ಒಟ್ಟು 4 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ನಾ ತೋಡಿದ ಬಾವಿಯಲ್ಲಿ ಡುಂಡುಕ ಭೇಕವೊಂದಾಗಿ ಇದ್ದವು.ಡುಂಡುಕ ಹಸಿದು ಭೇಕನ ನುಂಗಿತ್ತು.ಭೇಕ ಸಾಯದೆ ಡುಂಡುಕನ ಕರುಳ ತಿಂದು,ಡುಂಡುಕ ಸತ್ತು ಒಣಗಲಾಗಿ, ಅಂಗ ಬಿಗಿದು ಭೇಕನಲ್ಲಿಯೆ ಸತ್ತಿತ್ತು.ಎನ್ನ ಬಾವಿ ಕೆಟ್ಟಿತ್ತು, ಸದಾಶಿವಮೂರ್ತಿಲಿಂಗದ ಕುರುಹಡಗಿತ್ತು.
ಭಾನುತೇಜವ ರಾಹು ಕೊಂಡಲ್ಲಿ,ಸೋನೆಯ ಡುಂಡುಕ ತನ್ನಯ ಕೇಣವನೆತ್ತಿದಂತೆ,ಎನ್ನಯ ಸುತ್ತಿದ ಮಾಯೆ ನಿನಗೆ ಅನ್ಯವೆ ?ಅದು ನಿನ್ನಯ ಚುನ್ನ, ಚೆನ್ನಬಂಕೇಶ್ವರಲಿಂಗಾ.