ಅಥವಾ

ಒಟ್ಟು 17 ಕಡೆಗಳಲ್ಲಿ , 9 ವಚನಕಾರರು , 17 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೋತೃ ತ್ವಕ್ಕು ನೇತ್ರ ಜಿಹ್ವೆ ಘ್ರಾಣವೆಂಬ ಪಂಚಮುಖವನು ಮಹಾಲಿಂಗವಿದ್ದೆಡೆಯಲ್ಲಿ ತಂದು, ಪರಕೆ ಪರವಶನಾಗಿರ್ದನಯ್ಯ ನಿಮ್ಮ ಶರಣನು ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಎನ್ನ ಸರ್ವಾಂಗವೆಲ್ಲವೂ ಲಿಂಗವಾದ ಪರಿಕ್ರಮವೆಂತೆಂದಡೆ; ಶ್ರೀಗುರು ಬಸವಣ್ಣನುಪದೇಶಿಸಿದ ಇಷ್ಟಲಿಂಗವೆನ್ನ ಸರ್ವಾಂಗದಲ್ಲಿ ಭಿನ್ನ ನಾಮಂಗಳಿಂದ ಪ್ರಕಾಶಿಸುತ್ತಿಹುದು. ಅದೆಂತೆಂದಡೆ ; ಸ್ಥೂಲಾಂಗದಲ್ಲಿ ಇಷ್ಟಲಿಂಗವೆಂದು, ಸೂಕ್ಷ್ಮಾಂಗದಲ್ಲಿ ಪ್ರಾಣಲಿಂಗವೆಂದು ಕಾರಣಾಂಗದಲ್ಲಿ ಭಾವಲಿಂಗವೆಂದು ತ್ರಿಭೇದವಾಗಿಹುದು. ಇಂತು ಅಂಗವ ಕುರಿತು ಮೂರು ತೆರನಾಯಿತ್ತು. ಇನ್ನು ಇಂದ್ರಿಯಂಗಳ ಕುರಿತು ಆರು ತೆರನಾಗಿರ್ಪುದು. ಅದು ಹೇಗೆಂದಡೆ; ಹೃದಯದಲ್ಲಿ ಮಹಾಲಿಂಗವೆಂದು, ಶ್ರೋತ್ರದಲ್ಲಿ ಪ್ರಸಾದಲಿಂಗವೆಂದು, ತ್ವಕ್ಕಿನಲ್ಲಿ ಜಂಗಮಲಿಂಗವೆಂದು, ನೇತ್ರದಲ್ಲಿ ಶಿವಲಿಂಗವೆಂದು, ಜಿಹ್ವೆಯಲ್ಲಿ ಗುರುಲಿಂಗವೆಂದು, ಘ್ರಾಣದಲ್ಲಿ ಆಚಾರಲಿಂಗವೆಂದು, ಇಂತು ಷಡಿಂದ್ರಿಯಂಗಳಲ್ಲಿ ಷಡ್ವಿಧಲಿಂಗವಾಗಿ ತೋರಿತ್ತು. ಇಂತೀ ಮರ್ಯಾದೆಯಲ್ಲಿ ಜ್ಞಾನ-ಕರ್ಮೇಂದ್ರಿಯಂಗಳಲ್ಲಿಯೂ ಲಿಂಗವೆ ಪ್ರಕಾಶಿಸುತ್ತಿಹುದು. ಅದು ಹೇಗಂದಡೆ; ಜ್ಞಾನೇಂದ್ರಿಯಂಗಳಿಗೆಯೂ ಕರ್ಮೇಂದ್ರಿಯಂಗಳಿಗೆಯೂ ಭೇದವಿಲ್ಲ. ಅದೆಂತೆಂದಡೆ, ಶ್ರೋತ್ರಕ್ಕೂ ವಾಕ್ಕಿಗೂ ಭೇದವಿಲ್ಲ, ಶಬ್ದಕ್ಕೂ ವಚನಕ್ಕೂ ಭೇದವಿಲ್ಲ; ತ್ವಕ್ಕಿಗೂ ಪಾಣಿಗೂ ಭೇದವಿಲ್ಲ, ಸ್ಪರ್ಶಕ್ಕೂ ಆದಾನಕ್ಕೂ ಭೇದವಿಲ್ಲ; ನೇತ್ರಕ್ಕೂ ಪಾದಕ್ಕೂ ಭೇದವಿಲ್ಲ, ರೂಪಿಗೂ ಗಮನಕ್ಕೂ ಭೇದವಿಲ್ಲ, ಜಿಹ್ವೆಗೂ ಗುಹ್ಯಕ್ಕೂ ಭೇದವಿಲ್ಲ, ರಸಕ್ಕೂ ಆನಂದಕ್ಕೂ ಭೇದವಿಲ್ಲ; ಘ್ರಾಣಕ್ಕೂ ಗುದಕ್ಕೂ ಭೇದವಿಲ್ಲ, ಗಂಧಕ್ಕೂ ವಿಸರ್ಜನಕ್ಕೂ ಭೇದವಿಲ್ಲ, ಇನ್ನು ಶ್ರೋತ್ರವೆಂಬ ಜ್ಞಾನೇಂದ್ರಿಯಕ್ಕೂ ವಾಕ್ಕೆಂಬ ಕರ್ಮೇಂದ್ರಿಯಕ್ಕೂ ಶಬ್ದ ವಿಷಯ, ಮೂಲಭೂತ ಆಕಾಶ, ಈಶಾನಮೂರ್ತಿ ಅಧಿದೇವತೆ. ತ್ವಕ್ಕೆಂಬ ಜ್ಞಾನೇಂದ್ರಿಯಕ್ಕೂ ಪಾಣಿಯೆಂಬ ಕರ್ಮೇಂದ್ರಿಯಕ್ಕೂ ಸ್ಪರ್ಶನ ವಿಷಯ, ಮೂಲಭೂತ ವಾಯು, ತತ್ಪುರುಷಮೂರ್ತಿ ಅಧಿದೇವತೆ. ದೃಕ್ಕೆಂಬ ಜ್ಞಾನೇಂದ್ರಿಯಕ್ಕೂ ಪಾದವೆಂಬ ಕರ್ಮೇಂದ್ರಿಯಕ್ಕೂ ರೂಪು ವಿಷಯ, ಮೂಲಭೂತ ಅಗ್ನಿ, ಅಘೋರಮೂರ್ತಿ ಅಧಿದೇವತೆ. ಜಿಹ್ವೆಯೆಂಬ ಜ್ಞಾನೇಂದ್ರಿಯಕ್ಕೂ ಗುಹ್ಯವೆಂಬ ಕರ್ಮೇಂದ್ರಿಯಕ್ಕೂ ರಸ ವಿಷಯ, ಮೂಲಭೂತ ಅಪ್ಪು, ವಾಮದೇವಮೂರ್ತಿ ಅಧಿದೇವತೆ, ಘ್ರಾಣವೆಂಬ ಜ್ಞಾನೇಂದ್ರಿಯಕ್ಕೂ ಪಾಯುವೆಂಬ ಕರ್ಮೇಂದ್ರಿಯಕ್ಕೂ ಗಂಧ ವಿಷಯ, ಮೂಲಭೂತ ಪೃಥ್ವಿ, ಸದ್ಯೋಜಾತಮೂರ್ತಿ ಅಧಿದೇವತೆ. ಇಂತೀ ಜ್ಞಾನೇಂದ್ರಿಯಂಗಳಿಗೆಯೂ ಕರ್ಮೇಂದ್ರಿಯಂಗಳಿಗೆಯೂ ಹೃದಯವೆ ಆಶ್ರಯಸ್ಥಾನವಾದ ಕಾರಣ, ಹೃದಯ ಆಕಾಶವೆನಿಸಿತ್ತು. ಅಲ್ಲಿ ಸ್ಥೂಲ ಸೂಕ್ಷ್ಮ ಕಾರಣ ರೂಪಿಂದೆಲ್ಲಾ ಇಂದ್ರಿಯಂಗಳಿರುತ್ತಿಹವು. ಗುರೂಪದೇಶದಿಂದ ಎಲ್ಲಾ ಇಂದ್ರಿಯಂಗಳಲ್ಲಿಯೂ ಲಿಂಗವೆ ಪ್ರಕಾಶಿಸುತ್ತಿಹುದು. ಅದು ಹೇಗೆಂದಡೆ; ಘ್ರಾಣದ ಘ್ರಾಣವೆ ಆಚಾರಲಿಂಗ; ಜಿಹ್ವೆಯ ಜಿಹ್ವೆಯೆ ಗುರುಲಿಂಗ; ನೇತ್ರದ ನೇತ್ರವೆ ಶಿವಲಿಂಗ; ತ್ವಕ್ಕಿನ ತ್ವಕ್ಕೆ ಜಂಗಮಲಿಂಗ; ಶ್ರೋತ್ರದ ಶ್ರೋತ್ರವೆ ಪ್ರಸಾದಲಿಂಗ; ಹೃದಯದ ಹೃದಯವೆ ಮಹಾಲಿಂಗ. ಈ ಆರು ಲಿಂಗಕ್ಕೆ ಅಂಗಸ್ಥಲ ಆರು; ಅವಾವುವೆಂದಡೆ; ಐಕ್ಯ ಶರಣ ಪ್ರಾಣಲಿಂಗಿ ಪ್ರಸಾದಿ ಮಹೇಶ್ವರ ಭಕ್ತ ಎಂದೀ ಆರು ಅಂಗಸ್ಥಲಗಳು. ಇವಕ್ಕೆ ವಿವರ; ಆತ್ಮಾಂಗದಲ್ಲಿ ಸದ್ಭಾವ ಹಸ್ತದಿಂದ ಎಲ್ಲಾ ಇಂದ್ರಿಯಂಗಳ ಪರಿಣಾಮವನು ಸಮರಸಭಕ್ತಿಯಿಂದ ಮಹಾಲಿಂಗಕ್ಕರ್ಪಿಸುವಾತನೆ ಐಕ್ಯ. ವ್ಯೋಮಾಂಗದಲ್ಲಿ ಸುಜ್ಞಾನಹಸ್ತದಿಂದ ಸುಶಬ್ದದ್ರವ್ಯವನು ಆನಂದಭಕ್ತಿಯಿಂದ ಪ್ರಸಾದಲಿಂಗಕ್ಕರ್ಪಿಸುವಾತನೆ ಶರಣ. ಅನಿಲಾಂಗದಲ್ಲಿ ಮನೋಹಸ್ತದಿಂದ ಸುಸ್ಪರ್ಶನದ್ರವ್ಯವನು ಅನುಭಾವಭಕ್ತಿಯಿಂದ ಶಿವಲಿಂಗಕ್ಕರ್ಪಿಸುವಾತನೆ ಪ್ರಾಣಲಿಂಗಿ. ಅನಲಾಂಗದಲ್ಲಿ ನಿರಹಂಕಾರಹಸ್ತದಿಂದ ಸುರೂಪುದ್ರವ್ಯವನು ಅವಧಾನಭಕ್ತಿಯಿಂದ ಶಿವಲಿಂಗಕ್ಕರ್ಪಿಸುವಾತನೆ ಪ್ರಸಾದಿ, ಜಲಾಂಗದಲ್ಲಿ ಸುಬುದ್ಧಿ ಹಸ್ತದಿಂದ ಸುರಸದ್ರವ್ಯವನು ನೈಷಿ*ಕಾಭಕ್ತಿಯಿಂದ ಗುರುಲಿಂಗಕ್ಕರ್ಪಿಸುವಾತನೆ ಮಾಹೇಶ್ವರ. ಭೂಮ್ಯಂಗದಲ್ಲಿ ಸುಚಿತ್ತಹಸ್ತದಿಂದ ಸುಗಂಧದ್ರವ್ಯವನು ಸದ್ಭಕ್ತಿಯಿಂದ ಆಚಾರಲಿಂಗಕ್ಕರ್ಪಿಸುವಾತನೆ ಭಕ್ತ. ಇನ್ನು ಷಡಾಧಾರಂಗಳಲ್ಲಿ ಷಡಕ್ಷರರೂಪದಿಂದ ಷಡ್ಲಿಂಗ ಸ್ಥಾಪ್ಯವಾಗಿಹವು. ಅದು ಹೇಗೆಂದಡೆ, ನಕಾರವೆ ಆಚಾರಲಿಂಗ, ಮಕಾರವೆ ಗುರುಲಿಂಗ, ಶಿಕಾರವೆ ಶಿವಲಿಂಗ, ವಾಕಾರವೆ ಜಂಗಮಲಿಂಗ, ಯಾಕಾರವೆ ಪ್ರಸಾದಲಿಂಗ, ಓಂಕಾರವೆ ಮಹಾಲಿಂಗ, ಎಂದು ಆರು ತೆರನಾಗಿಹವು. ಅದೆಂತೆಂದಡೆ; ಆಧಾರದಲ್ಲಿ ನಕಾರ, ಸ್ವಾಧಿಷಾ*ನದಲ್ಲಿ ಮಕಾರ, ಮಣಿಪೂರಕದಲ್ಲಿ ಶಿಕಾರ, ಅನಾಹತದಲ್ಲಿ ವಾಕಾರ, ವಿಶುದ್ಧಿಯಲ್ಲಿ ಯಕಾರ, ಆಜ್ಞೆಯಲ್ಲಿ ಓಂಕಾರ, ಇಂತೀ ಮರ್ಯಾದೆಯಲ್ಲಿ ಷಡ್ಧಾತುವಿನಲ್ಲಿ ಷಡಕ್ಷರರೂಪಿಂದ ಷಡ್ಲಿಂಗ ಸ್ಥಾಪ್ಯವಾಗಿಹವು. ಅದು ಹೇಗೆಂದಡೆ; ತ್ವಙ್ಮಯವಾಗಿಹುದು ಓಂಕಾರ, ರುಧಿರಮಯವಾಗಿಹುದು ನಕಾರ, ಮಾಂಸಮಯವಾಗಿಹುದು ಮಕಾರ, ಮೇಧೋಮಯವಾಗಿಹುದು ಶಿಕಾರ, ಅಸ್ಥಿಮಯವಾಗಿಹುದು ವಾಕಾರ, ಮಜ್ಜಾಮಯವಾಗಿಹುದು ಯಕಾರ. ಇಂತೀ ಷಡ್ಧಾತುವೆ ಷಡಕ್ಷರಮಯವಾಗಿ, ಅವೆ ಲಿಂಗಂಗಳಾಗಿ, ಒ?ಹೊರಗೆ ತೆರಹಿಲ್ಲದೆ ಸರ್ವಾಂಗವೆಲ್ಲವೂ ಲಿಂಗಮಯವಾದ ಇರವು. ಅದು ತಾನೆ ಶಿವನಿರವು, ಅದು ತಾನೆ ಶಿವನ ಭವನ. ಅದು ತಾನೆ ಶಿವನ ವಿಶ್ರಾಮಸ್ಥಾನ. ಇಂತೀ ಷಟ್ಸ್ಥಲಬ್ರಹ್ಮವನರಿದಾತನೆ ಶರಣ, ಆತನೆ ಲಿಂಗೈಕ್ಯ. ಇಂತೀ ಷಟ್ಸ್ಥಲಬ್ರಹ್ಮವೆಂಬುದು ಅಪ್ರಮಾಣ ಅಗೋಚರ ಅನಿರ್ವಾಚ್ಯವಾದ ಕಾರಣ, ವಚಿಸುತ್ತ ವಚಿಸುತ್ತ ವಚಿಸುತ್ತ ವಚನಗೆಟ್ಟಿತ್ತು. ಉಪ್ಪು ನೀರೊಳು ಕೂಡಿದಂತೆ, ವಾರಿಕಲ್ಲು ಅಂಬುಧಿಯೊಳು ಬಿದ್ದಂತೆ, ಶಿಖಿಕರ್ಪೂರ ಯೋಗದಂತೆ ಆದೆನಯ್ಯಾ ಕೂಡಲಚೆನ್ನಸಂಗಯ್ಯನಲ್ಲಿ, ಬಸವಣ್ಣನ ಭಾವಹಸ್ತ ಮುಟ್ಟಿದ ಕಾರಣ.
--------------
ಚನ್ನಬಸವಣ್ಣ
ಶ್ರೋತ್ರ, ನೇತ್ರ, ಜಿಹ್ವೆ, ತ್ವಕ್ಕು, ಘ್ರಾಣವೆಂಬ ಬುದ್ಧೀಂದ್ರಿಯಂಗಳನರಿದು, ವಾಕ್ಕು, ಪಾಣಿ, ಪಾದ, ಪಾಯು, ಗುಹ್ಯವೆಂಬ ಕರ್ಮೇಂದ್ರಿಯವ ತೊರೆದು, ಗಂಧ, ರಸ, ರೂಪು, ಸ್ಪರ್ಶನ, ಶಬ್ದವೆಂಬ ಪಂಚೇಂದ್ರಿಯವ ಜರಿದು, ಮನ, ಬುದ್ಧಿ, ಚಿತ್ತ, ಅಹಂಕಾರವೆಂಬ ಚತುಷ್ಟಯ ಕರಣಂಗಳ ಮೆಟ್ಟಿ, ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರವೆಂಬ ಅರಿಷಡ್ವರ್ಗಮಂ ಸುಟ್ಟು, ತನುವ್ಯಸನ, ಮನವ್ಯಸನ, ಧನವ್ಯಸನ, ವಾಹನವ್ಯಸನ, ಉತ್ಸಾಹವ್ಯಸನ, ಸೇವಕವ್ಯಸನ, ಮತ್ಸರವ್ಯಸನವೆಂಬ ಸಪ್ತವ್ಯಸನಂಗಳ ಸ್ವಪ್ನದಲ್ಲಿ ನೆನೆಯದೆ, ಪೃಥ್ವಿ, ಅಪ್ಪು, ಅಗ್ನಿ, ವಾಯು, ಆಕಾಶ, ಚಂದ್ರ, ಸೂರ್ಯ, ಆತ್ಮರೆಂಬ ಇಂತೀ ಅಷ್ಟಮದವ ಹಿಟ್ಟುಗುಟ್ಟಿ, ಪ್ರಾಣ, ಅಪಾನ, ಉದಾನ, ಸಮಾನ, ನಾದ, ಕೂರ್ಮ, ಕ್ರಕರ, ದೇವದತ್ತ, ಧನಂಜಯವೆಂಬ ದಶವಾಯುವ ಕಡೆಮೆಟ್ಟಿ, ಸಂಸಾರವ ಒಡಹಾಯ್ದು, ಜಗವ ಹೊದ್ದದೆ, ತಾನೊಂದು ಕಡೆಯಾಗಿ ನಿಂದು, ಮಾಯೆಗೆ ಒಡೆಯನಾಗಿ, ಆ ಮಹಾಘನವ ಸೂರೆಗೊಂಡ ಶರಣಂಗೆ ನಮೋ ನಮೋ ಎಂದು ಬದುಕಿದೆನಯ್ಯಾ. ಬಸವಪ್ರಿಯ ಕೂಡಲಚೆನ್ನಬಸವಣ್ಣ, ನಿಮ್ಮ ಧರ್ಮ, ನಿಮ್ಮ ಧರ್ಮ.
--------------
ಹಡಪದ ಅಪ್ಪಣ್ಣ
ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣವೆಂಬ ಜ್ಞಾನೇಂದ್ರಿಯಂಗಳು ತಾನಿರ್ದಲ್ಲಿ. ವಾಕು ಪಾಣಿ ಪಾದ ಪಾಯು ಗುಹ್ಯವೆಂಬ ಕರ್ಮೇದ್ರಿಯಂಗಳು ತಾನಿರ್ದಲ್ಲಿ. ಶಬ್ದ ಸ್ಪರ್ಶ ರೂಪ ರಸ ಗಂಧಂಗಳೆಂಬ ಪಂಚೇಂದ್ರಿಯವಿಷಯಂಗಳು ತಾನಿರ್ದಲ್ಲಿ. ವಚನ ಗಮನ ಆದಾನ ವಿಸರ್ಜನ ಆನಂದವೆಂಬ ಕರ್ಮೇಂದ್ರಿಯಂಗಳ ತನ್ಮಾತ್ರಯಂಗಳು ತಾನಿರ್ದಲ್ಲಿ. ಮನ ಬುದ್ಧಿ ಚಿತ್ತ ಅಹಂಕಾರ ಜೀವನೆಂಬ ಜೀವಪಂಚಕಂಗಳು ತಾನಿರ್ದಲ್ಲಿ. ಇವೆಲ್ಲ ತನ್ನಲ್ಲಿ ಉತ್ಪತ್ಯ ಸ್ಥಿತಿ ಲಯವಾಗಿ ಮತ್ತಂ ತನ್ನಾಧೀನದಲ್ಲಿ ಆಡುತ್ತಿಹುದಲ್ಲದೆ ಸ್ವತಂತ್ರ ಪರಬ್ರಹ್ಮವೆ ತಾನೆಂದರಿದ ಮಹಾಶರಣನು ಅದರಾಧೀನದಲ್ಲಿ ತಾನಾಡನು ನೋಡಾ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅನಾದಿ ಸದಾಶಿವತತ್ವ, ಅನಾದಿ ಈಶ್ವರತತ್ವ, ಅನಾದಿ ಮಹೇಶ್ವರತತ್ವವೆಂಬ, ಅನಾದಿ ತ್ರಿತತ್ವಂಗಳು ತಾನಲ್ಲ. ಆದಿ ಸದಾಶಿವತತ್ವ, ಆದಿ ಈಶ್ವರತತ್ವ, ಆದಿ ಮಹೇಶ್ವರತತ್ವವೆಂಬ ಆದಿ ತ್ರಿತತ್ವಂಗಳು ತಾನಲ್ಲ. ಶಂಕರ ಶಶಿಧರ ಗಂಗಾಧರ ಗೌರೀಶ ಕಳಕಂಠ ರುದ್ರ, ಕಪಾಲಮಾಲಾಧರ ರುದ್ರ,ಕಾಲಾಗ್ನಿರುದ್ರ, ಏಕಪಾದರುದ್ರ, ಮಹಾಕಾಲರುದ್ರ, ಮಹಾನಟನಾಪಾದರುದ್ರ, ಊಧ್ರ್ವಪಾದರುದ್ರ, ಬ್ರಹ್ಮಕಪಾಲ ವಿಷ್ಣುಕಂಕಾಳವ ಪಿಡಿದಾಡುವ ಪ್ರಳಯಕಾಲರುದ್ರರು, ತ್ರಿಶೂಲ ಖಟ್ವಾಂಗಧರರು ವೃಷಭವಾಹನರು ಪಂಚಮುಖರುದ್ರರು, ಶೂನ್ಯಕಾಯನೆಂಬ ಮಹಾರುದ್ರ, ಅನೇಕಮುಖ ಒಂದುಮುಖವಾಗಿ ವಿಶ್ವರೂಪರುದ್ರ, ವಿಶ್ವಾಧಿಕಮಹಾರುದ್ರ, ಅಂಬಿಕಾಪತಿ ಉಮಾಪತಿ ಪಶುಪತಿ ಮೊದಲಾದ ಗಣಾಧೀಶ್ವರರೆಂಬ ಮಹಾಗಣಂಗಳು ತಾನಲ್ಲ. ಸಹಸ್ರಶಿರ ಸಹಸ್ರಾಕ್ಷ ಸಹಸ್ರಬಾಹು ಸಹಸ್ರಪಾದವನುಳ್ಳ ವಿರಾಟ್ಪುರುಷನು ತಾನಲ್ಲ. ವಿಶ್ವತೋಮುಖ ವಿಶ್ವತೋಚಕ್ಷು ತಾನಲ್ಲ. ವಿಶ್ವತೋಪಾದವನುಳ್ಳ ಮಹಾಪುರುಷ ತಾನಲ್ಲ. ಪತಿ-ಪಶು-ಪಾಶಂಗಳೆಂಬ ಸಿದ್ಧಾಂತಜ್ಞಾನತ್ರಯಂಗಳು ತಾನಲ್ಲ. ತ್ವಂ ಪದ ತತ್‍ಪದ ಅಸಿಪದವೆಂಬ ವೇದಾಂತಪದತ್ರಯ ಪದಾರ್ಥಂಗಳು ತಾನಲ್ಲ. ಜೀವಹಂಸ ಪರಮಹಂಸ ಪರಾಪರಹಂಸನೆಂಬ ಹಂಸತ್ರಯಂಗಳು ತಾನಲ್ಲ. ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವರೆಂಬ ಪಂಚಮೂರ್ತಿಗಳು ತಾನಲ್ಲ. ಆ ಸದಾಶಿವತತ್ವದಲ್ಲುತ್ಪತ್ಯವಾದ ಪೃಥ್ವಿ ಅಪ್ಪು ತೇಜ ವಾಯು ಆಕಾಶ ಚಂದ್ರ ಸೂರ್ಯಾತ್ಮರೆಂಬ ಅಷ್ಟತನುಮೂರ್ತಿಗಳು ತಾನಲ್ಲ. ಅಸ್ಥಿ ಮಾಂಸ ಚರ್ಮ ನರ ರೋಮ -ಈ ಐದು ಪೃಥ್ವಿಯಿಂದಾದವು. ಪಿತ್ಥ ಶ್ಲೇಷ್ಮ ರಕ್ತ ಶುಕ್ಲ ಮೂತ್ರ -ಈ ಐದು ಅಪ್ಪುವಿನಿಂದಾದವು. ಕ್ಷುದೆ ತೃಷೆ ನಿದ್ರೆ ಆಲಸ್ಯ ಸಂಗ -ಈ ಐದು ಅಗ್ನಿಯಿಂದಾದವು. ಪರಿವ ಪಾರುವ ಸುಳಿವ ಕೂಡುವ ಅಗಲುವ -ಈ ಐದು ವಾಯುವಿನಿಂದಾದವು. ವಿರೋಧಿಸುವ ಅಂಜಿಸುವ ನಾಚುವ ಮೋಹಿಸುವ ಅಹುದಾಗದೆನುವ -ಈ ಐದು ಆಕಾಶದಿಂದಾದವು. ಇಂತೀ ಪಂಚಭೌತಿಕದ ಪಂಚವಿಂಶತಿ ಗುಣಂಗಳಿಂದಾದ ದೇಹವು ತಾನಲ್ಲ. ಶ್ರೋತ್ರ ತ್ವಕ್ಕು ನೇತ್ರ ಜಿಹ್ವೆ ಘ್ರಾಣವೆಂಬ ಜ್ಞಾನೇಂದ್ರಿಯಂಗಳು ತಾನಲ್ಲ. ವಾಕು ಪಾದ ಪಾಣಿ ಪಾಯು ಗುಹ್ಯವೆಂಬ ಕರ್ಮೇಂದ್ರಿಯಂಗಳು ತಾನಲ್ಲ. ಶಬ್ದ ಸ್ಪರ್ಶ ರೂಪ ರಸ ಗಂಧಂಗಳೆಂಬ ಪಂಚವಿಷಯಂಗಳು ತಾನಲ್ಲ, ವಚನ ಗಮನ ದಾನ ವಿಸರ್ಗ ಆನಂದವೆಂಬ ಕರ್ಮೇಂದ್ರಿಯಂಗಳ ತನ್ಮಾತ್ರೆಗಳು ತಾನಲ್ಲ, ಇಡೆ ಪಿಂಗಳೆ ಸುಷುಮ್ನಾ ಗಾಂಧಾರೀ ಹಸ್ತಿಜಿಹ್ವಾ ಪೂಷೆ ಪಯಸ್ವಿನೀ ಅಲಂಬು ಲಕುಹ ಶಂಕಿನೀ-ಎಂಬ ದಶನಾಡಿಗಳು ತಾನಲ್ಲ. ಪ್ರಾಣ ಅಪಾನ ವ್ಯಾನ ಉದಾನ ಸಮಾನ ನಾಗ ಕೂರ್ಮ ಕ್ರಕರ ದೇವದತ್ತ ಧನಂಜಯವೆಂಬ ದಶವಾಯುಗಳು ತಾನಲ್ಲ. ಸ್ಥೂಲತನು, ಸೂಕ್ಷ್ಮತನು, ಕಾರಣತನು, ನಿರ್ಮಲತನು, ಆನಂದತನು, ಚಿನ್ಮಯತನು, ಚಿದ್ರೂಪತನು, ಶುದ್ಧತನುವೆಂಬ ಅಷ್ಟತನುಗಳು ತಾನಲ್ಲ. ಜೀವಾತ್ಮ ಅಂತರಾತ್ಮ ಪರಮಾತ್ಮ ನಿರ್ಮಲಾತ್ಮ ಶುದ್ಧಾತ್ಮ ಜ್ಞಾನಾತ್ಮ ಭೂತಾತ್ಮ ಮಹಾತ್ಮವೆಂಬ ಅಷ್ಟ ಆತ್ಮಂಗಳು ತಾನಲ್ಲ. ಸಂಸ್ಥಿತ ತೃಣೀಕೃತ ವರ್ತಿನಿ ಕ್ರೋಧಿನಿ ಮೋಹಿನಿ ಅತಿಚಾರಿಣಿ ಗಂಧಚಾರಿಣಿ ವಾಸಿನಿಯೆಂಬ ಅಂತರಂಗದ ಅಷ್ಟಮದಂಗಳು ತಾನಲ್ಲ. ಕುಲ ಛಲ ಧನ ರೂಪ ಯೌವ್ವನ ವಿದ್ಯೆ ರಾಜ್ಯ ತಪವೆಂಬ ಬಹಿರಂಗ ಅಷ್ಟಮದಂಗಳು ತಾನಲ್ಲ. ರಸ ರುಧಿರ ಮಾಂಸ ಮೇದಸ್ಸು ಅಸ್ಥಿ ಮಜ್ಜೆ ಶುಕ್ಲವೆಂಬ ಸಪ್ತಧಾತುಗಳು ತಾನಲ್ಲ. ತನುವ್ಯಸನ, ಮನವ್ಯಸನ, ಧನವ್ಯಸನ, ರಾಜ್ಯವ್ಯಸನ, ವಿಶ್ವವ್ಯಸನ, ಉತ್ಸಾಹವ್ಯಸನ, ಸೇವಕವ್ಯಸನವೆಂಬ ಸಪ್ತವ್ಯಸನಂಗಳು ತಾನಲ್ಲ. ಕ್ಷುತ್ ಪಿಪಾಸೆ ಶೋಕ ಮೋಹ ಜನನ ಮರಣವೆಂಬ ಷಡೂರ್ಮಿಗಳು ತಾನಲ್ಲ. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವೆಂಬ ಅರಿಷಡ್ವರ್ಗಂಗಳು ತಾನಲ್ಲ. ಜಾತಿ, ವರ್ಣ, ಆಶ್ರಮ, ಕುಲ, ಗೋತ್ರ, ನಾಮಗಳೆಂಬ ಷಟ್‍ಭ್ರಮೆಗಳು ತಾನಲ್ಲ. ಆಸ್ತಿ, ಜಾಯತೇ, ಪರಿಣಮತೇ, ವರ್ಧತೇ, ವಿನಶ್ಯತಿ, ಅಪಕ್ಷೀಯತೇ ಎಂಬ ಷಡ್ಭಾವವಿಕಾರಂಗಳು ತಾನಲ್ಲ. ಅನ್ನಮಯ ಪ್ರಾಣಮಯ ಮನೋಮಯ ವಿಜ್ಞಾನಮಯ ಆನಂದಮಯವೆಂಬ ಪಂಚಕೋಶಂಗಳು ತಾನಲ್ಲ. ಸತ್ವ ರಜ ತಮೋಗುಣತ್ರಯಂಗಳು ತಾನಲ್ಲ. ಅಧ್ಯಾತ್ಮಿಕ, ಆಧಿದೈವಿಕ, ಆಧಿಭೌತಿಕವೆಂಬ ತಾಪತ್ರಯಂಗಳು ತಾನಲ್ಲ. ವಿಶ್ವ ತೈಜಸ ಪ್ರಾಜ್ಞವೆಂಬ ಜೀವತ್ರಯಂಗಳು ತಾನಲ್ಲ. ವಾತ ಪಿತ್ಥ ಕಫಂಗಳೆಂಬ ದೋಷತ್ರಯಂಗಳು ತಾನಲ್ಲ. ಆಣವ ಮಾಯಾ ಕಾರ್ಮಿಕವೆಂಬ ಮಲತ್ರಯಂಗಳು ತಾನಲ್ಲ. ಸುಖ ದುಃಖ ಪುಣ್ಯ ಪಾಪಂಗಳು ತಾನಲ್ಲ. ಸಂಚಿತ, ಪ್ರಾರಬ್ಧ, ಆಗಾಮಿಯೆಂಬ ಕರ್ಮತ್ರಯಂಗಳು ತಾನಲ್ಲ. ಅಗ್ನಿಮಂಡಲ, ಆದಿತ್ಯಮಂಡಲ, ಚಂದ್ರಮಂಡಲವೆಂಬ ಮಂಡಲತ್ರಯಂಗಳು ತಾನಲ್ಲ. ಆಧಾರ, ಸ್ವಾಧಿಷಾ*ನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೆ ಎಂಬ ಷಡುಚಕ್ರಂಗಳ ದಳ ವರ್ಣ ಅಕ್ಷರಂಗಳು ತಾನಲ್ಲ. ಜಾಗ್ರ ಸ್ವಪ್ನ ಸುಷುಪ್ತಿ ತೂರ್ಯ ತೂರ್ಯಾತೀತಗಳೆಂಬ ಪಂಚಾವಸ್ಥೆಗಳು ತಾನಲ್ಲ. ಜಾಗ್ರದಲ್ಲಿಯ ಜಾಗ್ರ, ಜಾಗ್ರದಲ್ಲಿಯ ಸ್ವಪ್ನ, ಜಾಗ್ರದಲ್ಲಿಯ ಸುಷುಪ್ತಿ, ಜಾಗ್ರದಲ್ಲಿಯ ತೂರ್ಯ, ಜಾಗ್ರದಲ್ಲಿಯ ತೂರ್ಯಾತೀತವೆಂಬ ಜಾಗ್ರಪಂಚಾವಸ್ಥೆಗಳು ತಾನಲ್ಲ. ಸ್ವಪ್ನದಲ್ಲಿಯ ಜಾಗ್ರ, ಸ್ವಪ್ನದಲ್ಲಿಯ ಸ್ವಪ್ನ, ಸ್ವಪ್ನದಲ್ಲಿಯ ಸುಷುಪ್ತಿ, ಸ್ವಪ್ನದಲ್ಲಿಯ ತೂರ್ಯ, ಸ್ವಪ್ನದಲ್ಲಿಯ ತೂರ್ಯಾತೀತವೆಂಬ ಸ್ವಪ್ನಪಂಚಾವಸ್ಥೆಗಳು ತಾನಲ್ಲ. ಸುಷುಪ್ತಿಯಲ್ಲಿಯ ಜಾಗ್ರ, ಸುಷುಪ್ತಿಯಲ್ಲಿಯ ಸ್ವಪ್ನ, ಸುಷುಪ್ತಿಯಲ್ಲಿಯ ಸುಷುಪ್ತಿ , ಸುಷುಪ್ತಿಯಲ್ಲಿಯ ತೂರ್ಯ, ಸುಷುಪ್ತಿಯಲ್ಲಿಯ ತೂರ್ಯಾತೀತವೆಂಬ ಸುಷುಪ್ತಿಯ ಪಂಚಾವಸ್ಥೆಗಳು ತಾನಲ್ಲ. ತೂರ್ಯದಲ್ಲಿಯ ಜಾಗ್ರ, ತೂರ್ಯದಲ್ಲಿಯ ಸ್ವಪ್ನ, ತೂರ್ಯದಲ್ಲಿಯ ಸುಷುಪ್ತಿ, ತೂರ್ಯದಲ್ಲಿಯ ತೂರ್ಯ, ತೂರ್ಯದಲ್ಲಿಯ ತೂರ್ಯಾತೀತವೆಂಬ ತೂರ್ಯಪಂಚಾವಸ್ಥೆಗಳು ತಾನಲ್ಲ. ತೂರ್ಯಾತೀತದಲ್ಲಿಯ ಜಾಗ್ರ, ತೂರ್ಯಾತೀತದಲ್ಲಿಯ ಸ್ವಪ್ನ , ತೂರ್ಯಾತೀತದಲ್ಲಿಯ ಸುಷುಪ್ತಿ, ತೂರ್ಯಾತೀತದಲ್ಲಿಯ ತೂರ್ಯ, ತೂರ್ಯಾತೀತದಲ್ಲಿಯ ತೂರ್ಯಾತೀತವೆಂಬ ತೂರ್ಯಾತೀತಪಂಚಾವಸ್ಥೆಗಳು ತಾನಲ್ಲ. ಸಕಲ-ಶುದ್ಧ-ಕೇವಲಾವಸ್ಥೆಗಳು ತಾನಲ್ಲ. ಸಕಲದಲ್ಲಿಯ ಸಕಲ, ಸಕಲದಲ್ಲಿಯ ಶುದ್ಧ, ಸಕಲದಲ್ಲಿಯ ಕೇವಲವೆಂಬ ಸಕಲತ್ರಿಯಾವಸ್ಥೆಗಳು ತಾನಲ್ಲ. ಶುದ್ಧದಲ್ಲಿಯ ಸಕಲ, ಶುದ್ಧದಲ್ಲಿಯ ಶುದ್ಧ, ಶುದ್ಧದಲ್ಲಿಯ ಕೇವಲವೆಂಬ ಶುದ್ಧತ್ರಿಯಾವಸ್ಥೆಗಳು ತಾನಲ್ಲ. ಕೇವಲದಲ್ಲಿಯ ಸಕಲ, ಕೇವಲದಲ್ಲಿಯ ಶುದ್ಧ, ಕೇವಲದಲ್ಲಿಯ ಕೇವಲವೆಂಬ ಕೇವಲತ್ರಿಯಾವಸ್ಥೆಗಳು ತಾನಲ್ಲ. ಜ್ಞಾತೃ ಜ್ಞಾನ ಜ್ಞೇಯವೆಂಬ ಜ್ಞಾನತ್ರಯಂಗಳು ತಾನಲ್ಲ. ಯಮ ನಿಯಮ ಆಸನ ಪ್ರಾಣಾಯಾಮ ಪ್ರತ್ಯಾಹಾರ ಧ್ಯಾನ ಧಾರಣ ಸಮಾಧಿಯೆಂಬ ಅಷ್ಟಾಂಗಯೋಗಂಗಳು ತಾನಲ್ಲ. ಧರ್ಮ ಅರ್ಥ ಕಾಮ ಮೋಕ್ಷಂಗಳೆಂಬ ಚತುರ್ವಿಧ ಪುರುಷಾರ್ಥಂಗಳು ತಾನಲ್ಲ. ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯವೆಂಬ ಚತುರ್ವಿಧಪದಂಗಳು ತಾನಲ್ಲ. ಅಣಿಮಾ ಗರಿಮಾ ಲಘಿಮಾ ಮಹಿಮಾ ಪ್ರಾಪ್ತಿ ಪ್ರಕಾವ್ಯ ಇಶಿತ್ವ ವಶಿತ್ವ ಎಂಬ ಅಷ್ಟಮಹದೈಶ್ವರ್ಯಂಗಳು ತಾನಲ್ಲ. ರಾಜಸಹಂಕಾರ ತಾಮಸಹಂಕಾರ ಸ್ವಹಂಕಾರವೆಂಬ ಅಹಂಕಾರತ್ರಯಂಗಳು ತಾನಲ್ಲ. ಅಂಜನಾಸಿದ್ಧಿ, ಘುಟಿಕಾಸಿದ್ಧಿ, ರಸಸಿದ್ಧಿ, ಪಾದೋದಕಸಿದ್ಧಿ, ಪರಕಾಯ ಪ್ರವೇಶ, ದೂರಶ್ರವಣ, ದೂರದೃಷ್ಟಿ, ತ್ರಿಕಾಲಜ್ಞಾನವೆಂಬ ಅಷ್ಟಮಹಾಸಿದ್ಧಿಗಳು ತಾನಲ್ಲ. ಉದರಾಗ್ನಿ ಮಂದಾಗ್ನಿ ಶೋಕಾಗ್ನಿ ಕ್ರೋಧಾಗ್ನಿ ಕಾಮಾಗ್ನಿಯೆಂಬ ಪಂಚಾಗ್ನಿಗಳು ತಾನಲ್ಲ. ಪ್ರಕೃತಿ, ಪುರುಷ, ಕಾಲ, ಪರ, ವ್ಯೋಮಾಕಾಶಂಗಳು ತಾನಲ್ಲ. ಊಧ್ರ್ವಶೂನ್ಯ, ಅಧಃಶೂನ್ಯ, ಮಧ್ಯಶೂನ್ಯ, ಸರ್ವಶೂನ್ಯವಾಗಿಹ ಸಹಜನಿರಾಲಂಬವೇ ತಾನೆಂದರಿದ ಮಹಾಶರಣಂಗೆ ನಾಮ ರೂಪ ಕ್ರಿಯಾತೀತವಾಗಿಹ ಮಹಾಘನವೇ ತನ್ನ ಶಿರಸ್ಸು ನೋಡಾ. ದಿವ್ಯಜ್ಞಾನವೇ ತನ್ನ ಚಕ್ಷು, ಅಚಲಪದವೇ ತನ್ನ ಪುರ್ಬು, ಅಚಲಾತೀತವೇ ತನ್ನ ಹಣೆ ನೋಡಾ. ನಿರಾಕುಳಪದವೇ ತನ್ನ ನಾಸಿಕ, ನಿರಂಜನಾತೀತವೆ ತನ್ನ ಉಶ್ವಾಸ-ನಿಶ್ವಾಸ ನೋಡಾ. ನಿರಾಮಯವೇ ತನ್ನ ಕರ್ಣ, ನಿರಾಮಯಾತೀತವೇ ತನ್ನ ಕರ್ಣದ್ವಾರ ನೋಡಾ. ಅಮಲ ನಿರ್ಮಲವೇ ತನ್ನ ಗಲ್ಲ, ಅಮಲಾತೀತವೇ ತನ್ನ ಗಡ್ಡಮೀಸೆ ಕೋರೆದಾಡೆ ನೋಡಾ. ನಾದಬಿಂದುಕಳಾತೀತವೆ ತನ್ನ ತಾಳೋಷ*ಸಂಪುಟ ನೋಡಾ. ಅಕಾರ, ಉಕಾರ, ಮಕಾರ, ನಾದ ಬಿಂದು ಅರ್ಧಚಂದ್ರ ನಿರೋದಿನಾದಾಂತ ಶಕ್ತಿವ್ಯಾಪಿನಿ ವ್ಯೋಮರೂಪಿಣಿ ಅನಂತ ಆನಂದ ಅನಾಶ್ರಿತ ಸುಮನೆ ಉನ್ಮನಿ ಇಂತೀ ಪ್ರಣವದಲ್ಲಿ ಉತ್ಪತ್ಯವಾದ ಷೋಡಶಕಳೆ ತನ್ನ ಷೋಡಶ ದಂತಂಗಳು ನೋಡಾ. ಆ ದಂತಂಗಳ ಕಾಂತಿ ಅನೇಕಕೋಟಿ ಸಿಡಿಲೊಡೆದ ಬಯಲಪ್ರಕಾಶವಾಗಿಹುದು ನೋಡಾ. ತನ್ನ ಕೊರಳೆ ನಿರಾಕುಳ, ತನ್ನ ಭುಜಂಗಳೆ ಅಪ್ರಮಾಣ ಅಗೋಚರ ನೋಡಾ. ತನ್ನ ಹಸ್ತಾಂಗುಲಿ ನಖಂಗಳೆ ಪರತತ್ವ, ಶಿವತತ್ವ, ಗುರುತತ್ವ, ಲಿಂಗತತ್ವಂಗಳು ನೋಡಾ. ಪರಬ್ರಹ್ಮವೇ ತನ್ನ ಎದೆ, ಆ ಪರಬ್ರಹ್ಮವೆಂಬ ಎದೆಯಲ್ಲಿ ನಿರಂಜನಪ್ರಣವ ಅವಾಚ್ಯಪ್ರಣವವೆಂಬ ಸಣ್ಣ ಕುಚಂಗಳು ನೋಡಾ. ಚಿತ್ತಾಕಾಶ ಭೇದಾಕಾಶವೆ ತನ್ನ ದಕ್ಷಿಣ ವಾಮ ಪಾಶ್ರ್ವಂಗಳು ನೋಡಾ. ಬಿಂದ್ವಾಕಾಶವೇ ತನ್ನ ಬೆನ್ನು ನೋಡಾ. ಮಹಾಕಾಶವೇ ತನ್ನ ಬೆನ್ನ ನಿಟ್ಟೆಲವು ನೋಡಾ. ಪಂಚಸಂಜ್ಞೆಯನುಳ್ಳ ಅಖಂಡಗೋಳಕಾಕಾರಲಿಂಗವೆ ತನ್ನ ಗರ್ಭ ನೋಡಾ. ಆ ಗರ್ಭ ಅನೇಕಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶವಾಗಿಹುದುನೋಡಾ. ಆ ಗರ್ಭದಲ್ಲಿ ಅನೇಕಕೋಟಿತತ್ವಂಗಳು, ಅನೇಕಕೋಟಿ ಸದಾಶಿವರು, ಅನೇಕಕೋಟಿ ಮಹೇಶ್ವರರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಸದಾಶಿವರು, ಅನೇಕಕೋಟಿರುದ್ರರು, ಅನೇಕಕೋಟಿ ವಿಷ್ಣಾ ್ವದಿಗಳಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಬ್ರಹ್ಮರು, ಅನೇಕಕೋಟಿ ಋಷಿಗಳು ಅನೇಕಕೋಟಿ ಚಂದ್ರಾದಿತ್ಯರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಇಂದ್ರರು, ಅನೇಕಕೋಟಿ ದೇವರ್ಕಗಳು, ಅನೇಕಕೋಟಿ ಬ್ರಹ್ಮಾಂಡಗಳಡಗಿಹವು ನೋಡಾ. ತನ್ನ ನಡುವೆ ವ್ಯೋಮಾತೀತವು, ತನ್ನ ಕಟಿಸ್ಥಾನವೇ ಕಲಾಪ್ರಣವ, ತನ್ನ ಪಚ್ಚಳವೆ ಅನಾದಿಪ್ರಣವ ಆದಿಪ್ರಣವ ನೋಡಾ. ತನ್ನ ಉಪಸ್ಥವೇ ಬ್ರಹ್ಮ, ವಿಷ್ಣು, ರುದ್ರ, ಈಶ್ವರ, ಸದಾಶಿವ ಮೊದಲಾದ ಸಮಸ್ತ ದೇವರ್ಕಗಳಿಗೂ ಜನನಸ್ಥಳವಾಗಿಹ ನಿರ್ವಾಣಪದ ನೋಡಾ. ಶಿವಸಂಬಂಧ, ಶಕ್ತಿಸಂಬಂಧವಾಗಿಹ ಓಂಕಾರವೆ ತನ್ನ ಒಳದೊಡೆ ನೋಡಾ. ಸಚ್ಚಿದಾನಂದ ಪರಮಾನಂದವೆ ತನ್ನ ಒಳಪಾದ ಕಂಬಗಳು ನೋಡಾ. ಚಿದಾತ್ಮ ಪರಮಾತ್ಮನೆ ತನ್ನ ಹರಡು, ಅತಿಸೂಕ್ಷ್ಮಪಂಚಾಕ್ಷರವೆ ತನ್ನ ಪಾದಾಂಗುಷಾ*ಂಗುಲಿಗಳೆಂಬ ಸಾಯುಜ್ಯಪದ ನೋಡಾ. ತನ್ನ ಸ್ವರವೆ ಪರಾಪರ, ತನ್ನ ಮಾತೇ ಮಹಾಜ್ಯೋತಿರ್ಮಯಲಿಂಗ, ಚಿನ್ಮಯ ಚಿದ್ರೂಪ ಚಿತ್ಪ್ರಕಾಶವೆ ತನ್ನ ವಪೆ ನೋಡಾ. ಇಷ್ಟಲಿಂಗ, ಪ್ರಾಣಲಿಂಗ, ಭಾವಲಿಂಗ, ಆಚಾರಲಿಂಗ, ಗುರುಲಿಂಗ, ಶಿವಲಿಂಗ, ಜಂಗಮಲಿಂಗ, ಪ್ರಸಾದಲಿಂಗ, ಮಹಾಲಿಂಗ ಮೊದಲಾಗಿ ಇನ್ನೂರ ಹದಿನಾರು ಷಡುಸ್ಥಲಲಿಂಗವೆ ತನ್ನಂತಃಸ್ಥಾನದಲ್ಲಿ ಧರಿಸಿಹ ಆಭೂಷಣಂಗಳು ನೋಡಾ. ಮಹಾಲಿಂಗವೇ ತುರುಬು, ಶಿವಜ್ಞಾನವೆ ಶೃಂಗಾರವಾಗಿಹ ತನ್ನ ತಾನರಿದು ಅಂತಃಶೂನ್ಯ, ಅಧಃಶೂನ್ಯ, ಬಹಿಃಶೂನ್ಯ, ದಶದಿಶಾಶೂನ್ಯ ನಿರಾಕಾರವಾಗಿಹ ತನ್ನ ಅಂಗ ಪ್ರತ್ಯಂಗ ಸ್ವರೂಪ ಸ್ವಭಾವಂಗಳ ತಿಳಿದು ಮಹಾಶರಣನು ತಾನೆ ಗುರು, ತಾನೆ ಲಿಂಗ, ತಾನೆ ಜಂಗಮ, ತಾನೆ ಪರಮಪಾದೋದಕಪ್ರಸಾದ ನೋಡಾ. ತಾನೆ ನಾದಬಿಂದುಕಳಾತೀತ ನೋಡಾ. ತಾನೆ ಶೂನ್ಯ ನಿಶ್ಶೂನ್ಯನು, ತಾನೆ ಘನಶೂನ್ಯ, ಮಹಾಘನಶೂನ್ಯ ನೋಡಾ. ತಾನೆ ಬಯಲು ನಿರ್ಬಯಲು, ತಾನೆ ನಿರುಪಮ ನಿರಾಕಾರ ತಾನೆ ನಿರಾಳ ನಿರಾಲಂಬ ನೋಡಾ. ತಾನೆ ಸಚ್ಚಿದಾನಂದ ನಿತ್ಯಪರಿಪೂರ್ಣನು, ತನ್ನಿಂದಧಿಕವಪ್ಪ ಪರಬ್ರಹ್ಮವೊಂದಿಲ್ಲವಾಗಿ ತಾನೆ ಸ್ವಯಂಜ್ಯೋತಿರ್ಲಿಂಗ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ತಾರಕಾಕೃತಿ, ನಕಾರಪ್ರಣಮ, ಆಧಾರಚಕ್ರ, ಸದ್‍ಭಕ್ತನೆ ಅಂಗ, ಸುಚಿತ್ತವೆ ಹಸ್ತ, ಆಚಾರಲಿಂಗ, ಘ್ರಾಣವೆಂಬ ಮುಖ, ಕ್ರಿಯಾಶಕ್ತಿ, ಶ್ರದ್ಧಾಭಕ್ತಿ, ಸುಗಂಧಪದಾರ್ಥ, ಗಂಧಪ್ರಸಾದ, ನಿವೃತ್ತಿಕಲೆ, ಕರ್ಮಸಾದಾಖ್ಯ, ಸತ್ತುವೆಂಬ ಲಕ್ಷಣ, ಪರವೆಂಬ ಸಂಜ್ಞೆ, ಋಗ್ವೇದ- ಇಂತಿವೆಲ್ಲವು ಇಷ್ಟಲಿಂಗದ ವೃತ್ತದಲ್ಲಿ ಸಂಬಂಧವು. ದಂಡಕಾಕೃತಿ, ಮಕಾರಪ್ರಣಮ, ಸಾಧಿಷಾ*ನಚಕ್ರ, ಮಹೇಶ್ವರನೆ ಅಂಗ, ಸುಬುದ್ಧಿಯೆ ಹಸ್ತ, ಗುರುಲಿಂಗ, ಜಿಹ್ವೆಯೆಂಬ ಮುಖ, ಜ್ಞಾನಶಕ್ತಿ, ನೈಷಿ*ಕಭಕ್ತಿ , ಸುರಸಪದಾರ್ಥ, ರಸಪ್ರಸಾದ, ಪ್ರತಿಷಾ*ಕಲೆ, ಕರ್ತೃಸಾದಾಖ್ಯ, ಚಿತ್ತುವೆಂಬ ಲಕ್ಷಣ, ಗೂಢವೆಂಬ ಸಂಜ್ಞೆ, ಯುಜುರ್ವೇದ ಇಂತಿವೆಲ್ಲವು ಇಷ್ಟಲಿಂಗದ ಕಟಿಯಲ್ಲಿ ಸಂಬಂಧವು. ಕುಂಡಲಾಕೃತಿ, ಶಿಕಾರಪ್ರಣಮ, ಮಣಿಪೂರಕಚಕ್ರ, ಪ್ರಸಾದಿಯೆ ಅಂಗ, ನಿರಹಂಕಾರವೆ ಹಸ್ತ , ಶಿವಲಿಂಗನೇತ್ರವೆಂಬ ಮುಖ, ಇಚ್ಛಾಶಕ್ತಿ , ಸಾವಧಾನಭಕ್ತಿ , ಸುರೂಪುಪದಾರ್ಥ, ರೂಪುಪ್ರಸಾದ, ವಿದ್ಯಾಕಲೆ, ಮೂರ್ತಿಸಾದಾಖ್ಯ, ಆನಂದವೆಂಬ ಲಕ್ಷಣ, ಶರೀರಸ್ಥವೆಂಬ ಸಂಜ್ಞೆ, ಸಾಮವೇದ- ಇಂತಿವೆಲ್ಲ ಇಷ್ಟಲಿಂಗದ ಗೋಳಕದಲ್ಲಿ ಸಂಬಂಧವು. ಅರ್ಧಚಂದ್ರಾಕೃತಿ, ವಕಾರಪ್ರಣಮ, ಅನಾಹತ ಚಕ್ರ, ಪ್ರಾಣಲಿಂಗಿಯೆ ಅಂಗ, ಸುಮನವೆ ಹಸ್ತ , ಜಂಗಮಲಿಂಗ, ತ್ವಗೀಂದ್ರಿಯವೆಂಬ ಮುಖ, ಆದಿಶಕ್ತಿ , ಅನುಭಾವಭಕ್ತಿ , ಸುಸ್ಪರ್ಶನಪದಾರ್ಥ, ಸ್ಪರ್ಶನಪ್ರಸಾದ, ಶಾಂತಿಕಲೆ, ಅಮೂರ್ತಿಸಾದಾಖ್ಯ, ನಿತ್ಯವೆಂಬ ಲಕ್ಷಣ, ಲಿಂಗಕ್ಷೇತ್ರಸಂಜ್ಞೆ, ಅಥರ್ವಣವೇದ- ಇಂತಿವೆಲ್ಲ ಇಷ್ಟಲಿಂಗದ ಗೋಮುಖದಲ್ಲಿ ಸಂಬಂಧವು. ದರ್ಪಣಾಕೃತಿ, ಯಕಾರಪ್ರಣಮ, ವಿಶುದ್ಧಿ ಚಕ್ರ, ಶರಣನೆ ಅಂಗ, ಸುಜ್ಞಾನವೆ ಹಸ್ತ, ಪ್ರಸಾದಲಿಂಗ, ಶ್ರೋತ್ರವೆಂಬ ಮುಖ, ಪರಾಶಕ್ತಿ , ಆನಂದ ಭಕ್ತಿ , ಸುಶಬ್ದಪದಾರ್ಥ, ಶಬ್ದಪ್ರಸಾದ, ಶಾಂತ್ಯತೀತಕಲೆ, ಶಿವಸಾದಾಖ್ಯ, ಪರಿಣಾಮವೆಂಬ ಲಕ್ಷಣ, ಅನಾದಿವತ್ ಎಂಬ ಸಂಜ್ಞೆ, ಅಜಪೆವೇದ- ಇಂತಿವೆಲ್ಲ ಇಷ್ಟಲಿಂಗದ ನಾಳದಲ್ಲಿ ಸಂಬಂಧವು. ಒಂಕಾರಾಕೃತಿ, ಒಂಕಾರಪ್ರಣಮ, ಆಜ್ಞೇಯಚಕ್ರ, ಐಕ್ಯನೆ ಅಂಗ, ಸದ್‍ಭಾವಹಸ್ತ, ಮಹಾಲಿಂಗ, ಹೃದಯವೆಂಬ ಮುಖ, ಚಿಚ್ಛಕ್ತಿ , ಸಮರಸಭಕ್ತಿ , ಸುತೃಪ್ತಿಪದಾರ್ಥ, ತೃಪ್ತಿಪ್ರಸಾದ, ಶಾಂತ್ಯತೀತೋತ್ತರಕಲೆ, ಮಹಾಸಾದಾಖ್ಯ, ಅಖಂಡವೆಂಬ ಲಕ್ಷಣ, ಮಹಾಸಂಜ್ಞೆ, ಗಾಯತ್ರಿಯೆಂಬ ವೇದ- ಇಂತಿವೆಲ್ಲ ಇಷ್ಟಲಿಂಗದ ಮಸ್ತಕದಲ್ಲಿ ಸಂಬಂಧವು. ಇಂತೀ ತೊಂಬತ್ತಾರು ಸಕೀಲಗಳನೊಳಕೊಂಡ ಮಹಾಘನ ಪರಾತ್ಪರವಾದ ಇಷ್ಟಲಿಂಗವನೆ ಕರ ಮನ ಭಾವದೊಳಗೆ ಕುಳ್ಳಿರಿಸಿ ಅರ್ಚಿಸಿ, ಧ್ಯಾನಿಸಿ ಕೂಡಿ ಎರಡಳಿದ ಮಹಾಘನ ಶರಣರ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಅಂಗಸ್ಥಲ ಮೂವತ್ತಾರು ಕಲ್ಪನಾಡಿಭೇದಮಂ ಭೇದಿಸುತ್ತ ವಾಕು ಪಾಣಿ ಪಾದ ಪಾಯು ಗುಹ್ಯವೆಂಬ ಕರ್ಮೇಂದ್ರಿಯಂಗಳ ವರ್ಮದಲ್ಲಿರಿಸಿ ಶಬ್ದ ಸ್ಪರ್ಶ ರೂಪ ರಸ ಗಂಧವೆಂಬ ಪಂಚೇಂದ್ರಿಯ[ವಿಷಯಂ]ಗಳ ಪೂರ್ವನಾಮವಿಮೋಚನೆಯಂ ಮಾಡುವ ಪರಿ : ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣವೆಂಬ ಪಂಚೇಂದ್ರಿಯಂಗಳ ಬಾಹ್ಯಾಭ್ಯಂತರವನರಿವ ಪರಿ, ಆದ್ಯಕ್ಷರವೊಂದಾದಡೆ ಅಂತ್ಯಕ್ಷರ ಶೂನ್ಯ, ಅದಕ್ಕೆ ಶಾಸ್ತ್ರಕ್ರಮದೊಳಗಾಡುವ ಭೇದಖಂಡದಿಂದ ಲಿಂಗಪ್ರಸಾದವ ಛೇದಿಸಿ, ಆ ಲಿಂಗವಂ ಭೂಮಿಯ ಬಿಡಿಸುವುದು. ಕಳಾವಿಧಸ್ಥಾನಕ್ಕೆ ತಂದಲ್ಲಿ ಸರ್ಪನು ಹಲವ ರುಚಿಸುವುದು. ಆ ರುಚಿಸುವ ಸರ್ಪನನು ತನ್ನಿಚ್ಛೆಗೆ ಹರಿಯಲೀಯದೆ ಅರಿವೆ ಪ್ರಾಣವಾಗಿ ಆ ಅರಿವಿನಿಂ ದೃಢವಿಡಿದು, ಹರಿವ ಹತ್ತುವ ಪರಿಯನೊಡೆದು ಮೂವತ್ತೆರಡು ಜವೆಯ ತೊರೆದಲ್ಲಿ ತೋರುವ, ನಾಡಿ ಮಧ್ಯಮಸ್ವರ ಮಹಿತಸ್ವರ, ಭೂಸ್ವರವೆಂಬ ಮಧ್ಯನಾಡಿ ಮಥನಂಗಳಂ ಮಥಿಸುವುದು. ಅಂಗಕ್ಕೆ ಲಿಂಗ ಬಂದಡೆ ಅಂಗದಾಪ್ಯಾಯನವನರಿವುದು. ಗುರುವಿನಿಂದ ಕರಣಾದಿಗಳು ಶುದ್ಧವಹವು, ಆದಿಪ್ರಭೆಯ ಕಿರಣಂಗಳು ಶುದ್ಧವಹವು, ಕರಣಂಗಳ ಆರತವಡಗುವುದು, ಕಾದ್ರಮಾ ಕಾದು ಕಾವುದು; ಆ ಲಿಂಗವನು ಉದಯದಲ್ಲಿ ನಾಲ್ಕು ಘಳಿಗೆ ತನಕ ಲಿಂಗಾರ್ಚನೆಯಂ ಮಾಡುವುದು. ಆ ಲಿಂಗವನು ವಾಮಕ್ಕೆ ಆ ಲಿಂಗವನು ದಕ್ಷಿಣಕ್ಕೆ ಆ ಲಿಂಗವನು ಪೂರ್ವಕ್ಕೆ, ಆ ಲಿಂಗವನು ಪಶ್ಚಿಮಕ್ಕೆ ಆ ಲಿಂಗವನು ಅಧಕ್ಕೆ, ಆ ಲಿಂಗವನು ಊಧ್ರ್ವಕ್ಕೆ ಆ ಲಿಂಗವನು ಜಡಿವುದು. ಪ್ರಭಾಲಿಂಗವೆಂಬ ಭಾವವನು ಭಾವಿಸಿ, ವಾತ ಪಿತ್ತ ಶ್ಲೇಷ್ಮವೆಂಬ ತ್ರಿಧಾತುವನರಿವುದು. ವಾತೋದ್ರೇಕವಾದಡೆ ಶೀತೋಷ್ಣಂಗಳ ಲಿಂಗಕ್ಕೆ ಸಮ ಮಾಡುವುದು, ಪಿತ್ತೋದ್ರೇಕವಾದಡೆ ಶೈತ್ಯವಂ ಮಾಡಿ ಕಾವುದು. ಶ್ಲೇಷ್ಮೋದ್ರೇಕವಾದಡೆ ಬಿಗಿದು ಲಿಂಗಾರ್ಚನೆಯಂ ಮಾಡುವುದು. ವಾತಪ್ರಕೃತಿಯಲ್ಲಿ ಲಿಂಗದ ಮೊದಲು ದೊಡ್ಡ ತುದಿ ಸಣ್ಣದಾಗಿಹುದು ಪಿತ್ತಪ್ರಕೃತಿಯಲ್ಲಿ ತುದಿ ಮೊದಲು ಸಣ್ಣದಾಗಿ ನಡು ದೊಡ್ಡದಾಗಿಹುದು. ಶ್ಲೇಷ್ಮಪ್ರಕೃತಿಯಲ್ಲಿ ಲಿಂಗತುದಿ ಮೊದಲೊಂದಾಗಿ ದೊಡ್ಡದಾಗಿಹುದು. ಇಂತು ತ್ರಿಧಾತುವನರಿದು ಲಿಂಗಾರ್ಚನೆಯ ಮಾಡುವುದು- ಇದು ವರ್ತನಾಕ್ರಮ. ಆದಿಕ್ರಮ ಅಂತ್ಯಕ್ರಮ ಅನ್ವಯಕ್ರಮ ನಿನಾದಾದಿಕ್ರಮವೆಂಬ ಭೇದಾದಿ ಭೇದಂಗಳಂ ಭೇದಿಸುವುದು. ಶಾಸ್ತ್ರಸಂಧಿಯಲ್ಲಿ ಬಾಹ್ಯಂಗಳನರಿವುದು, ಕ್ರಮಾದಿಕ್ರಮಂಗ?ಂ ತಿಳಿವುದು. ವಿನಾದದಲ್ಲಿ ಚಿತ್ರಪತ್ರಂಗಳನರಿವುದು, ಕರಣಂಗಳಂ ಶುದ್ಧಮಂ ಮಾಡುವುದು. ಹಿರಿದು ನಡೆಯದೆ, ಹಿರಿದು ನುಡಿಯದೆ ಹಿರಿದುಂ ದಿವಾರಾತ್ರಿಯಲ್ಲಿ ಶೀತೋಷ್ಣಾದಿಗಳಂ ಮುಟ್ಟಿಸಿಕೊ?್ಳದೆ ಮಹಾಮಾರ್ಗವ ತಿಳಿವುದು. ಇದರಿಂಗೆ ತನ್ನ ಮಾರ್ಗಮಂ ತೋರದೆ ಮಹಾಮಾರ್ಗದಲ್ಲಿ ಮಾರ್ಗಿಯಾಗಿ ಇದರ ಭೇದಸಂಬಂಧದಲ್ಲಿ ಉಚ್ಛ್ವಾಸ ನಿಶ್ವಾಸಕ್ರಮವನು ಓದಿ ಭರತಕ್ರಮವನು ಅನುಕ್ರಮಿಸಿ ಮೂಲಕಸ್ಥಾನದಲ್ಲಿ ಹೊರೆಹೊಗದೆ ಇಕ್ಕುವ ಚಿತ್ರಕ್ರಮದಲ್ಲಿ ಹೊರೆಹೊಗದೆ ಇಂತಿವನರಿತು ಲಿಂಗಾರ್ಚನೆಯಂ ಮಾಡುವ ಪ್ರಕರಣ : ಭ್ರಾಹ್ಮೀ ಮಹಾಮುಹೂರ್ತದಲ್ಲಿ ಎದ್ದು, ಅಂಗಪ್ರಕ್ಷಾಲನಮಂ ಮಾಡಿ ಕಂಬುವಂ ವಿಸರ್ಜಿಸಿ, ಶಿಶು ಪ್ರಕಾರವಂ ಮಾಡಿ ಶಮೆಯೆಂಬ ಸಮಾಧಿಯಲ್ಲಿ ಕುಳ್ಳಿರ್ದು, ದಮೆಯೆಂಬ ಪೀಠವನಿಕ್ಕಿ, ಶಾಂತಿಯೆಂಬ ನಿಜವಸ್ತ್ರವ ತಂದು, ಆದಿ ಶಿಶುವಿಂಗೆ ಅನುಬಂಧವಂಮಾಡಿ ತಲೆವಲದಲ್ಲಿ ಶಿಶುವಂ ತೆಗೆದು ಕರವೆಂಬ ತೊಟ್ಟಿಲಲ್ಲಿಕ್ಕಿ ಜೋಗೈಸಿ ಕೈಗೆ ಬಾಯಿಗೆ ಬಂದಿತ್ತು ನೋಡಾ, ಬಾಯಿಗೆ ಬಂದಲ್ಲಿ ಭಾವ ಶುದ್ಧವಾಯಿತ್ತು, ಕೈಗೆ ಬಂದಲ್ಲಿ ಆದಿ ಶುದ್ಧವಾಯಿತ್ತು, ಭಾವಲಿಂಗ ಜೀವಕರವಾಯವೆಂಬ ಪಟ್ಟಣದಲ್ಲಿ ಸೀಮೆ ಸಂಬಂಧವಂ ಮೀರಿ, ಮಂತ್ರಮಯವಾಯಿತ್ತು ನೋಡಾ ! ಮಂತ್ರಲಿಂಗವೊ ! ಅಮಂತ್ರ ಲಿಂಗವೊ ಹೇಳಾ ! ಮತ್ರದಿಂ ವಸ್ತ್ರ, ಅಮಂತ್ರದಿಂ ಹಸ್ತ ಇಂತು ಮಂತ್ರ ಆಮಂತ್ರಗಳೆರಡನು ಕೂಡಿ ರಕ್ಷಿಸುತ್ತಿದ್ದಿತ್ತು ನೋಡಾ ! ಶಿರಸ್ಸೆಂಬ ಧೇನು ಲಿಂಗವೆಂಬ ಮೊಲೆಯ ಕರವೆಂಬ ವತ್ಸ ತೊರೆಯಿತ್ತು ನೋಡಾ! ಮಂತ್ರವೆಂಬ ಅಮೃತವ ಕರೆಯಿತ್ತು ನೋಡಾ ! ಬಸವಯ್ಯ ನೋಡಾ ಊಡದ ಹಸು, ಉಣ್ಣದ ಕರು, ಆರೂಢದ ಭಾಂಡ ! ಅಂಗದಲ್ಲಿ ಹುಟ್ಟಿದ ಅಮೃತಜಲವನು ಲಿಂಗಕ್ಕೆ ಕೊಡದೆ ಧರೆಯಲ್ಲಿ ಬಿಟ್ಟಡೆ ಎಂತೊ ಲಿಂಗೋದಯವಹುದು ? ಎಂತೋ ಪಾದೋದಕ ಪ್ರಸಾದಜೀವಿಯಹನು ? ಜೀವ ಪರಮರ ಐಕ್ಯಬಾವವನರಿದ(ವ?)ಡೆ ಲಿಂಗೋದಯದಲಲ್ಲದೆ ಅರಿಯಬಾರದು ನಿಜಭಾವ ನಿಜಭಕ್ತಿ ನಿಜಸಮರಸವಾದಲ್ಲದೆ ಲಿಂಗೋದಯವಾಗದು. ನಿಜಮತ್ರ್ಯದಲ್ಲಿ ಜನಿಸಿದ ಅಂಗ ಅಂಗಿಗಳೆಲ್ಲರು ಪ್ರಾಣಲಿಂಗ ಸಂಬಂಧವನರಿಯರು. ಅಂತು ಅಂಗಲಿಂಗಿಗಳು ಪ್ರಾಣಲಿಂಗಿಗಳಿಗೆ ಭವಿಗಳು ಅಂತು ಪ್ರಾಣಲಿಂಗಿಗಳು ಅಂಗಲಿಂಗಿಗಳನೊಲ್ಲರು. ಅದು ಹೇಗೆಂದಡೆ: ಅವರಿಗೆ ಪ್ರಸಾದ ಪ್ರಾಣಲಿಂಗವಾಗಿ ನಾಮಗೋಪ್ಯ ಮಂತ್ರಗೋಪ್ಯಂಗಳಲ್ಲಿ ಆ ಮಹಾಮಾರ್ಗವನರಿಯರಾಗಿ, ಅಂಗಲಿಂಗಿಗಳಲ್ಲದೆ ಪ್ರಾಣಲಿಂಗಿಗಳಲ್ಲ ಪ್ರಸಾದಸೇವನಧ್ಯಾನಾದರ್ಚನಾದರ್ಪಣಾತ್ ಶುಚಿಃ ಪ್ರಸಾದಹೀನಸ್ಯಾಂಗೇ ತು ಲಿಂಗಂ ನಾಸ್ತಿ ಪುನಃ ಪುನಃ ಎಂದುದಾಗಿ ಇಂತು ಲಿಂಗಾರ್ಚನೆಯಂ ಮಾಡುವುದು ಲಿಂಗಪಾದೋದಕ ಪ್ರಸಾದವನು ಬಾಹ್ಯಾಂತರಂಗದಲ್ಲಿ ವಿರ?ವಿಲ್ಲದೆ ಅವಿರಳಭಾವಸಂಬಂಧದಲ್ಲಿ ಧರಿಸುವುದು; ಧರಿಸುವಾತ ಲಿಂಗವಂತನು. ಅಂಗಲಿಂಗಿ ಪ್ರಾಣಲಿಂಗಿ ಪ್ರಸಾದಲಿಂಗಿ ನಿಜನಿಂದ ಮಾರ್ಗವಿರಳ ಪಂಚಕನಾಡಿಯಲ್ಲಿ ಹೊರಹೊಗದೆ ನಿರ್ನಾದಮಂ ಆಶ್ರಯಿಸುವುದು. ಇದು ಮಹಾಮಾರ್ಗ ಪುರಾತನರ ಪೂರ್ವ; ಅಪರದಲ್ಲಿ ಅಂಥ ಲಿಂಗವನರಿ, ಆದಿಯಲ್ಲಿ ಅನಾಹತಲಿಂಗವನರಿ. ಲಿಂಗವಾರು ಅಂಗಾಂಗಲಿಂಗ ಸರ್ವಾಂಗಲಿಂಗ, ಲಿಂಗಸನುಮತವಾಯಿತ್ತು, ಮಹಾವೃತ್ತಿಗೆ ಅನುಮತವಾಯಿತು, ನಿರ್ವಿಕಲ್ಪ ಪರಮಪದಕ್ಕೆ ತಾನೆ ಆಯಿತ್ತು. ಇನ್ನು ಮಾನಸ ವಾಚಕ ಕಾಯಕದಲ್ಲಿ ಅವಿತಥವಿಲ್ಲದೆ ಲಿಂಗಾರ್ಚನೆಯಂ ಮಾಡುವರ ತೋರಿ ಬದುಕಿಸಾ ಕೂಡಲಚೆನ್ನಸಂಗಮದೇವಯ್ಯ.
--------------
ಚನ್ನಬಸವಣ್ಣ
ಇನ್ನು ಕರಣಾರ್ಪಣಸ್ಥಲಂಗಳೆಂತೆಂದಡೆ : ಭೂಮಿಯೇ ಅಂಗವಾದ ಭಕ್ತನು ಸುಚಿತ್ತವೆಂಬ ಹಸ್ತದಲ್ಲಿ ಆಚಾರಲಿಂಗದಲ್ಲಿ ಘ್ರಾಣವೆಂಬ ಮುಖದಲ್ಲಿ ಬೇರು ಗೆಣಸು ಮೊದಲಾದ ಗಂಧದ್ರವ್ಯಮಂ ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಶ್ರೋತ್ರ ತ್ವಕ್ಕು ನೇತ್ರ ಜಿಹ್ವೆ ಘ್ರಾಣವೆಂಬ ಪಂಚೇಂದ್ರಿಯಂಗಳು. ಸಾಕ್ಷಿ :``ಶ್ರೋತ್ರತ್ವಕ್‍ನೇತ್ರಜಿಹ್ವಾಶ್ಚ ಘ್ರಾಣಂ ಪಂಚೇಂದ್ರಿಯಾಸ್ತಥಾ | ಆಕಾಶ ಅಗ್ನಿವಾರ್ಯುಶ್ಚ ಅಪ್‍ಪೃಥ್ವೀ ಕ್ರಮೇಣ ಚ ||'' ಎಂದುದಾಗಿ, ಇವಕ್ಕೆ ವಿವರ : ಶ್ರೋತ್ರೇಂದ್ರಿಯಕ್ಕೆ ಆಕಾಶವೆಂಬ ಮಹಾಭೂತ, ದಶದಿಕ್ಕುಗಳೆ ಅಧಿದೈವ, ಅದಕ್ಕೆ ಶಬ್ದ ವಿಷಯ. ಅಕ್ಷರಾತ್ಮಕ ಅನಕ್ಷರಾತ್ಮಕ ಇವು ಎರಡು ಅಕ್ಷರ ಭೇದ. ತ್ವಗಿಂದ್ರಿಯಕ್ಕೆ ವಾಯುವೆಂಬ ಮಹಾಭೂತ, ಚಂದ್ರನಧಿದೇವತೆ ಅದಕ್ಕೆ ಸ್ಪರುಶನ ವಿಷಯ ; ಮೃದು ಕಠಿಣ ಶೀತ ಉಷ್ಣ ಇವು ನಾಲ್ಕು ಸ್ಪರುಶನ ಭೇದ. ನೇತ್ರೇಂದ್ರಿಯಕ್ಕೆ ಅಗ್ನಿಯೆಂಬ ಮಹಾಭೂತ, ಸೂರ್ಯನಧಿದೇವತೆ. ಅದಕ್ಕೆ ರೂಪ ವಿಷಯ ; ಶ್ವೇತಪೀತ ಹರಿತ ಮಾಂಜಿಷ್ಟ ಕೃಷ್ಣ ಕಪೋತವರ್ಣ ಇವಾರು ರೂಪಭೇದ. ಜಿಹ್ವೇಂದ್ರಿಯಕ್ಕೆ ಅಪ್ಪುವೆಂಬ ಮಹಾಭೂತ, ವರುಣನಧಿದೇವತೆ. ಅದಕ್ಕೆ ರಸ ವಿಷಯ ; ಮಧುರ ಆಮ್ಲ ತಿಕ್ತ ಕಟು ಕಷಾಯ ಲವಣ ಇವಾರು ರಸಭೇದ. ಘ್ರಾಣೇಂದ್ರಿಯಕ್ಕೆ ಪೃಥ್ವಿಯೆಂಬ ಮಹಾಭೂತ. ಅಶ್ವಿನಿ ಅಧಿದೇವತೆ, ಇದಕ್ಕೆ ಗಂಧ ವಿಷಯ ; ಸುಗಂಧ ದುರ್ಗಂಧವೆರಡು ಗಂಧ ಭೇದ. ಇಂತೀ ಪಂಚೇಂದ್ರಿಯೆಂಬ ಶುನಕ ಕಂಡಕಡೆಗೆ ಹರಿಯುತಿವೆ. ಈ ಪಂಚೇಂದ್ರಿಯವ ನಿರಸನವ ಮಾಡಿ, ಪಂಚವದನನೊಳು ಬೆರದಿಪ್ಪ ನಿರ್ವಂಚಕ ಶರಣಂಗೆ ನಮೋ ನಮೋ ಎಂಬೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಭೂಚರಿಯಮುದ್ರೆಯ ದೇವರೆಂಬರು, ಆ ಭೂಚರಿಯಮುದ್ರೆಯು ದೇವರಲ್ಲ. ಖೇಚರಿಯಮುದ್ರೆಯ ದೇವರೆಂಬರು, ಆ ಖೇಚರಿಯಮುದ್ರೆಯು ದೇವರಲ್ಲ. ಶಾಂಭವಮುದ್ರೆಯ ದೇವರೆಂಬರು, ಆ ಶಾಂಭವಮುದ್ರೆಯು ದೇವರಲ್ಲ ನೋಡಾ. ಸ್ವಸ್ಥಪದ್ಮಾಸನದಲ್ಲಿ ಕುಳ್ಳಿರ್ದು ಶ್ರೋತ್ರ ನೇತ್ರ ಜಿಹ್ವೆ ಘ್ರಾಣವೆಂಬ ಸಪ್ತದ್ವಾರಂಗಳನೊತ್ತಿ ನೋಡಲು ಆ ಒತ್ತಿದ ಪ್ರಭೆಯಿಂದ ಕುಂಬಾರನ ಚಕ್ರದ ಹಾಂಗೆ ಶ್ವೇತ ಪೀತ ಕಪೋತ ಹರಿತ ಮಾಂಜಿಷ* ವರ್ಣವಾಗಿ ತೋರುವ ಷಣ್ಮುಖೀಮುದ್ರೆಯ ದೇವರೆಂಬರು ; ಅಲ್ಲಲ್ಲ ನೋಡಾ. ಇವೆಲ್ಲಕ್ಕೂ ಉತ್ಪತ್ತಿ ಸ್ಥಿತಿ ಲಯ ಉಂಟಾಗಿ ದೇವರಲ್ಲ ನೋಡಾ. ದೇವರಿಗೆ ಉತ್ಪತ್ತಿ ಸ್ಥಿತಿ ಲಯ ಉಂಟೆ ಹೇಳಾ ? ಈ ಉತ್ಪತ್ತಿ ಸ್ಥಿತಿ ಲಯವಿಲ್ಲದ ಪರಾಪರತತ್ವ ತಾನೆಂದರಿದಡೆ, ತಾನೇ ದೇವ ನೋಡಾ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಭವಿತನಕ್ಕೆ ಹೇಸಿಭಕ್ತನಾದಹೆನೆಂದರೆ, ಆ ಭವಿಯ ಪೂರ್ವಾಶ್ರಯವ ಕಳೆದು ಭಕ್ತನ ಮಾಡುವ ಪರಿಯೆಂತುಟಯ್ಯಾರಿ ಆತನ ಕಾಯಶುದ್ಧನ ಮಾಡುವುದು, ಜೀವಶುದ್ಧನ ಮಾಡುವುದು, ಆತ್ಮಶುದ್ಧನ ಮಾಡುವುದು, ಮಂತ್ರಶುದ್ಧನ ಮಾಡುವುದು, ವಾಕು ಪಾಣಿ ಪಾದ ಪಾಯು ಗುಹ್ಯವೆಂಬ ಕರ್ಮೇಂದ್ರಿಯಂಗರಿ ಶುದ್ಧನ ಮಾಡುವುದು. ಶ್ರೋತ್ರ ನೇತ್ರ ಜಿಹ್ವೆ ತ್ವಕ್ಕು ಘ್ರಾಣವೆಂಬ ಬುದ್ಧೀಂದ್ರಿಯಂಗಳ ಶುದ್ಧನ ಮಾಡುವುದು. ಸುತ್ತಿರ್ದ ಮಾಯಾಪ್ರಪಂಚಮಂ ಬಿಡಿಸಿ, ಜೀವನೆ ಶಿವನೆಂಬ ಪರಿಯಾಯಮಂ ಕೆಡಿಸಿ ಶಿವನೆ ಜೀವನೆಂಬ ಪರಿಯಾಯಮಂ ತೋರಿ ಜೀವಶುದ್ಧನ ಮಾಡುವುದು. ಪಂಚಭೂತಂಗಳ ಅಧಿದೇವತೆಗಳಂ ತೋರಿ ಪಂಚವಕ್ತ್ರಂಗಳಂ ನೆಲೆಗೊಳಿಸಿ ಅವರ ವರ್ಣ-ಶ್ವೇತ ಪೀತ ಹರಿತ ಕಪೋತ ಮಾಂಜಿಷ್ಟ Uõ್ಞರವರ್ಣಂಗಳಂ ತೋರಿ ಪಂಚಭೂತಶುದ್ಧನಂ ಮಾಡುವುದು. `ಜೀವಾತ್ಮಾ ಪರಮಾತ್ಮಾ ಚ' ಎಂಬ ಶ್ರುತಿಯಿಂದ, ಆತ್ಮಶುದ್ಧನ ಮಾಡುವುದು, ಇಂತು ಸರ್ವಶುದ್ಧನ ಮಾಡುವುದು. ಆತನಂ ತಂದು ಗಣತಿಂಥಿಣಿಯ ಮುಂದೆ ನಿಲಿಸಿ, ಕರ್ಮಣಾ ಮನಸಾ ವಾಚಾ ಗುರುಭಕ್ತ್ಯಾ ತು ವತ್ಸಲಃ ಶರೀರಮರ್ಥಂ ಪ್ರಾಣಂ ಚ ಸದ್ಗುರುಭ್ಯೋ ನಿವೇದಯೇತ್ ಎಂದು ಮನಃ ಸ್ಮರಣೆಯಂ ಮಾಡಿಸಿ, ಶಿಷ್ಯನ ಭವಚ್ಛೇದನಂ ಮಾಡಿ Zõ್ಞಕಮಧ್ಯದಲ್ಲಿ ಕುಳ್ಳಿರಿಸಿ, `ಓಂ ಸಮೇ ಕಾಮಾನ್ ಕಾಮ ಕಾಮಾಯ ಮಹ್ಯಂ' ಎಂಬ ಮಂತ್ರದಿಂದ ಅಗ್ರೋದಕವಂ ತಳಿದು, ಭಾಳದಲ್ಲಿ ವಿಭೂತಿಯ ಪಟ್ಟವಂ ಕಟ್ಟಿ ಮಸ್ತಕದ ಕಳಸದ ಮೇಲೆ ಹಸ್ತವನ್ನಿಳುಹಿ, [ಸಹಸ್ರದಳ]ಕಮಳದೊಳಗಿಪ್ಪ ಮಾನಸ ಪೃಥ್ವಿಯಿಂದ ಪ್ರಾಣಲಿಂಗಸ್ಥಳಮಂ ತೋರಿ, ಸ್ಥಾವರ ಪೂಜೆಯಂ ಮಾಣಿಸಿ, ಎನ್ನ ಕೃತಾರ್ಥನಂ ಮಾಡಿದ ಕೂಡಲಚೆನ್ನಸಂಗಯ್ಯಾ ನಿಮ್ಮ ಸಂಗನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ.
--------------
ಚನ್ನಬಸವಣ್ಣ
ಇನ್ನೀ ಲಿಂಗಮುಖಕ್ಕೆ ಅರ್ಪಿಸುವ ಅವಧಾನವಾವುದೆಂದೊಡೆ: ಪೃಥ್ವಿಯೇ ಅಂಗವಾದ ಭಕ್ತನು ಸುಚಿತ್ತವೆಂಬ ಹಸ್ತದಿಂದ ಆಚಾರಲಿಂಗಕ್ಕೆ ಘ್ರಾಣವೆಂಬ ಮುಖದಲ್ಲಿ ಗಂಧವ ಸಮರ್ಪಣವ ಮಾಡಿ ಆಚಾರಲಿಂಗದ ಪ್ರಸನ್ನ ಪ್ರಸಾದವ ಸ್ವೀಕರಿಸುತ್ತಿಪ್ಪನಯ್ಯ. ಜಲವೇ ಅಂಗವಾದ ಮಾಹೇಶ್ವರನು ಸುಬುದ್ಧಿಯೆಂಬ ಹಸ್ತದಿಂದ ಗುರುಲಿಂಗಕ್ಕೆ ಜಿಹ್ವೆಯೆಂಬ ಮುಖದಲ್ಲಿ ರಸವನು ಸಮರ್ಪಣವ ಮಾಡಿ ಗುರುಲಿಂಗದ ಪ್ರಸನ್ನ ಪ್ರಸಾದವ ಸ್ವೀಕರಿಸುತ್ತಿಪ್ಪನಯ್ಯ. ಅಗ್ನಿಯೇ ಅಂಗವಾದ ಪ್ರಸಾದಿಯು ನಿರಹಂಕಾರವೆಂಬ ಹಸ್ತದಿಂದ ಶಿವಲಿಂಗಕ್ಕೆ ನೇತ್ರವೆಂಬ ಮುಖದಲ್ಲಿ ರೂಪವ ಸಮರ್ಪಣವ ಮಾಡಿ ಶಿವಲಿಂಗದ ಪ್ರಸನ್ನ ಪ್ರಸಾದವ ಸ್ವೀಕರಿಸುತ್ತಿಪ್ಪನಯ್ಯ. ವಾಯುವೇ ಅಂಗವಾದ ಪ್ರಾಣಲಿಂಗಿಯು ಸುಮನವೆಂಬ ಹಸ್ತದಿಂದ ಜಂಗಮಲಿಂಗಕ್ಕೆ ತ್ವಕ್ಕೆಂಬ ಮುಖದಲ್ಲಿ ಸ್ಪರ್ಶನ ಸಮರ್ಪಣವಮಾಡಿ ಜಂಗಮಲಿಂಗದ ಪ್ರಸನ್ನ ಪ್ರಸಾದವ ಸ್ವೀಕರಿಸುತ್ತಿಪ್ಪನಯ್ಯ. ಆಕಾಶವೇ ಅಂಗವಾದ ಶರಣನು ಸುಜ್ಞಾನವೆಂಬ ಹಸ್ತದಿಂದ ಪ್ರಸಾದಲಿಂಗಕ್ಕೆ ಶ್ರೋತ್ರವೆಂಬ ಮುಖದಲ್ಲಿ ಶಬ್ದವ ಸಮರ್ಪಣವ ಮಾಡಿ ಪ್ರಸಾದಲಿಂಗದ ಪ್ರಸನ್ನ ಪ್ರಸಾದವ ಸ್ವೀಕರಿಸುತ್ತಿಪ್ಪನಯ್ಯ. ಆತ್ಮನೇ ಅಂಗವಾದ ಐಕ್ಯನು ಸದ್ಭಾವವೆಂಬ ಹಸ್ತದಿಂದ ಮಹಾಲಿಂಗಕ್ಕೆ ಮನೆವೆಂಬ ಮುಖದಲ್ಲಿ ತೃಪ್ತಿಯ ಸಮರ್ಪಣವ ಮಾಡಿ ಮಹಾಲಿಂಗದ ಪ್ರಸನ್ನ ಪ್ರಸಾದವ ಸ್ವೀಕರಿಸುತ್ತಿಪ್ಪನಯ್ಯ. ಈ ಅರ್ಪಿತ ಅವಧಾನದ ಭೇದವನರಿದು ಭೋಗಿಸುವ ಭೋಗವಲ್ಲವು ಲಿಂಗಭೋಗ ಪ್ರಸಾದ, ಅಂಗಭೋಗ ಅನರ್ಪಿತ; ಅನಪಿರ್ತವೇ ಕರ್ಮದ ತವರುಮನೆ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವನೊಮ್ಮೆಯೂ ಮುಟ್ಟವು.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಶ್ರೋತ್ರ, ತ್ವಕ್ಕು, ಚಕ್ಷು, ಜಿಹ್ವೆ, ಘ್ರಾಣವೆಂಬ ಪಂಚೇಂದ್ರಿಯಂಗಳಲ್ಲಿ ಪ್ರಸಾದಲಿಂಗ ಜಂಗಮಲಿಂಗ ಶಿವಲಿಂಗ ಗುರುಲಿಂಗ ಆಚಾರಲಿಂಗವೆಂಬ ಪಂಚಲಿಂಗಗಳು ತಮ್ಮ ತಮ್ಮ ಮುಖದೊಳು ನಿಂದು, ಸಕಲಭೋಗಂಗಳು ಲಿಂಗಭೋಗಂಗಳಾಗಿ ಸರ್ವೇಂದ್ರಿಯಂಗಳು ಲಿಂಗವಶವಾಗಿಪ್ಪರಯ್ಯಾ ¸õ್ಞರಾಷ್ಟ್ರ ಸೋಮೇಶ್ವರಾ ನಿಮ್ಮ ಶರಣರು.
--------------
ಆದಯ್ಯ
ಬಾರಯ್ಯ ಬಾರಯ್ಯ ಗಂಡನೆ, ಎನ್ನ ಘ್ರಾಣವೆಂಬ ಭಾಜನದಲ್ಲಿ ಸುಗಂಧಪದಾರ್ಥವೆಂಬ ಸುಯಿಧಾನವ ಗಡಣಿಸಿ ನಿಮಗೆ ಉಣಲಿಕ್ಕುವೆ. ಬಾರಯ್ಯ ಬಾರಯ್ಯ ಗಂಡನೆ, ಎನ್ನ ಜಿಹ್ವೆಯೆಂಬ ಭಾಜನದಲ್ಲಿ ಸುರುಚಿಪದಾರ್ಥವೆಂಬ ಸುಯಿಧಾನವ ಗಡಣಿಸಿ ನಿಮಗೆ ಉಣಲಿಕ್ಕುವೆ. ಬಾರಯ್ಯ ಬಾರಯ್ಯ ಗಂಡನೆ, ಎನ್ನ ನೇತ್ರವೆಂಬ ಭಾಜನದಲ್ಲಿ ಸುರೂಪುಪದಾರ್ಥವೆಂಬ ಸುಯಿಧಾನವ ಗಡಣಿಸಿ ನಿಮಗೆ ಉಣಲಿಕ್ಕುವೆ. ಬಾರಯ್ಯ ಬಾರಯ್ಯ ಗಂಡನೆ, ಎನ್ನ ತ್ವಕ್ಕೆಂಬ ಭಾಜನದಲ್ಲಿ ಸುಸ್ಪರ್ಶನಪದಾರ್ಥವೆಂಬ ಸುಯಿಧಾನವ ಗಡಣಿಸಿ ನಿಮಗೆ ಉಣಲಿಕ್ಕುವೆ. ಬಾರಯ್ಯ ಬಾರಯ್ಯ ಗಂಡನೆ, ಎನ್ನ ಶ್ರೋತ್ರವೆಂಬ ಭಾಜನದಲ್ಲಿ ಸುಶಬ್ದಪದಾರ್ಥವೆಂಬ ಸುಯಿಧಾನವ ಗಡಣಿಸಿ ನಿಮಗೆ ಉಣಲಿಕ್ಕುವೆ. ಬಾರಯ್ಯ ಬಾರಯ್ಯ ಗಂಡನೆ, ಎನ್ನ ಮನವೆಂಬ ಭಾಜನದಲ್ಲಿ ನೆನಹೆಂಬ ಸುಯಿಧಾನವ ಗಡಣಿಸಿ ಉಣಲಿಕ್ಕುವೆನಯ್ಯಾ ನಿಮಗೆ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಕರಸ್ಥಲದ ಲಿಂಗವನು ಮನಸ್ಥಲದಲ್ಲಿ ಕುಳ್ಳಿರಿಸಿ, ಘ್ರಾಣವೆಂಬ ಭಾಜನದಲ್ಲಿ ಸುಗಂಧ ಪದಾರ್ಥವ ಗಡಣಿಸಿ ಸುಚಿತ್ತವೆಂಬ ಹಸ್ತದಿಂದರ್ಪಿಸಿ, ಆ ಸುಗಂಧ ಪ್ರಸಾದವ ಗ್ರಹಿಸಬಲ್ಲಾತನೆ ಪ್ರಸಾದಿ. ಜಿಹ್ವೆಯೆಂಬ ಭಾಜನದಲ್ಲಿ ಸುರಸಪದಾರ್ಥವ ಗಡಣಿಸಿ ಸುಬುದ್ಧಿಯೆಂಬ ಹಸ್ತದಿಂದರ್ಪಿಸಿ, ಆ ಸುರಸಪ್ರಸಾದವ ಗ್ರಹಿಸಬಲ್ಲಾತನೆ ಪ್ರಸಾದಿ. ನೇತ್ರವೆಂಬ ಭಾಜನದಲ್ಲಿ ಸುರೂಪುಪದಾರ್ಥವ ಗಡಣಿಸಿ, ನಿರಹಂಕಾರವೆಂಬ ಹಸ್ತದಿಂದರ್ಪಿಸಿ, ಆ ಸುರೂಪುಪ್ರಸಾದವ ಗ್ರಹಿಸಬಲ್ಲಾತನೆ ಪ್ರಸಾದಿ. ತ್ವಕ್ಕೆಂಬ ಭಾಜನದಲ್ಲಿ ಸುಸ್ಪರ್ಶನ ಪದಾರ್ಥವ ಗಡಣಿಸಿ, ಸುಮನವೆಂಬ ಹಸ್ತದಿಂದರ್ಪಿಸಿ, ಆ ಸುಸ್ಪರ್ಶನಪ್ರಸಾದವ ಗ್ರಹಿಸಬಲ್ಲಾತನೆ ಪ್ರಸಾದಿ. ಶ್ರೋತ್ರವೆಂಬ ಭಾಜನದಲ್ಲಿ ಸುಶಬ್ದಪದಾರ್ಥವ ಗಡಣಿಸಿ, ಸುಜ್ಞಾನವೆಂಬ ಹಸ್ತದಿಂದರ್ಪಿಸಿ, ಆ ಸುಶಬ್ದಪ್ರಸಾದವ ಗ್ರಹಿಸಬಲ್ಲಾತನೆ ಪ್ರಸಾದಿ. ಹೃದಯವೆಂಬ ಭಾಜನದಲ್ಲಿ ಸುತೃಪ್ತಿ ಪದಾರ್ಥವ ಗಡಣಿಸಿ, ಸದ್ಭಾವವೆಂಬ ಹಸ್ತದಿಂದರ್ಪಿಸಿ, ಆ ಸುತೃಪ್ತಿಪ್ರಸಾದವ ಗ್ರಹಿಸಬಲ್ಲಾತನೆ ಪ್ರಸಾದಿ. ಇಂತೀ ಷಡಿಂದ್ರಿಯಂಗಳೆಂಬ ಷಡ್ವಿಧ ಭಾಜನದಲ್ಲಿ ಷಡ್ವಿಧ ಪದಾರ್ಥವ ಗಡಣಿಸಿ ಷಡ್ವಿಧ ಹಸ್ತದಿಂದರ್ಪಿಸಿ, ಷಡ್ವಿಧ ಪ್ರಸಾದವ ಗ್ರಹಿಸಲರಿಯದೆ ಬರಿದೆ ಪ್ರಸಾದಿಗಳೆಂದಡೆ ನಗುವನಯ್ಯಾ ನಮ್ಮ ಅಖಂಡೇಶ್ವರನು.
--------------
ಷಣ್ಮುಖಸ್ವಾಮಿ
ಇನ್ನಷ್ಟು ... -->