ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೇಳೆಯನರಿದು ಧ್ವನಿದೋರುವ ತಾಮ್ರಚೂಡಂಗೆ ಅದಾವ ಜ್ಞಾನ ? ಮಧುರರಸಂಗಳಿದ ಠಾವನರಿದೆಯಿದುವ ಪಿಪೀಲಿಕಂಗೆ ಅದಾವ ಜ್ಞಾನ ? ತಾನುಂಡು ನೆನದಡೆ ಶಿಶು ತೃಪ್ತಿಯಹ ಕೂರ್ಮಂಗೆ ಅದಾವ ಜ್ಞಾನ ? ಅರಿದು ನಡೆದಡೆ ವೇದವೇದ್ಯನು, ಅರಿದು ನಡೆದಡೆ ಶಾಸ್ತ್ರಸಂಬಂಧಿ, ಅರಿದು ನಡೆದಡೆ ಪುರಾಣಪುಣ್ಯವಂತನು, ಅರಿದು ನಡೆದಡೆ ಸಕಲಾಗಮಭರಿತನು. ಇಂತೀ ಪಂಚಾಕ್ಷರಿಯ ಮೂಲಷಡಕ್ಷರಿಯ ಭೇದ. ಜಗಕ್ಕಾಧಾರವಾರೆಂಬುದ ಏಕಮೇವನದ್ವಿತೀಯನೆಂಬುದ ತಿಳಿದು, ಸೋಹಂ ಕೋಹಂ ಎಂಬುದ ತಿಳಿದು, ಆ ನಿಜವೆ ವಸ್ತುವಿಗೊಡಲೆಂಬುದ ಪ್ರಮಾಣಿಸಿ, ನುಡಿದು ನಡೆಯಬಲ್ಲವನೆ ವೇದವೇದ್ಯನು ಕಾಣಾ, ಲಲಾಮಭೀಮಸಂಗಮೇಶ್ವರಲಿಂಗವು ತಾನಾದ ಶರಣ.
--------------
ವೇದಮೂರ್ತಿ ಸಂಗಣ್ಣ
-->