ಒಟ್ಟು 3 ಕಡೆಗಳಲ್ಲಿ , 2 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಮಾಡಿ ನೀಡಿ ಹೋದೆನೆಂಬಾಗ ಕೈಲಾಸವೇನು ಕೈಕೂಲಿಯೆ ? ಮುಂದೊಂದ ಕಲ್ಪಿಸದೆ, ಹಿಂದೊಂದ ಭಾವಿಸದೆ ಸಲೆಸಂದಿದ್ದಾಗವೆ ಮಾರಯ್ಯಪ್ರಿಯ ಅಮಲೇಶ್ವರಲಿಂಗವಿದ್ದ ಠಾವೆ ಕೈಲಾಸ.
ಮಾಡುವ ಮಾಟವುಳ್ಳನ್ನಕ್ಕ ಬೇರೊಂದು ಪದವನರಸಲೇತಕ್ಕೆ ? ದಾಸೋಹವೆಂಬ ಸೇವೆಯ ಬಿಟ್ಟು ನೀಸಲಾರದೆ ಕೈಲಾಸವೆಂಬ ಆಸೆ ಬೇಡ. ಮಾರಯ್ಯಪ್ರಿಯ ಅಮಲೇಶ್ವರಲಿಂಗವಿದ್ದ ಠಾವೆ ಕೈಲಾಸ.
ಠಾವಿಲ್ಲ, ಆ ಠಾವಿಂಗೆ ಆ ಠಾವೆ ಮೂಲವಾಯಿತ್ತು. ಮೂಲವಡಗಿದ ರೂಪಿಂಗೆ ಮುಕ್ತಳಾದೆನು. ಮುನ್ನಲೊಂದು ಸುಖವ ಕಂಡು ಮೂಲಾಧಾರ ರೂಪವರಿ. ಎನಗೆ ಪ್ರಣವ ಸ್ವರೂಪೇ ಸಾಧ್ಯವಾಯಿತ್ತು. ನಾನು ಹೆಣ್ಣು ರೂಪವಳಿದು ಮುಕ್ತ್ಯಂಗನೆಯಾದೆನಯ್ಯ ಸಂಗಯ್ಯ.