ, ಮರಳಿ ಕಳಶೋದಕದಿಂ ಸ್ನಾನಂಗೆಯ್ದಷ್ಟ ವಿಧಾರ್ಚನೆಯಂ ಮಾಡಿಂತು ಮುನ್ನವೆ ಪರಿಶು...ವಡೆದಿರ್ದ ಲಿಂಗಸ್ಥಲವನಾ ಚಾರ್ಯಂ ತನ್ನ ವಾಮಕರಸ್ಥಲಕ್ಕೆ ಬಿಜಯಂಗೆಯ್ಸಿಕೊಂಡು, ಬಳಿಕ್ಕದರೊಳಾ ಪೂರ್ವೋಕ್ತಕ್ರಮದಿಂ ದೃಷ್ಟಿಸ್ಥಿತ ಶಿವಕಲಾ ಪ್ರತಿಷೆ*ಯಂ ಮಾಡಿ, ಮತ್ತಾ ಶಿಷ್ಯನ ``ಅಯಂ ಮೇ ಹಸ್ತೋ ಭಗವಾನೆಂಬ'' ಶ್ರುತಿಸಿದ್ಧಮಾದ ವಾಮಹಸ್ತಪೀಠ ದೊಳಾ ಶಿವಲಿಂಗಮಂ ಗೋಮುಖಭಾಗವಪ್ಪಂತೆ ಸಂಸ್ಥಾಪಿಸೂದೆ ಕ್ರಿಯಾದೀಕ್ಷೆ ಎನಿಸೂದಯ್ಯಾ ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
ಆಚಾರಭಕ್ತ ಎಪ್ಪತ್ತೆರಡು ಪ್ರಕಾರವನೊಳಕೊಂಡು ಆಚಾರಲಿಂಗವಾಗಿ ಎನ್ನ ಶ್ರದ್ಧೆಯಲ್ಲಿ ಸಂಗವಾದನಯ್ಯ ಬಸವಣ್ಣ. ಗೌರವಮಾಹೇಶ್ವರನು ಎಪ್ಪತ್ತೆರಡು ಪ್ರಕಾರವನೊಳಕೊಂಡು ಗುರುಲಿಂಗವಾಗಿ ಎನ್ನ ನೈಷೆ*ಯಲ್ಲಿ ಸಂಗವಾದನಯ್ಯ ಬಸವಣ್ಣ. ಲೈಂಗಿಪ್ರಸಾದಿ ಎಪ್ಪತ್ತೆರಡು ಪ್ರಕಾರವನೊಳಕೊಂಡು ಶಿವಲಿಂಗವಾಗಿ ಎನ್ನ ಸಾವಧಾನದಲ್ಲಿ ಸಂಗವಾದನಯ್ಯ ಬಸವಣ್ಣ. ಚರಪ್ರಾಣಲಿಂಗಿ ಎಪ್ಪತ್ತೆರಡು ಪ್ರಕಾರವನೊಳಕೊಂಡು ಜಂಗಮಲಿಂಗವಾಗಿ ಎನ್ನನುಭಾವದಲ್ಲಿ ಸಂಗವಾದನಯ್ಯ ಬಸವಣ್ಣ. ಪ್ರಸಾದಶರಣ ಎಪ್ಪತ್ತೆರಡು ಪ್ರಕಾರವನೊಳಕೊಂಡು ಪ್ರಸಾದಲಿಂಗವಾಗಿ ಎನ್ನಾನಂದದಲ್ಲಿ ಸಂಗವಾದನಯ್ಯ ಬಸವಣ್ಣ. ಮಹಾಘನಐಕ್ಯ ಎಪ್ಪತ್ತೆರಡು ಪ್ರಕಾರವನೊಳಕೊಂಡು ಮಹಾಲಿಂಗವಾಗಿ ಎನ್ನ ಸಮರಸದಲ್ಲಿ ಸಂಗವಾದನಯ್ಯ ಬಸವಣ್ಣ. ಆಚಾರ ಗೌರವ ಶ್ರದ್ಧೆ ನೈಷ್ಟೆ ಲಿಂಗದ ಪೀಠ. ಲೈಂಗಿ ಸಾವಧಾನ ಲಿಂಗದ ಮಧ್ಯಚರ. ಅನುಭಾವ ಲಿಂಗದ ಗೋಮುಖ. ಪ್ರಸಾದ ಆನಂದ ಲಿಂಗದ ವರ್ತುಳ. ಮಹಾಘನ ಸಮರಸಲಿಂಗದ ಗೋಳಕ. ಇಂತೀ ನಾನಾ ಪ್ರಕಾರವ ಸಿದ್ಧೇಶ್ವರ ಇಷ್ಟಲಿಂಗದಲ್ಲಿ ಅರುಹಿದನಾಗಿ ತತ್ವಮಸಿ ವಾಕ್ಯವೆಲ್ಲವೂ ನುಗ್ಗುನುಸಿಯಾಗಿ ಹೋದವು. ಸಚ್ಚಿದಾನಂದಬ್ರಹ್ಮ ತಾನಾಗಿ ಪರಂಜ್ಯೋತಿ ಮಹಾಲಿಂಗಗುರು ಸಿದ್ಧಲಿಂಗಪ್ರಭುವಿನಲ್ಲಿ ನಾನು ಕೆಟ್ಟು ಬಟ್ಟಬಯಲಾಗಿ ಹೋದೆನಯ್ಯ ಬೋಳಬಸವೇಶ್ವರ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಸದ್ಗುರುಸ್ವಾಮಿ ಕೃಪೆ ಮಾಡಿ ಕೊಟ್ಟ ಪಂಚಾಕ್ಷರ ಷಡಾಕ್ಷರ ಏಕಾಕ್ಷರವೆ ಎನಗೆ ಇಷ್ಟ ಪ್ರಾಣ ಭಾವ. ಇಷ್ಟವೆ ಬಸವಣ್ಣ. ಪ್ರಾಣವೆ ಚೆನ್ನಬಸವಣ್ಣ. ಭಾವವೆ ಪ್ರಭುದೇವರು. ಅದು ಹೇಗೆಂದಡೆ: ಸಾಕಾರ ಮೂರು ಮೂವತ್ತೊಂದು ಪ್ರಕಾರವನೊಳಕೊಂಡು ಎನ್ನ ಕಾಯದಲ್ಲಿ ಸಂಗವಾದನಯ್ಯ ಚೆನ್ನಬಸವಣ್ಣ. ನಿರಾಕಾರ ಮೂರು ಹದಿಮೂರು ಪ್ರಕಾರವನೊಳಕೊಂಡು ಎನ್ನ ಪ್ರಾಣದಲ್ಲಿ ಸಂಗವಾದನಯ್ಯ ಚೆನ್ನಬಸವಣ್ಣ. ನಿಃಕಲ ನಿರವಯ ಚಿದದ್ವಯ ಜಂಗಮವೆ ಎನ್ನ ಇಂದ್ರಿಯಂಗಳಲ್ಲಿ ಸಂಗವಾದನಯ್ಯ ಪ್ರಭುದೇವರು. ಅದು ಹೇಗೆಂದಡೆ: ಅಂಗ ಪ್ರಾಣ ಇಂದ್ರಿಯಂಗಳೆ ಗುರು ಲಿಂಗ ಜಂಗಮ. ಆ ಗುರು ಲಿಂಗ ಜಂಗಮವೆ ಗೋಳಕ ಗೋಮುಖ ವೃತ್ತಾಕಾರ. ಅದು ಹೇಗೆಂದಡೆ: ಗುರುಲಿಂಗ ತ್ರಿವಿಧವನೊಳಕೊಂಡು ಎನ್ನ ಅಂಗದಲ್ಲಿ ಸಂಗವಾದನಯ್ಯ ಬಸವಣ್ಣ ಶಿವಲಿಂಗ ತ್ರಿವಿಧವನೊಳಕೊಂಡು ಎನ್ನ ಪ್ರಾಣದಲ್ಲಿ ಸಂಗವಾದನಯ್ಯ ಚೆನ್ನಬಸವಣ್ಣ. ಜಂಗಮಲಿಂಗ ತ್ರಿವಿಧವನೊಳಕೊಂಡು ಎನ್ನ ಇಂದ್ರಿಯಂಗಳಲ್ಲಿ ಸಂಗವಾದನಯ್ಯ ಪ್ರಭುದೇವರು. ಆಗಮಲಿಂಗ ತ್ರಿವಿಧವನೊಳಕೊಂಡು ಎನ್ನ ಪ್ರಾಣದಲ್ಲಿ ಸಂಗವಾದನಯ್ಯ ಚೆನ್ನಬಸವಣ್ಣ. ಕಾಯಲಿಂಗ ತ್ರಿವಿಧವನೊಳಕೊಂಡು ಎನ್ನ ಅಂಗದಲ್ಲಿ ಸಂಗವಾದನಯ್ಯ ಬಸವಣ್ಣ. ಆಚಾರಲಿಂಗ ತ್ರಿವಿಧವನೊಳಕೊಂಡು ಎನ್ನ ಇಂದ್ರಿಯಂಗಳಲ್ಲಿ ಸಂಗವಾದನಯ್ಯ ಪ್ರಭುದೇವರು. ಅನುಗ್ರಹಲಿಂಗ ತ್ರಿವಿಧವನೊಳಕೊಂಡು ಎನ್ನ ಅಂಗದಲ್ಲಿ ಸಂಗವಾದನಯ್ಯ ಬಸವಣ್ಣ. ಅರ್ಪಿತಲಿಂಗ ತ್ರಿವಿಧವನೊಳಕೊಂಡು ಎನ್ನ ಪ್ರಾಣದಲ್ಲಿ ಸಂಗವಾದನಯ್ಯ ಚೆನ್ನಬಸವಣ್ಣ. ತನುಗುಣಲಿಂಗ ತ್ರಿವಿಧವನೊಳಕೊಂಡು ಎನ್ನ ಇಂದ್ರಿಯಂಗಳಲ್ಲಿ ಸಂಗವಾದನಯ್ಯ ಪ್ರಭುದೇವರು. ಒಲವುಲಿಂಗ ತ್ರಿವಿಧವನೊಳಕೊಂಡು ಎನ್ನ ಪ್ರಾಣದಲ್ಲಿ ಸಂಗವಾದನಯ್ಯ ಚೆನ್ನಬಸವಣ್ಣ. ನಿರೂಪುಲಿಂಗ ತ್ರಿವಿಧವನೊಳಕೊಂಡು ಎನ್ನ ಪ್ರಾಣದಲ್ಲಿ ಸಂಗವಾದನಯ್ಯ ಚೆನ್ನಬಸವಣ್ಣ. ಪ್ರಸಾದಲಿಂಗ ತ್ರಿವಿಧವನೊಳಕೊಂಡು ಎನ್ನ ಇಂದ್ರಿಯಂಗಳಲ್ಲಿ ಸಂಗವಾದನಯ್ಯ ಪ್ರಭುದೇವರು. ಪಾದೋದಕಲಿಂಗ ತ್ರಿವಿಧವನೊಳಕೊಂಡು ಎನ್ನ ಪ್ರಾಣದಲ್ಲಿ ಸಂಗವಾದನಯ್ಯ ಚೆನ್ನಬಸವಣ್ಣ. ನಿಃಪತಿಲಿಂಗ ತ್ರಿವಿಧವನೊಳಕೊಂಡು ಎನ್ನ ಅಂಗದಲ್ಲಿ ಸಂಗವಾದನಯ್ಯ ಬಸವಣ್ಣ. ಆಕಾಶಲಿಂಗ ತ್ರಿವಿಧವನೊಳಕೊಂಡು ಎನ್ನ ಇಂದ್ರಿಯಂಗಳಲ್ಲಿ ಸಂಗವಾದನಯ್ಯ ಪ್ರಭುದೇವರು. ಪ್ರಕಾಶಲಿಂಗ ತ್ರಿವಿಧವನೊಳಕೊಂಡು ಎನ್ನ ಇಂದ್ರಿಯಂಗಳಲ್ಲಿ ಸಂಗವಾದನಯ್ಯ ಪ್ರಭುದೇವರು. ಕೊಂಡುದು ಪ್ರಸಾದ, ನಿಂದುದೋಗರ, ಚರಾಚರ ನಾಸ್ತಿ ಎಂಬ ತ್ರಿವಿಧವನೊಳಕೊಂಡು ಎನ್ನ ಪ್ರಾಣದಲ್ಲಿ ಸಂಗವಾದನಯ್ಯ ಚೆನ್ನಬಸವಣ್ಣ. ಭಾಂಡ ಭಾಜನ ಅಂಗಲೇಪನವೆಂಬ ತ್ರಿವಿಧವನೊಳಕೊಂಡು ಎನ್ನ ಅಂಗದಲ್ಲಿ ಸಂಗವಾದನಯ್ಯ ಬಸವಣ್ಣ. ಈ ಗುರು ಲಿಂಗ ಜಂಗಮದೇಕಾರ್ಥ ಸಚ್ಚಿದಾನಂದ ಬ್ರಹ್ಮವು ಆ ಸಚ್ಚಿದಾನಂದ ಪಿಂಡ ಬ್ರಹ್ಮಾಂಡದೊಳಹೊರಗೆ ಪರಿಪೂರ್ಣವಾಗಿ ತೋರುವ ಭೇದವನು ಬೋಳಬಸವೇಶ್ವರನು ಎನ್ನ ಅಂತರಂಗ ಬಹಿರಂಗ ಎಡಬಲ ಹಿಂದು ಮುಂದು ಅಡಿ ಆಕಾಶ ತತ್ಪರಿಪೂರ್ಣ ಸಮರಸೈಕ್ಯ ಏಕಾರ್ಥವ ಮಾಡಿಕೊಟ್ಟ ಕಾರಣ ಪರಂಜ್ಯೋತಿ ಮಹಾಲಿಂಗಗುರು ಸಿದ್ಧಲಿಂಗಪ್ರಭುವಿನಲ್ಲಿ ವಾಯುವನಪ್ಪಿದ ಪರಿಮಳದಂತೆ ಅಂಬುಧಿಯೊಳಗೆ ಬಿದ್ದ ವಾರಿಕಲ್ಲಿನಂತೆ ಉರಿಯುಂಡ ಕರ್ಪೂರದಂತಾದೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ವೇದ ಶಾಸ್ತ್ರ ಪುರಾಣಗಳಿಂದ ಅರಿದೆವೆಂಬ ಷಟ್‍ಸ್ಥಲಜ್ಞಾನಿಗಳು ನೀವು ಕೇಳಿರಣ್ಣಾ. ನೀವು ಅರಿವ ಪರಿಯೆಂತುಟು ಹೇಳಿರಣ್ಣಾ. ನಿಮ್ಮಸಂದೇಹ ನಿಮ್ಮ ನಿಮ್ಮ ತಿಂದು ತೇಗುಗು. ನಿಮ್ಮ ಸಂಕಲ್ಪ ನಿಮ್ಮ ಕೊಂದು ಕೂಗುಗು. ಅರಿವು ಸಂಬಂಧಿಗಳಿಂದ ಅರಿದೆವೆಂಬಿರಿ. ಹೇಳುವ ಗುರು ಸಂದೇಹಿ, ಕೇಳುವ ಶಿಷ್ಯ ಸಂದೇಹಿ, ಎನ್ನ ಅರಿವು ಬೇರೆ, ನಿಮ್ಮಾಚಾರ ಬೇರೆಯಾಗಿಪ್ಪುದು. ನೀವೆನಗೆ ಕರ್ತರಾದ ಕಾರಣ ನಾ ನಿಮಗೆ ತೆತ್ತಿಗನಾದ ಕಾರಣ ನಿಮ್ಮ ಸಂದೇಹ ಸಂಕಲ್ಪ ನಿವೃತ್ತಿಯ ಮಾಡುವನು ಕೇಳಿರಣ್ಣಾ. ಶ್ರೀಗುರುಸ್ವಾಮಿ ಕರುಣಿಸಿಕೊಟ್ಟ ಇಷ್ಟಲಿಂಗವು ಆ ಲಿಂಗದ ವೃತ್ತ ಗೋಳಕ ಗೋಮುಖ ಇಂತೀ ತ್ರಿವಿಧಸ್ಥಾನಂಗಳಲ್ಲಿ ಭಿನ್ನವಾಗಲು ಲಿಂಗಧ್ಯಾನದಲ್ಲಿ ನಿಂದು ಲಿಂಗೈಕ್ಯರ ಸಂಗದಲ್ಲಿ ಅಂಗವ ಬಯಲ ಮಾಡುವರು.|| ಸಾಕ್ಷಿ || ಸರ್ವಾಂಗಲಿಂಗದೇಹಸ್ಯ ಲಿಂಗಭಿನ್ನ ವಿವರ್ಜಯೇತ್| ತದ್ದೇಹ ಪರಿತ್ಯಾಗಃ ಮದ್ಭಕ್ತಸ್ಯ ಸುಲಕ್ಷಣಂ|| ಇಂತೆಂದುದಾಗಿ, ಇದಕ್ಕೆ ಸಂದೇಹಬೇಡ. ಇನ್ನೊಂದು ಪರಿಯನ್ನು ಹೇಳಿಹೆನು ಕೇಳಿರಣ್ಣಾ. ಅಖಂಡ ಪರಿಪೂರ್ಣಲಿಂಗವ ಶ್ರೀಗುರು ಕೈಯಲ್ಲಿ ಕೊಟ್ಟರೆ ಶಕ್ತಿ ಸಂಪುಟದಿಂದ ಉತ್ಕøಷ್ಟಮುಖದೆ ಅಂಗವ ಬಯಲುಮಾಡಬೇಕು. ಇನ್ನೊಂದು ಪರಿಯನ್ನು ಹೇಳಿಹೆನು ಕೇಳಿರಣ್ಣಾ. ವೃತ್ತಗೋ[ಳಕ] ಗೋಮುಖಂಗಳಲ್ಲಿ ಮಂತ್ರಯುಕ್ತವಾಗಿ ಮಾಯಾಬಂಧಗಳಿಂದ ಬಂಧಿಸಿ ಅಖಂಡ ಲಿಂಗವೆಂದು ಕರಸ್ಥಲಕ್ಕೆ ಕೊಟ್ಟನಯ್ಯಾ ಶ್ರೀಗುರು. ಶಕ್ತಿ ಸಂಪುಟದಿಂದ ಉತ್ಕøಷ್ಟವಾಯಿತ್ತೆಂದು ಸಂದೇಹವ ಮಾಡುವ ಸ್ವಾಮಿದ್ರೋಹಿಗಳ ಮುಖವನೋಡಲಾಗದು. ಇದಕ್ಕೆ ಸಂದೇಹವಿಲ್ಲ. ಅದೆಂತೆಂದಡೆ: ವಿಯೋಗಾಚ್ಚಿವಶಕ್ತಿಶ್ಚನ ಶಂಕಾ ವೀರಶೈವಾನಾಂ| ಮನೋಬಂಧಂ ತಥಾ ಕುರ್ಯಾತ್ ಲಿಂಗ ಧಾರಯೇತ್ಸುಧೀಃ|| ಇಂತೆಂದುದಾಗಿ, ಮನೋರ್ಬಂಧಂಗಳಿಂದ ಬಂಧಿಸಿ ಆ ಲಿಂಗವನೆ ಧರಿಸೂದು. ಭಕ್ತನಾದಡೂ, ಮಾಹೇಶ್ವರನಾದಡೂ, ಪ್ರಸಾದಿಯಾದಡೂ, ಪ್ರಾಣಲಿಂಗಿಯಾದಡೂ, ಶರಣನಾದಡೂ, ಐಕ್ಯನಾದಡೂ ಸಂದೇಹವಿಲ್ಲದೆ ಆ ಲಿಂಗವನು ಧರಿಸೂದು. ಹಿಂಗಲ್ಲದೆ ಸಂದೇಹವುಂಟೆಂಬವರೆಲ್ಲರು ಗುರುದ್ರೋಹಿಗಳು ಲಿಂಗದ್ರೋಹಿಗಳು ಜಂಗಮ ದ್ರೋಹಿಗಳು ಪಾದೋದಕ ದ್ರೋಹಿಗಳು ಪ್ರಸಾದದ್ರೋಹಿಗಳು ಇಂತಿವರಲ್ಲಿ ಚಿಕ್ಕಯ್ಯಪ್ರಿಯ ಸಿದ್ಧಲಿಂಗವು ಸ್ವಪ್ನದಲ್ಲಿಯೂ ಸುಳಿಯನು.
--------------
ಘಟ್ಟಿವಾಳಯ್ಯ
ಇನ್ನು ಲಿಂಗಕ್ಕೆ ಪ್ರಸಾದ ಅರ್ಪಿಸುವ ಕ್ರಮವು. ಓಂ ಬಸವಲಿಂಗಾಯ ನಮಃ ಹ್ರಾಂ ಹ್ರೀಂ ಸದ್ಯೋಜಾತ, ವಾಮದೇವ ಶುದ್ಧಪ್ರಸಾದ, ಆಚಾರಲಿಂಗ, ಗುರುಲಿಂಗ, ಇಷ್ಟಲಿಂಗಕ್ಕೆ ರೂಪು ಅರ್ಪಿತ. ಓಂ ಬಸವಲಿಂಗಾಯ ನಮಃ ಹ್ರಾಂ ಹ್ರೈಂ ಅಘೋರ, ತತ್ಪುರುಷ, ಸಿದ್ಧಪ್ರಸಾದ, ಶಿವಲಿಂಗ, ಜಂಗಮಲಿಂಗ, ಪ್ರಾಣಲಿಂಗಕ್ಕೆ ರುಚಿ ಅರ್ಪಿತ. ಓಂ ಬಸವಲಿಂಗಾಯ ನಮಃ ಹ್ರೌಂ ಹ್ರಃ ಈಶಾನ್ಯ ಗೋಮುಖ, ಪ್ರಸಿದ್ಧಪ್ರಸಾದ, ಪ್ರಸಾದಲಿಂಗ, ಮಹಾಲಿಂಗ, ಭಾವಲಿಂಗಕ್ಕೆ ತೃಪ್ತಿ ಅರ್ಪಿತ. ಈ ಕ್ರಮವ ಅರಿದಾತ ಬಲ್ಲನಲ್ಲದೆ ಅಂಗಭೋಗಿಗಳೆತ್ತ ಬಲ್ಲರು ನಮ್ಮ ಶಾಂತಕೂಡಲಸಂಗಮದೇವಾ.
--------------
ಗಣದಾಸಿ ವೀರಣ್ಣ
ಪ್ರಥಮದಲ್ಲಿ ನಾಮ ರೂಪು ಕ್ರೀ ಏನೂ ಏನೂ ಇಲ್ಲದ ಮಹಾಘನ ಶೂನ್ಯಬ್ರಹ್ಮವು. ಆ ಶೂನ್ಯಬ್ರಹ್ಮದಿಂದ ಶುದ್ಧ ಪ್ರಣವ. ಆ ಶುದ್ಧ ಪ್ರಣವಧಿಂದ ಚಿತ್ತು ಭಾವದಕ್ಷರ. ಆ ಚಿತ್ತು ಭಾವದಕ್ಷರದಿಂದ ಪರಶಕ್ತಿ. ಆ ಪರಾಶಕ್ತಿಯಿಂದ ಅಕ್ಷರತ್ರಯಂಗಳು. ಆ ಅಕ್ಷರತ್ರಯಂಗಳಿಂದ ಓಂಕಾರ. ಆ ಓಂಕಾರವೆ ಬಸವಣ್ಣನು. ಆ ಬಸವಣ್ಣನೆ ಎನ್ನ ವದನಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಬಲದ ಭುಜಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಎಡದ ಭುಜಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದೇಹಮಧ್ಯಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ ಎನ್ನ ಬಲದ ತೊಡೆಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಎಡದ ತೊಡೆಗೆ ಯಕಾರಾವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ಥೂಲತನುವಿಂಗೆ ಉಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸೂಕ್ಷ ್ಮತನುವಿಂಗೆ ಮಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕಾರಣತನುವಿಂಗೆ ಆಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಯತಕ್ಕೆ ಬಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ವಾಯತಕ್ಕೆ ಸಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸನ್ನಿಹಿತಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕ್ರೀಗೆ ಅವಾಚ್ಯ ಸ್ವರೂಪಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಕ್ಕೆ ಮಹಾಶೂನ್ಯ ಸ್ವರೂಪನಾಗಿ ಬಂದನಯ್ಯ ಬಸವಣ್ಣ. ಎನ್ನ ರುಧಿರಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಾಂಸಕ್ಕೆ ಮಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮೇದಸ್ಸಿಂಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಸ್ಥಿಗೆ ವಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಜ್ಜೆಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ತ್ವಗಮಯಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದೇಹಭಾವ ಕೊಂದಹೆನೆಂದು ಬಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಹೊನ್ನು ಹೆಣ್ಣು ಮಣ್ಣೆಂಬ ಸಕಲಾಸೆಯ ಕೊಂದಹೆನೆಂದು ಸಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಇಂದ್ರಿಯ ವಿಷಯಂಗಳ ಕೊಂದಹೆನೆಂದು ವಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನಾದಕ್ಕೆ ಆಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಬಿಂದುವಿಂಗೆ ಉಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕಳೆಗೆ ಮಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಾಣಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಿಶ್ವಂಗೆ ಇಷ್ಟಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ತೈಜಸಿಂಗೆ ಪ್ರಾಣಲಿಂಗವಾಗಿ ಬಂದನಯ್ಯ ಬಸವಣ್ಣ ಎನ್ನ ಪ್ರಜ್ಞೆಗೆ ತೃಪ್ತಿಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಸತ್ವಕ್ಕೆ ಶುದ್ಧಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನ್ನ ರಜಕ್ಕೆ ಸಿದ್ಧಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನ್ನ ತಮಕ್ಕೆ ಪ್ರಸಿದ್ಧಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನಗೆ ಬಕಾರವೆ ಗುರುವಾಗಿ ಬಂದನಯ್ಯ ಬಸವಣ್ಣ. ಎನಗೆ ಸಕಾರವೆ ಲಿಂಗವಾಗಿ ಬಂದನಯ್ಯ ಬಸವಣ್ಣ. ಎನಗೆ ವಕಾರವೆ ಜಂಗಮವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ಥೂಲತನುವಿಂಗೆ ಇಷ್ಟಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಸೂಕ್ಷ ್ಮತನುವಿಂಗೆ ಪ್ರಾಣಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಕಾರಣತನುವಿಂಗೆ ಭಾವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಶಿವ ಕ್ಷೇತ್ರಜ್ಞ ಕರ್ತಾರ ಭಾವ ಚೈತನ್ಯ ಅಂತರ್ಯಾಮಿಯೆಂಬ ಷಡುಮೂರ್ತಿಗಳಿಗೆ ನಕಾರ ಮಃಕಾರ ಶಿಕಾರ ವಾಕಾರ ಯಕಾರ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಚಿತ್ತಕ್ಕೆ ಆಚಾರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಬುದ್ಧಿಗೆ ಗುರುಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅಹಂಕಾರಕ್ಕೆ ಶಿವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಮನಸ್ಸಿಂಗೆ ಜಂಗಮಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಕ್ಕೆ ಪ್ರಸಾದಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಭಾವಕ್ಕೆ ಮಹಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಬ್ರಹ್ಮತತ್ವಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಿಷ್ಣುತತ್ವಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ರುದ್ರತತ್ವಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಈಶ್ವರತತ್ವಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸದಾಶಿವತತ್ವಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಹಾಶ್ರೀಗುರುತತ್ವಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪೃಥ್ವಿಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಪ್ಪುವಿಂಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಗ್ನಿತತ್ವಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಾಯುವಿಂಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಕಾಶಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆತ್ಮಂಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಾಣವಾಯುವಿಂಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಪಾನವಾಯುವಿಂಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವ್ಯಾನವಾಯುವಿಂಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಉದಾನವಾಯುವಿಂಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸಮಾನವಾಯುವಿಂಗೆ ಯಕಾರವಾಗಿ ಬಂದನಯ್ಯ ಬಸವಣ್ಣ ಎನ್ನ ಪಂಚವಾಯುವಿಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಧಾರಚಕ್ರಕ್ಕೆ ಆಚಾರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ವಾಧಿಷಾ*ನಚಕ್ರಕ್ಕೆ ಗುರುಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಮಣಿಪೂರಚಕ್ರಕ್ಕೆ ಶಿವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅನಾಹತಚಕ್ರಕ್ಕೆ ಜಂಗಮಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ವಿಶುದ್ಧಿಚಕ್ರಕ್ಕೆ ಪ್ರಸಾದಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಆಜ್ಞಾಚಕ್ರಕ್ಕೆ ಮಹಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಚತುರ್ದಳಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷಡುದಳಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಾದಶದಳಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷೋಡಶದಳಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಿದಳಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಚತುರಾಕ್ಷರಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷಡಾಕ್ಷರಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದಶಾಕ್ಷರಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಾದಶಾಕ್ಷರಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷೋಡಶಾಕ್ಷರಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಿಯಾಕ್ಷರಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಮ. ಎನ್ನ ಕೆಂಪುವರ್ಣಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನೀಲವರ್ಣಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕುಂಕುಮವರ್ಣಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪೀತವರ್ಣಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಶ್ವೇತವರ್ಣಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಾಣಿಕ್ಯವರ್ಣಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ರಾಗ್ರಾವಸ್ಥೆಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ವಪ್ನಾವಸ್ಥೆಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸುಷುಪ್ತಾವಸ್ಥೆಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ತೂರ್ಯಾವಸ್ಥೆಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅತೀತಾವಸ್ತೆಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನಿರಾವಸ್ಥೆಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಂತಃಕರಣಂಗಳಿಗೆ ಚತುರ್ವಿಧ ಬಿಂದು ಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅರಿಷಡ್ವರ್ಗಂಗಳಿಗೆ ಷಡ್ವಿಧಧಾತು ಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ದಶವಾಯುಗಳಿಗೆ ದಶವಿದ ಕ್ಷೇತ್ರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಾದಶೇಂದ್ರಿಯಂಗಳಿಗೆ ದ್ವಾದಶ ವಿಕೃತಿಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಷೋಡಶಕಲೆಗೆ ಷೋಡಶಕಲಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅಹಂಕಾರ ಮಮಕಾರಗಳಿಗೆ ವಿದ್ಯಾಲಿಂಗವಾಗಿ ಬಂದನಯ್ಯಬಸವಣ್ಣ. ಎನ್ನ ಭಕ್ತಿಸ್ಥಲಕ್ಕೆ ಆಚಾರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಮಾಹೇಶ್ವರಸ್ಥಲಕ್ಕೆ ಗುರುಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಸಾದಿಸ್ಥಲಕ್ಕೆ ಶಿವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಾಣಲಿಂಗಿಸ್ಥಳಕ್ಕೆ ಜಂಗಮಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಶರಣಸ್ಥಲಕ್ಕೆ ಪ್ರಸಾದಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಐಕ್ಯಸ್ಥಲಕ್ಕೆ ಮಹಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಚಿತ್ತಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಬುದ್ಧಿಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಹಂಕಾರಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮನಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಭಾವಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕ್ರಿಯಾಶಕ್ತಿಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಶಕ್ತಿಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಇಚ್ಛಾಶಕ್ತಿಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆದಿಶಕ್ತಿಗೆ ವಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪರಶಕ್ತಿಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಚಿತ್ಶಕ್ತಿಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಶ್ರದ್ಧೆಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನಿಷೆ*ಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅವಧಾನಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅನುಭಾವಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆನಂದಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸಮರಸಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಶಬ್ದಕ್ಕೆ ಗುರುವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ಪರುಶನಕ್ಕೆ ಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ರೂಪಿಂಗೆ ಶಿವಲಾಂಛನವಾಗಿ ಬಂದನಯ್ಯ ಬಸವಣ್ಣ. ಎನ್ನ ರಸಕ್ಕೆ ಶಿವಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನ್ನ ಗಂಧಕ್ಕೆ ಶಿವಾನುಭಾವವಾಗಿ ಬಂದನಯ್ಯ ಬಸವಣ್ಣ ಎನ್ನ ನಾಸಿಕಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜಿಹ್ವೆಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನೇತ್ರಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ತ್ವಕ್ಕಿಂಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಶ್ರೋತ್ರಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಹೃದಯಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಾಕ್ಕಿಂಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪಾಣಿಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪಾದಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಗುಹ್ಯಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪಾಯುವಿಂಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಇಂತೀ ಪಂಚೇಂದ್ರಿಯಂಗಳೆ ಪಂಚಮಹಾಯಜ್ಞ. ಆ ಪಂಚಮಹಾಯಜ್ಞದಲ್ಲಿ ಎನ್ನ ಮನ ಹಾರೈಸಿ ಪೂರೈಸಿ ಒಲಿದು ಕೇಳಿತ್ತು ಮುಟ್ಟಿತ್ತು ನೋಡಿತ್ತು ರುಚಿಸಿತ್ತು ವಾಸಿಸಿತ್ತು. ಎನ್ನ ಮಾನಸ ವಾಚಕ ಕಾಯಕ ಕರಣಂಗಳೆಲ್ಲವು ಪಂಚಮಹಾಯಜ್ಞ ಸೋಂಕಿ ಪಂಚಮಹಾಯಜ್ಞವಪ್ಪುದು ತಪ್ಪದು. ಅದೆಂತೆಂದಡೆ- ಮಹಾಜ್ಯೋತಿಯ ಸೋಂಕಿದ ಉತ್ತಮ ಅಧಮ ತೃಣ ಮೊದಲಾದವೆಲ್ಲವು ಮಹಾ ಅಗ್ನಿಯ ಸೋಂಕಿ ಮಹಾ ಅಗ್ನಿಯಪ್ಪುದು ತಪ್ಪದು. ಇಂತಪ್ಪ ಮಹಾಯಜ್ಞವನೊಳಕೊಂಡಿಪ್ಪ ಮೂಲಾಗ್ನಿಯೇ ಬಸವಣ್ಣ. ಆ ಬಸವಣ್ಣನೆ ಗುರು ಲಿಂಗ ಜಂಗಮ ಪ್ರಸಾದ ಪಾದೋದಕ ವಿಭೂತಿ ರುದ್ರಾಕ್ಷಿ ಪಂಚಾಕ್ಷರಿಯೇ ಚಿದ್ಬ ್ರಹ್ಮ. ಆ ಚಿದ್ಬ ್ರಹ್ಮವೇ ಬಸವಣ್ಣ. ಆ ಬಸವಣ್ಣನೇ ಎನಗೆ ಅಷ್ಟಾವರಣ ಸ್ವರೂಪನಾದ ಸಚ್ಚಿದಾನಂದ ಬಸವಣ್ಣ. ನಿತ್ಯಪರಿಪೂರ್ಣ ಬಸವಣ್ಣ. ಅಖಂಡಾದ್ವಯ ಬಸವಣ್ಣ. ನಿರಂಜನ ಬಸವಣ್ಣ. ನಿರ್ಮಾಯ ಬಸವಣ್ಣ, ನಿರಾಚರಣ ಬಸವಣ್ಣ. ನಿರ್ಜನಿತ ಬಸವಣ್ಣ. ನಿರ್ಲೇಪ ಬಸವಣ್ಣ. ನಿಃಕಪಟಿ ಬಸವಣ್ಣ. ಅಸಾಧ್ಯ ಸಾಧಕ ಬಸವಣ್ಣ. ಅಭೇದ್ಯ ಭೇದಕ ಬಸವಣ್ಣ. ಚಿತ್ಪ್ರಕಾಶ ಬಸವಣ್ಣ. ಇಂತಪ್ಪ ಬಸವಣ್ಣನ ಅಂಗವೆ ಚಿದಾಕಾಶ. ಆ ಚಿದಾಕಾಶದ ಮಧ್ಯದಲ್ಲಿ ಚಿತ್ಪ್ರಾಣವಾಯು. ಆ ಚಿತ್ಪ್ರಾಣವಾಯುವಿನ ಮಧ್ಯದಲ್ಲಿ ಚಿದಾಗ್ನಿ. ಆ ಚಿದಾಗ್ನಿಯ ಮಧ್ಯದಲ್ಲಿ ಚಿಜ್ಜಲ. ಆ ಚಿಜ್ಜಲದ ಮಧ್ಯದಲ್ಲಿ ಚಿದ್ಭೂಮಿ. ಆ ಚಿದ್ಭೂಮಿಯ ಮಧ್ಯದಲ್ಲಿ ಹೃದಯ. ಆ ಹೃದಯದ ಮಧ್ಯದಲ್ಲಿ ಆಕಾರ ಉಕಾರ ಮಕಾರ ಪ್ರಣಮಪೀಠ. ಆ ಪ್ರಣವಪೀಠದ ಮಧ್ಯದಲ್ಲಿ ಜಂಗಮ ಆ ಜಂಗಮವ ಮಕುಟದಲ್ಲಿ ಶೂನ್ಯಲಿಂಗ. ಆ ಶೂನ್ಯಲಿಂಗದಲ್ಲಿ ಚಿದಂಬರ, ಆ ಚಿದಂಬರರಲ್ಲಿ ಶಿವಶಕ್ತಿ. ಆ ಶಿವಶಕ್ತಿಯಲ್ಲಿ ಪಂಚಶಕ್ತಿ. ಆ ಪಂಚಶಕ್ತಿಯಲ್ಲಿ ಪಂಚನಾದ. ಆ ಪಂಚನಾದದಲ್ಲಿ ಪಂಚಸಾದಾಖ್ಯ. ಆ ಪಂಚಸಾದಾಖ್ಯದಲ್ಲಿ ಈಶ್ವರ. ಆ ಈಶ್ವರನಲ್ಲಿ ಮಾಹೇಶ್ವರ. ಆ ಮಾಹೇಶ್ವರನಲ್ಲಿ ರುದ್ರ. ಆ ರುದ್ರನಲ್ಲಿ ತ್ರಯವಯ ಹಿರಣ್ಯಗರ್ಭ ವಿರಾಟ್‍ಮೂರ್ತಿ. ಇಂತೀ ಎಂಬತ್ತುಮೂರು ಮೂರ್ತಿಗಳೊಳಗೆ ಎಂಬತ್ತೆರಡೆ ಬಸವಣ್ಣನಂಗವೊಂದೆ ಪ್ರಾಣ. ಆ ಪ್ರಾಣ ಚೈತನ್ಯ ಶೂನ್ಯವೆ ಗೋಳಕ ಗೋಮುಖ ವೃತ್ತಾಕಾರವಾಗಿ ಕರಸ್ಥಲದಲ್ಲಿ ಪಿಡಿದು ಆ ಲಿಂಗದ ಆದಿಪ್ರಣಮವೆ ಪೀಠ, ಆಕಾರವೆ ಕಂಠ, ಉಕಾರವೆ ಗೋಮುಖ, ಮಕಾರವೆ ವರ್ತುಳ, ನಾಳ ಬಿಂದು ಮಹಾತೇಜ. ನಾದವೆ ಅಖಂಡಲಿಂಗ. ಇಂತಪ್ಪ ಬಸವಣ್ಣನ ನಿತ್ಯತ್ವವೆ ಲಿಂಗ; ಪೂರ್ಣತ್ವವೆ ಗುರು. ಚಿತ್ಪ್ರಕಾಶವೆ ಜಂಗಮ. ಆನಂದವೆ ಪ್ರಸಾದ, ಚಿದ್ರಸದ ಪ್ರವಾಹವೆ ಪಾದತೀರ್ಥ. ಇಂತಪ್ಪ ಬಸವಣ್ಣ ಅನಂತಕೋಟಿ ಬ್ರಹ್ಮಾಂಡಗಳ ರೋಮಕೂಪದಲ್ಲಿ ಸಂಕಲ್ಪಿಸಿ ಅಲ್ಲಿದ್ದಾತ್ಮಂಗೆ ಸುಜ್ಞಾನ ಕ್ರೀಯನಿತ್ತು ತದ್ ಭೃತ್ಯ ಕರ್ತೃ ತಾನಾಗಿ ಇಷ್ಟಾರ್ಥಸಿದ್ಧಿಯನೀವುತಿಪ್ಪ ಬಸವಣ್ಣನ ಭೃತ್ಯರ ಭೃತ್ಯರ ತದ್‍ಭೃತ್ಯನಾಗಿರಿಸಿ ಬಸವಣ್ಣನ ಪಡುಗ ಪಾದರಕ್ಷೆಯ ಹಿಡಿವ ಭಾಗ್ಯವಯೆನಗೀವುದಯ್ಯ, ಪರಂಜ್ಯೋತಿ ಮಹಾಲಿಂಗಗುರು ಸಿದ್ಧಲಿಂಗಪ್ರಭುವಿನಲ್ಲಿ ಬಸವಣ್ಣನ ಅರುಹಿಕೊಟ್ಟ ಸಿದ್ಧೇಶ್ವರನ ಶ್ರೀಪಾದಪದ್ಮದಲ್ಲಿ ಭೃಂಗನಾಗಿರ್ದೆನಯ್ಯಾ, ಬೋಳಬಸವೇಶ್ವರ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಇನ್ನಷ್ಟು ... -->