ಅಥವಾ

ಒಟ್ಟು 52 ಕಡೆಗಳಲ್ಲಿ , 15 ವಚನಕಾರರು , 40 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭವಸಾಗರವೆಂಬ ಸಮುದ್ರದಲ್ಲಿ, ಸಾಕಾರವೆಂಬ ಹಡಗು, ಚೇತನವೆಂಬ ಅಶ್ವಕಟ್ಟಿ ಬರುತ್ತಿರಲಾಗಿ, ತ್ರಿವಿಧದ ಬಲುಗಿರಿಯ ಹೊಯಿದು, ಹಡಗೊಡೆಯಿತ್ತು. ಲಾಯದ ಅಶ್ವ ನೀರನೊಡಗೂಡಿತ್ತು. ಹಡಗಿನ ಸೆಟ್ಟಿ ಪರಪತಿಗಡಹಿಲ್ಲಾಯೆಂದು ಕುದುರೆಯನೊಡಗೂಡಿದ. ಅರ್ಕೇಶ್ವರಲಿಂಗವ ಕೇಳುವ ಬನ್ನಿ.
--------------
ಮಧುವಯ್ಯ
ಕಾಳಿಂಗನ ಮಡುವ ಕಲಕಿದವನ ನಾಬ್ಥಿಯ ಕೂಸಿನ ಶಿರಪಾಣಿಯಲ್ಲಿ ಬೇಡುವ, ಆತನ ಶಕ್ತಿಯ ಸಮರಸದಲ್ಲಿ ಓಲಾಡುವ, ಮುಕ್ತಿವಂತರೆಲ್ಲರೂ ಕೇಳುವ ಬನ್ನಿ, ಅರ್ಕೇಶ್ವರಲಿಂಗವ.
--------------
ಮಧುವಯ್ಯ
ಮರುಳ ಹಿಡಿದಿಹೆನೆಂಬವರು ಮರುಳಾಗಿ ಹಿಡಿಯಬೇಕು ಕೇಳಿರೆ. ಬಹುಬುದ್ಧಿಯ ಜಡರಿಗೆ ಹಿಡಿಯಬಾರದು. ನಿರವಯಲ ಬಯಲ ಹಿಡಿಯಬಹುದೆ ಕೂಡಲಸಂಗಮದೇವರ ಭಾವಶಸ್ತ್ರದಿಂದ ಗೆಲಿದುಕೊಂಡು ಬನ್ನಿ.
--------------
ಬಸವಣ್ಣ
ಕಾಯವಳಿದು ಜೀವ ಬಯಲಾದಲ್ಲಿ, ಭಾವಿಸುವ ಅರಿವ ನೆಲೆಯ ಕುರುಹೆಲ್ಲಿದ್ದಿತ್ತು ? ಅದ ಕೇಳುವ ಬನ್ನಿ, ಅರ್ಕೇಶ್ವರಲಿಂಗವ.
--------------
ಮಧುವಯ್ಯ
ಅಣ್ಣನ ಮೂರು ಕುತ್ತಿನಲ್ಲಿ, ಅಕ್ಕ ಮೂರು ಮಕ್ಕಳ ಹೆತ್ತು, ಅಪ್ಪನ ಕೈಯಲ್ಲಿ ಕೊಟ್ಟಳು. ಅಣ್ಣ ಹಣ್ಣಿದ ಜಗಳ. ಅಕ್ಕನ ಹೊಟ್ಟೆಯ ಕೇಡು. ಅಕ್ಕನ ಕೂಸು ಅಪ್ಪನ ತಿಂದು, ಎತ್ತ ಹೋಯಿತ್ತೆಂದರಿಯೆ. ಅರ್ಕೇಶ್ವರಲಿಂಗವ ಕೇಳುವ ಬನ್ನಿ.
--------------
ಮಧುವಯ್ಯ
ದೊಡ್ಡ ದೊಡ್ಡ ಶೆಟ್ಟಿಗಳ ಕಂಡು ಅಡ್ಡಗಟ್ಟಿ ಹೋಗಿ, ಶರಣಾರ್ಥಿ ಎಂಬ ಎಡ್ಡುಗಳ್ಳತನಕ್ಕೆ ತಮ್ಮ ಮಠಕ್ಕೆ ಬನ್ನಿ ಹಿರಿಯರೇ ಎಂಬರು. ಹೋಗಿ ಶರಣಾರ್ಥಿ ಭಕ್ತನೆಂದೊಡೆ ಕೇಳದ ಹಾಗೆ ಅಡ್ಡ ಮೋರೆಯನಿಕ್ಕಿಕೊಂಡು ಸುಮ್ಮನೆ ಹೋಗುವ ಹೆಡ್ಡ ಮೂಳರಿಗೆ ದುಡ್ಡೇ ಪ್ರಾಣವಾಯಿತ್ತು. ದುಡ್ಡಿಸ್ತರ ಕುರುಹನರಿಯದೆ ಮೊಳಪಾದದ ಮೇಲೆ ಹೊಡಹೊಡಕೊಂಡು ನಗುತಿರ್ದಾತ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಭಾವಭ್ರಮೆವಂತರು ಬಾರದಿರಿ, ಜ್ಞಾನಹೀನರು ಬೇಗ ಹೋಗಿ, ತ್ರಿವಿಧ ಮಲಕ್ಕೆ ಕಚ್ಚಿಮುಟ್ಟಿ ಹೊಡೆದಾಡುವರತ್ತಲಿ. ನಿರುತ ಸ್ವಯಾನುಭಾವರು ಬನ್ನಿ, ಪರಬ್ರಹ್ಮಸ್ವರೂಪರು ಬನ್ನಿ, ಏಕಲಿಂಗನಿಷ್ಠಾಪರರು ದೃಢವಂತರು ಬನ್ನಿ, ಸನ್ಮಾರ್ಗ ಸತ್ಕ್ರಿಯಾವಂತರು ಬನ್ನಿ, ಎಂದು ಎನಗೆ ಕೊಟ್ಟ ಕಾಯಕ ಕೂಡಲಸಂಗಮದೇವರಲ್ಲಿ ಬಸವಣ್ಣ.
--------------
ಉಗ್ಘಡಿಸುವ ಗಬ್ಬಿದೇವಯ್ಯ
ಅಚ್ಚ ಮತ್ತೈದೆರೈವರೆನ್ನಿಚ್ಫೆಯೊಳಗಿಪ್ಪರು ನಿಮ್ಮಾದಿ ಶಿಶುವಾದಕಾರಣ. ನಚ್ಚಿ ಮಾಡಿದಡಿಗೆಯು ಅಚ್ಚಳಿಯದಿದ್ದಿತ್ತು ಆಡುತ ಬನ್ನಿ ಮೂವರೊಂದಾಗಿ. ಬೇಡಿಕೊಂಬುವನಲ್ಲ, ನೀಡಿ ನೂಕಿ ನಿಲ್ಲುವೆ ನಿಮ್ಮಾಣೆ ಗುರುನಿರಂಜನ ಚನ್ನಬಸವಲಿಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಬಯಲಿಂದ ಬಂದ ತಳ್ಳೆಕಾರಂಗೆ ಉಳ್ಳುದೆಲ್ಲವನಿತ್ತು ಒಳ್ಳೆಯವನಾಗಿ ಕಾಲವಿಡಿದು ಕಾಳಬೆಳಗಿಲ್ಲದ ಬಿಸಿಲು ಬೆಳದಿಂಗಳದಲ್ಲಿ ಸನ್ನಿಹಿತ ಬರುವವರಾರು ನೋಡಾ! ಹೊರಗುಳ್ಳವರಿಗೆ ಹೊರಗಾದ ಒಳಗುಳ್ಳವರಿಗೊಳಗಾದ ಅರಿದು ಬನ್ನಿ ಗುರುನಿರಂಜನ ಚನ್ನಬಸವಲಿಂಗಕ್ಕೆ ರೂಪಿಲ್ಲದೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ಬೆಲ್ಲವ ಮೆಲುವಾತನ ಹಲ್ಲು ಕಹಿಯಾಗಿ, ಹಲ್ಲು ಕಲ್ಲಿನೊಳಗಾಗಿ, ಅಲ್ಲಿಯೆ ಅಡಗಿ ನೋಡುತ್ತದೆ. ಅದ ನಾವು ನೀವು ಎಲ್ಲರೂ ಅರಿವ ಬನ್ನಿ, ಅರ್ಕೇಶ್ವರಲಿಂಗವ ಬಲ್ಲವರಹರೆ.
--------------
ಮಧುವಯ್ಯ
ಮನಕ್ಕೆ ಬಂದಂತೆ ಹಲವುಪರಿಯ ವೇಷವ ತೊಟ್ಟು ಹರಿದಾಡುವ ಜಾತಿಕಾರರ ಈಶ್ವರನು ಮೆಚ್ಚನು; ಸದಾಶಿವನು ಸೈರಣೆಯ ಮಾಡನು. ಬಸವಾದಿ ಪ್ರಮಥರು ಬನ್ನಿ ಕುಳ್ಳಿರಿ ಎನ್ನರು. ಅಮುಗೇಶ್ವರಲಿಂಗವನರಿಯದ ಅನಾಚಾರಿಗಳ ಕಂಡಡೆ ಬನ್ನಿ ಕುಳ್ಳಿರಿ ಎಂಬ ನುಡಿಯ ನುಡಿಯರು.
--------------
ಅಮುಗೆ ರಾಯಮ್ಮ
ಅರಳೆಯ ಮರನು ವಿಷ್ಣುಕಾಂತಿ ಬನ್ನಿ ಮುತ್ತಕ ತೊಳಚಿ ಹರಿ ಹರಿಯೆಂದು ಹೊಡ[ವ]ಡುವಿರಿ. ಎಲ್ಲಿ ಭೋ! ಎಲ್ಲಿ ಭೋ! ನಿಮ್ಮ ನಿಮ್ಮ ಹೊಡವಡುವ ದೈವಗಳೆಲ್ಲಾ ಗಿಡುಮರನಾಗಿ ಹೋದವಲ್ಲಾ! ನಿಮ್ಮ ನಡೆಯೆಲ್ಲಾ ಅನಾಚಾರ, ನುಡಿಯೆಲ್ಲಾ ಶಿವದ್ರೋಹ! ಇವದಿರ ಗಡಣ ಬೇಡೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಬನ್ನಿ ಕರಣಿಕರು, ನೀವು ಲೆಕ್ಕವ ಹೇಳಿ, ಧಾನ್ಯ ಧಾನ್ಯಂಗಳ ಸಂಚವನು. ಹೊಸಜೋಳ ಅರುವತ್ತುಲಕ್ಷ ಖಂಡುಗ, ಶಾಲಿಧಾನ್ಯ ಮೂವತ್ತುಲಕ್ಷ ಖಂಡುಗ, ಗೋದಿ ಹನ್ನೆರಡುಲಕ್ಷ ಖಂಡುಗ, ಕಡಲೆ ಬತ್ತೀಸ ಖಂಡುಗ, ಹೆಸರು ಮೂವತ್ತಾರುಲಕ್ಷ ಖಂಡುಗ, ನವಣೆ ಹಾರಕ ಬರಗು ಸಾವೆ ದೂಸಿಗಳೆಂಬ ಧಾನ್ಯ ಐವತ್ತುಲಕ್ಷ ಖಂಡುಗ. ಹೊಸಸುಗ್ಗಿಯ ವೇಳೆಗೆ ಬಹ ಭತ್ತ ಅಗಣಿತ. ಮಹಾದಾನಿ ಸೊಡ್ಡಳನ ಆರೋಗಣೆಯ ಅವಸರಕ್ಕೆ ಅಳವಟ್ಟ ಸಯದಾನ ಇನಿತನವಧರಿಸಯ್ಯಾ, ಸಂಗನಬಸವಣ್ಣಾ.
--------------
ಸೊಡ್ಡಳ ಬಾಚರಸ
ಸೂನೆಗಾರನ ಮನೆಯಲ್ಲಿ ಮೂವರು ಹಂದೆಗಳು ಹೊಕ್ಕು, ಹೇಳ ಹೆಸರಿಲ್ಲದೆ ಕೊಂದರೆಲ್ಲರ. ಸೂನೆಗಾರ ಏನೂ ಎನ್ನದೆಯಿದ್ದ, ಕೇಳುವ ಬನ್ನಿ, ಅರ್ಕೇಶ್ವರಲಿಂಗವ.
--------------
ಮಧುವಯ್ಯ
ಒಮ್ಮನವ ಮೀರಿ ಇಮ್ಮನದಲ್ಲಿ ತಂದಿರಿ, ಇದು ನಿಮ್ಮ ಮನವೊ, ಬಸವಣ್ಣನ ಅನುಮಾನದ ಚಿತ್ತವೊ ? ಈ ಮಾತು ಮಾರಯ್ಯಪ್ರಿಯ ಅಮಲೇಶ್ವರಲಿಂಗಕ್ಕೆ ಸಲ್ಲದಬೋನ. ಅಲ್ಲಿಯೇ ಸುರಿದು ಬನ್ನಿ ಮಾರಯ್ಯಾ.
--------------
ಆಯ್ದಕ್ಕಿ ಲಕ್ಕಮ್ಮ
ಇನ್ನಷ್ಟು ... -->