ಶಿವಭಕ್ತರ ಹಾದಿಯ ಕಾಣದೆ,
ಹರಗಣಂಗಳೆಲ್ಲಕ್ಕೆ ಪರಮಗುರುವಾಗಿ, ಪರಮಾರಾಧ್ಯರಾಗಿ ಸುಳಿದಿರಲ್ಲದೆ
ನೀವು ಒಡಲುವಿಡಿದಿದ್ದರೆನ್ನಬಹುದೆ ? ಅದೇನು ಕಾರಣವೆಂದರೆ,
ಎನ್ನ ಭವವ ಛೇದನೆಯ ಮಾಡಿದುದಕ್ಕೆ ಎನ್ನ ಮನಕ್ಕೆ ಮನವೇ ಸಾಕ್ಷಿ.
ಮತ್ತೆ ಚೆನ್ನಮಲ್ಲೇಶ್ವರ ಸಾಕ್ಷಿ.
ಮರವೆಯಿಂದ ಈ ಮತ್ರ್ಯದಲ್ಲಿ ಒಡಲುವಿಡಿದು ಹುಟ್ಟಿದವರು
ಬ್ರಹ್ಮನಾದರೂ ಆಗಲಿ, ವಿಷ್ಣುವಾದರೂ ಆಗಲಿ,
ರುದ್ರನಾದರೂ ಆಗಲಿ, ಶಿವನಾದರೂ ಆಗಲಿ, ಸದಾಶಿವನಾದರೂ ಆಗಲಿ,
ಮಾಯೆವಿಡಿಸಿ ಕಾಡಿದಲ್ಲದೆ ಮಾಣದು. ಮಿಕ್ಕಿನವರ ಭವಕ್ಕೆ ಕಡೆ ಇಲ್ಲ .
ಎನ್ನ ಪರಮಾರಾಧ್ಯರು ಚೆನ್ನಮಲ್ಲೇಶ್ವರ ಮಾಯೆಯ ಮಂಡೆಯ ಮೆಟ್ಟಿ,
ಎನ್ನ ತನು ಮನ ಧನಕ್ಕೆ ಒಡೆಯನಾಗಿ ತನ್ಮಯನಾಗಿ ತಾನೇ ರೂಪಾದನಯ್ಯ.
ನಾನೆಂಬುದಿಲ್ಲ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ .