ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಹ್ಮಸಭೆ ನೆರೆದಲ್ಲಿ ಬ್ರಹ್ಮವಿತ್ತುಗಳು ಬ್ರಹ್ಮತ್ವವಡೆದು, ತಮ್ಮ ವಚನಬ್ರಹ್ಮರೆನಿಸಿಕೊಂಡು ನೆಮ್ಮುವರು ವಿಷ್ಣುವನು- ತಮ್ಮ ದೈವವ ಬಿಡುವುದಾವುದುಚಿತ ವಿಷ್ಣು ಶಿವಭಕ್ತನಾಗಿ ನಿಷ್ಠೆಯಿಂದ ಕಣ್ಣನಿತ್ತು ಹಡೆದನು ಶಿವಭಕ್ತಿಯಿಂದ. ಕಷ್ಟಜಾತಿ ಜೀವಿಗಳಿಗೆ ಮಟ್ಟಿ ಎಂತು ಬಂದತ್ತೊ ! ಮುಟ್ಟರೊಂದುವನು ಮೂವಿಧಿಬಟ್ಟರೊ ! ಹುಸಿವನೆ ಹೊಲೆಯನೆಂದು ವಚನವುಂಟು ಲೋಕದಲ್ಲಿ. ಹುಸಿದಜನ ಶಿರ ಹೋಯಿತ್ತಾದಿಯಲ್ಲಿ, ಎಸವೋದ ಕಿರುಪಶುವನುಸರಲೀಯದೆ ವಿ[ದಾರಿ]ಸಿ ತಿಂಬ ಜನ್ಮ ಅದಾವ ಫಲವೋ. ದಕ್ಷ ಯಾಗವ ಮಾಡಿ ನಿಕ್ಷೇತ್ರ ನೆರೆದ ಅಕಟಕಟಾ, ಕೇಳಿಯೂ ಏಕೆ ಮಾಣಿರೊ ಮಮಕರ್ತ ಕೂಡಲಸಂಗನ ಶರಣರು ಅಕ್ಷಯರದ್ಥಿಕರು, ವಿಪ್ರರು ಕೀಳು ಜಗವೆಲ್ಲರಿಯಲು !
--------------
ಬಸವಣ್ಣ
ಕಾಬುದು ಜೀವನಲ್ಲ, ಕಾಣಿಸಿಕೊಂಬುದು ಪರಮನಲ್ಲ. ಅಟ್ಟಿ ಮುಟ್ಟಿ ಹರಿದಾಡುವವು ಕರಣಂಗಳಲ್ಲ. ಸುಖವನನುಭವಿಸುವವು ಇಂದ್ರಿಯಂಗಳಲ್ಲ. ಇಂತೀ ಭೇದಂಗಳಲ್ಲಿ ಆರೆಂಬುದ ತಿಳಿದು ಸಸಿ ವೃಕ್ಷಕ್ಕೆ ನೀರನೆರದಡೆ ಆ ನೀರ ಕುಡಿವುದು ಬೇರೋ, ಮರನೋ ? ಮೀರಿ ಬೆಳೆದ ಫಲವೋ ? ಎಂಬುದನರಿದು ತಿಳಿದಲ್ಲಿ, ಅರಿದರುಹಿಸಿಕೊಂಬ ನಿರಿಗೆಯ ಬಲ್ಲ, ಆತ ಕಮಠೇಶ್ವರಲಿಂಗವನೊಡಗೂಡಿದ ಶರಣ.
--------------
ಬಾಲಸಂಗಣ್ಣ
ಏನು ಸುಕೃತದ ಫಲವೊ, ಅದೇನು ಪುಣ್ಯವೋ, ಅದೇನು ಭಾಗ್ಯವೋ, ಅದೇನು ತಪWಸಿನಘೆ ಫಲವೋ, ಅದೇನು ಕಾರಣವಾಗಿ ಗುರುಪಾದ ದೊರೆಯಿತ್ತು. ಗುರುಪಾದ ದರುಶನದಿಂದ ಕಿಂಕುರ್ವಾಣ ಭಯಭಕ್ತಿಯಿಂದಿರುತಿರೆ, ಗುರು ಕರುಣಿಸಿ ಇಷ್ಟಲಿಂಗವನೆನ್ನ ಕರಕೆ ಸೇರಿಸಿ, ಪೂರ್ವಜನ್ಮವ ಕಳೆದು ಪುನರ್ಜಾತನ ಮಾಡಿದ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆಂಬ ಗುರುವ ಮರೆದವರಿಗೆ ಇದೇ ನರಕ.
--------------
ಹೇಮಗಲ್ಲ ಹಂಪ
-->