ಅಥವಾ

ಒಟ್ಟು 98 ಕಡೆಗಳಲ್ಲಿ , 34 ವಚನಕಾರರು , 75 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದ್ರಿಯದ ಬಾಗಿಲಲ್ಲಿ ಮನವಿಪ್ಪುದು. ಮನದ ಮುಂಬಾಗಿಲಲ್ಲೇ ಭೋಗಲಿಂಗವಿದ್ದು, ಅದ್ಥಿಕಾರ ಲಯಹೊದ್ದದೆ ಸಕಲಭೋಗಂಗಳ ಭೋಗಿಸಿ ಪ್ರಸಾದವ ಕರಣಂಗಳಿಗೆ ಕೊಟ್ಟು ಅರುಹಿ ಎನ್ನ ಮನವ ತನ್ನತ್ತ ಸೆಳೆದು ಮರಹ ಮಾಣಿಸಿ ಕುರುಹಳಿದು ತೆರಹುಗೊಡದ ಸೌರಾಷ್ಟ್ರ ಸೋಮೇಶ್ವರಲಿಂಗವ ಕಂಡೆ.
--------------
ಆದಯ್ಯ
ಅತೀಂದ್ರಿಯರೆಲ್ಲರೂ ಮದನನ ಮನೆಯ ಬೆಸಕುಡಿಕೆಯ ನೀರೆರೆವುದಕ್ಕೊಳಗಾದರು. ವ್ರತಿಗಳೆಲ್ಲರೂ ಹೊರಗೆ ಆಚಾರವನಿರಿಸಿ, ಒಳಗೆ ಭವಿಸಂಗದಲ್ಲಿ ಬಳಲುತ್ತೈದಾರೆ. ನಿರಾಶೆವಂತರು ಕೊಡುವರ ಬಾಗಿಲಲ್ಲಿ, ಇಕ್ಕುವರ ಮಂದಿರದಲ್ಲಿ ಸಿಕ್ಕಿ ಅಯಿದಾರೆ. ಇವಕ್ಕೆ ಹೊರಗಾಗು, ಐಘಟದೂರ ರಾಮೇಶ್ವರಲಿಂಗಕ್ಕೆ.
--------------
ಮೆರೆಮಿಂಡಯ್ಯ
ಕುಂಡಲಿಯ ಬಾಗಿಲಲ್ಲಿ ಕೆಂಡವ ಪುಟಮಾಡಿ, ಉದ್ದಂಡವಿಕಾರದ ಉಪಟಳವನುರುಹಿ, ತಂಡತಂಡದ ನೆಲೆಗಳ ದಾಟಿ ದಂಡನಾಳವ ಪೊಕ್ಕು ಮಂಡಲತ್ರಯದ ಮೇಲೆ ಚಂಡ ರವಿಕೋಟಿಪ್ರಭೆಯಿಂದೆ ಬೆಳಗುವ ಅಖಂಡಮೂರ್ತಿಯ ಕಂಡು ಕೂಡಬಲ್ಲಾತನೆ ಪ್ರಚಂಡ ಪ್ರಾಣಲಿಂಗಿಯೆಂಬೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಹಾರುವ ಹಕ್ಕಿಗೆ ಗರಿ ಈರೈದಾದುದ ಕಂಡೆನಯ್ಯ. ಕುಳಿತರೆ ಗೇಣುದ್ಧ, ಎದ್ದರೆ ಮಾರುದ್ದ. ಹಾರುವಲ್ಲಿ ಆರುಗೇಣಾಗಿಪ್ಪುದಯ್ಯ. ಮತ್ತರಿದೆನೆಂದರೆ ಅದೆ ನೋಡಾ. ತನ್ನ ತಿಳಿದರೆ ತಾನು ಅತಿಸೂಕ್ಷ ್ಮ ನೋಡಾ. ತನ್ನ ಪರಿ ವಿಪರೀತ ವಿಸ್ಮಯವಾಗಿದೆ ನೋಡಾ. ಮೂರಾರು ಬಾಗಿಲಲ್ಲಿ ಹಾರಿ ಹಲುಬುವುದಯ್ಯ. ಸರ್ವಬಾಗಿಲಲ್ಲಿ ಪರ್ಬಿ ಪಲ್ಲಯಿಸುವುದು. ಈ ಬಾಗಿಲೆಲ್ಲವು ತನ್ನ ಹಾದಿಯೆಂದರಿಯದು ನೋಡಾ. ತನ್ನ ಹಾದಿಯನರಿದು ಚೆನ್ನಾಗಿ ನಡೆದಾಡಬಲ್ಲರೆ ಮೇಲುಗಿರಿ ಪರ್ವತವ ಓರಂತೆಯ್ದಿ ನಿರ್ವಯಲ ಬೆರಸಿತ್ತೆಂಬೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕಾಯದ ಕಂಥೆಯ ಹಿಡಿದು ಅಕಾಯಚರಿತ್ರ ಪರಮನೆಂಬ ಜಂಗಮ ಬಂದು, ಕರ ಖರ್ಪರವನಳವಡಿಸಿಕೊಂಡು ಬ್ಥಿಕ್ಷೆಕ್ಕೆ ನಡೆಯಲು ಕೇಳಿದ. ಇಂದ್ರಿಯಂಗಳು ನಿಲಲಮ್ಮದೆ ಕಡೆಯ ಬಾಗಿಲಲ್ಲಿ ನಿಲಕಿ ನೋಡುತಿರ್ದಯ್ಯಾ ! ದಶೇಂದ್ರಿಯಂಗಳು ಪ್ರದಕ್ಷಿಣ ಬಂದು ತಮಗೆ ತಾವೇ ಅಂಜಿ ಓಡಿ[ದವು] ಕೇಟೇಶ್ವರಲಿಂಗನ ಶರಣನಿರವ ಕೇಳಿದಾಕ್ಷಣ.
--------------
ಬೊಕ್ಕಸದ ಚಿಕ್ಕಣ್ಣ
ಪ್ರಸಾದಗ್ರಾಹಕನಾದ ಸದ್ಭಕ್ತನು ಭೋಜನಶಾಲೆಯಲ್ಲಿ ಉಣಲಾಗದು. ರಂಗಮಂಟಪದಲ್ಲಿ ಉಣಲಾಗದು. ಕೋಣೆಯಲ್ಲಿ ಉಣಲಾಗದು. ಗೃಹದ ಬಾಗಿಲಲ್ಲಿ ಉಣಲಾಗದು. ಬಾಹ್ಯದಲ್ಲಿ ಉಣಲಾಗದು, ಒಳಗೆ ಉಣಲಾಗದು. ಇಂತೀ ಸ್ಥಾನಗಳಲ್ಲಿ ಉಣ್ಣದಾತನೇ ಶಿವಪ್ರಸಾದಿ ಎಂದೆನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಂಧಕಾರವೆಂಬ ಮನೆಯ ಬಾಗಿಲಲ್ಲಿ ಆರಂಗದ ಕರಡಿ ಕಟ್ಟಿ ಮೂರಂಗದ ಕೋಡಗ ಏಡಿಸಿ ಕಾಡುತ್ತಿದೆ. ಮೀರಿದೆನೆಂಬವರೆಲ್ಲರು ಕರಡಿಯ ಗಿಲಗಿನಲ್ಲಿ ಸತ್ತು, ಕೋಡಗದ ಚೇಷ್ಟೆಯಲ್ಲಿ ಸಿಕ್ಕಿ, ಬೇಡ ನಿಮಗೆ ಆರೂಢದ ಮಾತು. ಇಂತಿವ ಮೀರಿ ಅರಿದವಂಗಲ್ಲದೆ ಸದಾಶಿವಮೂರ್ತಿಲಿಂಗವಿಲ್ಲ.
--------------
ಅರಿವಿನ ಮಾರಿತಂದೆ
ಕಾಯದ ಕಕ್ಕುಲತೆಗಾಗಿ ಜೀವಿಗಳ ಬಾಗಿಲ ಕಾಯದೆ, ಈಷಣತ್ರಯಕ್ಕಾಗಿ ಭವದುಃಖಿಗಳ ಬಾಗಿಲಲ್ಲಿ ನಿಂದು ವೇಳೆಯ ಕಾವಂಗೆ ಭಾವರಹಿತ ಬ್ರಹ್ಮವೇಕೆ? ಅದು ನಾಣ್ನುಡಿಗಳೊಳಗು, ಸದಾಶಿವಮೂರ್ತಿಲಿಂಗಕ್ಕೆ ಹೊರಗು.
--------------
ಅರಿವಿನ ಮಾರಿತಂದೆ
ಊರ ಮುಂದಳ ದಾರಿಯಲ್ಲಿ ಸರ್ಪನು ಬಾಲವ ಗಗನದಲ್ಲಿಟ್ಟು, ಶಿರವ ನಾಗಲೋಕದಲ್ಲಿಟ್ಟು, ಈರೇಳುಭುವನ ಹದಿನಾಲ್ಕು ಲೋಕಂಗಳ ನುಂಗಿಕೊಂಡಿರ್ಪುದು ನೋಡಾ. ಕಡೆಯ ಬಾಗಿಲಲ್ಲಿ ಗಾರುಡಿಗ ನಿಂದು, ನಾಗಸ್ವರದ ನಾದವ ಮಾಡಲು ಆ ನಾಗಸ್ವರವ ಕೇಳಿ ನಾಗಲೋಕದಿಂದ ಎದ್ದ ಸರ್ಪನು ಆ ಗಾರುಡಿಗನ ನುಂಗಿತ್ತು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಒಂದು ಲಿಂಗಕ್ಕೆ ಮುನ್ನೂರು ಮುಖ, ಆರುಸಾವಿರ ಹಸ್ತ, ಮೂವತ್ತಾರು ಲಕ್ಷ ಪಾದಂಗಳು, ನವಕೋಟಿ ಮನೆಗಳಲ್ಲಿ ಸುಳಿದಾಡುತಿಪ್ಪನು ನೋಡಾ. ಆ ನವಕೋಟಿಬಾಗಿಲ ಮುಚ್ಚಿ ನೋಡಲು, ಕಡೆಯ ಬಾಗಿಲಲ್ಲಿ ಕಪ್ಪೆ ಕುಳಿತು ಕೂಗುತ್ತಿದೆ ನೋಡಾ. ಆ ಕೂಗಿನ ಶಬ್ದವ ಕೇಳಿ, ಪಾತಾಳಲೋಕದಲ್ಲಿಪ್ಪ ಸರ್ಪನೆದ್ದು, ಆ ಕಪ್ಪೆಯ ನುಂಗಿ, ತನ್ನ ಸುಳುವ ತಾನೇ ತೋರುತಿಪ್ಪುದು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅದ್ವೈತವ ನುಡಿದು ಅಬದ್ಧ ಅಂಗಕ್ಕಾಗಿ ಬದ್ಧರ ಬಾಗಿಲಲ್ಲಿ ಹೊದ್ದುಕೊಂಬನರಫಲ್ಲಾ ಎಂದು ಮತ್ತೆ ಅದ್ವೈತಕ್ಕೆ ಕದ್ದೆಹತನವೆ ? ಇಂತೀ ಅಬದ್ಧರ ಕಂಡು ಮುನ್ನವೆ ಹೊದ್ದಬೇಡ, ಎಂದನಂಬಿಗ ಚೌಡಯ್ಯ
--------------
ಅಂಬಿಗರ ಚೌಡಯ್ಯ
ತತ್ವವ ನುಡಿವ ಹಿರಿಯರೆಲ್ಲರು. ತುತ್ತನಿಕ್ಕುವರ ಬಾಗಿಲಲ್ಲಿ, ಅಚ್ಚುಗಪಡುತ್ತಿದ್ದರು ನೋಡಾ, ನಿತ್ಯಾನಿತ್ಯವ ಹೇಳುವ ಹಿರಿಯರು ತಮ್ಮ ಒಡಲ ಕಕ್ಕುಲತೆಗೆ ಹೋಗಿ, ಭಕ್ತಿಯ ಹೊಲಬನರಿಯದ, ಜಡಜೀವಿ ಮಾನವರ ಇಚ್ಛೆಯ ನುಡಿದು, ಹಲುಬುತ್ತಿಪ್ಪರು ನೋಡಾ ! ಕತ್ತೆಗೆ ಕರ್ಪೂರವ ಹೇರಿದಂತೆ, ಅವರಿಗೆ ಇನ್ನೆತ್ತಣ ಮುಕ್ತಿಯೋ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಒಡೆಯರ ಕಟ್ಟಳೆಯೆಂದು ಮಾಡಿಕೊಂಡು ಆಡುವ ತನಕ ಅಂಗಳ ಬಾಗಿಲಲ್ಲಿ ಗುಡಿಗೂರಿ ಎನಬಹುದೆ? ಒಡೆಯರಂತೆ, ಮನೆಗೊಡೆಯನಂತೆ ಗಡಿತಡಿಯಲ್ಲಿ ಕಾಯಲುಂಟೆ? ಅದು ತುಡುಗುಣಿಕಾರರ ನೇಮ. ಒಡೆಯರತ್ತ ನಾವಿತ್ತ. ಗಡಿಗೆಯ ತುಪ್ಪ, ಹೆಡಿಗೆಯ ಮೃಷ್ಟಾನ್ನತುಡುಗುಣಿಯಂತೆ ತಿಂಬವಂಗೆ ಮತ್ತೊಡೆಯರ ಕಟ್ಟಳೆಯೆ? ಇಂತೀ ಕಡುಕರ ಕಂಡು ಅಂಜಿದೆಯಲ್ಲಾ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಾ?
--------------
ಅಕ್ಕಮ್ಮ
ಅಂಬರದೇಶದ ಕುಂಭ ಕೋಣೆಯೊಳಗೆ ಜಂಬುಲಿಂಗಪೂಜೆಯ ಸಂಭ್ರಮವ ನೋಡಾ ! ಅಂಬುಜಮುಖಿಯರು ಆರತಿಯನೆತ್ತಿ ಶಂಭು ಶಿವಶಿವ ಹರಹರ ಎನುತಿರ್ಪರು ನೋಡಾ ! ತುಂಬಿದ ಹುಣ್ಣಿಮೆಯ ಬೆಳದಿಂಗಳು ಒಂಬತ್ತು ಬಾಗಿಲಲ್ಲಿ ತುಂಬಿ ಹೊರಸೂಸುತಿರ್ಪುದು ನೋಡಾ ! ಈ ಸಂಭ್ರಮವನೇನ ಹೇಳುವೆನಯ್ಯಾ ಅಖಂಡೇಶ್ವರಾ !
--------------
ಷಣ್ಮುಖಸ್ವಾಮಿ
ಅಪ್ಪು ಬಲಿದು ಪೃಥ್ವಿಯ ಮೇಲೆ ಶತಕೋಟಿ ಸಹಸ್ರಕೋಟಿ ಬಯಲಿಂದತ್ತ ಭರಿತವಪ್ಪುದೊಂದು ರಥ. ಆ ರಥಕ್ಕೆ ಬ್ರಹ್ಮ ವಿಷ್ಣು ಸೂರ್ಯ ಚಂದ್ರ (?) ವೇದಶಾಸ್ತ್ರಪುರಾಣಸಕಲಾಗಮಪ್ರಮಾಣಗೂಡಿದ ಷಟ್ಕಲೆ ಮೇರುಮಂದಿರವೆಂಬ ಅಚ್ಚುಗಂಬವ ನೆಟ್ಟಿದೆ. ಆ ರಥದ ಸುತ್ತಲು ದೇವಾದಿದೇವರ್ಕಳೆಲ್ಲರ ತಂದು ಸಾರಥಿಯನಿಕ್ಕಿ ಆ ರಥದ ನಡುಮಧ್ಯಸ್ಥಾನದಲ್ಲಿ ಅಷ್ಟದಳಕಮಲವಾಯಾಗಿ ಅನಂತಸಹಸ್ರಕೋಟಿ ಕಮಲಪದ್ಮಾಸನವ ರಚಿಸಿದೆ. ಆ ಪದ್ಮಾಸನದ ಮೇಲೆ ಶಂಭು ಸದಾಶಿವನೆಂಬ ಮಹಾದೇವನ ತಂದು ನೆಲೆಗೊಳಿಸಿದೆ. ಆ ರಥದ ಪೂರ್ವಬಾಗಿಲಲ್ಲಿ ಆದಿಶಕ್ತಿಯ ನಿಲಿಸಿದೆ. ಉತ್ತರ ಬಾಗಿಲಲ್ಲಿ ಓಂ ಪ್ರಣಮಸ್ವರೂಪಿಣಿಯೆಂಬ ಶಕ್ತಿಯ ನಿಲಿಸಿದೆ. ಆ ಪಶ್ಚಿಮಬಾಗಿಲಲ್ಲಿ ಕ್ರಿಯಾಶಕ್ತಿಯ ನಿಲಿಸಿದೆ. ದಕ್ಷಿಣದ ಬಾಗಿಲಲ್ಲಿ ಚಿಚ್ಫಕ್ತಿಯ ನಿಲಿಸಿದೆ. ಭೈರವ ವಿಘ್ನೆಶ್ವರ ಷಣ್ಮುಖ ವೀರಭದ್ರರೆಂಬ ನಾಲ್ಕು ಧ್ವಜಪಟಗಳನೆತ್ತಿ, ಆ ರಥದ ಅಷ್ಟದಿಕ್ಕುಗಳಲ್ಲಿ ನಾನಾ ಚಿತ್ರವಿಚಿತ್ರವೈಭವಂಗಳೆಂಬ ಕೆಲಸವ ತುಂಬಿ, ಅದರ ಗಾಲಿಯ ಕೀಲುಗಳಲ್ಲಿ ಈರೇಳುಭುವನವೆಂಬ ಹದಿನಾಲ್ಕುಲೋಕಂಗಳ ಧರಿಸಿ ಆಡುತ್ತಿರ್ಪವು. ಅನಾದಿ ಶೂನ್ಯವೆಂಬ ಮಹಾರಥದೊಳಗಿಪ್ಪ ನಮ್ಮ ಬಸವಣ್ಣಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗವು ನಿರಾಳ ನಿಶ್ಚಿಂತ ನಿರ್ಲೇಪನು.
--------------
ಬಾಚಿಕಾಯಕದ ಬಸವಣ್ಣ
ಇನ್ನಷ್ಟು ... -->