ಬಟ್ಟಬಯಲೆಲ್ಲ ಗಟ್ಟಿಗೊಂಡಡೆ,
ಸ್ವರ್ಗ ಮತ್ರ್ಯ ಪಾತಾಳಕ್ಕೆ ಠಾವೆಲ್ಲಿಯದೊ ?
ಮೇಘನಿರ್ಮಳಜಲವೆಲ್ಲ ಮುತ್ತಾದಡೆ
ಸಪ್ತಸಾಗರಂಗಳಿಗೆ ಉದಕವೆಲ್ಲಿಯದೊ ?
ಕಷ್ಟಜೀವಿ ಮನುಜರೆಲ್ಲ ನೆಟ್ಟನೆ ಶಿವಜ್ಞಾನಿಗಳಾದಡೆ
ಮುಂದೆ ಭವದ ಬಳ್ಳಿ ಬೆಳೆಯಲಿನ್ನೆಲ್ಲಿಯದೊ ?
`ಗುರುಭಕ್ತಿಂ ಪರಿತ್ಯಜ್ಯ ಸದ್ಯೋsಪಿ ನರಕಂ ವ್ರಜೇತ್'_
ಇಂತೆಂದುದಾಗಿ, ಕೂಡಲಚೆನ್ನಸಂಗಯ್ಯಾ
ಲಕ್ಷಕ್ಕೊಬ್ಬ ಭಕ್ತ, ಕೋಟಿಗೊಬ್ಬ ಶರಣ