ಬೆಟ್ಟದ ಮೇಲಣ ಗುಂಡು, ಬೆಟ್ಟವ ನುಂಗಿತ್ತು.
ಸೃಷ್ಟಿಯ ಮೇಲಣ ಜಗ, ಪೃಥ್ವಿಯ ನುಂಗಿತ್ತು.
ಹಸುವಿನ ಗರ್ಭದ ವತ್ಸ, ಹಸುವ ನುಂಗಿತ್ತು.
ಹೆಸರಿಡುವುದಿನ್ನೇನೊ ?
ಕಣ್ಣೊಳಗಣ ಎರಳೆ ಬಣ್ಣವ ನುಂಗಿದ ಮತ್ತೆ
ಬಣ್ಣಿಸಿ ಪೂಜಿಸಿಕೊಂಬುದಿನ್ನೇನೊ ?
ಕಣ್ಣಾವಗಾಲದ ಹೊಳೆಯಲ್ಲಿ ಮುಳುಗಿ ಚೆನ್ನುಗೆಟ್ಟಿರಲ್ಲಾ.
ಅಣ್ಣಗಳೆಲ್ಲರೂ ಮುಕ್ಕಣ್ಣನ ಪೂಜಿಸಿ ಮೂರುಬಟ್ಟೆಯ ಸುತ್ತಿ,
ಊರ ಹೊಕ್ಕು ಆರೈದಿರಯ್ಯಾ, ನೀವಾರಾಧಿಸುವ ಲಿಂಗವ.
ಆ ಲಿಂಗದಲ್ಲಿ ಲೀಯವಾದರೆ ಸಂಗಕ್ಕೆ ಒಳಗಾದರು.
ನಮ್ಮ ನಿಸ್ಸಂಗಿ ನಿಃಕಳಂಕ ಮಲ್ಲಿಕಾರ್ಜುನನಲ್ಲಿ ದಿಕ್ಕುಗೆಟ್ಟೆನಯ್ಯಾ.