ಅಥವಾ

ಒಟ್ಟು 17 ಕಡೆಗಳಲ್ಲಿ , 5 ವಚನಕಾರರು , 9 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಂದು, ಎರಡು, ಮೂರು, ನಾಲಕ್ಕು, ಅಯಿದು, ಆರು, ಏಳು, ಎಂಟು ಒಂಬತ್ತು, ಹತ್ತು, ಹನ್ನೊಂದು ಹನ್ನೆರಡು, ಹದಿಮೂರು, ಹದಿನಾಲಕ್ಕು, ಹದಿನೈದು, ಹದಿನಾರು, ಹದಿನೇಳು, ಹದಿನೆಂಟು, ಹತ್ತೊಂ¨ತ್ತು, ಇಪ್ಪತ್ತು, ಇಪ್ಪತ್ತೊಂದು, ಇಪ್ಪತ್ತೆರಡು, ಇಪ್ಪತ್ತಮೂರು, ಇಪ್ಪತ್ತನಾಲಕ್ಕು. ಇಪ್ಪತ್ತನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತನಾಲಕ್ಕು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯುದಿಷ್ಠಿರೋ ವಿಕ್ರ[ಮೋ]ಶಾಲಿವಾಹನ[ಃ] ತ[ಪಸಾ] ಧ್ರುವಶ್ಚ [ದಿವಿ]ಜರಾಜನಂದನಃ ನಾಗಾಂತಕೋ ಭೂಪತಿ [ಷಷ್ಠಮಃ] ಕಲಿಯುಗೇ ಷಟ್‍ಚಕ್ರವರ್ತಿ[ನಃ] ಈ ಆರು ಮಂದಿ ಕಲಿಯುಗದ ಚಕ್ರವರ್ತಿಗಳು. ಇಪ್ಪತ್ತಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತಮೂರು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯಯಾತಿ ನಹುಷ[ಶ್ಶಂತನುಃ] ಚಿತ್ರವೀರ್ಯಶ್ಚ ಪಾಂಡವಃ ರಾಜಾ ದುರ್ಯೋಧನ[ಶ್ಚೈ]ವ ದ್ವಾಪರೇ ಷ[ಟ್] ಚಕ್ರವರ್ತಿ[ನಃ] ಆ ಆರು ಮಂದಿ ದ್ವಾಪರದ ಚಕ್ರವರ್ತಿಗಳು. ಇಪ್ಪತ್ತೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತೆರಡು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ವೈವ[ಸ್ವ]ತೋ ದಿಲೀಪಶ್ಚ ರಘು ಚಕ್ರೇಶ್ವರೋ ಅ[ಜಃ] ದಶರಥೋ ರಾಮಚಂದ್ರ[ಶ್ಚ] ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ತ್ರೇತಾಯುಗದ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಹರಿಶ್ಚಂ[ದ್ರೋ] ನ[ಳ]ರಾಜ[ಃ] ಪುರುಕು[ತ್ಸ]ಶ್ಚ ಪುರೂರವಃ ಸಗರಃ ಕಾರ್ತವೀರ್ಯಶ್ಚ ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ಕೃತಯುಗದ ಚಕ್ರವರ್ತಿಗಳು. ಅಂತೂ ಇಪ್ಪತ್ತನಾಲ್ಕು ಮಂದಿ ಚಕ್ರವರ್ತಿಗಳು. ಇಪ್ಪತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತು ಎಂದರೆ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಅದು ಎಂತೆಂದಡೆ: ಆಂಗೀರಸ, ಪುಲಸ್ತ್ಯ, ಪುಲಹ, ಶಾಂತ, ದಕ್ಷ, ವಸಿಷ್ಠ, ವಾಮದೇವ, ನವಬ್ರಹ್ಮ, ಕೌಶಿಕ, ಶೌನಕ, ಸ್ವಯಂಭು, ಸ್ವಾರೋಚಿಷ, ಉತ್ತಮ, ತಾಮಸ, ರೈವತ, ಚಾಕ್ಷಷ, ವೈವಸ್ವತ, ಸೂರ್ಯಸಾವರ್ಣಿ, ಚಂದ್ರಸಾವರ್ಣಿ, ಬ್ರಹ್ಮಸಾವರ್ಣಿ, ಇಂದ್ರ ಸಾವರ್ಣಿ ಇವರು ಇಪ್ಪತ್ತು ಮಂದಿ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಹತ್ತೊಂಬತ್ತು ಎಂದರೆ ಪುಣ್ಯನದಿಗಳು. ಅದು ಎಂತೆಂದಡೆ: ಗ್ರಂಥ || ಗಂಗಾ ಪುಷ್ಕ[ರಿಣೀ] ನರ್ಮದಾ ಚ ಯಮುನಾ ಗೋದಾವರೀ ಗೋಮತೀ ಗಂಗಾದ್ವಾರ ಗಯಾ ಪ್ರಯಾಗ ಬದರೀ ವಾರಾಣಸೀ ಸೈಯಿಂಧವೀ ಇವು ಹತ್ತೊಂಬತ್ತು ಪುಣ್ಯನದಿಗಳು. ಹದಿನೆಂಟು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೆಂಟು ಎಂದರೆ.......... ಅದು ಎಂತೆಂದಡೆ: ........................... ಹದಿನೇಳು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೇಳು ಎಂದರೆ................. ಅದು ಎಂತೆಂದಡೆ: .................... ಹದಿನಾರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾರು ಎಂದರೆ [ಅ]ರಸುಗಳು ಅದು ಎಂತೆಂದಡೆ: ಗ್ರಂಥ || ಗಯಾಂಬರೀ[ಷ] ಶ[ಶ]ಬಿಂದುರಂಗದೋ ಪೃಥು[ರ್ಮ]ರು[ತ್] ಭರತ[ಸ್ಸು]ಹೋತ್ರಃ ರಾಮೋ ದಿಲೀಪೋ ಸಗರ ರಂತಿ ರಾಮ[ಃ] ಯಯಾತಿ ಮಾಂಧಾತ ಭಗೀರಥ[ಶ್ಚ] ಎಂದುದಾಗಿ, ಗಯ, ಅಂಬರೀಷ, ಶಶಬಿಂದು, ಪೃಥು, ಮರುತ್, ಭರತ, ಸುಹೋತ್ರ, ಪರಶುರಾಮ, ದಿಲೀಪ, ಸಗರ, ರಂತಿ, ರಾಮಚಂದ್ರ, ಯಯಾತಿ, ಮಾಂಧಾತ, ಭಗೀರಥ, ಅ[ಂಗದ] ಇವರು ಹದಿನಾರು ಮಂದಿ ಅರಸುಗಳು. ಹದಿನೈದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೈದು ಎಂದರೆ ತಿಥಿಗಳು. ಅದು ಎಂತೆಂದಡೆ: ಪಾಡ್ಯ, ಬಿದಿಗೆ, ತದಿಗೆ, ಚವುತಿ, [ಪಂಚಮಿ], ಷಷ್ಠಿ, ಸಪ್ತಮಿ, ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ, ಅಮಾವಾಸ್ಯೆ ಇವು ಹದಿನೈದು ತಿಥಿಗಳು. ಹದಿನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾಲಕ್ಕು ಎಂದರೆ ಲೋಕಂಗಳು. ಅದು ಎಂತೆಂದಡೆ: ಅತಲ ವಿತಲ ಸುತಲ ತಲಾತಲ ಮಹಾತಲ ರಸಾತಲ ಪಾತಾಳ ಭೂಲೋಕ ಭುವರ್ಲೋಕ ಸುರ್ವರ್ಲೋಕ ಮಹರ್ಲೋಕ ತಪೋಲೋಕ ಜನೋಲೋಕ ಸತ್ಯಲೋಕ ಇವು ಹದಿನಾಲ್ಕು ಲೋಕಂಗಳು. ಹದಿಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೆನಪ್ಪ ? ಹದಿಮೂರು ಎಂದರೆ ಚಕ್ರಂಗಳು. ಅದು ಎಂತೆಂದಡೆ, ಆಧಾರಚಕ್ರ, ಸ್ವಾಷ್ಠಾನಚಕ್ರ, ಮಣಿಪೂರಕಚಕ್ರ, ಅನಾಹಚಕ್ರ, ವಿಶುದ್ಧಿಚಕ್ರ, ಆಜ್ಞಾಚಕ್ರ, ಶಿಖಾಚಕ್ರ, ಬ್ರಹ್ಮಚಕ್ರ, ಘಟಚಕ್ರ, ಕಾಲಚಕ್ರ, ಮೇಘಚಕ್ರ, ಭೂಚಕ್ರ, ಅವಗಡಚಕ್ರ ಇವು ಹದಿಮೂರು ಚಕ್ರಂಗಳು. ಹನ್ನೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹನ್ನೆರಡು ಎಂದರೆ ಮಾಸಂಗಳು. ಅದು ಎಂತೆಂದರೆ, ಚೈತ್ರ, ವೈಶಾಖ, ಜ್ಯೇಷ್ಠ, ಆಷಾಢ, ಶ್ರಾವಣ, ಭಾದ್ರಪದ, ಆಶ್ವೀಜ, ಕಾರ್ತೀಕ, ಮಾರ್ಗಶಿರ, ಪುಷ್ಯ, ಮಾಘ, ಫಾಲ್ಗುಣ ಇವು ಹನ್ನೆರಡು ಮಾಸಂಗಳು. ಹನ್ನೊಂದು ಎಂದರೆ ನೋಡಿದ್ದೇನಪ್ಪ ? ಕೇಳಿದ್ದೇನಪ್ಪ ? ಹನ್ನೊಂದು ಎಂದರೆ ಭಾರತಂಗಳು. ಅದು ಎಂತೆಂದಡೆ: ಆದಿಭಾರತ, ಕೈಲಾಸಭಾರತ, ಶ್ರೀರುದ್ರಭಾರತ, ನಂದಿಭಾರತ, ನಾರ[ದ]ಭಾರ[ತ], ಭೃಗುಭಾರತ, ಮನುಭಾರತ, ಉಮಾಭಾರತ, ಪ್ರಸಿದ್ಧಭಾರತ, ಸಿದ್ಧೋರಗಭಾರತ, ಶ್ರೀರಂಗಭಾರತ ಇವು ಹನ್ನೊಂದು ಭಾರತಂಗಳು. ಹತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹತ್ತು ಎಂದರೆ, ದಶಾವತಾರಂಗಳು. ಅದು ಎಂತೆಂದರೆ, ಗ್ರಂಥ || ಮತ್ಸ್ಯಃ ಕೂರ್ಮಃ ವರಾಹಶ್ಚ ನಾರಸಿಂಹಶ್ಚ ವಾಮನಃ ರಾಮೋ ರಾಮಶ್ಚ [ಕೃಷ್ಣ]ಶ್ಚ ಬೌದ್ಧಃ ಕಲ್ಕಿ[ರೇ]ವ ಚ ಎಂದುದಾಗಿ, ಈ ದಶಾವತಾರಂಗಳಲ್ಲಿ ಯಾರಾರು ಸಂಹಾರ ಎಂದರೆ, ಮತ್ಯ್ಸಾವತಾರದಲ್ಲಿ ಅಮೃತಮಥನೇ ಸೋಮಕಾಸುರನ ಸಂಹಾರ. ಕೂರ್ಮಾವತಾರದಲ್ಲಿ ಮಂದರಪರ್ವತಕ್ಕೆ ಆಧಾರ. ವರಾಹಾವತಾರದಲ್ಲಿ ಹಿರಣ್ಯಾಕ್ಷನ ಸಂಹಾರ. ನರಸಿಂಹಾವತಾರದಲ್ಲಿ ಹಿರಣ್ಯಕಶ್ಯಪ ಸಂಹಾರ. ವಾಮನಾವತಾರದಲ್ಲಿ ಪಂಚಮೇಢ್ರಾಸುರ ಎಂಬ ರಾಕ್ಷಸನ ಸಂಹಾರ. ಪರಶುರಾಮಾವತಾರದಲ್ಲಿ ಕಾರ್ತವೀರ್ಯರ ಸಂಹಾರ. ರಫ್ಸುರಾಮಾವತಾರದಲ್ಲಿ ರಾವಣಕುಂಭಕರ್ಣರ ಸಂಹಾರ. 1ಬಲಭದ್ರ1 ನವತಾರದಲ್ಲಿ ಪ್ರಲಂಬಕವಾದ ಅಸುರರ ಸಂಹಾರ. ಬೌದ್ಧಾವತಾರದಲ್ಲಿ ತ್ರಿಪುರದಾನವಸತಿಯರ ಕೆಡಿಸಿದ. ಕಲ್ಕ್ಯವತಾರದಲ್ಲಿ 2ಕಂಸಾಸುರ, ನರಕಾಸುರ, ಬಾಣಾಸುರರ2 ಸಂಹಾರ, ಇವು ಹತ್ತು ದಶಾವತಾರಗಳು. ಒಂಬತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಒಂಬತ್ತು ಎಂದರೆ ನವಗ್ರಹಂಗಳು. ಅದು ಎಂತೆಂದರೆ: ಆದಿತ್ಯ, ಸೋಮ, ಮಂಗಳ, ಬುಧ, ಬೃಹಸ್ಪತಿ, ಶುಕ್ರ, ಶನಿ, ರಾಹು, ಕೇತು- ಇವು ಒಂಬತ್ತು ನವಗ್ರಹಂಗಳು. ಎಂಟು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಎಂಟು ಎಂದರೆ ಅಷ್ಟದಿಕ್ಪಾಲಕರು. ಅದು ಎಂತೆಂದರೆ: ಇಂದ್ರ, ಅಗ್ನಿ, ಯಮ, ನೈರುತಿ, ವರುಣ, ವಾಯುವ್ಯ, ಕುಬೇರ, ಈಶಾನ್ಯ- ಎಂಟು ಮಂದಿ ಅಷ್ಟದಿಕ್ಪಾಲಕರು. ಏಳು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಏಳು ಎಂದರೆ ಸಪ್ತಋಷಿಗಳು. ಅದು ಎಂತೆಂದರೆ: ಗ್ರಂಥ || ಕಶ್ಯಪಾತ್ರಿ ಭರದ್ವಾಜ[ಃ] ವಿಶ್ವಾಮಿ[ತ್ರಶ್ಚ] ಗೌತಮ[ಃ] ಜಮದಗ್ನಿ[ಃ] ವಸಿಷ್ಠ[ಶ್ಚ] ಸಪ್ತೈತೇ ಋಷಯ[ಃ ಸ್ಮøತಾಃ] ಎಂದುದಾಗಿ, ಕಶ್ಯಪ, ಅತ್ರಿ, ಭರದ್ವಾಜ, ವಿಶ್ವಾಮಿತ್ರ, ಗೌತಮ, ಜಮದಗ್ನಿ, ವಸಿಷ್ಠ- ಇವರು ಏಳುಮಂದಿ ಸಪ್ತ ಋಷಿಗಳು. ಆರು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಆರು ಎಂದರೆ ಶಾಸತ್ತ್ರಂಗಳು. ಅದು ಎಂತೆಂದರೆ: ಶಿಲ್ಪಶಾಸ್ತ್ರ, ಭರತಶಾಸ್ತ್ರ, ತರ್ಕಶಾಸ್ತ್ರ, ಶಬ್ದಶಾಸ್ತ್ರ, ಆ[ನ್ವೀಕ್ಷಕೀ]ಶಾಸ್ತ್ರ, ಜ್ಯೋತಿಷ್ಯಶಾಸ್ತ್ರ- ಇವು ಆರು ಶಾಸ್ತ್ರಂಗಳು. ಐದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಐದು ಎಂದರೆ ಈಶ್ವರನ ಪಂಚ ಮುಖಂಗಳು ಅದು ಎಂತೆಂದರೆ, ಗ್ರಂಥ || ಸದ್ಯೋಜಾ[ತೋ]ದ್ಭವೋರ್ಭೂಮಿಃ] ವಾಮದೇವೋದ್ಭ[ವಂ ಜಲಂ] ಅಫ್ಸೋ[ರಾದ್ವಹ್ನಿ]ರು[ದ್ಭೂತಂ] ತತ್ಪರು[ಷಾದ್ವಾಯುರ್ಭವೇತ್ ಈಶಾನಾದ್ಗಗನಂ ಜಾತಂ] ಎಂದುದಾಗಿ, ಸದ್ಯೋಜಾತಮುಖ, ವಾಮದೇವಮುಖ, ಅಘೋರಮುಖ, ತತ್ಪುರುಷಮುಖ, ಈಶಾನ್ಯಮುಖ- ಇವು ಐದು ಪಂಚಮುಖಂಗಳು. ನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ನಾಲಕ್ಕು ಎಂದರೆ ವೇದಂಗಳು. ಅದು ಎಂತೆಂದರೆ: ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣವೇದ- ಇವು ನಾಲ್ಕು ವೇದಂಗಳು. ಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಮೂರು ಎಂದರೆ ತ್ರಿಮೂರ್ತಿಗಳು. ಅದು ಎಂತೆಂದರೆ: ಬ್ರಹ್ಮ, ವಿಷ್ಣು, ಈಶ್ವರ- ಇವರು ಮೂವರು ತ್ರಿಮೂರ್ತಿಗಳು. ಎರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಎರಡು ಎಂದರೆ ಭಾನು ಶಶಿ. ಅದು ಎಂತೆಂದರೆ: ಸೂರ್ಯ, ಚಂದ್ರ- ಇವರಿಬ್ಬರು ಸೂರ್ಯಚಂದ್ರಾದಿಗಳು. ಒಂದು ಎಂದರೆ ನೋಡಿದ್ದೆನಪ್ಪ ಕೇಳಿದ್ದೇನಪ್ಪ ? ಒಂದು ಎಂದರೆ ಏಕೋ[ಏವ]ದೇವಃ ಅದು ಎಂತೆಂದರೆ: ದೇವನು ಒಬ್ಬನೇ. ದೇವನು] ಒಬ್ಬನೇ ಅಲ್ಲದೆ ಇಬ್ಬರೆಂದು ಬಗುಳುವನ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಕನ್ನವನ್ನಿಕ್ಕಿ ಚಿನ್ನವ ತಂದು ಜಂಗಮಾರ್ಚನೆಯ ಮಾಡುವದಾವ ಸದಾಚಾರ? ಹಾದರವಮಾಡಿ ಹಾಗವ ತಂದು ಜಂಗಮಾರ್ಚನೆಯ ಮಾಡುವದಾವ ಸದಾಚಾರ? ಗಾಣವ ಹಾಕಿ ಮೀನ ಹಿಡಿದು ತಂದು ಜಂಗಮಾರ್ಚನೆಯ ಮಾಡುವದಾವ ಸದಾಚಾರ? ಇಂತಿವರೆಲ್ಲರು ಶಿವಯುಕ್ತವಾದ ಅನಾಚಾರ ಹಿಡಿದು ಬಿಡದೆ ಸದಾಚಾರಕ್ಕೊಳಗಾಗಿ ಮುಕ್ತಿವಡೆದರು. ಮೋಕ್ಷಾಪೇಕ್ಷಿತರಾಗಿ ಪಂಚಾಚಾರಕ್ಕೊಪ್ಪುವ ವ್ರತನೇಮಗಳ ಹಿಡಿದು ಬಿಟ್ಟವಂಗೆ ಮುಂದು ಹಿಂದಾಯಿತು, ಆತ ವ್ರತಗೇಡಿ. ಅದು ಹೇಗೆಂದೊಡೆ ಹಿಡಿದ ನೈಷ್ಠೆಯ ಬಿಟ್ಟಲ್ಲಿಯೇ ಕರ್ಮತ್ರಯಂಗಳು ಬೆನ್ನ ಬಿಡವೆಂದು ಶರಣರ ವಚನಂಗಳು ಸಾರುತ್ತಿವೆ. || ಗ್ರಂಥ || `ಸ್ಥಾವರಂ ಬ್ಥಿನ್ನದೋಷೇಣ ವ್ರತಭ್ರಷ್ಟೇನ ಜಂಗಮಂ| ಉಭಯೋಬ್ರ್ಥಿನ್ನಭಾವೇನ ನಾರ್ಚನಂ ನ ಚ ವಂದನಂ||' ಇಂತೆಂದುದಾಗಿ ಹಿಡಿದು ಬಿಡುವಲ್ಲಿ ಕಮ್ಮಾರನ ಕೈಯ್ಯ ಇಕ್ಕುಳವೇ ಶರಣ? ಹಿಡಿದು ಬಿಡುವಲ್ಲಿ ಚಂದ್ರಸೂರ್ಯರುಗಳ ಗ್ರಹಣವೇ ಶರಣ? ಹಿಡಿದು ಬಿಡುವಲ್ಲಿ ಸಲ್ಲದ ನಾಣ್ಯವೇ ಶರಣ? ಹಿಡಿದು ಬಿಡುವಲ್ಲಿ ಬಾಲಗ್ರಹವೇ ಶರಣ? ಅಲ್ಲಲ್ಲ. ಉರಿ ಕರ್ಪೂರವ ಹಿಡಿದಂತೆ ಹಿಡಿದ ವ್ರತನೇಮಂಗಳ ಬಿಡದಿಪ್ಪುದೀಗ ಶರಣಸ್ಥಲದ ಮತವಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಎಲ್ಲಿ ನೋಡಿದರೆನ್ನಯ ಮನವಿಪ್ಪುದು. ಜಗದಗಲದಲ್ಲಿ ನೋಡಿದರೆನ್ನ ಮನವಿಪ್ಪುದು. ಸಪ್ತಸಾಗರದಿಂದತ್ತತ್ತವೆನ್ನಯ ಮನವಿರುತ ಚರಿಸುತಿಪ್ಪುದು. ಸಾಕ್ಷಿ ಗ್ರಂಥ : ``ಮಕಾರಂ ಮರುತರೂಪಯೋ ನಕಾರಂ ನಾಹಂ ಕೋಹಂ | (?) ಅಕ್ಷರದ್ವಯ ಮನೋ ನಾಮ ಸರ್ವದಾ ಸಮಾಶ್ರೀತಂ ||'' ಎಂದುದಾಗಿ, ಮನವೆಂಬ ವಾಯು ಹರಿದು ಗಳಿಗೆ ಗಳಿಗೆಗೆ ಒಂದೊಂದು ನೆನೆನೆನೆದು ಹಂಬಲಿಸಿ ಹತವಾಗುತಿದೆ. ಮನದ ಗಂಧೆಯ ತುರುಸಿದರೆ ಸುಖವಾಗುತಿದೆ. ಸುಖದಿಂದ ದುಃಖ, ದುಃಖದಿಂದ ಪ್ರಳಯಕ್ಕಿಕ್ಕಿ ಕೊಲ್ಲುತಿದೆ ಮನ. ಮನವೆಂಬ ಮಾಯದ ಬಲೆಯಲೆನ್ನ ಕೆಡವದೆ ಉಳುಹಿಕೊಳ್ಳಯ್ಯ ನಿರ್ಮಳ ನಿರ್ಮಳಾತ್ಮಕ ಜಗದಾರಾಧ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಜಂಗಮ ಜಂಗಮವೆಂಬ ಭಂಗಿತರ ಮುಖವ ನೋಡಲಾಗದು. ಅದೇನು ಕಾರಣವೆಂದಡೆ_ನಿರಾಳಜಂಗಮವನರಿಯದೆ ನಾನೆ ಜಂಗಮವೆಂಬರು. ಗ್ರಂಥ ``ಜಕಾರಂ ಜನನಂ ನಾಸ್ತಿ ಗಕಾರಂ ಗಮನವರ್ಜಿತಂ ಮಕಾರಂ ಮರಣಂ ನಾಸ್ತಿ ಏತದ್ಭವ್ಜೇಂಗಮಂ _ ಎಂದುದಾಗಿ, ಇಂತಪ್ಪ ನಿರ್ದೇಹಿ ಜಂಗಮವ ಕರ-ಮನ-ಭಾವದಲ್ಲಿ ಆರಾಧಿಸಿ ಜನನ ಮರಣಂಗಳ ಗೆಲಿದು ಕರ್ಪುರದ ಜ್ಯೋತಿಯಂತೆ ಇರಬಲ್ಲಡೆ ಆ ಮಹಾತ್ಮನೆ ತ್ರೈಜಗದೊಡೆಯನೆಂಬೆ, ಆ ಮಹಾತ್ಮನೆ ವಿಶ್ವಪರಿಪೂರ್ಣನೆಂಬೆನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
'ಷಟುಸ್ಥಲದ ಬ್ರಹ್ಮಿಗಳೆ'ಂದು ಹೇಳಿಕೊಂಬಿರಿ, ನೀವು ಕೇಳಿರಯ್ಯಾ : ನಿಮ್ಮ ಷಟುಸ್ಥಲದ ಬ್ರಹ್ಮಿಗಳ ಲಕ್ಷಣ ದಾವುದೆಂದಡೆ, ಅಂಗಲಿಂಗ ಸಂಬಂಧವಾದುದೇ ಷಟುಸ್ಥಲ. ಅಂಗ ಲಿಂಗವಾದ ಪರಿ ಎಂತೆಂದಡೆ, ಲಿಂಗ ಪೋದುದೇ ಷಟುಸ್ಥಲ: ಗ್ರಂಥ || ಅನಾದಿ ಸಂಸಿದ್ಧಸ್ಯ ಆತ್ಮಪರೀಕ್ಷಣಂ ಜಗತಾರಾ[ಧ್ಯಸ್ಯ] | ಸತ್ಯಂ ಜನನಮರಣವಿರಹಿತಂ [ಇತಿ]ಷಟ್‍ಸ್ಥಲಂ || ಇಂತೀ ಸಾಕ್ಷಿ ಉಂಟಾಗಿ, ಪರಾನ್ನ ಅಪೇಕ್ಷಿತನಾಗದೆ, ಪರಸ್ತ್ರೀಯಂ ನೋಡದೆ, ಪರರೊಡವೆಯ ಹಂಗು ಹಚ್ಚದೆ, ಪರಾತ್ಪರವಾಗಿಪ್ಪುದೆ ಜಂಗಮ ಲಿಂಗ. ಪರಮ ಹರುಷದಿಂದ ಪಾತಕವನೀಡಾಡಿ, ಪರ[ಮ] ಪುರುಷಾರ್ಥವನೇ ಗ್ರಹಿಸಿ, ಪಾವನಚರಿತನಾಗಿ, ಭಕ್ತನ ಮನೆಗೆ ನಡೆದು ಬಂದು ಬೀಯೆಂಬೋ ಪಾಪವು ಕ್ಷಯವಾಗಲೆಂದು 'ಭಿಕ್ಷಾ' ಎಂದು ನಿಂದಡೆ, ಅರಿದ ಭಕ್ತ ನೀಡಿದರೂ ಸಂತೋಷ ಅರಿಯದಿದ್ದ ಭಕ್ತ ನೀಡದಿದ್ದರೂ ಸಂತುಷ್ಟನಾಗಿ 'ಹಳ್ಳಿಗೇಕರಾತ್ರಿ ಪಟ್ಟಣಕ್ಕೆ ಪಂಚರಾತ್ರಿ' ಸಂಚರಿಸುತಿರ್ಪುದೇ ಷಟುಸ್ಥಲದ ಬ್ರಹ್ಮಿ ಎಂದು ನಮೋ ಎಂಬುವೆನಯ್ಯಾ ಬರಿದೆ 'ನಾ ಷಟುಸ್ಥಲದ ಬ್ರಹ್ಮಿ' 'ನೀ ಷಟುಸ್ಥಲದ ಬ್ರಹ್ಮಿ' ಎಂದು ತಿರುಗುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಅಂಗದ ಮೇಲಕ್ಕೆ ಬಂದ ಆಚಾರಲಿಂಗದ ಹೊಲಬನರಿಯದೆ ಕೈಲಾಸದ ಮೇಲಿಪ್ಪ ಬಾಲಕೋಟಿಸೂರ್ಯಪ್ರಕಾಶವನುಳ್ಳ ಶಿವನನೊಲಿಸಬೇಕೆಂದು ಒಂದು ವಸ್ತುವ ಎರಡಿಟ್ಟು ನುಡಿವ ಮಂದಮತಿಗಳು ನೀವು ಕೇಳಿರೇ. ಮಹಾಮೇರುಪರ್ವತವೇ ಶರಣ. ಆ ಶರಣನ ಸ್ಥೂಲತನುವೇ ರಜತಾದ್ರಿ. ಸೂಕ್ಷ ್ಮತನುವೇ ಹೇಮಾದ್ರಿ. ಕಾರಣತನುವೇ ಮಂದರಾದ್ರಿ. ಈ ಮೂರುಪರ್ವತಂಗಳ ಅರಮನೆಗಳಲ್ಲಿ ನೆಲಸಿಪ್ಪ ಶಿವನಾರೆಂದರೆ ನಿರಾಕಾರ ಶೂನ್ಯಬ್ರಹ್ಮವೇ. ಶರಣನ ಕುರಿತು ಪಂಚಸಾದಾಖ್ಯಂಗಳನೊಳಕೊಂಡು ಸಾಕಾರವಾಗಿ ಬಂದ ಇಷ್ಟಲಿಂಗವೇ[ಆ] ಶಿವನು. ಗ್ರಂಥ : `ಜ್ವಲತ್ ಕಾಲಾನಲಾಭಾಸಾ ತಟಿತ್ ಕೋಟಿ ಸಮಪ್ರಭಾ| ತಸ್ಯೋಧ್ರ್ವಾ ಚ ಶಿಖಾ ಸೂಕ್ಷ ್ಮ ಚಿದ್ರೂಪಾ ಪರಮಾ ಕಲಾ| ಏವಂ ವೇದ ಕಲಾ ದೇವಿ ಸದ್ಗುರೋಶ್ಯಿಷ್ಯಮಸ್ತಕೇ ಹಸ್ತಾಬ್ಜಮಥನಾದ್ ಗ್ರಾಹ್ಯಾ ತಸ್ಯ ಭಾವ ಕರೋದಿತಾ ವಪುರೇವಂ ಸಮುತ್ಪನ್ನಂ ತತ್ ಪ್ರಾಣಂ ಮಿಶ್ರಿತಂ ಭವೇತ್ ಯಥಾ ಗುರುಕರೇ ಜಾತಾ ಲಿಂಗ ಭಕ್ತಿದ್ರ್ವಿಭೇದಕಾ' ಇಂತೆಂದುದಾಗಿ ಆ ನಿರಾಕಾರಬ್ರಹ್ಮನೇ ಶಿವನು. ಆ ಶಿವನ ಧರಿಸಿಪ್ಪ ಶರಣನ ಕಾಯವೇ ಕೈಲಾಸ. ಇದಲ್ಲದೆ ಮತ್ತೊಂದು ಕೈಲಾಸ ಬೇರೊಬ್ಬ ಶಿವನುಂಟೆಂದು ಭ್ರಮೆಗೊಂಡು ಮನವನೆರಡು ಮಾಡಿಕೊಂಬುದು ಅಜ್ಞಾನ ನೋಡಾ. ಉರದ ಮಧ್ಯದಲ್ಲಿ ಒರಗಿಪ್ಪ ಗಂಡನಂ ಬಿಟ್ಟು ಇನ್ನು ನೆರೆಮನೆಯ ಗಂಡರಿಗೆ ಮನವನಿಕ್ಕುವ ಹಾದರಗಿತ್ತಿಗೆ ಪತಿಭಕ್ತಿಯೆಲ್ಲಿಯದೋ?. ಶ್ರೀಗುರು ಕರುಣಿಸಿಕೊಟ್ಟ ಕ್ರಿಯಾಲಿಂಗವನು ಅರ್ಚನೆ ಪೂಜನೆಯಿಂದ ಅರ್ಪಿತಾವಧಾನದಿಂದ ಧ್ಯಾನ ಧಾರಣದಿಂದ ಸಮತೆ ಸಮಾಧಾನದಿಂದ ಧ್ಯಾನ ಮೌನ ಉಪಾವಸ್ಥೆಯಿಂದ ಮುನಿಸು ಮೂದಲೆಯಿಂದ ಕಾಮಿಸಿ ಕಂಬನಿದುಂಬಿ ಕರಸ್ಥಲದಲಿಪ್ಪ ಪ್ರಾಣೇಶ್ವರನ ಶ್ರೀ ಚರಣಕ್ಕೆ ಲಲಾಟ ಪೂಜೆಯ ಮಾಡಿ ಒಲಿಸಿ ಒಡಗೂಡಿ ನಿಜಮುಕ್ತಿವಡೆಯದೆ ಆಕಾರವಂ ಮರೆದು ನಿರಾಕಾರವಂ ಕೂಡಿಹೆನೆಂಬ ಲೋಕದ ಕಾಕುಮಾನವರೆಲ್ಲಾ ಕಾಲ ಕಾಮರಿಗೆ ತುತ್ತಾಗಿ ಕಾಲಾಗ್ನಿರುದ್ರನ ಹೊಡೆಗಿಚ್ಚಿಗೊಳಗಾದರಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಭಕ್ತಿಯಿಂದ ವಿರಕ್ತರೆಂದು ಬಾಯತುಂಬ ಕರೆಯಿಕೊಂಬ ವಿರಕ್ತರೆಲ್ಲ ವಿರಕ್ತರೇ ಅಯ್ಯ? ವಿರಕ್ತರದೊಂದು ಸಾಮಥ್ರ್ಯ ಸುಗುಣ ಸಮುದ್ರೆಯನೊರೆವುತಿಪ್ಪೆ ಕೇಳಿರಣ್ಣ. ಕಾಯದ ಕಣ್ಣ ಜಾಗ್ರದಲ್ಲಿ ಇಷ್ಟಲಿಂಗಕ್ಕೆ ಸಮರ್ಪಿಸಿ ಕಾಯಗುಣಂಗಳ ಕೆಲಕ್ಕೆ ತೊಲಗಿಸಿ ತತ್‍ಪದನಾಗಿ ಮನದಕಣ್ಣ ಸ್ವಪ್ನದಲ್ಲಿ ಪ್ರಾಣಲಿಂಗಕ್ಕೆ ಸಮರ್ಪಿಸಿ ಮನೋವಿಕಾರಮಂ ಹಸಗೆಡಿಸಿ ತ್ವಂಪದನಾಗಿ ಭಾವದಕಣ್ಣ ಸುಷುಪ್ತಿಯಲ್ಲಿ ಭಾವಲಿಂಗಕ್ಕೆ ಸಮರ್ಪಿಸಿ ಭಾವದಿಚ್ಛೆಯ ತಪ್ಪಿಸಿ ಅಸಿಪದವಾಗಿ ಜ್ಞಾತೃ ಜ್ಞಾನ ಜ್ಞೇಯವೆಂಬ ತ್ರಿಪುಟಿಯನೊಂದುಮಾಡಿ ಪರಬ್ರಹ್ಮ ಸ್ವರೂಪವಾಗಿ ಜಾಗ್ರತ್ ಸ್ವಪ್ನ ಸುಷುಪ್ತಿಯೆಂಬರಿವರಿತು ಹಸಿವು ತೃಷೆ ವಿಷಯ ವ್ಯಾಪಾರಂಗಳಂ ಸುಟ್ಟುರುಹಿದ ತೋಂಟದ ಸಿದ್ಧಲಿಂಗ, ಅಲ್ಲಮಪ್ರಭು, ಅನಿಮಿಷದೇವರು, ಇಂತಿವರು ವಿರಕ್ತರಲ್ಲದೆ ಮತ್ತೆ ವಿರಕ್ತರೆಂಬ ನುಡಿ ನಿಮ್ಮ ಹಡಪದಲ್ಲಿರಲಿ. ಅದೇನು ಕಾರಣವೆಂದೊಡೆ || ಗ್ರಂಥ || `ವಿಕಾರಂ ವಿಷಯಾದ್ದೂರಂ ರಕಾರಂ ರಾಗವರ್ಜಿತಂ| ಕ್ತಕಾರಂ ತ್ರಿಗುಣಂ ನಾಸ್ತಿ ವಿರಕ್ತಸ್ಯಾರ್ಥಮುಚ್ಯತೇ'|| ಇಂತೆಂದುದಾಗಿ ಹಗಲಾದರೆ ಹಸಿವು ತೃಷೆಗೆ ಬಾಯಿಬಿಟ್ಟು ಇರುಳಾದರೆ ವಿಷಯಾತುರನಾಗಿ ಕಳವಳಿಸಿ ಕನಸ ಕಂಡು ಬೆದರಿ ಶಿವಶಿವ ಎಂದು ಕುಳಿತು ಸುಷುಪ್ತಿಯಲ್ಲಿ ಮೈಮರೆದು ಮುಟ್ಟಿ ತಟ್ಟಿದ ಸವುಜ್ಞೆಯನರಿಯದಿಪ್ಪವರೆಲ್ಲ ವಿರಕ್ತರೆ? ಅಲ್ಲಲ್ಲ. ಅವರು ತ್ರಿವಿಧ ಪದಾರ್ಥವನತಿಗಳೆದು ಗುರು ಲಿಂಗ ಜಂಗಮವನಂತರಂಗದಲ್ಲಿ ಪೂಜೆಯ ಮಾಡುವ ದಾಸೋಹಿಗಳಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಶಿವಾಚಾರಸಂಪನ್ನನಾಗಿ ಶಿವಭಕ್ತನೆನಿಸಿಕೊಂಡು ಶಿವಲಿಂಗವು ಕರಸ್ಥಲ ಉರಸ್ಥಲ ಶಿರಸ್ಥಲದಲ್ಲಿರುತಿರೆ ಅದ ಮರೆದು, ಹಲವು ದೇವರ ಪೂಜೆಮಾಡಿ, ಹಲವು ದೇವರ ಬಳಿಯಲ್ಲಿ ನೀರ ಕುಡಿದು, ಹಲವು ದೇವರ ನೈವೇದ್ಯವ ತಿಂಬ ಹೊಲೆಯನ ಶಿವಭಕ್ತನೆನಬಹುದೆ ? ಎನಲಾಗದು. ಅದೇನು ಕಾರಣವೆಂದಡೆ, ಅದಕ್ಕೆ ಸಾಕ್ಷಿ : ``ಶಿವಾಚಾರೇಣ ಸಂಪನ್ನಃ ಪ್ರಸಾದಂ ಭುಂಜತೇ ಯದಿ | ಅಪ್ರಸಾದೀ ಅನಾಚಾರೀ ಸರ್ವಭಕ್ತಶ್ಚ ವಾಯಸಃ ||'' ಎಂಬುದನರಿಯದೆ, ಮತ್ತೆ ಕೇಳು ಗ್ರಂಥ ಸಾಕ್ಷಿಯ ಮನುಜ : ಸಾಕ್ಷಿ :``ಲಿಂಗಾರ್ಚನೈಕ ಪರಾಣಾಂ ಅನ್ಯದೈವಂತು ಪೂಜನಂ | ಶ್ವಾನಯೋನಿಶತಂ ಗತ್ವಾ ರೌರವಂ ನರಕಂ ವ್ರಜೇತ್ ||'' ಎಂಬುದನರಿಯದೆ, ಮತ್ತೆ ಮೇಣ್, ಸಾಕ್ಷಿ :``ಶಿವಲಿಂಗಂ ಪರಿತ್ಯಜ್ಯ ಅನ್ಯದೈವಮುಪಾಸತೇ | ಪ್ರಸಾದಂ ನಿಷ್ಫಲಂ ಚೈವ ರೌರವಂ ನರಕಂ ವ್ರಜೇತ್ ||'' ಹೀಗೆಂಬುದನರಿಯದೆ, ಲಿಂಗವಿದ್ದು ಅನ್ಯದೈವಂಗಳಿಗೆರಗಿ, ಆಚಾರಭ್ರಷ್ಟನಾಗಿ ಪಾದೋದಕ ಪ್ರಸಾದವ ಕೊಂಡರೆ ಎಂದೆಂದಿಗೂ ಭವಹಿಂಗದು. ಅದೇನುಕಾರಣ ಹಿಂಗದೆಂದರೆ ಹೇಳುವೆ ಕೇಳಿರಣ್ಣಾ : ಹೆಗ್ಗಣವನೊಳ ಹೋಗಿಸಿ ನೆಲಗಟ್ಟ ಹೊರೆದಂತೆ, ಅನ್ಯಕೆ ಹರಿವ ದುರ್ಗುಣವ ಕೆಡೆಮೆಟ್ಟದೆ ಶಿವಭಕ್ತರೆಂದೆಂದು ನುಡಿದುಕೊಂಡು ನಡೆದರೆ, ಹಂದಿ ನಾಯಿ ನರಿ ವಾಯಸನ ಜನ್ಮ ತಪ್ಪದೆಂದಾತ ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಪರ್ವತಮಲ್ಲಯ್ಯನ ಯಾತ್ರೆಗೆ ಹೋಗಬೇಕೆಂಬರಯ್ಯಾ, ಅದೇನು ಕಾರಣವೆಂದಡೆ : ಗ್ರಂಥ : 'ಶ್ರೀಶೈಲಶಿಖರಂ ದೃಷ್ಟ್ವಾ ಪುನರ್ಜನ್ಮ ನ ವಿದ್ಯತೇ' ಎಂದುದಾಗಿ, ಅಂತಪ್ಪ ಪರ್ವತಮಲ್ಲಯ್ಯನ ಶಿಖರವ ಕಂಡಾಕ್ಷಣದಲ್ಲಿ ಮೋಕ್ಷವಾಹುದೆಂದು, ಶ್ರುತಿ ಪುರಾಣ ವಾಕ್ಯಂಗಳ ಕೇಳಬಲ್ಲಂಥ ಭಕ್ತಜನಂಗಳು, ಉಳಿದಂಥ ಕೆಲವು ಗಣಂಗಳು ಇಂತೀ ಸರ್ವರು ಕೂಡಿ ಸಾಲ ಕಡ ಮಾಡಿ ಹೊನ್ನು ತಂದು ಒಂದೊತ್ತು ಬರಿಗಾಲಿಲೆ ನಡೆವುತ್ತ ಆಸತ್ತು, ಬೇಸತ್ತು, ಅಳಲಿ, ಬಳಲಿ ಶಿವಶಿವಾ ಹರಹರಾ ಎಂದು ಮಲ್ಲಯ್ಯನ ನೆನೆವುತ್ತ ಎಡವುತ್ತ, ಮುಗ್ಗುತ್ತ ನಿನ್ನ ಪಾದ ಎಂದು ಕಂಡೆವು ಎನ್ನುತ್ತ, ಸಕಲ ಲೋಕಾದಿಲೋಕಂಗಳೆಲ್ಲ ಇಂತೀ ಪರಿಯಲ್ಲಿ ಹೋಹರಯ್ಯಾ. ಇವರಿಗೆ ಮಲ್ಲಯ್ಯನ ದರುಶನವಿಲ್ಲ. ಅವನ ಶಿಖರವ ಕಾಣಬಾರದು ನೋಡೆಂದ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
-->