ಅಥವಾ

ಒಟ್ಟು 10 ಕಡೆಗಳಲ್ಲಿ , 7 ವಚನಕಾರರು , 10 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ತೆಯುಂ ಕ ಮಹಾಕಾಳಿ ಖ ಸರಸ್ವತಿ ಗ ಗೌರಿ ಘ ಮಂತ್ರಶಕ್ತಿ ಙ ಆತ್ಮಶಕ್ತಿ ಚ ಭೂತಮಾತೆ ಛ ಲಂಬೋದರಿ ಜ ದ್ರಾವಿಣಿ ರುsು ನಗರಿ ಞ ಖೇಚರಿ ಟ ಮಂಜರಿ ಠ ರೂಪಿಣಿ ಇಂತಿ ಮಹಾಲಿಂಗದ ಶಕ್ತಿಯೂಧ್ರ್ವಾಬ್ವಾಖ್ಯದನಾಹತಚಕ್ರದ ದ್ವಾದಶಕೋಷ್ಠದಳ ನ್ಯಸ್ತ ದ್ವಾದಶರುದ್ರಶಕ್ತಿಯರಂ ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ,.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಗುರು ಸಮಾಧಿಯ ಸಮ ತನ್ನ ಸಮಾಧಿಯ ಮಾಡಲಂದು, ವೀರವಿಕ್ರಮಚೋಳನ ದೇಹ ಬಯಗೆ ಬಾಯಿದೆರೆದು ಬರಲಿಲ್ಲವೆ? ಗುರು ಸಮಾಧಿಯ ಮುಂದೆ ತನ್ನ ಸಮಾಧಿಯ ಮಾಡಲಂದು, ರಾಜೇಂದ್ರಚೋಳನ ದೇಹ ಎದ್ದು ನಮಿಸಿ ಸಮಾಧಿಯ ಹೋಗಲಿಲ್ಲವೆ? ಇದರ ಕೀಲ ಪ್ರಮಥರು ಅರಿಯರೆ? ಇದರಂದವ ಗೌರಿ ನಾಗಾಯಿ ಅರಿಯಳೆ? ಇದರ ಕೀಲ ಕಪಿಲಸಿದ್ಧಮಲ್ಲಿಕಾರ್ಜುನ ಶರಣನ ರಾಣಿ ನೀಲಾಂಬಿಕೆಯರಿಯಳೆ ಸೊಡ್ಡಯ್ಯಾ?
--------------
ಸಿದ್ಧರಾಮೇಶ್ವರ
ಕಾಳಿಕಾದೇವಿ, ಚಾಮುಂಡಿ, ಗಂಗೆ ಗೌರಿ, ಬನಶಂಕರಿ, ಎಲ್ಲಿ, ಏಕಲಾತಿ, ಹುಲಗಿ, ಹೊಸೂರಿ, ಸತ್ತವರು, ಹೆತ್ತವರು ಇಂತೀ ಹಲವು ಪಿಶಾಚಿಗಳ ಹೆಸರಿಂದ ಇದಿರಿಟ್ಟು ಆರಾಧಿಸಿ, ಅದರ ನೈವೇದ್ಯವೆಂದು ಶ್ರೀಗುರುವಿತ್ತ ಲಿಂಗಕ್ಕೆ ತೋರಿ ಭುಂಜಿಸುವ ಶಿವದ್ರೋಹಿಗೆ ಗುರುವಿಲ್ಲ, ಲಿಂಗವಿಲ್ಲ, ಜಂಗಮವಿಲ್ಲ, ಪಾದೋದಕವಿಲ್ಲ, ಪ್ರಸಾದವಿಲ್ಲ ಕಾಣಾ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ದೃಷ್ಟಿ ಕಷ್ಟವ ಮುಟ್ಟುವಲ್ಲಿ ಮೂವರ ಸಂಚವಿಲ್ಲಾಗಿ ಅಟ್ಟಿ ಹರಿದು ಹರಿಯ ಹಿಮ್ಮಡಿಯ ಹಿಡಿದುಕೊಂಡು ಬಿಟ್ಟೆನು. ಕಟ್ಟಿಯಾಳಿದ ರುದ್ರನೆಂಬನ, ಗೌರಿ ಸರಸ್ವತಿ ಲಕ್ಷ್ಮಿಯ ಹೋಗೆಂದೆ, ಬ್ರಹ್ಮನ ಕಳುಹಿದೆ. ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂದೆ.
--------------
ಘಟ್ಟಿವಾಳಯ್ಯ
ಆದಿಯನಾದಿ ಆಚಾರವ ಕಾಣದೆ, ಸಮಮಾನದ ಲಿಂಗದ ಘನವ ತಿಳಿಯದೆ, ದಾಸಿಯ ಸಂಗಂಗೆಯ್ವ ಜಂಗಮಾಚಾರ್ಯಜ್ಞಾನಪುರುಷರು ಚಿತ್ತೈಸಿ, ಶೈವಾರಾದನೆಯ ಸ್ಥಲದಂತೆ ನಡೆದು, ಗಳಹಿಕೊಂಡು ಇಪ್ಪಿರಿ. ಅಂಗದನಿತ ದಾಸೆಗೆ, ಪಂತಿಯ ಗಡಣದ ಹಸುವಿನಾಸೆಗೆ, ಕಾಂಚಾಣದ ಪಂತಿಯಾಸೆಗೆ, ಸ್ಥಲ ಜಂಗಮಸ್ಥಲವಾಸಿಯ ಗಡಣದಾಸೆಗೆ, ಪಂತಿ ಪಾದಾರ್ಚನೆಯ ಹಿರಿಯತನದ ಗಡಣ ಗಮಕದಾಸೆಗೆ, ಕೃತಿಯ ದ್ವೆ ೈತವ ನಟಿಸುವ ಪಂಚಮಹಾಪಾತಕದೇವರ ದೇವತ್ವದ ಬಲ್ಲರು ಕೇಳಿರಣ್ಣ. ನಾ ದೇವತಾದೇವನೆಂಬುದೊಂದು ಸಮದೇವತ್ವದ ಗಳಹುವಿರಿ. ಅಂಗದಲ್ಲಿ ಸೋವಿ ಮಾತ್ರವೆಂಬ ಸ್ತ್ರೀಯ ಆಲಿಂಗನಂಗೈದು ಗಳಹುವಿರಿ. ಶ್ರುತಿಃ ಅರ್ಧವಣಿ ಕಥಃ ಸೋವಿ ವಚಃ ಬಾದಿನಿ ಪರ್ವಣಃ | ಪಾಪಿಷ್ಟಾ ದುಷ್ಟದ್ರೋಹಿ ಚಾ ಪಾಪಿಷ್ಟ ಗುರುದ್ರೋಹಿ ಚಾ | ಗುರುಶಿವಚ್ಚೇದನ ತತ್ ಗುರುಷಾಮಾ ಚಿ ಅಪಹಿನ್ | ಗುರುಬಂಧನ ಗ್ರಾಹಿ ಚಃ | ಇಂತೆಂದುದಾಗಿ, ಸೋವಿಮಾತ್ರವೆಂದು ವಾಗದ್ವೈತವನುಂಟುಮಾಡಿ ಕಂಡು, ತಮ್ಮ ಸ್ವಯ ಇಚ್ಛೆಯ ಭಾವಕ್ಕೆ ಗಳಹಿಕೊಂಡು, ಹಿರಿಯರ ಮರೆಯಲ್ಲಿ ಕುಳಿತು, ಒಡಲ ಹೊರೆವ ಶೂಕರನಂತೆ, ತುಡುಗುಣಿತನಕ್ಕೆ ಗಡಣಿಸಿಕೊಂಡು ಹಿರಿಯರೆಂಬಿರಿ. ಶಿವಾಚಾರ ಃ ಗಿರಿಜಾನಾಥಂಗೆ ಗೌರಿ ತ್ರಿವಿಧವಿಧಮೇಕಾರ್ಥಕಲ್ಯಾಣ, ಗಿರಿಜಾಧಾರಿಯಲ್ಲಿ ಶಿವನ ದೇವತ್ವ ಕೆಟ್ಟಿತ್ತೆ ಪಾತಕರಿರಾ? ಸೋವಿಯ ಆಲಿಂಗನಂಗೈದು, ಚುಂಬನ ಕರ ಉರ ಜಘನ ಯೋನಿಚಕ್ರವ ಕೂಡಿ ನೆರೆದ ಬಳಿಕ, ಪ್ರಾತಃಕಾಲದಲ್ಲಿ ಹನ್ನೆರಡು ಜಂಗಮದೇವರಿಗೆ ಹನ್ನೆರಡು ಸುವರ್ಣಗಾಣಿಕೆಯನಿಕ್ಕಿ, ಹನ್ನೆರಡು ದ್ವಿವಸ್ತ್ರ, ಹನ್ನೆರಡು ತೆಂಗಿನಕಾಯಿಂದ ಹನ್ನೆರಡು ಜಂಗಮದೇವರಿಗೆ ಈ ಪರಿಯಾರ್ಥ ಅರ್ಚನೆಯ ಮಾಡಿದರೆ, ನವಭೋಗದೊಳಗಣ ತ್ರಿವಿಧ ಭಾಗೆಯ ಕಲೆಯಿರಣ್ಣ. ಅರಿದು ಮಾಡಿ ಮರದಂತೆ, ಬೆಬ್ಬನೆ ಬೆರೆತುಕೊಂಡಿರುವಾತ ಹಿರಿಯನಲ್ಲ. ಆತ ಗುರುವಲ್ಲ ಲಿಂಗವಲ್ಲ ಜಂಗಮವಲ್ಲ ಪಾದೋದಕ ಪ್ರಸಾದದೊಳಗಲ್ಲ. ಅವ ಅಮೇಧ್ಯ ಸುರ ಭುಂಜಕನು. ಇಂತೆಂಬ ಶ್ರುತಿಯ ಮೀರಿ ಆಚರಿಸುವ, ಬ್ರಹ್ಮರಾಕ್ಷಸ. ನವಕೋಟಿ ಯೋನಿಚಕ್ರದಲ್ಲಿ ರಾಟಾಳದ ಘಟದಂತೆ ತಿರುಗುವನು. ಆದಿಯ ವಚನದ ಸಮ್ಮತವಿದು, ಸೋವಿಯ ಸಂಗ ಆಲಿಂಗನಂಗೈವಿರಿ. ಸೋವಿಯ ಸಂಗ ಆಲಿಂಗನಂಗೈದವ, ಶತಕೋಟಿ ಶೂಕರಯೋನಿಯಲ್ಲಿ ಬಪ್ಪನು. ನವಕೋಟಿ ಗಾರ್ಧಭಯೋನಿಯಲ್ಲಿ ಬಪ್ಪನು. ಶತಕೋಟಿ ಕುಕ್ಕುಟಯೋನಿಯಲ್ಲಿ ಬಪ್ಪನು. ಸಚರಾಚರಯೋನಿ ಯೋನಿನವಕೋಟಿ ತಪ್ಪದು. ಅವಂಗೆ ಜನ್ಮ ಜನ್ಮಾಂತರದಲ್ಲಿ ಬಪ್ಪುದು ತಪ್ಪದು. ಇಂತಿದನರಿದು ಮರೆದೆಡೆ, ದೇವ ಮತ್ರ್ಯ ತಪರ್ಲೋಕಕ್ಕೆ ಸಲ್ಲಸಲ್ಲ, ಅಲ್ಲ ನಿಲ್ಲು, ಮಾಣು, ಹೊರಗಯ್ಯ. ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಹೊಯ್ಯೋ ಡಂಗುರವ, ದೇವರಾಯ ಸೊಡ್ಡಳಾ.
--------------
ಸೊಡ್ಡಳ ಬಾಚರಸ
ಆದಿ ಅನಾದಿಯೆಂಬ (ಯೆಂಬುದ?) ಅಂತರಾತ್ಮನಲ್ಲಿ ತಿಳಿಯಲರಿಯದೆ ಆದಿ ದೈವವೆಂದು ಬರಿಯ ಬಹಿರಂಗದ ಬಳಕೆಯನೆ ಬಳಸಿ, ಅನ್ಯ ದೈವಂಗಳನಾರಾಧಿಸಿ ಕೆಡುತ್ತಿಪ್ಪರು ನೋಡಾ. ಅದಕೆ ತಪ್ಪೇನು, ಮಕ್ಕಳಿಗೆ ತಮ್ಮ ಮಾತೆಯೇ ದೈವ. ಮಾತೆಗೆ ತನ್ನ ಪುರುಷನೆ ದೈವ, ಪುರುಷಂಗೆ ತನ್ನ ಪ್ರಭುವೆ ದೈವ. ಪ್ರಭುವಿಗೆ ತನ್ನ ಪ್ರಧಾನನೆ ದೈವ, ಪ್ರಧಾನಂಗೆ ತನ್ನ ರಾಯನೆ ದೈವ. ರಾಯಂಗೆ ತನ್ನ ಲಕ್ಷ್ಮಿಯೆ ದೈವ, ಲಕ್ಷ್ಮಿಗೆ ತನ್ನ ವಿಷ್ಣುವೆ ದೈವ. ವಿಷ್ಣುವಿಗೆ ತನ್ನ ರುದ್ರನೆ ದೈವ, ಆ ರುದ್ರಂಗೆ ತನ್ನ ಈಶ್ವರನೆ ದೈವ. ಈಶ್ವರಂಗೆ ತನ್ನ ಸದಾಶಿವನೆ ದೈವ, ಸದಾಶಿವಂಗೆ ತನ್ನ ಸರ್ವಗತ ಶಿವನೆ ದೈವ. ಸರ್ವಗತ ಶಿವನಿಗೆ ಆಕಾಶಮಹಿಪತಿಯೆಂಬ ಮಹಾಲಿಂಗಕ್ಕೆ ಆದಿ ದೇವರುಳ್ಳಡೆ ಹೇಳಿರೆ, ಇಲ್ಲದಿರ್ದಡೆ ಸುಮ್ಮನೆ ಇರಿರೆ. ಇದು ಕಾರಣ ಷಡುದರುಶನದ ಚರಾಚರಾದಿಗಳೆಲ್ಲರೂ ತಮ ತಮಗಿಷ್ಟ ಕಾಮ್ಯವ ಕೊಡುವುದಕ್ಕೆ ವರವುಳ್ಳ ದೇವರೆಂದು ಬೆರವುತ್ತಿಹರು. ಅದಕ್ಕೆ ತಪ್ಪೇನು ಅವರಿಗಪ್ಪಂಥ, ವರವೀವುದಕ್ಕೆ ಸತ್ಯವುಳ್ಳವನಹುದು. ಆದಡೇನು, ಪ್ರಾಣಕ್ಕೆ ಪರಿಣಾಮವ ಕೊಡಲರಿಯವು. ಅವರ ಕೈಯಲ್ಲಿ ಆರಾಧಿಸಿಕೊಂಬ ದೈವಂಗಳೆಲ್ಲವು. ಪೃಥ್ವಿ ಅಪ್ಪು ತೇಜ ವಾಯು ಆಕಾಶ ಮನವೆಂಬಾರರ ಹಂಗಿನಲ್ಲಿ ಸಿಕ್ಕಿ, ವಿಭೂತಿಯನ್ನಿಟ್ಟು, ರುದ್ರಾಕ್ಷೆಯಂ ತೊಟ್ಟು ಜಪತಪ ಹೋಮ ನೇಮಂಗಳ ಮಾಡಿ ಮಾರಣ ಮೋಹನ ಸ್ತಂಭನ ಉಚ್ಚಾಟನ ಅಂಜನ ಸಿದ್ಧಿ, ಘುಟಿಕಾ ಸಿದ್ಧಿ, ಮಂತ್ರಸಿದ್ಧಿ, ದೂರದೃಷ್ಟಿ ದೂರ ಶ್ರವಣ, ಕಮಲದರ್ಶನ, ತ್ರಿಕಾಲಜ್ಞಾನ, ಪರಕಾಯಪ್ರವೇಶವೆಂಬ ಅಷ್ಟಮಹಾಸಿದ್ಧಿಗಳಂ ಲಿಂಗದಲ್ಲಿ ವರಂಬಡೆದು ತಮ್ಮ ಬೇಡಿದವರಿಗೆ ಕೊಟ್ಟು ತಮ್ಮಿಂದ ಹಿರಿಯರಿಗೆ ನಮಸ್ಕರಿಸಿ, ತಮ್ಮಿಂದ ಕಿರಿಯರಿಗೆ ದೇವರೆಂದು ಬೆರವುತ್ತಿಹರು. ಕಿರಿದುದಿನ ಅವರ ದೇವರೆನ್ನಬಹುದೆ ? ದೇಹಕೇಡಿಗಳ ಸತ್ಯರೆಂದೆನಬಹುದೆ ? ಅಸತ್ಯದಲ್ಲಿ ಅಳಿದವರ ಭಕ್ತರೆಂದೆನಬಹುದೆ ? ಬಹುರೂಪಿನ ಕಪಟಿಗಳ ನಿತ್ಯರೆನಬಹುದೆ ? ದಿನದಿನಕ್ಕೆ ಸತ್ತು ಸತ್ತು ಹುಟ್ಟುವವರ. ಅದೆಂತೆಂದಡೆ: ಬ್ರಹ್ಮನ ಜಾವವೊಂದಕ್ಕೆ ಒಬ್ಬ ಇಂದ್ರನಳಿವ ವಿಷ್ಣುವಿನ ಜಾವವೊಂದಕ್ಕೆ ಒಬ್ಬ ಬ್ರಹ್ಮನಳಿವ ರುದ್ರನ ಜಾವವೊಂದಕ್ಕೆ ಒಬ್ಬ ವಿಷ್ಣುವಳಿವ ಈಶ್ವರನ ಜಾವವೊಂದಕ್ಕೆ ಒಬ್ಬ ರುದ್ರನಳಿವ ಸದಾಶಿವನ ಜಾವವೊಂದಕ್ಕೆ ಒಬ್ಬ ಈಶ್ವರನಳಿವ ಸರ್ವಗತನ ಜಾವವೊಂದಕ್ಕೆ ಒಬ್ಬ ಸದಾಶಿವನಳಿವ ಲಿಂಗ ಶರಣರ ಒಂದು ನಿಮಿಷಕ್ಕೆ ಒಬ್ಬ ಸರ್ವಗತನಳಿವ ಲಿಂಗ ಶರಣರಿಗೆ ಅಳಿವುಳ್ಳಡೆ ಹೇಳಿರೆ ? ಇಲ್ಲದಿರ್ದಡೆ ಸುಮ್ಮನಿರಿರೆ. ಅಂತಪ್ಪ ಮಹಾಲಿಂಗವನು ಶರಣರನು ಅರಿಯದೆ ಷಡುದೇವತೆಗಳು ಮುಖ್ಯವಾದ ಮನು ಮುನಿ ದೇವ ದಾನವ ಮಾನವರೆಲ್ಲರೂ ಆರಿಸಿ ತೊಳಲಿ ಬಳಲುತ್ತಿಪ್ಪರು. ಅದು ಹೇಗೆಂದಡೆ: ಬ್ರಹ್ಮವೇದದಲ್ಲರಸುವನು. ವಿಷ್ಣು ಪೂಜೆಯಲ್ಲರಸುವನು. ರುದ್ರ ಜಪದಲ್ಲರಸುವನು. ಈಶ್ವರ ನಿತ್ಯನೇಮದಲ್ಲರಸುವನು. ಸದಾಶಿವನು ನಿತ್ಯ ಉಪಚಾರದಲ್ಲರಸುವನು. ಸರ್ವಗತ ಶೂನ್ಯದಲ್ಲರಸುವನು. ಗೌರಿ ತಪದಲ್ಲರಸುವಳು, ಗಂಗೆ ಉಗ್ರದಲ್ಲರಸುವಳು. ಚಂದ್ರ ಸೂರ್ಯರು ಹರಿದರಸುವರು. ಇಂದ್ರ ಮೊದಲಾದಷ್ಟದಿಕ್ಪಾಲಕರು ಆಗಮ್ಯದಲ್ಲರಸುವರು ಸಪ್ತ ಮಾತೃಕೆಯರು `ಓಂ ಪಟು ಸ್ವಾಹಾ' ಎಂಬ ಮಂತ್ರದಲ್ಲರಸುವರು. ಸತ್ಯಋಷಿ ದಧೀಚಿ ಗೌತಮ ವಶಿಷ* ವಾಲ್ಮೀಕಿ ಅಗಸ್ತ್ಯ ವಿಶ್ವಾಮಿತ್ರ ಇವರು ಮೊದಲಾದ ಸಪ್ತಋಷಿಯರುಗಳೆಲ್ಲಾ ತಪ, ಯೋಗ, ಆಗಮಂಗಳಲ್ಲಿ ಅರಸುವರು. ಇಂತಿವರೆಲ್ಲರಿಗೆಯೂ ಸಿಕ್ಕಿಯೂ ಸಿಕ್ಕದ ಘನವು ಶುಕ್ಲ ಶೋಣಿತವಿಲ್ಲದ ಕಾಮಿ, ಒಡಲಿಲ್ಲದ ರೂಪು, ತಲೆಯಿಲ್ಲದ ಗಜ, ಬಾಲವಿಲ್ಲದ ಸಿಂಹ, ನಿದ್ರೆಯಿಲ್ಲದ ನಿರಾಳ. ಇಂತೀ ಭೇದಮಂ ಭೇದಿಸಿ ನೋಡಬಲ್ಲಡೆ ಕಣ್ಣ ಮೇಲೆ ಕಣ್ಣುಂಟು. ಮತ್ತಾ ಕಣ್ಣ ತೆರೆದು ಅಮೃತಕಾಯದೃಷ್ಟಿಯಲ್ಲಿ ನೋಡಿದಡೊಂದೂಯಿಲ್ಲ. ನಮ್ಮ ಗುಹೇಶ್ವರ ಲಿಂಗವು ಬಚ್ಚಬರಿಯ ಬಯಲು ನಿಶ್ಚಿಂತ ನಿರಾಳನು
--------------
ಅಲ್ಲಮಪ್ರಭುದೇವರು
ಅಯ್ಯ ಎತ್ತಿದ (ಇಕ್ಕಿದ?) ಮಣಿ ಮುಕುಟದ ಮೇಲೆ ಸುತ್ತಿದ ನಾಗಭೂಷಣದ ಪಡೆಯೊಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಇಕ್ಕಿದ ಕರೋಟಿಮಾಲೆಯೊಳಗಿಪ್ಪ ರುದ್ರರು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಇಕ್ಕಿದ ರುಂಡಮಾಲೆಯೊಳಗಿಪ್ಪ ಮುಂಡಧಾರಿಗಳು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಉಟ್ಟ ಗಜಚರ್ಮದೊಳಗಿಪ್ಪ ಋಷಿಗಳು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಖಟ್ವಾಂಗದೊಳಗಿಪ್ಪ ಮನುಮುನಿಗಳು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಗಂಗೆ ಗೌರಿ ಭೃಂಗಿ ಮೊದಲಾಗಿ ಶಿವನಿಪ್ಪ ನೆಲೆಯನರಿಯರು, ಗುಹೇಶ್ವರ ನಿಮ್ಮ ಶರಣ ಸಂಗನಬಸವಣ್ಣ ಬಲ
--------------
ಅಲ್ಲಮಪ್ರಭುದೇವರು
ಮಂಡೆ ಮರ..............ಹರಿದು ಹೊರಳಿದಡೆ, ದಂಡೆಯ ಕಟ್ಟಿದ ಗಂಡ ನಗೆಗೆಡೆಯಾದಡೆ, ಗೌರಿ ರಂಡೆ ಕಾಣಾ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಕಾಳಿಕಾದೇವಿ ಚಾಮುಂಡಿ ಗೌರಿ ಬನದ ಶಂಕರಿ. ಇಂತೀ ನಾಲ್ಕು ಶಕ್ತಿಯರು ಮೊದಲಾದ ಹಲವು ಶಕ್ತಿದೈವಂಗಳನಾರಾಧಿಸಿ, ಅವರೆಂಜಲ ಭುಂಜಿಸುವವರಿಗೆ ಗುರುವಿಲ್ಲ, ಗುರುಪ್ರಸಾದವಿಲ್ಲ. ಲಿಂಗವಿಲ್ಲ, ಲಿಂಗಪ್ರಸಾದವಿಲ್ಲ. ಜಂಗಮವಿಲ್ಲ, ಜಂಗಮಪ್ರಸಾದವಿಲ್ಲ. ಇಂತಪ್ಪ ಪಾತಕರಿಗೆ ಸೂರ್ಯಚಂದ್ರರುಳ್ಳನಕ್ಕ ಇಪ್ಪತ್ತೆಂಟುಕೋಟಿ ನಾಯಕನರಕ ತಪ್ಪದು. ಆ ನರಕ ತೀರಿದ ಬಳಿಕ, ಶ್ವಾನ ಸೂಕರ ಯೋನಿಯಲ್ಲಿ ಬಪ್ಪುದು ತಪ್ಪುದು. ಆ ಜನ್ಮ ತೀರಿದ ಬಳಿಕ, ರುದ್ರಪ್ರಳಯ ಪರಿಯಂತರ ನರಕ ತಪ್ಪದೆಂದ, ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಅಯ್ಯ ! ನಿರಾಳ ನಿಃಶೂನ್ಯ ಪರಮ ಭಕ್ತ_ಜಂಗಮ ತಾನಾಗಲರಿಯದೆ ಬರಿದೆ ಅಹಂಕರಿಸಿ ಮುಂದುಗೊಂಡು ಮೂರು ಮಲಗಳ ಸ್ವೀಕರಿಸಿ, ನಾವೆ ಭಕ್ತ_ಜಂಗಮವೆಂದು ನುಡಿವ ಕರ್ಮಕಾಂಡಿಗಳು ಕಾಶಿ, ಕೇತಾರ, ಶ್ರೀಶೈಲ, ಗಯಾ, ಪ್ರಯಾಗ, ಶಿವಗಂಗೆ, ಕಂಚಿ, ಕಾಳಹಸ್ತಿ, ಪಂಪಾಕ್ಷೇತ್ರ, ವೀರಣ್ಣ, ಬಸವಣ್ಣ, ಕಲ್ಲಣ್ಣ, ಮಲ್ಲಣ್ಣ, ಕಂಥೆ, ಕಮಂಡಲ, ಗದ್ದಿಗೆ, ಪಾವುಗೆ, ಭಸ್ಮ, ಘಂಟಿಕೆ, ಪುರಾಣ, ದಂಡಾಗ್ರ, ಗಿಳಿಲು, ಶಂಖು, ತಿಥಿ, ವಾರ, ನಕ್ಷತ್ರ, ಹುಣ್ಣಿವೆ, ಅಮಾವಾಸ್ಯೆ, ಸೂರ್ಯ, ಚಂದ್ರಾಗ್ನಿ, ದೀಪಾರತಿ ಗಂಗೆ, ಗೌರಿ, ವಿಘ್ನೇಶ್ವರ ಮೊದಲಾದವು ಇವು ದೈವಂಗಳೆಂದು ಕಲ್ಲು, ಮಣ್ಣು, ಮರದಿಂದ ರಚಿಸಿ, ಸಂದಿ-ಗೊಂದಿ_ಮಾಡು- ಜಗುಲಿಯ ಮಾಡಿಟ್ಟು, ಅದರ ತೊಳೆದ ನೀರು, ಎಂಜಲವ ತಿಂಬವರ ದೇವ_ಭಕ್ತರೆನಬಹುದೆ ? ಇಂತಪ್ಪ ಅನಾಚಾರಿ ಶ್ವಪಚರ, ಭಕ್ತ_ಜಂಗಮ_ದೇವರೆಂದು ಪೂಜಿಸಲಾಗದು. ನಿರಾಭಾರಿ ವೀರಶೈವಾಚಾರ ಕ್ರಿಯಾಜ್ಞಾನ ವೈರಾಗ್ಯ ಸದ್ಭಕ್ತಿಯುಳ್ಳ ಸದ್ಭಕ್ತ ಶಿವಶರಣನ ಪೂಜಿಸಿ ಪಾದೋದಕ_ಪ್ರಸಾದವ ಕೊಂಡಡೆ ಭವಪಾಶಕರ್ಮಂಗಳು ಮಾಣ್ಬವು ಕಾಣಾ ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
-->