ಅಥವಾ

ಒಟ್ಟು 129 ಕಡೆಗಳಲ್ಲಿ , 37 ವಚನಕಾರರು , 120 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸದ್ಗುರುಕಾರುಣ್ಯವ ಪಡೆದು ಲಿಂಗಾಂಗಸಮರಸವುಳ್ಳ ವೀರಶೈವ ಭಕ್ತ ಮಹೇಶ್ವರರೆನಿಸಿಕೊಂಡ ಬಳಿಕ ತಮ್ಮಂಗದ ಮೇಲಣ ಲಿಂಗವು ಷಟ್‍ಸ್ಥಾನಂಗಳಲ್ಲಿ ಬ್ಥಿನ್ನವಾದಡೆ ಆ ಲಿಂಗದಲ್ಲಿ ತಮ್ಮ ಪ್ರಾಣವ ಬಿಡಬೇಕಲ್ಲದೆ, ಮರಳಿ ಆ ಬ್ಥಿನ್ನವಾದ ಲಿಂಗವ ಧರಿಸಲಾಗದು. ಅದೇನು ಕಾರಣವೆಂದಡೆ : ತಾನು ಸಾಯಲಾರದೆ ಜೀವದಾಸೆಯಿಂದೆ ಆ ಬ್ಥಿನ್ನವಾದ ಲಿಂಗವ ಧರಿಸಿದಡೆ ಮುಂದೆ ಸೂರ್ಯಚಂದ್ರರುಳ್ಳನ್ನಕ್ಕರ ನರಕಸಮುದ್ರದಲ್ಲಿ ಬಿದ್ದು ಮುಳುಗಾಡುವ ಪ್ರಾಪ್ತಿಯುಂಟಾದ ಕಾರಣ, ಇದಕ್ಕೆ ಸಾಕ್ಷಿ : ``ಶಿರೋ ಯೋನಿರ್ಗೋಮುಖಂ ಚ ಮಧ್ಯಂ ವೃತ್ತಂ ಚ ಪೀಠಕಂ | ಷಟ್‍ಸ್ಥಾನೇ ಛಿದ್ರಯೋಗೇ ತು ತಲ್ಲಿಂಗಂ ನೈವ ಧಾರಯೇತ್ | ತಥಾಪಿ ಧಾರಣಾತ್ ಯೋಗೀ ರೌರವಂ ನರಕಂ ವ್ರಜೇತ್ ||'' -ಸೂP್ಷ್ಞ್ಮ ಗಮ. ಇಂತಪ್ಪ ನರಕಜೀವಿಗಳ ಎನ್ನತ್ತ ತೋರದಿರಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ನಡೆದು ಕಂಡವರೆಂದು ನುಡಿದು ಸಿಲುಕಿ ಬಿದ್ದು ಹೋಗುವ ಪಾತಕರು ಒಡೆಯನವಸರವನವರೆತ್ತ ಬಲ್ಲರೋ ! ಮಾಂಸಕ್ಕೆ ಬಿದ್ದ ಶುನಿಭಾವದಂತೆ ಕೊಡುಕೊಳ್ಳೆ ಬೆಳೆಯುಂಟು ಕಾಲನಲ್ಲಿ, ಅರಿದು ಮರೆದವರಂತಲ್ಲ ಕೊಡುಕೊಳ್ಳೆ ಬೆಳೆಯುಂಟು ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಹಸಿಯ ಜವ್ವನೆಯರ ರಸನೆಯ ನವೀನ ಚಾತುರ್ಯಕ್ಕಂಗ ಮನ ಭಾವವಿತ್ತು, ಆದಿ ಮಧ್ಯ ಅವಸಾನವ ಮರೆದು ಅತ್ತಿತ್ತ ಬಿದ್ದು ಬಳಲುವ ಕತ್ತೆ ನಾಯಿಯ ಕರ್ಮ ಭವಿಗಳಿಗಿನ್ನೆತ್ತಣ ಜ್ಞಾನವಯ್ಯಾ ನಿರಂಜನ ಚನ್ನಬಸವಲಿಂಗಾ ?
--------------
ದೇಶಿಕೇಂದ್ರ ಸಂಗನಬಸವಯ್ಯ
ಇನ್ನು ನಿರ್ಮಲಾವಸ್ಥೆಯ ದರ್ಶನವ ಮಾಡುವಾಗ ಪಂಚಲಿಂಗಗಳನು ದರ್ಶನವ ಮಾಡುವುದು. ಅದೆಂತೆಂದಡೆ : ಅಣವ, ಮಾಯೆ, ಕಾರ್ಮಿಕ, ಮಹಾಮಾಯೆ, ತಿರೋಧಾನಮಲ. ಆಣವಮಲವಾವುದು ? ಶಿವನ ನೆನೆಯಲೀಸದಿಹುದು. ಮಾಯೆಯಾವುದು ? ತನು ಕರಣ ಭುವನಭೋಗಂಗಳ ಬಯಸುತ್ತಿಹುದು, ಕಾರ್ಮಿಕವಾವುದು ? ಪುಣ್ಯಪಾಪಂಗಳೆಂದು ಹೆಸರಾಗಿ ಸುಖದುಃಖಂಗಳಾಗಿಹುದು. ಮಹಾಮಾಯೆ ಯಾವುದು ? ಪಂಚಕರ್ತನು ರೂಪಾದಿ ದೇಹಾಗಿ ಪ್ರಪಂಚಗಳ ಪ್ರೇರಿಸಿಕೊಂಡಿಹುದು. ತಿರೋಧಾನಮಲವಾವುದು ? ಮರಳಿ ಮಾಯಾಭೋಗದಲ್ಲಿ ಬಿದ್ದು ಹೊರಳಾಡಿಸುತ್ತಿಹುದು. ಈ ಪ್ರಕಾರದಲ್ಲಿ ಪಂಚಮಲಂಗಳನು ಅರಿವುದು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಬಾಲತ್ವದಲ್ಲಿ ತನ್ನ ಮಲಮೂತ್ರದೊಡನೆ ಹೊರಳಾಡಿ, ಯೌವನಪ್ರಾಯದಲ್ಲಿ ಮದಮತ್ಸರದಿಂದ ಹೋರಾಡಿ, ಕಾಮದಲ್ಲಿ ಕರಗಿ, ಕ್ರೋಧದಲ್ಲಿ ಕೊರದು, ಲೋಭ ಮೋಹದಿಂದ ಮಗ್ನರಾಗಿ, ಯೌವನಬಲಗುಂದಿ ಮುಪ್ಪುವರಿದು ಹಲ್ಲು ಬಿದ್ದು, ಕಣ್ಣು ಒಳನಟ್ಟು, ಬೆನ್ನು ಬಾಗಿ, ದಮ್ಮು ಹತ್ತಿ, ಗುರುಗೂರಿ ಗರಹತ್ತಿ, ಸಾಯುವ ಮನುಜರಿಗೆ, ವಿಭೂತಿ ವೀಳ್ಯೆ ಎಂದು ಮಾಡಿ, ಅವನ ಪಣೆಯಲ್ಲಿ ವಿಭೂತಿಯ ಧರಿಸಿ, ಸರ್ವಾಂಗದಲ್ಲಿ ವಿಭೂತಿ ಲೇಪನ ಮಾಡಿ, ಸ್ಥಾನಸ್ಥಾನಂಗಳಲ್ಲಿ ರುದ್ರಾಕ್ಷಿಯ ಧರಿಸಿ, ಅವನ ಮನೆಯಲ್ಲಿ ಶಿವಗಣಂಗಳು ಸಲಿಸಿ, ಅವನ ಮಸ್ತಕದ ಮೇಲೆ ಸಕಲ ಗಣಂಗಳು ತಮ್ಮ ಪಾದವನಿಟ್ಟು ಅವನ ಕೈಯಲ್ಲಿ ವಿಭೂತಿ ರುದ್ರಾಕ್ಷಿ ಬಿಲ್ವಪತ್ರಿ ಸುವರ್ಣ ಮೊದಲಾದ ಕಾಂಚನವ ಬ್ಥಿಕ್ಷವ ಕೊಂಡು ಅವನು ಸತ್ತುಹೋದ ಮೇಲೆ ಊರ ಹೊರಗಾಗಲಿ, ಊರೊಳಗಾಗಲಿ, ಲಿಂಗಸ್ಥಾಪನೆಯಿದ್ದ ಮಠಮಾನ್ಯದಲ್ಲಿ ಏಳುಪಾದ ನಿಡಿದು, ಏಳುಪಾದ ಉದ್ದ ಭೂಮಿಯ ಒಳಗೆ, ಐದುಪಾದ ಚೌಕು, ಮೂರುಪಾದ ಅಡ್ಡಗಲ, ಮೂರುಪಾದ ಒಳಯಕ್ಕೆ ತ್ರಿಕೋಣೆ. ಇಂತೀ ಕ್ರಮದಲ್ಲಿ ಕ್ರಿಯಾಸಮಾದ್ಥಿಯ ಮಾಡಿ, ಸುಣ್ಣ ಕೆಂಪುಮಣ್ಣಿನ ಸಾರಣೆಯ ಮಾಡಿ ರಂಗವಾಲಿಯ ತುಂಬಿ, ತಳಿರುತೋರಣವ ಕಟ್ಟಿ, ಕೋಣಿ ಕೋಣಿ ಸ್ಥಾನಕ್ಕೆ ಓಲೆಯ ಮೇಲೆ ಪ್ರಣಮವಂ ಬರೆದು ಆ ಸಮಾದ್ಥಿಯಲ್ಲಿ ಸಂಬಂದ್ಥಿಸಿ, ಮತ್ತಂ, ಅವನ ಶವಕ್ಕೆ ಹಾಗೆ ಪ್ರಣಮವಂ ಬರೆದು ಸಂಬಂದ್ಥಿಸಿ, ಸಂಚರಿಸಿ ಮೇಲೆ ಮೋಕ್ಷವಾಯಿತು ಎಂಬರಯ್ಯಾ; ಮೋಕ್ಷವಾಗಲರಿಯದು. ಅದೆಂತೆಂದಡೆ, ಇಂತಿವೆಲ್ಲವು ಹೊರಗಣ ಉಪಚಾರವು. ಈ ಉಪಚಾರದಿಂದ ಕರ್ಮದೋಷಗಳು ಹರಿದು ಪಿಶಾಚಿಯಾಗನು, ಭವ ಹಿಂಗದು. ಇಂತೀ ಕ್ರಮದಲ್ಲಿ, ಅಂತರಂಗದಲ್ಲಿ ಲಿಂಗಾಂಗಕ್ಕೆ ಸ್ವಾನುಭಾವಜ್ಞಾನಸೂತ್ರದಿಂ ಪ್ರಣವಸಂಬಂಧ ಮಾಡಿಕೊಂಡಡೆ ಅದೇ ಕ್ರಿಯಾಸಮಾದ್ಥಿ, ಗೋಮುಖಸಮಾದ್ಥಿ, ಮಹಾನಿಜ ಅಖಂಡ ಚಿದ್ಬಯಲಸಮಾದ್ಥಿ. ಇಂತಪ್ಪ ಸಮಾದ್ಥಿ ಉಳ್ಳವರಿಗೆ ಭವಬಂಧನ ಹಿಂಗಿ ಮುಂದೆ ಮೋಕ್ಷವಾಗುವದು ನೋಡೆಂದನಯ್ಯ ನಿಮ್ಮ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ನಾನಾ ಜನ್ಮಂಗಳ ತಿರುಗಿ ಮಾನವ ಜನ್ಮಕ್ಕೆ ಬಂದು ಲಿಂಗೈಕ್ಯನಾಗಿರುವುದೇ ಚಂದ. ಶಾಸ್ತ್ರಂಗಳ ಓದಿ ಸಂಪಾದನೆಯ ಮಾಡಿ ಹೇಳಿ ಕೇಳುವ ಅಣ್ಣಗಳಿರಾ ಕೃತಯುಗದಲ್ಲಿ ಹನ್ನೆರಡು ಭಾರ ಜ್ಯೋತಿರ್ಲಿಂಗವನು ಬ್ರಹ್ಮರ್ಷಿಗಳು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿದ ಲಿಂಗವು ರವಿ ಶಶಿ ಆದಿಗಳು ಇರುವನಂತ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡವು ಕಾಣಿರೊ. ತ್ರೇತಾಯುಗದಲ್ಲಿ ಲಕ್ಷ ಲಿಂಗವನು ನಮ್ಮ ರವಿಕುಲ ರಘುರಾಮರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿದ ಲಿಂಗವು ರವಿ ಶಶಿಯಾದಿಗಳು ಇರುವನಕ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡಿದ್ದವು ಕಾಣಿರೋ. ದ್ವಾಪರಯುಗದಲ್ಲಿ ಸೋಮವಂಶಿಕರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿವ ಲಿಂಗವು ಗ್ರಾಮಕ್ಕೆ ಒಂದು ಕಲ್ಕೇಶ್ವರನಾಗಿ ರವಿ ಶಶಿಗಳಿರುವನಕ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡವು ಕಾಣಿರೋ. ಕಲಿಯುಗದಲ್ಲಿ ಹುಟ್ಟಿದ ಮನುಜರು ಕೃತ, ತ್ರೇತಾ, ದ್ವಾಪರ ಇವು ಮೂರು ಯುಗದಲ್ಲಿ ಬ್ರಹ್ಮ ಕ್ಷತ್ರಿಯರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿ, ಇದ್ದ ಲಿಂಗವನು ಅತಿಗಳೆದು ಇಷ್ಟಲಿಂಗಯೆಂದು ಅದಕ್ಕೆ ಪಾದ್ಯ ತೀರ್ಥ ಪ್ರಸಾದವನು ಅರ್ಪಿಸಿ, ಹುಟ್ಟಿದ ಮನುಜರೆಲ್ಲ ತಲೆತಲೆಗೊಂದು ಲಿಂಗವನು ಕಟ್ಟಿಕೊಂಡಿದ್ದರೇನಯ್ಯ, ಆ ಲಿಂಗಕ್ಕೆ ನಿಷ್ಕ್ರಿಯವಾಗಲಿಲ್ಲ. ಕಾರ್ಯಕ್ಕೆ ಬಾರದೆ ಅಕಾರ್ಯವಾಗಿ ಹೋಗಿತ್ತು ಕಾಣಿರೋ. ಅದು ಎಂತೆಂದರೆ : ಕೃತಯುಗದಲ್ಲಿ ಹುಟ್ಟಿದ ಮನುಜರು ಸುವರ್ಣಲಿಂಗವನು ಪೂಜೆಯ ಮಾಡಿಪ್ಪರು. ಆ ಸುವರ್ಣವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಯಿತ್ತು ಕಾಣಿರೋ. ತ್ರೇತಾಯುಗದಲ್ಲಿ ಹುಟ್ಟಿದ ಮನುಜರು ಕಾರಪತ್ರದ ಲಿಂಗದ ಪೂಜೆಯ ಮಾಡಲು, ಆ ಕಾರಪತ್ರದ ಲಿಂಗವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಗಿತ್ತು ಕಾಣಿರೋ. ದ್ವಾಪರಯುಗದಲ್ಲಿ ಹುಟ್ಟಿದ ಮನುಜರು ನಾಗತಾಮ್ರದ ಲಿಂಗವನು ಪೂಜೆಯ ಮಾಡಲು ಆ ನಾಗತಾಮ್ರದ ಲಿಂಗವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಯಿತ್ತು ಕಾಣಿರೋ. ಕಲಿಯುಗದಲ್ಲಿ ಹುಟ್ಟಿದ ಮನುಜರು ಕಲ್ಲುಲಿಂಗವನು ತಮ್ಮ ಕೈಲ್ಹಿಡಿದುಕೊಂಡು ಪಂಚಮುಖದ ಪರಮೇಶ್ವರದೇವರು ಎಮ್ಮ ಕರಸ್ಥಲಕ್ಕೆ ಬಂದನೆಂದು ಬಿಂಕವನು ಹೇಳುವ ಡೊಂಕುಮನುಜರು ಕಾಯ ಅಸುವಳಿದು ನೆಲಕ್ಕೆ ಬಿದ್ದು ಹೋಗುವಾಗ ಕೈಯಲ್ಲಿ ಕಲ್ಲುಲಿಂಗವು ಭೂಮಿ ಆಸ್ತಿಯನು ಭೂಮಿ ಕೂಡಿ ಹೋಗುವಾಗ ಒಂ ನಮಃಶಿವಾಯ ಎಂಬ ಮಂತ್ರವು ಮರೆತು ಹೋಯಿತು. ಅದ ಕಂಡು ನಗುತಿರ್ದಾತ ಸಿದ್ಧಮಲ್ಲನದಾತ ಮೇಗಣಗವಿಯ ಗುರುಸಿದ್ಧೇಶ್ವರಪ್ರಭುವೆ.
--------------
ಸಿದ್ಧಮಲ್ಲಪ್ಪ
ಗುಡಿಯೊಳಗಿರ್ದು ಗುಡಿಯ ನೇಣ ಕೊಯಿದಡೆ, ಗುಡಿಯ ದಡಿಗೆ ಬಿದ್ದು ಹಲ್ಲು ಹೋಹುದು, ನೋಡಾ, ಪೊಡವಿಗೀಶ್ವರನ ಗರ್ಭಾವಾಸದೊಳಗಿರ್ದು ನುಡಿವರು ಮತ್ತೊಂದು ದೈವವುಂಟೆಂದು. ತುಡುಗುಣಿನಾಯನು ಪಿಡಿತಂದು ಸಾಕಿದಡೆ ತನ್ನೊಡೆಯಂಗೆ ಬಗಳುವಂತೆ ಕಾಣಾ ಕೂಡಲಸಂಗಮದೇವಾ.
--------------
ಬಸವಣ್ಣ
ಇಚ್ಛಾ ಜ್ಞಾನ ಕ್ರಿಯಾ ಶಕ್ತಿ ನಿಮ್ಮಿಚ್ಛೆ ಎಂಬುದಂ ಬಲ್ಲೆ. ಸರ್ವವೂ ಶಿವನಾಜ್ಞೆಯೆಂಬುದಂ ಬಲ್ಲೆ. ಸರ್ವವೂ ಶಿವನಾಜ್ಞೆಯೆಂದು ನಿಮ್ಮಡಿಗಳು ಬೆಸಸಿದ ಸರ್ವಶ್ರುತಿಗಳಂ ಕೇಳಿ ಬಲ್ಲೆನು. ಈ ಹೀಂಗೆಂದರಿದು ಮನ ಮರಳಿ ಬಿದ್ದು ಗುರುಲಿಂಗಜಂಗಮಕ್ಕೆ ನಾನೂ ಮಾಡಿದೆನೆಂಬ ಅವಿಚಾರದ ಮನದ ಮರವೆಯ ನೋಡಾ. ಇದಿರ ಬೇಡಿದಡೆ ಕೊಡರೆಂಬ ಮನದ ಘಸಣಿಯ ನೋಡಾ. ಶಿವ ಶಿವ ಮಹಾದೇವ, ಮನೋನಾಥ ಮನೋಮಯ, ಎನ್ನ ಮನವ ಸಂತವ ಮಾಡಿ ನಿಮ್ಮಲ್ಲಿ ಬೆರಸು, ಬೆರಸದಿದ್ದಡೆ ನಿಮಗೆ ಮಹಾಗಣಂಗಳಾಣೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಆರು ನೆಲೆ ಮಂಟಪದ ಕೋಣೆಯಲ್ಲಿ ಆರು ಜ್ಯೋತಿಯ ಮುಟ್ಟಿಸಿ ಆ ಜ್ಯೋತಿಯ ಬೆಳಗಿನಲ್ಲಿ ಆರು ಲಿಂಗವ ನಿರ್ಮಿಸಿ ಆರು ಲಿಂಗದ ಪ್ರತುಮೆಯಲ್ಲಿ ಆರು ಹಂತದ ಸೋಪಾನದಲ್ಲಿ ಮಹಾ ನಿರ್ಮಳವೆಂಬ ದುರ್ಗಮಂ ನಿರ್ಮಿಸಿ ಆ ದುರ್ಗದಲ್ಲಿ ಅರಸಂಗೆ ಕಾಲಿಲ್ಲದಾಕೆಯ ಮದುವೆಯ ಮಾಡಿ ತೂತಿಲ್ಲದ ಭೋಗಕ್ಕೆ ಕೂಡಿ ಬಿಂದುವಿಲ್ಲದೆ ಮಕ್ಕಳಾದ ಪರಿಯ ನೋಡಾ. ತೊಟ್ಟಿಲಿಲ್ಲದೆ ಹಾಸಿ ಮಲಗಿಸಿ ನಿದ್ರೆಗೆಯ್ಸಿದ ಶರಣನಾಚರಣೆಯನೆಂತೆಂಬೆನು. ಇದ ಕಂಡು ನಡೆಯಲರಿಯದೆ, ತಮ್ಮ ಮನ ಬಂದಂತೆ ನಡೆವರು. ಶಿವಯೋಗಕ್ಕೆ ದೂರವಾದರು ನೋಡಾ. ಹೊನ್ನ ಕಟ್ಟಿ ವಿರಕ್ತನು ಬ್ಥಿಕ್ಷೆಯೆನಲಾಗದು. ಭಕ್ತನ ಗೃಹವೆಂದು ಜಂಗಮವು ಹೋದಲ್ಲಿ ಆ ಭಕ್ತನು ಎದ್ದು ನಮಸ್ಕರಿಸಿ ತನ್ನಲ್ಲಿರ್ದ ಪದಾರ್ಥವಂ ತಾನು ಸಹವಾಗಿ ಶಿವಾರ್ಪಣವ ಮಾಡ[ಬ]ಹುದಲ್ಲದೆ. ಇದಲ್ಲದೆ, ಜಂಗಮವ ಬೇರೆ ಕುಳ್ಳಿರಿಸಿ ಉಂಡನಾದರೆ ಅವನಿಗೆ ದೀಕ್ಷೆಯ ಕೊಟ್ಟ ಗುರುವಿಗೆ ತನ್ನ ಮಾರ್ಗವ ಬಿಟ್ಟು ಶಿವಭಕ್ತನಾದರೆ ಮೋಕ್ಷವಿಲ್ಲವಾಗಿ. ಕೋಳಿ ಒಂದು ಕುಟುಕ ಕಂಡರೆ ತನ್ನ ಮರಿಗೆ ತೋರದುಳಿವುದೆ? ಕಾಗೆ ಒಂದಗುಳ ಕಂಡರೆ ತನ್ನ ಬಳಗವ ಕರೆಯದುಳಿವುದೆ? ಶಿವಭಕ್ತನಾಗಿ ತನ್ನ ಲಿಂಗವ ಪೂಜಿಸಿ ಜಂಗಮವ ಮರೆದವನಾದರೆ ಸತ್ತ ದನವಿಗೆ ನರಿ ಹೋದಂತಾಯಿತ್ತು. ಆ ನರಿ ಹೋದ ನೆನಹಿನಲ್ಲಿ ನಾಯಿ ಹೋದಂತಾಯಿತ್ತು. ಇಷ್ಟಕ್ಕಿಂದ ಕರಕಷ್ಟವೆ ಶಿವಭಕ್ತರು? ಷಟ್ಚಕ್ರದ ಭಾವದಲ್ಲಿವೊಪ್ಪಿರುವ ಶಿವಶರಣರು ತಮ್ಮ ನಡೆ ನುಡಿಗಳ ಬಿಡದೆ ನಡೆವುದು. ಅದ ಕಂಡು ಕಣ್ದೆರೆದು ನೋಡಿದೆನಯ್ಯ. ಆವ ವರ್ತನೆಯಲ್ಲಿ ತಾನಿದ್ದರೇನು? ಆವ ಭಾವ ಹೇಂಗಿದ್ದರೇನು? ನಮ್ಮಾಚರಣೆ ನಮಗೆ ಶುದ್ಧ. ಗುರು ಕಲ್ಪಿತನಾದರು ಅವನು ಹಿಂದೆ ಸಂಬಂಧವಾದ ಕಾರಣ, ಅವನಿಗೆ ಬಂಧ ದೊರಕುವದಲ್ಲದೆ ನನಗೆ ದೊರಕದೆಂದು ತಾನು ನಿಶ್ಚೆಸಿದರೆ ತನಗೆ ದೊರಕಬಲ್ಲದೆ? ತಾನು ಪೂರ್ವದಲ್ಲಿ ತಾ ಪಡದುದು ತನಗೆ ತಪ್ಪುವದೆ? ಪ್ರಾಣಿಹಿಂಸೆಯ ಮಾಡುವಾತನಾದರೆಯು ಅವನಿಗೆ ಕಲ್ಪಿತವೇತಕ್ಕೆ? ಹಿಂದೆ ಅವನು ಶಿವನಪ್ಪಣೆವಿಡಿದು ಬಂದ ಕಾರಣ ಅವನಿಗೆ ಬಂದಿತಲ್ಲದೆ ಗಗನದ ಮಂಟಪದ ಮೇಲೆ ಊಧ್ರ್ವಮುಖದ ಗದ್ದುಗೆಯ ಮಾಡಿ ಮಹಾಪ್ರಕಾಶವೆಂಬ ಬೆಳಗಂ ತೋರಿ ಓಂಕಾರವೆಂಬ ಲಿಂಗವ ಮೂರ್ತಮಾಡಿಸಿ ಅದಕ್ಕೆ ಸದ್ಭಾವವೆಂಬ ಪುಷ್ಪವ ತಂದು ಜ್ಞಾನಪ್ರಕಾಶವೆಂಬ ಜ್ಯೋತಿಯಂ ಪೊತ್ತಿಸಿ ಸದ್ಭಕ್ತಿಯೆಂಬ ನೈವೇದ್ಯಮಂ ಮಾಡಿ ನಿರ್ಮಳವೆಂಬ ಪೂಜಾರಿಯಾಗಿರ್ಪನು. ಇದನರಿಯದೆ ತಮ್ಮ ಮನ ಬಂದಂತೆ ಇಪ್ಪವರ ಲಿಂಗಹೋದವನಾದರು ಅವನ ಕಣ್ಣಲ್ಲಿ ಕಂಡು ಅವನಷ್ಟಕ್ಕಲ್ಲದೆ ಅನ್ಯರ ಗೃಹವ ಬಿಡಲೇತಕ್ಕೇ? ಪಾಪವ ಮಾಡಿದನಾರು ಅವನ ಗೃಹಕ್ಕಲ್ಲದೆ ಅವನೊಂದಿಗೆ ಬೆರಸಿದವನಾದರು ಅವನಿಗೆ ಪಾಪ ಸಂಭವಿಸುವುದುಂಟೇ? ಇದ ಸಂಕಲ್ಪವ ಮಾಡಿ ಬಿಡಲೇತಕ್ಕೆ? ಒರ್ವಾನೊಬ್ಬನು ಭವಿಯ ಒಡನಾಡಲು ಅವನ ಪಾಪವು ಅವನಲ್ಲಿಪ್ಪುದಲ್ಲದೆ ಮಿಕ್ಕಿನ ಗೃಹಕ್ಕೆ ಸಂಬಂಧವೇನು? `ಮಾಡಿದವರನಲ್ಲದೆ ಮಿಕ್ಕಿನವರ ಸಂಕಲ್ಪವ ಮಾಡಲಾಗದು'ಯೆಂಬುದು ಗುರುವಚನ. ಹೆಣ್ಣು ಬಿಂದು ಸಂಬಂಧವಾಗಲು ಆ ಭೋಗಕ್ಕೆ ಶರಣನು ಅದನು ಮನದಲ್ಲಿ ಕಂಡು ಸಂತೋಷವಾಗಿಪ್ಪ. ಇಂತೀ ಭಾವಶುದ್ಧವುಳ್ಳಾತನು ಮತ್ರ್ಯಲೋಕಕ್ಕೆ ಮರಳಿ ಬಾರನೆಂಬುದು. ಶರಣ ಸಕಲವಿದ್ಯವ ಕಲಿತು ಫಲವೇನು? ನಿಂದ್ಯನೆ ದೊರಕೊಂಡಮೇಲೆ? ಹುಣ್ಣು ಹುಗಳು ಕೋಷ್ಠವಾಗಿರಲು, ಅವರ ಕಂಡು ಜರಿಯಲಾರದೆಂಬುದೆನ್ನ ಭಾಷೆ. ಇಂದ್ರಿಯಸುಖಕ್ಕೆ ಹೋಗಿ ಬಿದ್ದು ಶಿವಮಾಡಿದರಾಯಿತ್ತೆಂಬ ಅವಿಚಾರದ ನುಡಿಯ ಕೇಳಲಾಗದು. ತನ್ನ ಮನವು ಶುದ್ಧವಾದ ಮೇಲೆ, ಸಕಲ ಸುಖಂಗಳು ತನಗುಂಟಲ್ಲದೆ, ಜ್ಞಾನಿಗೆ ಕತ್ತಲೆಯಿಲ್ಲ. ಅಜ್ಞಾನಿಗೆ ಪಾಪವಿಲ್ಲ. ಇದನರಿದು, ಮುಂದುಗೊಂಡು ತಿರುಗುವ, ಅಣ್ಣಗಳ ಕಂಡು, ನಗುತಿರ್ಪರು ನಿಮ್ಮ ಶರಣರು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಅಂಕೋಲೆಯ ಬಿತ್ತು ಪೃಥ್ವಿಯ ಮೇಲೆ ಬಿದ್ದು, ಆ ಕಾಲಕ್ಕೆ ಬಂದು ನೈಯ್ದುವಂತೆ, ತನ್ನ ನಿಮಿತ್ತ ತಾನು ತನುವಿಡಿದಿರ್ದು ಸರ್ವಾಚಾರಸಂಪತ್ತೆಂಬ ಸೌಖ್ಯದಿಂ ವಿನೋದಿಸಿ ಲೀಲೆ ನಿಂದಲ್ಲಿ ಗುರುನಿರಂಜನ ಚನ್ನಬಸವಲಿಂಗ ತಾನೆಯಾಗಿ ನಿರ್ವಯಲಾದುದೇ ಒಂದಾಶ್ಚರ್ಯವು.
--------------
ದೇಶಿಕೇಂದ್ರ ಸಂಗನಬಸವಯ್ಯ
ಇನ್ನು ಆ ಶುಕ್ಲ ಸ್ತ್ರೀ ಪುರುಷರ ಸಂಯೋಗದಿಂದ ಮಾರುತ ನೂಂಕಲು ಚೈತನ್ಯ ಬೀಜವು ಆ ಶುಕ್ಲವು ಸ್ತ್ರೀಯ ಶೋಣಿತದಲ್ಲಿ ಬಿದ್ದು ಏಕೀಭೂತವಾಯಿತ್ತು ನೋಡಾ. ಇದಕ್ಕೆ ಈಶ್ವರ ಉವಾಚ : ``ಚೈತನ್ಯಂ ಬೀಜರೂಪಂ ಚ ಶುಕ್ಲಂ ರಕ್ತಂ ತಥಾ ಜಲಂ | ಏಕೀಭೂತಂ ಯಥಾ ಕಾಲೇ ತಥಾ ಕಾಲೇ ಪ್ರರೋಪತೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ತಾಮಸಗುಣಂಗಳಲ್ಲಿ ಬಿದ್ದು, ತ್ವರಿತದ ವಿಷಯದಲ್ಲಿ ಹರಿದಾಡಿ, ಭವಜಾಲದಲ್ಲಿ ಸತ್ತು ಹುಟ್ಟುವಾತ ಗುರುಸ್ಥಲಕ್ಕೆ ಸಲ್ಲ, ಚರಸ್ಥಲಕ್ಕೆ ಸಲ್ಲ, ಪರಸ್ಥಲಕ್ಕೆ ಸಲ್ಲ. ಗುರುಸ್ಥಲವೆಂದಡೆ ಘನಲಿಂಗಸ್ಥಲವು. ಚರಸ್ಥಲವೆಂದಡೆ ಅತೀತಸ್ಥಲವು. ಪರಸ್ಥಲವೆಂದಡೆ ವಿರಕ್ತಿಸ್ಥಲವು. ಇಂತೀ ತ್ರಿವಿಧಸ್ಥಲದ ನಿರ್ಣಯವ ಬಲ್ಲಾತನೆ ಗುರುಸ್ಥಲಕ್ಕೆ ಯೋಗ್ಯನೆಂಬೆನು ; ಚರಸ್ಥಲಕ್ಕೆ ಯೋಗ್ಯನೆಂಬೆನು ; ಪರಸ್ಥಲಕ್ಕೆ ಯೋಗ್ಯನೆಂಬೆನು. ಇಂತೀ ತ್ರಿವಿಧನಿರ್ಣಯವನರಿಯದೆ ತ್ರಿವಿಧಮಲದಲ್ಲಿ ಭಂಗಿತರಾದವರ ಎನಗೊಮ್ಮೆ ತೋರದಿರಯ್ಯಾ ಅಖಂಡೇಶ್ವರಾ ನಿಮ್ಮ ಧರ್ಮ.
--------------
ಷಣ್ಮುಖಸ್ವಾಮಿ
ನಿಲ್ಲಿಸಬಹುದಯ್ಯ ಒಂದೇ ಮಂತ್ರದಲ್ಲಿ ಕಾಳೋರಗನ, ನಿಲ್ಲಿಸಬಹುದಯ್ಯ ಒಂದೇ ಮಂತ್ರದಲ್ಲಿ ಹಾರುವ ಪಕ್ಷಿಯನು, ನಿಲ್ಲಿಸಬಹುದಯ್ಯ ಒಂದೇ ಮಂತ್ರದಲಿ ಹೆಬ್ಬುಲಿಯ, ನಿಲ್ಲಿಸಬಹುದಯ್ಯ ಒಂದೇ ಮಂತ್ರದಲ್ಲಿ ಹೊಯ್ವ ಹೆಮ್ಮಾರಿಯ, ನಿಲ್ಲಿಸಬಹುದಯ್ಯ ಒಂದೇ ಮಂತ್ರದಲ್ಲಿ ಬರುವ ಉರಿ ಬಾಣವ. ಇಂತಿವೆಲ್ಲವನು ಒಂದೇ ಮಂತ್ರದಲ್ಲಿ ನಿಲ್ಲಿಸಬಹುದು, ಲೋಭವೆಂಬ ಗ್ರಹಣ ಹಿಡಿದವರ ಏತರಿಂದಲೂ ನಿಲ್ಲಿಸಲಾಗದು. ಈ ಲೋಭಕ್ಕೆ ದಾರಿದ್ರ್ಯವೇ ಔಷಧವು. ಹೇಳಿದರೆ ಕೇಳರು, ತಾವು ತಿಳಿಯರು, ಶಾಸ್ತ್ರವ ನೋಡರು, ಭಕ್ತಿಯ ಹಿಡಿಯರು. ಇಂತಹ ಗೊಡ್ಡು ಮೂಳ ಹೊಲೆಯರಿಗೆ ಕರ್ಮವೆಂಬ ಶರದ್ಥಿಯಲ್ಲಿ ಬಿದ್ದು ಉರುಳಾಡುವುದೆ ಸತ್ಯವೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.
--------------
ಅಂಬಿಗರ ಚೌಡಯ್ಯ
ಕಪಿ ಕಳ್ಳ ಕುಡಿದು, ಕಡಲ ದಾಂಟುವೆನೆಂದು ಲಂಘಿಸಿ ನಡುನೀರಿನಲ್ಲಿ ಬಿದ್ದು, ಮೀನು ಮೊಸಳೆಗೆ ಆಹಾರವಾದಂತಾಯಿತಯ್ಯ ಎನ್ನ ಬಾಳು. ಆದಿಯಲ್ಲಿ ನಿನ್ನ ಗರ್ಭಾಂಬುದ್ಥಿಯಲ್ಲಿ ಜನಿಸಿ, ನಿನ್ನ ನೆನಹಿಲ್ಲದೆ, ಇಷ್ಟಲಿಂಗವನರಿಯದ ಪರಮ ಕಷ್ಟಜೀವಿಗಳ, ಪ್ರಾಣಲಿಂಗವನರಿಯದ ಪರಮಪಾತಕರ, ಭಾವಲಿಂಗವನರಿಯದ ಭವಕ್ಕೊಳಗಾದ ಹುಲುಮಾನವರ, ತಂದೆ-ತಾಯಿ ಬಂಧು-ಬಳಗವೆಂದು, ಭಾವಿಸಿದ ಬಲು ಪಾತಕವೆನ್ನನಂಡಲೆದು, ಅಮರ್ದಪ್ಪಿ ಅಗಲದ ಕಾರಣ, ನಿಂದ ಠಾವಿಂಗೆ ನೀರ್ದಳಿವರಯ್ಯ. ಕುಳಿತ ಠಾವಿಂಗೆ ಹೋಮವನಿಕ್ಕಿಸುವರಯ್ಯ. ನಾನು ಬಂದ ಬಟ್ಟೆಯೊಳಗೋರ್ವರು ಬಾರರಯ್ಯ. ಕಾಲನಾಳಿಂಗೆ ಕಾಲ್ದುಳಿಯಾದೆನಯ್ಯ. ಶುನಕ ಸೂಕರಾದಿಗಳ ಬಸಿರಲ್ಲಿ ಬರುವಂತೆ, ಮಾಡಿತಯ್ಯ ಎನ್ನ ಮಾಯೆ. ಒರ್ವರಿಗೆ ಹುಟ್ಟಿ ಮತ್ತೋರ್ವರಿಗೆ ಅಪ್ಪಾ ಎಂಬ ನಾಣ್ಣುಡಿಯ ದೃಷ್ಟವೆನಗಾಯಿತಯ್ಯ ಗುರುವೆ. ಈ ದೋಷಮಂ ಕರುಣದಿಂ ಕಳೆದು ಶುದ್ಧನಂ ಮಾಡಿ. ನಿನ್ನನೇ ಜನನೀ ಜನಕರೆಂಬ, ನಿನ್ನ ಭಕ್ತರು ಬಂಧು ಬಳಗವೆಂಬ ಸುಜ್ಞಾನಮಂ ಕೊಟ್ಟು, ಜಾಗ್ರತ್ಸ ್ವಪ್ನ ಸುಷುಪ್ತಿಯಲ್ಲಿ ನಿನ್ನತ್ತಲೆನ್ನ ಮುಖವ ಮಾಡಿ, ಅಕ್ಕರಿಂದ ರಕ್ಷಿಪುದಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಆ ಪರಶಿವನ ನಿಜಸ್ವರೂಪವೇ ಬ್ರಹ್ಮಾಂಡವಾಗಿ, ಪಿಂಡಾಂಡವಾಗಿ, ಕರಣಂಗಳಾಗಿ, ಕರ್ಮಂಗಳಾಗಿ, ಸೃಷ್ಟಿ ಸ್ಥಿತಿ ಲಯಂಗಳಾಗಿ, ನೋವು ಸಾವುಗಳಾಗಿ, ತಾನೇ ಇದ್ದದ್ದು, ಸರ್ವವು ತಾನೆಂಬುದು ತಾನೇ ಮರೆತು, ಶಿಶುವು ತಾನಾಡುವ ಆಟದಲ್ಲಿ, ಕಲ್ಲಿಗೆ ಕಾಲ ತಗಲಿಸಿಕೊಂಡು ಅಳುವಂತೆ, ವಿಷಯದಿಚ್ಛೆಯಲ್ಲಿ ನೊಂದು ಶೋಕಿಸುತ್ತಿರಲು, ಆ ಶಿಶುವಿಗೆ ತಂದಿ ಬಂದು ಕಣ್ಣೀರೊರಸಿ, ಆ ಕಲ್ಲತಗಲಿದ ಕಾಲ್ನೋವಿಗೆ ಔಷದ್ಥಿಯ ಮಾಡಿ, ತನ್ನ ಹೆಂಡತಿಯ ಕರೆದು, ಮಗನ ಸಮಾಧಾನಮಾಡೆಂದು ಹೇಳಲು, ಆ ತಾಯಿಯೆತ್ತಿಕೊಂಡು, ಕಣ್ಣು, ಮೂಗು, ಕಿವಿ, ಬಾಯಿ, ಮೈ ಧೂಳವನ್ನೆಲ್ಲಾ ತಾ ಹೊದ್ದ ಮೇಲ್‍ಸೆರಗಿಲೊರಸಿ ಮೊಲೆಯುಣಿಸಿ, ತೊಟ್ಟಿಲೊಳು ಹಾಸಿ ಮಲಗಿಸಿ ಹೊಚ್ಚಿ ಹೆಂಗ ಮಂಗಲ ನುಡಿ, ನಮ್ಮಪ್ಪ ಅರಸ ಛೀಮಾರಿ ಛೀ ಛೀ ಛೀ ಅಳುಳುಳುಳುಳುಳೆಂದು ಹಾಡುತ್ತಿರಲು, ಆ ಶಿಶುವು ಆ ಔಷಧದಿಂದೆ ನೋವು ಹೋಗಿ, ತಾಯಿಯ ಮೊಲೆಹಾಲಿನಿಂದೆ ಹಸಿವು ಅಡಗಿ, ಆ ಜೋಗುಳಹಾಡಿಗೆ ಸೊಂಪುದೋರಿ ಸುಮ್ಮನಾಗಿ, ತೊಟ್ಟಿಲ ತೂಗುವುದರೊಳಗೆ ಜೋಕಬಂದು, ಸುಖನಿದ್ರೆಯೊಳ್ ಮೈಮರೆದಿರಲು, ಮಾಯೆಸರ್ಪನು ಬಂದು ಕಚ್ಚಿ ಕಾಣಿಸಿಕೊಳ್ಳದೆ ಹೋಗಲು, ಆ ತಾಯಿ ತಂದಿ ಉಂಡು ಮಂಚದಮ್ಯಾಲೆ, ರತಿಸಂಭೋಗಸುಖನಿದ್ರೆಯಲ್ಲಿರೆ, ಮಾಳಿಗೆ ಬಿದ್ದು ಮರಣವಾಗಲು, ಆ ತಾಯಿ ತಂದಿಯು ಮಗ ಈ ಮೂವರು ಮಾಳಿಗೆ ಬಿದ್ದು ಮರಣವಾದರೆಂಬುದಾಯಿತ್ತಲ್ಲದೆ, ಆ ಶಿಶುವಿನ ಸಾವು ಆರು ಅರಿಯರು. ಇದರ ಹಾಂಗೆ ತನ್ನ ವಿಷಯದಿಚ್ಛೆಗೆ ಓಡ್ಯಾಡಿ ಕಾಲನ ಬಾಧೆಗೆ ಬಿದ್ದು ಭವದುಃಖದೊಳಗಿರುವ ನರರಿಗೆ ತಾನೇ ಗುರುವಾಗಿ ಬಂದು, ಸಾನಂದಸಿದ್ಧರಾಮನು ಹೀನ ನರಕಿಗಳ ತಗೆದಂತೆ, ಆ ಶಿಷ್ಯನ ಕೈಹಿಡಿದೆತ್ತಿ ಸರ್ವಕರಣಗಳ ಶುದ್ಧಗೊಳಿಸಿ, ಶಿಕ್ಷೋಪದೇಶವಮಾಡಿ, ತನ್ನ ಚಿತ್‍ಶಕ್ತಿಯ ಕರಸಂಜ್ಞೆ ನುಡಿನೋಟದಿಂದೆ ತೋರಿ ಹೇಳಿ ಕಾಣಿಸಿಕೊಡಲು, ಆ ಚಿತ್‍ಶಕ್ತಿ ಹತಿಗೊಂಡು ನಿತ್ಯತ್ವದ ನುಡಿ ಮನದ ಮೈಲಿಗೆಯ ತೊಳೆದು ತನ್ನ ಮೇಲುಮುಸುಕಿದ ಮಹಾಜ್ಞಾನದ ಬೆಳಗಿನಲ್ಲಿ ಸರ್ವ ಅವಯವಂಗಳ ಕಸರು ಕಳೆದು, ಆತ್ಮಜ್ಞಾನದೊಳಗೆ ಅಖಂಡಜ್ಞಾನದಲ್ಲಿರಿಸಿ, ಬ್ರಹ್ಮಜ್ಞಾನವನಾಚ್ಛಾದಿಸಿ, ನಿಜಜ್ಞಾನದಲ್ಲಿ ಲೋಲ್ಯಾಡಿ, ಅರುವಿನ ಹರುಷದಲ್ಲಿ ಹಿಂದಿಂದು ಹೇಯವಾಗೆ ಮುಂದಿಂದು ಹಿತವಚನ ಮುಂದೆ ಅಲ್ಲಲ್ಲಾ, ಸರ್ವವು ಸುಳ್ಳು ಸುಳ್ಳೆಂಬ ಮಹದರುವಿನ ಅನುಭವದ ಶಿವೋಹಂ ಶಿವೋಹಂ ಶಿವೋಹಂ, ಸೋಹಂ, ಸೋಹಂ, ಸೋಹಂ, ನಮೋ ನಮೋ, ಓಂ ಓಂ ಓಂ ಓಂ ಓಂ ಓಂ ಓಂ ಓಂ ಓಂ ಓಂ ಏಂ ಏಂ ಏಂ ಏಂ ಏಂ ಎಂಬ ಮಹಾನಾದದೊಳಗೆ ಆ ಕಾಲನ ಬಾಧೆ ಹೋಗಿ, ಭವದುಃಖ ಹಿಂಗಿ, ಚಿತ್ತಚಿನ್ಮಯ ಸವಿಗೊಂಡು ನಿತ್ಯ ತೃಪ್ತನಾಗಿ, ನಿಜಲೀಲಾನುಭವದ ಶಬ್ದಕ್ಕೆ ಮುಗ್ಧನಾಗಿ, ಆತ್ಮಜ್ಞಾನದ ನಲಿಗಿನೊಳಗೆ ಲೋಲಗೊಂಡು, ಎಚ್ಚರಡಗಿ ಅಚ್ಚಸುಖದಲ್ಲಿ ಸಮರಸವಾಗಿರಲು, ಸಾವು ಬಂದು ಸಾವು ಸತ್ತು ಸಾವು ಸಾವಾಗಲು ಆ ಶರಣನ ಅಂಗ, ಮನ, ಭಾವ, ಆತ್ಮಸಂಗವೊಂದಾಗಿರೆ ಶ್ವಾಸ ಸುಳುಹುಗಳೆಲ್ಲಾ ನಿಂದು, ಚಿತ್ತ ಸತ್ತು ಸ್ವಸ್ಥವಾಗಲು, ನಿಜಶರಣನ ಅರುವು ಲಿಂಗದಲ್ಲಿ ಪರವಶರಾಗಿಹರೆಂಬುದು ಬಲ್ಲರಲ್ಲದೆ ಅರುವು ಮರೆಗೊಂಡಿರ್ಪ ನಿರ್ಬೈಲ ಆರೂ ಅರಿಯರೋ. ಆ ಶರಣ ತನ್ನರುವು ತಾನರಿಯ, ಸತ್ತ ಸುದ್ದಿ ಸತ್ತವ ಅರಿಯ, ಬದುಕಿದವ ಬಲ್ಲ. ಇದೇ ನಿಜಮುಕ್ತಿ ; ಇದನರಿಯದೆ, ತತ್ವವನೋದಿ ಗಾಳಿಗೊದರುವ ಒಡಕುಮಡಕಿಯ ಸ್ವರವ ಕಡಿಮಿಯಾದ ನಾದವನು ಆಲಿಸಿ, ನಾಹಂಬ್ರಹ್ಮವ ನುಡಿದು, ಕೋಹಂಬ್ರಹ್ಮವ ಬೆರೆತು, ಮುಂದೆ ಸೋಹಂ ಬ್ರಹ್ಮವ ಹುಡುಕದೆ, ದಾಸೋಹಂಬ್ರಹ್ಮವ ಕೂಡದೆ, ನಮಗೆ ಸಾವು ಇಲ್ಲಾ, ನಮ್ಮ ದೇಹ ಬೈಲು ಮಾಡುವೆವೆಂದು ಅದು ತಪ್ಪಲಿಕ್ಕೆ ಪಂಚತತ್ವದೇಹವು, ಪಂಚತತ್ವಕ್ಕೆ ಕೂಡಿಸುವೆವು ಎಂಬುವರು. ಅದು ಹಾಂಗಿರಲು, ಆ ದೇಹ ಬಯಲುವಾದರೇನು ? ಆ ಬಯಲಿಗೆ ಸಾವು ಇಲ್ಲವು. ತಾವು ಮಾಡಿದರೆ ಆಗುವುದೆ ? ತಾನೇ ಆಗಲರಿಯದು. ಎಷ್ಟು ನಿಜ ತಿಳಿದರೇನೋ ? ಅಷ್ಟು ತಾವಾಗದೇ, ಭ್ರಷ್ಟರಾಗಿ ಹೋದರೋ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಇನ್ನಷ್ಟು ... -->