ಅಥವಾ

ಒಟ್ಟು 7 ಕಡೆಗಳಲ್ಲಿ , 3 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ತಮಾ ಮಹಾಲಿಂಗದಧಃಕಂಜಾಖ್ಯವಾದನಾಹತಚಕ್ರದ ರುದ್ರಸ್ವರೂಪವೆಂತೆನೆ- ಕ ಕ್ರೋಡ್ಥೀಶಂ, ಖ ಚಂಡೇಶಂ, ಗ ಪಂಚಾಂತಕಂ, ಘ ಶಿವೋತ್ತಮಂ, ಙ ಏಕರುದ್ರಂ, [ಚ (?)], ಛ ಏಕನೇತ್ರರುದ್ರಂ, ಜ ಚತುರಾನನರುದ್ರಂ, ರುsು ಅಜೇಶರುದ್ರಂ, ಞ ಶರ್ವರುದ್ರಂ, ಟ ಸೋಮೇಶರುದ್ರಂ, ಠ ಲಾಂಗುಲಿರುದ್ರಂ. ಇಂತೀ ದ್ವಾದಶರುದ್ರರೀ ಮಹಾಲಿಂಗದನಾಹತಚಕ್ರದ ದ್ವಾದಶಕೋಷ್ಠದಳ ನ್ಯಸ್ತಕಾದಿರಾಂತ ದ್ವಾದಶ ವಿಕಲಾಕ್ಷರ ವಾಚ್ಯರೆಂದು ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಮತ್ತೆಯುಂ ಕ ಮಹಾಕಾಳಿ ಖ ಸರಸ್ವತಿ ಗ ಗೌರಿ ಘ ಮಂತ್ರಶಕ್ತಿ ಙ ಆತ್ಮಶಕ್ತಿ ಚ ಭೂತಮಾತೆ ಛ ಲಂಬೋದರಿ ಜ ದ್ರಾವಿಣಿ ರುsು ನಗರಿ ಞ ಖೇಚರಿ ಟ ಮಂಜರಿ ಠ ರೂಪಿಣಿ ಇಂತಿ ಮಹಾಲಿಂಗದ ಶಕ್ತಿಯೂಧ್ರ್ವಾಬ್ವಾಖ್ಯದನಾಹತಚಕ್ರದ ದ್ವಾದಶಕೋಷ್ಠದಳ ನ್ಯಸ್ತ ದ್ವಾದಶರುದ್ರಶಕ್ತಿಯರಂ ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ,.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಆಧಾರಾದಿ ಷಡುಚಕ್ರಂಗಳು ಇವಕ್ಕೆ ವಿವರ: ಆಧಾರಸ್ಥಾನದಲ್ಲಿ ಚತುರ್ದಳ ಪದ್ಮವಿಹುದು ಅದು ಸುವರ್ಣವರ್ಣ ಅದಕ್ಕೆ ಅಕ್ಷರ ವಶಷಸ ಎಂಬ ನಾಲ್ಕಕ್ಷರ, ಅಧಿದೈವ ಬ್ರಹ್ಮನು. ಸ್ವಾಧಿಷ್ಠಾನ ಸ್ಥಾನದಲ್ಲಿ ಷಡ್ದಳ ಪದ್ಮವಿಹುದು, ಅದು ಕಪ್ಪುವರ್ಣ ಅದಕ್ಕೆ ಅಕ್ಷರ ಬಭಮಯರಲ ಎಂಬ ಷಡಕ್ಷರ, ವಿಷ್ಣು ಅಧಿದೈವ. ಮಣಿಪೂರದ ಸ್ಥಾನದಲ್ಲಿ ದಶದಳ ಪದ್ಮವಿಹುದು, ಅದು ಕೆಂಪುವರ್ಣ ಅದಕ್ಕೆ ಅಕ್ಷರ ಡಢಣ ತಥದಧನ ಪಫ ಎಂಬ ದಶ ಅಕ್ಷರ, ರುದ್ರನಧಿದೈವ. ಅನಾಹತಸ್ಥಾನದಲ್ಲಿ ದ್ವಾದಶದಳದ ಪದ್ಮವಿಹುದು, ಅದು ನೀಲವರ್ಣ, ಅದಕ್ಕೆ ಅಕ್ಷರ ಕಖಗಘಙ ಚ ಛ ಜಝಞ ಠ ಎಂಬ ದ್ವಾದಶ ಅಕ್ಷರ ಅದಕ್ಕೆ ಮಹೇಶ್ವರ ಅಧಿದೈವ. ವಿಶುದ್ಧಿಸ್ಥಾನದಲ್ಲಿ ಷೋಡಶದಳ ಪದ್ಮವಿಹುದು, ಅದು ಸ್ಪಟಿಕವರ್ಣ ಅದಕ್ಕೆ ಅಕ್ಷರ ಅ ಆ ಇ ಈ ಉ ಊ ಋ ಋೂ ಎ ಏ ಐ ಒ ಓ ಔ ಅಂ ಅಃ ಎಂಬ ಷೋಡಶಾಕ್ಷರ, ಅದಕ್ಕೆ ಸದಾಶಿವ ಅಧಿದೈವ. ಆಜ್ಞಾಸ್ಥಾನದಲ್ಲಿ ದ್ವಿದಳದ ಪದ್ಮವಿಹುದು. ಅದು ಮಾಣಿಕ್ಯವರ್ಣ, ಅದಕ್ಕೆ ಅಕ್ಷರ `ಹಕ್ಷ ಎಂಬ ದ್ವಯಾಕ್ಷರ. ಅದಕ್ಕೆ ಮಹಾಶ್ರೀಗುರು ಅಧಿದೈವ. ಅಲ್ಲಿಂದ ಮೇಲೆ ಬ್ರಹ್ಮರಂಧ್ರಸ್ಥಾನದಲ್ಲಿ ಸಹಸ್ರದಳ ಪದ್ಮವಿಹುದು. ಅದು ಹೇಮವರ್ಣ ಅಲ್ಲಿಗೆ ಓಂಕಾರವೆಂಬ ಅಕ್ಷರ ಪರಂಜ್ಯೋತಿ ಪರಬ್ರಹ್ಮ ಅದು ಅನಂತಕೋಟಿ ಸೂರ್ಯಪ್ರಕಾಶವಾಗಿ ಬೆಳಗುತ್ತಿಹುದು. ಅಲ್ಲಿಗೆ ಅಧಿದೈವ ಶ್ರೀಗುರು ಮೂರ್ತಿಯೇ ಕರ್ತನು. ಇಂತೀ ಷಟ್ ಚಕ್ರಂಗಳಂ ತಿಳಿದು ಪರತತ್ವದಲ್ಲಿ ಇರಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಶರಣನೆನಿಸುವನು.
--------------
ಚನ್ನಬಸವಣ್ಣ
ಮತ್ತೆಯುಮೀ ಶಿವಬೀಜಂ ಸ್ಥೂಲ ಸೂಕ್ಷ ್ಮಪರಂಗಳೆಂದು ಮೂದೆರನಾಗಿರ್ಪುದಿದಕ್ಕೆ ವಿವರಂ- ಸ್ಥೂಲಮೆನೆಯಕ್ಕರಂ. ಸೂಕ್ಷ ್ಮಮೆನೆಯಾಯಕ್ಷರದ ದನಿ. ಪರಮೆನೆ ಆಕಾರಾದಿ ಕ್ಷಕಾರಾಂತವಾದೈವತ್ತಕ್ಕರಂಗಳೊಳಗೆ ಪತ್ತು ಪತ್ತುಗಳು ವಿಭಾಗಿಸಿ, ಭೂಮ್ಯಾದಿ ಪಂಚಭೂತಂಗಳೊಡನೆ ಕಲಸುವುದೆಂತೆನೆ ತರದಿಂ ಅ ಆ ಇ ಈ ಉ ಊ ಋ Iೂ ಒ ಓ ಈ ಹತ್ತು ಪೃಥ್ವಿ. ಏ ಐ ಓ ಔ ಅಂ ಅಃ ಕ ಖ ಗ ಘ ಈ ಹತ್ತು ಅಪ್ಪು. ಙ ಚ ಛ ಜ ರುsು ಞ ಟ ಠ ಡ ಢ ಈ ಹತ್ತು ತೇಜಸ್ಸು. ಣ ತ ಥ ದ ಧ ನ ಪ ಫ ಬ ಭ ಈ ಹತ್ತು ವಾಯು. ಮ ಯ ರ ಲ ವ ಶ ಷ ಸ ಹ ಳ ಯೀ ಹತ್ತು ಆಕಾಶಂ. ಇಂತೈವತ್ತಕ್ಕರಂಗಳೈದು ಪೃತ್ವ ್ಯಪ್ತೇಜೋವಾಯ್ವಾಕಾಶಂಗಳಲ್ಲಿ ನ್ಯಸ್ತಂಗಳಾದವಿನ್ನುಳಿದೈದನೆಯ ಭೂತಸಂಜ್ಞಿತದಿಂ ಪಂಚಮವೆನಿಸಿದ ಪರಿಪೂರ್ಣವಾದ ಸಾಂತವೆ ಪರಮಿಂತು ಸ್ಥೂಲ ಸೂಕ್ಷ ್ಮ ಪರ ಸಂಜ್ಞೆಯ ನಿರೂಪಿಸಿದೆಯಯ್ಯಾ, ಪರಮ ಶಿವಲಿಂಗ ಪಾರ್ವತೀ ಸಮುತ್ಸಂಗ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಇನ್ನು ಸೃಷ್ಟಿವರ್ಗನಿರೂಪಣಾನಂತರದಲ್ಲಿ ಸಂಹಾರವರ್ಗಮಂ ಪೇಳ್ವೆನೆಂತೆನೆ- ಕ್ಷಕಾರಾದ್ಯಕಾರಾಂತಮಾದಕ್ಷರಮಾಲಿಕೆಯೆ ಸಂಹಾರವರ್ಗಮೆನಿಕುಂ. ಅದರಲ್ಲಿ ಕ್ಷ ಳ ಹ ಸ ಷ ಶ ವ ಲ ರ ಯಂ ಗಳೆಂಬೀ ಪತ್ತೆ ಸಂಹಾರವರ್ಗದಲ್ಲಿ ಮೊದಲವರ್ಗಮಿದು ಪೃಥ್ವಿ. ಮ ಭ ಬ ಫ ಪ ನ ಧ ದ ಥ ತಂಗಳೆಂಬೀ ಪತ್ತೆ ಸಂಹಾರಿವರ್ಗದೊಳೆರಡನೆಯ ವರ್ಗಮಿದಪ್ಪು. ಣ ಢ ಡ ಠ ಟ ಞ ರುsು ಜ ಛ ಚಂಗಳೆಂಬೀ ಪತ್ತೆ ಸಂಹಾರವರ್ಗದಲ್ಲಿ ಮೂರನೆಯ ವರ್ಗಮಿದಗ್ನಿ. ಙ ಘ ಗ ಖ ಕಂಗಳೆಂಬೀವೈದುಂ ಸಂಹಾರವರ್ಗದಲ್ಲಿ ನಾಲ್ಕನೆಯ ವರ್ಗಮಿದು ವಾಯು, ಅಃ ಆಂ ಔ ಓ ಐ ಏ ಒ ಓ Iೂ ಋ ಊ ಉ ಈ ಇ ಆ ಅ ಎಂಬೀ ಪದಿನಾರೆ ಸಂಹಾರವರ್ಗದಲ್ಲಿಯೈದನೆಯ ವರ್ಗಮಿದಾಕಾಶ- ಮಿವೈದು ವರ್ಗಂಗಳನೊಳಕೊಂಡು ಸಂಹಾರವರ್ಗ ಮಿರ್ಪುದಿದಲ್ಲಿಯೆ ಸಮಸ್ತವಾದ ರುದ್ರಮಂತ್ರಗಳನುದ್ಧರಿಪುದಿದೀಗ ಸಂಹಾರವರ್ಗಂ. ಇಂತು ಸ್ಥಿತಿ ಸಂಹಾರ ತಾಮಸವರ್ಗ ವರ್ಗತ್ರಯಂಗಳಂ ನಿರವಿಸಿದೆಯಯ್ಯಾ, ನಿರಾಳ ನಿಶ್ಚಿಂತ ಪರಮ ಶಿವಲಿಂಗೇಶ್ವರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಗುದದಲ್ಲಿ ಆಧಾರಚಕ್ರ, ಪೃಥ್ವಿಯೆಂಬ ಮಹಾಭೂತ, ಚತುಃಷ್ಕೋಣ, ಚೌದಳಪದ್ಮ, ಅಲ್ಲಿಯ ಅಕ್ಷರ ವಶಷಸವೆಂಬ ನಾಲ್ಕು ಅಕ್ಷರ, ಅದರ ವರ್ಣ[ಪೀತ], ಅದಕ್ಕೆ ಅಧಿದೇವತೆ[ಬ್ರಹ್ಮ], ಭಕ್ತ ಮುಖ, ಕ್ರಿಯಾಶಕ್ತಿ, ಆಚಾರಲಿಂಗ, ನಕಾರ ಸ್ವಾಯತ. ಲಿಂಗಸ್ಥಾನದಲ್ಲಿ ಸ್ವಾಧಿಷಾ*ನಚಕ್ರ, ಅಪ್ಪುವೆಂಬ ಮಹಾಭೂತ, ಧನುರ್ಗತಿ, ಷಡುದಳಪದ್ಮ, ಅಲ್ಲಿಯ ಅಕ್ಷರವಾರು ಬ ಭ ಮ ಯ ರ ಲ ; ಅದರ ವರ್ಣ [ಶ್ವೇತ], ಅಧಿದೇವತೆ [ವಿಷ್ಣು], ಮಹೇಶ ಮುಖ, ಜ್ಞಾನಶಕ್ತಿ, ಗುರುಲಿಂಗ, ಅಲ್ಲಿ ಮಕಾರ ಸ್ವಾಯತ. ನಾಭಿಸ್ಥಾನದಲ್ಲಿ ಮಣಿಪೂರಕಚಕ್ರ, ತೇಜವೆಂಬ ಮಹಾಭೂತ, ತ್ರಿಕೋಣ, ದಶದಳಪದ್ಮ, ಅಲ್ಲಿಯ ಅಕ್ಷರ ಹತ್ತು ; ಡಢಣ ತಥದಧನ ಪಫ, ಅದಕ್ಕೆ [ಹರಿತ]ವರ್ಣ, ಅಧಿದೇವತೆ [ರುದ್ರ], ಪ್ರಸಾದಿ ಮುಖ, ಇಚ್ಚಾಶಕ್ತಿ , ಶಿವಲಿಂಗ, ಶಿಕಾರ ಸ್ವಾಯತ. ಹೃದಯಸ್ಥಾನದಲ್ಲಿ ಅನಾಹತಚಕ್ರ, ವಾಯುವೆಂಬ ಮಹಾಭೂತ, ಷಟ್ಕೋಣ, ದ್ವಿದಶದಳಪದ್ಮ, ಅಲ್ಲಿಯ ಅಕ್ಷರ ಹನ್ನೆರಡು : ಕ ಖ ಗ ಘ ಙ ಚ ಛ ಜ ಝ ಞ ಟ ಠ ಅದರ ವರ್ಣ [ಮಾಂಜಿಷ್ಟ], ಅದಕ್ಕೆ ಅಧಿದೇವತೆ [ಈಶ್ವರ], ಪ್ರಾಣಲಿಂಗಿ ಮುಖ, Wಆದಿಘೆಶಕ್ತಿ, ಜಂಗಮಲಿಂಗ, ಅಲ್ಲಿ ವಕಾರ ಸ್ವಾಯತ. ಕಂಠಸ್ಥಾನದಲ್ಲಿ ವಿಶುದ್ಧಿಚಕ್ರ, ಆಕಾಶವೆಂಬ ಮಹಾಭೂತ, ವರ್ತುಳಾಕಾರ, ಷೋಡಷದಳಪದ್ಮ, ಅಲ್ಲಿಯ ಅಕ್ಷರ ಹದಿನಾರು :ಅ ಆ ಇ ಈ ಉ ಊ ಋ Iೂ ಲೃ ಲೃೂ ಏ ಐ ಓ ಔ ಅಂ ಅಃ, ಅದಕ್ಕೆ ವರ್ಣ [ಕಪೋತ], ಅಧಿದೇವತೆ ಸದಾಶಿವನು, ಶರಣ ಮುಖ, [ಪರಾ]ಶಕ್ತಿ , [ಪ್ರಸಾದಲಿಂಗ, ಯಕಾರ ಸ್ವಾಯತ. ಭ್ರೂಮಧ್ಯದಲ್ಲಿ ಆಜ್ಞಾಚಕ್ರ, ಮನವೆಂಬ ಮಹಾಭೂತ, ದ್ವಿದಳಪದ್ಮ,] ಅಲ್ಲಿಯ ಅಕ್ಷರವೆರಡು :ಹ ಷ ವೆಂಬ [ಅಕ್ಷರ], ಮಾಣಿಕ್ಯ ವರ್ಣ, [ಅದಕ್ಕೆ ಅಧಿದೇವತೆ ಮಹೇಶ್ವರ], ಐಕ್ಯ ಮುಖ, ಕ್ರಿಯಾಶಕ್ತಿ, ಮಹಾಲಿಂಗ, ಓಂಕಾರ ಸ್ವಾಯತ. ಇಂತೀ ಷಡುಚಕ್ರದ, ಷಡುಸ್ಥಳದ, ಷಡುಲಿಂಗದ, ಷಡುಶಕ್ತಿಯರಿಗೆ ಷಡಕ್ಷರವೆ ಪ್ರಾಣವಾಗಿ ವಿರಾಜಿಸುತ್ತಿದ್ದಿತಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಬಳಿಕ್ಕಮೂಧ್ರ್ವಾಬ್ಜವೆಂಬ ಪೆಸರ ಹೃದಯಸ್ಥಾನದೆ ಅನಾಹತಚಕ್ರಮೆನಿಸುಗುಮಲ್ಲಿಯ ದ್ವಾದಶಕೋಷ*ಂಗಳೆ ದ್ವಾದಶದಳಂಗಳವರಲ್ಲಿ ಕ ಖ ಗ ಘ ಙ ಚ ಛ ಜ ರುsು ಞ ಟ ಠ ಎಂಬ ಪನ್ನೆರಡಕ್ಕರಂಗಳ್ನೆಲಸಿರ್ಕುಮೆಂದು ನಿರವಿಸಿದೆಯಯ್ಯಾ, ಪರಮ ಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
-->