ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೂವು ಕಂದಿದಲ್ಲಿ ಪರಿಮಳವನರಸುವರೆ ? ಕಂದನಲ್ಲಿ ಕುಂದನರಸುವರೆ ? ಎಲೆ ದೇವ, ಸ್ನೇಹವಿದ್ದ ಠಾವಿನೊಳು ದ್ರೋಹವಾದ ಬಳಿಕ ಮರಳಿ ಸದ್ಗುಣವನರಸುವರೆ ? ಎಲೆ ದೇವ, ಬೆಂದ ಹುಣ್ಣಿಗೆ ಬೇಗೆಯನಿಕ್ಕುವರೆ ? ಕೇಳಯ್ಯಾ, ಶ್ರೀಶೈಲ ಚೆನ್ನಮಲ್ಲಿಕಾರ್ಜುನಾ ಹೊಳೆಯಿಳಿದ ಬಳಿಕ ಅಂಬಿಗಂಗೇನುಂಟು?
--------------
ಅಕ್ಕಮಹಾದೇವಿ
-->