ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನ್ನ ತಾನರಿದ ಮಹಾಜ್ಞಾನಿ ಶರಣನು ಚರಿಸುವ ಕ್ರಮವೆಂತೆಂದಡೆ: ಸ್ಥೂಲವೆಂಬ ಕಂಥೆಯ ತೊಟ್ಟು, ಸೂಕ್ಷ್ಮವೆಂಬ ಟೊಪ್ಪರವನಿಕ್ಕಿ, ತತ್ವವೆಂಬ ಖರ್ಪರವನಾಂತು, ಸತ್ಯವೆಂಬ ದಂಡವಂ ಪಿಡಿದು, ಶಾಂತಿಯೆಂಬ ಭಸಿತವಂ ತೊಡೆದು, ಸುಚಿತ್ತವೆಂಬ ಮಣಿಯ ಕಟ್ಟಿ, ವೈರಾಗ್ಯವೆಂಬ ಹಾವುಗೆಯಂ ಮೆಟ್ಟಿ, ಮನದೃಢವೆಂಬ ಕೌಪವಂ ಕಟ್ಟಿ, ಆಚಾರವೆಂಬ ಕಂಕಣವನ್ನಿಕ್ಕಿ, ಕ್ಷಮೆದಮೆಗಳೆಂಬ ಕುಂಡಲಮಂ ಧರಿಸಿ, ಪರಮಾನಂದದಿಂದ ಸುಳಿದು, ಜಗವ ಪಾವನವ ಮಾಡಲೆಂದು ಭಕ್ತಿ ಭಿಕ್ಷವಂ ಬೇಡುತ್ತ ಬಂದನಯ್ಯ, ತನ್ನ ಒಲುಮೆಯ ಶರಣರ್ಗೆ ನಿಜಸುಖವನೀಯಲೆಂದು. ಕಲಿದೇವರದೇವಾ, ನಿಮ್ಮ ಶರಣ ಪ್ರಭುವೆಂಬ ಜಂಗಮವಂ ಕಂಡು, ಅರ್ಚಿಸಿ, ಪೂಜಿಸಿ, ಒಕ್ಕುದನುಂಡು, ನಿಶ್ಚಿಂತನಾದೆನಯ್ಯ.
--------------
ಮಡಿವಾಳ ಮಾಚಿದೇವ
ಸಮತೆ ಎಂಬ ಕಂಥೆ ತೊಟ್ಟು, ಸುಬುದ್ಧಿ ಎಂಬ ಟೊಪ್ಪರವನಿಕ್ಕಿ, ವಿಷಯವೆಂಬ ಹಾವುಗೆಯ ಮೆಟ್ಟಿ, ತಮಂಧವೆಂಬ ಕುಳಿಯ ಬೀಳದೆ, ಕ್ರೋಧವೆಂಬ ಕೊರಡ ಎಡಹದೆ, ಮದವೆಂಬ ಚೇಳ ಮೆಟ್ಟದೆ ಗುಹೇಶ್ವರನ ಶರಣ ಬಂದೆನು, ಭಕ್ತಿಭಿಕ್ಷವನಿಕ್ಕೈ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
-->