ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರಿದು ಮಾಡದ ಭಕ್ತಿ ಭವಕ್ಕೆ ತಂದಿತ್ತು. ಅದೆಂತೆಂದಡೆ, ಫಲಭೋಗಂಗಳ ಬಯಸುವನಾಗಿ ಫಲವನುಂಡು ಮರಳಿ ಭವಕ್ಕೆ ಬಹನಾಗಿ. ಇದು ಕಾರಣ, ಅರಿದು ಮುಕ್ತಿಯ ಹಡೆವಡೆ ಅನುಭವವೇ ಬೇಕು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಹಠಯೋಗ ಲಂಬಿಕಾಯೋಗ ಆತ್ಮಯೋಗ ಸಿದ್ಧಯೋಗ ಪಿಶಾಚಯೋಗ ಅಷ್ಟಾಂಗಯೋಗಂಗಳೆಂಬ ಷಡುವಿಧ ಕರ್ಮಯೋಗಂಗಳೊಳು ಶೋಷಣೆ, ದಾಹನೆ, ಪ್ಲಾವನೆ, ಚಾಲನೆ ಖಾಳಾಪಖಾಳಮಂ ಮಾಡಿ ತ್ರಿದೋಷಾದಿಗಳಂ ಪ್ರವರ್ತಿಸಲೀಯದೆ ಮಲಯುಗಮಂ ನೆಲೆಗೊಳ್ಳಲೀಯದೆ ಗಜಕರಣಂಗಳಿಂ ಪವನಧಾರಣೆಯಿಂ ಕಲ್ಪಯೋಗಂಗಳಿಂ ಮೂಲಿಕಾಬಂಧದಿಂ ಬಂಧಿಸಿ, ಘಟಮಂ ನಟಿಸುವುದು ಹಠಯೋಗ. ಪವನಾಭ್ಯಾಸಂಗಳಿಂದಭ್ಯಾಸಯೋಗ, ಕ್ರಮಕ್ರಮಂಗಳಿಂ ಜಿಹ್ವೆಯಂ ಬೆಳಸಿ ಹಠಸಮ್ಮಿಶ್ರದಿಂ ಷಡಾಧಾರದ ಪಶ್ಚಿಮಪಥವಿಡಿದು ಪ್ರಾಣಪವನನ ಮಸ್ತಕಕ್ಕೇರಿಸಿ ಜಿಹ್ವೆಯ ಸುಷುಮ್ನೆಯಲ್ಲಿಟ್ಟು ಸೋಮಪಾನಮಂ ಸೇವಿಸಿ ಸಪ್ತಸ್ಥಾನ ನವಚಕ್ರದಲ್ಲಿ ನಿಂದು ಮುಕ್ತ್ಯಂಬಿಕೆಯೊಡಗೂಡುನವುದು ಲಂಫಬಿಕಾಯೋಗ. ಆತ್ಮನಂ ಭೇದಿಸಿ ಪ್ರಾಣವಾಯು ನಾಡಿಗಳನರಿತು ಹಿಡಿವ ಭೇದಮಂ ತಿಳಿದು, ತೆಗೆವ ಬಿಗಿವ ಸಂಚಮಂ ಕಂಡು ಒಡ್ಡಿಯಾಣಬಂಧ ಜಾಳಾಂಧರಬಂಧ ಠಾಣಿಕಾಮುದ್ರೆ ಭ್ರೂಸಂಕೋಚ ಬ್ರಹ್ಮಸ್ಥಾನದುತ್ತರನಾಡಿಯಿಂದ ಆತ್ಮನನಾತ್ಮಲಿಂಗದಲ್ಲಿ ಸಂಯೋಗಮಾಡುವದಾತ್ಮಯೋಗ. ಅಂಜನಾಸಿದ್ಧಿ ಘುಟಿಕಾಸಿದ್ಧಿ ಶರೀರಸಿದ್ಧಿ ಪರಕಾಯಪ್ರವೇಶ ತ್ರಿಕಾಲಜ್ಞಾನ ದೂರಶ್ರವಣ ದೂರದೃಷ್ಟಿಯೊಳಗಾದ ಅಷ್ಟಮಹಾಸಿದ್ಧಿಯಂ ಪಡೆದು, ರಸಸಿದ್ಧಿ ಪಾಷಾಣಸಿದ್ಧಿ ಲೋಹಸಿದ್ಧಿ ವಯಸ್ತಂಭ ಸ್ವರವಂಚನೆ ಕಾಯವಂಚನೆ ವೇದಶಾಸ್ತ್ರಸಿದ್ಧಿ ಭರತಸಿದ್ಧಿ ಗಾಂಧರ್ವಸಿದ್ಧಿ ಕಿನ್ನರಸಿದ್ಧಿ ವಾಚಾಸಿದ್ಧಿ ಖೇಚರತ್ವ ಮಹೇಂದ್ರಜಾಲದೊಳಗಾದ Zõ್ಞಷಷ್ಟಿವಿದ್ಯಾಸಿದ್ಧಿ ಅಣಿಮಾದಿ ಮಹಿಮಾ ದಿ ಈಶಿತ್ವ ವಶಿತ್ವ ಪ್ರಾಪ್ತಿ ಪ್ರಾಕಾಮ್ಯವೆಂಬ ಅಷ್ಟೈಶ್ವರ್ಯಸಿದ್ಧಿ ವ್ಯಾಳಿ ಚರ್ಪಟಿ ಕೋರಾಂಟ ರತ್ನಘೋಷ ಭೂತನಾಥ ನಾಗಾರ್ಜುನ ಮಚ್ಚೇಂದ್ರ ಗೋರಕ್ಷ ಮಂಜಿನಾಥ ನವನಾಥ ಸಿದ್ಧರೊಳಗಾದ ಸಮಸ್ತ ಸಿದ್ಧಿಬುದ್ಧಿಗಳಿಂ ಲಿಂಗವನರಿಸಿ ಅಟ್ಟಿಮುಟ್ಟಿ ಹಿಡಿದೆಹೆನೆಂಬುದು ಸಿದ್ಧಯೋಗ. ಪಿಶಾಚತ್ವದಿಂ ತ್ರಿಭುವನಿಯಂ ಸೇವಿಸಿ ಅಮರಿಗಳಂ ಸೇವಿಸಿ ಅಮರೀ ಭ್ರಮರಾದೇವಿ ಅಮರೀ ತ್ರಿಪುರಾಂತಕೀ ಅಮರೀ ಕಾಲಸಂಹಾರೀ ಅಮರೀ ತ್ರೈಲೋಕ್ಯಸಾಧನೀ ಇಂತೆಂಬ ಶ್ರುತಿಗೇಳ್ದು, ವಜ್ರಿ ಅಮರಿಗಳನಂಗಲೇಪಂ ಮಾಡಿ ಶುಕ್ಲಮಂ ಸೇವಿಸಿ ಭೂತಸಂಕುಳಂಗಳೊಡನಾಡಿ ಅಜ್ಞಾನವಶದಿಂ ಲಿಂಗವನೇನೆಂದರಿಯದ ಕ್ಷೀಣವೃತ್ತಿಯ ಪಿಶಾಚತ್ವದಿಂದಿಪ್ಪುದು ಪಿಶಾಚಯೋಗ. ಹಿಂಸೆಯನುಳಿದ ±õ್ಞಚತ್ವದಿಂ ಬ್ರಹ್ಮಚರ್ಯದಿಂ ತತ್ವಂಗಳನಾಹ್ವಾನಿಸುತ್ತಿಪ್ಪುದು ಯಮಯೋಗ. ವಿವೇಕ ವಿಚಾರದಿಂ ತತ್ವಂಗಳನರಿತು ಆಚರಿಸಿ ಅಡಿುಟ್ಟು ನಡೆವುದು ನಿಯಮಯೋಗ. ಪದ್ಮಾಸನ ಸಿದ್ಧಾಸನ ಬದ್ಧಾಸನ ವಜ್ರಾಸನ ಮಯೂರಾಸನ ಕೂರ್ಮಾಸನ ಕಕ್ಕುಟಾಸನ ಅರ್ಧಾಸನ ವೀರಾಸನ ಶ್ಮಶಾನಾಸನ ಹಸ್ತಾಸನ ಮಸ್ತಕಾಸನ ಕುಠಾರಾಸನ ಸಿಂಹಾಸನ ಮಧ್ಯಲವಣಿ ಶಿರೋಲವಣಿಯೊಳಗಾದ ಆಸನಬಂಧಂಗಳಿಂದಾಚರಿಸುವುದಾಸನಯೋಗ. ತತ್ವ ಮೂವತ್ತಾರಕ್ಕೆ ಪ್ರಣವ ಮೂಲವೆಂದರಿತು ಷಡಾಧಾರಚಕ್ರಂಗಳ ಅಕ್ಷರವರ್ಣಂಗಳಿಂ ತಿಳಿದು ಮೇರಣ ಅಜನಾಳ ಬ್ರಹ್ಮಸ್ಥಾನ ತುರೀಯಾತೀತದ ಓಂಕಾರಮಪ್ಪ ಪ್ರಣವವನರಿವುದು ಪ್ರಾಣಾಯಾಮಯೋಗ. ಪ್ರತ್ಯಾಹಾರಯೋಗಕ್ರಮಗಳಿಂದ ಸತ್ಪ್ರಣವವನಾಹಾರಿಸುವುದು ಪ್ರತ್ಯಾಹಾರಯೋಗ. ಪ್ರಣವಕ್ಕೆ ಅತೀತವಾದ ಪರಶಿವಮೂರ್ತಿ ಮನದಲ್ಲಿ ಚಿಗುರ್ತು ಅಂತರಂಗದಲ್ಲಿ ಧ್ಯಾನಾರೂಢನಾಗಿ ಧ್ಯಾನಿಸುವುದು ಧ್ಯಾನಯೋಗ. ಆ ಪರಶಿವಮೂರ್ತಿಯೆ ಇಷ್ಟಲಿಂಗವೆಂಬ ಭಾವನೆಯಿಂದ ಅಷ್ಟವಿಧಾರ್ಚನೆ ಷೋಡಶೋಪಚರ್ಯಂಗಳಿಂದಿಷ್ಟಲಿಂಗಧಾರಣದಿಂದ ಇಪ್ಪುದು ಧಾರಣಯೋಗ. ಅಪ್ರಶಿಖಾಸ್ಥನದಿಂದುತ್ತರವಿಭಾಗೆಯ ಅಜಪೆಯಿಂದತ್ತಣ ಚಿತ್‍ಪ್ರಭೆಯಿಂದುಜ್ವಳತೇಜ ಸ್ವಯಂಪ್ರಕಾಶ ದಿವ್ಯತೇಜದಿಂದೊಪ್ಪಿಪ್ಪ ಮಹಾಘನ ಪರವಸ್ತುವನಿದಿರಿಟ್ಟೀಕ್ಷಿಸಿ ಆಮಹಾಪ್ರಕಾಶದಲ್ಲಿ ಒಡಗೂಡಿ ತಾನು ತಾನಾಗಿ ಜಗದ್ವಿಹರಣೀಯನೇನೆಂದರಿಯದ ಪರಮಕಾಷೆ*ಯ ಸಮಾಧಿಯಲ್ಲಿಪ್ಪುದು ಸಮಾಧಿಯೋಗ. ಇಂತಪ್ಪ ಅಷ್ಟಾಂಗವೊಳಗಾದ ಷಡುವಿಧಕರ್ಮಯೋಗಂಗಳಂ ಮೆಟ್ಟಿ ಚತುರ್ವಿಧಪದವಿಯಂ ಹೊದ್ದದೆ ಫಲಭೋಗಂಗಳಂ ಮುಟ್ಟದೆ ಖ್ಯಾತಿ ಲಾಭ ಪೂಜೆಯಂ ತಟ್ಟದೆ ಇಹಪರಂಗಳಂ ಸಾರದೆ, ಭವಬಂಧನಕ್ಕೆ ಬಾರದೆ ಗೆಲ್ಲ ಸೋಲಕ್ಕೆ ಹೋರದೆ, ತನುವಿನಿಚ್ಛೆಯಲ್ಲಿ ಸುಳಿಯದೆ ಮನದಿಚ್ಛೆಯಲ್ಲಿ ಹರಿಯದೆ, ಪ್ರಾಣನ ಸುಳುಹಿನಲ್ಲಿ ಸಿಕ್ಕದೆ ಪ್ರಕೃತಿವಶಕ್ಕೊಳಗಾಗದೆ, ಇಂದ್ರಿಯಂಗಳಿಗೆ ಮೈಯೊಡ್ಡದೆ ಸರ್ವಸಂದೇಹನಿವೃತ್ತಿಯಾಗಿ, ನಿಂದಲ್ಲಿ ನಿರಾಳ, ನಡೆದಲ್ಲಿ ನಿರ್ಗಮನಿ, ನುಡಿದಲ್ಲಿ ನಿಶ್ಶಬ್ದಿ, ಸುಳಿದಲ್ಲಿ ಒಡಲಿಲ್ಲದುಪಾಧಿಯರತು ಅಂಗವೆ ಲಿಂಗವಾಗಿ ಲಿಂಗವೆ ಪ್ರಾಣವಾಗಿ ಪ್ರಾಣವೆ ಪ್ರಸಾದವಾಗಿ, ಪ್ರಸಾದವೆ ಪರಿಪೂರ್ಣವಾಗಿ ನಿಜಲಿಂಗೈಕ್ಯವಾಗಿ ನಿಜಸುಖಸಂಬಂಧಿಯಾಗಿ ನಿಜಯೋಗ ಸನ್ನಿಹಿತವಾಗಿ ಕಾಯವಿದ್ದಂತೆ ಬಯಲಾಗಿಪ್ಪರಯ್ಯಾ ಸೌರಾಷ್ಟ್ರ ಸೋಮೇಶ್ವರಾ ನಿಮ್ಮ ಶರಣರು.
--------------
ಆದಯ್ಯ
ಜಗದಲ್ಲಿ ಸುಳಿವ ಗುರುಗಳ ಉಪದೇಶದ ಬೋಧೆಯ ಚೋರತನವ ಕಂಡು ಅಂಜಿದೆನಯ್ಯಾ. ಮನೆಯ ಕೂಡಿಕೊಂಡು ಅನ್ನವನಿಕ್ಕಿದಲ್ಲಿ ಸುಳಿವ ಚೋರರ ಕಂಡು ಗುರುವೆನಲಾರೆ. ಅದೆಂತೆಂದಡೆ : ಮಹತ್ತರವಪ್ಪ ಜ್ಯೋತಿರ್ಲಿಂಗವ ಕೈಯಲ್ಲಿ ಕೊಟ್ಟು, ಪಾತಕವಪ್ಪ ಫಲಭೋಗಂಗಳ ಕೈಯಲ್ಲಿ ಕೊಟ್ಟು, ಅಜಾತರೆಂದಡೆ ನಾಚಿದೆನಯ್ಯಾ. ಇಂತೀ ಭ್ರಾಂತರ ಕಂಡು ವಂದಿಸಲಾಗದು, ತನ್ನ ರೋಗಕ್ಕೆ ನಿರ್ವಾಹವ ಕಾಣದೆ, ಇದಿರ ರೋಗವ ಮಾಣಿಸಿಹೆನೆಂದು, ಮದ್ದಿನ ಚೀಲವ ಹೊತ್ತು ಸಾವ ಕದ್ದೆಹಕಾರನಂತೆ, ಕ್ಷುದ್ರಜೀವಿಗೆಲ್ಲಿಯದು ಸದ್ಗುರುಸ್ಥಲ ? ಸದ್ಗುರುವಾದಡೆ ಅವ ಬದ್ಧನಾಗಿರಬೇಕು. ತಂತ್ರದಲ್ಲಿ ಹೋಹ ಮಂತ್ರದಂತಿರಬೇಕು. ಮಂದಾರದಲ್ಲಿ ತೋರುವ ಸುಗಂಧದಂತಿರಬೇಕು. ಇಂತಿಪ್ಪ ಗುರುವಿಂಗಿಹವಿಲ್ಲ, ಪರವಿಲ್ಲ, ಭಾವಕ್ಕೆ ಭ್ರಮೆಯಿಲ್ಲ. ಆ ಗುರುವಿನ ಕೈಯಲ್ಲಿ ಬೋಧಿಸಿಕೊಂಡ ಶಿಷ್ಯಂಗೆ ತುಪ್ಪವನಿಕ್ಕಿದ ಚಿತ್ತೆಯಂತೆ ಸ್ಫಟಿಕವ [ಸಾರಿ] ದ [ಒರತೆ ]ಯಂತೆ. ಹೀಂಗಲ್ಲದೆ, ಗುರುಶಿಷ್ಯಸಂಬಂಧವಾಗಬಾರದು. ಇದನರಿಯದಿರ್ದಡೆ ಅಂಧಕನ ಕೈಯ ಅಂಧಕ ಹಿಡಿದಂತೆ, ಪಂಗುಳ[ನ]ಲ್ಲಿ ಚಂದವನರಸುವನಂತೆ, ಸ್ವಯಾನಂದಭರಿತ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
-->