ಅಥವಾ

ಒಟ್ಟು 664 ಕಡೆಗಳಲ್ಲಿ , 78 ವಚನಕಾರರು , 544 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಲಿಂಗ ಉದಯವಾದ ಉದಯವ ನೋಡಿರಯ್ಯಾ. ಹಿಂದೆ ಕತ್ತಲೆ ಮುಂದೆ ಬೆಳಗಾಯಿತ್ತು ! ಬೆಳಗು ಬೆಳದಿಂಗಳಾಯಿತ್ತು. ಕೂಡಲಚೆನ್ನಸಂಗಯ್ಯನಲ್ಲಿ ಒಲವಿನ ಉದಯದ ದರ್ಪಣದಿಂದ.
--------------
ಚನ್ನಬಸವಣ್ಣ
ಅಯ್ಯಾ ಆರೂ ಇಲ್ಲದ ಅರಣ್ಯದಲ್ಲಿ, ನಾನಡಿಯಿಟ್ಟು ನಡವುತ್ತಿರ್ದೆನಯ್ಯಾ. ಮುಂದೆ ಬರೆಬರೆ ಮಹಾಸರೋವರವ ಕಂಡೆ. ಸರೋವರದೊಳಗೊಂದು ಹಿರಿಯ ಮೃಗವ ಕಂಡೆ. ಆ ಮೃಗಕ್ಕೆ ಕೊಂಬುಂಟು ತಲೆಯಿಲ್ಲ, ಬಾಯುಂಟು ಕಣ್ಣಿಲ್ಲ, ಕೈಯುಂಟು ಹಸ್ತವಿಲ್ಲ, ಕಾಲುಂಟು ಹೆಜ್ಜೆಯಿಲ್ಲ, ಒಡಲುಂಟು ಪ್ರಾಣವಿಲ್ಲ. ಇದ ಕಂಡು ನಾ ಹೆದರಿ, ಹವ್ವನೆ ಹಾರಿ, ಬೆದರಿ ಬಿದ್ದೆನಯ್ಯಾ. ಆಗೆನ್ನ ಹೆತ್ತತಾಯಿ ಬಂದು ಎತ್ತಿ ಕುಳ್ಳಿರಿಸಿ, ಚಿತ್ತಮೂಲಾಗ್ನಿಯ ಒತ್ತಿ ಉರುಹಿದರೆ, ಇವೆಲ್ಲವು ಸುಟ್ಟು ಬಟ್ಟಬಯಲಾದವು. ಆ ಬಟ್ಟಬಯಲೊಳಗೆ ಅಡಿಯಿಟ್ಟು ನಡೆವಾಗ, ಮುಂದೆ ಇಟ್ಟಡಿಯ ಬಾಗಿಲೊಳಗೆ ಮತ್ತೊಂದು ಮೃಗವ ಕಂಡೆ. ಆ ಮೃಗಕ್ಕೆ ತಲೆಯುಂಟು ಕೊಂಬಿಲ್ಲ, ಕಣ್ಣುಂಟು ಬಾಯಿಲ್ಲ, ಹಸ್ತವುಂಟು ಕೈಯಿಲ್ಲ, ಹೆಜ್ಜೆಯುಂಟು ಕಾಲಿಲ್ಲ, ಪ್ರಾಣವುಂಟು ಒಡಲಿಲ್ಲ. ಇದ ಕಂಡು ನಾ ಅಪ್ಪಿಕೊಳಹೋದಡೆ, ಮುಟ್ಟದ ಮುನ್ನವೆ ಎನ್ನನೆ ನುಂಗಿತ್ತು. ನುಂಗಿದ ಮೃಗ ಮಹಾಲಿಂಗದಲ್ಲಿಯೆ ಅಡಗಿತ್ತು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಸಾಸಿರದಳಕಮಲವೆಂದಡೆ ಸೂಸಿಕೊಂಡಿರುವ ಮನ. ಪವನವೆಂದಡೆ ಎಲ್ಲೆಡೆಯಲ್ಲಿ ಸೂಸಿ ಆಡುವಂತಹದು. ಬಿಂದುವೆಂದಡೆ ಆಗುಮಾಡುವಂತಹದು. ಈ ಮನ ಪವನ ಬಿಂದು ಮೂರನು ಒಡಗೂಡಿ ನೋಡಲು, ಪರಂಜ್ಯೋತಿಪ್ರಕಾಶದಂತಹ ಬೆಳಗೆ ಎನ್ನ ಕಂಗಳ ಮುಂದೆ ನಿಂದಿತ್ತು. ಆ ಮಹಾಬೆಳಗನೆ ಕಂಗಳಲ್ಲಿ ಹೆರೆಹಿಂಗದೆ ನೋಡಿದಡೆ, ಎನ್ನಂಗದ ಒಳಹೊರಗೆ ಪರಿಪೂರ್ಣವಾಗಿದ್ದಿತ್ತು ಕಾಣಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ, ನಿಮ್ಮ ಪಾದಕರುಣದಿಂದ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಬಹಳ ಬಹಳ ಕಂಡೆನೆಂದು ನುಡಿವ, ಬಿಸಿಲು ಮಧ್ಯಾಹ್ನದಲ್ಲಿ ಚಂದ್ರಬಿಂಬ ಉದಯವಾದ ಪ್ರತ್ಯಕ್ಷವಾಯಿತ್ತೆಂದು ಹೊರಗೆ ಕಂಡು ಒಳಗೆ ಕಂಡನಲ್ಲದೆ ಏನು ಅಪ್ಪುದು ಕಾಣಾ. ಎರಡೂ ಒಂದೇ. ಮುಂದೆ ಮೀರಿ ಮನಸಮಾದ್ಥಿ ಮಾಡಿದಡೆ ಮುಕ್ತಿಯೆಂದು ಹೇಳುವರು. ಮನ ಮುಳುಗಿದುದೆ ಲಿಂಗವೆಂದೆಂಬರು. ಆ ಲಿಂಗ ಮುಳುಗುವುದು ಸಮಾದ್ಥಿ ಕಾಣಾ, ತಾನಳಿದ ಮೇಲೆ ಮುಕ್ತಿ ಯಾರಿಗೆ ಹೇಳಾ ? ಲಿಂಗಕ್ಕೆ ಅಳಿವು ಬೆಳವುಂಟೆ ಕಾಣಾ ? ಚಿಂತಿಸಿ ಮುಳುಗಿದವರೆಲ್ಲ ಕಡೆಯಿಲ್ಲ ಮೊದಲಿಲ್ಲ ನೋಡಾ. ಇನ್ನು ಉಳಿದದ್ದು ಘನವು. ಉಳಿಯೆ ಹೇಳಾ ನಿಜಕೆಲ್ಲ. ಲಯವಿಲ್ಲ ಭಯವಿಲ್ಲದಾಡಿದ ವಿದೇಹ ತಾನಾದ ವರನಾಗನ ಗುರುವೀರನೆ ಪರಂಜ್ಯೋತಿ ಮಹಾವಿರಕ್ತಿ.
--------------
ಪರಂಜ್ಯೋತಿ
ಈರೇಳುಭುವನವನು ಒಡಲೊ?ಗೆ ಇಂಬಿಟ್ಟುಕೊಂಡು ಲಿಂಗರೂಪನಾಗಿ ಭಕ್ತನ ಕರಸ್ಥಲಕ್ಕೆ ಬಂದು ಪೂಜೆಗೊಂಡಿತ್ತು ನೋಡಾ ! ಅಂತಹ ಅಗಮ್ಯ ಅಗೋಚರ ಲಿಂಗವೆಂದರಿದು ಭಕ್ತನು ತಾನು ಹಿಂದೆ ನಡೆದ ಜೂಜು ಬೇಂಟೆ ಚದುರಂಗ ಲೆತ್ತ ಪಗಡೆಯಾಟಂಗಳಂ ಪರಿಹಾಸಕರ ಕೂಡಿಕೊಂಡು ಕೆಲೆದಾಡುವದಂ ಬಿಟ್ಟು ಬಂಧುವ ತೊರೆದು ಮುಂದೆ ಶಿವಪಥದಲ್ಲಿ ನಡೆಯಬಲ್ಲಾತನೇ ಸದ್ಭಕ್ತನಲ್ಲದೆ, ಹಣದಾಸೆಗೆ ಹಂಗಿಗನಾಗಿ ಗುಣದಾಸೆಗೆ ಅಮೇಧ್ಯವ ತಿಂದು ಬಂಧುಗಳ ಬಿಟ್ಟು ಭಕ್ತಿಯಿಲ್ಲವೇ ಉಂಟೇ ಎಂಬ ಪಂಚಮಹಾಪಾತಕರ ಮುಖವ ನೋಡಲಾಗದು ಅವರ ಮಾತ ಕೇಳಲಾಗದು, ಅದೆಂತೆಂದಡೆ; ಕತ್ತೆ ಭಕ್ತನಾದರೆ ಕಿಸುಕುಳವ ತಿಂಬುದ ಮಾಂಬುದೆ ? ಬೆಕ್ಕು ಭಕ್ತನಾದರೆ ಇಲಿಯ ತಿಂಬುದ ಮಾಂಬುದೆ ? ಹಂದಿ ಭಕ್ತನಾದರೆ ಹಡಿಕೆಯ ತಿಂಬುದ ಮಾಂಬುದೆ ? ಶುನಕ ಭಕ್ತನಾದರೆ ಮೂಳೆ ಮಾಂಸವ ತಿಂಬುದ ಮಾಂಬುದೆ ? ಕೋಳಿಯ ತಂದು ಪಂಜರವ ಕೂಡಿ ಅಮೃತಾನ್ನವನಿಕ್ಕಿ ಸಲಹಿದರೆ ಅದು ತಾನೆ ಮತ್ತೆ ತಿಂಬ ಹಡುವಿಂಗೆ ಚಿತ್ತವನಿಕ್ಕುದುಂ ಮಾಂಬುದೆ ? ಇಂತೀ ಭವಿತನಕ್ಕೆ ಹೇಸಿ ಭಕ್ತನಾದ ಬಳಿಕ ಅನಾಚಾರವ ಬಿಟ್ಟು ಸದಾಚಾರದಲ್ಲಿ ನಡೆಯಬೇಕು. ಗುರುವಾದಡೂ ಆಗಲಿ ಭಕ್ತನಾದಡೂ ಆಗಲಿ ತಾನು ಹಿಂದೆ ಭವಿಯಾಗಿದ್ದಾಗ ಭುಂಜಿಸುತ್ತಿದ್ದ ಸುರೆ ಮಾಂಸ ಭಂಗಿ ಭವಿಸಂಗ ಭವಿಪಾಕ ಇಂತಿವ ಬಿಡದಿರ್ದವರುಗಳು ಆ ಕತ್ತೆ ಬೆಕ್ಕು ಸೂಕರ ಸೊಣಗ ಕೋಳಿಗಿಂದತ್ತತ್ತ ಕಡೆ ನೋಡಿರೇ. ಚಿನ್ನದ ಬೆಟ್ಟವನೇರಿದವನು ಕಣ್ಣುಕಾಣದಿಪ್ಪಂತೆ ಗಣೆಯನೇರಿದ ಡೊಂಬ ಮೈ ಮರೆದಿಪ್ಪಂತೆ ನಡುನೀರಿಗೆ ಹೋದ ಹರಿಗೋಲು ತಲೆ ಕೆಳಗಾದಂತೆ ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಊರ ಮಾಡುವನ ಭಕ್ತಿ ದೂರದ ಹೊಲನಂತೆ ದೂರದಿಂ ಬಂದು ಅದು ನಿಂದು ಮುಂದೆ ಸಾಗರವಾಗಲರಿಯದು, ರಾಮನಾಥ.
--------------
ಜೇಡರ ದಾಸಿಮಯ್ಯ
ತಾ ವ್ರತಿಯಾಗಿದ್ದಲ್ಲಿ ತನ್ನ ಸೀಮೆ ಒಳಗಾಗಿ, ಕಟಕ ಪಾರದ್ವಾರ ಹುಸಿ ಕೊಲೆ ಕಳವು ಅನ್ಯಾಹಾರ ಮುಂತಾದ ನಿಂದಕ ದುರ್ಜನ ಭವಿಸಂಗ ಉಳ್ಳವರ ತಂದೆತಾಯಿಯೆಂದು ಹೆಂಡಿರುಮಕ್ಕಳೆಂದು ಬಂಧುಬಳಗವೆಂದು ಅವರನು ಅಂಗಳದಲ್ಲಿ ಕೂಡಿಕೊಂಡಡೆ, ಅವರ ತಂದು ಕೊಳನಿಕ್ಕಿದಡೆ, ತಿಂಗಳು ಸತ್ತ ನಾಯಮಾಂಸವ ತಂದು ತಿಂದ ದೋಷ ತಪ್ಪದು. ಇದಕ್ಕೆ ಹಿಂದೆ ನೆನೆಯಲಿಲ್ಲ, ಮುಂದೆ ನೋಡಲಿಲ್ಲ. ಈ ತಪ್ಪು ಹೊತ್ತಲ್ಲಿಯೆ ಅಂದಿಗೆ ನೂರು ತುಂಬಿತ್ತೆಂದು ಅಂಗವ ಬಿಡಬೇಕು. ಅಂಗವ ಬಿಡದ ಭಂಡರ ಕಂಡಡೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗನೊಪ್ಪ.
--------------
ಅಕ್ಕಮ್ಮ
ಮತ್ತೆಯು ಸಮಸ್ತವಾದ ಕರ್ಮಕೃತ ಶರೀರಿಗಳಿಗೆ ಭೋಗವುಳ್ಳುದೆ ತಪ್ಪದೆಂಬೆಯಾದಡೆ, ಶರೀರಗಳಿಗಾಗಲಿ ಪ್ರೇರಕಹರ್ತುದಿಂದಲ್ಲವೆಂಬುದೆ ಪ್ರಮಾಣ. ಶಿವ ಪ್ರೀತ್ಯರ್ಥವಾದಗ......ಳು ಕರ್ತವನೆಯ್ದುವವೆಂಬುದಕ್ಕೆ ಪ್ರಮಾಣವು ಎನಲು, ಪಿತೃವಧೆಯಿಂದ ಚಂಡೇಶ್ವರನು ಅನುಪಮ ಗಣಪದವನೈದಿದನು. ಸಿರಿಯಾಳನು ತನ್ನ ಮಗನನೆ ಹತಿಸಿ ಪುರಜನ ಬಾಂಧವರುಸಹಿತ ಶಿವಲೋಕವನೈದನೆ ? ಕಾಲಾಂತರದಲ್ಲಿ ಮನುಚೋಳನು ಪುತ್ರವಧೆ ಭ್ರೋಣಹತ್ಯವನು ಮಾ ಎಸಗಿ, ತನುವರಸಿ ಶಿವಲೋಕವೆಯ್ದನೆ ? ಅಯ್ಯೋಮ ರಾಜನು ವಿಪ್ರೋತ್ತಮನನೆ ವದ್ಥಿಸಿ ಲಿಂಗ ಗರ್ಭಾಂತರವನೆಯ್ದಿದನೆ ? ಅಂದು ಜಗವರಿಯಲದಂತಿರಲಿ. `ಸ್ವರ್ಗಕಾಮೋ ಯಜೇತ'ಯೆಂಬ ಶ್ರುತಿಪ್ರಮಾಣಿಂ ದಕ್ಷ ಪ್ರಜಾಪತಿ ಕ್ರಿಯೆಗಳಿಗೆ ಅಧ್ವರ ಕರ್ಮದಿಂದ ಶಿರಚ್ಛೇದಿಯಾಗಿ ಕುರಿದಲೆ ಪಡೆಯನೆ ? ಬರೀ ಅಚೇತನ ಕರ್ಮಂಗಳು ಕೊಡಬಲ್ಲವೆ ಸದ್ಗತಿ ದುರ್ಗತಿಗಳನು ? ಕರ್ತು ಪ್ರೇರಕ ಶಿವನಲ್ಲದೆ, `ಮನ್ನಿಮಿತ್ತಕೃತಂ ಪಾಪಮಪೀಡಾವಚಯೈ ಕಲ್ಪ್ಯತೇ' ಎನಲು, ಇಂತೀ ಚಿಟಿಮಿಟಿವಾದವೆಂಬುದು ಕೊಳ್ಳವು ಕೇಳಾ. ಶಿವಭಕ್ತಿಯೆಂಬ ಪ್ರಚಂಡ ರವಿಕಿರಣದ ಮುಂದೆ ಸಾಮಾನ್ಯಕರ್ಮವೆಂಬ ತಮ ನಿಲುವುದೆ ? ಮರುಳೆ ಆ `ವೋರಾಜಾನಮಧ್ವರಸ್ಯ ರುದ್ರಗಂ' ಎನಲು, `ಇಂದ್ರ ಉಪೇಂದ್ರಾಯ ಸ್ವಾಹಾ' ಎನಬಹುದೆ ? ಪ್ರಥಮಾಹುತಿಯಲ್ಲಿಯೆಂದು ಬೆಳಲು ಭಸ್ಮವಹವಾ ಆಹುತಿ ಫಲಂಗಳು. ಆದಡೆ ಕೆಳೆಯಾ ಶಿವಭಕ್ತಿಬಾಹ್ಯವಾದ ಪಾಪಕರ್ಮಕೆ ಬಂದ ವಿಪರೀತ ಪ್ರಾಪ್ತಿಗಳು, ವಿಷ್ಣು ಸುರರಿಗೆ ಹಿತವಾಗಿ ಭೃಗು ಸತಿಯ ಶಿರವನರಿದಡೆ, ಕರ್ಮ ದಶಜನ್ಮಂಗಳಿಗೆ ತಂದು, ಹೀನಪ್ರಾಣಿಗಳ ಯೋನಿಯಲ್ಲಿ ಬರಸಿದುದನರಿಯಿರೆ. ಮತ್ತೆಯೂ ಬಾಲೆಯ ಕೊಂದ ಕರ್ಮ ಕೃಷ್ಣಾವತಾರದಲ್ಲಿ ವ್ಯಾಧನಿಂದ ತನ್ನ ಕೊಲ್ಲಿಸಿತ್ತು. ಮತ್ತೆಯೂ ಬಲಿಯ ಬಂದ್ಥಿಸಿದ ಕರ್ಮ ಮುಂದೆ ನಾಗಾರ್ಜುನನಿಂದ ಕಟ್ಟಿಸಿತ್ತು, ಕೌರವಕುಲದ ಕೊಲಿಸಿದ ಕರ್ಮಫಲ ತನ್ನ ಯಾದವ ಕುಲವ ಕೊಲಿಸಿತ್ತು. ಮತ್ತಾ ಲೀಲೆಯಿಂದ ಮತ್ತೆಯೂ ಪರ್ವತನಾರಂದರ ಸತಿಯ ಬಲುಮೆ, ಇಂತೆ ಕೊಂಡ ಕರ್ಮಫಲ ರಾವಣಗೊಪ್ಪಿಸಿತ್ತು. ತನ್ನ ಪ್ರಿಯತಮೆಯೆನಿಸುವ ಸೀತಾಂಗನೆಯ ಇನ್ನು ಮಿಕ್ಕಿನ ದೇವದಾನವಮಾನವರನೊಕ್ಕಲಿಕ್ಕಿಯಾಡದಿಹುದೆಯಾ ಕರ್ಮವು. ಆದಡಾ ಕರ್ಮವು ಸ್ವತಂತ್ರವೋ, ಪರತಂತ್ರವೋ ಎಂಬೆಯಾದಡೆ, ಆ ಕರ್ಮ ಈಶ್ವರಾಜೆÕಯಲ್ಲದ ಕರ್ಮಿ ತಾನಾದಂತೆ, ಇದಂ ಗುರು ಕನಿಷ್ಠಾಧಮಮಧ್ಯಮ ಕ್ರಿಯೆಗಳಿಂ ವಿದ್ಥಿಸಿದ ವಿದ್ಥಿಗಳಿಂ, ವಿದ್ಥಿನಿಷೇಧ ಕರ್ಮಂಗಳೆಂಬ ಸಮೂಹಕರ್ಮಗಳಿಗೆ ತಾರತಮ್ಯವಿಡಿದು, ಪುಣ್ಯಪಾಪಂಗಳ ನಿರ್ಮಿಸಿ, ಅಜಾÕನಿಪಿತವ ಮಾಡಿದನೀಶ್ವರನು. ನಾಕನರಕಾದಿಗಳೆ ಸಾಧನವಾಗಿ, ಕರ್ಮಕರ್ತನನೆಯ್ದುವರೆ, ಕರ್ಮ ಕರ್ತನು ಈಶ್ವರನಾದಡೆ ಕರ್ಮನಿ ಶ್ವರಾಜೆÕಯಿಂದೈದುವಡೆ, ಆ ಕರ್ಮ ಕರ್ತನಹ ಈಶ್ವರನನು ಬ್ರಹ್ಮನ ಮೇಲ್ದಲೆಯನರಿದುದಲಾ. ಆ ಕರ್ಮ ಆತನನೆಯ್ದುದುಮೆನಲು, ಅಹಂಗಾಗದು. ವಿರಿಂಚನು ರಜೋಗುಣಹಂಕಾರದಿಂ ಸುರ ಕಿನ್ನರ ಗರುಡ ಗಾಂಧರ್ವ ಸಿದ್ಧ ವಿದ್ಯಾಧರರು ತಮ್ಮೊಳು ಬ್ರಹ್ಮವಾದದಿಂ ಸಂಪಾದಿಸಿ ತಿಳಿಯಲರಿಯದೆ, ಬ್ರಹ್ಮನಂ ಬೆಸಗೊಳಲು, ಬೊಮ್ಮವಾನೆನಲು, ಆ ಕ್ಷಣಂ ಗಗನದೊಳು ತೋರ್ಪ ಅತ್ಯನುಪಮ ದೇದೀಪ್ಯಮಾನ ತೇಜಃಪುಂಜ ಜ್ಯೋತಿರ್ಲಿಂಗಾಕಾರಮಂ ತೋರಲಾ ಬ್ರಹ್ಮೇಶ್ವರರು ಆ ವಸ್ತುನಿರ್ದೇಶಮಂ ಮಾಳ್ಪೆನೆಂದು ಪಿತಾಮಹನು ಚತುಸ್ಶಿರ ಮಧ್ಯದಲ್ಲಿ ಮೇಲ್ದಲೆಯಂ ಪುಟ್ಟಿಸಿ, ||ಶ್ರುತಿ|| `ಋತಂ ಸತ್ಯಂ ಪರಂ ಬ್ರಹ್ಮ'ಯೆಂದು ಋಗ್ಯಜುಸ್ಸಿನಲ್ಲಿ ನುತಿಸುತ್ತಂ ಇರಲು, ಬ್ರಹ್ಮಾದ್ಥಿಪತಿ ತತ್ಪರ ಬ್ರಹ್ಮಶಿವ ಇತಿ ಒಂ, ಇತಿ ಬ್ರಹ್ಮಾ ಇತಿ. ಇಂತೀ ಶ್ರುತಿ ಸಮೂಹವೆಲ್ಲವು ಶಿವನನೆ ಪರಬ್ರಹ್ಮವೆಂದು ಲಕ್ಷಿಸಿ, ಮತ್ತತನದಿಂ ಮರದೂ ಅಬ್ರಹ್ಮವೆನಲುಂ ದ್ರುಹಿಣನ ಮೇಲ್ದಲೆಯಂ ಅಪ್ರತಿಮ ತೇಜೋಮಯ ಲೀಲಾಲೋಲಾ ಶೀಲ ದುಷ್ಟನಿಗ್ರಹಿ ಶಿಷ್ಟ ಪ್ರತಿಪಾಲಕನನೆಯಾಕ್ಷಣಂ, ಘನರೌದ್ರ ಕೋಪಾಟೋಪಿಯೆನಿಸುವ ಕಾಲರುದ್ರಂ ಸಮೀಪಸ್ಥನಾಗಿರ್ದು, ಜ್ಯೇಷ್ಠಾ ತರ್ಜನಾಂಗುಲಿ ನಖಮುಖದಿಂ ಛೇದಿಸಲು, ವಿದ್ಥಿ ಭಯಾತುರನಾಗಿ `ಒಂ ನಮೋ ದೇವಾಯ ದೇವ್ಯೈ ನಮಃ, ಸೋಮಾಯ ಉಮಾಯೈ ನಮಃ' ಎಂದು ಸೋಮಾಷ್ಟಕದಿಂ ಸ್ತುತಿಸಿ, ನಮಿಸಿಯಜಿಸಿ ಮೆಚ್ಚಿಸಿ, ಸ್ವಾಮಿ ಸರ್ವೇಶ್ವರ, ಯ್ಯೋಮಕೇಶ, ದೇವದೇವ ಮಹಾಪ್ರಸಾದ. ಈ ಶಿರಮಂ ಬಿಸಾಟದಿರಿ, ಬಿಸಾಟಲು ಪುರತ್ರಯ ಜಗಮಳಿಗುತ್ತಂ ನಿಮಿತ್ತಂ ಪರಮ ಕೃಪಾನಿದ್ಥಿ ಪರಬ್ರಹ್ಮ ಪರಂಜ್ಯೋತಿ ಪರಮೇಶ್ವರ ಪರಮಭಟ್ಟಾರಕ ಪರಾತ್ಪರತರಸದಕ್ಷರ ಚಿನ್ಮೂರ್ತಿ ಸ್ವಯಂಭೋ ಸ್ವಾತಂತ್ರೇಶ್ವರಾಯೆನುತ ಕೀರ್ತಿಸುತ್ತಿರಲು, ಪರಬ್ರಹ್ಮ ನಿರೂಪದಿಂ ಕಾಲರುದ್ರನ ಕಪಾಲಮಂ ಧರಿಸಿದನಂದು. ಇನ್ನೆಮಗಿದೆ ಮತವೆಂದು ಸರ್ವದೆ ತಾ ಗರ್ವ ಕಂಡೂಷಮಂ ಉರ್ವಿಯೊಳೀಗಮೆ ತೀರ್ಚಿಪೆನೆಂದು ಪಿಡಿದು ನಡೆದಂ ಬ್ಥಿP್ಷ್ಞಟನಕಂದು. ಅಹಲ್ಯೆ ಸಾಯಿತ್ತಿದು, ಕರ ಹೊಸತು ಇನಿತರಿಂದ ಕಾಲರುದ್ರಂಗೆ ಬ್ರಹ್ಮೇತಿಯಾಯಿತ್ತೆಂಬ ಕರ್ಮವಾದಿ ಕೇಳಾದಡೆ. ||ಶಾಮಶ್ರುತಿ|| `ತ್ವಂ ದೇವೇಷು ಬ್ರಾಹ್ಮಣಾಹ್ವಯಃದುನುಷ್ಯೋಮನುಷ್ಯೇಮ ಬ್ರಾಹ್ಮಣಾಮುಪದಾವತ್ಯುಪದಾರತ್ಯಾ' ಎನಲು, `ಬ್ರಾಹ್ಮಣೋ ಭಗವಾನ್ ರುದ್ರಃ' ಎನಲು, `ಕ್ಷತ್ರಿಯಃ ಪರಮೋ ಹರಿಃ' ಎನುತಿರಲು, `ಪಿತಾಮಹಸ್ತು ವೈಶ್ಯಸಾತ್' ಎನಲು, ಬ್ರಾಹ್ಮಣೋತ್ತಮ ಬ್ರಾಹ್ಮಣಾದಿ ಪತಿ ಪರಬ್ರಹ್ಮವಿದ್ದಂತೆ. ತಾನೆ ಪರಬ್ರಹ್ಮಮೆನಲಾ ವಿದ್ಥಿಯ ಶಿಕ್ಷಿಪದು ವಿದಿತವಲ್ಲದೆ ನಿಷೇಧವಲ್ಲ. ಅದೆಂತೆನಲು, ಭೂಚಕ್ರವಳಯದೊಳು ಭೂಮೀಶನು ಅನ್ಯಾಯಗಳ ಶಿಕ್ಷಿಸಿದ ಭೂರಕ್ಷಣ್ಯವು, ಲೋಕಹಿತವಲ್ಲದೆ ದೋಷ ಸಾಧನಮೆಯೆಲ್ಲಾ, ಪಾಪಿಗೆ ತಕ್ಕ ಪ್ರಾಯಶ್ಚಿತ್ತಮೆಂದುಂಟಾಗಿ. ಇದು ಕಾರಣ, ಶಿಕ್ಷಯೋಗ್ಯನ ಶಿಕ್ಷಿಸಿದವದ ದೋಷವಿಲ್ಲೆಂದು ಭಾಟ್ಠ(?) ದೊಳೊಂದು ಪಕ್ಷಮಿರೆ, ಮತ್ತಮದಲ್ಲದೆ, ಅದೊಮ್ಮೆ ಹತ್ತುತಲೆಯವನಂ ಅತ್ಯುಗ್ರದಿಂ ವಂದಿಸಿದ ಶ್ರೀರಾಮಂಗೆ ಬ್ರಹ್ಮಹತ್ಯಾ ಬ್ರಹ್ಮಕರ್ಮ ವಿದ್ಯಾಬ್ರಹ್ಮರಿಂದಾವಾವ ಪ್ರಾಯಶ್ಚಿತ್ತದಿಂತೆಮ್ಮನೆ ಕೆಡದಿರಲು, ಆ ರಾಮಂ ಆ ರಾವಣಹತ ದೋಷನಿರುಹರಣಕ್ಕಾವುದು ಕಾಣದಿರಲು, ಶಂಭುಪೌರಾಣಿಕನೆಂಬ ನಾಮವಂ ತಾಳ್ದು, ಶಿವಂ ರಾಮಂಗೆ ಪ್ರತ್ಯಕ್ಷಮಾಗಿ, ಈ ದೋಷಕ್ಕೆ ಲಿಂಗಪ್ರತಿಷ್ಠೆಯ ನಿರೋಹರಣಮೆಂದರುಪಿ, ಅರಿದಾ ರಾಮಂಗಂ ಗಂಧಮಾದ ಪರ್ವತವೇ ಆದಿಯಾಗಿ, ಅದನು ಕೋಟೆಯ ಅವದ್ಥಿಯಾಗಿ ಶಿವಲಿಂಗಪ್ರತಿಷ್ಠೆಯಂ ಮಾಡೆ, ರಾಮೇಶ್ವರಲಿಂಗಮೆನಿಪ್ಪ ನಾಮಾಂಕಿತದಿಂ ತಕವಕ ಮಿಗೆವರಿದು ಸ್ವಾತ್ವಿಕಭಕ್ತಿಭಾವದಿಂದರ್ಚಿಸಿ ಸ್ತುತಿಸಿ, ಭೂವಳಯದೊಳೆಲ್ಲಂ ಪ್ರದಕ್ಷಿಣ ಮುಖದಿಂ ಶಿವಲಿಂಗಾಲಯಮನೆತ್ತಿಸಿ, ಅಂತಾ ಸಹಸ್ರಾವದ್ಥಿಯೆನಿಸುವ ದಶಗ್ರೀವ ವಧೆಯಂ ಪರಿಹರಿಸಿದ ಹಾಗೆ, ಶ್ರೀಮನ್ಮಹಾದೇವನೂ ದೇವಾದಿದೇವನೂ ದೇವಚಕ್ರವರ್ತಿ ದೇವಭಟ್ಟಾರಕನೂ ದೇವವೇಶ್ಯಾಭುಜಂಗನೂ ಸರ್ವದೇವತಾ ನಿಸ್ತಾರಕನೂ ಸರ್ವದೇವತಾ ಯಂತ್ರವಾಹಕನೂ ಒಂದಾನೊಂದೆಡೆಯಲ್ಲಿ ಮಹಾದೇವೇಶ್ವರನು ರುದ್ರೇಶ್ವರನು ಈಶ್ವರೇಶ್ವರನು ಶಂಕರೇಶ್ವರನೆನಿಪ ನಾಮಂಗಳಿಂ, ಭೂವಳಯದೊಳು ಲಿಂಗಪ್ರತಿಷ್ಠೆಯಂ ಬ್ರಹ್ಮಶಿರಚ್ಛೇದನ ನಿಮಿತ್ಯನಂ ಮಾಡಿದುದುಳ್ಳಡೆ, ಹೇಳಿರೆ ಕರ್ಮವಾದಿಗಳು. ಅಂತುಮದಲ್ಲದೆಯುಂ ಆ ಉಗ್ರನಿಂದಂ ಪಿತಾಮಹಂ ಅವದ್ಥಿಗಡಿಗೆ ಮಡಿವುದಂ ಕೇಳರಿಯಿರೆ. ಅದಲ್ಲದೆಯುಂ, ದP್ಷ್ಞಧ್ವರದೊಳಾ ದಕ್ಷ ಪ್ರಜಾಪತಿಯ ಶಿರವನರಿದು, ಕರಿಯದಲೆಯನೆತ್ತಿಸಿದ. ಅದಲ್ಲದೆಯುಂ ಸುತೆಗಳುಪಿದ ವಿರಂಚಿ ಹತಿಸಿದಂದು, ಅದಲ್ಲದೆಯುಂ ಸಮಸ್ತದೇವತೆಗಳ ಆಹಾರ ತೃಪ್ತಿಗೆ ಬೇಹ ಅಮೃತತರನಂ ಚರಣಾಂಗುಷ್ಠದಿಂದೊರಸಿದಂದು, ಅದಲ್ಲದೆಯುಂ ವಿಷ್ಣು ತಾನೆಯೆನಿಪ ವಿಶ್ವಕ್ಸೇನನ ತ್ರಿಶೂಲದಿಂದಿರಿದೆತ್ತಿ ಹೆಗಲೊಳಿಟ್ಟಂದು, ಅದಲ್ಲದೆಯುಂ ಮತ್ಸ್ಯ ಕೂರ್ಮ ವರಾಹ ನಾರಸಿಂಹ ತ್ರಿವಿಕ್ರಮಾದಿಗಳಂ ಮುಂದುವರಿದು ಕೊಂದಂದು ಅದಲ್ಲದೆಯುಂ ದೇವಿದ್ವಿಜರಿಗೆ ಗುರುವೆನಿಸುವ ಪಾವಕನ ಏಳು ನಾರಿಗೆಗಳ ಕೀಳುವಂದು, ಅದಲ್ಲದೆಯುಂ ಯಜÕವಾಟದೊಳು ಪ್ರಾಜÕನೆನಿಸುವ ಪೂಶಾದಿತ್ಯನ ಹಲ್ಲ ಕಳದು, ಭಾಗಾದಿತ್ಯನಂ ಮೀಂಟಿ ವಾಣಿಯ ಮೂಗಂ ಮಾಣದೆ ಕೊಯ, ದೇವಮಾತೃಕೆಯರ ದೊಲೆ ನಾಶಿಕವ ಚಿವುಟಿದಂದು, ಅದಲ್ಲದೆಯುಂ ಬ್ರಹ್ಮಾಂಡಕೋಟಿಗಳನೊಮ್ಮೆ ನಿಟಿಲತಟನಯನಂ ಲಟಲಟಿಸಿ ಶೀಘ್ರದಿಂದ ಸುಡಲು, ಸುರಾಸುರ ಮುನಿನಿವಹ ಹರಿಹಿರಣ್ಯಗರ್ಭರು ಶತಕೋಟಿ ಹತವಾದಂದು, ಪ್ರೊರ್ದದಾ ಬ್ರಹ್ಮಹತ್ಯಂ ನಿರ್ಧರಮಾಗಿ ಬೊಮ್ಮನ ಮೇಲ್ದಲೆಯೊಂದ ಚಿವುಟಿದುದರಿಂದಂ ಒಮ್ಮೆಯ ಶೂಲಪಾಣಿಗೆ ಬ್ರಹ್ಮೇತಿಯಾದುದತಿಚೋದ್ಯ ಚೋದ್ಯ. ಅವಲ್ಲದೆಯೂ ಬ್ರಹ್ಮ ಸಾಯನು. ಅಂಗಹೀನಮಾದುದಲ್ಲದೆ ಹೋಗಲಾ ಸಾಮಾನ್ಯ ಚರ್ಚೆ ಕರ್ಮಗತ ಕರ್ಮಿಯೆನಿಸುವ ನಿನ್ನ ಕರ್ಮವಾದವೆಲ್ಲಿಗೂ ಸಲ್ಲದು. ಬ್ರಹ್ಮಮಸ್ತಧಾರಣ ಲೀಲಾಲೋಲ ಶೀಲಬ್ರಹ್ಮೇಶ್ವರ ಪರಬ್ರಹ್ಮ ಶ್ರೀಮನ್ಮಹಾದೇವನ ನಾಮಕೀರ್ತನ ಮುತ್ರದಿಂದು ಬ್ರಹ್ಮಹತ್ಯಕೋಟಿಗಳುಂ ಮಹಾಪಾತಕವಗಣಿತಂ ನಿರಿಗೆಣೆಯಾದಕೂಲಮಂ ಭರದೊಳನಲ ಗ್ರಹಿಸಿದಂತಾಗುಮೆನೆ. ಬ್ರಹ್ಮ ಪಂಚಬ್ರಹ್ಮಮೆನಲು ಬ್ರಹ್ಮಪಾಪಕಾಶಿಯೆನಲು, ಶಿವಲಿಂಗ ದರ್ಶನ ಮಾತ್ರ ಬ್ರಹ್ಮಹತ್ಯವಳಿವವೆನಲು, ಆ ಶಿವನೆ ಬ್ರಹ್ಮಹತ್ಯವೆ ಇದುಯೆಂಬುದು ಮೊಲನ ಕೋಡಿನಂತೆ. ಇದು ಕಾರಣ, ಕರ್ಮ ಶಿವನಾಜೆÕವಿಡಿದು ಕರ್ಮಿಯ ಗ್ರಹಿಸೂದು. ಕರ್ಮಸಾರಿಯಲಿ ಕರ್ಮ ನಿರ್ಮಲಕರ್ಮ ಕಾರಣ ಕರ್ತೃವೆಂದರಿಯದಡೆ, ಎಲೆ ಕರ್ಮವಾದಿ, ನಿನಗೆ ಗತಿ ಉಂಟೆಂದುದು, ಬಸವಪ್ರಿಯ ಕೂಡಲಚೆನ್ನಸಂಗನ ವಚನ. || 65 ||
--------------
ಸಂಗಮೇಶ್ವರದ ಅಪ್ಪಣ್ಣ
ವಿಷಯವೆಂಬ ಹಸುರನೆನ್ನ ಮುಂದೆ ತಂದು ಪಸರಿಸಿದೆಯಯ್ಯಾ. ಪಶುವೇನ ಬಲ್ಲುದು ಹಸುರೆಂದೆಠಸುವುದು. ವಿಷಯರಹಿತನ ಮಾಡಿ, ಭಕ್ತಿರಸವ ದಣಿಯೆ ಮೇಯಿಸಿ, ಸುಬುದ್ಧಿಯೆಂಬ ಉದಕವನೆರೆದು, ನೋಡಿ ಸಲಹಯ್ಯಾ, ಕೂಡಲಸಂಗಮದೇವಾ.
--------------
ಬಸವಣ್ಣ
ಅಯ್ಯಾ, ಕಾಲತೊಳೆದುಕೊಂಡು ಬಂದರೆ ಕಣ್ಣಮುಂದೆ ನಿಂದೆ. ಕೈಯ ತೊಳೆದುಕೊಂಡು ಬಂದರೆ ಮನದ ಮುಂದೆ ನಿಂದೆ. ತಲೆಯ ತೊಳೆದುಕೊಂಡು ಬಂದರೆ ಭಾವದ ಮುಂದೆ ನಿಂದೆ. ಸಂದು ಸಂಶಯ ಕುಂದು ಕಲೆಯ ಕಳೆದುಳಿದು ಬಂದರೆ ಸರ್ವಾಂಗಸನ್ನಿಹಿತನಾಗಿ ನಿಂದೆ. ಬಂದ ಬರವು ಚಂದವಾಗಿ ನಿಂದರೆ ಅಂದಂದಿಗೆ ಅವಧರಿಸು ಮುಂದುವರಿವೆನು ಮುದದಿಂದೆ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಅಯ್ಯ, ಪರಮಸಚ್ಚಿದಾನಂದಮಂತ್ರಮೂರ್ತಿ ಜಂಗಮದೇವನು ಪ್ರಮಥಗಣಾರಾಧ್ಯ ಭಕ್ತಮಾಹೇಶ್ವರರೊಪ್ಪಿಗೆಯಿಂದ ನಿರಂಜನಜಂಗಮಕ್ಕೆ ಉಪರಿಸಿಂಹಾಸನ ಮಾಡಿ, ಮುಹೂರ್ತಮಾಡಿದ ಮೇಲೆ ಷಡಕ್ಷರಮಂತ್ರಸ್ವರೂಪವಾದ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಮಧ್ಯದಲ್ಲಿ ಮೂರ್ತಿಗೊಂಡಿರುವ ಈಶಾನ್ಯಕಲಶ ಮೊದಲಾಗಿ ಪಂಚಕಲಶಂಗಳಿಗೆ ಜಂಗಮದೀಕ್ಷಾಪಾದೋದಕವ ತುಂಬಿ, ಮಂಟಪಷಟ್ಸಮ್ಮಾರ್ಜನೆ, ಷಡ್ವಿಧ ವರ್ಣದ ರಂಗಮಾಲೆ, ನವಧಾನ್ಯ, ನವಸೂತ್ರ, ವಿಭೂತಿವಿಳ್ಯೆ, ಸುವರ್ಣಕಾಣಿಕೆ, ಪಂಚಮುದ್ರೆ, ಅಷ್ಟವಿಧ ಷೋಡಶೋಪಚಾರಂಗಳಿಂದೊಪ್ಪುವ ಸದ್ಯೋಜಾತ, ವಾಮದೇವ, ಅಘೋರ, ತತ್ಪುರುಷ, ಈಶಾನ ಕಲಶಮೂರ್ತಿಗಳ ಪಶ್ಚಿಮಭಾಗದಲ್ಲಿ ಜಂಗಮಪಾದ ಸೋಂಕುವಂತೆ ಗುರುವು ಮುಹೂರ್ತಮಾಡಿ, ಆ ಕಲಶಂಗಳ ಸೂತ್ರವ ತನ್ನ ಪಾದಕ್ಕೆ ಹಾಕಿ, ತನ್ನ ಚಿದ್ಬೆಳಗಿನ ಮುಂದೆ ಮೂರ್ತಿಗೊಂಡಿರುವ ಕಲಶಂಗಳ ಪೂರ್ವಭಾಗದಲ್ಲಿ ಕರಿಯಕಂಬಳಿಯ ಗರ್ದುಗೆಯ ಮಾಡಿಸಿ, ಹಸೆಯ ರಚಿಸಿ, ಆ ಗರ್ದುಗೆಯ ಮೇಲೆ ಶಿಷ್ಯೋತ್ತಮನ ಮುಹೂರ್ತವ ಮಾಡಿಸಿ, ಆತನಂಗಕ್ಕೆ ಗುರುಸೂತ್ರವ ಹಾಕಿ, ಶಿಷ್ಯನಂಗದ ಮೇಲೆ ಮೂರ್ತಿಗೊಂಡಿರುವ ಪರಶಿವಲಿಂಗವ ಗಣಸಾಕ್ಷಿಯಾಗಿ ಶ್ರೀ ಗುರುದೇವನು ತನ್ನ ಕರಸ್ಥಲದಲ್ಲಿ ಮುಹೂರ್ತವ ಮಾಡಿಸಿ, ಆ ಲಿಂಗದ ಮಸ್ತಕದ ಮೇಲೆ ನಿರಂಜನಜಂಗಮದ ಪಾದವಿಡಿಸಿ, ಆ ಪಂಚÀಕಲಶಂಗಳಲ್ಲಿ ಶೋಬ್ಥಿಸುವಂಥ ದೇವಗಂಗಾಜಲಸ್ವರೂಪವಾದ ಗುರುಪಾದೋದಕವನ್ನು ಒಂದು ಪಾತ್ರೆಯಲ್ಲಿ ಆ ಕಲಶಂಗಳೈದರಲ್ಲಿ ತೆಗೆದುಕೊಂಡು ಗುರುವಿನ ದಕ್ಷಿಣಭಾಗದಲ್ಲಿ ಮೂರ್ತಿಗೊಂಡಿರುವ ಪಾದೋದಕ ಕುಂಭದಲ್ಲಿ ಒಂದು ಬಿಂದುವ ತಗೆದುಕೊಂಡು ಆ ಪಾತ್ರೆಯಲ್ಲಿ ಹಾಕಿ, ಇವಾರುತೆರದ ಅರ್ಘೋದಕಂಗಳ ಪ್ರಮಥಗಣರಾಧ್ಯ ಭಕ್ತಮಹೇಶ್ವರರೆಲ್ಲ ಆ ಗುರುವಿನ ಹಸ್ತಕಮಲದಲ್ಲಿರುವಂಥ ಉದಕವನ್ನು ತೆಗೆದುಕೊಂಡು, ಶರಣಸತಿ ಲಿಂಗಪತಿಯಾಗಿ ಒಪ್ಪುವ ಶಿಷ್ಯೋತ್ತಮನ ಮಸ್ತಕದಮೇಲೆ ಮಂತ್ರಧ್ಯಾನದಿಂದ ಸಂಪ್ರೋಕ್ಷಣೆಯ ಮಾಡುವಂಥಾದೆ ಕಲಶಾಬ್ಥಿಷೇಕದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ಚನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಗುರುವೆಂಬ ಸೂತಕ, ಅರಿವಿನಿಂದ ಹರಿಯಬೇಕು. ಲಿಂಗವೆಂಬ ಸೂತಕ, ಅರಿವಿನಿಂದ ಹರಿಯಬೇಕು. ಅರಿವೆಂಬ ಸೂತಕಕ್ಕೆ ಮುಂದೆ ಒಂದ ಕಂಡೆಹೆನೆಂಬ ಒಡಲಸೂತಕ ಹರಿಯಬೇಕು. ಸೂತಕ ನಿಹಿತವಾದಲ್ಲಿ, ಕಾಮಧೂಮ ಧೂಳೇಶ್ವರ ಎಂದೂ ಏನೂ ಎನಲಿಲ್ಲ.
--------------
ಮಾದಾರ ಧೂಳಯ್ಯ
ಅರಿವಿನ ಪಥವನರಿಯದಿರ್ದಡೆ, ಮುಂದೆ ಹೆರರಿಗೆ ದೀಕ್ಷೆಯ ಮಾಡಲೇಕೆ? ತೊರೆಯಲದ್ದವನಸೀಲರಿಯದವ ತೆಗೆಯ ಹೋದಂತಾಯಿತ್ತರಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಸದ್ಗುರುಕಾರುಣ್ಯವ ಪಡೆದು ಲಿಂಗಾಂಗಸಮರಸವುಳ್ಳ ವೀರಶೈವ ಭಕ್ತ ಮಹೇಶ್ವರರೆನಿಸಿಕೊಂಡ ಬಳಿಕ ತಮ್ಮಂಗದ ಮೇಲಣ ಲಿಂಗವು ಷಟ್‍ಸ್ಥಾನಂಗಳಲ್ಲಿ ಬ್ಥಿನ್ನವಾದಡೆ ಆ ಲಿಂಗದಲ್ಲಿ ತಮ್ಮ ಪ್ರಾಣವ ಬಿಡಬೇಕಲ್ಲದೆ, ಮರಳಿ ಆ ಬ್ಥಿನ್ನವಾದ ಲಿಂಗವ ಧರಿಸಲಾಗದು. ಅದೇನು ಕಾರಣವೆಂದಡೆ : ತಾನು ಸಾಯಲಾರದೆ ಜೀವದಾಸೆಯಿಂದೆ ಆ ಬ್ಥಿನ್ನವಾದ ಲಿಂಗವ ಧರಿಸಿದಡೆ ಮುಂದೆ ಸೂರ್ಯಚಂದ್ರರುಳ್ಳನ್ನಕ್ಕರ ನರಕಸಮುದ್ರದಲ್ಲಿ ಬಿದ್ದು ಮುಳುಗಾಡುವ ಪ್ರಾಪ್ತಿಯುಂಟಾದ ಕಾರಣ, ಇದಕ್ಕೆ ಸಾಕ್ಷಿ : ``ಶಿರೋ ಯೋನಿರ್ಗೋಮುಖಂ ಚ ಮಧ್ಯಂ ವೃತ್ತಂ ಚ ಪೀಠಕಂ | ಷಟ್‍ಸ್ಥಾನೇ ಛಿದ್ರಯೋಗೇ ತು ತಲ್ಲಿಂಗಂ ನೈವ ಧಾರಯೇತ್ | ತಥಾಪಿ ಧಾರಣಾತ್ ಯೋಗೀ ರೌರವಂ ನರಕಂ ವ್ರಜೇತ್ ||'' -ಸೂP್ಷ್ಞ್ಮ ಗಮ. ಇಂತಪ್ಪ ನರಕಜೀವಿಗಳ ಎನ್ನತ್ತ ತೋರದಿರಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಒಳಗೆ ತಿಳಿಯದೆ ಹೊರಗೆ ಮಾಡುವ ಮಾಟವೆಲ್ಲ ಅಜ್ಞಾನದ ಗಡಣದೊಳಗು. ಒಳಗೆ ಗುರುಲಿಂಗಜಂಗಮದ ಪಾದತೀರ್ಥಪ್ರಸಾದವ ಕೊಂಡೆವೆಂದು ಹೊರಗೆ ಮಾಡುವ ಭಕ್ತಿಯ ಬಿಟ್ಟರೆ ಮುಂದೆ ಒದಗುವ ಮುಕ್ತಿಯ ಕೇಡು. ಅದೆಂತೆಂದೊಡೆ : ಅಸಲು ಕಳೆದ ಬಳಿಕ ಲಾಭವುಂಟೇ ? ಇಲ್ಲ ಇಲ್ಲ, ಮಾಣು. ಒಳಗಣ ಕೂಟ, ಹೊರಗಣ ಮಾಟವನರಿಯದೆ ಕೆಟ್ಟರು ನೋಡಾ ಹಿರಿಯರೆಲ್ಲರು ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇನ್ನಷ್ಟು ... -->