ಅಥವಾ

ಒಟ್ಟು 43 ಕಡೆಗಳಲ್ಲಿ , 24 ವಚನಕಾರರು , 36 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘಟದ ಮಧ್ಯದಲ್ಲಿ ನಿಂದವನ, ಆತ್ಮನ ಚಿತ್ತದಲ್ಲಿ ಅರಿದವನ, ಅಲ್ಲ ಆಹುದೆಂದು ಗೆಲ್ಲ ಸೋಲಕ್ಕೆ ಹೋರದವನ, ಎಲ್ಲಾ ಜೀವಂಗಳಲ್ಲಿ ದಯವುಳ್ಳವನ, ಆತನೆಲ್ಲಿಯೂ ಸುಖಿಯೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಮಹಾಬೆಳಗಿನ ಲಿಂಗವ ಕೈಯಲ್ಲಿ ಕೊಟ್ಟಡೆ, ಕೊರಳಲ್ಲಿ ಕಟ್ಟಿಕೊಳ್ಳಲೇಕೆ ? ನೋಡುವ ಕಣ್ಣು ಮುಚ್ಚಿದ ಮತ್ತೆ, ತನಗೆ ಎಡೆಯಾಟವುಂಟೆ ? ಲಿಂಗವ ಹಿಂಗದೆ ಅಂಗೈಯಲ್ಲಿ ಕೊಟ್ಟ ಮತ್ತೆ, ಚಿತ್ತದಲ್ಲಿ ಹಿಂಗದಿರಬೇಕು. ಉರಿಲಿಂಗತಂದೆಯ ಸಿರಿಯ ಭಾಷೆ.
--------------
ಉರಿಲಿಂಗದೇವ
ಕಾಡಿ ಬೇಡಿ ಉಂಬರೆಲ್ಲರು ಜಗದ ರೋಡಗವಂತರು. ಬೇಡದೆ ಕಾಡದೆ ಚಿತ್ತದಲ್ಲಿ ಆಸೆಯ ಕಲೆದೋರದೆ, ಹೊತ್ತ ಘಟಕ್ಕೆ ತುತ್ತು, ಶೀತಕ್ಕೆ ಅಂಬರ ನಿರ್ಜಾತನ ಒಲುಮೆ ಎಲ್ಲಿದ್ದರೂ ತಪ್ಪದೆಂದು ವಿಶ್ವಾಸವುಳ್ಳ ಶರಣಂಗೆ ಅವ ತೊಟ್ಟಿದ್ದುದು ಅದೇತರ ಕಾಯ? ದಗ್ಧಪಟ ನ್ಯಾಯ! ನಾರಾಯಣಪ್ರಿಯ ರಾಮನಾಥನಲ್ಲಿ ಕಳೆದುಳಿದಶರಣಂಗೆ!
--------------
ಗುಪ್ತ ಮಂಚಣ್ಣ
ಸದ್ಭಕ್ತನ ಆಚರಣೆಯ ಕ್ರೀಯೆಂತುಂಟೆಂದಡೆ: ಜಂಗಮದ ಪಾದೋದಕ ಲಿಂಗಕ್ಕೆ ಮಜ್ಜನವ ಮಾಡುವಲ್ಲಿ ಜಂಗಮದ ಕುಂದು ನಿಂದೆಯ ಕೇಳಬಾರದು. ಜಂಗಮಪ್ರಸಾದವ ಲಿಂಗಕ್ಕೆ ಕೊಡುವಲ್ಲಿ ಅರ್ಥ ಪ್ರಾಣ ಅಬ್ಥಿಮಾನವ ಮುಟ್ಟಿದಲ್ಲಿ ಚಿತ್ತದಲ್ಲಿ ಹೆಚ್ಚು ಕುಂದು ತೋರಿದಾಗಲೆ ಪ್ರಸಾದಕ್ಕೆ ದೂರ. ಇದು ಕಾರಣ, ದೇಹಭಾವವಳಿದವಂಗಲ್ಲದೆ ಪಾದೋದಕ ಪ್ರಸಾದವಿಲ್ಲಾ ಎಂದೆ. ವಿಶ್ವಾಸವುಂಟಾದಲ್ಲಿ ಕುರುಹಿನ ಮುದ್ರೆಯ ಬಯಕೆ ಉಂಟೆ ಅಯ್ಯಾ? ಅವಿಶ್ವಾಸವುಳ್ಳವಂಗೆ ಗುರುಚರದ ಮಾರ್ಗವಿಲ್ಲಾಯೆಂದೆ. ಸದಾಶಿವಮೂರ್ತಿಲಿಂಗವ ಹೀಗರಿವುದಕ್ಕೆಠಾವ ಕಾಣೆ.
--------------
ಅರಿವಿನ ಮಾರಿತಂದೆ
ಚಿತ್ತದಲ್ಲಿ ನೆನೆದ ಲೆಕ್ಕವ ಇದಿರಿಟ್ಟು ಬರೆದಲ್ಲದೆ ಅರಿಯಬಾರದು. ಅರಿವು ಘನದಲ್ಲಿ ನಿಂದೆನೆಂದಡೆ ದೃಷ್ಟವಾದ ಲಿಂಗದಲ್ಲಿ ನಿಂದಲ್ಲದೆ ಕಾಣಬಾರದು. ಹೀಗಲ್ಲದೆ, ಆಧ್ಯಾತ್ಮದಲ್ಲಿ ಹೊದ್ದಿನೋಡಿ ಕಂಡೆನೆಂಬ ಬದ್ಧರ ಮಾತ ಹೊದ್ದದಿರಬೇಕು, ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಶಿಲೆ ಭಾವ ಹಿಂಗಿ ಕುರುಹಾಯಿತ್ತು, ಕಾರುಕನ ಕೈಯಲ್ಲಿ, ಪಾಷಾಣ ಭಾವ ಹಿಂಗಿ ಕಳೆಯಾಯಿತ್ತು. ಆಚಾರ್ಯನ ಕೈಯಲ್ಲಿ. ಕಳೆ ನೆಲೆಯಾಯಿತ್ತು, ಪೂಜಿಸುವಾತನ ಚಿತ್ತದಲ್ಲಿ. ಚಿತ್ತ ವಸ್ತುವಿನಲ್ಲಿ ಬೆರೆದು ಕಾಲಾಂತಕ ಬ್ಥೀಮೇಶ್ವರಲಿಂಗವಾಯಿತ್ತು
--------------
ಡಕ್ಕೆಯ ಬೊಮ್ಮಣ್ಣ
ತನುವಿನಲ್ಲಿ ನಿರ್ಮೋಹ, ಮನದಲ್ಲಿ ನಿರಹಂಕಾರ, ಪ್ರಾಣದಲ್ಲಿ ನಿರ್ಭಯ, ಚಿತ್ತದಲ್ಲಿ ನಿರಪೇಕ್ಷೆ, ವಿಷಯಂಗಳಲ್ಲಿ ಉದಾಸೀನ, ಭಾವದಲ್ಲಿ ದಿಗಂಬರ, ಜ್ಞಾನದಲ್ಲಿ ಪರಮಾನಂದವೆಡೆಗೊಂಡ ಬಳಿಕ ಸೌರಾಷ್ಟ್ರ ಸೋಮೇಶ್ವರನೆಂಬ ಲಿಂಗವು ಬೇರಿಲ್ಲ ಕಾಣಿರೆ.
--------------
ಆದಯ್ಯ
ಕೈಯಲ್ಲಿ ಮುಟ್ಟೂದಕ್ಕೆ ಮುನ್ನವೆ, ಮರವೆ ತೋರದ ಮುನ್ನವೆ, ಕಣ್ಣಿನಲ್ಲಿ ನೋಡಿ ಎವೆ ಹಳಚೂದಕ್ಕೆ ಮುನ್ನವೆ ಕಾಣು. ಚಿತ್ತದಲ್ಲಿ ಅರಿದು ಚಿತ್ತ ಮುಂಚೂದಕ್ಕೆ ಮುನ್ನವೆ ಅಳಿವುತ್ತದೆ. ಅರಿ ಅರಿವುದಕ್ಕೆ, ಹಿಂಚು ಮುಂಚು ಬಂಕೇಶ್ವರಲಿಂಗವ.
--------------
ಸುಂಕದ ಬಂಕಣ್ಣ
ತನ್ನ ಬುದ್ಧಿ ತನ್ನ ಚಿತ್ತದಲ್ಲಿ ಅಡಗಿದ ಮತ್ತೆ ನಾಡೆಲ್ಲರ ಕೂಡಿ ಓದಿ ಹಾಡಿ ಹೇಳಲೇತಕ್ಕೆ? ತನ್ನ ತಾನರಿದಲ್ಲಿ ಕಾಬ ಇದಿರು ತನಗೆ ಅನ್ಯಬ್ಥಿನ್ನವಿಲ್ಲಾ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಕೂಡಿದ ಧನವೆಲ್ಲವನು ಗುರುಲಿಂಗಜಂಗಮಕ್ಕೆ ವಂಚನೆಯ ಮಾಡಿ ಒಳಗಿಟ್ಟುಕೊಂಡು, ನೆಲನ ತೋಡಿ ಬಚ್ಚಿಟ್ಟುಕೊಂಡು. ಹಲವು ತೆರದ ಆಭರಣಂಗಳ ಮಾಡಿಸಿ, ಕರ ಚರಣ ಉರ ಕರ್ಣಂಗಳೊಳಗಿಟ್ಟುಕೊಂಡು, ಮತ್ತಿಷ್ಟು ಬದುಕಾಗಲೆಂದು ತನ್ನ ಕೈಯೊಳಗಿನ ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆಯಂ ಮಾಡುವ ಲಿಂಗಪೂಜಕನ ಪರಿ ಎಂತೆಂದೊಡೆ; ಆ ಭಕ್ತನು ಪಂಚಾಬ್ಥಿಷೇಕದಿಂದ ಲಿಂಗಕ್ಕೆ ಮಜ್ಜನವ ನೀಡಿದಡೆ ಲಿಂಗದ ಚಿತ್ತದಲ್ಲಿ ಸುಣ್ಣ ನೀರನೆತ್ತಿ ಬಾಜಿಸಿದಂತಾಯಿತ್ತಯ್ಯಾ ! ಆ ಭಕ್ತನು ವಿಭೂತಿಯ ಧರಿಸಿದಡೆ ಲಿಂಗದ ಚಿತ್ತದಲ್ಲಿ ಬೂದಿಯ ಬೊಕ್ಕಣವ ಕಟ್ಟಿ ಬಾಜಿಸಿದಂತಾಯಿತ್ತಯ್ಯಾ ! ಆ ಭಕ್ತನು ಗಂಧವ ಧರಿಸಿದರೆ ಲಿಂಗದ ಚಿತ್ತದಲ್ಲಿ ಚಂಡಿಟ್ಟು ಬಾಜಿಸಿದಂತಾಯಿತ್ತಯ್ಯಾ ! ಆ ಭಕ್ತನು ಅಕ್ಷತೆಯನೇರಿಸಿದರೆ ಲಿಂಗದ ಚಿತ್ತದಲ್ಲಿ ಕಲ್ಲು ಹೊರಿಸಿ ಬಾದ್ಥಿಸಿದಂತಾಯಿತ್ತಯ್ಯಾ ! ಆ ಭಕ್ತನು ಪುಷ್ಪವ ಧರಿಸಿದರೆ ಲಿಂಗದ ಚಿತ್ತದಲ್ಲಿ ಬೆನ್ನ ಮೇಲೆ ಹೇರು ಹೊರಿಸಿದಂತಾಯಿತ್ತಯ್ಯಾ ! ಆ ಭಕ್ತನು ಧೂಪವ ಬೀಸಿದರೆ ಲಿಂಗದ ಚಿತ್ತದಲ್ಲಿ ಅರವನಿಕ್ಕಿ ಬಾದ್ಥಿಸಿದಂತಾಯಿತ್ತಯ್ಯಾ ! ಆ ಭಕ್ತನು ದೀಪಾರತಿಯನೆತ್ತಿದರೆ ಲಿಂಗದ ಚಿತ್ತದಲ್ಲಿ ಪಂಜುಗಳ್ಳರು ಬಂದು ಮೋರೆಯ ಸುಟ್ಟು ಬಾ[ದ್ಥಿ]ಸಿದಂತಾಯಿತ್ತಯ್ಯಾ ! ಆ ಭಕ್ತನು ಸ್ತೋತ್ರಮಂತ್ರವ ನುಡಿದರೆ ಲಿಂಗದ ಚಿತ್ತದಲ್ಲಿ ಕರ್ಣದೊಳಗೆ ತೊಣಚಿ ಹೊಕ್ಕು ಗೋಳಿಟ್ಟು ಬಾದ್ಥಿಸಿದಂತಾಯಿತ್ತಯ್ಯಾ ! ಇಂತಪ್ಪ ಲಿಂಗಬಾಧಕರನು ಲಿಂಗಪೂಜಕರೆನಬಹುದೆ ? ಆತನ ಅಂಗಳವ ಮೆಟ್ಟಬಹುದೆ ? ಇದರ ಇಂಗಿತವ ನಿಜಭಾವವುಳ್ಳ ಶರಣರು ನೀವೇ ತಿಳಿದು ನೋಡಿರೆಂದಾತ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಹೇಳಯ್ಯಾ, ಹೇಳಯ್ಯಾ, ಆ ಕಾಲದಲಿ ಮಾಡುವಿರಿ ಲಗುನವೆಂತಹುದಯ್ಯ? ಕೇಳಯ್ಯಾ, ಆ ಕಾಲವೆ ಸುಕಾಲವಾಗಿ ಲಗುನವಿಂತಹುದು. ಭಕ್ತರು ಕಪಿಲಸಿದ್ಧಮಲ್ಲಿನಾಥನ ಮನಮನದ ಚಿತ್ತದಲ್ಲಿ ಮುಂದಿಟ್ಟು ನಡೆವರಾಗಿ ಅಂತಹುದಯ್ಯಾ, ಅಂತಹುದಯ್ಯಾ.
--------------
ಸಿದ್ಧರಾಮೇಶ್ವರ
ಹರಿಗೋಲು ಹರಿದ ಮತ್ತೆ ಹೊಳೆಯೇನು ಮಾಡುವುದು? ಇರಿದವನಿದ್ದಂತೆ ಕೈದೇನ ಮಾಡುವುದು? ಎಚ್ಚವನಿದ್ದಂತೆ ಅಂಬಿಗೆ ಮುನಿವರೆ? ಎನ್ನ ಚಿತ್ತದಲ್ಲಿ ಕಲೆದೋರಿ, ನೀನಾಡಿಸಿದಂತೆ ಆಡಿದೆ. ನೀ ಕೊಟ್ಟ ಕಾಯಕವ ಹೊತ್ತೆ, ನೀ ಹೇಳಿದ ಬಿಟ್ಟಿಯ ಮಾಡಿದೆ ಕುಳದವನಾದ ಮತ್ತೆ ಮಾನ್ಯರ ಒಲವರ ಎನಗೊಂದುಗುಣವಿಲ್ಲ. ನೀನಾಡಿಸಿದಂತೆ ಆಡಿದೆ, ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಮಾನಸದಲ್ಲಿಪ್ಪನು, ಬುದ್ಧಿಯಲ್ಲಿಗೆ ಹೋಹನು. ಚಿತ್ತದಲ್ಲಿ ನೆಲೆ ಎಮ್ಮ ನಲ್ಲಗೆ, ಕೇಳವ್ವಾ, ಕೆಳದಿ. ಅಹಂಕಾರ ಕೂಡಿ ಅಹಂಕಾರದ ನಲ್ಲನ ಪರಿಕರ ವಿಪರೀತ ಅಹಂಕಾರ. ಅಹಂಕಾರರೀ ಮತ್ತೆ ಯಾರಲ್ಲಿ ಕೂಡಿ ಸುಖಿಸುವೆ ? ಇವರೆಲ್ಲರ ಮುಂದೆ ತನ್ನ ಹಿಡಿದು ನೆರೆದಡೆ ಅವರೆನ್ನನೇಗೆಯ್ವರು ಉರಿಲಿಂಗದೇವಾ.
--------------
ಉರಿಲಿಂಗದೇವ
ತಾವು ಸತ್ಯರೆಂದು ನುಡಿಯದಿಪ್ಪುದೆ ಶೀಲ. ತಾವು ವ್ರತಿಗಳೆಂದು ಇದಿರಿಂಗೆ ಹೇಳದಿಹುದೆ ವ್ರತ. ಗುರುಲಿಂಗಜಂಗಮವ ದೂಷಿಸದಿಹುದೆ ವ್ರತ. ಸಹಪಂಙÂ್ತಯಲ್ಲಿ ವಿಶೇಷವ ಕೊಳದಿಪ್ಪುದೆ ವ್ರತ. ಇಂತಪ್ಪ ವ್ರತಕ್ಕೆ ನಮೋ ನಮೋ ಎಂಬೆ. ಇಂತಲ್ಲದೆ ಜಗವ ಸಿಕ್ಕಿಸುವ ಬಹುಮುಖಿಗಳಿಗೆಲ್ಲಿಯದೊ ಮುಕ್ತಿ ? ಮಾತಿನಲ್ಲಿ ಭಕ್ತಿ, ಮನದಲ್ಲಿ ಕತ್ತರಿ, ಭಕ್ತಿಯಲ್ಲಿ ಬಲೆ, ಚಿತ್ತದಲ್ಲಿ ಕತ್ತಲೆಯಿಪ್ಪವರಿಗೆಲ್ಲಿಯದೊ ಭಕ್ತಿಶೀಲ ? ಇಂತಿವ ಬಲ್ಲೆನಾಗಿ ಭಕ್ತಿ ನನಗಿಲ್ಲ. ಇನ್ನೆತ್ತಣ ಮುಕ್ತಿಯೋ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಹೋಟಾರದಲ್ಲಿ ಒಂದು ವೇತಾಳ ಹುಟ್ಟಿತ್ತು. ವೇತಾಳನ ಚಿತ್ತದಲ್ಲಿ ಶಿಶು ಬೆಸಲಾಗಿ, ಮಾಣಿಕ್ಯವ ಕಂಡಿತ್ತು. ಆ ಮಾಣಿಕ್ಯದ ಬೆಳಗಿನಲ್ಲಿ ಹೋಟಾರದ ಕತ್ತಲೆ ಕೆಟ್ಟು, ವೇತಾಳನ ಚಿತ್ತದ ಕತ್ತಲೆ ಹರಿದು, ಶಿಶುವಿನ ಕೈಯ ರತ್ನ ಮೂರುದೆಸೆಯ ನುಂಗಿತ್ತು, ನಿಃಕಳಂಕ ಮಲ್ಲಿಕಾರ್ಜುನನ ಸಂಗ ಸುಖದಿಂದ.
--------------
ಮೋಳಿಗೆ ಮಾರಯ್ಯ
ಇನ್ನಷ್ಟು ... -->