ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರ್ವಜೀವಂಗಳ ಕೊಲುವಲ್ಲಿ, ಜೀವ ಜೀವನ ಕೈಯಲ್ಲಿ ಸಾವಲ್ಲಿ ಆ ಕೊಲೆಗೆ ಒಲವರ ಬೇಡ. ಆ ಕೊಲೆಯ ಕೊಲುವಲ್ಲಿ ಅದು ಹೊಲೆಯೆಂದು ಆ ಜೀವವ ಬಿಡೆಂದು ಒಲವರ ಬೇಡ. ಅದು ಕೊಲುವ ಜೀವದ ನೋವು, ಸಾವ ಜೀವದ ದಯ. ಆ ಉಭಯದ ಹೊಲಬ ತಿಳಿದು ಮನದ ನೀರಿನಲ್ಲಿ ಮಜ್ಜನವ ಮಾಡಿ ಚಿತ್ತದ ಗಿಡುವಿನ ಪುಷ್ಪವ ಹರಿದು ಹೊತ್ತಿಗೊಂದು ಪರಿಯಾದ ಚಂದನದ ಗಂಧವನಿಟ್ಟು ತಥ್ಯಮಿಥ್ಯವಳಿದ ಅಕ್ಷತೆಯ ಲಕ್ಷಿಸಿ, ಸುಗುಣ ದುರ್ಗುಣವೆಂಬ ಉಭಯದ ಹಗಿನವ ತೆಗೆದು, ನಿಜ ಸುಗಂಧದ ಧೂಪವನಿಕ್ಕಿ, ನಿತ್ಯಾನಿತ್ಯವೆಂಬ ನಟ್ಟಾಲಿಯ ದರ್ಪವ ಕಿತ್ತು, ಮತ್ತಮಾ ಕಂಗಳ ತೆಗೆದ ದರ್ಪಣವ ತೋರುತ್ತ, ಪೂರ್ವ ಪಶ್ಚಿಮ ನಷ್ಟವಾದ ಸತ್ತಿಗೆಯ ಹಿಡಿದು ದುರ್ವಾಸನೆಯೆಂಬ ಉಷ್ಣವ ಪರಿಹರಿಸುವುದಕ್ಕೆ ಸುಮತೆಯೆಂಬ ಆಲವಟ್ಟವನೆ ತಿರುಹುತ್ತ, ಉತ್ತರ ಪೂರ್ವಕ್ಕೆ ಉಭಯವಲ್ಲಾಡದ ಚಾಮರವ ಢಾಳಿಸುತ್ತ, ಇಂತೀ ವರ್ತನಂಗಳಲ್ಲಿ ಸತ್ಯಸಾಕ್ಷಿಯಾಗಿ ಭಕ್ತಿ ಜ್ಞಾನ ವೈರಾಗ್ಯವೆಂಬೀ ಇಷ್ಟವ ಮಾಡಿ ನಿಜ ನಿಶ್ಚಯದ ಬೆಳಗಿನ ಆರತಿಯನೆತ್ತಿ ನೋಡುತ್ತಿರಬೇಕು ದಸರೇಶ್ವರಲಿಂಗವ.
--------------
ದಸರಯ್ಯ
-->