ಅಥವಾ

ಒಟ್ಟು 641 ಕಡೆಗಳಲ್ಲಿ , 87 ವಚನಕಾರರು , 494 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಛಲಮದವೆಂಬುದು ತಲೆಗೇರಿ ಗುರುಹಿರಿಯರ ನೆಲೆಯನರಿಯದೆ ಮದಿಸಿಪ್ಪರಯ್ಯ. ರೂಪಮದ ತಲೆಗೇರಿ ಮುಂದುಗೊಂಡು ತಮ್ಮ ತನುವಿನ ರೂಪ ಚೆಲ್ವಿಕೆ ನೋಡಿ ಮರುಳಾಗಿ ಚಿದ್ರೂಪನ ನೆನವ ಮರೆದರಯ್ಯಾ. ಯವ್ವನಮದ ತಲೆಗೇರಿ ಮದಸೊಕ್ಕಿದಾನೆಯಂತೆ ಪ್ರಯಾಸಮತ್ತರಾಗಿ ಕಾಮನ ಬಲೆಯೊಳಗೆ ಸಿಲ್ಕಿ ಕಾಮಾರಿನೆನವ ಮರೆದರಯ್ಯಾ. ಧನಮದವೆಂಬುದು ತನುವಿನೊಳು ಇಂಬುಗೊಂಡು ಅರ್ಥಭಾಗ್ಯ ಕಾಡಿ ವ್ಯರ್ಥ ಸತ್ತಿತು ಲೋಕ. ವಿದ್ಯಾಮದವೆಂಬುದು ಬುದ್ಧಿಗೆಡಿಸಿ ನಾ ಬಲ್ಲವ ತಾ ಬಲ್ಲವನೆಂದು ತರ್ಕಿಸಿ ಪ್ರಳಯಕಿಳಿದರು. ರಾಜ್ಯಮದವೆದ್ದು ರಾಜ್ಯವನಾಡಿಸಿ ಬೇಡಿಸಿಕೊಂಡೆನೆಂದು ರಾಜರಾಜರು ಹತವಾದರು. ತಪಮದವೆದ್ದು ನಾ ತಪಸಿ ನಾ ಸಿದ್ಧ ನಾ ಯೋಗಿ ನನಗಾರು ಸರಿಯಿಲ್ಲವೆಂದು ಅಹಂಕಾರಕ್ಕೆ ಗುರಿಯಾಗಿ ಭವಕ್ಕೆ ಬಂದರು ಹಲಬರು. ಇಂತೀ ಅಷ್ಟಮದವೆಂಬ ಭ್ರಾಂತು[ವ] ತೊಲಗಿಸಿ ನಿಭ್ರಾಂತನಾಗಿರಬಲ್ಲರೆ ಶಿವಶರಣನೆಂಬೆ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಅಯ್ಯಾ ಆರೂ ಇಲ್ಲದ ಅರಣ್ಯದಲ್ಲಿ, ನಾನಡಿಯಿಟ್ಟು ನಡವುತ್ತಿರ್ದೆನಯ್ಯಾ. ಮುಂದೆ ಬರೆಬರೆ ಮಹಾಸರೋವರವ ಕಂಡೆ. ಸರೋವರದೊಳಗೊಂದು ಹಿರಿಯ ಮೃಗವ ಕಂಡೆ. ಆ ಮೃಗಕ್ಕೆ ಕೊಂಬುಂಟು ತಲೆಯಿಲ್ಲ, ಬಾಯುಂಟು ಕಣ್ಣಿಲ್ಲ, ಕೈಯುಂಟು ಹಸ್ತವಿಲ್ಲ, ಕಾಲುಂಟು ಹೆಜ್ಜೆಯಿಲ್ಲ, ಒಡಲುಂಟು ಪ್ರಾಣವಿಲ್ಲ. ಇದ ಕಂಡು ನಾ ಹೆದರಿ, ಹವ್ವನೆ ಹಾರಿ, ಬೆದರಿ ಬಿದ್ದೆನಯ್ಯಾ. ಆಗೆನ್ನ ಹೆತ್ತತಾಯಿ ಬಂದು ಎತ್ತಿ ಕುಳ್ಳಿರಿಸಿ, ಚಿತ್ತಮೂಲಾಗ್ನಿಯ ಒತ್ತಿ ಉರುಹಿದರೆ, ಇವೆಲ್ಲವು ಸುಟ್ಟು ಬಟ್ಟಬಯಲಾದವು. ಆ ಬಟ್ಟಬಯಲೊಳಗೆ ಅಡಿಯಿಟ್ಟು ನಡೆವಾಗ, ಮುಂದೆ ಇಟ್ಟಡಿಯ ಬಾಗಿಲೊಳಗೆ ಮತ್ತೊಂದು ಮೃಗವ ಕಂಡೆ. ಆ ಮೃಗಕ್ಕೆ ತಲೆಯುಂಟು ಕೊಂಬಿಲ್ಲ, ಕಣ್ಣುಂಟು ಬಾಯಿಲ್ಲ, ಹಸ್ತವುಂಟು ಕೈಯಿಲ್ಲ, ಹೆಜ್ಜೆಯುಂಟು ಕಾಲಿಲ್ಲ, ಪ್ರಾಣವುಂಟು ಒಡಲಿಲ್ಲ. ಇದ ಕಂಡು ನಾ ಅಪ್ಪಿಕೊಳಹೋದಡೆ, ಮುಟ್ಟದ ಮುನ್ನವೆ ಎನ್ನನೆ ನುಂಗಿತ್ತು. ನುಂಗಿದ ಮೃಗ ಮಹಾಲಿಂಗದಲ್ಲಿಯೆ ಅಡಗಿತ್ತು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ನಾ ಹುಟ್ಟಿದ ದ್ವಾದಶವರ್ಷಕ್ಕೆ ಎನ್ನ ತಂದೆ ದ್ವಾದಶಮಂತ್ರವ ಕಲಿಸಿದ. ಒಂದು ಮಂತ್ರದಿಂದ ಮತ್ರ್ಯಲೋಕವ ಸುಟ್ಟೆ. ಒಂದು ಮಂತ್ರದಿಂದ ಪಾತಾಳಲೋಕವ ಸುಟ್ಟೆ. ಒಂದು ಮಂತ್ರದಿಂದ ಸ್ವರ್ಗಲೋಕವ ಸುಟ್ಟೆ. ಮೂರು ಮಂತ್ರದಿಂದ ಮುಪ್ಪುರದರಸುಗಳ ಕೊಂದೆ. ಆರು ಮಂತ್ರದಿಂದ ಆರು ವರ್ಣವ ಸುಟ್ಟೆ. ಇಂತೀ ಮಂತ್ರವ ಮಂತ್ರಿಸುವ ವೇಳೆಯಲ್ಲಿ ನಾ ಸತ್ತು ಕಾಯಕವ ಮಾಡುತಿರ್ದೆನಯ್ಯ ಕಾಡನೊಳಗಾದ ಶಂಕÀರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ಹಿಂದೆ ನೀ ಬಂದೆ ನಾನಾ ಭವಂಗಳಲ್ಲಿ, ನಾನಾ ವ್ಯಾಪಾರಕ್ಕೆ ನೀನೊಡೆಯನಾಗಿ. ಮತ್ರ್ಯದ ಸುಖದುಃಖ ನಿನಗೆ ನಿಶ್ಚಿಂತವಾಗಿಪ್ಪುದು. ಹಿಂದೆ ನಿನ್ನಂತೆ ನಾ ಬಂದು ನೊಂದುದಿಲ್ಲ. ಬಂದೆ ನಾ ಬಸವಣ್ಣನ ಕಥನದಿಂದ, ನಾ ತಂದ ಪದಾರ್ಥವೆಲ್ಲವ ನಿಮಗಿತ್ತೆ. ನಾನಿನ್ನಂಜುವೆ ಗುರುಲಿಂಗಜಂಗಮದಲ್ಲಿ ಪ್ರತ್ಯುತ್ತರಕ್ಕೆ. ಎನಗೆ ಮತ್ರ್ಯದ ಮಣಿಹ, ಕೃತ್ಯವಿನ್ನೆಷ್ಟು ದಿನ ಹೇಳಾ. ಅಂದು ನೀವು ಕೊಟ್ಟ ಒಪ್ಪದ ಚೀಟನೊಪ್ಪಿಸಿದೆ. ಮತ್ತೆ ಇನ್ನು ಸಂದೇಹವೆ, ಹೇಳಾ ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಕುರುಡಿ ಕುಂಟರ ನಡುವೆ ನಾ ಹುಟ್ಟಿದೆನಯ್ಯಾ. ಎನಗೆ ಐವರು ಸ್ತ್ರೀಯರ ಮದುವೆಯ ಮಾಡಿದರು. ಅವರ ಸಂಗದಲ್ಲಿರಲೊಲ್ಲದೆ ಒಬ್ಬಳ ಬ್ರಹ್ಮಂಗೆ ಕೊಟ್ಟೆ, ಒಬ್ಬಳ ವಿಷ್ಣುವಿಂಗೆ ಕೊಟ್ಟೆ, ಒಬ್ಬಳ ರುದ್ರಂಗೆ ಕೊಟ್ಟೆ, ಒಬ್ಬಳ ಈಶ್ವರಂಗೆ ಕೊಟ್ಟೆ, ಮತ್ತೊಬ್ಬಳ ಸದಾಶಿವಂಗೆ ಕೊಟ್ಟು ತಾಯಿಯ ಒಡನಾಡಿ ಸಂಸಾರ ಮಾಡುತಿರ್ದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಪದ್ಮಾಸನದಲ್ಲಿ ಕುಳ್ಳಿರ್ದು ಲಿಂಗಾರ್ಚನೆಯ ಮಾಡುವರ ತೋರಾ ಎನಗೆ. ಸ್ವರೂಪಿನಲ್ಲಿ ನಿಂದು, ಜಂಗಮಕ್ಕೆ ಜಂಗಮದಾಸೋಹವ ಮಾಡುವರ ತೋರಾ ಎನಗೆ. ಮನ ನಿಜರೂಪಿನಲ್ಲಿ ಗುರುಸಿಂಹಾಸನವನೇರಿ ಪರಿಣಾಮವಳವಟ್ಟು, ಪ್ರಸಾದವ ಗ್ರಹಿಸುವರ ತೋರಾ ಎನಗೆ. ಇಂತಪ್ಪವರ ಸಂಗದಲ್ಲಿರಿಸು ಕಲಿದೇವಯ್ಯಾ, ನಾ ನಿನ್ನ ಬಲ್ಲೆ. ನನಗೆಯೂ ನಿನಗೆಯೂ ಇಂತಪ್ಪವರಪೂರ್ವ.
--------------
ಮಡಿವಾಳ ಮಾಚಿದೇವ
ಕಾಮವುಳ್ಳವರಿಗೆ ಕಾಯಸಂಗ ಮಚ್ಚು ನೋಡಾ. ಕಾಮವಿಲ್ಲದವರಿಗೆ ಲಿಂಗಸಂಗ ಮಚ್ಚು ನೋಡಾ. ಕಾಮವಿಕಾರಿ ಕಾಯದತ್ತ ಮುಂತಾದಡೆ, ನಾ ನಿಮ್ಮತ್ತ ಮುಂತಾದೆ. ಚೆನ್ನಮಲ್ಲಿಕಾರ್ಜುನಯ್ಯಾ, ಕಾಮವಿಕಾರಿಯ ಸಂಗವ ಹೊದ್ದಿದಡೆ ನಿಮ್ಮಾಣೆ.
--------------
ಅಕ್ಕಮಹಾದೇವಿ
ಅಯ್ಯಾ, ನೀವೆನ್ನ ಬಲ್ಲಿರಲ್ಲದೆ ನಾ ನಿಮ್ಮ ಬಲ್ಲೆನೆ ನಿಮ್ಮ ನಿಲವ ನೋಡಿಹೆನೆಂದಡೆ ನಿಮ್ಮ ಘನವೆನ್ನ ಮನಕ್ಕೆ ಸಾಧ್ಯವಾಗದ ಕಾರಣ, ಅಂತಿಂತೆಂದುಪಮಿಸಲಮ್ಮದೆ ಇದ್ದೆ ನೋಡಯ್ಯಾ, ನಿತ್ಯತೃಪ್ತಮಹಿಮಾ, ನಿಮಗೆಂದಳವಡಿಸಿದ ಪದಾರ್ಥವ ಸುಚಿತ್ತದಿಂದವಧರಿಸಿ ಸಲಹಯ್ಯಾ ಪ್ರಭುವೆ, ಕೂಡಲಸಂಗಮದೇವಾ.
--------------
ಬಸವಣ್ಣ
ನಿನಗೆ ಮಜ್ಜನವ ಮಾಡುವಲ್ಲಿ, ನಾ ಮಲದೇಹಿ, ನೀ ನಿರ್ಮಲದೇಹಿ. ನಿನಗೆ ಪೂಜೆಯ ಮಾಡುವಲ್ಲಿ, ನಾ ಕರ್ಮಜೀವಿ, ನೀ ಪುಣ್ಯಜೀವಿ. ನಿನಗೆ ಗಂಧವ ಹೂಸುವಲ್ಲಿ, ನಾ ದುರ್ಗುಣ ಜೀವಿ, ನೀ ಸುಗಂಧ ಭಾವಿ. ನಿನಗೆ ಅಕ್ಷತೆಯನಿಕ್ಕುವಲ್ಲಿ, ನಾ ಲಕ್ಷಿತ, ನೀ ಅಲಕ್ಷಿತ. ನಿನಗೆ ಧೂಪವನಿಕ್ಕುವಲ್ಲಿ, ನಾ ಭಾವಿತ, ನೀ ನಿರ್ಭಾವಿತ. ನಿನಗೆ ದೀಪವನೆತ್ತುವಲ್ಲಿ, ನಾ ಜ್ಯೋತಿ, ನೀ ಬೆಳಗು. ಇಂತೀ ಭಾವಂಗಳಲ್ಲಿ ಭಾವಿಸಿ ಕಂಡೆಹೆನೆಂದಡೆ, ಭಾವಕ್ಕೆ ಅಗೋಚರನಾಗಿಪ್ಪೆ. ನಿನ್ನನರಿವುದಕ್ಕೆ ತೆರನಾವುದೆಂದಡೆ, ಗುರುವಿಂಗೆ ತನು, ನಿನಗೆ ಮನ, ಜಂಗಮಕ್ಕೆ ಧನ, ತ್ರಿವಿಧಕ್ಕೆ ತ್ರಿವಿಧವನಿತ್ತು, ದಗ್ಧಪಟದಂತೆ ರೂಪಿಗೆ ಹೊದ್ದಿಗೆಯಾಗಿ, ಕಲ್ಲಿಗೆ ಹೊದ್ದದಿಪ್ಪ ಲಿಂಗ ಸದ್ಭಕ್ತನ ಸ್ಥಲ. ಆ ಭಕ್ತನಲ್ಲಿ ತಪ್ಪದಿಪ್ಪೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಅಖಂಡ ಪರಿಪೂರ್ಣ ನಿತ್ಯನಿರಂಜನ ನಿರವಯ ಲಿಂಗದೊಳು ಸಮರಸೈಕ್ಯವನೈದಿ, ಘನಕ್ಕೆ ಘನ ವೇದ್ಯವಾದ ಬಳಿಕ ಅರಿವೆಂಬುದಿಲ್ಲ, ಮರವೆಂಬುದಿಲ್ಲ, ಕೂಡಿದೆನೆಂಬುದಿಲ್ಲ, ಅಗಲಿದೆನೆಂಬುದಿಲ್ಲ, ಕಾಣೆನೆಂಬುದಿಲ್ಲ, ಕಂಡೆನೆಂಬುದಿಲ್ಲ, ಸಂಗ ನಿಸ್ಸಂಗವೆಂಬುದಿಲ್ಲ, ಶೂನ್ಯ ನಿಶ್ಯೂನ್ಯವೆಂಬ ಭಾವದ ಭ್ರಮೆ ಮುನ್ನಿಲ್ಲ. ಇಂತಿವೇನುವೇನುವಿಲ್ಲದೆ ಶಬ್ದಮುಗ್ಧನಾಗಿ, ಭ್ರಮರದೊಳಡಗಿದ ಕೀಟದಂತೆ ಉರಿಯೊಳಡಗಿದ ಕರ್ಪುರದಂತೆ ಕ್ಷೀರದೊಳು ಬೆರೆದ ಪಯದಂತೆ ಅಂಬುದ್ಥಿಯೊಳಡಗಿದ ವಾರಿಕಲ್ಲಿನಂತೆ ನಾ ನೀ ಎಂಬೆರಡಳಿದು, ತಾನೆ ತಾನಾದ ಸುಖವ ಮಹಾಜ್ಞಾನಿಗಳು ಬಲ್ಲರಲ್ಲದೆ ಅಜ್ಞಾನಿಗಳೆತ್ತ ಬಲ್ಲರಯ್ಯಾ, ಪರಮಪಂಚಾಕ್ಷರಮೂರ್ತಿ ಶಾಂತಮಲ್ಲಿಕಾರ್ಜುನಯ್ಯಾ ?
--------------
ಮಡಿವಾಳ ಮಾಚಿದೇವರ ಸಮಯಾಚಾರದ ಮಲ್ಲಿಕಾರ್ಜುನ
ತ್ರೈಮೂರ್ತಿಗಳು ನಿನ್ನ ಸಾಕಾರದ ಶಾಖೆ. ತ್ರೈಮೂರ್ತಿಗಳು ನಿನ್ನ ಅಪ್ಪುವಿನ ಅಂಕುರ ಶಕ್ತಿ. ಇಂತೀ ಸರ್ವಗುಣ ಸಂಪನ್ನನಾಗಿ ಬ್ರಹ್ಮಂಗೆ ಅಂಡವ ಕೊಟ್ಟು ವಿಷ್ಣುವಿಗೆ ಪಿಂಡವ ಕೊಟ್ಟು ರುದ್ರಂಗೆ ಕಂಡೆಹವ ಕೊಟ್ಟು ಹಿಂಗಿದೆ. ನೀನಿದರಂದವನೊಲ್ಲದೆ ಅಂಗಕ್ಕೆ ಮಯ ನೀನೇ, ನಿರಂಗಕ್ಕೆ ಸಂಗ ನೀನೇ. ಹಿಂಗೂದಕ್ಕೆ ನಿನ್ನಂಗ ಅನ್ಯ ಬ್ಥಿನ್ನವಲ್ಲ. ಮುಕುರದ ಮರೆಯಲ್ಲಿ ತೋರುವ ಪ್ರತಿರೂಪಿನಂತೆ ಸಕಲದೇವರ ಚೈತನ್ಯಭಾವ ನಿನ್ನ ಉಷ್ಣ ಬಿಂದು, ಸಕಲದೇವರ ಶಾಂತಿ ನಿನ್ನ ಸಮಾನ ಬಿಂದು, ಇಂತಿವ ಹೇಳುವಡೆ ವಾಙ್ಮನಕ್ಕತೀತ ಅತ್ಯತಿಷ್ಠದ್ದಶಾಂಗುಲ ನಾರಾಯಣ ನಯನಪೂಜಿತ ಪ್ರಿಯ ರಾಮೇಶ್ವರಲಿಂಗ ನಾ ನೀನಾದೈಕ್ಯ.
--------------
ಗುಪ್ತ ಮಂಚಣ್ಣ
ಗುದಸ್ಥಾನದಲ್ಲಿ ಆಧಾರಚಕ್ರ, ಅಲ್ಲಿಗೆ ಪೃಥ್ವಿಯೆಂಬ ಮಹಾಭೂತ, ಸದ್ಯೋಜಾತವಕ್ತ್ರ, ಬ್ರಹ್ಮ ಪೂಜಾರಿ, ಸುವರ್ಣದ ತೇಜ, ಬಾಲರವಿಕೋಟಿ ಪ್ರಕಾಶ, ನಾಲ್ಕೆಸಳಿನ ತಾವರೆಯ ಮಧ್ಯದಲ್ಲಿ ಸುವರ್ಣಮಯಲಿಂಗ - ಅದು ಆಚಾರಲಿಂಗ, ಅದಕ್ಕೆ ಬೀಜಾಕ್ಷಾರ ಓಂ ನಾಂ ನಾಂ ನಾಂ ಎಂಬ ನಾದಘೋಷ. ಎಸಳು ನಾಲ್ಕರಲ್ಲಿ ವ, ಶ, ಷ, ಸ ಎಂಬ ನಾಲ್ಕಕ್ಷರ. ಅದು ದೇವರಿಗೂ ತಮಗೂ ಪಶ್ಚಿಮಮುಖ- ಸದ್ಯೋಜಾತ ವಕ್ತ್ರ, ಆಧಾರಚಕ್ರ. ಲಿಂಗಸ್ಥಾನದಲ್ಲಿ ಸ್ವಾದಿಷ್ಠಾನಚಕ್ರ, ಅಲ್ಲಿಗೆ ಅಪ್ಪುವೆಂಬ ಮಹಾಭೂತ, ವಾಮದೇವವಕ್ತ್ರ, ವಿಷ್ಣು ಪೂಜಾರಿ, ನೀಲದ ತೇಜ, ಬಾಲದ್ವಿಕೋಟಿ ಸೂರ್ಯಪ್ರಕಾಶ, ಅರೆಸಳಿನ ತಾವರೆಯ ಮಧ್ಯದಲ್ಲಿ ಗೋಕ್ಷೀರದ ಹಾಗೆ ಧವಳ ವರ್ಣದ ಲಿಂಗ - ಅದು ಗುರುಲಿಂಗ; ಅದಕ್ಕೆ ಬೀಜಾಕ್ಷರ ಓಂ ಮಾಂ ಮಾಂ ಮಾಂ ಎಂಬ ನಾದಘೋಷ. ಎಸಳು ಆರರಲ್ಲಿ ಬ ಭ ಮ ಯ ರ ಲ ಎಂಬ ಷಡಕ್ಷರ ಅದು ದೇವರಿಗೂ ತಮಗೂ ಉತ್ತರಮುಖ-ವಾಮದೇವವಕ್ತ್ರ, ಸ್ವಾದಿಷ್ಠಾನಚಕ್ರ. ನಾಭಿಸ್ಥಾನದಲ್ಲಿ ಮಣಿಪೂರಕಚಕ್ರ, ಅಲ್ಲಿಗೆ ಅಗ್ನಿಯೆಂಬ ಮಹಾಭೂತ, ಅಘೋರವಕ್ತ್ರ ರುದ್ರ ಪೂಜಾರಿ, ಮಾಣಿಕ್ಯತೇಜ, ಬಾಲತ್ರಿಕೋಟಿಸೂರ್ಯಪ್ರಕಾಶ, ಹತ್ತೆಸಳಿನ ತಾವರೆಯ ಮಧ್ಯದಲ್ಲಿ ಮಾಣಿಕ್ಯವರ್ಣದ ಲಿಂಗ-ಅದು ಶಿವಲಿಂಗ, ಅದಕ್ಕೆ ಬೀಜಾಕ್ಷರ ಓಂ ಶಿಂ ಶಿಂ ಶಿಂ ಎಂಬ ನಾದಘೋಷ. ಎಸಳು ಹತ್ತರಲ್ಲಿ ಡ, ಢ, ಣ, ತ, ಥ, ದ, ಧ, ನ, ಪ, ಫ ಎಂಬ ದಶಾಕ್ಷರ. ಅದು ದೇವರಿಗೂ ತಮಗೂ ದಕ್ಷಿಣಮುಖ - ಅಘೋರವಕ್ತ್ರ, ಮಣಿಪೂರಕಚಕ್ರ. ಹೃದಯ ಸ್ಥಾನದಲ್ಲಿ ಅನಾಹತಚಕ್ರ, ಅಲ್ಲಿಗೆ ವಾಯುವೆಂಬ ಮಹಾಭೂತ, ತತ್ಪುರುಷವಕ್ತ್ರ, ಈಶ್ವರ ಪೂಜಾರಿ ಕಪೋತವರ್ಣದ ತೇಜ, ಬಾಲಚತುಷ್ಕೋಟಿ ಸೂರ್ಯಪ್ರಕಾಶ, ಹನ್ನೆರಡೆಸಳಿನ ತಾವರೆಯ ಮಧ್ಯದಲ್ಲಿ ಶುದ್ಧ ಪಚ್ಚವರ್ಣದಲಿಂಗ-ಅದು ಜಂಗಮಲಿಂಗ, ಅದಕ್ಕೆ ಬೀಜಾಕ್ಷರ ಓಂ ವಾಂ ವಾಂ ವಾಂ ಎಂಬ ನಾದಘೋಷ. ಎಸಳು ಹನ್ನೆರಡರಲ್ಲಿ ಕ ಖ ಗ ಘ ಙ ಚ ಛ ಜ ಝ ಞ ಟಂಠ ಎಂಬ ದ್ವಾದಶಾಕ್ಷರ ಅದು ದೇವರಿಗೂ ತಮಗೂ ಪೂರ್ವಮುಖ-ತತ್ಪುರುಷ ವಕ್ತ್ರ, ಅನಾಹತ ಚಕ್ರ. ಕÀಠಸ್ಥಾನದಲ್ಲಿ ವಿಶುದ್ಧಿಚಕ್ರ, ಅಲ್ಲಿಗೆ ಆಕಾಶವೆಂಬ ಮಹಾಭೂತ, ಈಶಾನವಕ್ತ್ರ, ಸದಾಶಿವ ಪೂಜಾರಿ, ವಿದ್ಯುಲ್ಲತೆಯ ತೇಜ, ಬಾಲಪಂಚಕೋಟಿ ಸೂರ್ಯಪ್ರಕಾಶ, ಹದಿನಾರೆಸಳಿನ ತಾವರೆಯ ಮಧ್ಯದಲ್ಲಿ ಅನಂತಕೋಟಿ ಮಿಂಚುಗಳ ವರ್ಣದ ಲಿಂಗ_ ಅದು ಪ್ರಸಾದಲಿಂಗ, [ಓಂ ಯಾಂ ಯಾಂ ಯಾಂ ಎಂಬ ನಾದಘೋಷ]. ಎಸಳು ಹದಿನಾರರಲ್ಲಿ ಅ ಆ ಇ ಈ ಉ ಊ ಋ Iೂ ಏ ಐ ಓ ಔ ಅಂ ಅಃ ಎಂಬ ಷೋಡಶಾಕ್ಷರ. ಅದು ದೇವರಿಗೂ ತಮಗೂ ಊಧ್ರ್ವಮುಖ_ ಈಶಾನವಕ್ತ್ರ, ವಿಶುದ್ಧಿಚಕ್ರ. ಭ್ರೂಮಧ್ಯದಲ್ಲಿ ಆಜ್ಞಾಚಕ್ರ, ಅಲ್ಲಿಗೆ ಮನವೆಂಬ ಮಹಾಭೂತ, ಶ್ರೀಗುರುವೆ ವಕ್ತ್ರ ಮಾಹೇಶ್ವರ ಪೂಜಾರಿ, ಜ್ಯೋತಿರ್ವರ್ಣದ ತೇಜ. ಬಾಲಷಟ್ಕೋಟಿ ಸೂರ್ಯಪ್ರಕಾಶ ಎರಡೆಸಳಿನ ತಾವರೆಯ ಮಧ್ಯದಲ್ಲಿ ಶ್ರೀಗುರುವಿನ ಶ್ರೀಪಾದದ ವರ್ಣದ ಲಿಂಗ ಎಡಗಡೆಯ ಪಾದ ಕೆಂಪು ವರ್ಣ, ಬಲಗಡೆಯ ಪಾದ ಶ್ವೇತವರ್ಣ-ಅದು ಮಹಾಲಿಂಗ. ಅದಕ್ಕೆ ಬೀಜಾಕ್ಷರ `ಓಂಕಾರನಾದ ಘೋಷ. ಎಸಳೆರಡರಲ್ಲಿ ಅಕ್ಷರ ಹಂ ಸಂ ಎಂಬ [ಎರಡಕ್ಷರ] ಅದು ದೇವರಿಗೂ ತನಗೂ ಗಂಭೀರ ಮುಖ-ಶ್ರೀಗುರುವಕ್ತ್ರ, ಆಜ್ಞಾಚಕ್ರ. ಅಲ್ಲಿಂದತ್ತ ಬ್ರಹ್ಮರಂಧ್ರದಲ್ಲಿ ಬ್ರಹ್ಮಚಕ್ರ ಅಲ್ಲಿಗೆ ಚಂದ್ರನೆಂಬ ಮಹಾಭೂತ, ಲಿಂಗವಕ್ತ್ರ ಪರಮೇಶ್ವರ ಪೂಜಾರಿ, ಮಹಾಜ್ಯೋತಿರ್ವರ್ಣದ ತೇಜ, ಬಾಲ ಅನಂತಕೋಟಿಸೂರ್ಯಪ್ರಕಾಶ ಒಂದುನೂರ ಎಂಟು ಸಾವಿರೆಸಳಿನ ತಾವರೆಯ ಮಧ್ಯದಲ್ಲಿ ಮಹಾಜ್ಯೋತಿರ್ವರ್ಣದ ಲಿಂಗ. ಅದು ನಿರಾಮಯ ಲಿಂಗ, ಅದಕ್ಕೆ ಬೀಜಾಕ್ಷರ ಪ್ರಣವ ನಾದ ಘೋಷ, ಎಸಳೊಂದುನೂರ ಎಂಟು ಸಾವಿರದಲ್ಲಿ, ಒಂದನೂರ ಎಂಟು ಸಾವಿರ ಅಕ್ಷರ_ ಪ್ರೇತಾಸನ ವಿಶ್ವತೋಮುಖೋ ಬ್ರಹ್ಮಚಕ್ರ. ವಿಶ್ವತಶ್ಚಕ್ಷುರುತ ವಿಶ್ವತೋ ಮುಖೋ ವಿಶ್ವತೋ ಬಾಹುರುತ ವಿಶ್ವತಃ ಪಾತ್ ಸಂ ಬಾಹ್ಯಭ್ಯಾಂ ಧಮತಿ ಸಂಪತತ್ರೈ ದ್ರ್ಯಾವಾ ಭೂಮೀ ಜನಯನ್ ದೇವ ಏಕಃ ಇಂತೀ ಗುರುವಿನ ಬೆಳಗು ವಿಶ್ವವನ್ನಪಹರಿಸಿ, ತಾನು ತಾನೆ ಸೋಹಂ ಪ್ರಕಾಶ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ನಾ ತೋಡಿದ ಬಾವಿಯಲ್ಲಿ ಡುಂಡುಕ ಭೇಕವೊಂದಾಗಿ ಇದ್ದವು. ಡುಂಡುಕ ಹಸಿದು ಭೇಕನ ನುಂಗಿತ್ತು. ಭೇಕ ಸಾಯದೆ ಡುಂಡುಕನ ಕರುಳ ತಿಂದು, ಡುಂಡುಕ ಸತ್ತು ಒಣಗಲಾಗಿ, ಅಂಗ ಬಿಗಿದು ಭೇಕನಲ್ಲಿಯೆ ಸತ್ತಿತ್ತು. ಎನ್ನ ಬಾವಿ ಕೆಟ್ಟಿತ್ತು, ಸದಾಶಿವಮೂರ್ತಿಲಿಂಗದ ಕುರುಹಡಗಿತ್ತು.
--------------
ಅರಿವಿನ ಮಾರಿತಂದೆ
ಅಯ್ಯಾ, ನಿನ್ನ ಬೆಳಗು ಅನಂತಕೋಟಿ ಸೋಮ-ಸೂರ್ಯಾಗ್ನಿ ಬೆಳಗಿಂಗೆ ಮೀರಿಪ್ಪುದು. ನಾ ನೋಡಲಾರೆ ಅಡ್ಡಬಂದು ಕೂಡಿಕೊ ಅಪ್ರತಿಮ ನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಇನ್ನಷ್ಟು ... -->