ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೋಕದ ಲೋಕಿಗಳು ಏಕಯ್ಯಾ ನುಡಿವರು ಲೋಕನಾಥನಿಪ್ಪ ಠಾವನರಿಯರು. ಕಲ್ಲೊಳಗೆ ಹೇಮ, ಕಾಷ*ದೊಳಗಗ್ನಿ, ತಿಲದೊಳು ತೈಲ, ಜಲದೊಳು ಮುತ್ತು, ಹಾಲೊಳು ತುಪ್ಪ, ಸ್ಥಲದೊಳಗೆ ರತ್ನವಿಪ್ಪ ಪರಿಯಲ್ಲಿ ನೀವಿಪ್ಪ ಭೇದವ ನರರೆತ್ತ ಬಲ್ಲರೈ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
-->