ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಣ್ಣು ನೋಡಿ ರೂಪ ಹೇಳದಂತಿರಬೇಕು. ಕಿವಿ ಕೇಳಿ ಶಬ್ದವ ನುಡಿಯಲರಿಯದಂತಿರಬೇಕು. ಮನವುಂಡು ಡರ್ರನೆ ತೇಗಿ ರುಚಿಯ ಪೇಳಲರಿಯದಂತಿರಬೇಕು. ಮನವ ತೋರುವ ಗುರುವಿನ ಕಾರುಣ್ಯದನುವ ಕಾಬ ಶಿಷ್ಯಂಗೆ, ಮನೋಮೂರ್ತ ಮುನ್ನವೆಯಾಯಿತ್ತೆಂದ ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಜಂಗಮಮುಖದಲು ಲಿಂಗ ಸರ್ವಾಂಗವಾಯಿತ್ತಾಗಿ ಆರೋಗಿಸಿ ಕೊಡುವುದು ನೋಡಾ ! ಜಂಗಮದಾಪ್ಯಾಯನವೆ ಲಿಂಗದಾಪ್ಯಾಯನ ನೋಡಾ ! ಜಂಗಮತೃಪ್ತಿಯೆ ಲಿಂಗತೃಪ್ತಿನೋಡಾ ! ಜಂಗಮವಾರೋಗಿಸಿ ಡರ್ರನೆ ತೇಗಿದಡೆ ಂಗೈಯಲೆರಗುವುದು ನಮುಕ್ತಿಫ ನೋಡಾ ! ಜಂಗಮಮುಖದಲು ತೃಪ್ತನಾದನೆಂದು `ಬಾರಯ್ಯಾ ಬಸವ್ಡ ಎಂದು ಕೈವಿಡಿದು, ತೆಗೆದಪ್ಪಿ ಮುದ್ದಾಡಿ, ತಕ್ಕೈಸಿಕೊಂಡು, ನಿನ್ನ ಹೊರಗಿರಿಸಲಾರೆನೆಂದು ತನ್ನ ಹೃದಯಕಮಲದಲ್ಲಿ ಇಂಬಿಟ್ಟುಕೊಂಡು ಕೂಡಲಚೆನ್ನಸಂಗಯ್ಯಂಗೆ ಬಸವ ಪ್ರಾಣಲಿಂಗವಾದ.
--------------
ಚನ್ನಬಸವಣ್ಣ
-->