ಒಟ್ಟು 10 ಕಡೆಗಳಲ್ಲಿ , 8 ವಚನಕಾರರು , 9 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅಂಗ ಪ್ರಾಣ ಸಂಗವುಳ್ಳನ್ನಕ್ಕ,ಲಿಂಗಪೂಜೆಯೆಂಬ ದಂದುಗ ಬಿಡದು.ಈ ಹೊರಗು ಒಳಗಾಗಿಯಲ್ಲದೆ,ಪ್ರಾಣಲಿಂಗಿಯೆಂಬ ಸಂಬಂದ್ಥಿಯಲ್ಲ.ಲಿಂಗಕ್ಕೆ ಪ್ರಾಣ, ಪ್ರಾಣಕ್ಕೆ ಲಿಂಗಉಭಯಸಂಬಂಧವಾದಲ್ಲಿ,ಉರಿ ಕೊಂಡ ಕರ್ಪುರಕ್ಕೆ ತೊಡರುವುದಕ್ಕೆ ಠಾವಿಲ್ಲ,ಕಾಮಧೂಮ ಧೂಳೇಶ್ವರಾ.
ಅರಿದು ಲಿಂಗಸಂಗವಾದಲ್ಲಿ ಕಾಯವಳಿದರೇನು ?ಕಾಯವುಳಿದು ಕೈಲಾಸಕ್ಕೆ ಹೋಗಬೇಕೆಂಬುದು,ಜೀವನ ಉಪಾದ್ಥಿಕೆ.ಘಟಮಟಪಟನ್ಯಾಯ ಇವೆಲ್ಲವು ಬಯಲೊಳಗು.ಅರ್ಕೇಶ್ವರಲಿಂಗವನರಿದು ಕೂಡಿದ ಮತ್ತೆ,ಅಂಗ ಸಿಕ್ಕುವುದಕ್ಕೆ ಠಾವಿಲ್ಲ.
ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆಐವರು ಮಕ್ಕಳು ಜನಿಸಿದರೆಂತೆಂಬೆ :ಒಬ್ಬ ಭಾವದ ರೂಪು, ಒಬ್ಬ ಪ್ರಾಣದ ರೂಪು.ಒಬ್ಬ ಕಾಯದ ರೂಪು, ಒಬ್ಬನೈಮುಖನಾಗಿವಿಷಯಕ್ಕೆ ಕಾಯರೂಪನಾದ. ಒಬ್ಬನೆಲ್ಲರ ಕೂಡಿಕೊಂಡು ನಿರವಯವಾಗಿರ್ಪ.ಇಂತಿವರ ಕೂಡಿಕೊಂಡು ಈ ಲೋಕಕ್ಕೆ ಬಂದೆನು.ಆನು ಹೋಗೆನಯ್ಯಾ, ಇನ್ನು ಹೋದೆನಾದಡೆ ಎನಗಿರ ಠಾವಿಲ್ಲ.ಮುನ್ನ ಹೋದವರೆಲ್ಲಾ ತಗಹಿನಲ್ಲಿ ಕುಳ್ಳಿರ್ದರು.ಆನು ಆ ತಗಹನರಿತೆನಾಗಿ ಬಲ್ಲಡೆ ಬಂದೆನಿಲ್ಲಿಗೆ.ಇಲ್ಲೆನ್ನೊ ಮದ್ದಳಿಗ, ಒಲ್ಲೆನ್ನೊ ಕಹಳೆಕಾರ.ಬಿಂದುವ ಹರಿದು ತಿಂದು ಹಾಕಿರೊ, ತಂತಿಯ ಹರಿಯಿರೊ.ತಾಳ ವಿತಾಳವಾಯಿತ್ತಲ್ಲಾ ಕೇಳಿರೆ ಕೇಳಿರೆ.ನಿಃಶೂನ್ಯವಾಯಿತ್ತಲ್ಲಾ ಕೇಳಯ್ಯ ಕೇಳಯ್ಯ.ರೇಕಣ್ಣಪ್ರಿಯ ನಾಗಿನಾಥಾ ಬಸವಣ್ಣನಿಂದ ಬದುಕಿತೀ ಲೋಕವೆಲ್ಲಾ.
ಇನ್ನೇನಹುದೆಂಬೆ, ಇನ್ನೇನಲ್ಲೆಂಬೆ, ಎಲ್ಲಾಮಯವು ನೀನಾಗಿ?ಹಿರಿದಹ ಗಿರಿಯ ಹತ್ತಿ, ಬಿದಿರೆಲೆಯ ತರಿದ[ವ]ನಂತೆ,ಒಂದ ಬಿಟ್ಟೊಂದ ಹಿಡಿದಡೆ ಅದೆಲ್ಲಿಯ ಚಂದ?ಹಿಂಗುವುದಕ್ಕೆ ಠಾವಿಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.
ಕತ್ತಲೆಯ ಉದಕದಲ್ಲಿ ಮತ್ಸ್ಯ ಹುಟ್ಟಿದುದ ಕಂಡೆ.ಮತ್ಸ್ಯಕ್ಕೆ ಮೂರು ಗರಿ, ಮರಿಗೆ ಆರು ಗರಿ.ಮರಿ ಮತ್ಸ್ಯವ ನುಂಗಿತ್ತೊ ? ಅದು ತಾಯ ಬಸುರಲ್ಲಿ ಬಸರಿಕ್ಕಿತ್ತೊ ?ಕೆರೆಯೊಡೆದು ಇಹುದಕ್ಕೆ ಠಾವಿಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.
ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದಡೆ, ತನ್ನ ಸವೆಯಲಿಲ್ಲ, ಕಳವು ದೊರೆಯಲಿಲ್ಲ ? ಬೊಬ್ಬುಲಿಯನೇರಿದ ಮರ್ಕಟನಂತೆ ಹಣ್ಣ ಮೆಲ್ಲಲಿಲ್ಲ, ಕುಳ್ಳಿರೆ ಠಾವಿಲ್ಲ. ನಾನು ಸರ್ವಸಂಗಪರಿತ್ಯಾಗಮಾಡಿದವಳಲ್ಲ, ನಿಮ್ಮ ಕೂಡಿ ಕುಲವಳಿದವಳಲ್ಲ, ಚೆನ್ನಮಲ್ಲಿಕಾರ್ಜುನಾ.
ಜಗಕ್ಕೆ ಹೊರಗಾಗಿ ಅರಿವ ಠಾವಿಲ್ಲ, ಜಗಕ್ಕೆ ಒಳಗಾಗಿ ಮರೆವ ಠಾವಿಲ್ಲ ,ಒಳಹೊರಗೆಂಬುದು ಒಂದೇ ಭೇದವಾದ ಕಾರಣಕುಡಿಕೆಯ ಘೃತ ಅಗಲಿಕೆ ಬಂದಂತೆ, ಅದು ಮುಂದಣ ಬಯಕೆ.ಇದು ಇಂದಿನ ಇರವು ಎಂಬುದನರಿದಲ್ಲಿ,ಉಂಟು, ಇಲ್ಲಾ ಎಂಬ ಸಂದೇಹ ಹರಿಯಿತ್ತು,ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವನರಿದಲ್ಲಿ.
ಮೂರ ಮುದುಡಿಸಿ ಆರನಡಗಿಸಿಎಂಟ ಗಂಟಿಕ್ಕಿ ನಾಲ್ಕು ಸೆರಗ ಹಾಸಿಎರಡರಲ್ಲಿ ಬಂಧಿಸಿ ಒಂದುಗೂಡಿಮಂಡೆಯ ಮೇಲೆತ್ತಿದವಂಗೆ ಮತ್ತೆ ಅವು ಹಿಂಗುವ ಠಾವಿಲ್ಲ,ಕಾಮಹರಪ್ರಿಯ ರಾಮನಾಥಾ.
ಠಾವಿಲ್ಲ, ಆ ಠಾವಿಂಗೆ ಆ ಠಾವೆ ಮೂಲವಾಯಿತ್ತು. ಮೂಲವಡಗಿದ ರೂಪಿಂಗೆ ಮುಕ್ತಳಾದೆನು. ಮುನ್ನಲೊಂದು ಸುಖವ ಕಂಡು ಮೂಲಾಧಾರ ರೂಪವರಿ. ಎನಗೆ ಪ್ರಣವ ಸ್ವರೂಪೇ ಸಾಧ್ಯವಾಯಿತ್ತು. ನಾನು ಹೆಣ್ಣು ರೂಪವಳಿದು ಮುಕ್ತ್ಯಂಗನೆಯಾದೆನಯ್ಯ ಸಂಗಯ್ಯ.