ಅಥವಾ

ಒಟ್ಟು 247 ಕಡೆಗಳಲ್ಲಿ , 5 ವಚನಕಾರರು , 247 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘಟದ ಮಧ್ಯದಲ್ಲಿ ನಿಂದವನ, ಆತ್ಮನ ಚಿತ್ತದಲ್ಲಿ ಅರಿದವನ, ಅಲ್ಲ ಆಹುದೆಂದು ಗೆಲ್ಲ ಸೋಲಕ್ಕೆ ಹೋರದವನ, ಎಲ್ಲಾ ಜೀವಂಗಳಲ್ಲಿ ದಯವುಳ್ಳವನ, ಆತನೆಲ್ಲಿಯೂ ಸುಖಿಯೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಆವಾವ ತ್ರಿಗುಣಭೇದದಲ್ಲಿವಿಶ್ವಾಸವ ಮಾಡಿದಡೂ ಭಾವಶುದ್ಧವಾಗಿರಬೇಕು. ಯೋಗಿಯಾದಲ್ಲಿ ದೇಹಧರ್ಮವ ಮರೆದು, ಭೋಗಿಯಾದಲ್ಲಿ ಸಂಚಿತವ ಮರೆದು, ತ್ಯಾಗಿಯಾದಲ್ಲಿ ನೆನಹು ಹಿಂಚು ಕೊಡುವುದು ಮುಂಚಾಗಿರಬೇಕು. ಇಂತೀ ಯೋಗಿ ಭೋಗಿ ತ್ಯಾಗಿ, ಇಂತೀ ತ್ರಿವಿಧವನೊಳಕೊಂಡು ವಿರಕ್ತನಾದಲ್ಲಿ ಆತನ ಅಡಿಗೆರಗುವೆನೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಈಶ್ವರನ ಕಾಬುದೊಂದಾಸೆಯುಳ್ಳೊಡೆ ಪರದೇಶಕ್ಕೆ ಹೋಗಿ ಬಳಲದಿರು, ಕಾಶಿಯಲ್ಲಿ ಕಾಯವ ವಿನಾಶವ ಮಾಡಲುಬೇಡ. ನಿನ್ನಲ್ಲಿ ನೀ ತಿಳಿದು ನೋಡಾ, ಸರ್ವೇಶ ಮುಳ್ಳಗುತ್ತ ತೆರಹಿಲ್ಲೆಂದಡೆ, ಒಂದು ಗೋಂಟ ಸಾರಿರ್ದನೆ ? ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಬೆಲ್ಲದ ಹೊಗೆಯನಿಕ್ಕಿ, ಭರಣಿಯ ಹೊರವಂತೆ ಇರಬೇಡವೆ ಗುರುವಿನುಪದೇಶ? ದಾರಿಯ ಹಸಮಾಡಿ ನೀರ ತಿದ್ದುವಂತೆ ಇರಬೇಡವೆ ಗುರುವಿನುಪದೇಶ? ಹಾಲುಂಬ ಹಸುಳೆಗೆ ಕೂಳು ಮೈಯಕ್ಕುವುದೆ? ಬುದ್ಧಿಹೀನರು ಬಲ್ಲರೆ ಪರಬ್ರಹ್ಮದ ಸುಖವ? ಈ ಭೇದವನರಿಯದ ಗುರುಶಿಷ್ಯರಿಬ್ಬರೂ ಇದ್ದ ಊರೊಳಗಿರೆನೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅರಿವಿನ ಪಥವನರಿಯದಿರ್ದಡೆ, ಮುಂದೆ ಹೆರರಿಗೆ ದೀಕ್ಷೆಯ ಮಾಡಲೇಕೆ? ತೊರೆಯಲದ್ದವನಸೀಲರಿಯದವ ತೆಗೆಯ ಹೋದಂತಾಯಿತ್ತರಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಕಂಡು ಕೊಟ್ಟೆಹೆನೆಂಬುದು ಖಂಡಿತಂಗಲ್ಲದೆ ಪರಿಪೂರ್ಣಂಗುಂಟೆ ? ಉಂಡು ತೇಗಿಹೆನೆಂಬುದು ನಿತ್ಯತೃಪ್ತಂಗುಂಟೆ ? ಒಂದನರಿದು ಒಂದ ಮರೆದೆನೆಂದು ಸಂದೇಹಕ್ಕೊಳಗಾದವಂಗೆ` ಲಿಂಗವಿಲ್ಲ, ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಆದಿಶಕ್ತಿವಿಡಿದಾಡುವರೆಲ್ಲರು ಜಂಗಮವಲ್ಲ, ಅನಾದಿಶಕ್ತಿವಿಡಿದಾಡುವರೆಲ್ಲರು ಜ್ಞಾನಿಗಳಲ್ಲ, ಆದಿ ಅನಾದಿಯೆಂಬೀ ಎರಡ ಭೇದಿಸಿ ದಾಂಟಿ, ಇಚ್ಛಾಶಕ್ತಿಯ ಇಚ್ಛೆಯ ಮರೆದು, ಕ್ರಿಯಾಶಕ್ತಿಯ ಭಾವವ ಬಿಟ್ಟು, ಜ್ಞಾನಶಕ್ತಿಯ ಠಾವವನೊಲ್ಲದೆ, ತಾನು ತಾನಾದವಂಗೆ ಏನೂ ಇದಿರಿಲ್ಲಾ, ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಜಂಗಮವೆಂದಡೆ ನಡೆನುಡಿ ಸಿದ್ಧಿಯಾಗಿರಬೇಕು. ಮೂರು ಮಲಕ್ಕೆ ಸಿಕ್ಕದೆ, ಆರರಡಿಗೆ ಅ[ಡಿ]ಮೆಯಾಗದೆ, ಆ ಗುಣ ತೋರುವುದಕ್ಕೆ ಮೊದಲೆ ಮೀರಿ ಇರಬೇಕೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಹಸಿಯ ಸೊಪ್ಪು ಮುರಿದು ತರುವಾಗ ನೀವೇನು ಆಡಿನ ಮಕ್ಕಳೆ? ಹಸಿಯ ಸೊಪ್ಪು ತಂದು ಬಿಸಿ ಮಾಡಿ ಶಶಿಧರನೆಂಬ ಜಂಗಮಕ್ಕೆ ನೀಡಲು, ಆ ಲಿಂಗದ ಹಸಿವು ಹೋಯಿತ್ತೆಂದಾತ ನಮ್ಮಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಮಕ್ಕಳು ಮರಿಗಳು ಸತ್ತು ನಷ್ಟವಾಗಿ, ಕಷ್ಟ ದುಃಖ ನೆಲೆಗೊಂಡಿತ್ತೆಂದು ತನ್ನಿಷ್ಟಲಿಂಗಪೂಜೆಯನಗಲಿಸಿ, ಬಿಟ್ಟಿಯ ಮಾಡಬಹುದೇನಯ್ಯಾ? ಜಂಗಮವು ಬಂದು ತನ್ನ ವ್ರತ ನೇಮಕ್ಕೆ ಬೇಡಿದಡೆ ನಿಮ್ಮ ಉಪದ್ರವೇನೆಂದು ಭಕ್ತಿಯ ಮಾಡಬಹುದೇನಯ್ಯಾ? ಸಕಲದುಃಖಂಗಳು ತಮ್ಮಿಂದ ತಾವೇ ಬರಲರಿಯವು. ಭಕ್ತಿಯನ್ನು ಮರೆದು, ಮರವೆಯಲ್ಲಿ ಬೆರೆದು, ಭವಭವದಲ್ಲಿ ಬರುವುದು ಅದೇ ದುಃಖವು, ನಿಶ್ಚಯವೆಂದಾತ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಬೆಂಕಿ ಸುಡಬಲ್ಲಡೆ ಕಲ್ಲು ನೀರು ಮರಂಗಳಲ್ಲಡಗಬಲ್ಲುದೆ ? ಅರಿವು ಶ್ರೇಷ್ಠವೆಂದಡೆ ಕುರುಹಿನಲ್ಲಡಗಿ ಬೇರೊಂದೆಡೆಯುಂಟೆಂದು ನುಡಿವಾಗ ಅದೇತರಲ್ಲಿ ಒದಗಿದ ಅರಿವು ? ಪಾಷಾಣದಲ್ಲಿ ಒದಗಿದ ಪ್ರಭೆಯಂತೆ, ಆ ಪಾಷಾಣ ಒಡೆಯೆ ಆ ಪ್ರಭೆಗೆ ಕುರುಹುಂಟೆ ? ಇಂತೀ ಲೇಸಪ್ಪ ಕುರುಹನರಿಯಬೇಕು ಕಾಣಾ, ನಮ್ಮ ಗುಹೇಶ್ವರನುಳ್ಳನ್ನಕ್ಕ ಅಂಬಿಗರ ಚೌಡಯ್ಯ.
--------------
ಅಲ್ಲಮಪ್ರಭುದೇವರು
ಕೈ ಮುಟ್ಟುವಲ್ಲಿ, ಕಿವಿ ಕೇಳುವಲ್ಲಿ, ಬಾಯಿ ಕೊಂಬಲ್ಲಿ, ಮೂಗು ವಾಸಿಸುವಲ್ಲಿ, ಕಣ್ಣು ನೋಡುವಲ್ಲಿ- ಇಂತೀ ಅಯಿದರ ಗುಣ ಎಡೆಯಾಟ ಅದಾರಿಂದ ಎಂಬುದ ತಾ ವಿಚಾರಿಸಿದಲ್ಲಿ, ಪಂಚಕ್ರೀಯಲ್ಲಿ ಸಂಚಿತ ಪ್ರಾರಬ್ಧ ಆಗಾಮಿಯೆಂಬ ಹಿಂಚುಮುಂಚಿಗೆ ಸಿಕ್ಕದೆ, ಕುಡಿವೆಳಗಿನ ಮಿಂಚಿನ ಸಂಚದಂತಿರಬೇಕೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಕತ್ತೆಯ ಮೇಲೆ ತಿತ್ತಿಯ ಮಾಡಿ ಕಳ್ಳು ಹೇರುವರು, ಅದಕ್ಕದು ಸತ್ಯವಯ್ಯ. ಎತ್ತಿನ ಮೇಲೆ ತಿತ್ತಿಯ ಮಾಡಿ ತೈಲ ತುಪ್ಪವ ಹೇರುವರು, ಅದಕ್ಕದು ಸತ್ಯವಯ್ಯ. ಆ ತಿತ್ತಿಯ ಒಳಗಣ ತೈಲ ತುಪ್ಪವ ತಂದು, ನಿತ್ಯ ಗುರು-ಲಿಂಗ-ಜಂಗಮಕ್ಕೆ ನೀಡುವ ಭಕ್ತನ ಭಕ್ತಿ ಎಂತಾಯಿತ್ತೆಂದಡೆ: ಆ ಕತ್ತೆಯ ಮೇಲೆ ಹೇರುವ ಕಳ್ಳುಗುಂಡಿಗಿಂದ ಕಡೆಯೆಂದಾತ ನಮ್ಮ ಅಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಜಂಗಮವ ಕರತಂದು ಮನೆಯಲ್ಲಿ ಕುಳ್ಳಿರಿಸಿ, ಅಂಗದ ಮೇಲಣ ಜಪವನೆಣಿಸುವ ಭಕ್ತನ ಜಪದ ಬಾಯಲ್ಲಿ ಕೆರಹನಿಕ್ಕಲಿ! ಅವನ ಲಿಂಗಾರ್ಚನೆಯ ಬಾಯಲ್ಲಿ ಹುಡಿಯ ಹೊಯ್ಯಲಿ! ಜಂಗಮದ ತೃಪ್ತಿಯನರಿಯದೆ ಲಿಂಗವಂತನೆಂತಾದನೊ ? ಮರುಳೆ! ಅವ ಪಿಸುಣ, ಹೊಲೆಯನೆಂದಾತನಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಹಾಡಿ ಹಾಡುವ ಹರಕೆಯ ಕೇಡು, ಕೂಡಿ ಮಾಡುವ ಕೂಡಿಕೆಯ ಕೇಡು, ಹಾಡಿ ಮಾಡಿ, ಕೂಡಿ ಮಾಡಿ ಬದುಕಿಗೆ ಕೇಡು ತಂದುಕೊಳ್ಳಲೇತಕೊ? ತನ್ನ ಬೇಡಲಿಕ್ಕೆ ಬಂದ ಜಂಗಮದ ಇರವನರಿತು, ನೀಡ ಕಲಿತರೆ ರೂಡ್ಥಿಯೊಳಗೆ ಆತನೆ ಜಾಣನೆಂದಾತ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಇನ್ನಷ್ಟು ... -->