ಅಥವಾ

ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನ್ನ ಲಿಂಗದಲ್ಲಿ ಪದಾರ್ಥದ ಪೂರ್ವಾಶ್ರಯ ಹೋಗದೆಂದು ಅನುಸರಿಸಿ ಜಂಗಮದ ಒಕ್ಕುದ ಮಿಕ್ಕುದ ಕೊಂಬೆನೆಂಬವನೊಬ್ಬ ಠಕ್ಕಭವಿ. ಆ ಚರಲಿಂಗ ಜಂಗಮ ಹೋದ ಬಳಿಕ್ಕ ತನ್ನ ಸ್ವಯಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರಮಂ ಮಾಡಿ, ಆ ಲಿಂಗಪ್ರಸಾದವಲ್ಲದೆ ಒಲ್ಲೆನೆಂಬವನೊಬ್ಬ ಠಕ್ಕಭವಿ. ಅವಂಗೆ ಲಿಂಗವಿಲ್ಲ, ಲಿಂಗಕ್ಕೆ ತಾನಿಲ್ಲ, ಆವ ಆಚಾರಭ್ರಷ್ಟ. ಅಂಥವರ ಕಂಡಡೆ ಇರಿದಿರಿದು ಸುಡುವನಲ್ಲದೆ, ಮೆರೆವನಲ್ಲ ಕೂಡಲಚೆನ್ನಸಂಗಮದೇವ.
--------------
ಚನ್ನಬಸವಣ್ಣ
-->