ಅಥವಾ

ಒಟ್ಟು 190 ಕಡೆಗಳಲ್ಲಿ , 57 ವಚನಕಾರರು , 142 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಥಮಪಾದದಲ್ಲಿ ಒಂಕಾರಕ್ಕೆ ನಕಾರ ಬೀಜಾಕ್ಷರ. ಆ ನಕಾರ ಉಭಯ ಕೂಡಿದ ಮತ್ತೆ ಮಕಾರ ಬೀಜಾಕ್ಷರ. ಇಂತೀ ತ್ರಿವಿಧಾಕ್ಷರ ಒಡಗೂಡಿ ಒಡಲಾದ ಮತ್ತೆ ಶಿಕಾರ ಬೀಜಾಕ್ಷರ. ಇಂತೀ ಶಿಕಾರ ಮೂರನೊಡಗೂಡಿ ನಾಲ್ಕೆಂಬಲ್ಲಿಗೆ ಯಕಾರ ಬೀಜಾಕ್ಷರ. ಇಂತೀ ಪಂಚಾಕ್ಷರಿಯ ಮೂಲಮಂತ್ರ ಸಂಬಂಧವಾಗಲಾಗಿ ಪ್ರಣಮದ ಬೀಜ. ಆ ಪ್ರಣಮವು `ಒಂ ಭರ್ಗೋ ದೇವಃ' ಜಗಕ್ಕೆ ಕರ್ತೃ ನೀನಲಾ ಎಂದು. ಸಾಮ ಅರ್ಥವಣ ಯಜಸ್ಸು ಋಕ್ಕು ಉತ್ತರ ಖಂಡನ. ಇಂತೀ ಪಂಚವೇದಂಗಳಲ್ಲಿ ಚತುರ್ವೇದಿಗಳಪ್ಪರಲ್ಲದೆ, ಐಕ್ಯೋತ್ತರ ಚಿಂತನೆಯನೀ ವಿಪ್ರಕುಲ ಮಿಥ್ಯವಂತರು ಬಲ್ಲರೆ ? ಕಣ್ಣಿನಲ್ಲಿ ನೋಡುತ್ತ ಕಣ್ಗಾಣೆನೆಂಬವನಂತೆ ಶಾಪಹತರಿಗೆಲ್ಲಕ್ಕೂ ಲಲಾಮಬ್ಥೀಮಸಂಗಮೇಶ್ವರಲಿಂಗವು ಅಸಾಧ್ಯ ನೋಡಾ.
--------------
ವೇದಮೂರ್ತಿ ಸಂಗಣ್ಣ
ವಾರಿದ್ಥಿಯ ಹೊಯ್ದು ಬೇರ್ಪಡಿಸಬಹುದೆ ? ಫಲದೊಳಗಣ ಬೀಜ ಬಲಿವುದಕ್ಕೆ ಮೊದಲೆ ತೆಗೆಯಬಹುದೆ ? ಮಹಾಘನವನರಿವುದಕ್ಕೆ ಮೊದಲೆ, ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನಹ ಪರಿ ಇನ್ನೆಂತೊ ? ಇಕ್ಷುದಂಡ ಬಲಿವುದಕ್ಕೆ ಮೊದಲೆ ತನಿರಸ ಬಹುದೆ ? ನಾನೆಂಬುದಕ್ಕೆ ಸ್ಥಾಣು, ಅಹುದಕ್ಕೆ ಭಾವದ ಬಲಿಕೆ ಇನ್ನಾವುದು, ನಿಃಕಳಂಕ ಮಲ್ಲಿಕಾರ್ಜುನಾ ?
--------------
ಮೋಳಿಗೆ ಮಾರಯ್ಯ
ಆತ್ಮಂಗೆ ಕಾಯವೆ ರೂಪು. ಆ ಕಾಯಕ್ಕೆ ಆತ್ಮನೆ ಹಾಹೆ. ಆ ಹಾಹೆಗೆ ಅರಿವೇ ಬೀಜ. ಆ ಬೀಜಕ್ಕೆ ಗೋಪತಿನಾಥ ವಿಶ್ವೇಶ್ವರಲಿಂಗವೆ ನಿರ್ವೀಜ.
--------------
ತುರುಗಾಹಿ ರಾಮಣ್ಣ
ನಿರ್ಬಯಲು ಮಹಾಬಯಲು ಚಿದ್‍ಬಯಲು ಬಯಲಾತ್ಮ ಸೂರ್ಯ ಚಂದ್ರ ತಾರಕ ಕಠೋರ ವಾಯು ಆಕಾಶ ಅಗ್ನಿ ಅಪ್ಪು ಪೃಥ್ವಿ ಬೀಜ ಅನ್ನರಸ ವೀರ್ಯ ಪಿಂಡ ಪ್ರಾಣ ಮನ ಅಸಿ ಉತ್ಪತ್ತಿ ಸ್ಥಿತಿ ಲಯ ಅಕ್ಷರ ಮೊದಲಾದ ಬ್ರಹ್ಮಾಂಡ ನೀನಾದುದಕ್ಕೆ, ನಿನ್ನ ನೀನರಿವುದಕ್ಕೆ ನೀನೇ ನಾನಾದುದೇ ಇದೇ ಆದಿಯಲಾ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಅಯ್ಯ ಪಂಚತತ್ವಂಗಳ ಪಡೆವ ತತ್ವ ಪ್ರತ್ಯಕ್ಷವಾಗದ ಮುನ್ನ, ಪದ್ಮಜಾಂಡವ ಧರಿಸಿಪ್ಪ ಕಮಠ-ದಿಕ್ಕರಿಗಳಿಲ್ಲದ ಮುನ್ನ, ನಿರ್ಮಲಾಕಾಶವೇ ಸಾಕಾರವಾಗಿ ನಿರಂಜನವೆಂಬ ಪ್ರಣವವಾಯಿತ್ತಯ್ಯ ಆ ನಿರಂಜನ ಪ್ರಣವವೆಂಬ ಮರುಜೇವಣಿಯ ಬೀಜ, ಹ್ರೂಂಕಾರ ಮಂಟಪದಲ್ಲಿ ಮೂರ್ತಿಗೊಂಡಿತಯ್ಯ. ಆ ನಿರಂಜನ ಪ್ರಣವವೆಂಬ ಮರುಜೇವಣಿಯ ಬೀಜ, ತನ್ನ ನಿರಂಜನ ಶಕ್ತಿಯ ನಸುನೆನಹಿಂದ ಹಂಕಾರ ಚಕ್ಷುವೆಂಬ ಕುಹರಿಯಲ್ಲಿ ಶುದ್ಧಪ್ರಸಾದವೆಂಬ ಮೊಳೆದೋರಿತ್ತಯ್ಯ. ಆ ಶುದ್ಧ ಪ್ರಸಾದವೆಂಬ ಮೊಳೆ ತನ್ನ ಶೂನ್ಯಶಕ್ತಿಯ ಸೆಜ್ಜೆಯಿಂದ ಕರ್ಣಿಕಾಪ್ರಕಾಶ ಪಂಚನಾದವನುಳ್ಳ ಷೋಡಶ ಕಲಾಪುಂಜರಂಜಿತವಪ್ಪ ಹನ್ನೊಂದನೂರುದಳದ ಪತ್ರದಲ್ಲಿ ಪ್ರಣವಚಿತ್ರವೊಪ್ಪಿತ್ತಿಪ್ಪ ಹ್ರೀಂಕಾರ ಸಿಂಹಾಸನದ ಮೇಲೆ ಸಿದ್ಧಪ್ರಸಾದವೆಂಬ ಎಳವೆರೆ ತಳಿರಾಯಿತ್ತಯ್ಯ. ಆ ಸಿದ್ಧಪ್ರಸಾದವೆಂಬ ಎಳವೆರೆ ತನ್ನ ಶಾಂತಶಕ್ತಿಯ ಚಲನೆಯಿಂದ ಮೂರುಬಟ್ಟೆಯ ಮೇಲಿಪ್ಪ ಎರಡುಮಂಟಪದ ಮಧ್ಯದಲ್ಲಿ ಪ್ರಸಿದ್ಧಪ್ರಸಾದವೆಂಬ ಮಹಾವೃಕ್ಷ ಬೀಗಿ ಬೆಳೆಯಿತ್ತಯ್ಯ. ಆ ಪ್ರಸಿದ್ಧಪ್ರಸಾದವೆಂಬ ಮಹಾವೃಕ್ಷ ತನ್ನ ಚಿಚ್ಛಕ್ತಿಯ ಲೀಲಾವಿನೋದದಿಂದ ಪಂಚಶಕ್ತಿಗಳೆಂಬ ನಾಲ್ಕೊಂದು ಹೂವಾಯಿತು. ಆ ಹೂಗಳ ಮಹಾಕೂಟದಿಂದ ಪಂಚಲಿಂಗಗಳೆಂಬ ಪಂಚಪ್ರಕಾರದ ಮೂರೆರಡು ಹಣ್ಣಾಯಿತು. ಆ ಹಣ್ಣುಗಳ ಆದ್ಯಂತಮಂ ಪಿಡಿದು ಸದ್ಯೋನ್ಮುಕ್ತಿಯಾಗಬೇಕೆಂದು ಸದಾಕಾಲದಲ್ಲಿ ಬಯಸುತ್ತಿಪ್ಪ ಮಹಾಶಿವಶರಣನು ತಿಳಿದು ನೋಡಿ ಕಂಡು ಆರುನೆಲೆಯ ನಿಚ್ಚಣಿಗೆಯ ಆ ತರುಲತೆಗೆ ಸೇರಿಸಿ ಜ್ಞಾನ ಕ್ರೀಗಳೆಂಬ ದೃಢದಿಂದೇರಿ ನಾಲ್ಕೆಲೆಯ ಪೀತವರ್ಣದ ಹಣ್ಣ ಸುಚಿತ್ತವೆಂಬ ಹಸ್ತದಲ್ಲಿ ಪಿಡಿದು ಆರೆಲೆಯ ನೀಲವರ್ಣದ ಹಣ್ಣ ಸುಬುದ್ಧಿಯೆಂಬ ಹಸ್ತದಲ್ಲಿ ಪಿಡಿದು ಹತ್ತೆಲೆಯ ಸ್ಫಟಿಕವರ್ಣದ ಹಣ್ಣ ನಿರಹಂಕಾರವೆಂಬ ಹಸ್ತದಲ್ಲಿ ಪಿಡಿದು ಹನ್ನೆರೆಡೆಲೆಯ ಸುವರ್ಣವರ್ಣದ ಹಣ್ಣ ಸುಮನನೆಂಬ ಹಸ್ತದಲ್ಲಿ ಪಿಡಿದು ಹದಿನಾರೆಲೆಯ ಮಿಂಚುವರ್ಣದ ಹಣ್ಣ ಸುಜ್ಞಾನವೆಂಬ ಹಸ್ತದಲ್ಲಿ ಪಿಡಿದು ಆಸನಸ್ಥಿರವಾಗಿ ಕಣ್ಮುಚ್ಚಿ ಜ್ಞಾನಚಕ್ಷುವಿನಿಂ ನಿಟ್ಟಿಸಿ ಕಟ್ಟಕ್ಕರಿಂ ನೋಡಿ ರೇಚಕ ಪೂರಕ ಕುಂಭಕಂಗೈದು ಪೆಣ್ದುಂಬಿಯ ನಾದ ವೀಣಾನಾದ ಘಂಟನಾದ ಭೇರೀನಾದ ಮೇಘನಾದ ಪ್ರಣವನಾದ ದಿವ್ಯನಾದ ಸಿಂಹನಾದಂಗಳಂ ಕೇಳಿ ಹರುಷಂಗೊಂಡು ಆ ಫಲಂಗಳಂ ಮನವೆಂಬ ಹಸ್ತದಿಂ ಮಡಿಲುದುಂಬಿ ಮಾಯಾಕೋಲಾಹಲನಾಗಿ ಪಂಚಭೂತಂಗಳ ಸಂಚವ ಕೆಡಿಸಿ ದಶವಾಯುಗಳ ಹೆಸಗೆಡಿಸಿ ಅಷ್ಟಮದಂಗಳ ಹಿಟ್ಟುಗುಟ್ಟಿ ಅಂತಃಕರಣಂಗಳ ಚಿಂತೆಗೊಳಗುಮಾಡಿ ಮೂಲಹಂಕಾರವ ಮುಂದುಗೆಡಿಸಿ ಸಪ್ತವ್ಯಸನಂಗಳ ತೊತ್ತಳದುಳಿದು ಜ್ಞಾನೇಂದ್ರಿಯಂಗಳ ನೆನಹುಗೆಡಿಸಿ ಕರ್ಮೇಂದ್ರಿಯಂಗಳ ಕಾಲಮುರಿದು ತನ್ಮಾತ್ರೆಯಂಗಳ ತೋಳಕೊಯ್ದು, ಅರಿಷಡ್ವರ್ಗಂಗಳ ಕೊರಳನರಿದು ಸ್ಫಟಿಕದ ಪುತ್ಥಳಿಯಂತೆ ನಿಜಸ್ವರೂಪಮಾಗಿ- ಎರಡೆಸಳ ಕಮಲಕರ್ಣಿಕಾಗ್ರದಲ್ಲಿಪ್ಪ ಪರಬ್ರಹ್ಮದ ಶ್ವೇತಮಾಣಿಕ್ಯವರ್ಣದ ದ್ವಿಪಾದಮಂ ಸುಜ್ಞಾನವೆಂಬ ಹಸ್ತದಲ್ಲಿ ಪಿಡಿದು ಓಂಕಾರವೆಂಬ ಮಂತ್ರದಿಂದ ಸಂತೈಸಿ ನೀರ ನೀರು ಕೂಡಿದಂತೆ ಪರಬ್ರಹ್ಮವನೊಡಗೂಡಿ ಆ ಪರಬ್ರಹ್ಮವೆ ತಾನೆಯಾಗಿ ಬ್ರಹ್ಮರಂಧ್ರವೆಂಬ ಶಾಂಭವಲೋಕದಲ್ಲಿಪ್ಪ ನಿಷ್ಕಲ ಪರಬ್ರಹ್ಮದ ನಿರಾಕಾರಪಾದಮಂ ನಿರ್ಭಾವವೆಂಬ ಹಸ್ತದಿಂ ಪಿಡಿದು ಪಂಚಪ್ರಸಾದವೆಂಬ ಮಂತ್ರದಿಂ ಸಂತೈಸಿ ಕ್ಷೀರಕ್ಷೀರವ ಕೂಡಿದಂತೆ ನಿಷ್ಕಲಬ್ರಹ್ಮವನೊಡಗೂಡಿ ಆ ನಿಷ್ಕಲಬ್ರಹ್ಮವೇ ತಾನೆಯಾಗಿ ಮೂರುಮಂಟಪದ ಮಧ್ಯದ ಕುಸುಮಪೀಠದಲ್ಲಿಪ್ಪ ಶೂನ್ಯಬ್ರಹ್ಮದ ಶೂನ್ಯಪಾದಮಂ ನಿಷ್ಕಲವೆಂಬ ಹಸ್ತದಿಂ ಪಿಡಿದು ಕ್ಷಕಾರವೆಂಬ ಮಂತ್ರದಿಂ ಸಂತೈಸಿ ಘೃತಘೃತವ ಕೂಡಿದಂತೆ ಶೂನ್ಯಬ್ರಹ್ಮವನೊಡಗೂಡಿ ಆ ಶೂನ್ಯಬ್ರಹ್ಮವೇ ತಾನೆಯಾಗಿ- `ನಿಶಬ್ದಂ ಬ್ರಹ್ಮ ಉಚ್ಯತೇ' ಎಂಬ ಒಂಬತ್ತು ನೆಲೆಯ ಮಂಟಪದೊಳಿಪ್ಪ ನಿರಂಜನಬ್ರಹ್ಮದ ನಿರಂಜನಪಾದಮಂ ಶೂನ್ಯವೆಂಬ ಹಸ್ತದಿಂ ಪಿಡಿದು ಹ್ರೂಂಕಾರವೆಂಬ ಮಂತ್ರದಿಂ ಸಂತೈಸಿ ಬಯಲ ಬಯಲು ಬೆರಸಿದಂತೆ ನಿರಂಜನಬ್ರಹ್ಮವೇ ತಾನೆಯಾಗಿ- ಮಹಾಗುರು ಸಿದ್ಧಲಿಂಗಪ್ರಭುವಿನ ಗರ್ಭಾಬ್ಧಿಯಲ್ಲಿ ಜನಿಸಿದ ಬಾಲಕಿಯಯ್ಯ ನಾನು. ಎನ್ನ ಹೃದಯಕಮಲೆಂಟು ಮಂಟಪದ ಚತುಷ್ಪಟ್ಟಿಕಾ ಮಧ್ಯದ ಪದ್ಮಪೀಠದಲ್ಲಿ ಎನ್ನ ತಂದೆ ಸುಸ್ಥಿರವಾಗಿ ಎನಗೆ ಷಟ್ಸ ್ಥಲಮಾರ್ಗ-ಪುರಾತರ ವಚನಾನುಭಾವ- ಭಕ್ತಿ ಜ್ಞಾನ ವೈರಾಗ್ಯವೆಂಬ ಜೇನುಸಕ್ಕರೆ ಪರಮಾಮೃತವ ತಣಿಯಲುಣಿಸಿದನಯ್ಯ. ಆ ಜೇನುಸಕ್ಕರೆ ಪರಮಾಮೃತವ ತಣಿಯಲುಣಿಸಲೊಡನೆ ಎನ್ನ ಬಾಲತ್ವಂ ಕೆಟ್ಟು ಯೌವನಂ ಬಳೆದು ಬೆಡಗು ಕುಡಿವರಿದು ಮೀಟು ಜವ್ವನೆಯಾದೆನಯ್ಯ ನಾನು. ಎನಗೆ ನಿಜಮೋಕ್ಷವೆಂಬ ಮನ್ಮಥವಿಕಾರವು ಎನ್ನನಂಡಲೆದು ಆಳ್ದು ನಿಂದಲ್ಲಿ ನಿಲಲೀಸದಯ್ಯ. ಅನಂತಕೋಟಿ ಸೋಮಸೂರ್ಯ ಪ್ರಕಾಶವನುಳ್ಳ ಪರಂಜ್ಯೋತಿಲಿಂಗವೆ ಎನಗೆ ಶಿವಾನಂದ ಭಕ್ತಿಯೆಂಬ ತಾಲಿಬಂದಿಯ ಕಟ್ಟು ಸುಮಂತ್ರವಲ್ಲದೆ ಕುಮಂತ್ರವ ನುಡಿಯೆನೆಂಬ ಕಂಠಮಾಲೆಯಂ ಧರಿಸು. ಅರ್ಪಿತವಲ್ಲದೆ ಅನರ್ಪಿತವ ಪರಿಮಳಿಸೆನೆಂಬ ಮೌಕ್ತಿಕದ ಕಟ್ಟಾಣಿ ಮೂಗುತಿಯನಿಕ್ಕು. ಸುಶಬ್ಧವಲ್ಲದೆ ಅಪಶಬ್ದವ ಕೇಳೆನೆಂಬ ರತ್ನದ ಕರ್ಣಾಭರಣಂಗಳಂ ತೊಡಿಸು. ಶರಣತ್ವವನಲ್ಲದೆ ಜೀವತ್ವವನೊಲ್ಲೆನೆಂಬ ತ್ರಿಪುಂಡ್ರಮಂ ಧರಿಸು. ಕ್ರೀಯಲ್ಲದೆ ನಿಷ್ಕಿ ್ರೀಯ ಮಾಡೆನೆಂಬ ಮೌಕ್ತಿಕದ ಬಟ್ಟನಿಕ್ಕು. ನಿಮ್ಮವರಿಗಲ್ಲದೆ ಅನ್ಯರಿಗೆರಗೆನೆಂಬ ಕನಕಲತೆಯ ಬಾಸಿಂಗಮಂ ಕಟ್ಟು. ಸಮ್ಯಜ್ಞಾನವಲ್ಲದ ಅಜ್ಞಾನವ ಹೊದ್ದೆನೆಂಬ ನವ್ಯದುಕೂಲವನುಡಿಸು. ಲಿಂಗಾಣತಿಯಿಂದ ಬಂದುದನಲ್ಲದೆ ಅಂಗಗತಿಯಿಂದ ಬಂದುದಂ ಮುಟ್ಟೆನೆಂಬ ರತ್ನದ ಕಂಕಣವಂ ಕಟ್ಟು. ಶರಣಸಂಗವಲ್ಲದೆ ಪರಸಂಗಮಂ ಮಾಡೆನೆಂಬ ಪರಿಮಳವಂ ಲೇಪಿಸು. ಶಿವಪದವಲ್ಲದೆ ಚತುರ್ವಿಧಪದಂಗಳ ಬಯಸೆನೆಂಬ ಹಾಲು ತುಪ್ಪಮಂ ಕುಡಿಸು. ಪ್ರಸಾದವಲ್ಲದೆ ಬ್ಥಿನ್ನರುಚಿಯಂ ನೆನೆಯೆನೆಂಬ ತಾಂಬೂಲವನಿತ್ತು ಸಿಂಗರಂಗೆಯ್ಯ. ನಿನ್ನ ಕರುಣಪ್ರಸಾದವೆಂಬ ವಸವಂತ ಚಪ್ಪರದಲ್ಲಿ ಪ್ರಮಥಗಣಂಗಳ ಮಧ್ಯದಲ್ಲಿ ಎನ್ನ ಮದುವೆಯಾಗಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ದ್ವೆ ೈತಿಯಲ್ಲ ಅದ್ವೆ ೈತಿಯಲ್ಲ ಕಾಣಿಭೋ ಶರಣ. ದ್ವೆ ೈತಾದ್ವೆ ೈತವೆಂಬ ಉಭಯ ಕಲ್ಪನೆಯನಳಿದುಳಿದ ವೀರಮಾಹೇಶ್ವರನು ಪರಶಿವನ ನಿರುತ ಸ್ವಯಾನಂದಸುಖಿ. ಪರಶಿವನ ಪರಮ ತೇಜದಾದಿ ಬೀಜ. ಪರಶಿವನ ಪರಮಜ್ಞಾನಪ್ರಕಾಶಮಯ ಪರಮಾನಂದದ, ನಿರುಪಮಲಿಂಗದ ಪ್ರಭಾಕಿರಣವೇ ತಾನಾದ ಶರಣನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ತೊಗಲ ಕೈಯಲ್ಲಿ ಶಿಲೆಯ ಲಿಂಗವ ಹಿಡಿದು, ಮಣ್ಣ ಪರಿಯಾಣದಲ್ಲಿ ಓಗರವನಿಕ್ಕಿ, ಲಿಂಗನೈವೇದ್ಯವ ತೋರಿದಡೆ, ಓಗರ ಸವೆದುದಿಲ್ಲ, ನೈವೇದ್ಯದ ರುಚಿಯನರಿದುದಿಲ್ಲ. ಒಳಗು ಶುದ್ಭವಿಲ್ಲದೆ ಮುಟ್ಟಿ ಅರ್ಪಿತವೆಂದಡೆ, ಮೆಚ್ಚುವರೆ ಪ್ರಾಣಲಿಂಗಿಸಂಬಂದ್ಥಿಗಳು. ಉಂಡವನು ಉಂಡಂತೆ ತೇಗುವ ಸಂದಳಿದು, ದ್ವಂದ್ವ ಹಿಂಗಿ ನಿಜವಾರೆಂಬುದ ವಿಚಾರಿಸಿ ಕೊಡುವುದಕ್ಕೆ ಮೊದಲೆ, ಕೊಂಡವರಾರು ಎಂಬುದ ಭಾವಿಸುವುದಕ್ಕೆ ಮೊದಲೆ, ಭಾವನೆಗೆ ಬಂದವರಾರೆಂದು ವಿಚಾರಿಸಿ, ಬೀಜ ನೆರೆ ಬಲಿದು ಪುನರಪಿ ಬಪ್ಪಂತೆ ಲಿಂಗ ತಾನಾಗಿ, ಸಂದೇಹವಿಲ್ಲದೆ ಸೋಂಕುವುದಕ್ಕೆ ಮುನ್ನವೆ ಅರ್ಪಿತ ನಿಂದಾಯಿತ್ತಾಗಿ, ನಿಃಕಳಂಕ ಮಲ್ಲಿಕಾರ್ಜುನನಲ್ಲಿ ಪ್ರಾಣಲಿಂಗ ಸಮರ್ಪಣ.
--------------
ಮೋಳಿಗೆ ಮಾರಯ್ಯ
ಹಾವು ಹುಲಿ ಕಳ್ಳರ ಭಯವೆಂದು ಹೇಳಿದವರ ಮೇಲೆ ನೋವುಂಟೆ? ನೋವಾದಡಾಗಲಿ, ಇದರಿಂದ ಎನಗೆ ಕೇಡಿಲ್ಲ. ಕಂಡು ಸುಮ್ಮನಿದ್ದಡೆ, ಆ ಗುರುವಿನ ಸುಖದುಃಖ ಎನ್ನದಾಗಿ, ಸಮಯಕ್ಕಂಜಿದಡೆ ಎನ್ನ ಮಾಡುವ ಮಾಟ ಎನ್ನ ಕೇಡು, ಎನ್ನ ಅರಿವು ಮರವೆಯಲ್ಲಿದ್ದಡೆ, ಭವದುಃಖಕ್ಕೆ ಬೀಜ. ಎನ್ನ ಕೈಯಲ್ಲಿ ಎನ್ನಂಗವ ತೊಳೆಯಬೇಕಲ್ಲದೆ ಅನ್ಯರಿಗೆ ಹೇಳಲೇಕಯ್ಯಾ? ಇಂತೀ ಮೂರರೊದಗ ನಾ ಮಾಡಿ ಹಾನಿಯ ಪಡೆವುದಕ್ಕೇನು? ಅಂದಿಗೇನಾದಡಾಗಲಿ ಇಂದಿಗೆ ಶುದ್ಧ, ಸದಾಶಿವಮೂರ್ತಿಲಿಂಗದಲ್ಲಿ.
--------------
ಅರಿವಿನ ಮಾರಿತಂದೆ
ದ್ವಂದ್ವವು ಜೀವನ ಕಾಯಕ್ಕೆ ಒಂದಲ್ಲ ಅನಂತ ಆಸ್ಕರ. ಚಂದ್ರಾರ್ಕ ಹುಟ್ಟು ಹೊಂದು ಹೋಹುದು, ಬಪ್ಪುದು ; ಒಂದನೆ ತಿಳಿವುದು ಸದ್ಬಿಂದು ಬೀಜ ಸಹಜವ. ಮುಂದಣ ಸ್ಥಿತಿ ಹಿಂದಣ ಭವ. ಅಂದಿಗಂದಿಗೆ ಕಾಬುದು ಅಗಣಿತಗಣಿತ ಕಾಣಾ ಎಲೆ ನಮ್ಮ ಕೂಡಲಚೆನ್ನಸಂಗಮದೇವಯ್ಯ.
--------------
ವೀರಸಂಗಯ್ಯ
ನೆಲನಿಲ್ಲದ ಬಯಲಭೂಮಿಯಲ್ಲಿ ನಿರ್ಬಯಲ ಬೀಜ ನೋಡಾ. ಅದರಂಕುರ ಮೂರು, ಫಲವಿಪ್ಪತ್ತೆ ೈದು ನೋಡಾ. ಪ್ರಥಮಾಂಕುರ ಶಿವ, ದ್ವಿತೀಯಾಂಕುರ ಸದಾಶಿವ, ಮೂರನೆ ಅಂಕುರ ಮಹೇಶ್ವರ. ಫಲವಿಪ್ಪತ್ತೆ ೈದು, ಪಂಚವಿಂಶತಿ ಲೀಲಾವಿಗ್ರಹ ನೋಡಾ. ಫಲವಿಪ್ಪತ್ತೆ ೈದು, ಅಂಕುರ ಮೂರನೊಳಕೊಂಡು ನಿಂದ ನಿರ್ವಯಲ ಪ್ರಾಣಲಿಂಗವೆಂದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅನುಭಾವವಿಲ್ಲದ ಕ್ರಿಯೆ ಆಚಾರಕ್ಕೆ ದೂರ. ಅನುಭಾವವಿಲ್ಲದ ಜ್ಞಾನ ವಿಚಾರಕ್ಕೆ ದೂರ. ಅನುಭಾವವಿಲ್ಲದ ಭಕ್ತಿ ಅರುವಿಂಗೆ ದೂರ. ಅನುಭಾವವಿಲ್ಲದ ವೈರಾಗ್ಯ ಅಗಮ್ಯಕ್ಕೆ ದೂರ. ಗುರುನಿರಂಜನ ಚನ್ನಬಸವಲಿಂಗವನರಿವರೆ ಅನುಭಾವವೇ ಬೀಜ ಕಾಣಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಅಂಗ ಮನ ಪ್ರಾಣಂಗಳೆಂಬಲ್ಲಿ ಘನಲಿಂಗವಿಪ್ಪೆಡೆ ಯಾವುದು ? ಪಂಕಕ್ಕೆ ಜಲ ಒಳಗೋ, ಹೊರಗೋ ? ಅಂಗಕ್ಕೂ ಮನಸ್ಸಿಂಗೂ ಆತ್ಮಂಗೂ ಲಿಂಗವ ಹಿಂಗಿ ಅರಿವ ಠಾವಿನ್ನಾವುದು ? ಬೀಜದೊಳಗಾದ ವೃಕ್ಷ, ವೃಕ್ಷದೊಳಗಾದ ಬೀಜ ಈ ಉಭಯವ ಮೀರಿ ಬೆಳೆವ ಠಾವಿನ್ನಾವುದೊ ? ಮೊನೆಗೂಡಿಯೆ ಗ್ರಹಿಸುವ ಅಲಗಿನ ತೆರದಂತೆ ಅದು ಲಿಂಗಾಂಗಸಂಯೋಗಸಂಬಂಧ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಹುಟ್ಟು ಹೊಂದೆಂಬುದಿಲ್ಲದ ದೇವಾ, ನಿಮ್ಮಿಂದ ನೀವೆ ಶೂನ್ಯದಲ್ಲಿ ನಿಂದು ಸ್ವಯಂಭುವಾದಿರಲ್ಲ. ಬೀಜ ವೃಕ್ಷದಂತೆ ಸಾಕಾರ ನಿರಾಕಾರವು ನೀವೆಯಾದಿರಲ್ಲ. ಸಕಲವೆಲ್ಲಕ್ಕೆ ಮೂಲಿಗರಾದಿರಲ್ಲ. ನಿಮ್ಮ ನಿಜವ ನೀವೇ ಅರಿವುತ್ತಿರ್ದಿರಲ್ಲ. ನಿಮ್ಮ ಮಹಿಮೆಯ ನೀವೇ ಬಲ್ಲಿರಿ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಕೊಟ್ಟುಕೊಂಡೆನೆಂಬುದೊಂದುಳ್ಳರೆ ಒಂದಕ್ಕೆ ಭಂಗ, ಕೊಡುಕೊಳ್ಳಿಯಳಿದುಳಿದರೆ ಎರಡಕ್ಕೆ ಬಂಗ. ಒಂದು ಭಂಗ ಭವಕ್ಕೆ ಬೀಜ, ಎರಡು ಭಂಗ ಲೀಲೆಗೇಡು, ಒಂದೆರಡರಿಯದೆ ಅಂದಂದಿಗಿತ್ತಡೆ ಅವಧಾನಿಸಿಕೊ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಅಗ ಲಿಂಗವೆಂಬನ್ನಕ್ಕ ಯೋಗಪೂಜೆ ಪುಂಣ್ಯಕ್ಕೆ ಬೀಜ. ಆತ್ಮನನರಿದೆಹೆನೆಂಬನ್ನಕ್ಕ ಉಭಯದೊಡಲಾಯಿತ್ತು. ಉಭಯದ ಗಿಡಬಜೆಯಲ್ಲಿ ಸಿಲುಕದೆ ನಿಂದ ನಿಜಗುಣಯೋಗಿ. || 1 ||
--------------
ನಿಜಗುಣಯೋಗಿ
ಇನ್ನಷ್ಟು ... -->