ಅಥವಾ

ಒಟ್ಟು 49 ಕಡೆಗಳಲ್ಲಿ , 30 ವಚನಕಾರರು , 47 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ನಿಂದಕರು ನಿಂದಿಸಿದರೆ ಸ್ವಯಜ್ಞಾನಿ ಅಂಜುವನೇನಯ್ಯ ? ಆ ನಿಂದಕನ ಅಂತರಂಗದಲ್ಲಿ ಅಹಂಕಾರನೆಂಬ ಕೋಣ ಹುಟ್ಟಿ, ಜ್ಞಾನಿಗಳೆಂದರಿಯದೆ, ಬಾಯಿಗೆ ಬಂದಂತೆ ನುಡಿವ ತರಕಿಮೂಳರ ಎನಗೊಮ್ಮೆ ತೋರದಿರಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಓಡ ಕುದುರೆಯ ಮೇಲೆ ಮಸಿಯ ಹಲ್ಲಣವ ಹಾಕಿ, ಬಸಲೆಯ ಹಂಬ ಬಾಯಿಗೆ ಕಟ್ಟಿ, ದೆಸೆವರಿವ ಅಸುರಾವುತ ಚೊಲ್ಲೆಹದ ಬಲ್ಲೆಹವ ಹಿಡಿದು, ಮುಗುಳುನಗೆಯವಳಲ್ಲಿ ಏರಿ ತಿವಿದ. ಚೊಲ್ಲೆಹದ ಬಲ್ಲೆಹ ಮುರಿದು, ಓಡಿನ ಕುದುರೆ ಒಡೆದು, ಮಸಿಯ ಹಲ್ಲಣ ನುಗ್ಗುನುಸಿಯಾಗಿ, ಬಸಲೆಯ ಬಾಯಕಟ್ಟು ಹರಿದು, ಅಸುರಾವುತ ಅವಳ ಕಿಸಲೆಯ ರಸಕ್ಕೊಳಗಾದ. ಅದೇತರಿಂದ ಹಾಗಾದನೆಂಬುದ ನೀನರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಜ್ವರ ಬಡಿದ ಬಾಯಿಗೆ ನೊರೆವಾಲು ಉರಸುವದೆ? ನರಕದಲ್ಲಿ ಬೀಳುವ ಮನುಜರಿಗೆ ಶಿವಭಕ್ತಿಯೆಂಬುದು ಕಿರುಗಹಿ ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಶಿವಪಥವನರಿದು, ಲಿಂಗನಿಷ್ಠೆಯಿಂದೇಕೋಭಾವ ಬಲಿದು, ಕರಿಗೊಂಡು, ಘನವೇದ್ಯವಾಗಿ ನಿಂದು, ನಿಜವ ನೆಮ್ಮಿ, ಸಚ್ಚಿದಾನಂದಸುಖಮಯನಾಗಿ, ಮಾಯೆ ಕೆಟ್ಟು, ಮರವೆ ಬಿಟ್ಟು, ಮರಣವಳಿಯಬೇಕು. ಇದಲ್ಲದೆ ಬಿಂದುವಿಂದಾದ ತ್ರಿಬದ್ಧಕ್ರಿಯೆ ಎಂದರಿಯದೆ ಬಾಹ್ಯಕ್ರೀಯೊಳೊಂದಿದಡೆ, ಸುರಪ, ಹರಿ, ವಿರಿಂಚಿಗಳಾದಡೂ ಮಾಯೆ ಕೆಡದು, ಮರವೆ ಬಿಡದು. ಮೃತ್ಯುವಗಿದು ಕಾಲನ ಬಾಯಿಗೆ ಕೆಡಹದೆ ಮಾಣದಯ್ಯಾ. ಇದ ಬಲ್ಲೆನಾಗಿ ನಾನೊಲ್ಲೆ, ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ಮರ್ಕಟ ದರ್ಪಣವ ಹಿಡಿದು ನೋಡಿ ತನ್ನ ಪ್ರತಿಬಿಂಬವ ಕಂಡು ದರ್ಪಣವ ಮರ್ಕಟವೆಂದು ಬಗೆದೇಡಿಸಲನುಗೆಯ್ವಂತೆ, ಮನೋವಿಕಾರದಿಂ ಪ್ರಕೃತಿವಿಡಿದು ಚರಿಸುತಿರ್ಪ ಮತ್ರ್ಯದ ಮನುಜರು ಪ್ರಕೃತಿ ನಿಃಕಂಪನವಾದ ಪರಮಾನುಭಾವಿಗಳಪ್ಪ ಪರಮಲಿಂಗೈಕ್ಯರ ಅನುವನರಿಯದೆ, ಬಾಯಿಗೆ ಬಂದಂತೆ ಒಂದೊಂದ ನುಡಿವ ಮಂದಮತಿಗಳಪ್ಪ ಸಂದೇಹಿಗಳು ನಿಮ್ಮನೂ ತಮ್ಮನೂ ತಾವೆತ್ತ ಬಲ್ಲರಯ್ಯಾ ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ಸದಾಚಾರವೆ ಸಾಕಾರವಾಗಿ, ಸತ್ಪ್ರಣಮವೆ ಪ್ರಾಣವಾಗಿ, ಮಾಡುವ ಮಾಟವೆ ಕೈಯಾಗಿ, ಅರಿವೆಂಬ ಬಾಯಿಗೆ ಕುರುಹಿನ ಕೈ ಮರೆಯದೆ ಅರ್ಪಿಸಿತ್ತು. ಅಂಗಪ್ರಾಣ ಅರಿವು ಸಂಬಂಧ, ಅದು ಪ್ರಾಣಲಿಂಗಯೋಗ, ಬಂಕೇಶ್ವರಲಿಂಗದಲ್ಲಿ.
--------------
ಸುಂಕದ ಬಂಕಣ್ಣ
ಮನಕ್ಕೆ ವ್ರತವ ಮಾಡಿ, ತನುವಿಗೆ ಕ್ರೀಯ ಮಾಡಬೇಕು. ಇಂದ್ರಿಯಂಗಳಿಗೆ ಕಟ್ಟನಿಕ್ಕಿ, ಆತ್ಮನ ಸಂದೇಹವ ಬಿಡಿಸಿ ಕ್ರೀಯ ಮಾಡಬೇಕು. ಹೀಂಗಲ್ಲದೆ ವ್ರತಾಚಾರಿಯಲ್ಲ. ಮನಕ್ಕೆ ಬಂದಂತೆ ಹರಿದು, ಬಾಯಿಗೆ ಬಂದಂತೆ ನುಡಿದು, ಇಂತೀ ನಾ ವ್ರತಿಯೆಂದರೆ ಮೂಗನರಿಯದೆ ಮಾಣ ಏಲೇಶ್ವರಲಿಂಗನು.
--------------
ಏಲೇಶ್ವರ ಕೇತಯ್ಯ
ಪೃಥ್ವಿಯ ಸಾರಗೆಟ್ಟ ಹೊಲದಲ್ಲಿ, ಆರವೆಯಿಲ್ಲದ ಮರ ಹುಟ್ಟಿ, ಕಣ್ಣಿಗೆ ತೋರಲಿಲ್ಲದ ಬಿತ್ತಾಯಿತ್ತು, ಅದು ಈ ಧರೆಯಲ್ಲಿ ಬಿತ್ತಿದಡೆ, ಆ ಧರೆಯಲ್ಲಿ ಹುಟ್ಟಿತ್ತು, ಅದರಿಂದಾಚೆ ಫಲವಾಯಿತ್ತು, ಕೊಂಬಿಂದೀಚೆ ಹಣ್ಣಾಯಿತ್ತು. ಹಣ್ಣು ಮೆಲುವ ಬಾಯಿಗೆ ಹಣ್ಣಿತ್ತು, ಈ ಹಣ್ಣಿನ ಸವಿಯ ಹೇಳು, ಚೆನ್ನಬಂಕೇಶ್ವರಲಿಂಗಾ.
--------------
ಸುಂಕದ ಬಂಕಣ್ಣ
ಅಂಗನೆಯ ಸಂಗಮೋಹಿಗೆ ಗುರುನಿಷೆ*ಯಿಲ್ಲ, ಲಿಂಗನಿµ*ಯಿಲ್ಲ, ಜಂಗಮನಿಷೆ*ಯಿಲ್ಲ, ಪಾದೋದಕಪ್ರಸಾದನಿಷೆ*ಯಿಲ್ಲ, ಈ ಪಂಚವಿಧ ಪ್ರಸನ್ನಸುಖವರಿಯದ ಮಲಸುಖಿಯು ತಾನೊಂದು ಕಾರ್ಯವರಿದುಬಂದು ಕಾರಣಿಕಪುರುಷನೆಂದರೆ ಈ ಹುಸಿ ಬಾಯಿಗೆ ಮುಂದೆ ಕಸಮಲ ಹುಡಿಯ ತುಂಬುವುದೇ ಸಾಕ್ಷಿ. ಇದು ಕಾರಣ, ಈ ಹುಸಿನಾಲಿಗೆಯನು ಇದರ ಚೇತನವನು ಅದರಾಸ್ವಾದವನು ಸುಟ್ಟು ಬಟ್ಟಿಟ್ಟಲ್ಲದೆ ಭಕ್ತಾದಿಕುಳವೆಂದರೆ ಅಘೋರನರಕ ತಪ್ಪದು ಕಾಣಾ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಲಿಂಗ ಪ್ರಾಣ, ಪ್ರಾಣ ಲಿಂಗ, ಆ ಮಹಾಲಿಂಗಕ್ಕೆ ಕಾಯವೆ ಭಕ್ತನು, `ಭಕ್ತಕಾಯ ಮಮಕಾಯ' ಎಂದುದಾಗಿ ಆ ಪ್ರಾಣ ಲಿಂಗವು, ಕಾಯ ಭಕ್ತನು ಆ ಲಿಂಗಕ್ಕೆ ಆ ಭಕ್ತನು ದಾಸೋಹವ ಮಾಡಿದಡೆ ಭಿನ್ನ ಭೇದವೆ ? ಅಲ್ಲ, ಸ್ವಭಾವ ನೈಜ. ಅಂಗಕ್ರೀಯೆಲ್ಲ ಲಿಂಗಕ್ರೀ, ಲಿಂಗಕ್ರೀಯೆಲ್ಲ ಅಂಗಕ್ರೀ. ಕೈಕಲಸಿದಡೆ ಬಾಯಿಗೆ, ಹಾಂಗೆ ಸರ್ವಾಂಗ ಲಿಂಗಕ್ಕೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಮಾಡುವ ಮಾಡಿಸಿಕೊಂಬ ಎರಡರ ನಡುವೆ ಸಂದುಭೇದ ಉಂಟೆ ದೇವಾ ಕಾಯ ಪ್ರಾಣದ ಸಂಗದಂತೆ ಇದ್ದುದಲ್ಲದೆ. ಬಲ್ಲಂತೆ ಮಾಡು, ಬಲ್ಲಂತೆ ನೀಡು, ನಾನರಿಯೆನೆಂಬುದು ನಿಮಗುಚಿತವೆ ಮಾಡುವಲ್ಲಿ ನೀಡುವಲ್ಲಿ ಹೇಳಿ ಮಾಡಿಸಿಕೊಂಬುದಲ್ಲದೆ. ಕೈ ಕಲಸಿದಡೆ ಬಾಯಿಗೆ ಹಂಗುಂಟೆ ಕೂಡಲಸಂಗಮದೇವಾ
--------------
ಬಸವಣ್ಣ
ಮನವೆಂಬ ಒರಳಿಗೆ ಸಕಲಕರಣಂಗಳೆಂಬ ತಂಡುಲವ ಹಾಕಿ, ಸುಜ್ಞಾನವೆಂಬ ಒನಕೆಯ ಪಿಡಿದು ಪರಮಪರಿಣಾಮದೊಳಗೋಲಾಡುತ್ತ ಕುಟ್ಟಿ, ಅಜ್ಞಾನವೆಂಬ ತೌಡ ಕೇರಿ ಚಿತ್ಕರಣಂಗಳೆಂಬ ಅಕ್ಕಿಯ ತೆಗೆದುಕೊಂಡು ಸದ್ಭಾವವೆಂಬ ಭಾಂಡದಲ್ಲಿ ತುಂಬಿ ಪರಮಾನಂದ ಜಲವೆಂಬ ಎಸರನಿಟ್ಟು, ತ್ರಿಪುಟಿಯೆಂಬ ಒಲೆಯ ಹೂಡಿ ಚಿದಗ್ನಿಯೆಂಬ ಬೆಂಕಿಯ ಪುಟವನಿಕ್ಕಿ ಅರಿಷಡ್ವರ್ಗಗಳೆಂಬ ಸೌದೆಯ ಹೊತ್ತಿಸಿ, ಮಹಾಜ್ಞಾನವೆಂಬ ಪಾಕವ ಮಾಡಿ ಪರಿಪೂರ್ಣವೆಂಬ ಪರಿಯಾಣದಲ್ಲಿ ಗಡಣಿಸಿಕೊಂಡು, ಅಖಂಡಪರಿಪೂರ್ಣ ಮಹಾಘನಲಿಂಗಕ್ಕೆ ಸಲಿಸಬಲ್ಲಾತನೆ ಶರಣನು. ಆತನೆ ನಿಜಾನುಭಾವಿ, ಆತನೆ ಲಿಂಗೈಕ್ಯನು. ಇಂತೀ ಭೇದವನರಿಯದೆ ಮಣ್ಣಪರಿಯಾಣ, ಲೋಹಪಾತ್ರೆಯಲ್ಲಿ ಮನಬಂದ ಪರಿಯಲ್ಲಿ ಹಾಯ್ಕಿ ಹಾಯ್ಕಿ ಒಟ್ಟಿಸಿಕೊಂಡು ಬಾಯಿಗೆ ಬಂದಂತೆ ತಿಂಬುವ ಜೀವಗಳ್ಳ ಭವಭಾರಕರಿಗೆ ಏಕಭಾಜನವೆಲ್ಲಿಯದಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಮಾಧವನ ಪಟ್ಟಣದಿಂದ ಓಡಿದರು ಮೂವರು ಸೂಳೆಯರು. ಅವರು ಹೋದ ಹಾದಿಯಲ್ಲದೆ, ಬೇರೊಂದು ಹಾದಿಯಲ್ಲಿ ಅರಸಿ ಕಂಡರು ಸೂಳೆಯರ. ಅವರ ಮೂವರ ಸೆರೆಯ ವಿವರ: ಬಾಯಿಗೆ ಕೋಳ, ಕಾಲಿಗೆ ನೂಲೆಳೆಯ ಕಟ್ಟು, ಕೈಹೋಗದಂತೆ ಕೂರಲಗಿನ ಸಂಭವ ಕಟ್ಟು, ಮೂವರ ಅಗಡ ಹಿಂಗಿತ್ತು. ಇನ್ನೈವರ ಕೇಳಿ, ಬಂಕೇಶ್ವರಲಿಂಗವ.
--------------
ಸುಂಕದ ಬಂಕಣ್ಣ
ಷಡುರುಚಿಪದಾರ್ಥಂಗಳ ಇಷ್ಟಲಿಂಗಕೆ ತೋರದೆ ಬಾಯಿಗೆ ಬಂದಂತೆ ತಿಂಬ ನರಕಿಗಳ ಕಂಡು, ನಮ್ಮ ಶಿವಶರಣರು ಮೆಚ್ಚುವರೇನಯ್ಯ ? ಅಂತಪ್ಪ ನರಕಿ ಕೀಳರ ಎನಗೊಮ್ಮೆ ತೋರದಿರಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಇನ್ನಷ್ಟು ... -->